ದೇಶ

ಐಪಿಎಲ್‌ ತಂಡಗಳಿಗೆ ಬೇಡವಾದ ಬಾಂಗ್ಲಾದೇಶದ ಕ್ರಿಕೆಟಿಗರು

ಹಿಂದೂ ವಿರೋಧಿ ದೇಶದ ಆಟಗಾರರಿಗೆ ಸದ್ದಿಲ್ಲದೆ ಪಂಚ್‌ ಕೊಟ್ಟ ಕೇಂದ್ರ ಸರ್ಕಾರ ಹೊಸದಿಲ್ಲಿ : ಐಪಿಎಲ್‌ ತಂಡಗಳಿಗೆ ಆಟಗಾರರನ್ನು ಖರೀದಿಸುವ ಮೆಗಾ ಹರಾಜು ಪ್ರಕ್ರಿಯೆ ಜೆಡ್ಡಾದಲ್ಲಿ ನಡೆದಿದ್ದು, ಎಲ್ಲ ತಂಡಗಳು ತಮಗೆ ಬೇಕಾದ ಆಟಗಾರರನ್ನು ಕೋಟಿ ಕೋಟಿ ಸುರಿದು ಖರೀದಿಸಿವೆ. ಆದರೆ ಈ ನಡುವೆ ಬಂಗ್ಲಾದೇಶದ ಯಾವೊಬ್ಬ ಆಟಗಾರನನ್ನು ಯಾರೂ ಖರೀದಿಸಿಲ್ಲ ಎಂಬ ವಿಚಾರ ಈಗ ಮುನ್ನೆಲೆಗೆ ಬಂದಿದೆ. ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಒಟ್ಟು 1,574 ಆಟಗಾರರು ನೋಂದಾಯಿಸಿಕೊಂಡಿದ್ದರು. ಈ ಪೈಕಿ 574 ಆಟಗಾರರನ್ನು ಹರಾಜಿನಲ್ಲಿ […]

ಐಪಿಎಲ್‌ ತಂಡಗಳಿಗೆ ಬೇಡವಾದ ಬಾಂಗ್ಲಾದೇಶದ ಕ್ರಿಕೆಟಿಗರು Read More »

ತಿರುಪತಿ ದೇವಸ್ಥಾನದ ಹುಂಡಿಯಿಂದ ಹಣ ಕದ್ದ ಭಕ್ತ | ಸಿಸಿಟಿವಿನಿಂದ ಪತ್ತೆ ಹಚ್ಚಿ ಕಳ್ಳನ ಸೆರೆ

ತಿರುಪತಿ: ವೆಂಕಟೇಶ್ವರ ಸ್ವಾಮಿಯ ಸನ್ನಿದಾನವಾದ  ತಿರುಮಲ ತಿರುಪತಿ ಕ್ಷೇತ್ರ ಬಹಳ ಪ್ರಸಿದ್ಧವಾದ ಹಿಂದೂ ದೇಗುಲವಾಗಿದೆ.. ಭಾರತದ ಶ್ರೀಮಂತ ದೇವಸ್ಥಾನವಾಗಿರುವ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ನಿತ್ಯ ಲಕ್ಷಾಂತರ ಭಕ್ತರು ದೇಶ, ವಿದೇಶದಿಂದ ಬರುತ್ತಾರೆ. ಭಕ್ತರಿಗೆ ಅನುಕೂಲವಾಗಲೆಂದು ತಿರುಪತಿ ವೆಂಕಟರಮಣ ಸನ್ನಿದಾನದಲ್ಲಿ ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳುತ್ತಲೇ ಬಂದಿದೆ. ಆದರೂ ಸಹ ಈ ಕ್ಷೇತ್ರದಲ್ಲಿ ಭಕ್ತರೊಬ್ಬರು ಕಾಣಿಕೆ ಹುಂಡಿಗೆ ಕನ್ನ ಹಾಕಿದ್ದಾರೆ. ಈ ಘಟನೆ ನಡೆದ ಬಳಿಕ  ಸಾಕಷ್ಟು ಚರ್ಚೆಗೆ ಒಳಗಾಗಿದೆ,. ತಿರುಮಲ ದೇವರ ದರ್ಶನಕ್ಕೆ ಬಂದ ತಮಿಳುನಾಡಿನ ಭಕ್ತನೊಬ್ಬ ದೇವರ

