ದೇಶ

ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ

ಈಶ್ವರಪ್ಪ ಮಗನಿಗಿಲ್ಲ ಟಿಕೆಟ್‌ ಬೆಂಗಳೂರು : ಆಡಳಿತರೂಢ ಬಿಜೆಪಿ ಅಭ್ಯರ್ಥಿಗಳ ನಾಲ್ಕನೇ ಮತ್ತು ಅಂತಿಮ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ.ಇತ್ತೀಚಿಗಷ್ಟೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಾವು ಪ್ರತಿನಿಧಿಸುತ್ತಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ತಮ್ಮ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಅವರ ನಿರೀಕ್ಷೆ ಹುಸಿಯಾಗಿದೆ.ಈ ಮುಂಚೆ ಮೂರು ಹಂತಗಳಲ್ಲಿ 222 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದ ಬಿಜೆಪಿ ಶಿವಮೊಗ್ಗ ಮತ್ತು ಮಾನ್ವಿ […]

ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ Read More »

ಮಂಗಳೂರು ಉತ್ತರದ ಕಾಂಗ್ರೆಸ್‌ ಟಿಕೆಟ್‌ ಅಭ್ಯರ್ಥಿಯಾಗಿ ಇನಾಯತ್‌ ಅಲಿ

ಮಾಜಿ ಶಾಸಕ ಬಾವಾಗೆ ಕೊನೆಗೂ ಸಿಗಲಿಲ್ಲ ಟಿಕೆಟ್‌-ಬಂಡಾಯದ ಸುಳಿವು ಕಾರ್ಕಳ : ಭಾರಿ ಕುತೂಹಲ ಕೆರಳಿಸಿದ್ದ ಮಂಗಳೂರು ಉತ್ತರ ಕ್ಷೇತ್ರದ ಟಿಕೆಟನ್ನು ಕಾಂಗ್ರೆಸ್‌ ಕೊನೆಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದ್ಯಮಿ ಇನಾಯತ್‌ ಅಲಿಗೆ ನೀಡಿದೆ. ಕೊನೆಯ ಕ್ಷಣದವರೆಗೂ ರಹಸ್ಯವಾಗಿಟ್ಟಿದ್ದ ಹೆಸರನ್ನು ಕಾಂಗ್ರೆಸ್‌ ವರಿಷ್ಠರು ನಿನ್ನೆ ರಾತ್ರೋರಾತ್ರಿ ಘೋಷಿಸಿದ ಪಟ್ಟಿಯಲ್ಲಿ ಪ್ರಕಟಿಸಿದ್ದಾರೆ.ಮಂಗಳೂರು ಉತ್ತರದ ಕಾಂಗ್ರೆಸ್‌ ಟಿಕೆಟ್‌ಗಾಗಿ ಮಾಜಿ ಶಾಸಕ ಮೊಯಿದ್ದಿನ್‌ ಬಾವಾ ಮತ್ತು ಇನಾಯತ್‌ ಅಲಿ ನಡುವೆ ತೀವ್ರ ಪೈಪೋಟಿಯಿದ್ದ ಕಾರಣ ಕೊನೆಯವರೆಗೂ ಕಾಂಗ್ರೆಸ್‌ ವರಿಷ್ಠರಿಗೆ ಅಭ್ಯರ್ಥಿ ಆಯ್ಕೆ

ಮಂಗಳೂರು ಉತ್ತರದ ಕಾಂಗ್ರೆಸ್‌ ಟಿಕೆಟ್‌ ಅಭ್ಯರ್ಥಿಯಾಗಿ ಇನಾಯತ್‌ ಅಲಿ Read More »

