ದೇಶ

ರೋಹಿತ್‌ ಶರ್ಮಾ ಟೆಸ್ಟ್‌ನಿಂದ hurt and retired?

ದಿಢೀರ್‌ ವಿದಾಯ ಹೇಳಿದ ಹಿಂದೆ ನಾನಾ ಅನುಮಾನ ನವದೆಹಲಿ: ಭಾರತ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ ನಿನ್ನೆ ರಾತ್ರಿ ದಿಢೀರ್‌ ಎಂದು ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವ ಮೂಲಕ ಅಚ್ಚರಿಯುಂಟು ಮಾಡಿದ್ದಾರೆ. ತಮ್ಮ ನಾಯಕತ್ವದಲ್ಲಿ ಭಾರತಕ್ಕೆ ಎರಡೆರಡು ಐಸಿಸಿ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟಿದ್ದ ರೋಹಿತ್ ಶರ್ಮಾ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್​ ಹಂಚಿಕೊಳ್ಳುವ ಮೂಲಕ ದೀರ್ಘ ಸ್ವರೂಪದ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಆದರೆ ಇದು ರೋಹಿತ್‌ ಶರ್ಮಾ ಇಷ್ಟಪಟ್ಟು ಹೇಳಿದ ಗುಡ್‌ಬೈ ಅಲ್ಲ, ಅವರು hurt […]

ರೋಹಿತ್‌ ಶರ್ಮಾ ಟೆಸ್ಟ್‌ನಿಂದ hurt and retired? Read More »

ಉಗ್ರ ಮಸೂದ್‌ ಅಜರ್‌ನ ಕುಟುಂಬದ ಹತ್ತು ಮಂದಿ ಸಾವು

ಆಪರೇಷನ್‌ ಸಿಂಧೂರ್‌ಗೆ ಉಗ್ರನ ನಾಲ್ವರು ಸಹಚರರೂ ಬಲಿ ನವದೆಹಲಿ: ಭಾರತ ನಡೆಸಿದ ಆಪರೇಷನ್‌ ಸಿಂಧೂರ್‌ನಲ್ಲಿ ಜೈಶ್‌- ಇ-ಮೊಹಮ್ಮದ್‌ ಉಗ್ರ ಸಂಘಟನೆಯ ಮುಖಂಡ ಮಸೂದ್‌ ಅಜರ್‌ನ ಹತ್ತು ಸಂಬಂಧಿಕರು ಮತ್ತು ನಾಲ್ಕು ಮಂದಿ ಸಹಚರರು ಹತ್ಯೆಯಾಗಿದ್ದಾರೆ. ಈ ವಿಚಾರವನ್ನು ಸ್ವತಹ ಮಸೂದ್‌ ಅಜರ್‌ ಹೇಳಿಕೊಂಡಿದ್ದಾನೆಂದು ಬಿಬಿಸಿ ಉರ್ದುವನ್ನು ಉಲ್ಲೇಖಿಸಿ ಇಂಡಿಯಾ ಟುಡೇ ವರದಿ ಮಾಡಿದೆ. ಇವರೆಲ್ಲ ಜೈಶ್‌ನ ಕೇಂದ್ರ ಸ್ಥಾನವಾಗಿದ್ದ ಬಹವಾಲ್ಪುರದಲ್ಲಿದ್ದರು. ರಾತ್ರಿ 1.05ಕ್ಕೆ ಕ್ಷಿಪಣಿ ಅಪ್ಪಳಿಸಿದಾಗ ಉಗ್ರ ನೆಲೆ ನಾಶವಾಗಿದ್ದು, ಅದರಲ್ಲಿದ್ದ ಮಸೂದ್‌ ಅಜರ್‌ನ ಹತ್ತು ಸಂಬಂಧಿಕರು

ಉಗ್ರ ಮಸೂದ್‌ ಅಜರ್‌ನ ಕುಟುಂಬದ ಹತ್ತು ಮಂದಿ ಸಾವು Read More »

