ದೇಶ

ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

ತೆಲಂಗಾಣ : ತೆಲಂಗಾಣದಲ್ಲಿ ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ ಮಗು ಗಂಭೀರ ಗಾಯಗೊಂಡಿದೆ. ತೆಲಂಗಾಣದ ಕಾಮರೆಡ್ಡಿ ಗಾಂಧಾರಿ ಮಂಡಲದ ಮುಧೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ನಾಯಿ ದಾಳಿಯಿಂದ ಬಾಲಕನ ತಲೆ ಹಾಗೂ ಹೊಟ್ಟೆಗೆ ಗಾಯವಾಗಿದೆ. ಗ್ರಾಮದ ಫಂಕ್ಷನ್ ಹಾಲ್‍ನ ಹೊರಗಡೆ ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದೆ. ಗಾಯಗೊಂಡು ನೋವಿನಿಂದ ನರಳುತ್ತಿದ್ದ ಬಾಲಕನನ್ನು ಕಂಡು ಸ್ಥಳೀಯರು ನಾಯಿಯಿಂದ ಬಿಡಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಮೂರು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ Read More »

ಮಣಿಪುರ ಜನಾಂಗೀಯ ಸಂಘರ್ಷ | ಲೂಟಿ ಮಾಡಿದ ಶಸ್ತ್ರಾಸ್ತ್ರಗಳು ಸರಕಾರದ ವಶಕ್ಕೆ

ಗುವಾಹತಿ: ಮಣಿಪುರದಲ್ಲಿ ಕಳೆದ ತಿಂಗಳಿನಿಂದ ನಡೆದ ಜನಾಂಗೀಯ ಸಂಘರ್ಷದ ವೇಳೆ ಉದ್ರಿಕ್ತ ಗುಂಪು ಲೂಟಿ ಮಾಡಿದ ಶಸ್ತ್ರಾಸ್ತ್ರಗಳನ್ನು ಭದ್ರತಾ ಸಿಬ್ಬಂದಿಗಳು ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆಯಲಾಗಿದ್ದು, 11763 ಮದ್ದುಗುಂಡುಗಳು, 896 ಶಸ್ತ್ರಾಸ್ತ್ರಗಳು ಹಾಗೂ 200 ಬಾಂಬ್‍ಗಳನ್ನು ವಶಕ್ಕೆ ಪಡೆದಿವೆ. ರಾಜ್ಯ ಸರಕಾರದ ಭದ್ರತಾ ಸಲಹೆಗಾರ ಕುಲದೀಪ್ ಸಿಂಗ್ ಈ ಮಾಹಿತಿ ನೀಡಿದ್ದು, ಈ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ಲೂಟಿ ಮಾಡಿರುವ ನಿಖರ ಮಾಹಿತಿ ಇಲ್ಲದಿದ್ದರೂ ಗ್ರೆನೇಡ್ ಮತ್ತು ಸಣ್ಣಪುಟ್ಟ ಫಿರಂಗಿಗಳು ಸೇರಿದಂತೆ 50 ಸಾವಿರ ಮದ್ದು ಗುಂಡುಗಳು,

ಮಣಿಪುರ ಜನಾಂಗೀಯ ಸಂಘರ್ಷ | ಲೂಟಿ ಮಾಡಿದ ಶಸ್ತ್ರಾಸ್ತ್ರಗಳು ಸರಕಾರದ ವಶಕ್ಕೆ Read More »

ಇಂದು ಜಮ್ಮುವಿನಲ್ಲಿ ತಿರುಪತಿ ಬಾಲಾಜಿ ದೇವಸ್ಥಾನದ ಲೋಕಾರ್ಪಣೆ | ಜಮ್ಮುವಿನ ಅತೀ ದೊಡ್ಡ ದೇವಾಲಯಗಳಲ್ಲಿ ಒಂದಾಗಿರುವ ದೇವಾಲಯ

