ದೇಶ

ಕೈಕೊಟ್ಟ ಪ್ರೇಮಿಗೆ 100 ಪಿಜ್ಜಾ ಕಳುಹಿಸಿ ಸೇಡು ತೀರಿಸಿಕೊಂಡ ಯುವತಿ

ಹೊಸದಿಲ್ಲಿ : ಇಷ್ಟಪಟ್ಟವರಿಗೆ ಉಡುಗೊರೆ ಕೊಡುವುದರಲ್ಲೇನೂ ವಿಶೇಷವಿಲ್ಲ. ಅದರಲ್ಲೂ ಪ್ರೇಮಿಗಳ ಪಾಲಿಗೆ ವ್ಯಾಲೆಂಟೈನ್‌ ಡೇಯಂದು ಉಡುಗೊರೆ ವಿನಿಮಯ ಮಾಡಿಕೊಳ್ಳುವುದು ಮಾಮೂಲು. ಆದರೆ ಉಡುಗೊರೆಯನ್ನು ಸೇಡು ತೀರಿಸಿಕೊಳ್ಳಲು ಕೂಡ ಬಳಸಿಕೊಳ್ಳಬಹುದು ಎಂಬುದನ್ನು ಗುರುಗ್ರಾಮದ ಯುವತಿಯೊಬ್ಬಳು ತೋರಿಸಿಕೊಟ್ಟಿದ್ದಾಳೆ. ಈಕೆ ಕೊಟ್ಟ ಉಡುಗೊರೆಯಿಂದ ಕೈಕೊಟ್ಟ ಪ್ರೇಮಿ ಸುಸ್ತಾಗಿ ಹೋಗಿದ್ದಾನೆ. 24 ವರ್ಷದ ಆಯುಷಿ ರಾವತ್ ಎಂಬ ಯುವತಿ ಪ್ರೇಮಿಗಳ ದಿನದಂದು ತನ್ನ ಮಾಜಿ ಗೆಳೆಯನ ಮನೆಗೆ ಬರೋಬ್ಬರಿ 100 ಪಿಜ್ಜಾಗಳನ್ನು ಆರ್ಡರ್ ಮಾಡಿದ್ದಾಳೆ. ಹಣ ಪಾವತಿ ಮಾಡಿಲ್ಲ. ಡೆಲಿವರಿ ವೇಳೆ ಕ್ಯಾಶ್ […]

ಕೈಕೊಟ್ಟ ಪ್ರೇಮಿಗೆ 100 ಪಿಜ್ಜಾ ಕಳುಹಿಸಿ ಸೇಡು ತೀರಿಸಿಕೊಂಡ ಯುವತಿ Read More »

ಮಹಾಕುಂಭಮೇಳಕ್ಕೆ ಹೋಗುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ : 10 ಸಾವು

ಪ್ರಯಾಗ್‌ರಾಜ್‌: ಮಹಾಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ ಹೊಡೆದು 10 ಭಕ್ತರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ. ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯ ಮೇಜಾ ಪ್ರದೇಶದಲ್ಲಿ ಬೊಲೆರೊ ಕಾರು ಬಸ್‌ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿವೆ. 19 ಜನರು ಗಾಯಗೊಂಡಿದ್ದಾರೆ. ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮವಾದ ಸಂಗಮದಲ್ಲಿ ಸ್ನಾನ ಮಾಡಲು ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಿಂದ ಭಕ್ತರು ಪ್ರಯಾಣಿಸುತ್ತಿದ್ದರು. ಭಕ್ತರನ್ನು ಕರೆದೊಯ್ಯುತ್ತಿದ್ದ ಬೊಲೆರೊ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಿಂದ ಪ್ರಯಾಣಿಸುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ

ಮಹಾಕುಂಭಮೇಳಕ್ಕೆ ಹೋಗುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ : 10 ಸಾವು Read More »