ಹಿಂದೂ ಮಹಿಳೆಯರ ಸಿಂಧೂರ ಅಳಿಸಿದವರನ್ನು ಪಾಕ್‌ಗೆ ನುಗ್ಗಿ ಹೊಡೆದಿದ್ದೇವೆ : ಸೇನೆ ಹೇಳಿಕೆ

ಆಪರೇಷನ್‌ ಸಿಂಧೂರ್‌ ಮಾಹಿತಿ ಹಂಚಿಕೊಂಡ ಸೇನೆ ನವದೆಹಲಿ : ಹಿಂದೂ ಮಹಿಳೆಯರ ಕುಂಕುಮ ಅಳಿಸಿದವರನ್ನು ಪಾಕಿಸ್ಥಾನದ​ ಒಳಗೆ ನುಗ್ಗಿ ಹೊಡೆದಿದ್ದೇವೆ, ಇದೇ ಮೊದಲ ಬಾರಿಗೆ ಪಾಕಿಸ್ಥಾನದ ಒಳಗೆ ನುಗ್ಗಿ ಲಷ್ಕರ್​-ಎ-ತೊಯ್ಬಾ, ಹಿಜ್ಬುಲ್ಲಾದ ಪ್ರಮುಖ ಕಚೇರಿಗಳನ್ನು ಧ್ವಂಸ ಮಾಡಲಾಗಿದೆ ಎಂದು ಕರ್ನಲ್ ಸೋಫಿಯಾ ಖುರೇಷಿ ಹಾಗೂ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಜಂಟಿ ಸುದ್ದಿಗೋಷ್ಠಿ ನಡೆಸಿ ಆಪರೇಷನ್‌ ಸಿಂಧೂರ್‌ ಕುರಿತು ಮಾಹಿತಿ ನೀಡಿದರು. ಬುಧವಾರ ಬೆಳಗಿನ ಜಾವ 1.05ರಿಂದ 1.30ರವರೆಗೆ ಕಾರ್ಯಾಚರಣೆ ನಡೆಯಿತು. ಪಹಲ್ಗಾಮ್‌ನಲ್ಲಿ ಸಾವನ್ನಪ್ಪಿದ ಪ್ರವಾಸಿಗರಿಗಾಗಿ ಕಾರ್ಯಾಚರಣೆ

ಹಿಂದೂ ಮಹಿಳೆಯರ ಸಿಂಧೂರ ಅಳಿಸಿದವರನ್ನು ಪಾಕ್‌ಗೆ ನುಗ್ಗಿ ಹೊಡೆದಿದ್ದೇವೆ : ಸೇನೆ ಹೇಳಿಕೆ Read More »

ಭಾರತದ ತಂತ್ರವನ್ನು ಅರಿಯಲು ಸಾಧ್ಯವಾಗದೆ ಬೇಸ್ತುಬಿದ್ದ ಪಾಕಿಸ್ಥಾನ

ಮಾಕ್‌ ಡ್ರಿಲ್‌ ಸೂಚನೆ ನಂಬಿ ಮೋಸ ಹೋದ ಶತ್ರು ರಾಷ್ಟ್ರ ನವದೆಹಲಿ: ಹಿಂದಿನ ಎರಡು ಸರ್ಜಿಕಲ್‌ ಸ್ಟ್ರೈಕ್‌ಗಳಂತೆ ಈ ಸಲವೂ ಪಾಕಿಸ್ಥಾನಕ್ಕೆ ಭಾರತದ ತಂತ್ರವನ್ನು ಅರಿಯಲು ಸಾಧ್ಯವಾಗದೆ ಹೋಯಿತು. ಹೀಗಾಗಿ ಯಾವುದೇ ಪ್ರತಿರೋಧ ತೋರಿಸದೆ ತನ್ನ 9 ಉಗ್ರ ನೆಲೆಗಳನ್ನು ಭಾರತದ ಧ್ವಂಸ ಮಾಡುವುದನ್ನು ನೋಡುತ್ತಾ ಕೈಕಟ್ಟಿ ನಿಲ್ಲಬೇಕಾಯಿತು. ಭಾರತ ಪಹಲ್ಗಾಮ್‌ಗೆ ದಾಳಿಗೆ ಪ್ರತೀಕಾರ ತೀರಿಸದೆ ಬಿಡುವುದಿಲ್ಲ ಎನ್ನುವುದು ಪಾಕಿಸ್ಥಾನಕ್ಕೆ ಸ್ಪಷ್ಟವಾಗಿ ತಿಳಿದಿತ್ತು. ಹೀಗಾಗಿ ಪಾಕಿಸ್ಥಾನದ ಸಚಿವರು ಮಾಧ್ಯಮಗಳ ಮುಂದೆ ದಾಳಿಯಾದರೆ ಬಿಡುವುದಿಲ್ಲ, ನಾವೂ ಪ್ರತಿದಾಳಿ ಮಾಡುತ್ತೇವೆ,

