ದೇಶ

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮುಡ್ನೂರು ಗ್ರಾಮದ ಗುತ್ತಿಕಲ್ಲು ಎಂಬಲ್ಲಿ ಏ. 3 ರಂದು ಸಂಭವಿಸಿದೆ. ಶಿವಪ್ಪ ಗೌಡ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಕೂಲಿ ಕೆಲಸ ಮಾಡಿಕೊಂಡಿದ್ದು, ಸುಮಾರು 4 ವರ್ಷಗಳ ಹಿಂದೆ ದಂಪತ್ಯದಲ್ಲಿ ಮನಸ್ಧಾಪ ಉಂಟಾಗಿ ಆತನ ಪತ್ನಿ ತವರು ಮನೆಯಲ್ಲಿ ನೆಲೆಸಿದ ಕಾರಣ ಮನೆಯಲ್ಲಿ ಒಬ್ಬರೇ ಇರುತ್ತಿದ್ದರು. ಏ. 1 ರಂದು ಶಿವಪ್ಪ ಗೌಡ ಕಾಣೆಯಾದ ಬಗ್ಗೆ ಅಣ್ಣ ತಿಮ್ಮಪ್ಪ ಗೌಡ ಪುತ್ತೂರು ನಗರ ಪೊಲೀಸ್‌ […]

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನ ಗ್ರಾಮದ ಇಚ್ಚೆ ಎಂಬಲ್ಲಿ ಏ.2 ರಂದು ಸಂಭವಿಸಿದೆ. ಅಂಗಾರ(80) ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಇವರು ಏ.2 ರಂದು ಮನೆಯಿಂದ ಸ್ವಲ್ಪ ದೂರದಲ್ಲಿ ಗೇರು ಮರದ ಕೊಂಬೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ.ಶಿ ಗೆ ಹೈಕಮಾಂಡ್‌ ನೀಡುವುದಿಲ್ಲ : ಸಿದ್ದರಾಮಯ್ಯ

ಡಿಕೆಶಿ ನಿದ್ದೆಗೆಡಿಸಿದ ಸಿದ್ದರಾಮಯ್ಯ ಸಂದರ್ಶನ ಬೆಂಗಳೂರು : ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ನೀಡಿರುವ ಹೇಳಿಕೆಯೊಂದು ಕಾಂಗ್ರೆಸ್ಸಿನ ಒಳ ಬೇಗುದಿಯನ್ನು ಹೆಚ್ಚಿಸಿದೆ. ಇಂಗ್ಲೀಷ್‌ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಹೈಕಮಾಂಡ್‌ ಮುಖ್ಯಮಂತ್ರಿ ಹುದ್ದೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರ ಈ ಹೇಳಿಕೆಯಿಂದ ಕಾಂಗ್ರೆಸ್​ನಲ್ಲಿ ತಲ್ಲಣ ಸೃಷ್ಟಿಸಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಹೇಳಿಕೆ ವಿಕೋಪಕ್ಕೆ ತಿರುಗುವ ಮೊದಲು ಸಿದ್ದರಾಮಯ್ಯ ಎಚ್ಚೆತ್ತುಕೊಂಡು ಸ್ಪಷ್ಟನೆ ನೀಡಿದ್ದು, ನಾನು ಮುಖ್ಯಮಂತ್ರಿ ಅಭ್ಯರ್ಥಿ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ.ಶಿ ಗೆ ಹೈಕಮಾಂಡ್‌ ನೀಡುವುದಿಲ್ಲ : ಸಿದ್ದರಾಮಯ್ಯ Read More »

