ದೇಶ

ವಿಧಾನಸೌಧ : ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆ ಅನಾವರಣ

ಬೆಂಗಳೂರು : ವಿಧಾನಸೌಧ ಮುಂದೆ ಸ್ಥಾಪಿಸಿರುವ ಸಮಾಜ ಪರಿವರ್ತಕ, ಜಗಜ್ಯೋತಿ ಬಸವೇಶ್ವರ ಹಾಗೂ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮ ಮಾ. 26ರ ಸಂಜೆ 6.30ಕ್ಕೆ ನಡೆಯಲಿದ್ದು, ಕೇಂದ್ರ ಸಚಿವ ಅಮಿತ್ ಶಾ ಅವರು ಪ್ರತಿಮೆ ಅನಾವರಣ ಮಾಡಲಿದ್ದಾರೆ.ವಿಧಾನಸೌಧದ ಆವರಣದಲ್ಲಿರುವ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಮಧ್ಯಭಾಗದಲ್ಲಿ ಈ ಇಬ್ಬರೂ ಮಹಾನೀಯರ ನಾಲ್ಕು ಮೀಟರ್ ಎತ್ತರದ ಅಶ್ವಾರೂಢ ಪ್ರತಿಮೆಗಳ ಸ್ಥಾಪನೆಯಾಗಲಿದ್ದು, ರೂ. 8 ಕೋಟಿ ವೆಚ್ಚದಲ್ಲಿ […]

ವಿಧಾನಸೌಧ : ಬಸವಣ್ಣ ಹಾಗೂ ಕೆಂಪೇಗೌಡರ ಪ್ರತಿಮೆ ಅನಾವರಣ Read More »

ಅಂಗದಾನ, ಮಹಿಳಾ ಸಬಲೀಕರಣದ ಬಗ್ಗೆ ವಿಶೇಷ ಉಲ್ಲೇಖ: ಮನ್‌ ಕಿ ಬಾತ್

ದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ 99ನೇ ಆವೃತ್ತಿಯ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಮಾಸಿಕ ಕಾರ್ಯಕ್ರಮದ ಮೂಲಕ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿರುವ ಅವರು, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತದ ಯಶಸ್ಸು, ಮಹಿಳಾ ಸಬಲೀಕರಣ, ಅಂಗದಾನ ಜಾಗೃತಿ, ಕೋವಿಡ್ -19 ಸಾಂಕ್ರಾಮಿಕ ಮತ್ತು ಇತರ ಹಲವು ಪ್ರಮುಖ ವಿಷಯಗಳ ಕುರಿತು ಪ್ರಸ್ತಾಪಿಸಿದ್ದಾರೆ. ಮನ್ ಕಿ ಬಾತ್ ಕಾರ್ಯಕ್ರಮ ಮೊದಲ ಶೋ 3ನೇ ಅಕ್ಟೋಬರ್ 2014 ರಂದು ಪ್ರಸಾರವಾಗಿ ಇಂದು

ಅಂಗದಾನ, ಮಹಿಳಾ ಸಬಲೀಕರಣದ ಬಗ್ಗೆ ವಿಶೇಷ ಉಲ್ಲೇಖ: ಮನ್‌ ಕಿ ಬಾತ್ Read More »

ರೋಹಿಣಿ ಸಿಂಧೂರಿ: ಡಿ ರೂಪಾ ಮೌದ್ಗಿಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ, ರೂಪಾ ಅವರಿಗೆ ಸಮನ್ಸ್‌ ಜಾರಿ

ಬೆಂಗಳೂರು: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿದ್ದ ದಾವೆಯನ್ನು ಪರಿಗಣಿಸಿರುವ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ ಅವರ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಲು ಶುಕ್ರವಾರ ಆದೇಶಿಸಿದ್ದು, ರೂಪಾ ಅವರಿಗೆ ಸಮನ್ಸ್‌ ಜಾರಿ ಮಾಡಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ರೂಪಾ ವಿರುದ್ಧ ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ 24ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಬಿ ಸಿ ಚಂದ್ರಶೇಖರ್‌ ಅವರು ಐಪಿಸಿ ಸೆಕ್ಷನ್‌ 500ರ ಅಡಿ ಕ್ರಿಮಿನಲ್‌

