ದೇಶ

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ | ಪುತ್ತೂರಿನ ಬಿಜೆಪಿ ಕಚೇರಿ ಮುಂದೆ ಪಟಾಕಿ ಸಿಡಿಸಿ, ಸಿಹಿ ತಿಂಡಿ ವಿತರಿಸಿ ಹರ್ಷಾಚರಣೆ.

ಪುತ್ತೂರು: ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಫಲಿತಾಂಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ ಹಿನ್ನಲೆಯಲ್ಲಿ ಪುತ್ತೂರು ಬಿಜೆಪಿ ಕಚೇರಿ ಮುಂದೆ ಬಿಜೆಪಿ ಸಂಭ್ರಮಿಸಿತು. ಬಿಜೆಪಿ ಪ್ರಮುಖರು, ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ತಿಂಡಿ ವಿತರಿಸಿ ಹರ್ಷಚಾರಣೆಯನ್ನು ವ್ಯಕ್ತಪಡಿಸಿದರು. ಇದೆ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್, ಗ್ರಾಮಾಂತರ ಮಂಡಲ‌ ಅಧ್ಯಕ್ಷ ದಯಾನಂದ ಉಜಿರೆಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ವಿದ್ಯಾಗೌರಿ, ಸುರೇಶ್ ಆಳ್ವ, ಚಂದ್ರಶೇಖರ ಬಪ್ಪಳಿಗೆ,ಸಾಜ ರಾಧಾಕೃಷ್ಣ ಆಳ್ವ,ಪುರೊಷೋತ್ತಮ ಮುಂಗ್ಲಿಮನೆ,ರಾಜೇಶ್ […]

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ | ಪುತ್ತೂರಿನ ಬಿಜೆಪಿ ಕಚೇರಿ ಮುಂದೆ ಪಟಾಕಿ ಸಿಡಿಸಿ, ಸಿಹಿ ತಿಂಡಿ ವಿತರಿಸಿ ಹರ್ಷಾಚರಣೆ. Read More »

ನಿಮ್ಮೊಳಗೆ ಕಿತ್ತಾಡಿ ನಾಶವಾಗಿ ಹೋಗಿ : ಇಂಡಿ ಮೈತ್ರಿಕೂಟಕ್ಕೆ ಓಮರ್‌ ಅಬ್ದುಲ್ಲ ಲೇವಡಿ

ಸೋಲು-ಗೆಲುವಿನ ನಡುವೆ ಹೊಯ್ದಾಡುತ್ತಿರುವ ಅರವಿಂದ ಕೇಜ್ರಿವಾಲ್‌ ಹೊಸದಿಲ್ಲಿ : ದಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಆಪ್‌ ಪರಾಭವ ಬಹುತೇಕ ನಿಶ್ಚಿತಗೊಂಡಿರುವಂತೆ ಕಾಂಗ್ರೆಸ್‌ ಮತ್ತು ಆಪ್‌ ವಿರುದ್ಧ ಇಂಡಿ ಮೈತ್ರಿಕೂಟದ ಮಿತ್ರಪಕ್ಷಗಳು ಕೆಂಡ ಕಾರತೊಡಗಿವೆ. ಇಂಡಿ ಭಾಗವಾಗಿರುವ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್‌ ಅಬ್ದುಲ್ಲ ಆಪ್‌ ಮೇಲೆ ಸೋಲಿನ ಕರಿಮೋಡ ಕವಿಯುತ್ತಿರುವಂತೆಯೇ ನಿಮ್ಮೊಳಗೆ ಕಿತ್ತಾಡಿ ನಾಶವಾಗಿ ಹೋಗಿ ಎಂದು ಲೇವಡಿ ಮಾಡಿದ್ದಾರೆ.ದಿಲ್ಲಿ ಚುನಾವಣೆಯಲ್ಲಿ ಇಂಡಿ ಮಿತ್ರಪಕ್ಷಗಳಾದ ಕಾಂಗ್ರೆಸ್‌ ಮತ್ತು ಆಪ್‌ ಪ್ರತ್ಯೇಕವಾಗಿ ಸ್ಪರ್ಧಿಸಿದ್ದು ಮಾತ್ರವಲ್ಲದೆ ಪ್ರಚಾರದ ವೇಳೆ ಸಾಕಷ್ಟು ಕಿತ್ತಾಡಿಕೊಂಡಿದ್ದವು. ಈ

