ದೇಶ

ಗಂಗಮ್ಮ ತಾಯಿಗೆ ಪಂಜುರ್ಲಿ ದೈವದಂತೆ ಅಲಂಕಾರ : ಕರಾವಳಿಯಲ್ಲಿ ವಿರೋಧ

ಕಾಂತಾರ ಸಿನಿಮಾದ ಪ್ರಭಾವದಿಂದಲೇ ಇಷ್ಟೆಲ್ಲ ಅಪಸವ್ಯ ಅಗುತ್ತಿರುವುದು ಎಂದು ಆಕ್ರೋಶ ಮಂಗಳೂರು : ಕರಾವಳಿ ಹೊರತುಪಡಿಸಿ ಬೇರೆ ಎಲ್ಲೂ ದೈವಾರಾಧನೆಯ ಸಂಪ್ರದಾಯವಿಲ್ಲ. ಆದರೆ ಕಾಂತಾರ ಸಿನೆಮಾದ ಪ್ರಭಾವದಿಂದಾಗಿ ವಿವಿಧೆಡೆಯಲ್ಲಿ ದೈವರಾಧನೆ ಅಥವಾ ಅದನ್ನು ಹೋಲುವಂಥ ಆರಾಧನೆ ಮಾಡಿ ಜನರಿಗೆ ಮಂಕುಬುದ್ದಿ ಎರಚಲು ಯತ್ನಿಸುತ್ತಿರುವ ಘಟನೆಗಳು ಸಂಭವಿಸುತ್ತಿದ್ದು, ಇದನ್ನು ತುಳುನಾಡಿನವರು ಬಲವಾಗಿ ವಿರೋಧಿಸುತ್ತಿದ್ದಾರೆ.‘ಕಾಂತಾರ’ ಸಿನಿಮಾ ಬಿಡುಗಡೆ ಆದ ನಂತರ ಬಹಳಷ್ಟು ಜನರಿಗೆ ಕರಾವಳಿ ಸಂಸ್ಕೃತಿ, ಪಂಜುರ್ಲಿ ದೈವದ ಪರಿಚಯ ಆಯ್ತು. ಆದರೆ ಕೆಲವೆಡೆ ಇದಕ್ಕೆ ತದ್ವಿರುದ್ಧವಾಗಿ ಪಂಜುರ್ಲಿ ದೈವದ […]

ಗಂಗಮ್ಮ ತಾಯಿಗೆ ಪಂಜುರ್ಲಿ ದೈವದಂತೆ ಅಲಂಕಾರ : ಕರಾವಳಿಯಲ್ಲಿ ವಿರೋಧ Read More »

ಸರಕಾರಿ ಬಂಗಲೆ ಏ.22 ರೊಳಗೆ ಖಾಲಿ ಮಾಡಲು ರಾಹುಲ್‌ ಗಾಂಧಿಗೆ ನೋಟಿಸ್‌

ದೆಹಲಿ : ಅನರ್ಹಗೊಂಡ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರಿಗೆ ನೀಡಲಾದ ಅಧಿಕೃತ ಬಂಗಲೆಯನ್ನು ಏ.22 ರೊಳಗೆ ಖಾಲಿ ಮಾಡುವಂತೆ ಸೂಚಿಸಿ ನೋಟಿಸ್‌ ಜಾರಿಗೊಳಿಸಲಾಗಿದೆ.ಕಳೆದ ವಾರ ಅನರ್ಹತೆಯ ನೋಟಿಸ್ ನೀಡಿದ ನಂತರ 12 ತುಘಲಕ್ ಮಾರ್ಗದ ಬಂಗಲೆಯನ್ನು ಖಾಲಿ ಮಾಡುವಂತೆ ಗಾಂಧಿ ಅವರಿಗೆ ಲೋಕಸಭೆಯ ವಸತಿ ಸಮಿತಿಯಿಂದ ನೋಟಿಸ್ ನೀಡಲಾಗಿದೆ.ಮೋದಿ ಸಮುದಾಯದ ವಿರುದ್ಧ ಮಾನಹಾನಿ ಹೇಳಿಕೆ ಪ್ರಕರಣದಲ್ಲಿ ಗುಜರಾತ್‌ನ ಸ್ಥಳೀಯ ನ್ಯಾಯಾಲಯ ಮಾ.23ರಂದು ರಾಹುಲ್‌ ಗಾಂಧಿಯನ್ನು ಅಪರಾಧಿ ಎಂದು ಘೋಷಿಸಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.ಅನರ್ಹಗೊಂಡ

