ದೇಶ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಸಚಿವರ ಮನೆ ಧ್ವಂಸ

ಇಂಫಾಲ: ಘರ್ಷಣೆ ಪೀಡಿತ ಮಣಿಪುರದ ಬಿಷ್ಣುಪುರ್ ಹಾಗೂ ಚುರಾಚಂದ್‌ಪುರ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಶಂಕಿತ ಉಗ್ರರು ಹಾಗೂ  ಜನರ ಗುಂಪಿನ ನಡುವೆ ನಡೆದ ಹೊಸ ಹಿಂಸಾಚಾರದಲ್ಲಿ ಓರ್ವ  ಸಾವನ್ನಪ್ಪಿದ್ದಾನೆ ಹಾಗೂ ಇನ್ನೊಬ್ಬನು ಗಾಯಗೊಂಡಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಏತನ್ಮಧ್ಯೆ, ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಸರಕಾರವು ಮತ್ತೊಂದು ಸಮುದಾಯಕ್ಕೆ ಸೇರಿದ ಉಗ್ರಗಾಮಿಗಳಿಂದ ಸ್ಥಳೀಯರನ್ನು ರಕ್ಷಿಸಲು ಸಾಕಷ್ಟು ಕೆಲಸ  ಮಾಡುತ್ತಿಲ್ಲ ಎಂದು ಆರೋಪಿಸಿ ಮಣಿಪುರದ ಪಿಡಬ್ಲ್ಯೂಡಿ ಸಚಿವ ಕೊಂತೌಜಮ್ ಗೋವಿಂದಸ್ ಅವರ ಬಿಷ್ಣುಪುರ ಜಿಲ್ಲೆಯಲ್ಲಿರುವ  ಮನೆಯನ್ನು ಬುಧವಾರ ಧ್ವಂಸಗೊಳಿಸಿದೆ […]

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಸಚಿವರ ಮನೆ ಧ್ವಂಸ Read More »

ನಾಳೆಯಿಂದ 2,000 ರೂ. ನೋಟು ಬದಲಾವಣೆ

ಹೊಸದಿಲ್ಲಿ : ಎರಡು ಸಾವಿರ ರೂ. ಮುಖಬೆಲೆಯ ನೋಟುಗಳನ್ನು ವಾಪಸ್‌ ಪಡೆಯುವ ಪ್ರಕ್ರಿಯೆ ಬ್ಯಾಂಕ್‌ಗಳಲ್ಲಿ ಮಂಗಳವಾರದಿಂದ ಶುರುವಾಗಲಿದೆ. ಅದಕ್ಕಾಗಿ ಯಾವುದೇ ಫಾರಂಗಳನ್ನು ಭರ್ತಿ ಮಾಡುವುದು ಅಥವಾ ಗುರುತಿನ ಚೀಟಿ ನೀಡುವ ಅಗತ್ಯವಿಲ್ಲವೆಂದು ಎಸ್‌ಬಿಐ ಸ್ಪಷ್ಟಪಡಿಸಿದೆ. 2 ಸಾವಿರ ರೂ. ನೋಟು ವಿನಿಮಯ ಮಾಡಲು ಕೋರಿಕೆ ರಸೀತಿ (ರಿಕ್ವಿಸಿಷನ್‌ ಸ್ಲಿಪ್‌), ಗುರುತಿನ ಚೀಟಿ ನೀಡಬೇಕು, ಫಾರಂ ಭರ್ತಿ ಮಾಡಿಕೊಡಬೇಕು ಎಂದು ಹಲವು ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿದ್ದವು. ನೋಟು ವಿನಿಮಯ ಕೌಂಟರ್‌ಗಳಲ್ಲಿ ಒಂದು ಬಾರಿಗೆ ಒಬ್ಬರಿಂದ 20 ಸಾವಿರ ರೂ.ವರೆಗೆ

ನಾಳೆಯಿಂದ 2,000 ರೂ. ನೋಟು ಬದಲಾವಣೆ Read More »

