ದೇಶ

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು : ಮಾರ್ಚ್ 14ಕ್ಕೆ‌ ವಿಚಾರಣೆ ಮುಂದೂಡಿಕೆ

ಬೆಂಗಳೂರು : 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ತಡೆ ನೀಡಲು ಹೈಕೋರ್ಟ್ ನಕಾರವೆತ್ತಿದ್ದು, ಪ್ರಕರಣದ ವಿಚಾರಣೆಯನ್ನು ಮಾರ್ಚ್ 14ಕ್ಕೆ ಮುಂದೂಡಿದೆ. ಪರೀಕ್ಷೆa ರದ್ದು ಹಿನ್ನೆಲೆ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ನಕಾರವೆತ್ತಿದ್ದು, ಮಾರ್ಚ್ 14ಕ್ಕೆ‌ ಹೈಕೋರ್ಟ್ ವಿಚಾರಣೆ ಮುಂದೂಡಿದೆ. ಸರ್ಕಾರದ ನಿರ್ಧಾರದ ವಿರುದ್ಧ ರುಪ್ಸಾ ಅರ್ಜಿಈ ಶೈಕ್ಷಣಿಕ ವರ್ಷದಿಂದ 5 ಮತ್ತು […]

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು : ಮಾರ್ಚ್ 14ಕ್ಕೆ‌ ವಿಚಾರಣೆ ಮುಂದೂಡಿಕೆ Read More »

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ : ಪ್ರಾಂಶುಪಾಲೆ ಸೇರಿ ಐವರ ಬಂಧನ

ಹಳೆಬೀಡು ವಸತಿ ಶಾಲೆಯಲ್ಲಿ ನಡೆದ ಕೃತ್ಯ ಹಾಸನ : ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೇಲೂರು ತಾಲೂಕಿನ ವಸತಿ ಶಾಲೆಯ ಪ್ರಾಂಶುಪಾಲೆ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೇಲೆ ಕೆಲ ತಿಂಗಳುಗಳಿಂದ ಲೈಂಗಿಕ ದೌರ್ಜನ್ಯ ಎಸಗಲಾಗುತ್ತಿತ್ತು.ಪುನೀತ್ (28), ಶಿಕ್ಷಕ ಶಿವಯ್ಯ (32), ಪ್ರಾಂಶುಪಾಲೆ ಗೀತಾಬಾಯಿ (38), ಭದ್ರತಾ ಸಿಬ್ಬಂದಿ ಶ್ರುತಿ ಬಿ.ಸಿ. (30), ಶಿಕ್ಷಕ ವಿಜಯಕುಮಾರ (39) ಬಂಧಿತ ಆರೋಪಿಗಳು. ಕೆಲವು ತಿಂಗಳುಗಳಿಂದ ವಸತಿ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ : ಪ್ರಾಂಶುಪಾಲೆ ಸೇರಿ ಐವರ ಬಂಧನ Read More »

ಮಾ.12 ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಮೋದಿಯಿಂದ ಲೋಕಾರ್ಪಣೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ ವೇ ಲೋಕಾರ್ಪಣೆ ಸೇರಿಸಿದಂತೆ ಸುಮಾರು 16 ಸಾವಿರ ಕೋಟಿ ರೂ. ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ರಾಜ್ಯಕ್ಕೆ ಆಗಮಿಸಲಿದ್ದಾರೆ.ಭಾನುವಾರ ಮಧ್ಯಾಹ್ನ 12 ಗಂಟೆಗೆ ಮೋದಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಮಧ್ಯಾಹ್ನ 3:15ಕ್ಕೆ ಹುಬ್ಬಳ್ಳಿ-ಧಾರವಾಡದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವರ್ಷದ ಆರಂಭದಿಂದ ರಾಜ್ಯ ಪ್ರವಾಸದಲ್ಲಿರುವ

ಮಾ.12 ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಮೋದಿಯಿಂದ ಲೋಕಾರ್ಪಣೆ Read More »

