ದೇಶ

ಕ್ರಿಕೆಟಿಗ ಪ್ರಥ್ವಿ ಶಾ ಮತ್ತು ಆಶೀಶ್​ ಯಾದವ್ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಿದ ಯೂ ಟ್ಯೂಬರ್‌ ಸಪ್ನಾ ಗಿಲ್‌

ಮುಂಬಯಿಯ ಹೋಟೆಲಲ್ಲಿ ಕಿತ್ತಾಡಿಕೊಂಡ ಘಟನೆ ಮುಂಬಯಿ : ಯೂ ಟ್ಯೂಬರ್‌ ಸಪ್ನಾ ಗಿಲ್ ಎಂಬಾಕೆ ಕ್ರಿಕೆಟಿಗ ಪೃಥ್ವಿ ಶಾ ಮತ್ತು ಅವರ ಸ್ನೇಹಿತ ಆಶಿಶ್ ಸುರೇಂದ್ರ ಯಾದವ್ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿದ್ದಾರೆ. ಐಪಿಸಿಯ ಸೆಕ್ಷನ್ 354, 509, 324ರ ಅಡಿಯಲ್ಲಿ ಕ್ರಿಕೆಟಿಗನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಪ್ನಾ ಗಿಲ್ ಪೃಥ್ವಿ ಶಾ ಮತ್ತು ಆಶೀಶ್​ ಯಾದವ್ ವಿರುದ್ಧ ಅಂಧೇರಿಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಲೈಂಗಿಕ ದೌರ್ಜನ್ಯದ ಕೇಸು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕೋರ್ಟ್ ವಿಚಾರಣೆ ನಡೆಸುವುದಾಗಿ ತಿಳಿಸಿದೆ.ಕಿರುಕುಳ […]

ಕ್ರಿಕೆಟಿಗ ಪ್ರಥ್ವಿ ಶಾ ಮತ್ತು ಆಶೀಶ್​ ಯಾದವ್ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಿದ ಯೂ ಟ್ಯೂಬರ್‌ ಸಪ್ನಾ ಗಿಲ್‌ Read More »

ತಾನು ಪಕ್ಷದಿಂದ ಹೊರಹೋಗಲು ರಾಹುಲ್‌ ಗಾಂಧಿಯೇ ಕಾರಣ ಎಂದು ಆಜಾದ್‌ ಆರೋಪ

ಕಾಂಗ್ರೆಸ್‌ನಲ್ಲಿ ಉಳಿಯಬೇಕೆಂದರೆ ಬೆನ್ನುಮೂಳೆ ಇರಬಾರದು ದೆಹಲಿ : ಕಾಂಗ್ರೆಸ್‌ ಮತ್ತು ರಾಹುಲ್‌ ಗಾಂಧಿ ವಿರುದ್ಧ ತೀಕ್ಷ್ಣವಾಗಿ ವಾಗ್ದಾಳಿ ಮಾಡಿರುವ ಪಕ್ಷದ ಮಾಜಿ ನಾಯಕ ಗುಲಾಂ ನಬಿ ಆಜಾದ್‌ ತಾನು ಪಕ್ಷದಿಂದ ಹೊರಹೋಗಲು ರಾಹುಲ್‌ ಗಾಂಧೀಯೇ ಕಾರಣ ಎಂದಿದ್ದಾರೆ. ಇಂದು ನಾನು ಕಾಂಗ್ರೆಸ್‌ ಪಕ್ಷದಲ್ಲಿ ಇಲ್ಲದಿರುವುದಕ್ಕೆ ರಾಹುಲ್ ಗಾಂಧಿಯೇ ಮುಖ್ಯ ಕಾರಣ. ಕಾಂಗ್ರೆಸ್‌ನಲ್ಲಿ ಉಳಿಯಬೇಕೆಂದರೆ ಬೆನ್ನುಮೂಳೆ ಇರಬಾರದು ಎಂದು ಹಿರಿಯ ರಾಜಕಾರಣಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ.ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅಥವಾ ಕಾಂಗ್ರೆಸ್ ಅಧ್ಯಕ್ಷ

ತಾನು ಪಕ್ಷದಿಂದ ಹೊರಹೋಗಲು ರಾಹುಲ್‌ ಗಾಂಧಿಯೇ ಕಾರಣ ಎಂದು ಆಜಾದ್‌ ಆರೋಪ Read More »

