ದೇಶ

ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯನ್ನು ನಿರ್ಧರಿಸುವ ಅಧಿಕಾರ ನನಗಿಲ್ಲ ಎಂದ ಅಣ್ಣಾಮಲೈ

ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆ ವೇಳೆ ತಮಿಳುನಾಡಿನಲ್ಲಿ ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ನಾನು ಬಿಜೆಪಿಯಿಂದ ಹೊರಹೋಗುವುದಾಗಿ ತಮಿಳುನಾಡು ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ ಎಂಬ ಮಾತು ಬಾರಿ ಚರ್ಚೆಗೆ ಗ್ರಾಸವಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ ಅಣ್ಣಾಮಲೈ, ಮೈತ್ರಿ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ನನಗಿಲ್ಲ, ಇದರ ಬಗ್ಗೆ ಪಕ್ಷದ ನಾಯಕತ್ವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. ನಾನು ರಾಜಕೀಯಕ್ಕೆ ಬಂದಿರುವುದು ರಾಜ್ಯದಲ್ಲಿ ಬದಲಾವಣೆ ತರುವ ಉದ್ದೇಶಕ್ಕಾಗಿಯೇ ಹೊರತೂ, ಎಐಎಡಿಎಂಕೆಯ ಕಿರಿಯ ಮಿತ್ರನಾಗಿ ಇರಲು […]

ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯನ್ನು ನಿರ್ಧರಿಸುವ ಅಧಿಕಾರ ನನಗಿಲ್ಲ ಎಂದ ಅಣ್ಣಾಮಲೈ Read More »

ಇಂಟರ್ ನೆಟ್ ನಿರ್ಬಂಧ ವಿಸ್ತರಿಸಿದ ಪಂಜಾಬ್

ಚಂಡೀಗಢ: ಸಿಖ್ ಸಮುದಾಯದ ತೀವ್ರಗಾಮಿ ಹಾಗೂ ಖಲಿಸ್ತಾನ ಬೆಂಬಲಿಗ ಅಮೃತ್ ಪಾಲ್ ಸಿಂಗ್‌ ನ ಸಹಚರರನ್ನು ಬಂಧಿಸಿದ್ದ ಹಿನ್ನೆಲೆಯಲ್ಲಿ ಮಾ.19 ರ ಮಧ್ಯಾಹ್ನ 12 ಗಂಟೆಯವರೆಗೆ ಇಂಟರ್‌ನೆಟ್‌ ನಿರ್ಭಂದಿಸಿತ್ತು, ಈಗ ಸೋಮವಾರದವರೆಗೂ ಮೊಬೈಲ್ ಇಂಟರ್ ನೆಟ್ ಹಾಗೂ ಎಸ್ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಸಿಖ್ ಸಮುದಾಯದ ತೀವ್ರಗಾಮಿ ಹಾಗೂ ಖಲಿಸ್ತಾನ ಬೆಂಬಲಿಗ ಅಮೃತ್ ಪಾಲ್ ಸಿಂಗ್ ಗೆ ಶೋಧಕಾರ್ಯಾಚರಣೆ ಮುಂದುವರೆದಿದೆ.ಪೊಲೀಸ್ ಅಧಿಕಾರಿಗಳು ಶೋಧಕಾರ್ಯಾಚರಣೆ ಬಗ್ಗೆ ಮಾತನಾಡಿದ್ದು, ಶೀಘ್ರವೇ ಬಂಧಿಸಲಾಗುತ್ತದೆ ಎಂದು ಹೇಳಿದ್ದಾರೆ. ಬ್ಯಾಂಕಿಂಗ್ ಸೇವೆಗಳಿಗೆ ಆಸ್ಪತ್ರೆ ಸೇವೆಗಳು ಹಾಗೂ

ಇಂಟರ್ ನೆಟ್ ನಿರ್ಬಂಧ ವಿಸ್ತರಿಸಿದ ಪಂಜಾಬ್ Read More »

