ದೇಶ

ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ : 10 ರೋಗಿಗಳು ಸಾವು

ಐಸಿಯುನಲ್ಲಿದ್ದ ರೋಗಿಗಳು ಉಸಿರುಕಟ್ಟಿ ಒದ್ದಾಡಿ ಸಾವು ಕಟಕ್ : ಒಡಿಶಾದ ಕಟಕ್ ನಗರದಲ್ಲಿರುವ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡಕ್ಕೆ 10 ರೋಗಿಗಳು ಬಲಿಯಾಗಿದ್ದಾರೆ. 11ಕ್ಕೂ ಹೆಚ್ಚು ಆಸ್ಪತ್ರೆ ಸಿಬ್ಬಂದಿಗೆ ಗಾಯಗಳಾಗಿವೆ. ಎಸ್​ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದೆ. ಮಧ್ಯರಾತ್ರಿಯ ನಂತರ 2.30ರಿಂದ 3 ಗಂಟೆಯ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿರಬಹುದು ಎಂದು ಶಂಕಿಸಲಾಗಿದೆ. ಆಸ್ಪತ್ರೆಯ ಟ್ರಾಮಾ ಕೇರ್ ವಿಭಾಗದ ಐಸಿಯುನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಗಂಭೀರವಾಗಿ ಗಾಯಗೊಂಡಿರುವ ರೋಗಿಗಳು ಈ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ […]

ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ : 10 ರೋಗಿಗಳು ಸಾವು Read More »

ಇಂದು ಪಂಚ ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

ಸಂಜೆ ವೇಳಾಪಟ್ಟಿ ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿರುವ ಚುನಾವಣಾ ಆಯೋಗ ನವದೆಹಲಿ : ಭಾರತ ಚುನಾವಣಾ ಆಯೋಗ ಇಂದು ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆಯಿದೆ. ಚುನಾವಣಾ ಆಯೋಗ ಸಂಜೆ 4 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದೆ. ಏಪ್ರಿಲ್‌ನಲ್ಲಿ ಚುನಾವಣೆ ನಡೆಯುವ ನಿರೀಕ್ಷೆಯಿದ್ದು, ಮೇ ತಿಂಗಳ ಆರಂಭದಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಏಕೆಂದರೆ ಆ ವೇಳೆಗೆ ಹಲವಾರು ರಾಜ್ಯಗಳ ವಿಧಾನಸಭೆಗಳ ಅವಧಿ ಮುಕ್ತಾಯಗೊಳ್ಳಲಿದೆ. ಚುನಾವಣಾ ಸಿದ್ಧತೆಯನ್ನು

ಇಂದು ಪಂಚ ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ Read More »

ಭಾರತ ವಿರೋಧಿ ಶಕ್ತಿಗಳ ಕೈಗೊಂಬೆಯಾಗಿದೆ ಕಾಂಗ್ರೆಸ್ : ಪ್ರಧಾನಿ ಮೋದಿ

ಅಸ್ಸಾಂ: ಮಧ್ಯಪ್ರಾಚ್ಯ ರಾಷ್ಟ್ರಗಳ ಯುದ್ಧಕ್ಕೆ ಸಂಬಂಧಿಸಿದಂತೆ ಒಂದು ಹಳೆಯ ಪಕ್ಷ ಭಾರತೀಯರಲ್ಲಿ ಆತಂಕ ಸೃಷ್ಟಿ ಮಾಡಲು ಪ್ರಯತ್ನ ನಡೆಸುತ್ತಿದೆ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ. ನಮ್ಮ ಸರ್ಕಾರ ಈ ಸಂಘರ್ಷದ ಪರಿಣಾಮ ನಮ್ಮ ನಾಗರಿಕರ ಮೇಲೆ ಕಡಿಮೆಯಾಗುವಂತೆ ಮಾಡಲು ಪ್ರಯತ್ನವನ್ನು ಮಾಡುತ್ತಿದೆ. ಹಲವು ಜಾಗತಿಕ ಶಕ್ತಿಗಳಿಗೆ ಭಾರತದ ತ್ವರಿತ ಅಭಿವೃದ್ಧಿಯನ್ನು ಜೀರ್ಣ ಮಾಡಿಕೊಳ್ಳುವುದು ಸಾಧ್ಯವಾಗುತ್ತಿಲ್ಲ. ಅಂತಹ ಶಕ್ತಿಗಳ ಕೈಯಲ್ಲಿ ಕಾಂಗ್ರೆಸ್ ಕೈಗೊಂಬೆಯಂತಾಗಿದೆ. ದೇಶದ ಹಿತಾಸಕ್ತಿಯ ವಿಷಯದಲ್ಲಿ ಕಾಂಗ್ರೆಸ್ ಮತ್ತೆ ವಿಫಲವಾಗಿದೆ ಎಂದು ಅವರು ಕಿಡಿ ಕಾರಿದ್ದಾರೆ.