ತಿರುಪತಿ ದೇವಸ್ಥಾನದ ಹುಂಡಿಯಿಂದ ಹಣ ಕದ್ದ ಭಕ್ತ | ಸಿಸಿಟಿವಿನಿಂದ ಪತ್ತೆ ಹಚ್ಚಿ ಕಳ್ಳನ ಸೆರೆ Read More »

ಶಬರಿಮಲೆಯ ಪವಿತ್ರ 18 ಮೆಟ್ಟಿಲುಗಳಲ್ಲಿ ಪೊಲೀಸರ ಫೋಟೊಶೂಟ್‌

ಸಂವೇದನಾ ರಹಿತ ಪೊಲೀಸರಿಗೆ ಕಠಿಣ ತರಬೇತಿಯ ಶಿಕ್ಷೆ ಶಬರಿಮಲೆ : ಶಬರಿಮಲೆ ಅಯ್ಯಪ್ಪ ಸನ್ನಿಧಾನದ ಪರಮ ಪವಿತ್ರ ಹದಿನೆಂಟು ಮೆಟ್ಟಿಲುಗಳ ಮೇಲೆ ಅಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರು ಫೋಟೊ ಶೂಟ್‌ ಮಾಡಿರುವುದು ದೇಶವ್ಯಾಪಿ ಆಕ್ರೋಶದ ಕಿಡಿ ಎಬ್ಬಿಸಿದ್ದು, ಈ 23 ಪೊಲೀಸರನ್ನು ಶಬರಿಮಲೆಯ ಬಂದೋಬಸ್ತಿನ ಕರ್ತವ್ಯದಿಂದ ಬಿಡುಗಡೆಗೊಳಿಸಿ ಕಠಿಣ ತರಬೇತಿಗೆ ಕಳುಹಿಸುವ ಶಿಕ್ಷೆಯನ್ನು ನೀಡಲು ತೀರ್ಮಾನಿಸಲಾಗಿದೆ. ಭಾನುವಾರ ಸನ್ನಿಧಾನದಲ್ಲಿ ಕರ್ತವ್ಯದಲ್ಲಿದ್ದ 30 ಪೊಲೀಸರು ಪವಿತ್ರ ಹದಿನೆಂಟು ಮೆಟ್ಟಿಲುಗಳ ಮೇಲೆ ನಿಂತು ಫೋಟೊಶೂಟ್‌ ಮಾಡಿ ಅದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

ಶಬರಿಮಲೆಯ ಪವಿತ್ರ 18 ಮೆಟ್ಟಿಲುಗಳಲ್ಲಿ ಪೊಲೀಸರ ಫೋಟೊಶೂಟ್‌ Read More »

ಕುಸ್ತಿಪಟು ಬಜರಂಗ್‌ ಪುನಿಯ 4 ವರ್ಷ ಬ್ಯಾನ್‌

ಈ ಕಾರಣಕ್ಕೆ ಪುನಿಯ ಇನ್ನು ಯಾವುದೇ ಕುಸ್ತಿ ಪಂದ್ಯದಲ್ಲಿ ಭಾಗವಹಿಸುವಂತಿಲ್ಲ ಹೊಸದಿಲ್ಲಿ: ಉದ್ದೀಪನ ಮದ್ದು ಪರೀಕ್ಷೆಗೆ ಮಾದರಿ ನೀಡಲು ಅಸಹಕಾರ ತೋರಿದ ಕುಸ್ತಿಪಟು ಬಜರಂಗ್‌ ಪುನಿಯ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA) ನಾಲ್ಕು ವರ್ಷಗಳ ಅವಧಿಗೆ ಕಾಲ ಬ್ಯಾನ್‌ ಮಾಡಿದೆ. ಮಾರ್ಚ್ 10ರಂದು ಸೋನೆಪತ್‌ನಲ್ಲಿ ರಾಷ್ಟ್ರೀಯ ತಂಡದ ಆಯ್ಕೆಗೆ ನಡೆದ ಟ್ರಯಲ್ಸ್‌ನಲ್ಲಿ ಆಯ್ಕೆಯಾದ ನಂತರ ಪುನಿಯಾ ಯೂರಿನ್‌ ಸ್ಯಾಂಪಲ್‌ ಪರೀಕ್ಷೆಗೆ ಒಳಪಡಲು ನಿರಾಕರಿಸಿದ್ದಾರೆ. ಇದನ್ನು ನಿಯಮ ಬಾಹಿರ ಎಂದು ಪರಿಗಣಿಸಿರುವ ನಾಡಾ ಪುನಿಯರನ್ನು