ಹೀಗೆ ಬದಲಾಯಿಸಿಕೊಳ್ಳಿ 2,000 ರೂ. ನೋಟು

ಬೆಂಗಳೂರು: 2,000 ರೂ. ಮುಖಬೆಲೆಯ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂದೆಗೆದುಕೊಂಡ ಬಳಿಕ ಈ ಕುರಿತು ಹಲವು ಗೊಂದಲಕಾರಿ ಮಾಹಿತಿಗಳು ಹರಿದಾಡುತ್ತಿವೆ. ಇದು 2016ರ ನೋಟ್‌ ಬ್ಯಾನ್‌ ಮಾದರಿಯ ಕ್ರಮ ಎಂದು ಕೆಲವರು ತಪ್ಪಾಗಿ ಭಾವಿಸಿದ್ದಾರೆ. ನೋಟ್‌ ಬ್ಯಾನ್‌ಗೂ ಚಲಾವಣೆಯಿಂದ ಹಿಂದೆಗೆದುಕೊಳ್ಳುವುದಕ್ಕೂ ವ್ಯತ್ಯಾಸವಿದೆ. ಅಲ್ಲದೆ ಸದ್ಯ 2,000 ರೂ. ನೋಟು ಚಲಾವಣೆ ಬಹಳ ಕಡಿಮೆಯಾಗಿರುವುದರಿಂದ ಜನರಿಗೆ ಈ ನೋಟುಗಳನ್ನು ಹಿಂದೆಗೆದುಕೊಳ್ಳುವುದರಿಂದ ಹೆಚ್ಚು ಸಮಸ್ಯೆಯಾಗುವುದಿಲ್ಲ. 2,000 ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಲು ಮುಂಬರುವ ಸೆಪ್ಷಟಂಬರ್‌ 30ರ ತನಕ ಸಮಯ ಇದೆ ಎಂದು

ಹೀಗೆ ಬದಲಾಯಿಸಿಕೊಳ್ಳಿ 2,000 ರೂ. ನೋಟು Read More »

ಕಂಬಳ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ದೆಹಲಿ: ಕರಾವಳಿಯ ಗ್ರಾಮೀಣ ಕ್ರೀಡೆ ಕಂಬಳದ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು, ಈ ಮೂಲಕ ಕಂಬಳಕ್ಕಿದ್ದ ದೊಡ್ಡ ತೊಡಕೊಂದು ನಿವಾರಣೆಯಾದಂತಾಗಿದೆ. ಕರ್ನಾಟಕದ ಕಂಬಳ, ತಮಿಳುನಾಡಿನ ಜಲ್ಲಿಕಟ್ಟು ಹಾಗೂ ಮಹಾರಾಷ್ಟ್ರದ ಎತ್ತಿನ ಗಾಡಿ ಓಟದ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಪ್ರಾಣಿಗಳನ್ನು ಹಿಂಸಿಸಲಾಗುತ್ತಿದೆ ಎನ್ನುವ ವಿಚಾರದಲ್ಲಿ ಪ್ರಕರಣ ಸುಪ್ರೀಂ ಮೆಟ್ಟಿಲೇರಿತ್ತು. ಸಲ್ಲಿಕೆ ಆಗಿರುವ ಅರ್ಜಿಗಳಿಗೆ ಸಂಬಂಧಿಸಿ ಸುಪ್ರಿಂ ಕೋರ್ಟ್‌ನ ಸಾಂವಿಧಾನಿಕ ಪೀಠ ಮೇ 18ರಂದು ತನ್ನ ತೀರ್ಪು ನೀಡಿದ್ದು, ಜಲ್ಲಿಕಟ್ಟು ಸ್ಪರ್ಧೆಗೆ ಅನುಮತಿ ನೀಡಿ ಎಂದು

ಕಂಬಳ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂ ಕೋರ್ಟ್ Read More »