ಭಾರತ ವಿರೋಧಿ ಶಕ್ತಿಗಳ ಕೈಗೊಂಬೆಯಾಗಿದೆ ಕಾಂಗ್ರೆಸ್ : ಪ್ರಧಾನಿ ಮೋದಿ Read More »

ಹಾರ್ಮುಜ್‌ ಜಲಸಂಧಿ ದಾಟಿದ ಎಲ್‌ಪಿಜಿ ತುಂಬಿರುವ ಎರಡು ಭಾರತೀಯ ಹಡಗುಗಳು

ದೇಶದಲ್ಲಿ ಗ್ಯಾಸ್‌ ಟ್ರಬಲ್‌ ತುಸು ಕಡಿಮೆಯಾಗುವ ಸಾಧ್ಯತೆ ನವದೆಹಲಿ: ಮದ್ಯಪ್ರಾಚ್ಯದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಮುಂದುವರಿದಿರುವಂತೆಯೇ ಭಾರತೀಯ ನೌಕಾ ಪಡೆಯ ಬೆಂಗಾವಲಿನೊಂದಿಗೆ 40,000 ಮೆಟ್ರಿಕ್ ಟನ್‌ಗೂ ಹೆಚ್ಚು ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು (LPG) ಹೊತ್ತ ಭಾರತದ ಶಿವಾಲಿಕ್ ಹಡಗು ಹಾರ್ಮುಜ್ ಜಲಸಂಧಿಯನ್ನು ಯಶಸ್ವಿಯಾಗಿ ದಾಟಿದೆ. ಇರಾನ್‌ ಬಂದ್‌ ಮಾಡಿರುವ ಹಾರ್ಮುಜ್ ಜಲಸಂಧಿಯಲ್ಲಿ ನೌಕಾಪಡೆಯ ಬೆಂಗಾವಲಿನಲ್ಲಿ ಶಿವಾಲಿಕ್‌ ಸಂಚರಿಸಿ ನಂತರ ಮುಕ್ತ ಸಮುದ್ರಕ್ಕೆ ಯಶಸ್ವಿಯಾಗಿ ಸಾಗಿದೆ ಎಂದು ವರದಿಯಾಗಿದೆ. ಈ ಹಡಗು ಎರಡು ದಿನಗಳ ಒಳಗಡೆ ಮುಂಬೈ ಅಥವಾ ಕಾಂಡ್ಲಾ

ಹಾರ್ಮುಜ್‌ ಜಲಸಂಧಿ ದಾಟಿದ ಎಲ್‌ಪಿಜಿ ತುಂಬಿರುವ ಎರಡು ಭಾರತೀಯ ಹಡಗುಗಳು Read More »

