ದೇಶ

ಸಾವರ್ಕರ್‌ ಅವರನ್ನು ಅವಮಾನಿಸಬೇಡಿ ಎಂದು ರಾಹುಲ್‌ಗೆ ಉದ್ಧವ್‌ ಎಚ್ಚರಿಕೆ

ಮೈತ್ರಿಯಲ್ಲಿ ಬಿರುಕು ಉಂಟಾದೀತು ಎಂದು ತಾಕೀತು ಮುಂಬಯಿ : ಸಾವರ್ಕರ್‌ ಅವರನ್ನು ಅವಮಾನಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಅವರ ಮಿತ್ರ ಪಕ್ಷವೇ ತಿರುಗಿ ಬಿದ್ದಿದೆ. ಸಾವರ್ಕರ್ ನಮ್ಮ ದೇವರು ಅವರನ್ನು ಅವಮಾನಿಸಿದರೆ ನಾವು ಸಹಿಸುವುದಿಲ್ಲ ಎಂದು ಮಹಾರಾಷ್ಟ್ರದಲ್ಲಿ ಕಾಂಗ್ರ್‌ನ ಮಿತ್ರ ಪಕ್ಷವಾಗಿರುವ ಶಿವಸೇನೆ (ಉದ್ಧವ್‌ ಬಣ) ಮುಖಂಡ, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ರಾಹುಲ್ ಗಾಂಧಿ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಅವರು, ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಾವು ಒಟ್ಟಾಗಿ ಹೋರಾಡಬೇಕಿದೆ, ಸಾವರ್ಕರ್ ಅವರು […]

ಸಾವರ್ಕರ್‌ ಅವರನ್ನು ಅವಮಾನಿಸಬೇಡಿ ಎಂದು ರಾಹುಲ್‌ಗೆ ಉದ್ಧವ್‌ ಎಚ್ಚರಿಕೆ Read More »

ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಜಾತಿ ವ್ಯವಸ್ಥೆ ಇರುವವರೆಗೆ ಮೀಸಲಾತಿ ಬೇಕು ಎಂದು ಪ್ರತಿಪಾದನೆ ಬೆಂಗಳೂರು : ಇತರ ಹಿಂದುಳಿದ ವರ್ಗಗಳ (ಒಬಿಸಿ) ಕೋಟಾದಡಿಯಲ್ಲಿದ್ದ ಮುಸ್ಲಿಮರ ಶೇ.4 ಮೀಸಲಾತಿಯನ್ನು ರದ್ದುಗೊಳಿಸಿರುವ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿ ಮುಸ್ಲಿಂಮರ ಮೀಸಲಾತಿ ರದ್ದುಗೊಳಿಸಿ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ಲಿಂಗಾಯತರನ್ನು ಒಲೈಸಿಕೊಳ್ಳುವ ಪ್ರಯತ್ನದಲ್ಲಿ ಒಬಿಸಿ ಕೋಟಾದಡಿಯಲ್ಲಿ ಶೇಕಡಾ 4 ರಷ್ಟು ಮೀಸಲಾತಿ ಪಡೆಯುತ್ತಿದ್ದ ಮುಸ್ಲಿಮರ ಮೀಸಲಾತಿ ರದ್ದುಗೊಳಿದ್ದಾರೆ. ಅದನ್ನು

ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ Read More »