ಅಕ್ರಮ ಗಣಿಗಾರಿಕೆ: 5.21 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ

ಬೆಂಗಳೂರು: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಬೆಂಗಳೂರು ವಲಯ ಕಚೇರಿಯು ಮಿನರಲ್ ಎಂಟರ್‌ಪ್ರೈಸಸ್ ಲಿಮಿಟೆಡ್ ಮತ್ತು ಅದರ ಅಧಿಕಾರಿಗಳಿಗೆ ಸೇರಿದ 5.21 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.ಅಧಿಕಾರಿಗಳ ಪ್ರಕಾರ, ಜಪ್ತಿ ಮಾಡಲಾದ ಆಸ್ತಿಗಳು ಆರೋಪಿಗಳ ಒಡೆತನದ ಆರು ಸ್ಥಿರಾಸ್ತಿಗಳ ರೂಪದಲ್ಲಿವೆ. ವಿಶೇಷ ತನಿಖಾ ತಂಡ ಮತ್ತು ಕರ್ನಾಟಕ ಲೋಕಾಯುಕ್ತ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಇ.ಡಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ತನಿಖೆ

ಅಕ್ರಮ ಗಣಿಗಾರಿಕೆ: 5.21 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ Read More »

ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಗಳಿಗೆ ಎಐಸಿಸಿ ಹೆಸರಲ್ಲಿ ಕರೆ ಮಾಡಿ ವಂಚಿಸಲು ಯತ್ನ

ಬೆಂಗಳೂರು : ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಗಳಿಗೆ ಎಐಸಿಸಿ ಹೆಸರಲ್ಲಿ ಕರೆ ಮಾಡಿ ವಂಚಿಸಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ದಿಲ್ಲಿಯ ಎಐಸಿಸಿ ಕಚೇರಿಯಿಂದ ಮಾತಾಡುತ್ತಿದ್ದೇವೆ ಎಂದು ಟಿಕೆಟ್ ಆಕಾಂಕ್ಷಿಗಳಿಗೆ ಕರೆ ಮಾಡಿ ವಂಚಿಸಲು ಯತ್ನಿಸಿದ್ದಾರೆ. 8287309623 ಮೊಬೈಲ್ ನಂಬರ್​​ನಿಂದ ಅಪರಿಚಿತ ವ್ಯಕ್ತಿಗಳು ಆಕಾಂಕ್ಷಿಗಳಿಗೆ ಕರೆ ಮಾಡಿ ಹಣ ಸುಲಿಯಲು ಯತ್ನಿಸಿದ್ದಾರೆ. 2 ಮತ್ತು 3ನೇ ಸ್ತರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ವಂಚಕರು ಕರೆ ಮಾಡಿ ವಿಧಾನಸಭಾ ಚುನಾವಣೆ ಸ್ಪರ್ಧೆ ಸಂಬಂಧ ಪಟ್ಟಿ ಸಿದ್ಧಗೊಂಡಿದೆ. ಚುನಾವಣೆ ಪಟ್ಟಿಯಲ್ಲಿ ನಿಮ್ಮ

ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿಗಳಿಗೆ ಎಐಸಿಸಿ ಹೆಸರಲ್ಲಿ ಕರೆ ಮಾಡಿ ವಂಚಿಸಲು ಯತ್ನ Read More »

ಪ್ರಜಾಪ್ರಭುತ್ವದ ಯಶಸ್ಸಿನಿಂದ ಕೆಲವರಿಗೆ ಮನಸ್ತಾಪ: ರಾಹುಲ್ ಗಾಂಧಿ ವಿರುದ್ಧ ಮೋದಿ ವಾಗ್ದಾಳಿ

ದೆಹಲಿ : ಭಾರತದಲ್ಲಿ ಪ್ರಜಾಪ್ರಭುತ್ವದ ಯಶಸ್ಸಿನಿಂದ ಕೆಲವರು ಕಂಗಾಲಾಗಿದ್ದಾರೆ. ಹೀಗಾಗಿ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಿರಂತರ ದಾಳಿ ನಡೆಸುತ್ತಿದ್ದಾರೆ ಎಂದು ಪ್ರದಾನಿ ನರೇಂದ್ರ ಮೋದಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯನ್ನು ಕುಟುಕಿದ್ದಾರೆ. ಲಂಡನ್‌ನಲ್ಲಿ ರಾಹುಲ್ ಗಾಂಧಿ ಭಾರತದಲ್ಲಿ ಪ್ರಜಾಪ್ರಭುತ್ವ ದಾಳಿಗೆ ತುತ್ತಾಗುತ್ತಿದೆ ಎಂದು ನೀಡಿರುವ ಹೇಳಿಕೆ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಮೋದಿ ತೀಕ್ಷ್ಣ ವಾಗ್ದಾಳಿ ನಡೆಸಿದರು. ದೇಶ ಅತ್ಯಂತ ಆತ್ಮವಿಶ್ವಾಸದಲ್ಲಿ ಇರುವ ಸಂದರ್ಭದಲ್ಲಿ ಇಡೀ ವಿಶ್ವದ ಬೌದ್ಧಿಕ ಸಮುದಾಯ ಭಾರತದ ಬಗ್ಗೆ