ಜಮ್ಮು: ಜಮ್ಮು ಮತ್ತು ಕಾಶ್ಮೀರ್ ಮಜೀನ್‍ನ ಶಿವಾಲಿಕ್ ಕಾಡುಗಳ ಮಧ್ಯೆ ಇರುವ ಸುಂದರವಾದ ತಿರುಪತಿ ಬಾಲಾಜಿ ದೇವಾಲಯ ಇಂದು ಉದ್ಘಾಟನೆಗೊಳ್ಳಲಿದೆ. ಜೂ.8 ರಂದು ಭಕ್ತಾದಿಗಳಿಗೆ ದೇವಸ್ಥಾನದ ಬಾಗಿಲು ತೆರೆಯಲಿದ್ದು, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಶ್ರೀ ವೆಂಕಟೇಶ್ವರ ದೇವಾ;ಲಯವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಸುಮಾರು 62 ಎಕ್ರೆ ಜಾಗದಲ್ಲಿ ನಿರ್ಮಿಸಲಾದ ಈ ದೇವಸ್ಥಾನ ಜಮ್ಮು ಪ್ರದೇಶದ ಅತೀ ದೊಡ್ಡ ದೇವಾಲಯಗಳಲ್ಲಿ ಒಂದಾಗಲಿದೆ. ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ತಿರುಪತಿ ಬಾಲಾಜಿ ದೇವಾಲಯ ಆಂಧ್ರಪ್ರದೇಶದ

ಇಂದು ಜಮ್ಮುವಿನಲ್ಲಿ ತಿರುಪತಿ ಬಾಲಾಜಿ ದೇವಸ್ಥಾನದ ಲೋಕಾರ್ಪಣೆ | ಜಮ್ಮುವಿನ ಅತೀ ದೊಡ್ಡ ದೇವಾಲಯಗಳಲ್ಲಿ ಒಂದಾಗಿರುವ ದೇವಾಲಯ Read More »

ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರ 6.5 ರಲ್ಲೇ ಮುಂದುವರಿಕೆ |ಸಾಲಗಾರರಿಗೆ ಬಿಗ್ ರಿಲೀಫ್

ದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್​ ರೆಪೋ ದರವನ್ನು 6.5 ಶೇಕಡಾದಲ್ಲಿಯೇ ಮುಂದುವರಿಸಲು ನಿರ್ಧಾರ ಕೈಗೊಂಡಿದ್ದು, ಪರಿಣಾಮ ಸಾಲಗಾರರಿಗೆ ಬಿಗ್​ ರಿಲೀಫ್​ ಸಿಕ್ಕಂತಾಗಿದೆ. ಆರ್‍ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು. ಹಣದುಬ್ಬರ ಕಡಿಮೆಯಾದ ಹಿನ್ನೆಲೆಯಲ್ಲಿ ಬಡ್ಡಿದರ ಏರಿಕೆ ಮಾಡುವ ಪ್ರಮೇಯ ಬರಲಿಲ್ಲ. ಆದರೆ ಹಣದುಬ್ಬರ ಇಳಿಕೆಯಾಗಿದ್ದರೂ ಸಹ ಸಮಾಧಾನಕರ ಸ್ಥಿತಿಗೆ ನಾವು ಬಂದಿಲ್ಲ. ನಮ್ಮ ಗುರಿ ಇನ್ನೂ ಮೇಲ್ಮಟ್ಟದಲ್ಲಿದೆ. ಹೀಗಾಗಿ ನಾವು ಹಣದುಬ್ಬರದ ಬಗ್ಗೆ ಅರ್ಜುನನ ಕಣ್ಣಿಡಬೇಕು ಎಂದು ಹೇಳಿದ್ದಾರೆ. ಕಳೆದ ಮೂರು

ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರ 6.5 ರಲ್ಲೇ ಮುಂದುವರಿಕೆ |ಸಾಲಗಾರರಿಗೆ ಬಿಗ್ ರಿಲೀಫ್ Read More »