ನಿಮ್ಮೊಳಗೆ ಕಿತ್ತಾಡಿ ನಾಶವಾಗಿ ಹೋಗಿ : ಇಂಡಿ ಮೈತ್ರಿಕೂಟಕ್ಕೆ ಓಮರ್‌ ಅಬ್ದುಲ್ಲ ಲೇವಡಿ Read More »

ದಿಲ್ಲಿ ಫಲಿತಾಂಶ : ಆರಂಭಿಕ ಹಂತದಲ್ಲಿ ಬಿಜೆಪಿಗೆ ಮುನ್ನಡೆ

ಹೊಸದಿಲ್ಲಿ : ದಿಲ್ಲಿ ವಿಧಾನಸಭೆ ಚುನಾವಣೆ ಮತ ಎಣಿಕೆ ಪ್ರಾರಂಭವಾಗಿದ್ದು, ಆರಂಭಿಕ ಹಂತದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಆರಂಭದ ಕೆಲವು ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ 40, ಆಪ್‌ 29 ಮತ್ತು ಕಾಂಗ್ರೆಸ್‌ ಬರೀ 1 ಸ್ಥಾನದಲ್ಲಿ ಮುಂದಿರುವುದು ಕಂಡುಬಂದಿದೆ. ಮುಖ್ಯಮಂತ್ರಿ ಆತಿಶಿ ಮರ್ಲೆನಾ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಂಜ್ರಿವಾಲ್‌, ಮಾಜಿ ಸಚಿವ ಮನೀಷ್‌ ಸಿಸೋದಿಯ ಅವರಂಥ ದಿಗ್ಗಜರೇ ಆರಂಭದ ಸುತ್ತುಗಳಲ್ಲಿ ಹಿನ್ನಡೆ ಅನುಭವಿಸಿದ್ದಾರೆ.

ದಿಲ್ಲಿ ಫಲಿತಾಂಶ : ಆರಂಭಿಕ ಹಂತದಲ್ಲಿ ಬಿಜೆಪಿಗೆ ಮುನ್ನಡೆ Read More »

ಇಂದು ದಿಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಮತ ಎಣಿಕೆಗಾಗಿ ವ್ಯಾಪಕ ತಯಾರಿ ಮಾಡಿಕೊಳ್ಳಲಾಗಿದ್ದು, 8 ಗಂಟೆ ಎಣಿಕೆ ಶುರುವಾಗಲಿದೆ. ಮೊದಲು ಅಂಚೆ ಮತಗಳನ್ನು ಎಣಿಸಿ ಬಳಿಕ ಮತಯಂತ್ರಗಳ ಮತಗಳನ್ನು ಎಣಿಸುವುದು ಸಂಪ್ರದಾಯ. ಫೆಬ್ರವರಿ 5ರಂದು ದಿಲ್ಲಿ ವಿಧಾನಸಭೆಯ 3ಲ್ಲ 70 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಶೇ. 60.54 ಮತದಾನವಾಗಿದೆ. ದಿಲ್ಲಿ ಮಟ್ಟಿಗೆ ಇದು ಉತ್ತಮ ಮತದಾನ ಪ್ರಮಾಣವಾಗಿರುವುದರಿಂದ ಫಲಿತಾಂಶ ಏರುಪೇರಾಗುವ ಸಾಧ್ಯತೆ ಇದೆ ಎನ್ನಲಾಗುತ್ತದೆ. ಮತದಾನ ಮುಕ್ತಾಯವಾದ ಬೆನ್ನಿಗೆ ಪ್ರಕಟವಾದ ಬಹುತೇಕ

ಇಂದು ದಿಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ Read More »