ಎಲ್‌ಪಿಜೆ ಕೊರತೆ : ಕಲ್ಲಿದ್ದಲು, ಪಿಎನ್‌ಜಿ ಬಳಸಲು ಕೇಂದ್ರ ಸರ್ಕಾರ ಸಲಹೆ

ಯುದ್ಧದಿಂದಾಗಿ ಅಡುಗೆ ಅನಿಲ ಪೂರೈಕೆ ವ್ಯತ್ಯಯವಾಗಿ ಸಮಸ್ಯೆ ನವದೆಹಲಿ: ಮಧ್ಯಪ್ರಾಚ್ಯದ ಯುದ್ಧ ತೀವ್ರಗೊಂಡಿದ್ದು, ಸದ್ಯಕ್ಕೆ ನಿಲ್ಲುವ ಸಾಧ್ಯತೆಯಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಗ್ಯಾಸ್‌ ಮಿತವಾಗಿ ಬಳಸುವಂತೆ ಸಲಹೆ ನೀಡಿದೆ. ಯುದ್ಧದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಕೊರತೆ ಉಂಟಾಗಿದ್ದು, ಯುದ್ಧ ಇದೇ ರೀತಿ ಮುಂದುವರಿದರೆ ಸಮಸ್ಯೆ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆಯಿದೆ. ಹೋಟೆಲ್‌ಗಳು ಹಾಗೂ ವಾಣಿಜ್ಯ ಸಂಸ್ಥಾಪನೆಗಳು ಕಲ್ಲಿದ್ದಲು ಹಾಗೂ ಪರ್ಯಾಯ ಇಂಧನ ಬಳಸುವ ಮೂಲಕ ಮಿತವ್ಯಯ ಮಾಡಬೇಕು ಹಾಗೂ ಮನೆಗಳಲ್ಲಿ ಪಿಎನ್‌ಜಿ ಅನಿಲ ಬಳಕೆ ಮಾಡುವಂತೆ ಕೇಂದ್ರ ಸರ್ಕಾರ

ಎಲ್‌ಪಿಜೆ ಕೊರತೆ : ಕಲ್ಲಿದ್ದಲು, ಪಿಎನ್‌ಜಿ ಬಳಸಲು ಕೇಂದ್ರ ಸರ್ಕಾರ ಸಲಹೆ Read More »

ರಷ್ಯಾದಿಂದ ತೈಲ ಖರೀದಿಸಲು ಭಾರತದ ಬಳಿ ಅಮೆರಿಕ ಬೇಡಿಕೊಂಡಿತ್ತು

ಇರಾನ್‌ ವಿದೇಶಾಂಗ ಸಚಿವ ಬಹಿರಂಗಪಡಿಸಿದ ರಹಸ್ಯ ಟೆಹ್ರಾನ್‌: ರಷ್ಯಾದಿಂದ ತೈಲ ಖರೀದಿಸುವಂತೆ ಭಾರತಕ್ಕೆ ಅಮೆರಿಕ ಅನುಮತಿ ನೀಡಿದ್ದಲ್ಲ ಬದಲಾಗಿ ಬೇಡಿಕೊಂಡದ್ದು ಎಂದು ಇರಾನ್‌ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಬಹಿರಂಗಪಡಿಸಿದ್ದಾರೆ. ಭಾರತವೂ ಸೇರಿದಂತೆ ವಿವಿಧ ದೇಶಗಳ ಬಳಿ ಈಗ ರಷ್ಯಾದಿಂದ ಕಚ್ಚಾತೈಲ ಖರೀದಿಸಲು ಬೇಡಿಕೊಳ್ಳುವ ಸ್ಥಿತಿಗೆ ಅಮೆರಿಕವನ್ನು ತಂದು ನಿಲ್ಲಿಸಿದ್ದೇವೆ ಎಂದು ಹೇಳಿದ್ದಾರೆ. ಮದ್ಯಪ್ರಾಚ್ಯ ಯುದ್ಧ ಶುರುವಾದ ಬಳಿಕ ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ ಅನುಮತಿ ನೀಡಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದು,

ರಷ್ಯಾದಿಂದ ತೈಲ ಖರೀದಿಸಲು ಭಾರತದ ಬಳಿ ಅಮೆರಿಕ ಬೇಡಿಕೊಂಡಿತ್ತು Read More »