ಪ್ರೇಯಸಿಯನ್ನು ಮರ ಕತ್ತರಿಸುವ ಯಂತ್ರದಿಂದ ಕತ್ತರಿಸಿ, ಕುಕ್ಕರಿನಲ್ಲಿ ಬೇಯಿಸಿದ

ಮುಂಬಯಿ: ವ್ಯಕ್ತಿಯೊಬ್ಬ ಸಂಗಾತಿಯನ್ನು ಕೊಂದು ದೇಹವನ್ನು ಮರ ಕತ್ತರಿಸುವ ಯಂತ್ರದಿಂದ ಕತ್ತರಿಸಿ ಕುಕ್ಕರ್ನಲ್ಲಿ ಬೇಯಿಸಿದ ಬರ್ಬರ ಕೃತ್ಯ ಮುಂಬಯಿಯ ಮಿರಾರೋಡ್ನಲ್ಲಿ ಸಂಭವಿಸಿದೆ.ಆರೋಪಿ ಮನೋಜ್ ಸಹಾನಿಯನ್ನು (56) ಪೊಲೀಸರು ಬಂಧಿಸಿದ್ದಾರೆ. ಈತ ತನ್ನ ಲಿವ್ ಇನ್ ಪಾರ್ಟ್ನರ್ ಸಂಗಾತಿಯನ್ನೇ ಬರ್ಬರವಾಗಿ ಸಾಯಿಸಿದ್ದಾನೆ. ಸರಸ್ವತಿ ವೈದ್ಯ (36) ಹತ್ಯೆಯಾಗಿರುವ ಮಹಿಳೆ. ಪೊಲೀಸರು ಬಂದು ಬಾಗಿಲು ತೆರೆದು ಮನೆಯೊಳಗೆ ಹೋದಾಗ ಕೊಳೆತ ಸ್ಥಿತಿಯಲ್ಲಿದ್ದ ದೇಹದ ತುಂಡುಗಳು ಎಲ್ಲೆಂದರಲ್ಲಿ ಬಿದ್ದುಕೊಂಡಿದ್ದವು. ಕೊಲೆ ನಡೆದ ಮೂರ್ನಾಲ್ಕು ದಿನಗಳ ಬಳಿಕ ಇದು ಹೊರಜಗತ್ತಿಗೆ ತಿಳಿದುಬಂದಿದೆ. ಮನೋಜ್

ಪ್ರೇಯಸಿಯನ್ನು ಮರ ಕತ್ತರಿಸುವ ಯಂತ್ರದಿಂದ ಕತ್ತರಿಸಿ, ಕುಕ್ಕರಿನಲ್ಲಿ ಬೇಯಿಸಿದ Read More »

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ | ಆಂಬುಲೆನ್ಸ್ ಗೆ ಬೆಂಕಿ ಹಚ್ಚಿದ ಪರಿಣಾಮ ಮೂವರು ಸಜೀವ ದಹನ

ಮಣಿಪುರ: ಮಣಿಪುರದಲ್ಲಿ ಜನಾಂಗೀಯ ಸಂಘರ್ಷ ನಡೆಯುತ್ತಿದ್ದು, ಆಂಬುಲೆನ್ಸ್ ಒಂದಕ್ಕೆ ಬೆಂಕಿ ಹಚ್ಚಿದೆ ಪರಿಣಾಮ ಮೂವರು ಸಜೀವ ದಹನಗೊಂಡ ಘಟನೆ ನಡೆದಿದೆ. ಆಂಬುಲೆನ್ಸ್ ನಲ್ಲಿದ್ದ ಏಳು ವರ್ಷದ ಗಾಯಾಳು ಬಾಲಕ, ಆತನ ತಾಯಿ ಹಾಗೂ ಮತ್ತೊಬ್ಬ ಮಹಿಳೆ ಸೇರಿದಂತೆ ಮೂವರು ದಹನಗೊಂಡಿದ್ದಾರೆ. ಮಣಿಪುರದಲ್ಲಿ ಕಳೆದ ಹಲವು ದಿನಗಳಿಂದ ಮೀಸಲಾತಿ ಬಗ್ಗೆ ಘರ್ಷಣೆಗಳು ನಡೆಯುತ್ತಿದೆ.