ಆದಾಯ ತೆರಿಗೆ ಇಲಾಖೆಯ ವೆಬ್​ಸೈಟ್ ಹ್ಯಾಕ್​ : ಓರ್ವ ಸಿಐಡಿ ವಶಕ್ಕೆ

ಬೆಂಗಳೂರು : ಕರ್ನಾಟಕದ ಅತಿದೊಡ್ಡ ಸೈಬರ್ ವಂಚಕನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ದಿಲೀಪ್ ರಾಜೇಗೌಡ ಬಂಧಿತ ಆರೋಪಿ. ಇನ್ನು ಆರೋಪಿಯನ್ನು ಸೆರೆ ಹಿಡಿಯಲು ಸಿಐಡಿ ಎಸ್​ಪಿ ಎಂ.ಡಿ ಶರತ್ ನೇತೃತ್ವದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿತ್ತು. ಆದಾಯ ತೆರಿಗೆ ಇಲಾಖೆಯ ವೆಬ್​ಸೈಟ್​ನಲ್ಲಿನ ಲೋಪವನ್ನು ತಿಳಿದುಕೊಂಡ ಆರೋಪಿ, ಆ ಲೋಪದ ಮೂಲಕ ತೆರಿಗೆ ಕಟ್ಟಿದ್ದವರಿಗೆ ಸಲ್ಲಬೇಕಿದ್ದ ರೀ ಫಂಡ್ಸ್​ ಹಣವನ್ನು​ ತನ್ನ ಖಾತೆಗೆ ಜಾಮಾ ಮಾಡಿಕೊಳ್ಳುತ್ತಿದ್ದನು. ಹೀಗೆ ಆದಾಯ ತೆರಿಗೆ ಇಲಾಖೆಗೆ ಬರೋಬ್ಬರಿ 1,41,84,360 ರೂ. ಹಣವನ್ನು ವಂಚಿಸಿರುವುದು

ಆದಾಯ ತೆರಿಗೆ ಇಲಾಖೆಯ ವೆಬ್​ಸೈಟ್ ಹ್ಯಾಕ್​ : ಓರ್ವ ಸಿಐಡಿ ವಶಕ್ಕೆ Read More »

ಇಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್‌ ಭೇಟಿ

ಚುನಾವಣಾ ಪ್ರಚಾರದಲ್ಲಿ ಕೇಂದ್ರದ ನಾಯಕರು ಭಾಗಿ ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಕೇಂದ್ರ ಸಚಿವರು ಮತ್ತು ಬಿಜೆಪಿಯ ಪ್ರಮುಖ ನಾಯಕರ ದಂಡೇ ರಾಜ್ಯಕ್ಕೆ ಆಗಮಿಸುತ್ತಿದೆ. ವಿವಿಧ ರಾಜ್ಯಗಳ ಸಿಎಂ, ಡಿಸಿಎಂ ಮತ್ತು ಕೇಂದ್ರ ಸಚಿವರು ಆಗಮಿಸುತ್ತಿದ್ದಾರೆ. ಇಂದು ಮಂಡ್ಯ ಮತ್ತು ವಿಜಯಪುರ ಜಿಲ್ಲೆಗೆ ಹಿಂದೂ ಫಯರ್​ ಬ್ರ್ಯಾಂಡ್​ ಲೀಡರ್‌ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಆಗಮಿಸಲಿದ್ದಾರೆ.ಲಖನೌನಿಂದ ಮೈಸೂರಿಗೆ ಆಗಮಿಸುವ ಯೋಗಿ ಆದಿತ್ಯನಾಥ್​​ 11 ಗಂಟೆಗೆ ಮಂಡ್ಯದಲ್ಲಿ ನಡೆಯುವ ರೋಡ್​​ ಶೋ ಮತ್ತು ಪ್ರಚಾರ ಸಭೆಯಲ್ಲಿ ಭಾಗಿಯಾಗುತ್ತಾರೆ.

ಇಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್‌ ಭೇಟಿ Read More »

ಪಂಜಾಬ್‌ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ನಿಧನ

ಚಂಡೀಗಢ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ, ಶಿರೋಮಣಿ ಅಖಾಲಿದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್ (95) ನಿನ್ನೆ ರಾತ್ರಿ ನಿಧನರಾಗಿದ್ದಾರೆ.ಮೊಹಾಲಿಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ಪ್ರಕಾಶ್ ಸಿಂಗ್ ಬಾದಲ್ ಚಿಕಿತ್ಸೆಗೆ ದಾಖಲಾಗಿದ್ದರು. ಪ್ರಕಾಶ್ ಸಿಂಗ್ ಬಾದಲ್ ನಿಧನ ಸುದ್ದಿಯನ್ನು ಅವರ ಆಪ್ತ ಸಹಾಯಕರು ಹಾಗೂ ಪುತ್ರರು ದೃಢಪಡಿಸಿದ್ದಾರೆ. ಪ್ರಕಾಶ್ ಸಿಂಗ್ ಬಾದಲ್ 5 ಬಾರಿ ಪಂಜಾಬ್‌ ಮುಖ್ಯಮಂತ್ರಿಯಾಗಿದ್ದರು. ಇವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅವರ ಅಂತಿಮ ಸಂಸ್ಕಾರ ಭಟಿಂಡದ ಬಾದಲ್ ಗ್ರಾಮದಲ್ಲಿ ನಡೆಯಲಿದೆ. ಬುಧವಾರ ಬೆಳಗ್ಗೆ ಅವರ ಪಾರ್ಥಿವ

ಪಂಜಾಬ್‌ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ನಿಧನ Read More »

ಮೇ 3 : ಮೂಲ್ಕಿಯಲ್ಲಿ ಮೋದಿ ಬೃಹತ್‌ ಸಾರ್ವಜನಿಕ ಸಭೆ

ಏ. 29 ರಂದು ಮಂಗಳೂರಿನಲ್ಲಿ ಅಮಿತ್‌ ಶಾ ರೋಡ್‌ ಶೋ ಉಡುಪಿ : ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಕರಾವಳಿಗೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಲಿದ್ದಾರೆ. ಮೂಲ್ಕಿಯಲ್ಲಿ ಪ್ರಧಾನಿಯ ಬೃಹತ್‌ ಸಾರ್ವಜನಿಕ ಸಮಾವೇಶ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಜಗದೀಶ ಶೆಣವ ಹೇಳಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸೇರಿಸಿ ಒಂದೇ ಸಾರ್ವಜನಿಕ ಸಭೆ ನಡೆಯಲಿದೆ. ಹೀಗಾಗಿ ಮಧ್ಯದಲ್ಲಿರುವ ಮೂಲ್ಕಿಯನ್ನು ಆಯ್ಕೆ ಮಾಡಲಾಗಿದೆ. ಈ ಸಭೆಯಲ್ಲಿ ಸುಮಾರು 2 ಲಕ್ಷ ಜನ ಸೇರುವ ನಿರೀಕ್ಷೆಯಿದೆ

ಮೇ 3 : ಮೂಲ್ಕಿಯಲ್ಲಿ ಮೋದಿ ಬೃಹತ್‌ ಸಾರ್ವಜನಿಕ ಸಭೆ Read More »