ಪ್ರಧಾನಿ ಮೋದಿ ಅವರ ಗುಣಗಾನ ಮಾಡಿದ ನಟ ಮೋಹನ್ ಲಾಲ್

ಕೊಚ್ಚಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಲಯಾಳಂ ಚಿತ್ರರಂಗದ ಹೆಸರಾಂತ ಹಿರಿಯ ನಟ ಮೋಹನ್ ಲಾಲ್ ಅವರು ಶ್ಲಾಘಿಸಿದ್ದಾರೆ. ಪಾಡ್‌ಕಾಸ್ಟ್ ಒಂದರಲ್ಲಿ ಪ್ರಧಾನಿ ಮೋದಿ ಅವರ ಬಗ್ಗೆ ಮಾತನಾಡಿದ ಲಾಲೇಟನ್, ಪ್ರಧಾನಿ ಮೋದಿ ಅವರು ರಾಜಕೀಯ ಚಾಣಾಕ್ಷ, ಕಲಾವಿದರಿಗೆ ಗೌರವ ನೀಡುವ ದೂರದೃಷ್ಟಿತ್ವ ಹೊಂದಿರುವ ನಾಯಕ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ನಾನು ಸಾಕಷ್ಟು ಬಾರಿ ಭೇಟಿ ಮಾಡಿದ್ದೇನೆ. ಪ್ರತಿ ಭೇಟಿಯಲ್ಲಿಯೂ ಓರ್ವ ದೂರದೃಷ್ಟಿಯ ದೃಢ ನಾಯಕನನ್ನು ಭೇಟಿಯಾದ ಅನುಭವವೇ ನನಗೆ ದೊರೆತಿದೆ. ಅವರು

ಪ್ರಧಾನಿ ಮೋದಿ ಅವರ ಗುಣಗಾನ ಮಾಡಿದ ನಟ ಮೋಹನ್ ಲಾಲ್ Read More »

ಪ್ರವಾಸೋದ್ಯಮ, ಡ್ರೈಫ್ರುಟ್ಸ್‌ ವಹಿವಾಟು ಕುಂಠಿತಗೊಳಿಸಿದ ಯುದ್ಧ

ಎಲ್ಲ ಕ್ಷೇತ್ರಗಳಿಗೂ ತಟ್ಟುತ್ತಿದೆ ಮಧ್ಯಪ್ರಾಚ್ಯದ ಯುದ್ಧದ ಬಿಸಿ ಮಂಗಳೂರು: ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್ ಮತ್ತು ಅಮೆರಿಕ ನಡುವೆ ನಡೆಯುತ್ತಿರುವ ಘನಘೋರ ಕದನ ಹದಿನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಸದ್ಯಕ್ಕೆ ಈ ಯುದ್ಧ ನಿಲ್ಲುವ ಸಾಧ್ಯತೆ ಗೋಚರಿಸುತ್ತಿಲ್ಲ. ಈಗಾಗಲೇ ಯುದ್ಧ ಜಗತ್ತಿನಾದ್ಯಂತ ಪ್ರತಿಕೂಲ ಪರಿಣಾಮ ಬೀರತೊಡಗಿದೆ. ಭಾರತದಲ್ಲಿ ಗ್ಯಾಸ್‌ ಅಭಾವದಿಂದ ಹೋಟೆಲ್, ಕ್ಯಾಟರಿಂಗ್‌ ಉದ್ಯಮ ಹೊಡೆತ ತಿಂದಿದೆ. ರಫ್ತು, ಆಮದು ವಹಿವಾಟುಗಳು ಇನ್ನಿಲ್ಲದಂತೆ ಸಂಕಷ್ಟಕ್ಕೀಡಾಗಿವೆ. ಪ್ರವಾಸೋದ್ಯಮ, ಡ್ರೈಫ್ರೂಟ್ಸ್‌ ವಹಿವಾಟಿನ ಮೇಲೂ ಪರಿಣಾಮ ಬೀರಿದೆ. ವಿಮಾನ ವ್ಯತ್ಯಯದಿಂದಾಗಿ ವಿದೇಶಿ ಪ್ರವಾಸಿಗರ ಸಂಖ್ಯೆ ಭಾರಿ

ಪ್ರವಾಸೋದ್ಯಮ, ಡ್ರೈಫ್ರುಟ್ಸ್‌ ವಹಿವಾಟು ಕುಂಠಿತಗೊಳಿಸಿದ ಯುದ್ಧ Read More »