18 ವರ್ಷಗಳ ಬಳಿಕ ಲಾಭದ ಮುಖ ಕಂಡ ಬಿಎಸ್‌ಎನ್‌ಎಲ್‌

ಸೇವೆಗಳ ಸುಧಾರಣೆ, ಖಾಸಗಿ ಕಂಪನಿಗಳ ದರ ಹೆಚ್ಚಳದಿಂದಾಗಿ ಬಿಎಸ್‌ಎನ್‌ಎಲ್‌ಗೆ ಲಾಭ ಹೊಸದಿಲ್ಲಿ: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಭಾರತ್‌ ಸಂಚಾರ್‌ ನಿಗಮ್‌ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌) 2007ರ ಬಳಿಕ ಇದೇ ಮೊದಲ ಬಾರಿಗೆ ಲಾಭ ಕಂಡಿದೆ. ಜಿಯೋ, ಏರ್‌ಟೆಲ್‌ ಸೇವೆಗಳಲ್ಲಿ ಏರಿಕೆ ಕಂಡ ಬಳಿಕ ಗ್ರಾಹಕರು ಬಿಎಸ್‌ಎನ್‌ಎಲ್‌ನತ್ತ ಮರಳುತ್ತಿದ್ದು, ಆದಾಯ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನಲಾಗಿದೆ. 2025ರ ಆರ್ಥಿಕ ವರ್ಷದ 3ನೇ ತ್ರೈಮಾಸಿಕದಲ್ಲಿ ಬಿಎಸ್‌ಎನ್‌ಎಲ್‌ 262 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ನೆಟ್‌ವರ್ಕ್ ವಿಸ್ತರಣೆ ಮತ್ತು ಗ್ರಾಹಕ ಸೇರ್ಪಡೆಯಂತಹ

18 ವರ್ಷಗಳ ಬಳಿಕ ಲಾಭದ ಮುಖ ಕಂಡ ಬಿಎಸ್‌ಎನ್‌ಎಲ್‌ Read More »

50 ಕೋಟಿ ಜನರಿಂದ ಪುಣ್ಯಸ್ನಾನ : ಮಹಾಕುಂಭಮೇಳದಲ್ಲಿ ಇತಿಹಾಸ ಸೃಷ್ಟಿ

ಧಾರ್ಮಿಕ, ಸಾಂಸ್ಕೃತಿಕ ಅಥವಾ ಸಾಮಾಜಿಕ ಕಾರ್ಯಕ್ರಮದಲ್ಲಿ ಅತಿದೊಡ್ಡ ಮಾನವ ಸಂಗಮ ಪ್ರಯಾಗ್‌ರಾಜ್‌ : ಉತ್ತರ ಪ್ರದೇಶದ ಪ್ರಯಾಗರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ನಿನ್ನೆಯ ತನಕ ದಾಖಲೆಯ 50 ಕೊಟಿಗೂ ಅಧಿಕ ಜನ ಪುಣ್ಯಸ್ನಾನ ಮಾಡಿದ್ದಾರೆ. ಮಹಾಕುಂಭ ಇನ್ನೂ ನಡೆಯುತ್ತಿದ್ದು, ಮಹಾಶಿವರಾತ್ರಿ ದಿನವಾದ ಫೆ.26ರ ಅಮೃತ ಸ್ನಾನದೊಂದಿಗೆ ಮುಕ್ತಾಯವಾಗಲಿದೆ. ಈಗಾಗಲೇ 50 ಕೋಟಿಗೂ ಅಧಿಕ ಜನ ಪ್ರಯಾಗ್‌ರಾಜ್‌ಗೆ ಆಗಮಿಸಿ ಪುಣ್ಯಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಜನವರಿ 13ರಂದು ಪ್ರಾರಂಭವಾದಾಗಿನಿಂದ ಪ್ರಯಾಗರಾಜ್‌ನಲ್ಲಿ ನಡೆದ ಮಹಾ

50 ಕೋಟಿ ಜನರಿಂದ ಪುಣ್ಯಸ್ನಾನ : ಮಹಾಕುಂಭಮೇಳದಲ್ಲಿ ಇತಿಹಾಸ ಸೃಷ್ಟಿ Read More »