ಸರಕಾರಿ ಬಂಗಲೆ ಏ.22 ರೊಳಗೆ ಖಾಲಿ ಮಾಡಲು ರಾಹುಲ್‌ ಗಾಂಧಿಗೆ ನೋಟಿಸ್‌ Read More »

8 ವರ್ಷದ ಮಂಗೋಲಿಯನ್ ಬಾಲಕ : ಟಿಬೆಟಿಯನ್ ಬೌದ್ಧಧರ್ಮದ ಮೂರನೇ ಆಧ್ಯಾತ್ಮಿಕ ನಾಯಕ

ದೆಹಲಿ : ಬೌದ್ಧ ಧರ್ಮದ ಸರ್ವೋಚ್ಛ ಧರ್ಮಗುರು ದಲೈ ಲಾಮಾ ಅವರು 8 ವರ್ಷದ ಅಮೇರಿಕನ್ ಮಂಗೋಲಿಯನ್ ಬಾಲಕನನ್ನು ಟಿಬೆಟಿಯನ್ ಬೌದ್ಧಧರ್ಮದ ಮೂರನೇ ಪ್ರಮುಖ ಆಧ್ಯಾತ್ಮಿಕ ನಾಯಕ ಎಂದು ಘೋಷಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಮಂಗೋಲಿಯನ್ ಬಾಲಕನಿಗೆ ಟಿಬೆಟ್ ಧರ್ಮಗುರು ದಲೈ ಲಾಮಾ ಅವರು ಟಿಬೆಟಿಯನ್ ಬೌದ್ಧಧರ್ಮದಲ್ಲಿ ಮೂರನೇ ಅತ್ಯುನ್ನತ ಶ್ರೇಣಿಯ 10ನೇ ಲಾಮಾ ಎಂದು ಕರೆಯಲ್ಪಡುವ ಖಲ್ಖಾ ಜೆಟ್ಸನ್ ದಂಪಾ ರಿಂಪೋಚೆ ಅವರ ಹೆಸರಿಟ್ಟಿದ್ದಾರೆ ಎಂದು ಹೇಳಲಾಗಿದೆ. ಅಂತಾರಾಷ್ಟ್ರೀಯ ಸುದ್ದಿ ವೆಬ್ ಸೈಟ್ ವೊಂದು ಈ ಬಗ್ಗೆ

8 ವರ್ಷದ ಮಂಗೋಲಿಯನ್ ಬಾಲಕ : ಟಿಬೆಟಿಯನ್ ಬೌದ್ಧಧರ್ಮದ ಮೂರನೇ ಆಧ್ಯಾತ್ಮಿಕ ನಾಯಕ Read More »

ಒಳಮೀಸಲಾತಿ ನಿರ್ಧಾರದ ವಿರುದ್ಧ ಯಡಿಯೂರಪ್ಪನವರ ಮನೆಗೆ ಕಲ್ಲು ತೂರಾಟ

ಶಿವಮೊಗ್ಗ : ರಾಜ್ಯ ಬಿಜೆಪಿ ಸರ್ಕಾರದ ಒಳಮೀಸಲಾತಿ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟ, ಪ್ರತಿಭಟನೆ ತೀವ್ರವಾಗಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನಿವಾಸಕ್ಕೆ ಇಂದು ಅನೇಕ ಮಂದಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಲ್ಲದೆ ಮನೆಗೆ ಕಲ್ಲು ತೂರಾಟ ನಡೆಸಿದ್ದಾರೆ ಒಳ ಮೀಸಲಾತಿ ಪ್ರಮಾಣ ಕಡಿಮೆ ಮಾಡಿರುವುದನ್ನು ಖಂಡಿಸಿ ಇಂದು ಶಿಕಾರಿಪುರದಲ್ಲಿ ಬಂಜಾರ, ಕೊರಚ, ಕೊರಮ, ಭೋವಿ ಸಮುದಾಯದವರು ತೀವ್ರ ಪ್ರತಿಭಟನೆ ನಡೆಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿದರು.

