ದೇಶ

ಧಾರ್ಮಿಕ ಸಂಕೇತವಾದ ಕಮಲದ ಚಿಹ್ನೆಯನ್ನು ಬ್ಯಾನ್‌ ಮಾಡಬೇಕು: ಮುಸ್ಲಿಂ ಲೀಗ್‌

ದೆಹಲಿ: ಧಾರ್ಮಿಕ ಹೆಸರು ಮತ್ತು ಧಾರ್ಮಿಕ ಸಂಕೇತಗಳನ್ನು ಚುನಾವಣಾ ಚಿಹ್ನೆಯಾಗಿ ಬಳಸಬಾರದು ಎಂಬ ನಿಯಮದಡಿ ಬಿಜೆಪಿಯ ತಾವರೆ ಚಿಹ್ನೆಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಮುಸ್ಲಿಂ ಲೀಗ್‌ ಕೋರ್ಟಿನ ಮೆಟ್ಟಿಲೇರಿದೆ.ʻಕಮಲʼ ಧಾರ್ಮಿಕ ಪಾವಿತ್ರ್ಯ ಹೊಂದಿರುವ ಚಿಹ್ನೆ. ಬಿಜೆಪಿಯ ಚುನಾವಣಾ ಚಿಹ್ನೆ ಕೂಡ ʻಕಮಲʼ. ಆದ್ದರಿಂದ ಬಿಜೆಪಿಯ ಚುನಾವಣಾ ಚಿಹ್ನೆ ಬ್ಯಾನ್‌ ಮಾಡಬೇಕು. ಈ ಪ್ರಕರಣದಲ್ಲಿ ಬಿಜೆಪಿಯನ್ನು ಪ್ರತಿವಾದಿಯನ್ನಾಗಿಸಬೇಕು ಎಂದು ಆಗ್ರಹಿಸಿ ಐಯುಎಂಎಲ್‌ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.ಮುಸ್ಲಿಂ ಲೀಗ್ ಪರವಾಗಿ ಹಿರಿಯ ವಕೀಲ ದುಷ್ಯಂತ್ ದವೆ ವಾದಿಸುತ್ತಿದ್ದಾರೆ. ಈ ವಿಷಯದಲ್ಲಿ […]

ಧಾರ್ಮಿಕ ಸಂಕೇತವಾದ ಕಮಲದ ಚಿಹ್ನೆಯನ್ನು ಬ್ಯಾನ್‌ ಮಾಡಬೇಕು: ಮುಸ್ಲಿಂ ಲೀಗ್‌ Read More »

ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ 2,500 ಕೋ. ರೂ. ಟಿಡಿಆರ್‌ ಹಗರಣ ಎಂದು ಬಿಜೆಪಿ ಆರೋಪ

ಬೆಂಗಳೂರು : ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಟಿಡಿಆರ್‌ಗೆ ಸಂಬಂಧಿಸಿದಂತೆ ನಡೆದಿರುವ ಬೃಹತ್‌ ಹಗರಣವನ್ನು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಎನ್‌.ಆರ್‌.ರಮೇಶ್‌ ಬಯಲಿಗೆಳೆದಿದ್ದು, ದಾಖಲೆ ಬಿಡುಗಡೆ ಮಾಡಿದ್ದಾರೆ.ಈ ಸಂಬಂಧ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಬಿಬಿಎಂಪಿ ಇತಿಹಾಸದಲ್ಲಿಯೇ 2,500 ಕೋಟಿ ರೂ. ಮೊತ್ತದ ಅತಿ ದೊಡ್ಡ ಹಗರಣವಾಗಿದ್ದು, ಬಿಬಿಎಂಪಿ ಎಂದು ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್‌ ಪ್ರದೇಶ ಯೋಜನಾ ಪ್ರಾಧಿಕಾರ (ಬಿಎಂಐಸಿಎಪಿಎ) ಅಧಿಕಾರಿಗಳು ಭಾಗಿಯಾಗಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ

ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ 2,500 ಕೋ. ರೂ. ಟಿಡಿಆರ್‌ ಹಗರಣ ಎಂದು ಬಿಜೆಪಿ ಆರೋಪ Read More »