ಭಾರತದ ತಂತ್ರವನ್ನು ಅರಿಯಲು ಸಾಧ್ಯವಾಗದೆ ಬೇಸ್ತುಬಿದ್ದ ಪಾಕಿಸ್ಥಾನ Read More »

ಆಪರೇಷನ್‌ ಸಿಂಧೂರ್‌ : ಉಗ್ರರನ್ನು ತಯಾರಿ ಮಾಡುತ್ತಿದ್ದ ನೆಲೆಗಳು ನಾಶ

ಜಗತ್ತಿಗೆ ಕಂಟಕವಾಗಿದ್ದ ಜೈಶ್‌, ಲಷ್ಕರ್‌, ಹಿಜ್ಬುಲ್‌ಗೆ ಮರ್ಮಾಘಾತ ನವದೆಹಲಿ: ಇಂದು ಮುಂಜಾನೆ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಗೆ ಆಪರೇಷನ್‌ ಸಿಂಧೂರ್‌ ಎಂದು ಹೆಸರಿಟ್ಟದ್ದು ಸ್ವತಹ ಪ್ರಧಾನಿ ನರೇಂದ್ರ ಮೋದಿ ಎಂದು ಮೂಲಗಳು ತಿಳಿಸಿವೆ. ಸಿಂಧೂರ ಭಾರತೀಯರ ನಾರಿಯರ ಪಾಲಿಗೆ ಅತ್ಯಂತ ಪವಿತ್ರವಾದದ್ದು. ಏ.22ರಂದು ಪಹಲ್ಗಾಮ್‌ನಲ್ಲಿ ಅನೇಕ ಹಿಂದೂ ಮಹಿಳೆಯರ ಎದುರೇ ಅವರ ಗಂಡಂದಿರನ್ನು ಗುಂಡಿಕ್ಕಿ ಕೊಂದು ಉಗ್ರರು ಸಿಂಧೂರವನ್ನು ಅಳಿಸಿ ಹಾಕಿದ್ದರು. ಹೀಗಾಗಿ ಆಪರೇಷನ್‌ ಸಿಂಧೂರ್‌ ಹೆಸರಿಡಲಾಗಿತ್ತು. ಕಾರ್ಯಾಚರಣೆಯನ್ನು ಶುರುವಿನಿಂದ ಕೊನೆಯ ತನಕ ವಾರ್‌ ರೂಮ್‌ನಲ್ಲಿ ಕುಳಿತು

ಆಪರೇಷನ್‌ ಸಿಂಧೂರ್‌ : ಉಗ್ರರನ್ನು ತಯಾರಿ ಮಾಡುತ್ತಿದ್ದ ನೆಲೆಗಳು ನಾಶ Read More »

ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ : ಕಾಂಗ್ರೆಸ್‌ ಪೋಸ್ಟ್‌

ಆಪರೇಷನ್‌ ಸಿಂಧೂರ್‌ ಬೆನ್ನಲ್ಲೇ ಮಹಾತ್ಮ ಗಾಂಧೀಜಿ ಹೇಳಿಕೆ ಹಂಚಿಕೊಂಡು ಕಾಂಗ್ರೆಸ್‌ ಎಡವಟ್ಟು ಬೆಂಗಳೂರು: ಇಂದು ಮುಂಜಾನೆ ಭಾರತೀಯ ಯೋಧರು ನಡೆಸಿದ ಆಪರೇಷನ್‌ ಸಿಂಧೂರ್‌ ಸರ್ಜಿಕಲ್‌ ಸ್ಟ್ರೈಕ್‌ಗೆ ಇಡೀ ದೇಶವೇ ಹೆಮ್ಮೆಪಡುತ್ತಿದೆ. ಸೇನೆಗೆ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ. ಈ ನಡುವೆ ಕರ್ನಾಟಕ ಕಾಂಗ್ರೆಸ್‌ ಮಹಾತ್ಮ ಗಾಂಧೀಜಿಯವರ ಸಂದೇಶವನ್ನು ಹಂಚಿಕೊಂಡು ಎಡವಟ್ಟು ಮಾಡಿಕೊಂಡಿದೆ. ಆಪರೇಷನ್‌ ಸಿಂಧೂರ್‌ ಬೆನ್ನಲ್ಲೇ ತನ್ನ ಎಕ್ಸ್‌ ಖಾತೆಯಲ್ಲಿ ರಾಜ್ಯ ಕಾಂಗ್ರೆಸ್‌, ಮಹಾತ್ಮ ಗಾಂಧಿ ಅವರ ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ ಎಂಬ ಸಂದೇಶವನ್ನು

ಮನುಕುಲದ ಅತ್ಯಂತ ಶಕ್ತಿಯುತ ಶಸ್ತ್ರ ಎಂದರೆ ಶಾಂತಿ : ಕಾಂಗ್ರೆಸ್‌ ಪೋಸ್ಟ್‌ Read More »

ಯಾಕೆ ಆಪರೇಷನ್‌ ಸಿಂಧೂರ್‌ ಹೆಸರು?

ಕಾರ್ಯಾಚರಣೆಯ ಹೆಸರಿಗೂ ಇದೆ ಮಹತ್ವ ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ, ಭಾರತೀಯ ಸೇನೆಯು ಮಂಗಳವಾರ ತಡರಾತ್ರಿ ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿತು. ಭಾರತದ ಈ ಪ್ರತೀಕಾರದ ಕ್ರಮಕ್ಕೆ ‘ಆಪರೇಷನ್ ಸಿಂಧೂರ್’ ಎಂದು ಹೆಸರಿಡಲಾಗಿದೆ. ಪಾಕಿಸ್ಥಾನದ ಉಗ್ರರು ಭಾರತದ ಹಿಂದೂ ಮಹಿಳೆಯರ ಕುಂಕುಮ ಅಳಿಸಿ ಕಣ್ಣೀರಿಡುವಂತೆ ಮಾಡಿದ್ದರು ಅದಕ್ಕೆ ಪ್ರತಿಯಾಗಿ ಭಾರತ ಪಾಕಿಸ್ಥಾನದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಅದಕ್ಕೆ ಆಪರೇಷನ್ ಸಿಂಧೂರ್

ಯಾಕೆ ಆಪರೇಷನ್‌ ಸಿಂಧೂರ್‌ ಹೆಸರು? Read More »

ಆಪರೇಷನ್‌ ಸಿಂಧೂರ್‌ : 90ಕ್ಕೂ ಹೆಚ್ಚು ಉಗ್ರರು ಬಲಿ

ತಣಿದ 140 ಕೋಟಿ ಭಾರತೀಯರ ಆಕ್ರೋಶ ; ಯುದ್ಧಕ್ಕೆ ಆಹ್ವಾನ ಎಂದ ಪಾಕಿಸ್ಥಾನ ನವದೆಹಲಿ: ಇಡೀ ದೇಶ ಗಾಢ ನಿದ್ರೆಯಲ್ಲಿರುವ ಹೊತ್ತು ಮೂರೂ ಸೇನಾ ಪಡೆಗಳು ಪಾಕಿಸ್ಥಾನದ 9 ಉಗ್ರ ನೆಲೆಗಳ ಮೇಲೆ ಕರಾರುವಕ್ಕು ದಾಳಿ ಮಾಡಿ 140 ಕೋಟಿ ಭಾರತೀಯರ ಆಕ್ರೋಶದ ಆಗ್ರಹವನ್ನು ಈಡೇರಿಸಿವೆ. ಕಳೆದ ಏ.22ರಂದು ಪಾಕಿಸ್ಥಾನದ ಉಗ್ರರು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಎರಗಿ 26 ಮಂದಿಯನ್ನು ಗುಂಡಿಕ್ಕಿ ಸಾಯಿಸಿದ ಬಳಿಕ ಭಾರತೀಯರ ರಕ್ತ ಕೊತ ಕೊತ ಕುದಿಯುತ್ತಿತ್ತು. ಸೇಡು ತೀರಿಸಲೇ