ಮರುಭೂಮಿಯನ್ನೂ ಮೀರಿಸಿ ಹೆಚ್ಚುತ್ತಿರುವ ಕರಾವಳಿಯ ತಾಪಮಾನ

ಕೇರಳದಲ್ಲಿ 54 ಡಿಗ್ರಿ ಸೆಲ್ಸಿಯಸ್‌ ದಾಖಲು ತಿರುವನಂತಪುರಂ : ಕರಾವಳಿ ರಾಜ್ಯಗಳಾದ ಕೇರಳ ಮತ್ತು ಕರ್ನಾಟಕದಲ್ಲಿ ತಾಪಮಾನ ಮರುಭೂಮಿಯನ್ನೂ ಮೀರಿಸಿ ಹೆಚ್ಚುತ್ತಿದೆ. ನಿನ್ನೆ ಕೇರಳದಲ್ಲಿ ತಾಪಮಾನ ಹೊಸ ದಾಖಲೆ ಬರೆದಿದ್ದು, ಕೋಝಿಕ್ಕೋಡ್ ಮತ್ತು ತಿರುವನಂತಪುರಂನಲ್ಲಿ ಗರಿಷ್ಠ ಉಷ್ಣಾಂಶ 54 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ. ಇದು ರಾಜಸ್ಥಾನದ ಮರುಭೂಮಿಯಲ್ಲಿ ಕಡುಬೇಸಿಗೆಯಲ್ಲಿ ದಾಖಲಾಗುವ ತಾಪಮಾನದ ಆಸುಪಾಸಿನಲ್ಲಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಕೆಎಸ್‌ಡಿಎಂಎ) ಗುರುವಾರ ದಿನನಿತ್ಯದ ಶಾಖ ಸೂಚ್ಯಂಕವನ್ನು ಬಿಡುಗಡೆ ಮಾಡಿದ್ದು, ಉಷ್ಣಗಾಳಿ ಬೀಸುವ ಸಾಧ್ಯತೆ ಇದೆ ಎಚ್ಚರಿಕೆ ನೀಡಿದೆ.ಗುರುವಾರ

ಮರುಭೂಮಿಯನ್ನೂ ಮೀರಿಸಿ ಹೆಚ್ಚುತ್ತಿರುವ ಕರಾವಳಿಯ ತಾಪಮಾನ Read More »

ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯ ರಚನೆ

ಬೊಮ್ಮಾಯಿ ಅಧ್ಯಕ್ಷ : ಯಡಿಯೂರಪ್ಪ, ಕಟೀಲ್‌ ಸದಸ್ಯರು ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷರಾಗಿರುವ ಚುನಾವಣಾ ಪ್ರಚಾರ ಸಮಿತಿಯನ್ನು ಬಿಜೆಪಿ ರಚಿಸಿದೆ. ಈ ಸಮಿತಿಯಲ್ಲಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರಿಗೂ ಸ್ಥಾನವಿದ್ದು, ಸದಸ್ಯರಾಗಿ ಅವರ ಹೆಸರನ್ನು ಸೇರಿಸಲಾಗಿದೆ.ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದ ಡಿ.ವಿ. ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಚಿವೆ ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ, ಸಚಿವ

ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯ ರಚನೆ Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ ಹೃದಯಾಘಾತದಿಂದ ನಿಧನ

ಸಂಸದ, ಶಾಸಕರಾಗಿ ಸೇವೆ ಸಲ್ಲಿಸಿದ್ದ ಜನನಾಯಕ ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್. ಧ್ರುವ ನಾರಾಯಣ ಅವರು ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಕೂಡಲೇ ಅವರನ್ನು ಮೈಸೂರಿನ ಡಿಆರ್​ಎಂಎಸ್​​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.ಶನಿವಾರ ಬೆಳಗ್ಗೆ 6.30ರ ವೇಳೆಗೆ ಧ್ರುವನಾರಾಯಣ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ, ಕೂಡಲೇ ಅವರು ಡ್ರೈವರ್‌ಗೆ ಕರೆ ಮಾಡಿದ್ದಾರೆ, ಅವರನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ ಹೃದಯಾಘಾತದಿಂದ ನಿಧನ Read More »