ಪ್ರಜಾಪ್ರಭುತ್ವದ ಯಶಸ್ಸಿನಿಂದ ಕೆಲವರಿಗೆ ಮನಸ್ತಾಪ: ರಾಹುಲ್ ಗಾಂಧಿ ವಿರುದ್ಧ ಮೋದಿ ವಾಗ್ದಾಳಿ Read More »

ಪೊದೆಯ ಮಧ್ಯೆ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟ ದೇವರ ವಿಗ್ರಹಗಳು ಪತ್ತೆ

ಮಂಗಳೂರು : ಮಂಗಳೂರಿನ ಪಂಪ್‌ವೆಲ್‌-ಕುದ್ಕೋರಿ ಗುಡ್ಡೆ ಮುಖ್ಯರಸ್ತೆ ಸಮೀಪದ ಪೊದೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟಿದ್ದ ದೇವರ ವಿಗ್ರಹಗಳು ಪತ್ತೆಯಾಗಿವೆ. ಶಾರಾದಾ ದೇವಿಯ 2.5 ಇಂಚು ಉದ್ದದ, ಗಣಪತಿಯ 1 ಇಂಚು ಉದ್ದದ, ಲಕ್ಷ್ಮೀ ದೇವಿಯ 2 ಇಂಚು ಉದ್ದದ, ಹಿತ್ತಾಳೆಯ ನಂದಿಯ 1 ಇಂಚು ಉದ್ದದ, ಕಂಚಿನ ದತ್ತಾತ್ರೇಯ ದೇವರ 6 ಇಂಚು ಉದ್ದ ಹಾಗೂ ಹಿತ್ತಾಳೆಯ ನಾಗದೇವರ 2 ಇಂಚು ಉದ್ದದ ವಿಗ್ರಹಗಳು ಪತ್ತೆಯಾಗಿವೆ. ಈ ವಿಗ್ರಹಗಳ ವಾರಸುದಾರರು ಇದ್ದಲ್ಲಿ ಸೂಕ್ತ ದಾಖಲೆಯೊಂದಿಗೆ ಮಂಗಳೂರು ಪೂರ್ವ

ಪೊದೆಯ ಮಧ್ಯೆ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿಸಿಟ್ಟ ದೇವರ ವಿಗ್ರಹಗಳು ಪತ್ತೆ Read More »

ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದಲ್ಲಿ ಧೂಮಪಾನ ಮಾಡಿದ ಯುವಕನ ಸೆರೆ

ಬೆಂಗಳೂರು : ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದ ವಾಶ್‌ರೂಂನಲ್ಲಿ ಧೂಮಪಾನ ಮಾಡಿದ 20 ವರ್ಷದ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ. ಹದಿನೈದು ದಿನಗಳ ಅವಧಿಯಲ್ಲಿ ಇಂಡಿಗೊ ದಾಖಲಾದ ಎರಡನೇ ಪ್ರಕರಣ ಇದು.ಶುಕ್ರವಾರ ಈ ಘಟನೆ ಸಂಭವಿಸಿದೆ. ಅಸ್ಸಾಂ ಮೂಲದ ಸೆಹೆರಿ ಚೌಧುರಿ ಎಂಬ ಯುವಕ ವಾಶ್‌ರೂಮ್‌ನೊಳಗೆ ಸಿಗರೇಟ್ ಸೇದುತ್ತಿದ್ದ.ಪ್ರಯಾಣಿಕರು ವಾಸನೆ ಮತ್ತು ಹೊಗೆಯನ್ನು ಕಂಡು ಕ್ಯಾಬಿನ್ ಸಿಬ್ಬಂದಿಗೆ ತಿಳಿಸಿದ್ದಾರೆ. ವಿಮಾನ ಲ್ಯಾಂಡ್ ಆದ ನಂತರ, ಫ್ಲೈಟ್ ಕ್ಯಾಪ್ಟನ್ ವಿಮಾನ ನಿಲ್ದಾಣ ಪೊಲೀಸ್

ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ ವಿಮಾನದಲ್ಲಿ ಧೂಮಪಾನ ಮಾಡಿದ ಯುವಕನ ಸೆರೆ Read More »