ಮೇ, ಜೂನ್​​ನಲ್ಲಿ ತಿರುಪತಿ ದರ್ಶನಕ್ಕೆ ಬರುವ ಭಕ್ತರಿಗೆ ವಿಶೇಷ ಪ್ರವೇಶ ಟಿಕೆಟ್‌ ಬಿಡುಗಡೆ

ತಿರುಪತಿ : ತಿರುಮಲ ತಿರುಪತಿ ದೇವಸ್ಥಾನ (TTD) ಇಂದು ಬೆಳಿಗ್ಗೆ 10:00 ಗಂಟೆಯಿಂದ ಮೇ ಮತ್ತು ಜೂನ್ ತಿಂಗಳಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗೆ ವಿಶೇಷ ಪ್ರವೇಶ ಟಿಕೆಟ್‌ಗಳನ್ನು ಬಿಡುಗಡೆ ಮಾಡಿದೆ. ಟಿಟಿಡಿಯು ವೆಬ್​​ಸೈಟ್​​ನಲ್ಲಿ ತಿಳಿಸಿರುವ ತಿಂಗಳಿನಲ್ಲಿ ತಿರುಮಲದಲ್ಲಿ ವಿಶೇಷ ಮತ್ತು ಹೆಚ್ಚುವರಿ ವಸತಿ ಕೊಠಡಿಗಳನ್ನು ಬಿಡುಗಡೆ ಮಾಡಲಿದೆ. ಮೇ ಮತ್ತು ಜೂನ್‌ನಲ್ಲಿ ತಿರುಮಲಗೆ ಭೇಟಿ ನೀಡಬೇಕಾದರೆ ಟೋಕನ್ ಪಡೆಯಲು ಭಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಕಲ್ಯಾಣೋತ್ಸವ, ಉಂಜಲ್ ಸೇವೆ, ಆರ್ಜಿತ ಬ್ರಹ್ಮೋತ್ಸವಂ

ಮೇ, ಜೂನ್​​ನಲ್ಲಿ ತಿರುಪತಿ ದರ್ಶನಕ್ಕೆ ಬರುವ ಭಕ್ತರಿಗೆ ವಿಶೇಷ ಪ್ರವೇಶ ಟಿಕೆಟ್‌ ಬಿಡುಗಡೆ Read More »

ದೇಶದೆಲ್ಲೆಡೆ ಬಿಜೆಪಿಯಿಂದ ಕಳ್ಳಮಾರ್ಗದಲ್ಲಿ ಸರ್ಕಾರ ರಚನೆ ಎಂದು ಖರ್ಗೆ ವ್ಯಂಗ್ಯ

ಮಂಗಳೂರು : ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಮಂಗಳೂರಿಗೆ ಆಗಮಿಸಿದ್ದು, ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನಾವು 150 ಸೀಟ್ ಗೆಲ್ಲಬೇಕಾಗಿದೆ. ಕಡಿಮೆ ಸೀಟ್‌ ಗೆದ್ದಲ್ಲಿ ಶಾಸಕರನ್ನು ಬಿಜೆಪಿಯವರು ಆಪರೇಷನ್‌ ಕಮಲ ಮಾಡಿ ಕಳ್ಳ ಮಾರ್ಗದಲ್ಲಿ ಸರ್ಕಾರ ರಚಿಸುತ್ತಾರೆ. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯ ಸೀಟುಗಳನ್ನು ಕಾಂಗ್ರೆಸ್‌ ಪಡೆಯುವುದು ಅಗತ್ಯ ಎಂದರು. ಕರ್ನಾಟಕ, ಮಧ್ಯಪ್ರದೇಶ, ಗೋವಾ, ಮಣಿಪುರಾ, ಉತ್ತರಖಂಡದಲ್ಲಿ ಶಾಸಕರ ಕಳ್ಳತನದಿಂದ ಸರಕಾರ ರಚನೆಯಾಗಿದೆ. ಆಮದು ಮಾಡಿಕೊಂಡ ಶಾಸಕರನ್ನ ಬಿಜೆಪಿ ವಾಷಿಂಗ್ ಮೆಷೀನ್ ಗೆ ಹಾಕಿದ್ರೆ

ದೇಶದೆಲ್ಲೆಡೆ ಬಿಜೆಪಿಯಿಂದ ಕಳ್ಳಮಾರ್ಗದಲ್ಲಿ ಸರ್ಕಾರ ರಚನೆ ಎಂದು ಖರ್ಗೆ ವ್ಯಂಗ್ಯ Read More »

error: Content is protected !!
Scroll to Top