ದೇಶ

ರಾಹುಲ್ ಭಾಷಣದ ಟೀಕೆಗಳಿಗೆ ಸ್ಯಾಮ್ ಪಿತ್ರೋಡಾ ಪ್ರತಿಕ್ರಿಯೆ

ದೆಹಲಿ: ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿಯಾಗುತ್ತಿದೆ ಎಂದು ಬ್ರಿಟನ್ ಭಾಷಣದಲ್ಲಿನ ರಾಹುಲ್ ಗಾಂಧಿ ಹೇಳಿಕೆ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕಾಂಗ್ರೆಸ್ ನ ವಿದೇಶ ಸಂಪರ್ಕ ಮುಖ್ಯಸ್ಥರಾಗಿರುವ ಸ್ಯಾಮ್ ಪಿತ್ರೋಡಾ ರಾಹುಲ್ ಗಾಂಧಿ ಸಮರ್ಥನೆಗೆ ಮುಂದಾಗಿದ್ದಾರೆ. ರಾಹುಲ್ ಗಾಂಧಿ ಅವರು ನೆರವಿವಾಗಿ ಎಂದಿಗೂ ವಿದೇಶಗಳನ್ನು ಆಹ್ವಾನಿಸಿಲ್ಲ. ಅವರು ಸುಳ್ಳು ಆಧಾರಿತ, ತಪ್ಪು ಮಾಹಿತಿಯನ್ನೊಳಗೊಂಡ ಸಂಘಟಿತ ವೈಯಕ್ತಿಕ ದಾಳಿಗಳಿಗೆ ಗುರಿಯಾಗಿದ್ದಾರೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಬ್ರಿಟನ್ ನಲ್ಲಿ ನೀಡಿದ್ದ ಹೇಳಿಕೆ ಸಂಸತ್ ನಲ್ಲೂ ಗದ್ದಲ ಉಂಟುಮಾಡಿತ್ತು. […]

ರಾಹುಲ್ ಭಾಷಣದ ಟೀಕೆಗಳಿಗೆ ಸ್ಯಾಮ್ ಪಿತ್ರೋಡಾ ಪ್ರತಿಕ್ರಿಯೆ Read More »

ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ ಫೋಟೊ: ವರದಿ ಕೇಳಿದ ಬಿಜೆಪಿ ಹೈಕಮಾಂಡ್

ಬೆಂಗಳೂರು: ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಭಾರಿ ಮುಖಭಂಗವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮತ್ತು ರೌಡಿಶೀಟರ್ ಫೈಟರ್ ರವಿ ಎದುರು ನಿಂತು ಪರಸ್ಪರ ಕೈ ಜೋಡಿಸಿ ಶುಭಾಶಯ ಕೋರುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿರೋಧ ಪಕ್ಷಗಳು ಇದನ್ನೇ ದೊಡ್ಡ ವಿಷಯವನ್ನಾಗಿಸಿಕೊಂಡು, ಬಿಜೆಪಿ ಮಾತ್ರವಲ್ಲ ಪ್ರಧಾನಿ ಮೇಲೂ ವಾಗ್ದಾಳಿ ನಡೆಸುತ್ತಿವೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ವೇಳೆ ಪ್ರಧಾನಿ ಅವರನ್ನು ಸ್ವಾಗತಿಸಲು ರೌಡಿ ಶೀಟರ್‌ಗೆ ಅವಕಾಶ ನೀಡಿದ್ದಕ್ಕಾಗಿ ಕರ್ನಾಟಕ ಕಾಂಗ್ರೆಸ್

ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ ಫೋಟೊ: ವರದಿ ಕೇಳಿದ ಬಿಜೆಪಿ ಹೈಕಮಾಂಡ್ Read More »