ಮಣಿಪುರದಲ್ಲಿ ಜನಾಂಗೀಯ ಸಂಘರ್ಷ | ಆಂಬುಲೆನ್ಸ್ ಗೆ ಬೆಂಕಿ ಹಚ್ಚಿದ ಪರಿಣಾಮ ಮೂವರು ಸಜೀವ ದಹನ Read More »

ಒಡಿಶಾ ರೈಲು ದುರಂತ: ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ | ಗಾಯಾಳುಗಳಿಗೆ ರಕ್ತದಾನ ಮಾಡಲು ಸರತಿ ಸಾಲು

ಬಾಲಸೋರ್: ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತಕ್ಕೆ ದೇಶಾದ್ಯಂತ ಸಂತಾಪ ವ್ಯಕ್ತವಾಗುತ್ತಿದೆ. ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಥಳದ ಭೀಕರತೆ ಪರಿಶೀಲನೆ ಮಾಡಿ, ಘಟನೆಯ ಬಗ್ಗೆ ಮಾಹಿತಿ‌ ಪಡೆದುಕೊಂಡರು. ಇನ್ನೊಂದೆಡೆ, ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಗಾಯಾಳುಗಳ ಜೀವ ಉಳಿಸಲು ರಕ್ತದ ಅವಶ್ಯಕತೆಯೂ ಹೆಚ್ಚುತ್ತಿದೆ. ಇದಕ್ಕೆ ಸಾರ್ವಜನಿಕರಿಂದ ಸ್ಪಂದನೆ ವ್ಯಕ್ತವಾಗಿದ್ದು, ರಕ್ತದಾನ ಮಾಡಲು ಜನರು ಸಾಲಿನಲ್ಲಿ ಜನರು ನಿಂತಿರುವ ದೃಶ್ಯವೂ ಕಂಡುಬಂದಿದೆ.

ಒಡಿಶಾ ರೈಲು ದುರಂತ: ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ | ಗಾಯಾಳುಗಳಿಗೆ ರಕ್ತದಾನ ಮಾಡಲು ಸರತಿ ಸಾಲು Read More »

ರೈಲುಗಳು ಮುಖಾಮುಖಿ ಢಿಕ್ಕಿ: ಸಾವು – ನೋವು

ಬಾಲಸೋರ್: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ರೈಲುಗಳೆರಡು ಮುಖಾಮುಖಿ ಡಿಕ್ಕಿ‌ ಹೊಡೆದಿದ್ದು, ಸಾವು – ನೋವಿನ ಪ್ರಮಾಣ ಹೆಚ್ಚಿದೆ. ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಸೂಪರ್‌ಫಾಸ್ಟ್ ರೈಲಿನ ಪಲ್ಟಿಯಾದ ಕೋಚ್‌ಗಳಲ್ಲಿ ಹೆಚ್ಚಿನವರು ಸಿಕ್ಕಿಹಾಕಿಕೊಂಡಿದ್ದಾರೆ. ಈ ರೈಲಿನಲ್ಲಿದ್ದ ಹಲವಾರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ವಿಶೇಷ ಪರಿಹಾರ ಆಯುಕ್ತರ ಕಚೇರಿಯ ಅಧಿಕಾರಿಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಅಪಘಾತದ ಸ್ಥಳಕ್ಕೆ ತಂಡಗಳನ್ನು ಕಳುಹಿಸಲಾಗಿದೆ ಎಂದು

ರೈಲುಗಳು ಮುಖಾಮುಖಿ ಢಿಕ್ಕಿ: ಸಾವು – ನೋವು Read More »