ಒಳಮೀಸಲಾತಿ ನಿರ್ಧಾರದ ವಿರುದ್ಧ ಯಡಿಯೂರಪ್ಪನವರ ಮನೆಗೆ ಕಲ್ಲು ತೂರಾಟ Read More »

ವಾರೆಂಟ್ ಜಾರಿಯಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ : 6 ತಿಂಗಳು ಜೈಲು

ಮಂಗಳೂರು : ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಾ.27 ರಂದು ಪೊಲೀಸರು ಬಂಧಿಸಿದ್ದಾರೆ. ಆತನಿಗೆ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿದೆ. ಕಡಬ ಗ್ರಾಮದ ಲಿಗೋರಿ ಡಿಸೋಜ ಪುತ್ರ ವಿಲ್ಫ್ರೇಡ್ ಡಿಸೋಜ (34) ಬಂಧಿತ ಆರೋಪಿ. ಈತ ಪ್ರಸ್ತುತ ಮಂಗಳೂರು ಕುಲಶೇಖರ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಸಿರ್ಲಾ ಪಡ್ಪು ಹೆವೆನ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದು, ಈತನ ವಿರುದ್ಧ conviction warrent ಹೊರಡಿಸಿದ ನಂತರ ಆತ ತಲೆಮರೆಸಿಕೊಂಡಿದ್ದ. ಇನ್ನು

ವಾರೆಂಟ್ ಜಾರಿಯಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ : 6 ತಿಂಗಳು ಜೈಲು Read More »

ದೆಹಲಿ ಬಿಜೆಪಿ ಪದಾಧಿಕಾರಿಯಾಗಿ ಬಾನ್ಸುರಿ ಸ್ವರಾಜ್ ಆಯ್ಕೆ

ದೆಹಲಿ : ದಿವಂಗತ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಅವರು ಭಾರತೀಯ ಜನತಾ ಪಕ್ಷದ ದೆಹಲಿ ಘಟಕದ ಕಾನೂನು ಘಟಕದ ಸಹ ಸಂಚಾಲಕರಾಗಿ ನೇಮಕಗೊಳ್ಳುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಾನ್ಸುರಿ ಅವರನ್ನು ಅಭಿನಂದಿಸಿದ ಪಕ್ಷದ ಅಧ್ಯಕ್ಷ ವೀರೇಂದ್ರ ಸಚ್‌ದೇವ, ಅವರ ನೇಮಕವು ಈಗಿನಿಂದಲೇ ಜಾರಿಗೆ ಬರಲಿದೆ ಎಂದಿದ್ದಾರೆ.ತಮ್ಮನ್ನು ಪಕ್ಷದಲ್ಲಿ ಗುರುತಿಸಿ ಹುದ್ದೆ ನೀಡಿದ್ದಕ್ಕಾಗಿ ಟ್ವೀಟ್‌ನಲ್ಲಿ, ಬಾನ್ಸುರಿ ಅವರು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಿರಿಯ

ದೆಹಲಿ ಬಿಜೆಪಿ ಪದಾಧಿಕಾರಿಯಾಗಿ ಬಾನ್ಸುರಿ ಸ್ವರಾಜ್ ಆಯ್ಕೆ Read More »

ಸುಳ್ಯದಲ್ಲಿ ಮತ್ಸ್ಯವಾಹಿನಿ ತ್ರಿಚಕ್ರ ವಾಹನ ಲೋಕಾರ್ಪಣೆ

ಮಂಗಳೂರು : ಸುಳ್ಯದ ಯುವಜನ ಸಂಯುಕ್ತ ಮಂಡಳಿ ಮೈದಾನದಲ್ಲಿ ಮಾರ್ಚ್ 26 ರಂದು ನಡೆದ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ಸ್ವಾವಲಂಬಿ ಬದುಕಿಗಾಗಿ ಸ್ವಉದ್ಯೋಗ-ಮನೆ ಬಾಗಿಲಿಗೆ ತಾಜಾ ಮೀನು ಸರಬರಾಜು ಮಾಡುವ ಮತ್ಸ್ಯವಾಹಿನಿ ತ್ರಿಚಕ್ರ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಚಿವ ಎಸ್‌ ಅಂಗಾರ, ಮೀನುಗಾರಿಕೆ ಕ್ಷೇತ್ರ ಕಡಿಮೆ ಆದಾಯದಲ್ಲಿ ಹೆಚ್ಚು ಸಂಪಾದನೆ ಗಳಿಸಬಹುದಾದ ಕ್ಷೇತ್ರ. ಕೃತಕ ಹಾಗೂ ಒಳನಾಡು ಮೀನುಗಾರಿಕೆಗೆ ಆದ್ಯತೆ ನೀಡಲಾಗುವುದು. ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಕರ್ನಾಟಕಕ್ಕೆ ಪ್ರಾಯೋಗಿಕವಾಗಿ ಮತ್ಸ್ಯವಾಹಿನಿ ವಾಹನ

ಸುಳ್ಯದಲ್ಲಿ ಮತ್ಸ್ಯವಾಹಿನಿ ತ್ರಿಚಕ್ರ ವಾಹನ ಲೋಕಾರ್ಪಣೆ Read More »