ರೋಹಿಣಿ ಸಿಂಧೂರಿ: ಡಿ ರೂಪಾ ಮೌದ್ಗಿಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ, ರೂಪಾ ಅವರಿಗೆ ಸಮನ್ಸ್‌ ಜಾರಿ Read More »

ಹೈದರಾಬಾದ್‌ : ವಿಷಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಹೈದರಾಬಾದ್‌: ಇಲ್ಲಿನ ಕುಷಯಗುಡ ಪ್ರದೇಶದಲ್ಲಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಶನಿವಾರ ಮಧ್ಯಾಹ್ನ ಪೊಲೀಸರಿಗೆ ಮಾಹಿತಿ ಲಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರನ್ನು ಸತೀಶ್, ಅವರ ಪತ್ನಿ ವೇದಾ ಮತ್ತು ಅವರ ಇಬ್ಬರು ಮಕ್ಕಳಾದ ನಿಶಿಕೇತ್ (9) ಮತ್ತು ನಿಹಾಲ್ (5) ಎಂದು ಗುರುತಿಸಲಾಗಿದೆ. ಮಕ್ಕಳಿಗೆ ವಿಷ ಕುಡಿಸಿ ಬಳಿಕ ಹೆತ್ತವರು

ಹೈದರಾಬಾದ್‌ : ವಿಷಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ Read More »

ರಾಹುಲ್‌ ಗಾಂಧಿಯ ಸಂಸತ್‌ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಪ್ರತಿಭಟಿಸಿ ಇಂದು ಕಾಂಗ್ರೆಸ್‌ ಸಂಕಲ್ಪ ಸತ್ಯಾಗ್ರಹ

ರಾಜಧಾನಿ, ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ದೆಹಲಿ : ರಾಹುಲ್‌ ಗಾಂಧಿಯ ಸಂಸತ್‌ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್‌ ಇಂದು ದಿಲ್ಲಿ ಹಾಗೂ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸತ್ಯಾಗ್ರಹ ನಡೆಸಲಿದೆ.ಜಾತಿ ನಿಂದನೆ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೊಳಗಾದ ಬಳಿಕ ರಾಹುಲ್‌ ಗಾಂಧಿಯನ್ನು ಸಂಸತ್‌ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಇದು ಸರಕಾರದ ನಿರಂಕುಶ ನಡೆ ಎಂದು ಆರೋಪಿಸಿ ಕಾಂಗ್ರೆಸ್‌ ಪ್ರತಿಭಟಿಸುತ್ತಿದೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾಡ್ರಾ ರಾಜ್‌ ಘಾಟ್‌ನಲ್ಲಿ ಸತ್ಯಾಗ್ರಹ

ರಾಹುಲ್‌ ಗಾಂಧಿಯ ಸಂಸತ್‌ ಸದಸ್ಯತ್ವ ಅನರ್ಹಗೊಳಿಸಿರುವುದನ್ನು ಪ್ರತಿಭಟಿಸಿ ಇಂದು ಕಾಂಗ್ರೆಸ್‌ ಸಂಕಲ್ಪ ಸತ್ಯಾಗ್ರಹ Read More »