ತುಳುನಾಡಿನ ವಿಶ್ವಮನ್ನಣೆ ಗಳಿಸಿದ ಕಾಂತಾರ: ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಭಾಷೆಗೆ ಡಬ್‌

ಬೆಂಗಳೂರು : ಎಲ್ಲೆಡೆಯಿಂದ ಅಪಾರ ಮೆಚ್ಚುಗೆ ಪಡೆದ ‘ಕಾಂತಾರ’ ಸಿನಿಮಾ ಇದೀಗ ವಿದೇಶದ ಭಾಷೆಗಳಿಗೆ ಡಬ್‌ ಆಗುತ್ತಿದೆ. ಈ ವಿಚಾರವನ್ನು ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿದೆ. ವಿಶ್ವಸಂಸ್ಥೆಯಲ್ಲಿ ಈ ಚಿತ್ರ ಪ್ರದರ್ಶನ ಕಂಡು ಅಲ್ಲಿದ್ದ ಗಣ್ಯರೂ ಮೆಚ್ಚಿಕೊಂಡಿದ್ದಾರೆ. ಇದೀಗ ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಭಾಷೆಗೆ ಚಿತ್ರವನ್ನು ಡಬ್‌ ಮಾಡಲಾಗುತ್ತಿದೆ. ಈ ಹಿಂದೆ ಇಂಗ್ಲಿಷ್‌ ಗೆ ಡಬ್‌ ಮಾಡಿ ನೆಟ್‌ಫ್ಲಿಕ್ಸ್‌ನಲ್ಲಿ ರಿಲೀಸ್‌ ಮಾಡಲಾಗಿತ್ತು. ಇದೀಗ ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಅವತರಣಿಕೆಯ ‘ಕಾಂತಾರ’ ಚಿತ್ರವನ್ನು ಅಲ್ಲಿನ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು

ತುಳುನಾಡಿನ ವಿಶ್ವಮನ್ನಣೆ ಗಳಿಸಿದ ಕಾಂತಾರ: ಇಟಾಲಿಯನ್‌ ಮತ್ತು ಸ್ಪ್ಯಾನಿಷ್‌ ಭಾಷೆಗೆ ಡಬ್‌ Read More »

ಸಿಎಂ ಯೋಗಿ ಆದಿತ್ಯನಾಥ್ 100 ಸಲ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಇತಿಹಾಸ ಸೃಷ್ಟಿ

ಲಖನೌ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆರು ತಿಂಗಳಲ್ಲಿ 100 ಸಲ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಬೆಳಗ್ಗೆ 100ನೇ ಬಾರಿಗೆ ದೇವಾಲಯಕ್ಕೆ ಹೋಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. 2017ರಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಸರಾಸರಿ 21 ದಿನಗಳಿಗೊಮ್ಮೆ ದೇವಸ್ಥಾನಕ್ಕೆ ಬಂದು ಬಾಬಾ ವಿಶ್ವನಾಥನ ಆರಾಧನೆ ಹಾಗೂ ಷೋಡಶೋಪಚಾರ ವಿಧಾನದ ಮೂಲಕ ರಾಜ್ಯದ ಹಾಗೂ ದೇಶದ ಜನತೆಯ ಕಲ್ಯಾಣಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ. ಸಿಎಂ ಯೋಗಿ ತಿಂಗಳಿಗೊಮ್ಮೆಯಾದರೂ ಕಾಶಿಗೆ ಭೇಟಿ ನೀಡುತ್ತಿದ್ದು, ಪ್ರತಿ

ಸಿಎಂ ಯೋಗಿ ಆದಿತ್ಯನಾಥ್ 100 ಸಲ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಇತಿಹಾಸ ಸೃಷ್ಟಿ Read More »

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರಕಾರ ಆದೇಶ

ಬೆಂಗಳೂರು: ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಟ್ವೀಟ್‌ ಮಾಡಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಕುಂಬಾರ ಸಮುದಾಯದ ಬಹುದಿನಗಳ ಬೇಡಿಕೆಯಾಗಿದ್ದ ಕುಂಬಾರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಕುಂಬಾರ, ಚಕ್ರಸಾಲಿ, ಕುಲಾಲ ಸೇರಿದಂತೆ ಇನ್ನಿತರ ಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 2ಎ ನ ಕ್ರಮ ಸಂಖ್ಯೆ 6ಎ

ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಲು ರಾಜ್ಯ ಸರಕಾರ ಆದೇಶ Read More »

error: Content is protected !!
Scroll to Top