ಮೇ 6 : ಮೂಲ್ಕಿಯಲ್ಲಿ ಪ್ರಧಾನಿ ಮೋದಿ ಸಮಾವೇಶ

ಪ್ರಚಾರದಲ್ಲಿ ಯೋಗಿ ಆದಿತ್ಯನಾಥ್‌ ಭಾಗಿಯಾಗುವ ನಿರೀಕ್ಷೆ ಬೆಂಗಳೂರು : ಬಿಜೆಪಿ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ರಂಗಕ್ಕಿಳಿಯಲಿದ್ದಾರೆ. ಮೇ 6 ರಂದು ಮೂಲ್ಕಿಯಲ್ಲಿ ಪ್ರಧಾನಿ ಮೋದಿಯ ಸಾರ್ವಜನಿಕ ಸಭೆ ನಿಗದಿಯಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಎರಡೂ ಜಿಲ್ಲೆಗಳಿಗೆ ಅನುಕೂಲವಾಗುವಂತೆ ಮಧ್ಯದಲ್ಲಿರುವ ಮೂಲ್ಕಿಯಲ್ಲಿ ಮೋದಿ ಸಭೆ ನಡೆಯಲಿದೆ. ಇದು ತಾತ್ಕಾಲಿಕವಾಗಿ ನಿಗದಿಯಾಗಿರುವ ದಿನಾಂಕ. ಬದಲಾಗುವ ಸಾಧ್ಯತೆಯೂ ಇದೆಎಂದು ಪಕ್ಷದ ಮೂಲಗಳು ತಿಳಿಸಿವೆ.ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ

ಮೇ 6 : ಮೂಲ್ಕಿಯಲ್ಲಿ ಪ್ರಧಾನಿ ಮೋದಿ ಸಮಾವೇಶ Read More »

ಅನ್ನಪೂರ್ಣ ಪರ್ವತದಿಂದ 6 ಸಾವಿರ ಕೆಳಗೆ ಬಿದ್ದ ಭಾರತದ ಪರ್ವತಾರೋಹಿ ನಾಪತ್ತೆ

ಹೊಸದಿಲ್ಲಿ : ಭಾರತದ ಪರ್ವತಾರೋಹಿ ಅನುರಾಗ್ ಮಾಲು ನೇಪಾಳದ ಅನ್ನಪೂರ್ಣ ಪರ್ವತದಿಂದ ಬಿದ್ದು ನಾಪತ್ತೆಯಾಗಿದ್ದಾರೆ. ರಾಜಸ್ಥಾನದ ಕಿಶನ್‌ಗಢ್‌ ನಿವಾಸಿ ಅನುರಾಗ್ ಮಾಲು ಅವರು ಮೌಂಟ್ ಅನ್ನಪೂರ್ಣ ಕ್ಯಾಂಪ್ 3ರಿಂದ ಇಳಿಯುತ್ತಿರುವಾಗ ನಾಪತ್ತೆಯಾಗಿದ್ದಾರೆ.ಅನ್ನಪೂರ್ಣ ವಿಶ್ವದ ಹತ್ತನೇ ಅತಿ ಎತ್ತರದ ಪರ್ವತವಾಗಿದ್ದು, ಸಮುದ್ರ ಮಟ್ಟದಿಂದ 8,091 ಮೀಟರ್ ಎತ್ತರದಲ್ಲಿದೆ. ಸುಮಾರು 6 ಸಾವಿರ ಮೀಟರ್ ಕೆಳಗೆ ಬಿದ್ದು ನಾಪತ್ತೆಯಾಗಿದ್ದಾರೆ ಎಂದು ಸೆವೆನ್ ಸಮ್ಮಿಟ್ ಟ್ರೆಕ್ಸ್‌ನ ಅಧ್ಯಕ್ಷ ಮಿಂಗ್ಮಾ ಶೆರ್ಪಾ ತಿಳಿಸಿದ್ದಾರೆ.ಮಾಲು ಪರ್ವತಾರೋಹಣಕ್ಕಾಗಿ ಖ್ಯಾತ ಪರ್ವತಾರೋಹಿ ಬಚೇಂದ್ರಿ ಪಾಲ್ ಅವರ ಮಾರ್ಗದರ್ಶನ

ಅನ್ನಪೂರ್ಣ ಪರ್ವತದಿಂದ 6 ಸಾವಿರ ಕೆಳಗೆ ಬಿದ್ದ ಭಾರತದ ಪರ್ವತಾರೋಹಿ ನಾಪತ್ತೆ Read More »

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಮಧ್ಯೆ ಘರ್ಷಣೆ

ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ ಪುಡಿ ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಸಂಘರ್ಷ ನಡೆದ ಘಟನೆ ಏ. 17 ರಂದು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸಂಭವಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಪುಡಿ ಮಾಡಲಾಗಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಸಿ ವಾಪಾಸ್ ತೆರಳುತ್ತಿದ್ದಾಗ ರಕ್ಷಿತ್ ಶಿವರಾಂ ರೋಡ್ ಶೋ