ಸಂಸದರಾಗಿ ಸೇವೆ ಸಲ್ಲಿಸಿದ್ದ ಜನಪ್ರಿಯ ನಟ ಇನೊಸೆಂಟ್‌ ನಿಧನ

ಕೊಚ್ಚಿ : ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಹಾಗೂ ಮಾಜಿ ಸಂಸದ ಇನೊಸೆಂಟ್ ಭಾನುವಾರ ತಡರಾತ್ರಿ ಕೊಚ್ಚಿಯ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಇನೊಸೆಂಟ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.ಭಾನುವಾರ ರಾತ್ರಿ ಇನೊಸೆಂಟ್ ಅವರ ಅರೋಗ್ಯ ಪರಿಸ್ಥಿತಿ ತೀವ್ರ ರೀತಿಯಲ್ಲಿ ಹದಗೆಟ್ಟ ಹಿನ್ನೆಲೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅವರು ಚಿಕಿತ್ಸೆ ಪಡೆಯುತ್ತಿದ್ದ ಲೇಕ್‌ಶೋರ್ ಆಸ್ಪತ್ರೆಯು ಹೇಳಿಕೆಯಲ್ಲಿ ತಿಳಿಸಿದೆ. ಸುಮಾರು 500ಕ್ಕೂ ಹೆಚ್ಚು ಮಲಯಾಳಂ ಚಿತ್ರಗಳಲ್ಲಿ ಹಾಸ್ಯ ನಟನಾಗಿ ನಟಿಸಿರುವ ಇನೊಸೆಂಟ್, ಎಡಪಕ್ಷಗಳ ಬೆಂಬಲದೊಂದಿಗೆ ಸ್ವತಂತ್ರ

ಸಂಸದರಾಗಿ ಸೇವೆ ಸಲ್ಲಿಸಿದ್ದ ಜನಪ್ರಿಯ ನಟ ಇನೊಸೆಂಟ್‌ ನಿಧನ Read More »

ಅಕ್ರಮ ಜಾನುವಾರು ಸಾಗಾಟ : ಆರೋಪಿ ಸಹಿತ ವಾಹನ ವಶಕ್ಕೆ, ಇಬ್ಬರು ಪರಾರಿ

ಬಂಟ್ವಾಳ : ಮಾ.26 ರಂದು ಪರವಾನಿಗೆ ಇಲ್ಲದೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿ ಸಹಿತ ವಾಹನದಲ್ಲಿದ್ದ ದನಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.ಚಾಲಕ ಪ್ರವೀಣ್ ಪ್ರದೀಪ್ ಪೆರ್ನಾಂಡಿಸ್ ಬಂಧಿತ ಆರೋಪಿಯಾಗಿದ್ದು, ಉಳಿದ ಇಬ್ಬರು ಆರೋಪಿಗಳು ವಾಹನದಿಂದ ಜಿಗಿದು ಪರಾರಿಯಾಗಿದ್ದಾರೆ. ವಾಹನದಲ್ಲಿ ಹಿಂಸಾತ್ಮಕ ವಾಗಿ ಕಟ್ಟಿಹಾಕಲಾಗಿದ್ದ ಎರಡು ಕರು ಸಹಿತ ಪಿಕಪ್ ವಾಹನ ಸೇರಿ ಒಟ್ಟು ಸುಮಾರು ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಟ್ವಾಳ ಗ್ರಾಮಾಂತರ

ಅಕ್ರಮ ಜಾನುವಾರು ಸಾಗಾಟ : ಆರೋಪಿ ಸಹಿತ ವಾಹನ ವಶಕ್ಕೆ, ಇಬ್ಬರು ಪರಾರಿ Read More »

ಭೋಜ್‌ಪುರಿ ಡ್ರೀಮ್ ಗರ್ಲ್‌ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ

ವಾರಣಾಸಿ : ಭೋಜ್‌ಪುರಿ ನಟಿ ಅಕಾಂಕ್ಷಾ ದುಬೆ ಅವರು ವಾರಣಾಸಿಯ ಖಾಸಗಿ ಹೊಟೇಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಭೋಜ್‌ಪುರಿ ಚಿತ್ರರಂಗದ ಡ್ರೀಮ್ ಗರ್ಲ್‌ ಎಂದೇ ಖ್ಯಾತರಾಗಿದ್ದ 25 ವರ್ಷದ ಆಕಾಂಕ್ಷಾ ದುಬೆ ಶೂಟಿಂಗ್ ಹಿನ್ನೆಲೆಯಲ್ಲಿ ವಾರಣಾಸಿಗೆ ಆಗಮಿಸಿದ್ದರು. ಶೂಟಿಂಗ್ ಮುಗಿದ ಬಳಿಕ ಹೊಟೇಲ್‌ಗೆ ಹೋಗಿದ್ದು, ಭಾನುವಾರ ಬೆಳಗ್ಗೆ ಅವರಿದ್ದ ಕೊಠಡಿ ಬಾಗಿಲು ತೆರೆದಾಗ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇನ್ನು ಮೃತದೇಹ ಪತ್ತೆಯಾಗುವುದಕ್ಕೆ ಕೆಲವೇ ಗಂಟೆಗಳಿಗೆ ಮುನ್ನ ಭೋಜ್‌ಪುರಿಯ ಹಿಲೋರೆ ಮಾರೆ ಹಾಡಿಗೆ ರೀಲ್ಸ್ ಮಾಡಿ