ಏ. 6 : ಕಾಂಗ್ರೆಸ್‌ ನ ಎರಡನೇ ಪಟ್ಟಿ ಬಿಡುಗಡೆ

ಭಿನ್ನಮತ ಶಮನಕ್ಕೆ ವರಿಷ್ಠರ ತಿಣುಕಾಟ ಬೆಂಗಳೂರು : ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿರಾಯಾಸವಾಗಿ ಬಿಡುಗಡೆ ಮಾಡಿ ಗೆದ್ದಿದ್ದ ಕಾಂಗ್ರೆಸ್‌ಗೆ ಉಳಿದಿರುವ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿತ್ತು. ಕೈ ನಾಯಕರು ಕಳೆದ ಎರಡು ದಿನಗಳಲ್ಲಿ ದಿಲ್ಲಿಯಲ್ಲೇ ಬೀಡುಬಿಟ್ಟು ನಿರಂತರ ಸಭೆ ನಡೆಸಿದ್ದಾರೆ. ಅಂತಿಮವಾಗಿ 100ರ ಪೈಕಿ 45ರಿಂದ 50 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದ್ದು, ಏಪ್ರಿಲ್ 6ರಂದು ಬೆಳಗ್ಗೆ 11 ಗಂಟೆಯೊಳಗೆ ಕೈ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ. ಬಾಕಿ ಉಳಿದಿರುವ

ಏ. 6 : ಕಾಂಗ್ರೆಸ್‌ ನ ಎರಡನೇ ಪಟ್ಟಿ ಬಿಡುಗಡೆ Read More »

ಆರೋಗ್ಯ ವಿಮೆ ಯೋಜನೆ ಜಾರಿ ಹಿಂಪಡೆಯದಿದ್ದರೆ ಮಹಾರಾಷ್ಟ್ರ ಹಳ್ಳಿಗಳಿಗೆ ಕನ್ನಡಿಗರು ನುಗ್ಗುತ್ತೇವೆ : ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು : ಕರ್ನಾಟಕ ಮತ್ತು ಮಹಾರಾಷ್ಟ್ರಗಳ ನಡುವಿನ ಗಡಿ ವಿವಾದ ಕುರಿತ ಪ್ರಕರಣವು ಸುಪ್ರೀಂ ಕೋರ್ಟ್‌ ಅಂಗಳಲ್ಲಿದ್ದರೂ ಮಹಾರಾಷ್ಟ್ರ ಸರಕಾರ ಕರ್ನಾಟಕದ 860ಕ್ಕೂ ಅಧಿಕ ಹಳ್ಳಿಗಳಿಗೆ ಆರೋಗ್ಯ ವಿಮೆಯನ್ನು ಒದಗಿಸುತ್ತಿರುವ ಮೂಲಕ ಉದ್ಧಟತನ ಪ್ರದರ್ಶನ ಮಾಡಿರುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ಗಳ ಮೂಲಕ ಮಹಾರಾಷ್ಟ್ರ ಸರಕಾರ ಮತ್ತು ಮುಖ್ಯಮಂತ್ರಿಗೆ ತರಾಟೆ ತೆಗೆದುಕೊಂಡಿದ್ದಾರೆ. ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್ ‌ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ

ಆರೋಗ್ಯ ವಿಮೆ ಯೋಜನೆ ಜಾರಿ ಹಿಂಪಡೆಯದಿದ್ದರೆ ಮಹಾರಾಷ್ಟ್ರ ಹಳ್ಳಿಗಳಿಗೆ ಕನ್ನಡಿಗರು ನುಗ್ಗುತ್ತೇವೆ : ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ Read More »

ಸಿಕ್ಕಿಂ : ಭಾರಿ ಹಿಮಪಾತದಿಂದಾಗಿ 6 ಸಾವು – 25 ಮಂದಿ ಪ್ರವಾಸಿಗರು ಹಿಮದಡಿಯಲ್ಲಿ ಸಿಲುಕಿರುವ ಶಂಕೆ

ಗ್ಯಾಂಗ್ಟಕ್: ಸಿಕ್ಕಿಂನ ನಾಥುಲಾ ಪ್ರದೇಶದಲ್ಲಿ ಮಂಗಳವಾರ ಭಾರಿ ಹಿಮಪಾತ ಸಂಭವಿಸಿ ಆರು ಪ್ರವಾಸಿಗರು ಸಾವನ್ನಪ್ಪಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ರಾಜಧಾನಿ ಗ್ಯಾಂಗ್ಟಕ್‌ನ ಆಸ್ಪತ್ರೆಗೆ ಕರೆತರಲಾಗುತ್ತಿದೆ ಮತ್ತು 22ಕ್ಕೂ ಹೆಚ್ಚು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.ಹಿಮದಡಿ ಸಿಲುಕಿರುವವರ ರಕ್ಷಣೆ ಮತ್ತು ರಸ್ತೆ ತೆರವು ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ.ನಾಥುಲಾ ಪಾಸ್ ಚೀನಾದ ಗಡಿಯಲ್ಲಿದ್ದು, ಅದರ ರಮಣೀಯ ಸೌಂದರ್ಯದಿಂದಾಗಿ ಪ್ರಮುಖ ಪ್ರವಾಸಿ ತಾಣವಾಗಿದೆ. ಜವಾಹರಲಾಲ್ ನೆಹರು ಮಾರ್ಗದ 14ನೇ ಮೈಲಿಗಲ್ಲು