ಕುಸ್ತಿಪಟು ಬಜರಂಗ್‌ ಪುನಿಯ 4 ವರ್ಷ ಬ್ಯಾನ್‌ Read More »

ಮೂಲ್ಕಿ ರೈಲು ನಿಲ್ದಾಣ ಬಳಿ ಸಂಭವಿಸಿದ್ದ ಹತ್ಯೆಯ ಆರೋಪಿ ಸೀರಿಯಲ್‌ ಕಿಲ್ಲರ್‌ ಸೆರೆ

ನಾಲ್ಕು ರಾಜ್ಯಗಳಲ್ಲಿ ಅತ್ಯಾಚಾರ, ಕೊಲೆಗಳನ್ನು ಮಾಡಿದ್ದ ಪಾತಕಿ ಅಹ್ಮದಾಬಾದ್‌ : ಮೂಲ್ಕಿ ರೈಲು ನಿಲ್ದಾಣದ ಸಮೀಪ ರೈಲು ಪ್ರಯಾಣಿಕರೊಬ್ಬರ ಹತ್ಯೆಯೂ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಸರಣಿ ಹತ್ಯೆ ಮತ್ತು ಅತ್ಯಾಚಾರಗಳನ್ನು ಮಾಡಿದ್ದ ಸೀರಿಯಲ್‌ ಕಿಲ್ಲರ್‌ನನ್ನು ಗುಜರಾತ್‌ ಪೊಲೀಸರು ವಾಪಿ ರೈಲು ನಿಲ್ದಾಣದ ಸಮೀಪ ಭಾನುವಾರ ರಾತ್ರಿ ಬಂಧಿಸಿದ್ದಾರೆ. ಅತ್ಯಾಚಾರ ಹಾಗೂ ಹಲವು ಕೊಲೆ ಪ್ರಕರಣಗಳಲ್ಲಿ ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಸರಣಿ ಹಂತಕ ಈತ ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹರ್ಯಾಣದ

ಮೂಲ್ಕಿ ರೈಲು ನಿಲ್ದಾಣ ಬಳಿ ಸಂಭವಿಸಿದ್ದ ಹತ್ಯೆಯ ಆರೋಪಿ ಸೀರಿಯಲ್‌ ಕಿಲ್ಲರ್‌ ಸೆರೆ Read More »

ಏನಿದು ಒನ್‌ ನೇಶನ್‌ ಒನ್‌ ಸಬ್‌ಸ್ಕ್ರಿಪ್ಶನ್‌ ಯೋಜನೆ?

ಪ್ರಧಾನಿ ಮೋದಿಯವರೇ ವಿಶೇಷ ಮುತುವರ್ಜಿ ವಹಿಸಿರುವ ಯೋಜನೆಯ ಮಾಹಿತಿ ಇಲ್ಲಿದೆ ಹೊಸದಿಲ್ಲಿ : ಕೇಂದ್ರ ಸರಕಾರ ಸುಮಾರು 6000 ಕೋ. ರೂ. ವೆಚ್ಚದ ಒನ್‌ ನೇಶನ್‌ ಒನ್‌ ಸಬ್‌ಸ್ಕ್ರಿಪ್ಶನ್‌ ಎಂಬ ಮಹತ್ವಾಕಾಂಕ್ಷಿ ಯೋಜನೆಗೆ ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಆ ಬಳಿಕ ಈ ವಿಶಿಷ್ಟ ಯೋಜನೆ ಕುರಿತಾಗಿ ದೇಶವ್ಯಾಪಿಯಾಗಿ ಬಹಳ ಚರ್ಚೆಯಾಗುತ್ತಿದೆ. ವಿದ್ಯಾರ್ಥಿಗಳು, ಬೋಧಕರು ಮತ್ತು ಸಂಶೋಧಕರಿಗೆ ನೆರವಾಗುವ ಉದ್ದೇಶದಿಂದ ಈ ಮಹತ್ವದ ಯೋಜನೆಯನ್ನು ನರೇಂದ್ರ ಮೋದಿ ಸರಕಾರ ಈ ಯೋಜನೆಯನ್ನು ದೇಶಕ್ಕೆ ನೀಡುತ್ತಿದೆ.

