ದೇಶ

ಜ್ಞಾನೇಶ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ

ಹೊಸದಿಲ್ಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಚುನಾವಣಾ ಆಯೋಗದ (ಇಸಿ) ಸದಸ್ಯರ ನೇಮಕಾತಿ ಕುರಿತ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಜ್ಞಾನೇಶ್‌ ಕುಮಾರ್ ಆಗಿದ್ದಾರೆ. ಜ್ಞಾನೇಶ್ ಕುಮಾರ್ ಅಧಿಕಾರಾವಧಿ ಜನವರಿ 26, 2029ರವರೆಗೆ ಇರಲಿದೆ. ಮುಂದಿನ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುವ ಕೆಲವು ದಿನಗಳ ಮೊದಲು ಜ್ಞಾನೇಶ್ ಕುಮಾರ್ ನಿವೃತ್ತರಾಗಲಿದ್ದಾರೆ. 1989ರ ಬ್ಯಾಚ್ ಹರಿಯಾಣ-ಕೇಡರ್ ಭಾರತೀಯ ಆಡಳಿತ ಸೇವೆ […]

ಜ್ಞಾನೇಶ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ Read More »

ದಿಲ್ಲಿಯಲ್ಲಿ ಬೆಳ್ಳಂಬೆಳಗ್ಗೆ 4.0 ತೀವ್ರತೆಯ ಭೂಕಂಪ

ಗಾಬರಿಯಾಗದಿರಲು ಪ್ರಧಾನಿ ಮೋದಿ ಮನವಿ ಹೊಸದಿಲ್ಲಿ: ರಾಜಧಾನಿ ದಿಲ್ಲಿಯಲ್ಲಿ ಇಂದು ಬೆಳ್ಳಂಬೆಳಗ್ಗೆ 4.0 ತೀವ್ರತೆಯ ಭೂಕಂಪ ಸಂಭವಿಸಿ ಜನರು ಗಾಬರಿಯಾದರು. ದಿಲ್ಲಿಯ ದೌಲಾಖಾನ್‌ನಲ್ಲೇ ಭೂಕಂಪ ಕೇಂದ್ರ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಮುಂಜಾನೆ 5.36ರ ಹೊತ್ತಿಗೆ ಭೂಕಂಪ ಸಂಭವಿಸಿದ್ದು, ಹಲವು ಕಿಲೋಮೀಟರ್‌ಗಳಷ್ಟು ದೂರ ಕಂಪನದ ಅನುಭವ ಅಗಿದೆ. ವಸತಿ ಪ್ರದೇಶಗಳಲ್ಲಿ ಜನರಿಗೆ ಸ್ಪಷ್ಟವಾಗಿ ಕಂಪನದ ಅನುಭವವಾಗಿದ್ದು, ಅನೇಕರು ಗಾಬರಿಯಾಗಿ ಮನೆಯಿಂದ ಹೊರಗೋಡಿ ಬಂದಿದ್ದಾರೆ. ಭೂಕಂಪದಿಂದ ಹಾನಿ ಸಂಭವಿಸಿದ ಕುರಿತು ವರದಿಯಾಗಿಲ್ಲ. ಗಾಬರಿಯಾಗದಿರಲು ಮೋದಿ ಮನವಿ ಪ್ರಧಾನಿ ನರೇಂದ್ರ ಮೋದಿ

ದಿಲ್ಲಿಯಲ್ಲಿ ಬೆಳ್ಳಂಬೆಳಗ್ಗೆ 4.0 ತೀವ್ರತೆಯ ಭೂಕಂಪ Read More »

ದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು ಹೇಗೆ?

ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲ.ರೂ. ಪರಿಹಾರ ಹೊಸದಿಲ್ಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ. ಪರಿಹಾರ ಕೇಂದ್ರ ಸರ್ಕಾರ ಘೋಷಿಸಿದೆ.ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತದಿಂದ ಕುಂಭಮೇಳಕ್ಕೆ ಹೊರಟಿದ್ದ 18 ಜನ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಮೃತರಲ್ಲಿ 11 ಮಹಿಳೆಯರು ಹಾಗೂ ನಾಲ್ಕು ಮಕ್ಕಳು ಸೇರಿದ್ದಾರೆ ಎಂದು ವರದಿಯಾಗಿದೆ.

ದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ್ದು ಹೇಗೆ? Read More »

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ : 18 ಪ್ರಯಾಣಿಕರು ಸಾವು

ಮಹಾಕುಂಭಮೇಳಕ್ಕೆ ಹೋಗುವ ವಿಶೇಷ ರೈಲು ಹತ್ತಲು ನೂಕುನುಗ್ಗಲು ಉಂಟಾದಾಗ ಸಂಭವಿಸಿದ ದುರಂತ ಹೊಸದಿಲ್ಲಿ: ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 18 ಜನ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ. ರಾತ್ರಿ 10 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿ 11 ಜನರಿಗೆ ಗಾಯಗಳಾಗಿದ್ದು, ಅವರನ್ನು ಎಲ್ಎನ್​ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್​ಪಿಎಫ್ ಸಿಬ್ಬಂದಿ ತಕ್ಷಣ ಧಾವಿಸಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಮೃತರಲ್ಲಿ ಐವರು ಮಕ್ಕಳು, 9 ಮಹಿಳೆಯರು ಸೇರಿದ್ದಾರೆ.ನವದೆಹಲಿ ನಿಲ್ದಾಣದಿಂದ ಪ್ರಯಾಗ್​ರಾಜ್​ ಮಹಾಕುಂಭಮೇಳಕ್ಕೆ ರೈಲ್ವೆ ಇಲಾಖೆ

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ : 18 ಪ್ರಯಾಣಿಕರು ಸಾವು Read More »

ಕೈಕೊಟ್ಟ ಪ್ರೇಮಿಗೆ 100 ಪಿಜ್ಜಾ ಕಳುಹಿಸಿ ಸೇಡು ತೀರಿಸಿಕೊಂಡ ಯುವತಿ

ಹೊಸದಿಲ್ಲಿ : ಇಷ್ಟಪಟ್ಟವರಿಗೆ ಉಡುಗೊರೆ ಕೊಡುವುದರಲ್ಲೇನೂ ವಿಶೇಷವಿಲ್ಲ. ಅದರಲ್ಲೂ ಪ್ರೇಮಿಗಳ ಪಾಲಿಗೆ ವ್ಯಾಲೆಂಟೈನ್‌ ಡೇಯಂದು ಉಡುಗೊರೆ ವಿನಿಮಯ ಮಾಡಿಕೊಳ್ಳುವುದು ಮಾಮೂಲು. ಆದರೆ ಉಡುಗೊರೆಯನ್ನು ಸೇಡು ತೀರಿಸಿಕೊಳ್ಳಲು ಕೂಡ ಬಳಸಿಕೊಳ್ಳಬಹುದು ಎಂಬುದನ್ನು ಗುರುಗ್ರಾಮದ ಯುವತಿಯೊಬ್ಬಳು ತೋರಿಸಿಕೊಟ್ಟಿದ್ದಾಳೆ. ಈಕೆ ಕೊಟ್ಟ ಉಡುಗೊರೆಯಿಂದ ಕೈಕೊಟ್ಟ ಪ್ರೇಮಿ ಸುಸ್ತಾಗಿ ಹೋಗಿದ್ದಾನೆ. 24 ವರ್ಷದ ಆಯುಷಿ ರಾವತ್ ಎಂಬ ಯುವತಿ ಪ್ರೇಮಿಗಳ ದಿನದಂದು ತನ್ನ ಮಾಜಿ ಗೆಳೆಯನ ಮನೆಗೆ ಬರೋಬ್ಬರಿ 100 ಪಿಜ್ಜಾಗಳನ್ನು ಆರ್ಡರ್ ಮಾಡಿದ್ದಾಳೆ. ಹಣ ಪಾವತಿ ಮಾಡಿಲ್ಲ. ಡೆಲಿವರಿ ವೇಳೆ ಕ್ಯಾಶ್

ಕೈಕೊಟ್ಟ ಪ್ರೇಮಿಗೆ 100 ಪಿಜ್ಜಾ ಕಳುಹಿಸಿ ಸೇಡು ತೀರಿಸಿಕೊಂಡ ಯುವತಿ Read More »

ಮಹಾಕುಂಭಮೇಳಕ್ಕೆ ಹೋಗುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ : 10 ಸಾವು

ಪ್ರಯಾಗ್‌ರಾಜ್‌: ಮಹಾಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ ಹೊಡೆದು 10 ಭಕ್ತರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ. ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯ ಮೇಜಾ ಪ್ರದೇಶದಲ್ಲಿ ಬೊಲೆರೊ ಕಾರು ಬಸ್‌ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿವೆ. 19 ಜನರು ಗಾಯಗೊಂಡಿದ್ದಾರೆ. ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮವಾದ ಸಂಗಮದಲ್ಲಿ ಸ್ನಾನ ಮಾಡಲು ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಿಂದ ಭಕ್ತರು ಪ್ರಯಾಣಿಸುತ್ತಿದ್ದರು. ಭಕ್ತರನ್ನು ಕರೆದೊಯ್ಯುತ್ತಿದ್ದ ಬೊಲೆರೊ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಿಂದ ಪ್ರಯಾಣಿಸುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ

ಮಹಾಕುಂಭಮೇಳಕ್ಕೆ ಹೋಗುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ : 10 ಸಾವು Read More »

18 ವರ್ಷಗಳ ಬಳಿಕ ಲಾಭದ ಮುಖ ಕಂಡ ಬಿಎಸ್‌ಎನ್‌ಎಲ್‌

ಸೇವೆಗಳ ಸುಧಾರಣೆ, ಖಾಸಗಿ ಕಂಪನಿಗಳ ದರ ಹೆಚ್ಚಳದಿಂದಾಗಿ ಬಿಎಸ್‌ಎನ್‌ಎಲ್‌ಗೆ ಲಾಭ ಹೊಸದಿಲ್ಲಿ: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಭಾರತ್‌ ಸಂಚಾರ್‌ ನಿಗಮ್‌ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌) 2007ರ ಬಳಿಕ ಇದೇ ಮೊದಲ ಬಾರಿಗೆ ಲಾಭ ಕಂಡಿದೆ. ಜಿಯೋ, ಏರ್‌ಟೆಲ್‌ ಸೇವೆಗಳಲ್ಲಿ ಏರಿಕೆ ಕಂಡ ಬಳಿಕ ಗ್ರಾಹಕರು ಬಿಎಸ್‌ಎನ್‌ಎಲ್‌ನತ್ತ ಮರಳುತ್ತಿದ್ದು, ಆದಾಯ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನಲಾಗಿದೆ. 2025ರ ಆರ್ಥಿಕ ವರ್ಷದ 3ನೇ ತ್ರೈಮಾಸಿಕದಲ್ಲಿ ಬಿಎಸ್‌ಎನ್‌ಎಲ್‌ 262 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ನೆಟ್‌ವರ್ಕ್ ವಿಸ್ತರಣೆ ಮತ್ತು ಗ್ರಾಹಕ ಸೇರ್ಪಡೆಯಂತಹ

18 ವರ್ಷಗಳ ಬಳಿಕ ಲಾಭದ ಮುಖ ಕಂಡ ಬಿಎಸ್‌ಎನ್‌ಎಲ್‌ Read More »

50 ಕೋಟಿ ಜನರಿಂದ ಪುಣ್ಯಸ್ನಾನ : ಮಹಾಕುಂಭಮೇಳದಲ್ಲಿ ಇತಿಹಾಸ ಸೃಷ್ಟಿ

ಧಾರ್ಮಿಕ, ಸಾಂಸ್ಕೃತಿಕ ಅಥವಾ ಸಾಮಾಜಿಕ ಕಾರ್ಯಕ್ರಮದಲ್ಲಿ ಅತಿದೊಡ್ಡ ಮಾನವ ಸಂಗಮ ಪ್ರಯಾಗ್‌ರಾಜ್‌ : ಉತ್ತರ ಪ್ರದೇಶದ ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ನಿನ್ನೆಯ ತನಕ ದಾಖಲೆಯ 50 ಕೊಟಿಗೂ ಅಧಿಕ ಜನ ಪುಣ್ಯಸ್ನಾನ ಮಾಡಿದ್ದಾರೆ. ಮಹಾಕುಂಭ ಇನ್ನೂ ನಡೆಯುತ್ತಿದ್ದು, ಮಹಾಶಿವರಾತ್ರಿ ದಿನವಾದ ಫೆ.26ರ ಅಮೃತ ಸ್ನಾನದೊಂದಿಗೆ ಮುಕ್ತಾಯವಾಗಲಿದೆ. ಈಗಾಗಲೇ 50 ಕೋಟಿಗೂ ಅಧಿಕ ಜನ ಪ್ರಯಾಗ್‌ರಾಜ್‌ಗೆ ಆಗಮಿಸಿ ಪುಣ್ಯಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಜನವರಿ 13ರಂದು ಪ್ರಾರಂಭವಾದಾಗಿನಿಂದ ಪ್ರಯಾಗರಾಜ್‌ನಲ್ಲಿ ನಡೆದ ಮಹಾ

50 ಕೋಟಿ ಜನರಿಂದ ಪುಣ್ಯಸ್ನಾನ : ಮಹಾಕುಂಭಮೇಳದಲ್ಲಿ ಇತಿಹಾಸ ಸೃಷ್ಟಿ Read More »