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ: ಶಿಕ್ಷಣ ಇಲಾಖೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15 ರವರೆಗೆ ನಡೆಯಲಿವೆ. ಚುನಾವಣೆಯ ದಿನಾಂಕಗಳು ಇನ್ನೂ ಪ್ರಕಟವಾಗದಿದ್ದರೂ, ಮೇ 2023 ರ ಮೊದಲು ನಡೆಯುವ ಸಾಧ್ಯತೆಗಳಿವೆ, ಈ ಕುರಿತು ಆತಂಕಗಳು ಎದುರಾಗಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಶಿಕ್ಷಣ ಇಲಾಖೆಯು ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ ಎಂದು ಹೇಳಿದೆ. ಚುನಾವಣೆ ವೇಳೆ ಶಿಕ್ಷಕರನ್ನು ಕರ್ತವ್ಯಕ್ಕೆ ನಿಯೋಜಿಸಲಾಗುತ್ತದೆ. ಇಧರಿಂದ ಪರೀಕ್ಷೆಗಳಿಗೆ ಸಮಸ್ಯೆಗಳಾಗುತ್ತವೆ ಎಂಬ ಆತಂಕಗಳು ಶುರುವಾಗಿದೆ.ಡಿಸೆಂಬರ್ 2022 ರಲ್ಲಿ ಕೊನೆಯ ಬಾರಿಗೆ ಬೂತ್ ಮಟ್ಟದ ಅಧಿಕಾರಿಗಳಂತೆ 60,000 ಶಿಕ್ಷಕರನ್ನು ಚುನಾವಣಾ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಚುನಾವಣೆ ಅಡ್ಡಿಯಾಗುವುದಿಲ್ಲ: ಶಿಕ್ಷಣ ಇಲಾಖೆ Read More »

ಭೋಪಾಲ್ ಅನಿಲ ದುರಂತ: ಕೇಂದ್ರ ಸರ್ಕಾರದ ಹೆಚ್ಚುವರಿ ಪರಿಹಾರ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ದೆಹಲಿ: 1984ರ ಭೋಪಾಲ್ ಅನಿಲ ದುರಂತದ ಸಂತ್ರಸ್ತರಿಗೆ ಅಮೆರಿಕ ಮೂಲದ ಯೂನಿಯನ್ ಕಾರ್ಬೈಡ್ ಕಾರ್ಪೊರೇಶನ್‌ನಿಂದ ಹೆಚ್ಚುವರಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಜಸ್ಟಿಸ್ ಸಂಜಯ್ ಕಿಶನ್ ಕೌಲ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಇತ್ಯರ್ಥದ ಎರಡು ದಶಕಗಳ ನಂತರ ಈ ಸಮಸ್ಯೆಯನ್ನು ತರಲು ಕೇಂದ್ರದಿಂದ ಯಾವುದೇ ತರ್ಕವಿಲ್ಲ ಎಂದು ಹೇಳಿದೆ. ಸಂತ್ರಸ್ತರಿಗಾಗಿ ಆರ್‌ಬಿಐ ಬಳಿ ಇರುವ 50 ಕೋಟಿ ರೂಪಾಯಿಯನ್ನು ಸಂತ್ರಸ್ತರ ಬಾಕಿ ಇರುವ ಕ್ಲೈಮ್‌ಗಳನ್ನು ಪೂರೈಸಲು ಯೂನಿಯನ್

ಭೋಪಾಲ್ ಅನಿಲ ದುರಂತ: ಕೇಂದ್ರ ಸರ್ಕಾರದ ಹೆಚ್ಚುವರಿ ಪರಿಹಾರ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ Read More »

ಎಸ್‌ಎಂವಿಟಿ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಬೆಂಗಳೂರು: ಮಾ. 13 ರ ರಾತ್ರಿ ಎಸ್‌ಎಂವಿಟಿ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಇದು ಎರಡು ತಿಂಗಳಲ್ಲಿ ಪತ್ತೆಯಾದ ಈ ಮಾದರಿಯ ಮೂರನೇ ಪ್ರಕರಣ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಹಿಳೆಯರನ್ನು ಹತ್ತ್ಯೆ ಮಾಡುವ ಸೀರಿಯಲ್‌ ಕಿಲ್ಲರ್‌ ಇದ್ದಾನೆಯೇ ಎನ್ನುವ ಅನುಮಾನ ಕಾಡತೊಡಗಿದೆ. ಎರಡು ತಿಂಗಳ ಹಿಂದೆ ಬೆಂಗಳೂರಿನ ಯಶವಂತಪುರ ಹಾಗೂ ಬೈಯಪ್ಪನಹಳ್ಳಿ ರೈಲ್ವೇ ಸ್ಟೇಷನ್ ಬಳಿ ಡ್ರಮ್‌ ಹಾಗೂ ಚೀಲಗಳಲ್ಲಿ ಮಹಿಳೆಯರ ಶವಗಳು ಪತ್ತೆಯಾಗಿದ್ದವು. ಇದರ ಬೆನ್ನಲ್ಲೇ ಮತ್ತೊಂದು ಮಹಿಳೆಯ ಶವ

