ದೇಶ

ಮಂಗಳೂರು-ಬೆಂಗಳೂರು ನಡುವೆ ಎಕ್ಸ್‌ಪ್ರೆಸ್‌ವೇ ನಿರ್ಮಾಣ : ಕೇಂದ್ರದಿಂದ ಸ್ಪಂದನೆ

ಪ್ರಯಾಣ ದೂರ, ಸಮಯವನ್ನು ಕಡಿಮೆಗೊಳಿಸಲು ಷಟ್ಪಥ ನಿರ್ಮಾಣಕ್ಕೆ ಪ್ರಸ್ತಾವ ಬೆಂಗಳೂರು: ಬೆಂಗಳೂರು ಮತ್ತು ಮಂಗಳೂರು ಮಧ್ಯೆ ಎಕ್ಸ್‌ಪ್ರೆಸ್‌ವೇ ನಿರ್ಮಾಣದ ಬೇಡಿಕೆಯ ಕೇಂದ್ರ ಸರಕಾರ ಸ್ಪಂದಿಸಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈ ಯೋಜನೆಯ ಬಗ್ಗೆ ಪರಿಶೀಲನೆ ನಡೆಸುತ್ತಿದೆ. ಯೋಜನೆ ಪ್ರಕಾರ ಹಾಸನದ ಮೂಲಕ ಈ ಎಕ್ಸ್‌ಪ್ರೆಸ್‌ವೇ ಹಾದು ಹೋಗಲಿದೆ. ಈಗ ಬೆಂಗಳೂರು-ಮಂಗಳೂರು ನಡುವಿನ ಸುಮಾರು 400 ಕಿ.ಮೀ ದೂರ ಕ್ರಮಿಸಲು 7-8 ಗಂಟೆ ಸಮಯ ಹಿಡಿಯುತ್ತದೆ. ನಾಲ್ಕು ಅಥವಾ ಆರು ಪಥಗಳನ್ನು ಒಳಗೊಂಡಿರುವ ಈ […]

ಮಂಗಳೂರು-ಬೆಂಗಳೂರು ನಡುವೆ ಎಕ್ಸ್‌ಪ್ರೆಸ್‌ವೇ ನಿರ್ಮಾಣ : ಕೇಂದ್ರದಿಂದ ಸ್ಪಂದನೆ Read More »

ಭಾರತ ಗೆದ್ದ ಬಳಿಕ ಟ್ರೋಲ್‌ ಆದ ಐಐಟಿ ಬಾಬಾ

ಕ್ರಿಕೆಟ್‌ ಬಗ್ಗೆ ಭವಿಷ್ಯ ನುಡಿದು ನಗೆಪಾಟಲಾದ ನಾಗಸಾಧು ಹೊಸದಿಲ್ಲಿ : ಚಾಂಪಿಯನ್ಸ್‌ ಟ್ರೋಫಿಯಲ್ಲಿ ನಿನ್ನೆ ನಡೆದ ಭಾರತ-ಪಾಕಿಸ್ಥಾನ ರಣರೋಚಕ ಕದನದಲ್ಲಿ ಭಾರತ ಗೆದ್ದ ಬಳಿಕ ಕುಂಭಮೇಳದ ಮೂಲಕ ಪ್ರಸಿದ್ಧಿಗೆ ಬಂದಿರುವ ಐಐಟಿ ಬಾಬಾ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್‌ ಆಗುತ್ತಿದ್ದಾರೆ. ಐಐಟಿ ಪದವೀಧರನಾಗಿಯೂ ನಾಗಾಸಾಧು ಆದ ಕಾರಣಕ್ಕೆ ಈ ಐಐಟಿ ಬಾಬಾ ಭಾರಿ ಪ್ರಚಾರ ಪಡೆದುಕೊಂಡಿದ್ದರು. ಸೋಷಿಯಲ್‌ ಮೀಡಿಯಾದಲ್ಲೂ ಬಹಳ ಸೆನ್ಸೇಷನ್‌ ಉಂಟು ಮಾಡಿದ್ದರು. ಆದರೆ ಕ್ರಿಕೆಟ್‌ ಬಗ್ಗೆ ಭವಿಷ್ಯ ನುಡಿದು ಈಗ ಈ ಬಾಬಾ ನಗೆಪಾಟಲಾಗಿದ್ದಾರೆ.