ಇರಾನ್‌ನ ಪ್ರತಿ ವ್ಯಕ್ತಿಯ ಸಾವಿಗೆ ಪ್ರತೀಕಾರ : ಮೊಜ್ತಬಾ ಖಮೇನಿ ಘೋಷಣೆ

ಅಮೆರಿಕ, ಇಸ್ರೇಲ್‌, ಗಲ್ಫ್‌ ದೇಶಗಳಿಗೆ ಕಠಿಣ ಎಚ್ಚರಿಕೆ ಟೆಹ್ರಾನ್‌ : ಮಧ್ಯಪ್ರಾಚ್ಯ ಸಮರ ತೀವ್ರ ಸ್ವರೂಪ ಪಡೆದುಕೊಂಡಿರುವಂತೆಯೇ ಇರಾನ್‌ನ ಹೊಸ ಸರ್ವೋಚ್ಚ ನಾಯಕನಾಗಿ ಅಧಿಕಾರ ವಹಿಸಿಕೊಂಡ ನಂತರ ಜಗತ್ತಿಗೆ ಮೊದಲ ಸಂದೇಶ ರವಾನಿಸಿರುವ ಮೊಜ್ತಬಾ ಖಮೇನಿ, ಅಮೆರಿಕ ಮತ್ತು ಇಸ್ರೇಲ್‌ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಾಳಿಗಳಲ್ಲಿ ಮೃತಪಟ್ಟ ಇರಾನಿಯನ್ನರ ಪ್ರತಿ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳಲಾಗುತ್ತದೆ. ಅಗತ್ಯವಿದ್ದರೆ ಸಂಘರ್ಷ ಹೊಸ ಮಜಲುಗಳನ್ನು ಪಡೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. ಇರಾನ್ ತನ್ನ ಹುತಾತ್ಮರ ರಕ್ತದ ಸೇಡು ತೀರಿಸಿಕೊಳ್ಳುವುದರಿಂದ ಹಿಂದೆ ಸರಿಯುವುದಿಲ್ಲ.

ಇರಾನ್‌ನ ಪ್ರತಿ ವ್ಯಕ್ತಿಯ ಸಾವಿಗೆ ಪ್ರತೀಕಾರ : ಮೊಜ್ತಬಾ ಖಮೇನಿ ಘೋಷಣೆ Read More »

ಕಾಂಗ್ರೆಸ್‌ನಲ್ಲಿ ಮತ್ತೆ ರೆಸಾರ್ಟ್‌ ರಾಜಕಾರಣ : ಹಲವು ಶಾಸಕರನ್ನು ಸಾಗಿಸಿದ ಡಿಕೆಶಿ

ಅಡ್ಡ ಮತದಾನ, ಪಕ್ಷಾಂತರ ತಡೆಯಲು ಬೆಂಗಳೂರಿನ ರೆಸಾರ್ಟ್‌ಗಳಲ್ಲಿ ಶಾಸಕರಿಗೆ ಆಶ್ರಯ ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಅಸ್ಸಾಂ ಹಾಗೂ ಒಡಿಶಾದ ಹಲವು ಕಾಂಗ್ರೆಸ್‌ ಶಾಸಕರನ್ನು ಕುದುರೆ ವ್ಯಾಪಾರ ತಡೆಯುವ ಉದ್ದೇಶದಿಂದ ಬೆಂಗಳೂರಿಗೆ ಕರೆತರಲಾಗಿದ್ದು, ರೆಸಾರ್ಟ್‌ಗಳಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಶ್ರಯ ಕಲ್ಪಿಸಿದ್ದಾರೆ. ಒಡಿಶಾದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಹೆಚ್ಚಾಗಿರುವ ನಡುವೆ ಕಾಂಗ್ರೆಸ್ ತನ್ನ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ಬೆಂಗಳೂರಿಗೆ ಕಳುಹಿಸಿದೆ. ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಒಡಿಶಾದ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ

ಕಾಂಗ್ರೆಸ್‌ನಲ್ಲಿ ಮತ್ತೆ ರೆಸಾರ್ಟ್‌ ರಾಜಕಾರಣ : ಹಲವು ಶಾಸಕರನ್ನು ಸಾಗಿಸಿದ ಡಿಕೆಶಿ Read More »

error: Content is protected !!
Scroll to Top