ಏನಿದು ಒನ್‌ ನೇಶನ್‌ ಒನ್‌ ಸಬ್‌ಸ್ಕ್ರಿಪ್ಶನ್‌ ಯೋಜನೆ? Read More »

25,000 ಕೋ.ರೂ. ಮೌಲ್ಯದ ಮಾದಕ ವಸ್ತು ವಶ

ದೋಣಿ ಮೂಲಕ ಭಾರತಕ್ಕೆ ಬರುತ್ತಿದ್ದ ಅಪಾರ ಪ್ರಮಾಣದ ಡ್ರಗ್ಸ್‌ ಹೊಸದಿಲ್ಲಿ : ಭಾರತೀಯ ಕೋಸ್ಟ್ ಗಾರ್ಡ್ ಪಡೆ ಅಂಡಮಾನ್ ದ್ವೀಪದ ಸಮೀಪ ಜಲಪ್ರದೇಶದಲ್ಲಿ ಮೀನುಗಾರಿಕಾ ದೋಣಿಯೊಂದರಿಂದ ಸುಮಾರು 5500 ಕೆಜಿ (5.5 ಟನ್) ತೂಕದ ಮಾದಕವಸ್ತು ವಶಪಡಿಸಿಕೊಂಡಿದೆ. ಇದರ ಬೆಲೆ 25,000 ಕೋಟಿ ರೂ. ಆಗಿದೆ. ಈ ಡ್ರಗ್ಸ್‌ ಎಲ್ಲಿಂದ ಬರುತ್ತಿತ್ತು ಮತ್ತು ಯಾರಿಗೆ ಮತ್ತು ಎಲ್ಲಿಗೆ ಸರಬರಾಜು ಮಾಡಬೇಕಿತ್ತು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ.ದೊಡ್ಡ ಪ್ರಮಾಣದ ಮಾದಕ ದ್ರವ್ಯ ವಶವಾಗಿರುವುದು ಡ್ರಗ್ಸ್‌ ವಿರುದ್ಧ ಸರಕಾರ ನಡೆಸುತ್ತಿರುವ

25,000 ಕೋ.ರೂ. ಮೌಲ್ಯದ ಮಾದಕ ವಸ್ತು ವಶ Read More »

ಜರ್ಮನಿಯಲ್ಲಿ ಉದ್ಯೋಗದಲ್ಲಿದ್ದ ಇಂಜಿನಿಯರ್‌ ಈಗ ಬೆಂಗಳೂರಿನಲ್ಲಿ ಭಿಕ್ಷುಕ

ಇಂಜಿನಿಯರನ್ನು ಭಿಕ್ಷುಕನನ್ನಾಗಿ ಮಾಡಿದ್ದು ಬದುಕಿನ ಆ ಒಂದು ಆಘಾತಕಾರಿ ಘಟನೆ ಬೆಂಗಳೂರು: ಜರ್ಮನಿಯಲ್ಲಿ ಇಂಜಿನಿಯರಿಂಗ್‌ ಕಲಿತು, ಫ್ರಾಂಕ್‌ಫರ್ಟ್‌ನಲ್ಲಿ ಆರಂಕಿಯ ಸಂಬಳ ಪಡೆಯುತ್ತಿದ್ದ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬ ಈಗ ಬೆಂಗಳೂರಿನ ಬೀದಿಗಳಲ್ಲಿ ಭಿಕ್ಷೆ ಬೇಡುತ್ತಿರುವ ವೀಡಿಯೊ ನಿನ್ನೆಯಿಂದ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿದೆ. ಕೆಂಪು ಬಣ್ಣದ ಹಳೆಯ ಟಿಶರ್ಟ್‌ ಮತ್ತು ಹರಕು ಜೀನ್ಸ್‌ ಪ್ಯಾಂಟ್‌ ಧರಿಸಿ ಕುರುಚಲು ಗಡ್ಡ ಬಿಟ್ಟು ಕಂಡೋರಿಗೆಲ್ಲ ಕೈಚಾಚಿ ಭಿಕ್ಷೆ ಕೇಳುತ್ತಿದ್ದ ಈ ವ್ಯಕ್ತಿಯನ್ನು ಶರತ್‌ ಯುವರಾಜ್‌ ಎಂಬವರು ಕುತೂಹಲದಿಂದ ಮಾತನಾಡಿಸಿದಾಗ ಆತನ