ಭಾರತ ಗೆದ್ದ ಬಳಿಕ ಟ್ರೋಲ್‌ ಆದ ಐಐಟಿ ಬಾಬಾ Read More »

ಮಗಳ ಮದುವೆ ಮಂಟಪದಲ್ಲೇ ತಂದೆ ಕುಸಿದು ಬಿದ್ದು ಸಾವು

ಕನ್ಯಾದಾನ ಮಾಡಿ ಜವಾಬ್ದಾರಿ ಮುಗಿಸಿದ ಮರುಕ್ಷಣವೇ ಬಂದ ಸಾವು ಹೈದರಾಬಾದ್‌: ಮಗಳ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ತಂದೆ ಮೃತಪಟ್ಟ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಗಳ ಮದುವೆಯೆಂದು ಖುಷಿಯಿಂದ ಓಡಾಡಿಕೊಂಡಿದ್ದ ಅಪ್ಪ, ಧಾರೆ ಎರೆಯುವ ಶಾಸ್ತ್ರ ಮಾಡಿ ಜವಾಬ್ದಾರಿ ಮುಗಿಸಿದ ಮರುಕ್ಷಣವೇ ಕೊನೆಯುಸಿರೆಳೆದಿದ್ದಾರೆ. ಬಿಕ್ಕನೂರ್ ಮಂಡಲದ ರಾಮೇಶ್ವರಪಲ್ಲಿ ಗ್ರಾಮದ ನಿವಾಸಿ ಬಾಲಚಂದ್ರಂ ಮದುವೆ ಮಂಟಪದಲ್ಲಿ ಕುಸಿದು ಬಿದ್ದು ಮೃತಪಟ್ಟವರು. ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರನ್ನು ಮೃತಪಟ್ಟಿರುವುದಾಗಿ ಘೋಷಿಸಿದರು. ಘಟನೆ ನಡೆದಾಗ ಮದುವೆ ಮುಗಿದಿತ್ತು.

ಮಗಳ ಮದುವೆ ಮಂಟಪದಲ್ಲೇ ತಂದೆ ಕುಸಿದು ಬಿದ್ದು ಸಾವು Read More »

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತ-ಪಾಕಿಸ್ಥಾನ ಪಂದ್ಯ

ಗೆದ್ದರೆ ಟೀಮ್‌ ಇಂಡಿಯಾ ಸೆಮಿಫೈನಲ್‌ಗೆ; ಪಾಕಿಸ್ಥಾನ ಟೂರ್ನಿಯಿಂದ ಔಟ್‌ ದುಬೈ : ಚಾಂಪಿಯನ್ಸ್‌ ಟ್ರೋಫಿ ಕೂಟದಲ್ಲಿ ಇಂದು ಭಾರತ-ಪಾಕಿಸ್ಥಾನ ಮುಖಾಮುಖಿಯಾಗಲಿದ್ದು, ಕ್ರಕೆಟಿನ ಈ ಮಹಾಕದನವನ್ನು ಜನರು ಕಾತರದಿಂದ ಎದುರು ನೋಡುತ್ತಿದ್ದಾರೆ. ಭಾನುವಾರ ಮಧ್ಯಾಹ್ನ 2.30ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಮುಖಾಮುಖಿಯಾಗಲಿವೆ. ಈ ಜಿದ್ದಾಜಿದ್ದಿನ ಕದನ ಬಹಳ ನಿರೀಕ್ಷೆಗಳನ್ನು ಹುಟ್ಟುಹಾಕಿದೆ.ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆದ್ದರೆ ಸೆಮಿಫೈನಲ್​ಗೇರುವುದು ಬಹುತೇಕ ಖಚಿತವಾಗಲಿದೆ. ಅತ್ತ