ಬಿಯರ್‌ ಕ್ಯಾನ್‌ನಲ್ಲಿ ಮಹಾತ್ಮ ಗಾಂಧಿ ಚಿತ್ರ : ಭಾರತೀಯರ ಆಕ್ರೋಶ

ಮಾಸ್ಕೊ: ರಷ್ಯಾದ ಮದ್ಯ ತಯಾರಕ ಕಂಪನಿಯೊಂದು ತನ್ನ ಹೊಸ ಬ್ರ್ಯಾಂಡ್‌ನ ಬಿಯರ್‌ ಕ್ಯಾನ್‌ ಮೇಲೆ ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಚಿತ್ರ ಮುದ್ರಿಸಿ ಅವಮಾನ ಮಾಡಿದ್ದು, ಈ ಕುರಿತಾದ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ಭಾರತೀಯರ ವ್ಯಾಪಕ ಆಕ್ರೋಶಕ್ಕೆ ತುತ್ತಾಗಿದೆ. ರಷ್ಯಾದ ಬಿಯರ್ ಕ್ಯಾನ್‌ನಲ್ಲಿ ಮಹಾತ್ಮ ಗಾಂಧಿಯವರ ಚಿತ್ರವನ್ನು ಪ್ರಿಂಟ್‌ ಮಾಡಿಸಿದ್ದು ಸೋಷಿಯಲ್‌ ಮೀಡಿಯಾದಲ್ಲಿ ದೊಡ್ಡ ವಿವಾದವನ್ನು ಹುಟ್ಟುಹಾಕಿದೆ. ವರದಿಗಳ ಪ್ರಕಾರ ರೆವರ್ಟ್ ಬ್ರಾಂಡ್‌ನ ಹೇಜಿ ಐಪಿಎ ಬಿಯರ್ ಕ್ಯಾನ್‌ಗಳಲ್ಲಿ ಗಾಂಧಿಯವರ ಫೋಟೋ ಮತ್ತು ಸಹಿಯನ್ನು ಮುದ್ರಿಸಲಾಗಿದೆ.

ಬಿಯರ್‌ ಕ್ಯಾನ್‌ನಲ್ಲಿ ಮಹಾತ್ಮ ಗಾಂಧಿ ಚಿತ್ರ : ಭಾರತೀಯರ ಆಕ್ರೋಶ Read More »

ಕುಂಭಮೇಳದ ರುದ್ರಾಕ್ಷಿ ಹುಡುಗಿ ಈಗ ಜ್ಯುವೆಲ್ಲರಿ ಬ್ರ್ಯಾಂಡ್‌ ಅಂಬಾಸಿಡರ್‌

ಕೇರಳದ ಚಿನ್ನಾಭರಣ ಮಳಿಗೆಯ ರೂಪದರ್ಶಿಯಾಗಲಿರುವ ಮೊನಾಲಿಸಾ ಪ್ರಯಾಗ್‌ರಾಜ್‌: ಸೋಷಿಯಲ್‌ ಮೀಡಿಯಾ ಎಲ್ಲೋ ಇದ್ದವರನ್ನು ಇನ್ನೆಲ್ಲಿಗೋ ತಲುಪಿಸಿ ಬಿಡುತ್ತದೆ ಎನ್ನುವುದಕ್ಕೆ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಮೊನಾಲಿಸಾ ಎಂಬ ಅಲೆಮಾರಿ ಜನಾಂಗದ ಹುಡಗಿಯೇ ಸಾಕ್ಷಿ. ಬೆಕ್ಕಿನ ಕಣ್ಣಿನ ಸಹಜ ಸುಂದರಿ 16ರ ಹರೆಯದ ಮೊನಾಲಿಸಾ ಯೂಟ್ಯೂಬರ್‌ಗಳ ಕಣ್ಣಿಗೆ ಬಿದ್ದು ರಾತ್ರಿ ಬೆಳಗಾಗವುದುರೊಳಗೆ ಸೋಷಿಯಲ್‌ ಮೀಡಿಯಾ ಸೆನ್ಸೇಷನ್‌ ಆಗಿದ್ದು, ಈ ಜನಪ್ರಿಯತೆ ಈಗ ಆಕೆಯ ಬದುಕನ್ನೇ ಬದಲಾಯಿಸಿದೆ. ಕೇರಳದ ಪ್ರಸಿದ್ಧ ಚಿನ್ನಾಭರಣ ಮಳಿಗೆಯ ಬ್ರ್ಯಾಂಡ್‌ ಅಂಬಾಸಿಡರ್‌ ಆಗಿ ಮೊನಾಲಿಸಾ ಆಯ್ಕೆಯಾಗಿದ್ದಾರೆ. ಇದರೊಂದಿಗೆ

ಕುಂಭಮೇಳದ ರುದ್ರಾಕ್ಷಿ ಹುಡುಗಿ ಈಗ ಜ್ಯುವೆಲ್ಲರಿ ಬ್ರ್ಯಾಂಡ್‌ ಅಂಬಾಸಿಡರ್‌ Read More »

error: Content is protected !!
Scroll to Top