ನಿಷ್ಕ್ರಿಯ ಖಾತೆಗಳ 35012 ಕೋಟಿ ರೂ. ಆರ್‌ಬಿಐಗೆ ವರ್ಗಾವಣೆ

ದೆಹಲಿ : ಹತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯಿಂದ ನಿಷ್ಕ್ರಿಯವಾಗಿರುವ ಬ್ಯಾಂಕ್‌ ಖಾತೆಗಳಲ್ಲಿ ಕೊಳೆಯುತ್ತಿದ್ದ 35012 ಕೋಟಿ ರೂ. ಠೇವಣಿಯನ್ನು ಸಾರ್ವಜನಿಕ ಸ್ವಾಮ್ಯದ ಬ್ಯಾಂಕುಗಳು ಭಾರತೀಯ ರಿಸರ್ವ್‌ ಬ್ಯಾಂಕ್‌(ಆರ್‌ಬಿಐ)ಗೆ ವರ್ಗಾವಣೆ ಮಾಡಿವೆ. 2023ರ ಫೆಬ್ರವರಿ ಅಂತ್ಯಕ್ಕೆ ಅನುಗುಣವಾಗಿ 10.24 ಕೋಟಿ ಖಾತೆಗಳಲ್ಲಿ ಈ ಹಣ ಇತ್ತು ಎಂದು ಹಣಕಾಸು ಖಾತೆ ರಾಜ್ಯ ಸಚಿವ ಭಾಗವತ್‌ ಕಾರಡ್‌ ಅವರು ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಆರ್‌ಬಿಐಗೆ ವರ್ಗಾವಣೆಯಾದ 35012 ಕೋಟಿ ರೂ. ಪೈಕಿ ಭಾರತೀಯ ಸ್ಟೇಟ್‌

ನಿಷ್ಕ್ರಿಯ ಖಾತೆಗಳ 35012 ಕೋಟಿ ರೂ. ಆರ್‌ಬಿಐಗೆ ವರ್ಗಾವಣೆ Read More »

ಸಿಬಿಎಸ್‌ಇ ಪರಿಷ್ಕೃತ ಪಠ್ಯ ಕ್ರಮದಲ್ಲಿ ಮೊಘಲರ ಅಧ್ಯಾಯ ಇಲ್ಲ

ಎನ್‌ಸಿಇಆರ್‌ಟಿ ಪರಿಷ್ಕೃತ ಪಠ್ಯ 2023-24ರಿಂದಲೇ ಜಾರಿ ದೆಹಲಿ : ಕೇಂದ್ರ ಸರ್ಕಾರದ ಅಧೀನದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಹಾಗೂ ತರಬೇತಿ ಸಂಸ್ಥೆ (ಎನ್‌ಸಿಇಆರ್‌ಟಿ) 12ನೇ ತರಗತಿಯ ಇತಿಹಾಸ ಪಠ್ಯದಲ್ಲಿ ಮೊಘಲರ ಸಾಮ್ರಾಜ್ಯಕ್ಕೆ ಸಂಬಂಧಿಸಿದ ಅಧ್ಯಾಯಗಳನ್ನು ತೆಗೆದುಹಾಕಿದೆ. 2023-24ನೇ ಶೈಕ್ಷಣಿಕ ವರ್ಷದಿಂದಲೇ ಇದು ಜಾರಿಗೆ ಬರಲಿದೆ. ಈ ಸೂಚನೆ ಸಿಬಿಎಸ್‌ಇ ಹಾಗೂ ಎನ್‌ಸಿಇಆರ್‌ಟಿ ಪಠ್ಯಕ್ರಮ ಅನುಸರಿಸುವ ಎಲ್ಲ ರಾಜ್ಯಗಳಿಗೆ ಅನ್ವಯಿಸಲಿದೆ. ನವೀಕರಿಸಿದ ಪಠ್ಯಕ್ರಮದ ಪ್ರಕಾರ, ಥೀಮ್ಸ್‌ ಆಫ್‌ ಇಂಡಿಯನ್‌ ಹಿಸ್ಟರಿ-ಪಾರ್ಟ್ 2 ಎಂಬ ಇತಿಹಾಸ ಪುಸ್ತಕದಲ್ಲಿ ಅರಸರು ಹಾಗೂ

ಸಿಬಿಎಸ್‌ಇ ಪರಿಷ್ಕೃತ ಪಠ್ಯ ಕ್ರಮದಲ್ಲಿ ಮೊಘಲರ ಅಧ್ಯಾಯ ಇಲ್ಲ Read More »