ಎಸ್‌ಎಂವಿಟಿ ರೈಲು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ Read More »

ಆಝಾನ್‌ ವಿವಾದ : ಈಶ್ವರಪ್ಪ ಸಮರ್ಥನೆ

ಜನಸಾಮಾನ್ಯರ ಭಾವನೆಯನ್ನು ವ್ಯಕ್ತಪಡಿಸಿದ್ದೇನೆ ಎಂದು ಸ್ಪಷ್ಟನೆ ಮಂಗಳೂರು: ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಆಜಾನ್ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ತಾನು ಸಾಮಾನ್ಯ ಜನರ ಭಾವನೆಗಳನ್ನು ವ್ಯಕ್ತಪಡಿಸಿದ್ದಾಗಿ ಹೇಳಿದ್ದಾರೆ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಆಜಾನ್ ಕೇಳಿದಾಗ ತೊಂದರೆಯಾಗುತ್ತದೆ. ಯಾವುದೇ ಧರ್ಮವನ್ನು ಖಂಡಿಸುವ ಉದ್ದೇಶವಿಲ್ಲ. ಆದರೆ ಯಾರಾದರೂ ಸಾಮಾನ್ಯ ಜನರ ಭಾವನೆಗಳಿಗೆ ಧ್ವನಿ ನೀಡಬೇಕು. ಇದು ಧರ್ಮವನ್ನು ಖಂಡಿಸುವುದಲ್ಲ ಎಂದು ಹೇಳಿದ್ದಾರೆ.ಮಂಗಳೂರಿನ ಕಾವೂರಿನಲ್ಲಿ ಭಾನುವಾರ ನಡೆದ ಬಿಜೆಪಿ ಸಮಾವೇಶದ ವೇಳೆ ಆಝಾನ್‌ ಮೊಳಗಿದಾಗ

ಆಝಾನ್‌ ವಿವಾದ : ಈಶ್ವರಪ್ಪ ಸಮರ್ಥನೆ Read More »

13 ಕೆಜಿ ಗಾಂಜಾ ವಶ : ಇಬ್ಬರ ಬಂಧನ

ಮಂಗಳೂರು : ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ನಿಷೇದಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ದಸ್ತಗಿರಿ ಮಾಡಿ 13 ಕೆ ಜಿ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ಸ್ವಾಧೀನಪಡಿಸಿಕೊಂಡಿರುತ್ತಾರೆ. ಶನಿವಾರ ಸಂಜೆ ವೇಳೆ ಕಂಕನಾಡಿ ರೈಲ್ವೆ ಸ್ಟೇಷನ್‌ನ ಅಳಪೆ ಪರಿಸರದಲ್ಲಿ ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ ರವರ ನೇತೃತ್ವದ ಸಿಸಿಬಿ ಪೊಲೀಸರು ಗಾಂಜಾವನ್ನು ಹೊಂದಿದ್ದ ಪಾಣೆಮಂಗಳೂರಿನ ಅಬ್ದುಲ್ ಸಾಧಿಕ್ (35), ಮತ್ತು

13 ಕೆಜಿ ಗಾಂಜಾ ವಶ : ಇಬ್ಬರ ಬಂಧನ Read More »

ಖಾಸಗಿ- ಸರಕಾರಿ ಸಹಭಾಗಿತ್ವದಲ್ಲಿ 11 ಮೆಡಿಕಲ್‌ ಕಾಲೇಜು ಸ್ಥಾಪನೆ

ಬೆಂಗಳೂರು : ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ (PPP) ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿ ರಾಜ್ಯದಲ್ಲಿ 11 ಮೆಡಿಕಲ್​ ಕಾಲೇಜುಸ್ಥಾಪನೆಗೆ ಸರಕಾರ ನಿರ್ಧರಿಸಿದೆ. ದಕ್ಷಿಣ ಕನ್ನಡ, ಉಡುಪಿ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ, ಕೋಲಾರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ವಿಜಯನಗರ ಮತ್ತು ರಾಮನಗರದಲ್ಲಿ ಪ್ರಾರಂಭವಾಗಲಿವೆ. ರಾಜ್ಯ ಸರ್ಕಾರ ಈಗಾಗಲೆ ಎರಡು ವೈದ್ಯಕೀಯ ಕಾಲೇಜುಗಳಿಗಾಗಿ ನಿವೇಶನ ಹಂಚಿಕೆ ಮತ್ತು ಇತರ ಪ್ರಕ್ರಿಯೆಗಳನ್ನು ಮುಗಿಸಿದೆ. ಈ ಎರಡು ವೈದ್ಯಕೀಯ ಕಾಲೇಜುಗಳು 2024-25ರ ವೇಳೆಗೆ ಬೆಂಗಳೂರು ಗ್ರಾಮಾಂತರ ಮತ್ತು ದಾವಣಗೆರೆಯಲ್ಲಿ