ಸಿದ್ದರಾಮಯ್ಯ ಕೋಲಾರ ಅಥವಾ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧಾರ

ಮಗನಿಂದ ಕ್ಷೇತ್ರ ಕಸಿದುಕೊಂಡ ಅಪವಾದದಿಂದ ಪಾರಾಗಲು ತಂತ್ರ ಬೆಂಗಳೂರು : ಈಗಾಗಲೇ ಪುತ್ರ ಡಾ.ಯತೀಂದ್ರ ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ಪಡೆದುಕೊಂಡಿರುವ ಸಿದ್ದರಾಮಯ್ಯ ಇದೀಗ ಇನ್ನೂ ಒಂದು ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಚೆ ವ್ಯಕ್ತಪಡಿಸಿದ್ದಾರೆ.ಸಿದ್ದರಾಮಯ್ಯ ಅವರು ಈ ಹಿಂದೆ 2008 ಮತ್ತು 2013ರಲ್ಲಿ ವರುಣಾದಿಂದ ಎರಡು ಬಾರಿ ಗೆದ್ದಿದ್ದರು ಮತ್ತು 2013ರಲ್ಲಿ ಇಲ್ಲಿಂದ ಗೆದ್ದು ಮುಖ್ಯಮಂತ್ರಿಯಾಗಿ ಐದು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು. ಇದು ತನ್ನ ಪಾಲಿಗೆ ಲಕ್ಕಿ ಕ್ಷೇತ್ರ ಎಂದು ಸಿದ್ದರಾಮಯ್ಯ ಪರಿಗಣಿಸಿದ್ದಾರೆ. ಅದರೆ ಮಗನ

ಸಿದ್ದರಾಮಯ್ಯ ಕೋಲಾರ ಅಥವಾ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧಾರ Read More »

ಶತಕದಂಚಿನಲ್ಲಿ ಪ್ರಧಾನಿಯ ಜನಪ್ರಿಯ ಸಂವಾದ ಕಾರ್ಯಕ್ರಮ : ಮನ್‌ ಕಿ ಬಾತ್‌

ದೆಹಲಿ : ಪ್ರಧಾನಿ ನರೇಂದ್ರ ಮೋದಿ ಇಂದು ಈ ವರ್ಷದ ಮೂರನೇ ಮನ್ ಕಿ ಬಾತ್‌ನಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಮನ್ ಕಿ ಬಾತ್‌ನ 99ನೇ ಆವೃತ್ತಿ. ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಭಾಷಣ ಪ್ರಸಾರವಾಗಲಿದೆ.ಈ ಮಾಸಿಕ ಬಾನುಲಿ ಕಾರ್ಯಕ್ರಮ ಆಲ್ ಇಂಡಿಯಾ ರೇಡಿಯೋ ಮತ್ತು ದೂರದರ್ಶನದ ಸಂಪೂರ್ಣ ನೆಟ್‌ವರ್ಕ್‌ಗಳಲ್ಲಿ ಪ್ರಸಾರಗೊಳ್ಳಲಿದೆ. ಜತೆಗೆ, ಆಲ್‌ ಇಂಡಿಯಾ ರೇಡಿಯೋ (AIR) ನ್ಯೂಸ್ ವೆಬ್‌ಸೈಟ್‌ನಲ್ಲಿ ಮತ್ತು ನ್ಯೂಸ್‌ಏರ್ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಸಾರವಾಗಲಿದೆ. ಇದನ್ನು ಮಾಹಿತಿ ಮತ್ತು

ಶತಕದಂಚಿನಲ್ಲಿ ಪ್ರಧಾನಿಯ ಜನಪ್ರಿಯ ಸಂವಾದ ಕಾರ್ಯಕ್ರಮ : ಮನ್‌ ಕಿ ಬಾತ್‌ Read More »

ರಾಜ್ಯದಲ್ಲೇ ಪ್ರಥಮ ಬಾರಿಗೆ ಪ್ರಕೃತಿ ಚಿಕಿತ್ಸಾ ವಿಭಾಗ ಆರಂಭಿಸಿರುವುದು ಶ್ಲಾಘನೀಯ : ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್

ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿರುವ ಆಯುಷ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಾಜ್ಯದಲ್ಲೇ ಪ್ರಥಮ ಬಾರಿಗೆ ಪ್ರಕೃತಿ ಚಿಕಿತ್ಸಾ ವಿಭಾಗ ಆರಂಭಿಸಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದ್ದಾರೆ.ಮಾರ್ಚ್ 25ರ ಶನಿವಾರ ನಗರದ ವೆನ್ಲಾಕ್ ಆಯುಷ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 20 ಲಕ್ಷ ರೂ. ವೆಚ್ಚದ ಅತ್ಯಾಧುನಿಕ ನ್ಯಾಚುರೋಪತಿ ಉಪಕರಣಗಳ ಹಸ್ತಾಂತರ ಮತ್ತು ನೂತನ ಪ್ರಕೃತಿ ಚಿಕಿತ್ಸಾ ವಿಭಾಗಕ್ಕೆ ಚಾಲನೆ ನೀಡಿ ಅವರು ಶನಿವಾರ ಮಾತನಾಡಿದರು.ಮುಂಬರುವ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತಾಲೂಕು ಪ್ರದೇಶಗಳಾದ ಸುಳ್ಯ,