ಭಾರತೀಯ ವಾಯುಪಡೆ ಯುದ್ಧ ಘಟಕದ ಮೊದಲ ಗ್ರೂಪ್ ಕ್ಯಾಪ್ಟನ್ ಆಗಿ ಶಾಲಿಜಾ ಧಾಮಿ

ಯುದ್ಧ ವಿಮಾನವನ್ನು ಏಕಾಂಗಿಯಾಗಿ ಹಾರಿಸಿದ ಮೊದಲ ಭಾರತೀಯ ಮಹಿಳಾ ಪೈಲಟ್ ದೆಹಲಿ: ಕ್ಯಾಪ್ಟನ್ ಶಾಲಿಜಾ ಧಾಮಿ ಅವರನ್ನು ಭಾರತೀಯ ವಾಯುಪಡೆಯು ಗ್ರೂಪ್ ಕ್ಯಾಪ್ಟನ್ ಆಗಿ ಪಶ್ಚಿಮ ವಲಯದಲ್ಲಿನ ಮುಂಚೂಣಿ ಯುದ್ಧ ಘಟಕದ ಕಮಾಂಡರ್‌ ಆಗಿ ನೇಮಕ ಮಾಡಲಾಗಿದೆ. ಆ ಮೂಲಕ ಐಎಎಫ್‌ನ ಯುದ್ಧ ಘಟಕವನ್ನು ಮುನ್ನಡೆಸಲಿರುವ ಮೊದಲ ಮಹಿಳೆ ಎನ್ನುವ ಹಿರಿಮೆಗೆ ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರು ಪಾತ್ರರಾಗಿದ್ದಾರೆ. 2003ರಲ್ಲಿ ಹೆಲಿಕಾಪ್ಟರ್ ಪೈಲಟ್ ಆಗಿ ಗ್ರೂಪ್ ಕ್ಯಾಪ್ಟನ್ ಶಾಲಿಜಾ ಧಾಮಿ ಅವರು ಐಎಎಫ್ ಸೇರ್ಪಡೆಯಾಗಿದ್ದರು. ಇವರು

ಭಾರತೀಯ ವಾಯುಪಡೆ ಯುದ್ಧ ಘಟಕದ ಮೊದಲ ಗ್ರೂಪ್ ಕ್ಯಾಪ್ಟನ್ ಆಗಿ ಶಾಲಿಜಾ ಧಾಮಿ Read More »

ಮಾಂಸಕ್ಕಾಗಿ ವಧಿಸಲು ತಂದವನನ್ನೇ ಕೊಂಬಿನಿಂದ ತಿವಿದು ಕೊಂದ ಕೋಣ

ಪೇಟೆಯಲ್ಲಿ ದಾಂಧಲೆ ಎಬ್ಬಿಸಿದ ಕೋಣನಿಂದ ಹಲವರಿಗೆ ಗಾಯ ಕಾಸರಗೋಡು : ವಧಿಸಲು ಒಯ್ಯುತ್ತಿದ್ದವನನ್ನು ಕೋಣ ಕೊಂಬಿನಿಂದ ತಿವಿದು ಕೊಂದಿರುವ ಘಟನೆಯೊಂದು ಕಾಸರಗೋಡು ಸಮೀಪದ ಮೊಗ್ರಾಲ್‌ ಪುತ್ತೂರು ಎಂಬಲ್ಲಿ ಸಂಭವಿಸಿದೆ. ಈ ಘಟನೆಯ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಅಗಿದೆ.ಲಾರಿಯಿಂದ ಇಳಿಸುತ್ತಿರುವಾಗ ರೊಚ್ಚಿಗೆದ್ದ ಕೋಣ ಹಗ್ಗ ಕಡಿದುಕೊಂಡು ಯುವಕನನ್ನು ಒಂದಷ್ಟು ದೂರ ಎಳೆದುಕೊಂಡು ಹೋಗಿ ಕೊಂಬಿನಿಂದ ತಿವಿದಿದೆ. ಗಂಭೀರವಾಗಿ ಗಾಯಗೊಂಡ ಯುವಕ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾನೆ. ಮೃತ ಯುವಕನನ್ನು ಮೂಲತಃ ಕರ್ನಾಟಕದ ಚಿತ್ರದುರ್ಗದ ಸಾದಿಕ್‌ (22) ಎಂದು ಗುರುತಿಸಲಾಗಿದೆ.