ಜರ್ಮನಿಯಲ್ಲಿ ಉದ್ಯೋಗದಲ್ಲಿದ್ದ ಇಂಜಿನಿಯರ್‌ ಈಗ ಬೆಂಗಳೂರಿನಲ್ಲಿ ಭಿಕ್ಷುಕ Read More »

ಇಂದಿನಿಂದ ಸಂಸತ್‌ನ ಚಳಿಗಾಲ ಅಧಿವೇಶನ

ಕೋಲಾಹಲ ಎಬ್ಬಿಸಲಿರುವ ವಕ್ಫ್‌ ಮಸೂದೆ, ಅದಾನಿ ಕೇಸ್‌ ಹೊಸದಿಲ್ಲಿ : ಸಂಸತ್‌ನ ಚಳಿಗಾಲದ ಅಧಿವೇಶನ ಇಂದಿನಿಂದ ಶುರುವಾಗಿ ಡಿಸೆಂಬರ್​ 20ರವರೆಗೆ ನಡೆಯಲಿದೆ. ವಕ್ಫ್‌ ಮಸೂದೆ, ಅದಾನಿ ಅರೆಸ್ಟ್‌ ವಾರಂಟ್‌ ಮತ್ತಿತರ ವಿಚಾರಗಳು ಅಧಿವೇಶನದಲ್ಲಿ ಕೋಲಾಹಲ ಎಬ್ಬಿಸಲಿವೆ. ಸರ್ಕಾರವು ವಕ್ಫ್‌ ತಿದ್ದುಪಡಿ ಮಸೂದೆ ಸೇರಿದಂತೆ 16 ಮಸೂದೆಗಳನ್ನು ಮಂಡಿಸಲು ಪಟ್ಟಿ ಮಾಡಿದೆ. ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರ, ಲಂಚದ ಆರೋಪದಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಯುಎಸ್ ನ್ಯಾಯಾಲಯದಿಂದ ದೋಷಾರೋಪಣೆ ವಿಷಯಗಳನ್ನು ಪ್ರಸ್ತಾಪಿಸಲು ಪ್ರತಿಪಕ್ಷಗಳು ಸಿದ್ಧತೆ ಮಾಡಿಕೊಂಡಿವೆ. ಇದಕ್ಕೆ

ಇಂದಿನಿಂದ ಸಂಸತ್‌ನ ಚಳಿಗಾಲ ಅಧಿವೇಶನ Read More »

ಪರ್ತ್‌ನಲ್ಲಿ 38 ವರ್ಷ ಹಿಂದಿನ ದಾಖಲೆ ಪತನ

ಹೊಸ ದಾಖಲೆ ಬರೆದ ಕೆ.ಎಲ್ ರಾಹುಲ್ – ಯಶಸ್ವಿ ಜೈಸ್ವಾಲ್ ಜೋಡಿ ಪರ್ತ್‌: ಪರ್ತ್​ನಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನ ವೈಫಲ್ಯಗಳನ್ನೆಲ್ಲ ಮೆಟ್ಟಿನಿಂತು ಭರ್ಜರಿ ಬ್ಯಾಟಿಂಗ್ ನಡೆಸುತ್ತಿದೆ. ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದ್ವಿಶತಕದ ಜೊತೆಯಾಟವಾಡುವ ಮೂಲಕ ಕೆ.ಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಲೆಜೆಂಡ್ ಸುನಿಲ್ ಗವಾಸ್ಕರ್ – ಶ್ರೀಕಾಂತ್ ದಾಖಲೆಯನ್ನು ಮುರಿದು ಹೊಸ ಇತಿಹಾಸವನ್ನೇ ನಿರ್ಮಿಸಿದ್ದಾರೆ. ದ್ವಿತೀಯ ಇನಿಂಗ್ಸ್​ನಲ್ಲಿ

ಪರ್ತ್‌ನಲ್ಲಿ 38 ವರ್ಷ ಹಿಂದಿನ ದಾಖಲೆ ಪತನ Read More »

error: Content is protected !!
Scroll to Top