ರಾಜ್ಯದಲ್ಲೇ ಪ್ರಥಮ ಬಾರಿಗೆ ಪ್ರಕೃತಿ ಚಿಕಿತ್ಸಾ ವಿಭಾಗ ಆರಂಭಿಸಿರುವುದು ಶ್ಲಾಘನೀಯ : ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ Read More »

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ದುರ್ಮರಣ

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಂಗಳೂರಿನ ಸುಳ್ಯದ ಗಾಂಧಿ ನಗರ ಸಮೀಪ ನಡೆದಿದೆ. ಮೃತರ ಪೈಕಿ ಇಬ್ಬರ ಗುರುತು ಪತ್ತೆಯಾಗಿದ್ದು ಮತ್ತೋರ್ವ ಕಾರ್ಮಿಕನ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಮೃತ ಕಾರ್ಮಿಕ ದಂಪತಿ ಗದಗ ಜಿಲ್ಲೆಯ ಮುಂಡರಗಿ ನಿವಾಸಿಗಳಾದ ಸೋಮಶೇಖರ ರೆಡ್ಡಿ (45) ಮತ್ತು ಶಾಂತ (40) ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ತಂಡ, ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು ಜೆಸಿಬಿ ಮೂಲಕ

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಗುಡ್ಡ ಕುಸಿದು ಮೂವರು ಕಾರ್ಮಿಕರು ದುರ್ಮರಣ Read More »

36 ಉಪಗ್ರಹಗಳನ್ನು ಹೊತ್ತ ಇಸ್ರೋದ ಎಲ್ ವಿಎಂ ರಾಕೆಟ್ ಉಡಾವಣೆಗೆ ಕ್ಷಣಗಣನೆ ಆರಂಭ

ಶ್ರೀಹರಿಕೋಟ: ಎಲ್‌ವಿಎಂ3-ಎಂ3/ಒನ್‌ವೆಬ್ ಇಂಡಿಯಾ-2 ಮಿಷನ್‌ನಲ್ಲಿ 36 ಉಪಗ್ರಹಗಳ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ) ಶನಿವಾರ ತಿಳಿಸಿದೆ.ಉಪಗ್ರಹ ವಾಹಕವನ್ನು ಲಾಂಚ್ ಪ್ಯಾಡ್‍ಗೆ ಸ್ಥಳಾಂತರಿಸಲಾಗಿದ್ದು, ಮಾರ್ಚ್ 26 ರಂದು 36 ಬ್ರಾಡ್‍ಬ್ಯಾಂಡ್ ಉಪಗ್ರಹಗಳೊಂದಿಗೆ ಕಕ್ಷೆಗೆ ಹಾರಿಸಲಾಗುವುದು ಎಂದು ಇಸ್ರೋ ತಿಳಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 36 ಉಪಗ್ರಹಗಳನ್ನು ಹೊತ್ತ ಎಲ್ ವಿಎಂ ರಾಕೆಟ್ ಉಡಾವಣೆ ನಡೆಯಲಿದ್ದು, ಇದರಲ್ಲಿ ಬ್ರಿಟನ್ ಸಹಯೋಗವೂ ಇದೆ ಎಂದು ಇಸ್ರೋ ಹೇಳಿದೆ.ಒನ್ ವೆಬ್ ಎನ್ನುವುದು ಒಂದು ಸಂಸ್ಥೆಯಾಗಿದ್ದು,

36 ಉಪಗ್ರಹಗಳನ್ನು ಹೊತ್ತ ಇಸ್ರೋದ ಎಲ್ ವಿಎಂ ರಾಕೆಟ್ ಉಡಾವಣೆಗೆ ಕ್ಷಣಗಣನೆ ಆರಂಭ Read More »

error: Content is protected !!
Scroll to Top