ಮಾಂಸಕ್ಕಾಗಿ ವಧಿಸಲು ತಂದವನನ್ನೇ ಕೊಂಬಿನಿಂದ ತಿವಿದು ಕೊಂದ ಕೋಣ Read More »

ಮರುಮದುವೆಯಾದ ಮುಸ್ಲಿಂ ದಂಪತಿ ವಿರುದ್ಧ ಫತ್ವಾ

ಕೇರಳದಲ್ಲೊಂದು ವಿಚಿತ್ರ ಪ್ರಕರಣ ತಿರುವನಂತಪುರಂ : ಕೇರಳದ ವಕೀಲರೊಬ್ಬರು ತನ್ನ ಪತ್ನಿಯನ್ನೇ ಮರು ವಿವಾಹವಾಗಿದ್ದಾರೆ. ಆದರೆ ಮುಸ್ಲಿಂ ಧರ್ಮ ಕ್ಕೆ ಸೇರಿದ ವಕೀಲರ ಈ ನಡೆ ಕಟ್ಟರ್‌ ಧರ್ಮಗುರುಗಳ ಕೆಂಗಣ್ಣಿಗೆ ಗುರಿಯಾಗಿದೆ. ಅವರೀಗ ವಕೀಲನಿಗೆ ಫತ್ವಾ ಹೊರಡಿಸಿದ್ದಾರೆ.ವಿಶೇಷ ವಿವಾಹ ಕಾಯ್ದೆಯಡಿ ಸಿನೆಮಾ ನಟರೂ ಆಗಿರುವ ಸಿ. ಶುಕುರ್ ಎಂಬವರು ತನ್ನ ಪತ್ನಿಯನ್ನೇ ಮರುವಿವಾಹವಾಗಿದ್ದರು. ಈಗ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ. ಹೀಗಾಗಿ ಪೊಲೀಸರು ಅವರಿಗೆ ಭದ್ರತೆ ಒದಗಿಸಿದ್ದಾರೆ. ಶುಕುರ್ ಹಾಗೂ ಅವರ ಕುಟುಂಬ ಸದಸ್ಯರಿಗೆ ಕೆಲವು ಸಂಘಟನೆಗಳಿಂದ

ಮರುಮದುವೆಯಾದ ಮುಸ್ಲಿಂ ದಂಪತಿ ವಿರುದ್ಧ ಫತ್ವಾ Read More »

ತೀವ್ರ ಗತಿಯಲ್ಲಿ ಹರಡುತ್ತಿರುವ ಎಚ್‌3ಎನ್‌2 ವೈರಸ್‌ಗೆ ರಾಜ್ಯದಲ್ಲಿ ಮೊದಲ ಬಲಿ

ಹಾಸನದ ವ್ಯಕ್ತಿ ಸಾವಿಗೀಡಾದ ಬಳಿಕ ಎಚ್ಚರಿಕೆ ಗಂಟೆ ಬೆಂಗಳೂರು : ರಾಜ್ಯದಲ್ಲಿ ತೀವ್ರ ಗತಿಯಲ್ಲಿ ಹರಡುತ್ತಿರುವ ಎಚ್‌3ಎನ್‌2 ವೈರಸ್‌ಗೆ ಹಾಸನ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ. ಇದು ರಾಜ್ಯದಲ್ಲಿ ಎಚ್‌3ಎನ್‌2 ವೈರಸ್‌ನಿಂದ ಸಂಬವಿಸಿದ ಮೊದಲ ಸಾವು.ಮೃತ ವ್ಯಕ್ತಿಯ ಗ್ರಾಮದ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಆರೋಗ್ಯ ತಪಾಸಣೆ ಭರದಿಂದ ಸಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆ ತಪಾಸಣೆ ನಡೆಸಲು ಮುಂದಾಗಿದೆ. ಅನಾರೋಗ್ಯ ಪೀಡಿತ ಜನರು ಹಾಗೂ ವೃದ್ಧರನ್ನು ಕೂಡ ಪರೀಕ್ಷೆ ನಡೆಸಲಾಗಿದೆ ಎಂದು ಡಿಎಚ್‌ಓ ಡಾ.ಶಿವಸ್ವಾಮಿ ಮಾಹಿತಿ ನೀಡಿದ್ದಾರೆ.ಎಚ್‌3ಎನ್‌2 ವೈರಸ್‌ ಸೋಂಕಿತರಲ್ಲಿ

ತೀವ್ರ ಗತಿಯಲ್ಲಿ ಹರಡುತ್ತಿರುವ ಎಚ್‌3ಎನ್‌2 ವೈರಸ್‌ಗೆ ರಾಜ್ಯದಲ್ಲಿ ಮೊದಲ ಬಲಿ Read More »

error: Content is protected !!
Scroll to Top