ಚುರುಕುಗೊಂಡ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ

ಬೆಂಗಳೂರು : ಬಿಜೆಪಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದೆ. ಇಂದು ಮತ್ತು ನಾಳೆ ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಎರಡು ದಿನಗಳ ಸಭೆಯ ಬಳಿಕ ರಾಜ್ಯ ಚುನಾವಣಾ ಸಮಿತಿಯಿಂದ ಕೇಂದ್ರ ಚುನಾವಣಾ ಸಮಿತಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಶಿಫಾರಸುಗೊಳ್ಳಲಿದೆ. ಎರಡು ದಿನ ನೆಲಮಂಗಲದ ಗೋಲ್ಡನ್ ಪಾಮ್ ರೆಸಾರ್ಟ್‌ನಲ್ಲಿ ನಡೆದ ಜಿಲ್ಲಾ ಕೋರ್ ಕಮಿಟಿ ಸಭೆಯಲ್ಲಿ ಸಂಗ್ರಹಿಸಲಾದ ಆಕಾಂಕ್ಷಿಗಳ ಪಟ್ಟಿಯನ್ನು ಚುನಾವಣಾ ಸಮಿತಿ ಫಿಲ್ಟರ್ ಮಾಡಲಿದ್ದು, ಪ್ರತಿ ಕ್ಷೇತ್ರಕ್ಕೆ ಮೂರು ಸಂಭಾವ್ಯ ಅಭ್ಯರ್ಥಿಗಳ ಹೆಸರು ಪಕ್ಷದ

ಚುರುಕುಗೊಂಡ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ Read More »

ಚುಂಬನ ಪ್ರಕರಣದಲ್ಲಿ 16 ವರ್ಷದ ಬಳಿಕ ಶಿಲ್ಪಾ ಶೆಟ್ಟಿ ನಿರ್ದೋಷಿ

2007ರಲ್ಲಿ ರಾಜಸ್ಥಾನದಲ್ಲಿ ನಡೆದ ಘಟನೆ ಮುಂಬಯಿ : ಸಾರ್ವಜನಿಕ ವೇದಿಕೆಯಲ್ಲಿ ಹಾಲಿವುಡ್‌ ನಟ ರಿಚರ್ಡ್‌ ಗೇರ್‌ ಅವರನ್ನು ಚುಂಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾ ಶೆಟ್ಟಿ 16 ವರ್ಷದ ಬಳಿಕ ನಿರ್ದೋಷಿ ಎಂದು ಸಾಬೀತಾಗಿದ್ದಾರೆ.ಈ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿ ನಿರ್ದೋಷಿ ಎಂದು ಹೇಳಿ ಖುಲಾಸೆಗೊಳಿಸಿದ್ದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ತೀರ್ಪನ್ನು ಮುಂಬಯಿಯ ಸೆಷನ್ಸ್‌ ಕೋರ್ಟ್‌ ಎತ್ತಿ ಹಿಡಿದಿದೆ.2007ರಲ್ಲಿ ರಾಜಸ್ಥಾನದಲ್ಲಿ ಏಡ್ಸ್‌ ಜಾಗೃತಿ ಕಾರ್ಯಕ್ರಮವೊಂದರ ವೇದಿಕೆಯಲ್ಲಿ ನಟ ರಿವರ್ಡ್‌ ಗೇರ್‌ ಅವರು ಶಿಲ್ಪಾ ಶೆಟ್ಟಿಯನ್ನು ಬರಸೆಳೆದು ಅಪ್ಪಿ ಹಿಡಿದು ಚುಂಬಿಸಿದ್ದರು.

ಚುಂಬನ ಪ್ರಕರಣದಲ್ಲಿ 16 ವರ್ಷದ ಬಳಿಕ ಶಿಲ್ಪಾ ಶೆಟ್ಟಿ ನಿರ್ದೋಷಿ Read More »

ಕರಾವಳಿಯ ವಾಜಪೇಯಿ ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜಕೀಯ ನಿವೃತ್ತಿ

ಸ್ವಾರ್ಥಿ ರಾಜಕಾರಣಿಗಳ ನಡುವೆ ಭಿನ್ನವಾಗಿ ಕಾಣುವ ಹಾಲಾಡಿ ಕರಾವಳಿಯ ವಾಜಪೇಯಿ ಎಂದೇ ಖ್ಯಾತಿ ಪಡೆದಿದ್ದ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. 1999ರಿಂದ ಇಲ್ಲಿಯವರೆಗೆ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದ 72 ವರ್ಷದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರ ಈ ನಡೆ ಅಚ್ಚರಿ ಮೂಡಿಸಿರುವುದರ ಜತೆಗೆ ನಾಡಿನಾದ್ಯಂತ ಚರ್ಚೆಗೂ ಕಾರಣವಾಗಿದೆ. ಶ್ರೀನಿವಾಸ ಶೆಟ್ಟಿಯವರು ಓರ್ವ ಮಾದರಿ ಜನನಾಯಕ ಎಂದು ಧಾರಾಳವಾಗಿ ಹೇಳಬಹುದು. ಸತತ