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತ-ಪಾಕಿಸ್ಥಾನ ಪಂದ್ಯ Read More »

ಮಗುವಿಗೆ ಜನ್ಮವಿತ್ತ 9ನೇ ತರಗತಿ ಅಪ್ರಾಪ್ತೆ ವಿದ್ಯಾರ್ಥಿ | ಮಗುವಿಗೆ ತಂದೆಯಾದ 10 ನೇ ತರಗತಿ ವಿದ್ಯಾರ್ಥಿ | ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲು

ರಾಜಸ್ಥಾನ : 9ನೇ ತರಗತಿ ವಿದ್ಯಾರ್ಥಿಯೋರ್ವಳು  ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ರಾಜಸ್ಥಾನದ ಬಾರಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ ಬಂದಿದೆ. ಈ ಪ್ರಕರಣದಲ್ಲಿ ಅತ್ಯಂತ  ವಿಸ್ಮಯವಾದ ವಿಷಯವೊಂದು ತಿಳಿದಿದೆ, ಅದೇನೆಂದರೆ ಮಗುವಿಗೆ ಜನ್ಮ ನೀಡಲು ಕಾರಣಕರ್ತ ಬಾಲಕಿಯ ಶಾಲೆಯಲ್ಲಿ ಓದುತ್ತಿದ್ದು, 10 ನೇ ತರಗತಿ ವಿದ್ಯಾರ್ಥಿ , ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಕುರಿತು ಸಂತ್ರಸ್ತೆಯ ದೂರಿನ ಮೇರೆಗೆ,  ಆರೋಪಿ ಬಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕೆಲವು ತಿಂಗಳುಗಳಿಂದ ಇಬ್ಬರ

ಮಗುವಿಗೆ ಜನ್ಮವಿತ್ತ 9ನೇ ತರಗತಿ ಅಪ್ರಾಪ್ತೆ ವಿದ್ಯಾರ್ಥಿ | ಮಗುವಿಗೆ ತಂದೆಯಾದ 10 ನೇ ತರಗತಿ ವಿದ್ಯಾರ್ಥಿ | ಪೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲು Read More »

ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ | ದ್ವಿತೀಯ ಪಿಯುಸಿ  ಪರೀಕ್ಷೆಗೆ ನಿಯಮಗಳು ಅನ್ವಯ

ಮಾರ್ಚ್ ತಿಂಗಳಲ್ಲಿ ಶಾಲಾ- ಕಾಲೇಜುಗಳಿಗೆ ಪರೀಕ್ಷೆಗಳು ಆರಂಭವಾಗಿದ್ದು.  ವಿದ್ಯಾರ್ಥಿಗಳು ಪರೀಕ್ಷೆ ಸಲುವಾಗಿ ಪೂರ್ವತಯಾರಿಯನ್ನು ನಡೆಸುತ್ತಿದ್ದಾರೆ.  ಇದೇ ಮಾರ್ಚ್ 01 ರಿಂದ 20 ರವರೆಗೆ ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಪದವಿ ಪೂರ್ವ ವಿದ್ಯಾರ್ಥಿಗಳು ಪರೀಕ್ಷೆಯ ಪೂರ್ ಸಿದ್ದತೆಯಲ್ಲಿದ್ದರೆ. ಎಕ್ಸಾಮ್‍ ಬೋರ್ಡ್‍ ಯಾವುದೇ ತೊಂದರೆಯಾಗದಂತೆ ಕಟ್ಟುನಿಟ್ಟಿನ ನಿಯಮ- ಸೂಚನೆಗಳ ಪೂರ್ವ ತಯಾರಿಯನ್ನು ಮಾಡಿದೆ.  ಈ ನಿಟ್ಟಿನಲ್ಲಿ ಪರೀಕ್ಷಾ ಕಾರ್ಯವನ್ನು ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ

ಮಾರ್ಚ್ 1ರಿಂದ ದ್ವಿತೀಯ ಪಿಯುಸಿ ಪರೀಕ್ಷೆ | ದ್ವಿತೀಯ ಪಿಯುಸಿ  ಪರೀಕ್ಷೆಗೆ ನಿಯಮಗಳು ಅನ್ವಯ Read More »

ದಿಲ್ಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ ಇಂದು ಪ್ರಮಾಣ ವಚನ ಸ್ವೀಕಾರ

ಮೊದಲ ಸಲ ಶಾಸಕಿಯಾದ ಮಹಿಳೆಗೆ ಒಲಿದ ಅದೃಷ್ಟ ಹೊಸದಿಲ್ಲಿ: ದಿಲ್ಲಿಯ ಮುಖಯಮಂತ್ರಿಯ ಆಯ್ಕೆಯಲ್ಲಿ ಬಿಜೆಪಿ ಹೈಕಮಾಂಡ್‌ ಸಣ್ಣದೊಂದು ಅಚ್ಚರಿಯನ್ನು ನೀಡಿದೆ. ರೇಖಾ ಗುಪ್ತ ನೂತನ ಮುಖ್ಯಮಂತ್ರಿಯಾಗಿ ನಿನ್ನೆ ಆಯ್ಕೆಯಾಗಿದ್ದು, ಇಂದು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಹಾಗೂ ಇತರ ಸಂಸದೀಯ ಸದಸ್ಯರು ಬನಿಯಾ ಸಮುದಾಯದವರನ್ನು ಸಿಎಂ ಆಗಿ ಆಯ್ಕೆ ಮಾಡುವ ಅಭಿಪ್ರಾಯ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಅದರಂತೆ ಬನಿಯಾ ಸಮುದಾಯದ ರೇಖಾ ಗುಪ್ತ ದಿಲ್ಲಿ ಮುಖ್ಯಮಂತ್ರಿಯಾಗಿದ್ದಾರೆ. ಮೊದಲು

ದಿಲ್ಲಿ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ ಇಂದು ಪ್ರಮಾಣ ವಚನ ಸ್ವೀಕಾರ Read More »

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತಕ್ಕೆ ಮೊದಲ ಪಂದ್ಯ

ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶದ ಎದುರು ಮುಖಾಮುಖಿ ದುಬೈ: ಚಾಂಪಿಯನ್ಸ್ ಟ್ರೋಫಿಗೆ ನಿನ್ನೆ ಚಾಲನೆ ದೊರೆತಿದ್ದು, ಕರಾಚಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ಥಾನ ತಂಡವನ್ನು ಬಗ್ಗುಬಡಿದು ನ್ಯೂಜಿಲ್ಯಾಂಡ್ ತಂಡ ಶುಭಾರಂಭ ಮಾಡಿದೆ. ಕೂಟದ ಎರಡನೇ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯ ವಹಿಸಲಿದೆ.ಭಾರತ ತಂಡದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಇಂದಿನಿಂದ ಆರಂಭವಾಗಲಿದೆ. ಲೀಗ್ ಹಂತದ ಮೊದಲ ಪಂದ್ಯದಲ್ಲೇ ಗೆಲ್ಲುವ ಮೂಲಕ ಭಾರತ ತಂಡ ಚಾಂಪಿಯನ್ಸ್

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತಕ್ಕೆ ಮೊದಲ ಪಂದ್ಯ Read More »