ಸಿಕ್ಕಿಂ : ಭಾರಿ ಹಿಮಪಾತದಿಂದಾಗಿ 6 ಸಾವು – 25 ಮಂದಿ ಪ್ರವಾಸಿಗರು ಹಿಮದಡಿಯಲ್ಲಿ ಸಿಲುಕಿರುವ ಶಂಕೆ Read More »

ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿ ವೈರಲ್ ಮಾಡಿ ಗೊಂದಲ ಸೃಷ್ಟಿಸಿದ ಕಿಡಿಗೇಡಿಗಳು‌

ಏಪ್ರಿಲ್ 8ರಂದು ಅಭ್ಯರ್ಥಿ ಪಟ್ಟಿ ಬಿಡುಗಡೆ ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಅಂತಿಮ ಹಂತಕ್ಕೆ ಬಂದಿದ್ದು, ಇಂದಿನಿಂದ ಎರಡು ದಿನ ನಡೆಯಲಿರುವ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ತೀವ್ರ ಕುತೂಹಲ ಮೂಡಿಸಿದೆ. ಎರಡು ದಿನಗಳ ಸಭೆಯ ಬಳಿಕ ರಾಜ್ಯ ಚುನಾವಣಾ ಸಮಿತಿಯಿಂದ ಕೇಂದ್ರ ಚುನಾವಣಾ ಸಮಿತಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಶಿಫಾರಸುಗೊಳ್ಳಲಿದೆ. ಇದರ ಮಧ್ಯೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಾಮಾಜಿ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಈ ಬಗ್ಗೆ ವ್ಯಾಪಕ ಚರ್ಚೆಗಳು

ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿ ವೈರಲ್ ಮಾಡಿ ಗೊಂದಲ ಸೃಷ್ಟಿಸಿದ ಕಿಡಿಗೇಡಿಗಳು‌ Read More »

ದೇವಸ್ಥಾನದ ಪುನರ್‌ನಿರ್ಮಾಣದ ಸಂದರ್ಭ ಬೃಹತ್​ ಪಾಣಿಪೀಠ ಗೋಚರ

ಪುತ್ತೂರು : ಮೂರು ದಿನಗಳ ಹಿಂದೆ ದೇವಸ್ಥಾನದ ಪುಷ್ಕರಣಿ ಮಧ್ಯೆ ಇರುವ ಕಟ್ಟೆಯ ಕೆಳಭಾಗದ ವರುಣ ದೇವರ ವಿಗ್ರಹದ ಬಳಿ ಭೂಗರ್ಭದಲ್ಲಿ ನೀಲಿ-ಬಿಳಿ ಮಿಶ್ರಿತ ಹುಡಿ ಮಣ್ಣಿನೊಂದಿಗೆ ಅಂಟಿಕೊಂಡಿದ್ದ ವರುಣ ದೇವರ ವಿಗ್ರಹದ ಪಾಣಿಪೀಠ ಕಂಡುಬಂದಿತ್ತು. ಇದೀಗ ಅದರ ಕೆಳಗೇ ಬೃಹತ್ ಪಾಣಿಪೀಠ ಪತ್ತೆಯಾಗಿದೆ. ದೇವಸ್ಥಾನದ ಪುಷ್ಕರಣಿಯ ಮಧ್ಯೆ ಇರುವ ಕಟ್ಟೆಯ ಪುನರ್ ನಿರ್ಮಾಣದ ಕೆಲಸ ಕಾರ್ಯ ನಡೆಯುತ್ತಿರುವ ಹಿನ್ನಲೆಯಲ್ಲಿ ಕೆರೆಯ ಮಧ್ಯ ಭಾಗದ ಕಟ್ಟೆಯ ಸುತ್ತ ಕಾಫರ್ ಡ್ರಾಜ್ ಮಾಡಿ ಒಳಗಿನ ನೀರನ್ನು ಹೊರತೆಗೆದಾಗ ಶ್ರೀವರುಣ

ದೇವಸ್ಥಾನದ ಪುನರ್‌ನಿರ್ಮಾಣದ ಸಂದರ್ಭ ಬೃಹತ್​ ಪಾಣಿಪೀಠ ಗೋಚರ Read More »

ಕೆಂಪು ಬಟ್ಟೆಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ಅವಘಡ ತಪ್ಪಿಸಿದ ಮಹಿಳೆ