ಕರಾವಳಿಯ ವಾಜಪೇಯಿ ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜಕೀಯ ನಿವೃತ್ತಿ Read More »

ಐಪಿಎಲ್‌ ಪಂದ್ಯದಲ್ಲಿ ಅಭಿಮಾನಿಯೊಬ್ಬ ಪಂಜುರ್ಲಿ ದೈವದ ವೇಷಧಾರಿ : ತುಳುವರಿಂದ ಭಾರಿ ಆಕ್ರೋಶ

ತುಳುನಾಡಿನ ದೈವಗಳಿಗೆ ಅವಮಾನ ಮಾಡಬೇಡಿ-ಕಾಂತಾರ-2 ಬೇಡ ಎಂದು ಒತ್ತಾಯ ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮುಂಬೈ ಇಂಡಿಯನ್ಸ್ ಮತ್ತು ಆರ್‌ಸಿಬಿ ಐಪಿಎಲ್‌ ಪಂದ್ಯದಲ್ಲಿ ಅಭಿಮಾನಿಯೊಬ್ಬ ಪಂಜುರ್ಲಿ ದೈವದ ವೇಷ ಹಾಕಿಕೊಂಡು ಬಂದಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತನ್ನ ನೆಚ್ಚಿನ ತಂಡಕ್ಕೆ ಬೆಂಬಲ ನೀಡಲು ಆತ ಪಂಜುರ್ಲಿ ವೇಷ ಹಾಕಿದ್ದಾನೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಈ ಫೋಟೊವನ್ನು ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಕ್ರೀಡಾಂಗಣದಲ್ಲಿ ದೈವದ ವೇಷ ಹಾಕಿದ್ದನ್ನು ನೋಡಿ ತುಳುವರು ಆಕ್ರೋಶ

ಐಪಿಎಲ್‌ ಪಂದ್ಯದಲ್ಲಿ ಅಭಿಮಾನಿಯೊಬ್ಬ ಪಂಜುರ್ಲಿ ದೈವದ ವೇಷಧಾರಿ : ತುಳುವರಿಂದ ಭಾರಿ ಆಕ್ರೋಶ Read More »

ಐಪಿಎಲ್ 2023 : ಅರ್ಧಶತಕ, ದಾಖಲೆ ನಿರ್ಮಿಸಿದ ಆರ್ ಸಿಬಿ ‘ರನ್ ಮಷಿನ್’ ವಿರಾಟ್ ಕೊಹ್ಲಿ

ಬೆಂಗಳೂರು : ಐಪಿಎಲ್ ಸೀಸನ್ 16ರ ಮೊದಲ ಪಂದ್ಯದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಗೆಲುವು ಸಾಧಿಸಿದ್ದು, ಆರ್ ಸಿಬಿ ರನ್ ಮೆಷಿನ್ ವಿರಾಟ್ ಕೊಹ್ಲಿ ಮತ್ತು ಫಾಫ್ ಡುಪ್ಲೆಸಿಸ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಆರ್ ಸಿಬಿ 8 ವಿಕೆಗಳ ಭರ್ಜರಿ ಜಯ ದಾಖಲಿಸಿತು. ಇದೇ ಪಂದ್ಯದಲ್ಲಿ ಕೊಹ್ಲಿ ಅಪರೂಪದ ದಾಖಲೆ ಕೂಡ ನಿರ್ಮಾಣ ಮಾಡಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ವಿರುದ್ಧ ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್ ಸಿಬಿ ತಂಡ ಎಂಟು

ಐಪಿಎಲ್ 2023 : ಅರ್ಧಶತಕ, ದಾಖಲೆ ನಿರ್ಮಿಸಿದ ಆರ್ ಸಿಬಿ ‘ರನ್ ಮಷಿನ್’ ವಿರಾಟ್ ಕೊಹ್ಲಿ Read More »

error: Content is protected !!
Scroll to Top