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಮಧ್ಯೆ ಘರ್ಷಣೆ Read More »

ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಏ. 16 ರಂದು ಕೌಳಿಗೆ ಮನೆ ಸಜಿಪ ಮುನ್ನೂರು ಗ್ರಾಮದಲ್ಲಿ ಸಂಭವಿಸಿದೆ. ಪರಮೇಶ್ವರ ಎನ್ ಕೆ(75) ಎಂಬವರೇ ಮೃತ ವ್ಯಕ್ತಿ. ಏ. 14 ರಂದು ರಾತ್ರಿ 10.00 ಗಂಟೆಗೆ ಟಾರ್ಚ ಹಿಡಿದುಕೊಂಡು ಮನೆಯಿಂದ ಹೊರಗೆ ಹೋದವರು ಮರಳಿ ಬಾರದೇ ಇದ್ದಾಗ ಮನೆಯ ಸುತ್ತ ಮುತ್ತ ಪರಿಸರದಲ್ಲಿ ಹಾಗೂ ಸಂಬಂಧಿಕರಲ್ಲಿ ವಿಚಾರಿಸಿ ಯಾವುದೇ ಮಾಹಿತಿ ಸಿಗದ ಕಾರಣ ಮಗನಾದ ಶಿವಾನಂದ ರ ಹೇಳಿಕೆಯಂತೆ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ

ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ Read More »

ಮಾರ್ಚ್ ತಿಂಗಳ ಸಗಟು ಬೆಲೆ ಹಣದುಬ್ಬರ ಕುಸಿತ

ದೆಹಲಿ : ಸಗಟು ಬೆಲೆ ಸೂಚ್ಯಂಕ (WPI) ಆಧಾರಿತ ಹಣದುಬ್ಬರವು ಕಳೆದ ತಿಂಗಳು ಮಾರ್ಚ್ ನಲ್ಲಿ 29 ತಿಂಗಳ ಕನಿಷ್ಠ ಮಟ್ಟಕ್ಕೆ ಶೇಕಡಾ 1.34ಕ್ಕೆ ಇಳಿದಿದೆ.ಮೂಲ ಲೋಹಗಳು ಮತ್ತು ಆಹಾರ ಉತ್ಪನ್ನಗಳ ಬೆಲೆಗಳಲ್ಲಿನ ಮಿತವ್ಯಯದಿಂದಾಗಿ ಹಣದುಬ್ಬರ ಇಳಿಕೆಯಾಗಿದೆ ಎಂದು ಸರ್ಕಾರದ ಅಂಕಿಅಂಶಗಳು ಹೇಳುತ್ತವೆ. ಇದು ಡಬ್ಲ್ಯುಪಿಐ ಆಧಾರಿತ ಹಣದುಬ್ಬರ ಇಳಿಕೆಯಾದ ಸತತ ಹತ್ತನೇ ತಿಂಗಳು. ಉತ್ಪನ್ನ ವಸ್ತುಗಳು ಮತ್ತು ಇಂಧನ ಮತ್ತು ವಿದ್ಯುತ್ ಬೆಲೆಗಳನ್ನು ಸರಾಗಗೊಳಿಸುವ ಮೂಲಕ ಫೆಬ್ರವರಿ ತಿಂಗಳಲ್ಲಿ ಇದು ಶೇಕಡಾ 3.85ರಷ್ಟಿತ್ತು. ಮಾರ್ಚ್ ತಿಂಗಳಲ್ಲಿ

ಮಾರ್ಚ್ ತಿಂಗಳ ಸಗಟು ಬೆಲೆ ಹಣದುಬ್ಬರ ಕುಸಿತ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಆದಾಯ ಗಳಿಕೆ