ಕರ್ನಾಟಕಕ್ಕೆ ಸಾಗಿಸಲು ಕಾಸರಗೋಡಿನಲ್ಲಿ ಸ್ಫೋಟಕ ದಾಸ್ತಾನು | ಭಾರೀ ಪ್ರಮಾಣದ ಸ್ಫೋಟಕ ಅಬಕಾರಿ ಅಧಿಕಾರಿಗಳ ವಶ

ಕಾಸರಗೋಡು: ಕರ್ನಾಟಕಕ್ಕೆ ಸಾಗಿಸಲು ಕಾಸರಗೋಡಿನಲ್ಲಿ ದಾಸ್ತಾನು ಇಟ್ಟಿದ್ದ ಭಾರೀ ಪ್ರಮಾಣದ ಸ್ಫೋಟಕಗಳನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿ ಮಹಮ್ಮದ್ ಮುಸ್ತಫಾ ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, 7 ಸಾವಿರ ಡಿಟೋನೇಟರ್‌ಗಳು, 2,800 ಜಿಲೆಟಿನ್ ಕಡ್ಡಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಧಿಕಾರಿಗಳು ದಿನನಿತ್ಯದಂತೆ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಹಮ್ಮದ್ ಮುಸ್ತಫಾ ಎಂಬವನ ವಾಹನದಲ್ಲಿ ಸ್ಫೋಟಕ ಸಾಮಗ್ರಿಗಳು ಪತ್ತೆಯಾಗಿವೆ. ನಂತರ ಅವನ ಮನೆಗೆ ತೆರಳಿದಾಗ ಅಲ್ಲಿ

ಕರ್ನಾಟಕಕ್ಕೆ ಸಾಗಿಸಲು ಕಾಸರಗೋಡಿನಲ್ಲಿ ಸ್ಫೋಟಕ ದಾಸ್ತಾನು | ಭಾರೀ ಪ್ರಮಾಣದ ಸ್ಫೋಟಕ ಅಬಕಾರಿ ಅಧಿಕಾರಿಗಳ ವಶ Read More »

9 ವರ್ಷ ಪೂರೈಸಿದ ಕೇಂದ್ರ ಸರಕಾರ: ಜನತೆಗೆ ಕೃತಜ್ಞತೆ ಸಲ್ಲಿಸಿದ ನರೇಂದ್ರ ಮೋದಿ

ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಮೇ 30ಕ್ಕೆ 9 ವರ್ಷಗಳನ್ನು ಪೂರೈಸಿದೆ. ಕೇಂದ್ರದ ಬಿಜೆಪಿ ಸರ್ಕಾರದ 9ನೇ ವರ್ಷಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕೃತಜ್ಞತೆ ತಿಳಿಸಿ ಭಾವನಾತ್ಮಕ ಟ್ವೀಟ್ ಮಾಡಿದ್ದಾರೆ. ರಾಷ್ಟ್ರದ ಸೇವೆಯಲ್ಲಿ 9 ವರ್ಷಗಳನ್ನು ಪೂರೈಸುತ್ತಿರುವ ಈ ಸಂದರ್ಭದಲ್ಲಿ ನಾನು ನಮ್ರತೆ ಮತ್ತು ಕೃತಜ್ಞತೆಯಿಂದ ತುಂಬಿದ್ದೇನೆ. ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರ, ಕೈಗೊಂಡ ಪ್ರತಿಯೊಂದು ನಿರ್ಧಾರ ಜನರ ಜೀವನವನ್ನು ಸುಧಾರಿಸುವ ಬಯಕೆಯಿಂದ ಕೂಡಿದೆ.

9 ವರ್ಷ ಪೂರೈಸಿದ ಕೇಂದ್ರ ಸರಕಾರ: ಜನತೆಗೆ ಕೃತಜ್ಞತೆ ಸಲ್ಲಿಸಿದ ನರೇಂದ್ರ ಮೋದಿ Read More »

error: Content is protected !!
Scroll to Top