ಗಡಿಯಲ್ಲಿ ಗುಂಡಿನ ಚಕಮಕಿ : ಉಗ್ರರ ಜೊತೆಗಿದ್ದ ಪಾಕ್‌ ಸೈನಿಕರೂ ಫಿನಿಷ್‌

7 ಮಂದಿಯನ್ನು ಹೊಡೆದುರುಳಿಸಿದೆ ಭಾರತೀಯ ಸೇನೆ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ ನಡೆದು ಭಾರತೀಯ ಸೇನೆ 7 ಪಾಕ್ ನುಸುಳುಕೋರರನ್ನು ಹೊಡೆದುರುಳಿಸಿದೆ. ಉಗ್ರರು ಹಾಗೂ ಯೋಧರ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದೆ. ಮೃತ ಉಗ್ರರಲ್ಲಿ 2-3 ಪಾಕಿಸ್ಥಾನಿ ಸೈನಿಕರೂ ಇದ್ದಾರೆ ಎನ್ನಲಾಗಿದೆ. ಫೆಬ್ರವರಿ 4-5ರ ಮಧ್ಯರಾತ್ರಿ ಎಲ್‌ಒಸಿಯಲ್ಲಿ ಪಾಕಿಸ್ಥಾನಿ ನುಸುಳುಕೋರರ ಹೊಂಚುದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿತು ಮತ್ತು 2-3 ಪಾಕಿಸ್ಥಾನಿ ಸೇನಾ ಸಿಬ್ಬಂದಿ ಸೇರಿದಂತೆ ಏಳು ಜನರನ್ನು ಗುಂಡಿಕ್ಕಿ ಕೊಂದಿತು

ಗಡಿಯಲ್ಲಿ ಗುಂಡಿನ ಚಕಮಕಿ : ಉಗ್ರರ ಜೊತೆಗಿದ್ದ ಪಾಕ್‌ ಸೈನಿಕರೂ ಫಿನಿಷ್‌ Read More »

ರತನ್‌ ಟಾಟಾ ಆಸ್ತಿಯಲ್ಲಿ ಇದೆ ಮೋಹಿನಿಗೂ ದೊಡ್ಡ ಪಾಲು

ಇಷ್ಟಕ್ಕೂ ಈ ಮೋಹಿನಿ ಯಾರು ಗೊತ್ತೆ? ಮುಂಬಯಿ: ಕಳೆದ ವರ್ಷ ನಿಧನರಾಗಿರುವ ದೇಶದ ಬಹು ಗೌರವಾನ್ವಿತ ಉದ್ಯಮಿ ಟಾಟಾ ಸಮೂಹದ ರತನ್‌ ಟಾಟಾ ತನ್ನ ಆಸ್ತಿಯಲ್ಲಿ ಒಂದು ದೊಡ್ಡ ಪಾಲನ್ನು ಮೋಹಿನಿ ಎಂಬ ವ್ಯಕ್ತಿಗೆ ಕೊಟ್ಟಿದ್ದಾರೆ. ಟಾಟಾ ಬರೆದಿಟ್ಟಿರುವ ಉಯಿಲಿನಲ್ಲಿ ಮೋಹಿನಿ ಎಂಬ ವ್ಯಕ್ತಿಯ ಹೆಸರು ಕಾಣಿಸಿಕೊಂಡ ಬಳಿಕ ಯಾರು ಈ ಮೋಹಿನಿ ಎಂಬ ಕುತೂಹಲ ಕೆರಳಿದೆ. ಈ ಮೋಹಿನಿಗೆ ಟಾಟಾ ಬರೋಬ್ಬರಿ 500 ಕೋಟಿ ಸಂಪತ್ತು ಕೊಟ್ಟಿದ್ದಾರೆ.ಟಾಟಾ ಅವಿವಾಹಿತರಾಗಿದ್ದರು ಎನ್ನುವುದು ಎಲ್ಲರಿಗೂ ಗೊತ್ತೇ ಇದೆ. ಹೀಗಿರುವಾಗ

ರತನ್‌ ಟಾಟಾ ಆಸ್ತಿಯಲ್ಲಿ ಇದೆ ಮೋಹಿನಿಗೂ ದೊಡ್ಡ ಪಾಲು Read More »