ಅಯೋಧ್ಯೆಗೆ ತಲುಪಿದ ಕೃಷ್ಣಶಿಲೆ

ಉಚಿತವಾಗಿ ಟ್ರಕ್‌ ಮತ್ತು ಚಾಲಕರನ್ನು ಒದಗಿಸಿದ ಬಿಜೆಪಿಯ ಹಿರಿಯ ನಾಯಕ ನಾಗರಾಜ ಶೆಟ್ಟಿ ಕಾರ್ಕಳ : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದಲ್ಲಿ ಪ್ರತಿಷ್ಥಾಪನೆಯಾಗಲಿರುವ ಭವ್ಯ ಶ್ರೀರಾಮನ ಮೂರ್ತಿಯನ್ನು ಕೆತ್ತಲು ಕಾರ್ಕಳದಿಂದ ಕೃಷ್ಣ ಶಿಲೆಯನ್ನು ಸಾಗಿಸಿದ್ದು ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವ ನಾಗರಾಜ ಶೆಟ್ಟಿಯವರ ಟ್ರಾನ್ಸ್‌ಪೋರ್ಟ್‌ ಕಂಪನಿ. ಮೂರು ದಿನಗಳಲ್ಲಿ ಬೃಹತ್‌ ಶಿಲೆ ಅಯೋಧ್ಯೆ ತಲುಪಿದೆ. ಒಂಭತ್ತು ಟನ್ ತೂಕದ ಶಿಲೆಯನ್ನು ಅಯೋಧ್ಯೆಯಲ್ಲಿ ನಾಗರಾಜ ಶೆಟ್ಟಿ ನೇತೃತ್ವದಲ್ಲಿ ಸೋಮವಾರ ಮಧ್ಯಾಹ್ನ ಸ್ವಾಗತಿಸಲಾಯಿತು. ಉದ್ಯಮಿ ನಾಗರಾಜ ಶೆಟ್ಟಿ ಮಾಲಕತ್ವದ

ಅಯೋಧ್ಯೆಗೆ ತಲುಪಿದ ಕೃಷ್ಣಶಿಲೆ Read More »

ರಾಜಕೀಯದಲ್ಲಿ ನಿವೃತ್ತಿಯ ಅಂಚಿಗೆ ಬಂದವರಿಂದ ಯುವಕ್ರಾಂತಿ ಸಮಾವೇಶ: ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯ

ಮಂಗಳೂರು : ರಾಜಕಾರಣದಲ್ಲಿ ನಿವೃತ್ತಿ ಅಂಚಿಗೆ ಬಂದು ನಿಂತಿರುವ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯಂಥ ನಾಯಕರು ಯುವಕ್ರಾಂತಿ ಸಮಾವೇಶ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯವಾಡಿದ್ದಾರೆ.ರಾಹುಲ್‌ ಹೋದಲೆಲ್ಲ ಕಾಂಗ್ರೆಸ್‌ ನೆಲಕಚ್ಚಿದೆ. ಹೀಗಾಗಿ ಅವರು ಕರ್ನಾಟಕಕ್ಕೆ ಬಂದಿರುವುದನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ರಾಜ್ಯದಿಂದ ಕಾಂಗ್ರೆಸ್‌ನ್ನು ಕಿತ್ತೆಸೆಯುವ ಬಿಜೆಪಿಯ ವಾಗ್ದಾನವನ್ನು ನನಸು ಮಾಡುವಲ್ಲಿ ರಾಹುಲ್‌ ಗಾಂಧಿ ಸಾಥ್‌ ನೀಡಲಿದ್ದಾರೆ ಎಂದು ಕಟೀಲ್‌ ಕಾಲೆಳೆದಿದ್ದಾರೆ.ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ರಾಜ್ಯಕ್ಕೆ ಭೇಟಿ

ರಾಜಕೀಯದಲ್ಲಿ ನಿವೃತ್ತಿಯ ಅಂಚಿಗೆ ಬಂದವರಿಂದ ಯುವಕ್ರಾಂತಿ ಸಮಾವೇಶ: ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯ Read More »