ಬಿಯರ್‌ ಕ್ಯಾನ್‌ನಲ್ಲಿ ಮಹಾತ್ಮ ಗಾಂಧಿ ಚಿತ್ರ : ಭಾರತೀಯರ ಆಕ್ರೋಶ

ಮಾಸ್ಕೊ: ರಷ್ಯಾದ ಮದ್ಯ ತಯಾರಕ ಕಂಪನಿಯೊಂದು ತನ್ನ ಹೊಸ ಬ್ರ್ಯಾಂಡ್‌ನ ಬಿಯರ್‌ ಕ್ಯಾನ್‌ ಮೇಲೆ ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಚಿತ್ರ ಮುದ್ರಿಸಿ ಅವಮಾನ ಮಾಡಿದ್ದು, ಈ ಕುರಿತಾದ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ಭಾರತೀಯರ ವ್ಯಾಪಕ ಆಕ್ರೋಶಕ್ಕೆ ತುತ್ತಾಗಿದೆ. ರಷ್ಯಾದ ಬಿಯರ್ ಕ್ಯಾನ್‌ನಲ್ಲಿ ಮಹಾತ್ಮ ಗಾಂಧಿಯವರ ಚಿತ್ರವನ್ನು ಪ್ರಿಂಟ್‌ ಮಾಡಿಸಿದ್ದು ಸೋಷಿಯಲ್‌ ಮೀಡಿಯಾದಲ್ಲಿ ದೊಡ್ಡ ವಿವಾದವನ್ನು ಹುಟ್ಟುಹಾಕಿದೆ. ವರದಿಗಳ ಪ್ರಕಾರ ರೆವರ್ಟ್ ಬ್ರಾಂಡ್‌ನ ಹೇಜಿ ಐಪಿಎ ಬಿಯರ್ ಕ್ಯಾನ್‌ಗಳಲ್ಲಿ ಗಾಂಧಿಯವರ ಫೋಟೋ ಮತ್ತು ಸಹಿಯನ್ನು ಮುದ್ರಿಸಲಾಗಿದೆ.

ಬಿಯರ್‌ ಕ್ಯಾನ್‌ನಲ್ಲಿ ಮಹಾತ್ಮ ಗಾಂಧಿ ಚಿತ್ರ : ಭಾರತೀಯರ ಆಕ್ರೋಶ Read More »

ಕುಂಭಮೇಳದ ರುದ್ರಾಕ್ಷಿ ಹುಡುಗಿ ಈಗ ಜ್ಯುವೆಲ್ಲರಿ ಬ್ರ್ಯಾಂಡ್‌ ಅಂಬಾಸಿಡರ್‌

ಕೇರಳದ ಚಿನ್ನಾಭರಣ ಮಳಿಗೆಯ ರೂಪದರ್ಶಿಯಾಗಲಿರುವ ಮೊನಾಲಿಸಾ ಪ್ರಯಾಗ್‌ರಾಜ್‌: ಸೋಷಿಯಲ್‌ ಮೀಡಿಯಾ ಎಲ್ಲೋ ಇದ್ದವರನ್ನು ಇನ್ನೆಲ್ಲಿಗೋ ತಲುಪಿಸಿ ಬಿಡುತ್ತದೆ ಎನ್ನುವುದಕ್ಕೆ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ ಮೊನಾಲಿಸಾ ಎಂಬ ಅಲೆಮಾರಿ ಜನಾಂಗದ ಹುಡಗಿಯೇ ಸಾಕ್ಷಿ. ಬೆಕ್ಕಿನ ಕಣ್ಣಿನ ಸಹಜ ಸುಂದರಿ 16ರ ಹರೆಯದ ಮೊನಾಲಿಸಾ ಯೂಟ್ಯೂಬರ್‌ಗಳ ಕಣ್ಣಿಗೆ ಬಿದ್ದು ರಾತ್ರಿ ಬೆಳಗಾಗವುದುರೊಳಗೆ ಸೋಷಿಯಲ್‌ ಮೀಡಿಯಾ ಸೆನ್ಸೇಷನ್‌ ಆಗಿದ್ದು, ಈ ಜನಪ್ರಿಯತೆ ಈಗ ಆಕೆಯ ಬದುಕನ್ನೇ ಬದಲಾಯಿಸಿದೆ. ಕೇರಳದ ಪ್ರಸಿದ್ಧ ಚಿನ್ನಾಭರಣ ಮಳಿಗೆಯ ಬ್ರ್ಯಾಂಡ್‌ ಅಂಬಾಸಿಡರ್‌ ಆಗಿ ಮೊನಾಲಿಸಾ ಆಯ್ಕೆಯಾಗಿದ್ದಾರೆ. ಇದರೊಂದಿಗೆ