“ಪರೀಕ್ಷಾ ಪೆ ಚರ್ಚೆ” ಯಲ್ಲಿ ಈ ವರ್ಷ ಪ್ರಧಾನಿ ಜೊತೆ ಇರಲಿದ್ದಾರೆ ದೀಪಿಕಾ ಪಡುಕೋಣೆ, ಸದ್ಗುರು…

ಫೆ.10ರಂದು ಏಳು ಸಾಧಕರ ಜೊತೆ ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಲಿರುವ ಮೋದಿ ಹೊಸದಿಲ್ಲಿ : ವಾರ್ಷಿಕ ಪರೀಕ್ಷೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ನಡೆಸುವ ಆತ್ಮೀಯ ಸಂವಾದ ಪರೀಕ್ಷಾ ಪೆ ಚರ್ಚೆಗೆ ಈ ವರ್ಷ ಹೊಸ ಆಯಾಮ ದೊರಕಲಿದೆ. ಪ್ರಧಾನಿ ಜೊತೆಗೆ ವಿವಿಧ ಕ್ಷೇತ್ರಗಳ ಏಳು ಸಾಧಕರು ಕೂಡ ಪ್ರಧಾನಿ ಪರೀಕ್ಷೆಯ ಒತ್ತಡವನ್ನು ನಿವಾರಿಸುವ ಕುರಿತು ಮಕ್ಕಳಿಗೆ ಸಲಹೆ ಸೋಚನೆಗಳನ್ನು ಕೊಡಲಿದ್ದಾರೆ. ಈ ವರ್ಷದ ʼಪರೀಕ್ಷಾ ಪೆ ಚರ್ಚಾʼ ಫೆ.10ರಂದು ಹೊಸದಿಲ್ಲಿಯ ಭಾರತ್ ಮಂಟಪದಲ್ಲಿ ನಡೆಯಲಿದೆ.

“ಪರೀಕ್ಷಾ ಪೆ ಚರ್ಚೆ” ಯಲ್ಲಿ ಈ ವರ್ಷ ಪ್ರಧಾನಿ ಜೊತೆ ಇರಲಿದ್ದಾರೆ ದೀಪಿಕಾ ಪಡುಕೋಣೆ, ಸದ್ಗುರು… Read More »

ಪ್ರತಿವರ್ಷ 500 ವಿಶೇಷ ಚೇತನ ಮಹಿಳೆಯರ ವಿವಾಹಕ್ಕೆ ತಲಾ 10 ಲ.ರೂ. ಕೊಡುಗೆ

ಅದಾನಿ ಪುತ್ರ ಜೀತ್‌ ಅದಾನಿಯಿಂದ ವಿಶೇಷ ಚೇತನರಿಗೆ ಮದುವೆ ಉಡುಗೊರೆ ಹೊಸದಿಲ್ಲಿ: ಕೈಗಾರಿಕೋದ್ಯಮಿ ಗೌತಮ್‌ ಅದಾನಿ ಅವರ ಪುತ್ರ ಜೀತ್‌ ಅದಾನಿ ತನ್ನ ಮದುವೆ ಸಂದರ್ಭದಲ್ಲಿ ವಿಶೇಷ ಚೇತನ ಮಹಿಳೆಯರಿಗೆ ದೊಡ್ಡ ಉಡುಗೊರೆಯೊಂದನ್ನು ನೀಡಿದ್ದಾರೆ. ಪ್ರತಿವರ್ಷ 500 ವಿಶೇಷ ಚೇತನ ಮಹಿಳೆಯರ ಮದುವೆಗೆ ತಲಾ 10 ಲ.ರೂ.ಯಂತೆ ದೇಣಿಗೆ ನೀಡುವುದಾಗಿ ಜೀತ್‌ ಅದಾನಿ ವಾಗ್ದಾನ ಮಾಡಿದ್ದಾರೆ. ಜೀತ್‌ ಅದಾನಿ ಅವರು ಫೆ.7ರಂದು ದಿವಾ ಶಾ ಅವರನ್ನು ವಿವಾಹವಾಗಲಿದ್ದಾರೆ. ಜೀತ್ ಮತ್ತು ದಿವಾ ತಮ್ಮ ದಾಂಪತ್ಯ ಜೀವನವನ್ನು ಒಂದು

ಪ್ರತಿವರ್ಷ 500 ವಿಶೇಷ ಚೇತನ ಮಹಿಳೆಯರ ವಿವಾಹಕ್ಕೆ ತಲಾ 10 ಲ.ರೂ. ಕೊಡುಗೆ Read More »

ದಿಲ್ಲಿ : ಆಪ್‌ ಹ್ಯಾಟ್ರಿಕ್‌ ಕನಸು ಭಗ್ನ?