ಬಹುಕೋಟಿ ವಂಚಕ ಮೆಹುಲ್‌ ಚೋಕ್ಸಿ ರೆಡ್‌ ಅಲರ್ಟ್‌ ಪಟ್ಟಿಯಿಂದ ಗಡಿಪಾರು

ದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 11,356 ಕೋ.ರೂ. ವಂಚಿಸಿದ ಮೆಹುಲ್ ಚೋಕ್ಸಿಯನ್ನು ಇಂಟರ್‌ಪೋಲ್ ತನ್ನ ರೆಡ್ ಅಲರ್ಟ್‌ ಪಟ್ಟಿಯಿಂದ ತೆಗೆದುಹಾಕಿದೆ.ಡಿಸೆಂಬರ್ 2018ರಲ್ಲಿ ಚೋಕ್ಸಿಯನ್ನು ರೆಡ್ ಅಲರ್ಟ್‌ ಪಟ್ಟಿಗೆ ಸೇರಿಸಲಾಗಿತ್ತು. ಭಾರತದ ಅಧಿಕಾರಿಗಳು ಇಂಟರ್‌ಪೋಲ್‌ ಕ್ರಮವನ್ನು ವಿರೋಧಿಸಿದ್ದಾರೆ. ಆದರೆ ಇಂಟರ್‌ಪೋಲ್‌ ಅಧಿಕಾರಿಗಳು ಅವರ ವಿರೋಧವನ್ನು ಪರಿಗಣಿಸಿಲ್ಲ. ಈ ಮೂಲಕ ಚೋಕ್ಸಿ ಗಡಿಪಾರಿಗೆ ಕಾಯುತ್ತಿದ್ದ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ ಹಿನ್ನಡೆಯಾಗಿದೆ. ಆದರೆ ಆಂಟಿಗುವಾದಿಂದ ಚೋಕ್ಸಿಯ ಹಸ್ತಾಂತರ ಪ್ರಕ್ರಿಯೆಗೆ ಇಂಟರ್‌ಪೋಲ್‌ ಕ್ರಮ ಹೆಚ್ಚು ಪರಿಣಾಮ ಬೀರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಹುಕೋಟಿ ವಂಚಕ ಮೆಹುಲ್‌ ಚೋಕ್ಸಿ ರೆಡ್‌ ಅಲರ್ಟ್‌ ಪಟ್ಟಿಯಿಂದ ಗಡಿಪಾರು Read More »

ದೆಹಲಿ ಸರ್ಕಾರದಿಂದ ದೇಶದಲ್ಲಿಯೇ ಶಿಕ್ಷಣಕ್ಕಾಗಿ ಅತಿ ಹೆಚ್ಚು ಹಣ ಹಂಚಿಕೆ

ದೆಹಲಿ: 2022-23ನೇ ಸಾಲಿನ ದೆಹಲಿಯ ಆರ್ಥಿಕ ಸಮೀಕ್ಷೆಯ ಪ್ರಕಾರ, ದೆಹಲಿ ಸರ್ಕಾರವು ಬಜೆಟ್ ನ ಶೇ. 20.5 ರಷ್ಟು ಹಣವನ್ನು ಶಿಕ್ಷಣ ಕ್ಷೇತ್ರಕ್ಕೆ ಹಂಚಿಕೆ ಮಾಡಿದ್ದು, ಇದು ದೇಶದ ಇತರ ಎಲ್ಲಾ ರಾಜ್ಯಗಳಿಗಿಂತಲೂ ಹೆಚ್ಚು ಎಂದು ಹೇಳಿದೆ.ಸೋಮವಾರ ವಿಧಾನಸಭೆಯಲ್ಲಿ ಮಂಡಿಸಲಾದ ಸಮೀಕ್ಷಾ ವರದಿಯಲ್ಲಿ, ದೆಹಲಿ ಕೌಶಲ್ಯ ಮತ್ತು ವಾಣಿಜ್ಯೋದ್ಯಮ ವಿಶ್ವವಿದ್ಯಾನಿಯವು ತನ್ನ ಪ್ರವೇಶ ಸಾಮರ್ಥ್ಯವನ್ನು ಹೆಚ್ಚಿಸಿದೆ. 2021-22 ರ ಶೈಕ್ಷಣಿಕ ಅವಧಿಯಲ್ಲಿ ಸರ್ಕಾರಿ ಶಾಲೆಗಳ 12ನೇ ತರಗತಿಯ ಉತ್ತೀರ್ಣ ಫಲಿತಾಂಶ ಶೇ. 98 ರಷ್ಟು ಮತ್ತು 10