ಆಪರೇಷನ್‌ ಸಿಂಧೂರ್‌ : 90ಕ್ಕೂ ಹೆಚ್ಚು ಉಗ್ರರು ಬಲಿ Read More »

ಆಪರೇಷನ್‌ ಸಿಂಧೂರ್‌ : ಪಾಕಿಸ್ಥಾನದ 9 ಉಗ್ರ ನೆಲೆಗಳ ಮೇಲೆ ಭಾರತ ದಾಳಿ

ಅನೇಕ ಉಗ್ರರು ಸತ್ತಿರುವುದಾಗಿ ವರದಿ; ಪಾಕಿಸ್ಥಾನದಲ್ಲಿ ಭೀತಿಯ ವಾತಾವರಣ ಮುಂಜಾನೆ 1.45ಕ್ಕೆ ನಡೆದ ವಾಯುದಾಳಿ; ಭಾರತದ ಎಲ್ಲ ಪೈಲಟ್‌ಗಳು ಸುರಕ್ಷಿತವಾಗಿ ವಾಪಸ್‌ ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ಥಾನದಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಬಾಂಬ್‌ ದಾಳಿ ಮಾಡಿ ಸೇಟು ತೀರಿಸಿಕೊಂಡಿದೆ.ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾರತ ತಡರಾತ್ರಿ 1.44ಕ್ಕೆ ದಾಳಿ ನಡೆಸಿದೆ. ರಫೇಲ್‌ ಯುದ್ಧ ವಿಮಾನಗಳನ್ನು ಬಳಸಿ ಪಾಕಿಸ್ಥಾನ ಮತ್ತು ಪಾಕಿಸ್ಥಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಯೋತ್ಪಾದಕ ನೆಲೆಗಳ ಮೇಲೆ ಏರ್‌ ಸ್ಟ್ರೈಕ್‌

ಆಪರೇಷನ್‌ ಸಿಂಧೂರ್‌ : ಪಾಕಿಸ್ಥಾನದ 9 ಉಗ್ರ ನೆಲೆಗಳ ಮೇಲೆ ಭಾರತ ದಾಳಿ Read More »

ಮೇ 18ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ಭೇಟಿ

ಇರುಮುಡಿ ಹೊತ್ತು ಅಯ್ಯಪ್ಪನ ಸನ್ನಿಧಾನಕ್ಕೆ ಹೋಗಲಿರುವ ರಾಷ್ಟ್ರಪತಿ ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಯೊಬ್ಬರು ಶಬರಿಮಲೆಗೆ ಹೋಗುತ್ತಿರುವುದು ಇದೇ ಮೊದಲು. ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವ ಸಾಧ್ಯತೆಯಿದೆ. ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಶಬರಿಮಲೆ ಏರುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಭದ್ರತಾ ಇಲಾಖೆಯು ಅವರು ನೇರವಾಗಿ ಇಳಿಯಲು ಸನ್ನಿಧಾನದಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಯೋಜಿಸಿತ್ತು ಆದರೆ ವಿರೋಧದಿಂದಾಗಿ ಆ ಆಲೋಚನೆಯನ್ನು ಹಿಂತೆಗೆದುಕೊಳ್ಳಲಾಗಿತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ನಿಲಕ್ಕಲ್‌ನಲ್ಲಿ ಹೆಲಿಕಾಪ್ಟರ್‌ನಲ್ಲಿ ಬಂದಿಳಿಯಲಿದ್ದಾರೆ.

ಮೇ 18ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ಭೇಟಿ Read More »

error: Content is protected !!
Scroll to Top