ಲೋಕಸಭೆಯಿಂದ ರಾಹುಲ್‌ ಗಾಂಧಿ ಅನರ್ಹತೆ : ಕಾಂಗ್ರೆಸ್ ಸಂಸದರು ಸಂಸತ್​ನಲ್ಲಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ

ದೆಹಲಿ : ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವ ಹಿನ್ನೆಲೆಯಲ್ಲಿ ಸೋಮವಾರ ನಡೆದ ಸಂಸತ್‌ ಅಧಿವೇಶನದಲ್ಲಿ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಲೋಕಸಭಾ ಕಲಾಪವನ್ನು ಸಂಜೆ 4 ಗಂಟೆವರೆಗೆ ಮುಂದೂಡಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಪ್ಪು ಬಟ್ಟೆ ಧರಿಸಿ ಆಗಮಿಸಿದ್ದರು. ರಾಹುಲ್ ಗಾಂಧಿ ಮೋದಿ ಉಪನಾಮದ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಸೂರತ್ ನ್ಯಾಯಾಲಯವು ಅವರು ದೋಷಿ ಎಂದು ತೀರ್ಪು ನೀಡಿತ್ತು. ಜತೆಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಇದೀಗ ಅವರು

ಲೋಕಸಭೆಯಿಂದ ರಾಹುಲ್‌ ಗಾಂಧಿ ಅನರ್ಹತೆ : ಕಾಂಗ್ರೆಸ್ ಸಂಸದರು ಸಂಸತ್​ನಲ್ಲಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ Read More »

ಭಾರತದಲ್ಲಿ ಹೆಚ್ಚುತ್ತಿರುವ ಕೊರೋನಾ

ಕೋವಿಡ್‌ 19 : ಭಾರತದಲ್ಲಿ 1,805 ಪ್ರಕರಣಗಳು ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ 10,300ಕ್ಕೆ ಏರಿಕೆ ದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,805 ಹೊಸ ಪ್ರಕರಣಗಳು ಪತ್ತೆಯಾಗಿವೆ.ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,05,952ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,837ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10,300ಕ್ಕೆ ತಲುಪಿದೆ. ಈ ನಡುವೆ

ಭಾರತದಲ್ಲಿ ಹೆಚ್ಚುತ್ತಿರುವ ಕೊರೋನಾ Read More »

ಸಿ.ಟಿ.ರವಿ ಅವರಿಗೆ ಮತಿಭ್ರಮಣೆಯಾಗಿದೆ, ನಿಮ್ಹಾನ್ಸ್‌ಗೆ ಸೇರಿಸಿ : ಡಿಕೆಶಿ

ಡಿ.ಕೆ.ಬ್ರದರ್ಸ್‌ ಹೇಳಿಕೆಗೆ ತಿರುಗೇಟು ಬೆಂಗಳೂರು : ಸೋಲುವ ಭೀತಿಯಿಂದಾಗಿ ಸಿ.ಟಿ.ರವಿ ಅವರಿಗೆ ಮತಿಭ್ರಮಣೆಯಾಗಿದೆ. ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದು, ಕೂಡಲೇ ಅವರಿಗೆ ನಿಮ್ಹಾನ್ಸ್‌ ಅಥವಾ ಬೇರೆ ಯಾವುದಾದರೂ ಮಾನಸಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.ಶಾಲಾ ಮಕ್ಕಳನ್ನು ಗುರಿಯಾಗಿಸಿಕೊಂಡು ಕುಕ್ಕರ್‌ನಲ್ಲಿ ಬಾಂಬ್‌ ಇಡುವ ಕೆಲಸವನ್ನು ಡಿ.ಕೆ.ಬ್ರದರ್ಸ್‌ ಮಾಡಿದ್ದರು ಎಂಬ ಸಿ.ಟಿ.ರವಿ ಅವರ ವಿವಾದಾತ್ಮಕ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಅವರು, ರವಿ ಹೇಳಿಕೆ ಬಗ್ಗೆ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆಯೂ ಪರಿಶೀಲಿಸುವುದಾಗಿ ತಿಳಿಸಿದರು. ಮುಖ್ಯಮಂತ್ರಿಗಳು,

ಸಿ.ಟಿ.ರವಿ ಅವರಿಗೆ ಮತಿಭ್ರಮಣೆಯಾಗಿದೆ, ನಿಮ್ಹಾನ್ಸ್‌ಗೆ ಸೇರಿಸಿ : ಡಿಕೆಶಿ Read More »

error: Content is protected !!
Scroll to Top