ದೆಹಲಿ ಸರ್ಕಾರದಿಂದ ದೇಶದಲ್ಲಿಯೇ ಶಿಕ್ಷಣಕ್ಕಾಗಿ ಅತಿ ಹೆಚ್ಚು ಹಣ ಹಂಚಿಕೆ Read More »

ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸಲಾಗುವುದು: ಸಂಯುಕ್ತ ಕಿಸಾನ್ ಮೋರ್ಚಾ

ದೆಹಲಿ: ಕನಿಷ್ಠ ಬೆಂಬಲ ಬೆಲೆಯ ಕಾನೂನು, ಸಾಲಮನ್ನಾ ಮತ್ತು ಪಿಂಚಣಿ ಸೇರಿದಂತೆ ತನ್ನ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಮತ್ತೊಂದು ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘಟನೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಹೇಳಿದೆ.15 ಸದಸ್ಯರ ಎಸ್‌ಕೆಎಂ ನಿಯೋಗವು ಕೃಷಿ ಭವನದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಮಧ್ಯಾಹ್ನ ಭೇಟಿ ಮಾಡಿ ಬೇಡಿಕೆ ಪತ್ರ ಸಲ್ಲಿಸಿತು ಎಂದು ರೈತ ಮುಖಂಡ ದರ್ಶನ್ ಪಾಲ್ ತಿಳಿಸಿದರು.ನಾವು ಪ್ರತಿದಿನ ಪ್ರತಿಭಟನೆ ಮಾಡಲು ಬಯಸುವುದಿಲ್ಲ. ಆದರೆ, ನಾವು ಹಾಗೆ

ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಪ್ರತಿಭಟನೆ ನಡೆಸಲಾಗುವುದು: ಸಂಯುಕ್ತ ಕಿಸಾನ್ ಮೋರ್ಚಾ Read More »

5, 8ನೇ ತರಗತಿ ಬೋರ್ಡ್​ ಪರೀಕ್ಷೆ: ಸುಪ್ರೀಂ ಗೆ ಮೇಲ್ಮನವಿ

ಬೆಂಗಳೂರು: 5 ಮತ್ತು 8ನೇ ತರಗತಿ ಬೋರ್ಡ್​ ಪರೀಕ್ಷೆ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲಾಗಿದೆ. ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ಗೆ ವಕೀಲರು ಮನವಿ ಮಾಡಿದ್ದಾರೆ. ಮಾರ್ಚ್ 27ರಂದು ವಿಚಾರಣೆ ನಡೆಸುವುದಾಗಿ ಸಿಜೆಐ ಹೇಳಿದೆ.ಮಾರ್ಚ್ 27ರಿಂದ ಪರೀಕ್ಷೆಗಳು ಆರಂಭವಾಗಲಿದೆ. ಅಷ್ಟರೊಳಗೆ ಮೇಲ್ಮನವಿ ವಿಚಾರಣೆ ನಡೆಸುವಂತೆ ವಕೀಲರು ಮನವಿ ಮಾಡಿದರು. ಆದ್ರೆ ಸಿಜೆಐ ಡಿ.ವೈ. ಚಂದ್ರಚೂಡ್ ವಕೀಲರ ಮನವಿ ತಿರಸ್ಕರಿಸಿದ್ದಾರೆ. ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದು ಬೇಡ. ರಾಜ್ಯದಲ್ಲಿ ಯಾವುದು ಉತ್ತಮವೆಂದು ಹೈಕೋರ್ಟ್​ಗೆ ಗೊತ್ತಿದೆ. ನಾವು