ಭೋಜ್‌ಪುರಿ ಡ್ರೀಮ್ ಗರ್ಲ್‌ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ ರಕ್ಷಣಾ ಪಡೆಯ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನ

ಕೊಚ್ಚಿ: ಇಲ್ಲಿನ ಕೊಚ್ಚಿನ್ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನಲ್ಲಿ (ಸಿಐಎಎಲ್) ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಭಾನುವಾರ ಪತನಗೊಂಡಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ತರಬೇತಿ ನಿರತವಾಗಿದ್ದ ಹೆಲಿಕಾಪ್ಟರ್ ಮಧ್ಯಾಹ್ನ 12.55ಕ್ಕೆ ಹೆಲಿಪ್ಯಾಡ್‌ನಿಂದ ಟೇಕಾಫ್ ಆಗುತ್ತಿದ್ದಂತೆ ಪತನಗೊಂಡಿದೆ ಎಂದು ಮೂಲಗಳು ತಿಳಿಸಿವೆ ಪ್ರಾಥಮಿಕ ವರದಿಗಳ ಪ್ರಕಾರ, ಒಬ್ಬ ವ್ಯಕ್ತಿಗೆ ಕೈಯಲ್ಲಿ ಸಣ್ಣ ಗಾಯವಾಗಿದೆ ಎಂದು ಮೂಲಗಳು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿವೆ.ಈಮಧ್ಯೆ, ಕೋಸ್ಟ್ ಗಾರ್ಡ್‌ನ ಸುಧಾರಿತ ಲಘು ಹೆಲಿಕಾಪ್ಟರ್ ಅಪಘಾತಕ್ಕೀಡಾದ ನಂತರ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಎರಡು

ಕರಾವಳಿ ರಕ್ಷಣಾ ಪಡೆಯ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನ Read More »

ಮಂಗಳೂರು: ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರ ದಾಳಿ

ಮಂಗಳೂರು: ನಗರದ ಮರೋಳಿ ಎಂಬಲ್ಲಿ ‘ರಂಗ್ ದೇ ಬರ್ಸಾ’ ಹೆಸರಿನಲ್ಲಿ ನಡೆಯುತ್ತಿದ್ದ ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿರುವ ಮಾ.26 ರಂದು ಘಟನೆ ನಡೆದಿದೆ.ಡಿಜೆ ಪಾರ್ಟಿ ಜೊತೆಗೆ ಬಣ್ಣ ಎರಚಿ ಯುವಕ-ಯುವತಿಯರು ಸಂಭ್ರಮಿಸುತ್ತಿದ್ದು, ಅನ್ಯಕೋಮಿನ ಯುವಕರ ಜೊತೆ ಹೋಳಿ ಆಚರಣೆ ಎಂದು ಆರೋಪಿಸಿ ಭಜರಂಗದಳ ದಾಳಿ ನಡೆಸಿ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನು ಪುಡಿಗೈದಿದ್ದಾರೆ. ಈ ವೇಳೆ ಭಜರಂಗದಳ ಕಾರ್ಯಕರ್ತರು ಮತ್ತು ಆಯೋಜಕರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಭಜರಂಗದಳದ ಕಾರ್ಯಕರ್ತರು ಆಯೋಜಕರು

ಮಂಗಳೂರು: ಹೋಳಿ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರ ದಾಳಿ Read More »

ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಸೀರೆ, ಬೆಳ್ಳಿ ಬಂಗಾರ ವಶ

ಗದಗ : 2023ರ ವಿಧಾನಸಭಾ ಚುನಾವಣೆಗೆ ಇನ್ನು ಕೆಲವು ದಿನಗಳು ಬಾಕಿ ಇರುವಾಗಲೇ ಚೆಕ್ ಪೋಸ್ಟ್​ಗಳಲ್ಲಿ ನಿರ್ಮಿಸಿ, ಪೊಲೀಸರ ಹದ್ದಿನ ಕಣ್ಣು ಇಡಲಾಗಿದೆ. ಗಜೇಂದ್ರಗಡ ಚೆಕ್​​ಪೋಸ್ಟ್​​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 6.40 ಲಕ್ಷ ಹಣವನ್ನ ಸೀಜ್ ಮಾಡಲಾಗಿದೆ. ಕೊಪ್ಪಳದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಕಾರನ್ನ ಇಳಕಲ್ ನಾಕಾ ಚೆಕ್ ಪೋಸ್ಟ್​ನಲ್ಲಿ ತಪಾಸಣೆ ಮಾಡಿದ್ದಾಗ ಹಣ ಪತ್ತೆಯಾಗಿದೆ. ಜೊತೆಗೆ 5 ಲಕ್ಷ ಮೌಲ್ಯದ ಸೀರೆ ಹಾಗೂ ಇತರ ವಸ್ತಗಳ ಪತ್ತೆಯಾಗಿದ್ದು ಜಪ್ತಿ ಮಾಡಲಾಗಿದೆ. ಕೊಪ್ಪಳದ ಜಿಲ್ಲಾಧಿಕಾರಿ ಕಚೇರಿ ಬಳಿ ದಾಳಿ

ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ಸೀರೆ, ಬೆಳ್ಳಿ ಬಂಗಾರ ವಶ Read More »

ಟಿಕೆಟ್ ಘೋಷಣೆಯಾದ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಕಣಕ್ಕಿಳಿಯುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಪಕ್ಷ ಈಗಾಗಲೇ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಟಿಕೆಟ್ ಘೋಷಣೆಯಾದ 124 ಕೈ ಅಭ್ಯರ್ಥಿಗಳಿಗೆ ಬುಲಾವ್ ನೀಡಿದ ಸ್ಕ್ರೀನಿಂಗ್ ಕಮಿಟಿ ನಾಳೆ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಲಿದೆ. ಬೆಂಗಳೂರು ಅಥವಾ ಹೊರವಲಯದಲ್ಲಿ ನಡೆಯುವ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಕರ್ನಾಟಕ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಈಗಾಗಲೇ ಬಸ್

ಟಿಕೆಟ್ ಘೋಷಣೆಯಾದ ಕಾಂಗ್ರೆಸ್ ಅಭ್ಯರ್ಥಿಗಳೊಂದಿಗೆ ನಾಳೆ ಸ್ಕ್ರೀನಿಂಗ್ ಕಮಿಟಿ ಸಭೆ Read More »

ದಾವಣಗೆರೆಯಲ್ಲಿ ಮೋದಿ ಭದ್ರತೆಯಲ್ಲಿ ಲೋಪ ಆಗಿಲ್ಲ : ಎಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು : ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆಯಲ್ಲಿ ಭದ್ರತಾ ಲೋಪವಾಗಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್, ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ ಆಗಿಲ್ಲ ಎಂದಿದ್ದಾರೆ. ಈ ಕುರಿತ ವಿಡಿಯೋವೊಂದನ್ನು ಟ್ವೀಟರ್‌ನಲ್ಲಿ ಹಂಚಿಕೊಂಡಿರುವ ಅಲೋಕ್ ಕುಮಾರ್, ಪ್ರಧಾನಿ ವಾಹನದ ಕಡೆಗೆ ನುಗ್ಗಿದ ವ್ಯಕ್ತಿಯನ್ನು ನಾನು ಮತ್ತು ಎಸ್‌ಪಿಜಿ ಪಡೆ ಖುದ್ದು ವಶಕ್ಕೆ ಪಡೆದಿದ್ದೇವೆ. ಮೋದಿ ಅವರ ವಾಹನದಿಂದ

ದಾವಣಗೆರೆಯಲ್ಲಿ ಮೋದಿ ಭದ್ರತೆಯಲ್ಲಿ ಲೋಪ ಆಗಿಲ್ಲ : ಎಡಿಜಿಪಿ ಅಲೋಕ್ ಕುಮಾರ್ Read More »

error: Content is protected !!
Scroll to Top