ಮಂಗಳೂರು : ರೈಲು ಹಳಿ ಮೇಲೆ ಮರ ಬಿದ್ದದ್ದನ್ನು ಗಮನಿಸಿದ ಮಹಿಳೆಯೊಬ್ಬರು ಕೆಂಪುಬಟ್ಟೆ ಯನ್ನು ಕೈಯಲ್ಲಿ ಪ್ರದರ್ಶಿಸಿ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿರುವ ಘಟನೆ ಪಡೀಲ್‌ – ಜೋಕಟ್ಟೆ ಮಧ್ಯೆಯ ಪಚ್ಚನಾಡಿ ಸಮೀಪ ಮಂದಾರದಲ್ಲಿ ಏ 04 ರಂದು ನಡೆದಿದೆ. ಚಂದ್ರಾವತಿ (70) ಎಂಬವರೇ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿ ಹಲವಾರು ಪ್ರಯಾಣಿಕರ ಪ್ರಾಣವನ್ನು ಉಳಿಸಿದ ಮಹಿಳೆ. ಮಾ. 21ರಂದು ಮಧ್ಯಾಹ್ನ ಸುಮಾರು 2.10ರ ಸುಮಾರಿಗೆ ರೈಲು ಹಳಿಗೆ ಮರ ಬಿದ್ದಿದ್ದು, ಅದೇ ಸಮಯಕ್ಕೆ ಮಂಗಳೂರಿನಿಂದ ಮುಂಬಯಿಗೆ ಮತ್ಸ್ಯಗಂಧ

ಕೆಂಪು ಬಟ್ಟೆಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ಅವಘಡ ತಪ್ಪಿಸಿದ ಮಹಿಳೆ Read More »

ಟ್ವಿಟ್ಟರ್ ಲೋಗೋವನ್ನು ನೀಲಿ ಹಕ್ಕಿಯಿಂದ ನಾಯಿಗೆ ಬದಲಿಸಿದ ಎಲಾನ್ ಮಸ್ಕ್

ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್ ನಿತ್ಯ ಒಂದಲ್ಲಾ ಒಂದು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಇದೀಗ ಟ್ವಿಟ್ಟರ್ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರವನ್ನು ಹಾಕಿದ್ದು ಕುತೂಹಲ ಮೂಡಿಸಿದೆ.ಹಕ್ಕಿಯ ಜಾಗಕ್ಕೆ ಕ್ರಿಪ್ಟೋಕರೆನ್ಸಿ ಡಾಗ್​ಕಾಯಿನ್​ನ ನಾಯಿಯ ಮೀಮ್ಸ್ ಫೋಟೋವನ್ನು ಬಳಸಿದ್ದಾರೆ. ಮಸ್ಕ್​ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಆದರೆ ಇಲ್ಲೊಂದು ಟ್ವಿಸ್ಟ್​ ಇದೆ. ಟ್ವಿಟ್ಟರ್ ಬದಲಾವಣೆ ಕೇವಲ ವೆಬ್​ ಆವೃತ್ತಿಗೆ ಮಾತ್ರ ಸೀಮಿತವಾಗಿದೆ, ಮೊಬೈಲ್​ನಲ್ಲಿ ಪಕ್ಷಿಯ ಲೋಗೋ ಕಾಣಿಸಲಿದೆ. ಬಿಟ್​ ಕಾಯಿನ್​ನಂತಹ ಇತರೆ ಕ್ರಿಪ್ಟೋ ಕರೆನ್ಸಿಯನ್ನು

ಟ್ವಿಟ್ಟರ್ ಲೋಗೋವನ್ನು ನೀಲಿ ಹಕ್ಕಿಯಿಂದ ನಾಯಿಗೆ ಬದಲಿಸಿದ ಎಲಾನ್ ಮಸ್ಕ್ Read More »

ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ

ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಕರ್ನಾಟಕ ಅಂಚೆ ಇಲಾಖೆಯು ಸೋಮವಾರ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ 2023 ಎಂಬ ಹೊಸ ಯೋಜನೆಯನ್ನು ಹೊರತಂದಿದೆ.ಇದರ ಪ್ರಮುಖ ವೈಶಿಷ್ಟ್ಯಗಳೆಂದರೆ ಎರಡು ವರ್ಷಗಳ ಅವಧಿಯಲ್ಲಿ ಶೇಕಡಾ 7.5ರಷ್ಟು ಸ್ಥಿರ ಬಡ್ಡಿ, ಗರಿಷ್ಠ ಸೀಲಿಂಗ್ ಮಿತಿ 2 ಲಕ್ಷ ರೂಪಾಯಿ ಮತ್ತು ಒಂದು ವರ್ಷದ ನಂತರ ಭಾಗಶಃ ಹಿಂಪಡೆಯುವಿಕೆ ಸಾಧ್ಯವಾಗುತ್ತದೆ. ಕರ್ನಾಟಕ ಅಂಚೆ ವೃತ್ತದ ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿ, ಇದು

ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ Read More »

error: Content is protected !!
Scroll to Top