5, 8ನೇ ತರಗತಿ ಬೋರ್ಡ್​ ಪರೀಕ್ಷೆ: ಸುಪ್ರೀಂ ಗೆ ಮೇಲ್ಮನವಿ Read More »

ಮಾ.25 : ಮತ್ತೊಮ್ಮೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ

ದಾವಣಗೆರೆಯ ವಿಜಯಸಂಕಲ್ಪ ಯಾತ್ರೆ ಸಮಾರೋಪದಲ್ಲಿ ಭಾಗಿ ಹಾಗೂ ಮೆಟ್ರೊ ಮಾರ್ಗ-ಆಸ್ಪತ್ರೆ ಉದ್ಘಾಟನೆ ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಮಾ.25ರಂದು ಮತ್ತೊಮ್ಮೆ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಚುನಾವಣೆ ಘೋಷಣೆಗಿಂತ ಮುಂಚಿನ ಕೊನೇ ಭೇಟಿ ಕರ್ನಾಟಕ ಭೇಟಿ ಇದಾಗಿರಬಹುದು. ಮಾ.25ರ ಬಳಿಕ ಯಾವುದೇ ಕ್ಷಣದಲ್ಲಿ ಚುನಾವಣಾ ಆಯೋಗ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ. ಅನಂತರ ಮೋದಿ ಬಂದರೂ ಅದು ಚುನಾವಣಾ ಪ್ರಚಾರಕ್ಕಾಗಿ ಎಂದಾಗುತ್ತದೆ. ದಾವಣಗೆರೆ ಹೊರವಲಯದ ಜಿಎಂಐಟಿ ಕಾಲೇಜು ಬಳಿ ನಡೆಯಲಿರುವ ಬಿಜೆಪಿಯ ವಿಜಯಸಂಕಲ್ಪ ಯಾತ್ರೆಯ ಸಮಾರೋಪ

ಮಾ.25 : ಮತ್ತೊಮ್ಮೆ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ Read More »

ಈಶ್ವರಪ್ಪ ಆಜಾನ್‌ ಹೇಳಿಕೆಯನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಜಾನ್‌ ಕೂಗಿದ ಯುವಕ

ಶಿವಮೊಗ್ಗ : ಬಿಜೆಪಿ ನಾಯಕ ಕೆ. ಎಸ್‌.ಈಶ್ವರಪ್ಪ ಅವರು ಆಜಾನ್‌ ಕುರಿತು ನೀಡಿದ ಹೇಳಿಕೆಯನ್ನು ಪ್ರತಿಭಟಿಸಲು ಯುವಕನೊಬ್ಬ ಜಿಲ್ಲಾಧಿಕಾರಿ ಕಚೇರಿ ಬಳಿ ಆಜಾನ್ ಕೂಗಿದ ಘಟನೆ ಶಿವಮೊಗ್ಗದಲ್ಲಿ ಭಾನುವಾರ ಸಂಭವಿಸಿದೆ. ವಿಧಾನಸೌಧದಲ್ಲೂ ಆಜಾನ್‌ ಕೂಗುತ್ತೇವೆ ಎಂದು ಈ ಯುವಕರ ತಂಡ ಎಚ್ಚರಿಕೆ ನೀಡಿದೆ.ಈಶ್ವರಪ್ಪ ಆಜಾನ್ ಕುರಿತ ಹೇಳಿಕೆ ವಿರೋಧಿಸಿ ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕೆಲ ಯುವಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಾಗಿಗುಡ್ಡದ ನಿವಾಸಿ ಮೌಸೀನ್ ಎಂಬಾತ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ್ದ. ಅಲ್ಲದೆ

ಈಶ್ವರಪ್ಪ ಆಜಾನ್‌ ಹೇಳಿಕೆಯನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಜಾನ್‌ ಕೂಗಿದ ಯುವಕ Read More »

error: Content is protected !!
Scroll to Top