ಇಂದು ಹೊಸದಿಲ್ಲಿಯಲ್ಲಿ ಆರ್‌ಎಸ್‌ಎಸ್‌ ಕಚೇರಿ ಕೇಶವ ಕುಂಜ್‌ ಲೋಕಾರ್ಪಣೆ

13 ಅಂತಸ್ತಿನ ಮೂರು ಕಟ್ಟಡಗಳು ಆಧುನಿಕ ತಂತ್ರಜ್ಞಾನದ ಸ್ಪರ್ಶದೊಂದಿಗೆ ಪ್ರಾಚೀನ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಾಣ ಹೊಸದಿಲ್ಲಿ : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಹೊಸ ಕಚೇರಿ ರಾಷ್ಟ್ರ ರಾಜಧಾನಿಯಲ್ಲಿ ಇಂದು ಉದ್ಘಾಟನೆಗೊಳ್ಳಲಿದೆ. ಈ ಹಿಂದಿದ್ದ ಕಚೇರಿ ಸ್ಥಳದಲ್ಲೇ ಹೊಸ ಕಚೇರಿ ಸಂಕೀರ್ಣವನ್ನು ನಿರ್ಮಿಸಲಾಗಿದೆ. ಶಿವಾಜಿ ಜಯಂತಿ ದಿನವಾದ ಇಂದು 150 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಈ ಕಟ್ಟಡದ ಉದ್ಘಾಟನಾ ಸಮಾರಂಭ ನಡೆಯಲಿದೆ. ಈ ಕಟ್ಟಡವನ್ನು ʼಕೇಶವ ಕುಂಜ್ʼ ಎಂದು ಕರೆಯಲಾಗುತ್ತದೆ. ಕಟ್ಟಡದ ಸಂಕೀರ್ಣವನ್ನು ಆರ್‌ಎಸ್‌ಎಸ್ ಮುಖ್ಯಸ್ಥ ಡಾ.ಮೋಹನ್‌

ಇಂದು ಹೊಸದಿಲ್ಲಿಯಲ್ಲಿ ಆರ್‌ಎಸ್‌ಎಸ್‌ ಕಚೇರಿ ಕೇಶವ ಕುಂಜ್‌ ಲೋಕಾರ್ಪಣೆ Read More »

ಮೊಬೈಲ್ ಫೋನ್‍ ಗಾಗಿ ಅಣ್ಣ-ತಂಗಿ ಜಗಳ |  ಬಾವಿಗೆ ಬಿದ್ದು ಅಣ್ಣ-ತಂಗಿಯರ ದುರ್ಮರಣ

ತಮಿಳುನಾಡು: ಮೊಬೈಲ್ ಫೋನ್ ಗಾಗಿ ನಡೆದ ಜಗಳದಲ್ಲಿ ಅಣ್ಣ ಮತ್ತು ತಂಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಪುದುಕ್ಕೊಟ್ಟೆಯಲ್ಲಿ ನಡೆದಿದೆ. 18 ವರ್ಷದ ಅಣ್ಣ ಹಾಗೂ 11 ವರ್ಷದ ತಂಗಿ ಮಕ್ಕಳು ಸಾವಿಗೀಡಾದ ಸಹೋದರ-ಸಹೋದರಿಯರು ಎಂದು ತಿಳಿದು ಬಂದಿದೆ. ಮನೆಯಲ್ಲಿ ಅಣ್ಣ ಮತ್ತು ತಂಗಿಯ ನಡುವೆ ಸಣ್ಣ ಜಗಳವಾಗಿದೆ. ಈ ವೇಳೆ ಕೋಪಗೊಂಡ ಅಣ್ಣ ತನ್ನ ತಂಗಿಯ ಫೋನ್ ಮುರಿದಿದ್ದಾನೆ. ಬೇಸರಗೊಂಡ ತಂಗಿ ಬಾವಿಗೆ ಹಾರಿದ್ದಾಳೆ. ನಂತರ ತಂಗಿ ಬಾವಿಗೆ ಹಾರಿದ್ದನ್ನು ನೋಡಿ ಕಾಪಾಡಲೆಂದು ಅಣ್ಣನೂ ಬಾವಿಗೆ

ಮೊಬೈಲ್ ಫೋನ್‍ ಗಾಗಿ ಅಣ್ಣ-ತಂಗಿ ಜಗಳ |  ಬಾವಿಗೆ ಬಿದ್ದು ಅಣ್ಣ-ತಂಗಿಯರ ದುರ್ಮರಣ Read More »

error: Content is protected !!
Scroll to Top