ಸಮೀಕ್ಷೆಗಳೆಲ್ಲ ಬಿಜೆಪಿ ಪರ; ಮತದಾರರ ಮನದಾಳ ನಿಗೂಢ ಹೊಸದಿಲ್ಲಿ : ದಿಲ್ಲಿಯಲ್ಲಿ ಕೊನೆಗೂ ಅರವಿಂದ ಕೇಂಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಾರ್ಟಿ (ಆಪ್‌) ನಾಗಾಲೋಟಕ್ಕೆ ಬ್ರೇಕ್‌ ಹಾಕುವಲ್ಲಿ ಬಿಜೆಪಿ ಯಶಸ್ವಿಯಾಗಲಿದೆಯೇ? ಚುನಾವಣೋತ್ತರ ಸಮೀಕ್ಷೆಗಳನ್ನು ನಂಬುವುದಾದರೆ ಮೂರು ದಶಕಗಳ ಬಳಿಕ ದಿಲ್ಲಿಯಲ್ಲಿ ಬಿಜೆಪಿ ಗೆದ್ದು ಅಧಿಕಾರ ಹಿಡಿಯಲಿದೆ. ಈ ಮೂಲಕ ಹ್ಯಾಟ್ರಿಕ್‌ ಗೆಲುವು ಸಾಧಿಸುವ ಆಪ್‌ ಕನಸು ಭಗ್ನಗೊಳ್ಳಲಿದೆ. ಆದರೆ ಕಳೆದ ಲೋಕಸಭಾ ಚುನಾವಣೆ ಮತ್ತು ನಂತರ ನಡೆದ ಕೆಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಚುನಾವಣೋತ್ತರ ಸಮೀಕ್ಷೆಗಳೆಲ್ಲ ಬುಡಮೇಲಾಗಿರುವುದರಿಂದ

ದಿಲ್ಲಿ : ಆಪ್‌ ಹ್ಯಾಟ್ರಿಕ್‌ ಕನಸು ಭಗ್ನ? Read More »

ಮಹಾಕುಂಭಮೇಳ : ತ್ರಿವೇಣಿ ಸಂಗಮದಲ್ಲಿ ಮುಳುಗೆದ್ದ ಮೋದಿ

ಪ್ರಯಾಗ್‌ರಾಜ್‌ : ಪ್ರಧಾನಿ ನರೇಂದ್ರ ಮೋದಿ ಇಂದು ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪಾಲ್ಗೊಂಡು ಪವಿತ್ರ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಪ್ರಧಾನಿ ಮೋದಿ ಜೊತೆಗಿದ್ದರು. ಬೆಳಗ್ಗೆ ಪ್ರಯಾಗ್‌ರಾಜ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಪ್ರಯಾಗ್‌ರಾಜ್‌ ನದಿ ಬಳಿಗೆ ಸಾಗಿ ದೋಣಿಯಲ್ಲಿ ಹೋಗಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ಕಳೆದ ಜ.13ರಂದು ಪ್ರಾರಂಭವಾಗಿರುವ ಮಹಾಕುಂಭಮೇಳಕ್ಕೆ ದೇಶ-ವಿದೇಶಗಳ ಅನೇಕ ಗಣ್ಯರು ಭೇಟಿ ನೀಡಿದ್ದಾರೆ. ಈಗಾಗಲೇ 38 ಕೋಟಿಗೂ ಅಧಿಕ ಜನ

ಮಹಾಕುಂಭಮೇಳ : ತ್ರಿವೇಣಿ ಸಂಗಮದಲ್ಲಿ ಮುಳುಗೆದ್ದ ಮೋದಿ Read More »

error: Content is protected !!
Scroll to Top