ಮಂಗಳೂರು : 5,000 ವರ್ಷಕ್ಕೂ ಅಧಿಕ ಹಿನ್ನೆಲೆಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದಲ್ಲಿರುವ ಶ್ರೀಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಆದಾಯ ಗಳಿಕೆಯಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಈ ವರ್ಷದ ವಾರ್ಷಿಕ ಆದಾಯ 123 ಕೋಟಿ ರೂ ದಾಖಲಾಗಿದೆ. 2022ರ ಎಪ್ರಿಲ್‌ನಿಂದ 2023ರ ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು 123 ಕೋಟಿ ರೂ. ಆದಾಯ ಗಳಿಸಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಇತಿಹಾಸದಲ್ಲೇ ಮೊದಲ ಬಾರಿಗೆ ಅತೀ ಹೆಚ್ಚು ಆದಾಯ ಗಳಿಕೆ Read More »

ದಶಕಗಳ ಬಿಜೆಪಿ ನಂಟನ್ನು ಕಡಿದುಕೊಂಡು ಕಾಂಗ್ರೆಸ್ ಸೇರ್ಪಡೆಯಾದ ಜಗದೀಶ್ ಶೆಟ್ಟರ್

ಬೆಂಗಳೂರು : ಬಿಜೆಪಿ ಟಿಕೆಟ್ ಸಿಗದೆ ಹತಾಶರಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿ ಇಂದು ವಿಧ್ಯುಕ್ತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ದಶಕಗಳ ಬಿಜೆಪಿ ನಂಟನ್ನು ಅಧಿಕೃತವಾಗಿ ಕಡಿದುಕೊಂಡಿದ್ದಾರೆ.ನಿನ್ನೆ ರಾತ್ರಿಯೇ ಬಿಜೆಪಿ ಕಚೇರಿಗೆ ಆಪ್ತ ಸಹಾಯಕರ ಮೂಲಕ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರವನ್ನು ರವಾನಿಸಿದ್ದ ಶೆಟ್ಟರ್ ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷ ಸೇರಿದರು. ಈ ಮೂಲಕ ತಮ್ಮ ಮೂರು ದಶಕಗಳ ಬಿಜೆಪಿಯೊಂದಿಗಿನ ಸಂಬಂಧಕ್ಕೆ ಜಗದೀಶ್ ಶೆಟ್ಟರ್ ವಿದಾಯ ಹಾಡಿದ್ದಾರೆ.

ದಶಕಗಳ ಬಿಜೆಪಿ ನಂಟನ್ನು ಕಡಿದುಕೊಂಡು ಕಾಂಗ್ರೆಸ್ ಸೇರ್ಪಡೆಯಾದ ಜಗದೀಶ್ ಶೆಟ್ಟರ್ Read More »

ಹೋಟೆಲ್‌ ಊಟ-ತಿಂಡಿ ಖರ್ಚು ಅಭ್ಯರ್ಥಿ ಲೆಕ್ಕದಲ್ಲಿ ದಾಖಲೆ

ಬೆಂಗಳೂರು : ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣಾ ಅಕ್ರಮಗಳಿಗೆ ಸಹಕರಿಸದಂತೆ ಹೋಟೆಲ್ ಮಾಲೀಕರಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಗುಂಪು ಗುಂಪಾಗಿ ಹೋಟೆಲ್‌ಗಳಿಗೆ ಭೇಟಿ ನೀಡಿದಾಗ ಮತ್ತು ಅಭ್ಯರ್ಥಿಗಳ ಪರವಾಗಿ ಯಾರೇ ಚೀಟಿ ಅಥವಾ ಟೋಕನ್ ನೀಡಿ ಊಟ, ಉಪಹಾರ ನೀಡುವಂತೆ ಕೋರಿದಲ್ಲಿ ಅಂತಹವರ ಮಾಹಿತಿಯನ್ನು ಹೋಟೆಲ್‌ ಮಾಲೀಕರು ಜಿಲ್ಲಾಡಳಿತಕ್ಕೆ ನೀಡಬೇಕಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪ್ರಚಾರಕ್ಕೆ ತಗಲುವ ಎಲ್ಲ ವೆಚ್ಚಗಳನ್ನು ಚುನಾವಣಾ ವೆಚ್ಚ ವೀಕ್ಷಕರು

ಹೋಟೆಲ್‌ ಊಟ-ತಿಂಡಿ ಖರ್ಚು ಅಭ್ಯರ್ಥಿ ಲೆಕ್ಕದಲ್ಲಿ ದಾಖಲೆ Read More »

error: Content is protected !!
Scroll to Top