ಕುಂಭಮೇಳದ ರುದ್ರಾಕ್ಷಿ ಹುಡುಗಿ ಈಗ ಜ್ಯುವೆಲ್ಲರಿ ಬ್ರ್ಯಾಂಡ್‌ ಅಂಬಾಸಿಡರ್‌ Read More »

ಮುಂಬಯಿ ದಾಳಿಯ ಸೂತ್ರಧಾರ ರಾಣಾ ಭಾರತಕ್ಕೆ ಹಸ್ತಾಂತರ : ಟ್ರಂಪ್‌ ಘೋಷಣೆ

ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ ಸಂದರ್ಭದಲ್ಲಿ ಘೋಷಣೆ ವಾಷಿಂಗ್ಟನ್‌ : ಮುಂಬಯಿ ಮೇಲೆ 2008ರ ನ.26ರಂದು ನಡೆದ ಭೀಕರ ಭಯೋತ್ಪಾದಕ ದಾಳಿಯ ಸೂತ್ರಧಾರ ತಹಾವುರ್‌ ರಾಣಾನನ್ನು ಭಾರತಕ್ಕೆ ಗಡಿಪಾರು ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಒಪ್ಪಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಡೊನಾಲ್ಡ್​ ಟ್ರಂಪ್ ಅಪರಾಧಿ ರಾಣಾನನ್ನು ಭಾರತಕ್ಕೆ ಹಸ್ತಾಂತರ ಮಾಡುವ ಘೋಷಣೆ ಮಾಡಿದ್ದಾರೆ. ಕಳೆದ ತಿಂಗಳು, ಅಮೆರಿಕದ ಸುಪ್ರೀಂ ಕೋರ್ಟ್ ತಹಾವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅನುಮೋದನೆ ನೀಡಿತ್ತು. ಪ್ರಕರಣದಲ್ಲಿ ಅವನ ಶಿಕ್ಷೆಯ ವಿರುದ್ಧ

ಮುಂಬಯಿ ದಾಳಿಯ ಸೂತ್ರಧಾರ ರಾಣಾ ಭಾರತಕ್ಕೆ ಹಸ್ತಾಂತರ : ಟ್ರಂಪ್‌ ಘೋಷಣೆ Read More »

ಅಯೋಧ್ಯೆ ರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ

ಅಯೋಧ್ಯೆ: ರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ (83)  ಲಕ್ಷ್ಮೀದ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಿಧನರಾದರು. ಈ ಕುರಿತು ಸಂಸ್ಥೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದು, ಫೆ. 2 ರಂದು ಮೆದುಳು ಪಾರ್ಶ್ವವಾಯುವಿಗೆ ಒಳಗಾದ ನಂತರ ಆಚಾರ್ಯ ಸತ್ಯೇಂದ್ರ ದಾಸ್‌ ಅವರನ್ನು ನರವಿಜ್ಞಾನ ವಾರ್ಡ್‌ HDU ಗೆ ದಾಖಲಿಸಲಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದು, ನಿಧನರಾಗಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಚಾರ್ಯ ಸತ್ಯೇಂದ್ರ ದಾಸ್‌ ಅವರ ಆರೋಗ್ಯವನ್ನು ಪರಿಶೀಲಿಸಲು SGPGI ಗೆ ಭೇಟಿ

ಅಯೋಧ್ಯೆ ರಾಮ ಜನ್ಮಭೂಮಿ ದೇವಾಲಯದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ Read More »

ಮೋದಿಯವರ ದೃಢ ನಿಶ್ಚಯ, ಅಭಿವೃದ್ಧಿ ಪರ ಅಜೆಂಡಾ ದೆಹಲಿಯಲ್ಲಿ ಬಿಜೆಪಿ ಗೆಲುವಿಗೆ ಕಾರಣ : ಡಿ.ವಿ.ಸದಾನಂದ ಗೌಡ

ದೆಹಲಿಯಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಗೆಲುವು ಸಾಧಿಸಿರುವುದು ಪಕ್ಷದ ಸಕಲ ಮಟ್ಟದ ಶ್ರಮ, ಸಂಘಟನೆ ಮತ್ತು ಜನಪರ ರಾಜಕೀಯದ ಫಲವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯ ಅವರ ದೃಢನಿಶ್ಚಯ, ಅಭಿವೃದ್ಧಿ ಪರ ಆಜಂಡಾ. ಮತ್ತು ಕೇಂದ್ರ ಸರ್ಕಾರದ ಸಮರ್ಥ ಕಾರ್ಯಪದ್ಧತಿ ಜನತೆಯ ವಿಶ್ವಾಸವನ್ನು ಮತ್ತೆ ಗಳಿಸಿತು. ಪಕ್ಷದ ಬೂತ್ ಮಟ್ಟದ ಬಲವಾದ ತಂತ್ರ, ಸುಸಂಘಟಿತ ಪ್ರಚಾರ ಯಂತ್ರ ಮತ್ತು ಜನಸಾಮಾನ್ಯರ ಸಮಸ್ಯೆಗಳನ್ನು ನಿರ್ಧಾರಾತ್ಮಕವಾಗಿ ಪರಿಹರಿಸುವ ನೇತೃತ್ವದ ಫಲವಾಗಿ ದೆಹಲಿಯಲ್ಲಿ ಈ ಜಯ ಸಾಧ್ಯವಾಯಿತು ಎಂದು ಮಾಜಿ ಕೇಂದ್ರ

ಮೋದಿಯವರ ದೃಢ ನಿಶ್ಚಯ, ಅಭಿವೃದ್ಧಿ ಪರ ಅಜೆಂಡಾ ದೆಹಲಿಯಲ್ಲಿ ಬಿಜೆಪಿ ಗೆಲುವಿಗೆ ಕಾರಣ : ಡಿ.ವಿ.ಸದಾನಂದ ಗೌಡ Read More »

ಮಹಾಕುಂಭಮೇಳ : 300 ಕಿ.ಮೀ. ಟ್ರಾಫಿಕ್‌ ಜಾಮ್‌

ಭಕ್ತರ ದಟ್ಟಣೆ ನಿಭಾಯಿಸಲಾಗದೆ ರೈಲು ನಿಲ್ದಾಣವೇ ಬಂದ್‌ ಪ್ರಯಾಗ್‌ರಾಜ್‌ : ಮಹಾಕುಂಭಮೇಳಕ್ಕೆ ನಿರೀಕ್ಷೆಗೂ ಮೀರಿ ಜನ ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಟ್ರಾಫಿಕ್‌ ಜಾಮ್‌ ದಿನನಿತ್ಯ ಉಂಟಾಗುತ್ತಿದೆ. ಭಾನುವಾರ ಸುಮಾರು 300 ಕಿ.ಮೀ. ಟ್ರಾಫಿಕ್‌ ಜಾಮ್‌ ಆಗಿ ಭಕ್ತರು ಇನ್ನಿಲ್ಲದ ಬವಣೆ ಅನುಭವಿಸಿದ್ದಾರೆ. ಅನೇಕರು ಇದನ್ನು ಜಗತ್ತಿನ ಅತಿದೊಡ್ಡ ಟ್ರಾಫಿಕ್‌ ಜಾಮ್‌ ಎಂದು ಬಣ್ಣಿಸಿದ್ದಾರೆ. ಸಂಗಮಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಸಾವಿರಾರು ವಾಹನಗಳು ಸಿಕ್ಕಿಬಿದ್ದಿದ್ದವು. ಸರತಿ ಸಾಲಿನ ಬಾಲ ಸುಮಾರು 300 ಕಿ.ಮೀ. ದೂರವಿತ್ತು ಎಂದು ಹಲವರು ಅನುಭವ ಹಂಚಿಕೊಂಡಿದ್ದಾರೆ.

ಮಹಾಕುಂಭಮೇಳ : 300 ಕಿ.ಮೀ. ಟ್ರಾಫಿಕ್‌ ಜಾಮ್‌ Read More »

error: Content is protected !!
Scroll to Top