ಖಾಸಗಿ- ಸರಕಾರಿ ಸಹಭಾಗಿತ್ವದಲ್ಲಿ 11 ಮೆಡಿಕಲ್‌ ಕಾಲೇಜು ಸ್ಥಾಪನೆ Read More »

ಐಟಿ, ಇ.ಡಿ. ದಾಳಿಗೆ ದೇವೇಗೌಡ ಹಾಗೂ ಕುಮಾರಸ್ವಾಮಿ ಕಾರಣ: ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ನನ್ನ ಮೇಲೆ ಐಟಿ, ಇ.ಡಿ. ದಾಳಿ ನಡೆಯಲು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಾರಣ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಡಿಕೆಶಿ, ದೇವೇಗೌಡ ಮತ್ತು ಕುಮಾರಸ್ವಾಮಿ ಹಣ, ಆಸ್ತಿ ಮಾಡಿಲ್ವಾ? ದೇವೇಗೌಡರನ್ನು ಪ್ರಧಾನಿ ಮಾಡಿದ್ದು, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಕಾಂಗ್ರೆಸ್‌ ಪಕ್ಷ. ಇವೆಲ್ಲಾ ಅವರಿಗೆ ನೆನಪಾಗುತ್ತಿಲ್ಲ. ಧರ್ಮಸಿಂಗ್‌ ಮುಖ್ಯಮಂತ್ರಿ ಆಗಿದ್ದಾಗ ನನ್ನನ್ನು ಸಂಪುಟದಿಂದ ಹೊರಗಿಡಲು ಜೆಡಿಎಸ್‌ ವರಿಷ್ಠರೇ ಕಾರಣ. ದೇವೇಗೌಡರು ಪ್ರಧಾನಿಯಾದ ವೇಳೆ ಜೆಡಿಎಸ್‌ ಪಕ್ಷದಿಂದ

ಐಟಿ, ಇ.ಡಿ. ದಾಳಿಗೆ ದೇವೇಗೌಡ ಹಾಗೂ ಕುಮಾರಸ್ವಾಮಿ ಕಾರಣ: ಡಿ.ಕೆ.ಶಿವಕುಮಾರ್‌ ಆರೋಪ Read More »

ಭಾರಿ ಉಷ್ಣತೆಯಿಂದ ಈ ವರ್ಷ ಬೇಗ ಶುರುವಾಗಲಿದೆ ಮಳೆಗಾಲ

ಬೆಂಗಳೂರು : ಈ ಬೇಸಿಗೆಯ ಆರಂಭದಲ್ಲೇ ಅನುಭವಕ್ಕೆ ಬರುತ್ತಿರುವ ವಿಪರೀತ ಸೆಖೆಗೂ ಮುಂದಿನ ಮಳೆಗಾಲಕ್ಕೂ ನಂಟು ಇದೆ ಎನ್ನುತ್ತಾರೆ ಹವಾಮಾನ ತಜ್ಞರು. ಉಷ್ಣತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ವರ್ಷ ಕರ್ನಾಟಕದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ವಿಪರೀತ ಉಷ್ಣತೆಯ ಪರಿಣಾಮವಾಗಿ ರಾಜ್ಯದ ಉತ್ತರ ಕರ್ನಾಟಕ ಸೇರಿದಂತೆ ದೇಶದ ನಾನಾ ಭಾಗದಲ್ಲಿ ಈ ವರ್ಷ ಅವಧಿಗೂ ಮುನ್ನವೇ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆಯಿದೆ ಎಂದು

ಭಾರಿ ಉಷ್ಣತೆಯಿಂದ ಈ ವರ್ಷ ಬೇಗ ಶುರುವಾಗಲಿದೆ ಮಳೆಗಾಲ Read More »

error: Content is protected !!
Scroll to Top