ದೇಶ

ವಿಧಾನಸಭಾ ಚುನಾವಣೆ: ಮತ ಹಾಕುವಂತೆ ಸೀರೆಗಳ ಉಡುಗೊರೆ

ಸೀರೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಜನತೆ ಚಿಕ್ಕಮಗಳೂರು: ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ಉಡುಗೊರೆಯಾಗಿ ನೀಡಿದ್ದ ಸೀರೆಗಳನ್ನು ಸುಟ್ಟು ಹಾಕಿರುವ ಘಟನೆ ಚಿಕ್ಕಮಗಳೂರಿನ ಭಕ್ತರಹಳ್ಳಿ ಮತ್ತು ಮಲ್ಲೇನಹಳ್ಳಿ ಗ್ರಾಮದಲ್ಲಿ ಮಾ.7 ಮಂಗಳವಾರ ನಡೆದಿದೆ. ಸೀರೆ ಹಂಚುತ್ತಿದ್ದ ಬಿಜೆಪಿ ಕಾರ್ಯಕರ್ತರ ಸಮ್ಮುಖದಲ್ಲಿ ಈ ಘಟನೆ ನಡೆದಿದೆ. ಕಳೆದ ಐದು ವರ್ಷಗಳಿಂದ ತಮ್ಮ ಸಮಸ್ಯೆಗಳಿಗೆ ಕಿವಿಕೊಡದೆ ಕಣ್ಣು ಮುಚ್ಚಿ ಕುಳಿತು, ಚುನಾವಣೆ ಬಂದ ಕೂಡಲೇ ಉಡುಗೊರೆ ನೀಡಲು ಮುಂದಾದ ಜನಪ್ರತಿನಿಧಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸೀರೆಗಳಿಗೆ ಬೆಂಕಿ ಹಚ್ಚಿದ ಯುವಕ, […]

ವಿಧಾನಸಭಾ ಚುನಾವಣೆ: ಮತ ಹಾಕುವಂತೆ ಸೀರೆಗಳ ಉಡುಗೊರೆ Read More »

ಹಳೆಯ ಪಿಂಚಣಿ ಯೋಜನೆ: ಅಧ್ಯಯನ ನಡೆಸಲು ಶೀಘ್ರದಲ್ಲೇ ರಾಜಸ್ಥಾನಕ್ಕೆ ಸಮಿತಿ ರವಾನಿಸಲು ಸರ್ಕಾರ ಸಿದ್ಧತೆ!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಪುನರ್ ಸ್ಥಾಪಿಸುವ ವಿಚಾರ ಸಂಬಂಧ ಅಧ್ಯಯನ ನಡೆಸಲು ರಾಜಸ್ಥಾನ ರಾಜ್ಯಕ್ಕೆ ಸಮಿತಿಯನ್ನು ರವಾನಿಸಲು ಮುಂದಾಗಿದ್ದಾರೆಂದು ತಿಳಿದುಬಂದಿದೆ.ರಾಜ್ಯದಲ್ಲಿ ಇನ್ನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ಎದುರಾಗಲಿದ್ದು, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಲ್ಲಿಯೂ ಚುನಾವಣೆ ನಡೆಯಲಿದೆ. ಹೀಗಾಗಿ ಪರಿಸ್ಥಿತಿಯ ಸೂಕ್ಷ್ಮತೆಯನ್ನು ಅರಿತಿರುವ ಬಿಜೆಪಿ, ಯಾವುದೇ ರೀತಿಯಲ್ಲೂ ಎಡವದಂತೆ ನಿರ್ಧಾರಗಳನ್ನು ಕೈಗೊಳ್ಳಲು ಮುಂದಾಗಿದೆ. ಒಂದು ವೇಳೆ ಒಪಿಎಸ್ ಬಗ್ಗೆ ಸರ್ಕಾರ ತದ್ವಿರುದ್ಧವಾಗಿ ನಿರ್ಧಾರ ತೆಗೆದುಕೊಂಡಿದ್ದೇ ಆದರೆ, ಅದು ಕೇವಲ

ಹಳೆಯ ಪಿಂಚಣಿ ಯೋಜನೆ: ಅಧ್ಯಯನ ನಡೆಸಲು ಶೀಘ್ರದಲ್ಲೇ ರಾಜಸ್ಥಾನಕ್ಕೆ ಸಮಿತಿ ರವಾನಿಸಲು ಸರ್ಕಾರ ಸಿದ್ಧತೆ! Read More »

ಸತತ ಮೂರನೇ ಬಾರಿ ಚೀನದ ಅಧ್ಯಕ್ಷರಾಗಿ ಕ್ಸಿ ಜಿನ್‌ಪಿಂಗ್‌ ಆಯ್ಕೆ

ಬೀಜಿಂಗ್‌ : ಹಲವು ಪ್ರತಿಕೂಲ ಪರಿಸ್ಥಿತಿಯಿರುವ ಹೊರತಾಗಿಯೂ ಕ್ಸಿ ಜಿನ್‌ಪಿಂಗ್‌ ಅವರೇ ಚೀನದ ಅಧ್ಯಕ್ಷರಾಗಿ ಸತತ ಮೂರನೇ ಬಾರಿ ಪುನರಾಯ್ಕೆಯಾಗಿದ್ದಾರೆ. ನ್ಯಾಷನಲ್ ಪೀಪಲ್ಸ್ ಕಾಂಗ್ರೆಸ್‌ನ 14ನೇ ಸಭೆಯಲ್ಲಿ ಕ್ಸಿ ಮೂರನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಮೊದಲ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಏರಿದಾಗ ಕ್ಸಿ ಜಿನ್‌ಪಿಂಗ್ ಅವರು ವಿಶ್ವಾಸಘಾತುಕ, ಭ್ರಷ್ಟ ಅಥವಾ ನಿಷ್ಪರಿಣಾಮಕಾರಿ ಎಂದು ಪರಿಗಣಿಸಲ್ಪಟ್ಟ ಅಧಿಕಾರಿಗಳನ್ನು ತೆಗೆದುಹಾಕಲು ಬೃಹತ್ ಅಭಿಯಾನವನ್ನು ಕೈಗೊಂಡಿದ್ದರು. ಆ ಖಾಲಿ ಸ್ಥಾನಗಳಲ್ಲಿ ಮಿತ್ರರನ್ನು ತುಂಬುವ ಮೂಲಕ ಜಿನ್‌ಪಿಂಗ್ ತಮ್ಮ ನೆಲೆಯನ್ನು ಭದ್ರಪಡಿಸಿಕೊಂಡಿದ್ದರು.ಚೀನದಲ್ಲಿ

ಸತತ ಮೂರನೇ ಬಾರಿ ಚೀನದ ಅಧ್ಯಕ್ಷರಾಗಿ ಕ್ಸಿ ಜಿನ್‌ಪಿಂಗ್‌ ಆಯ್ಕೆ Read More »

ಇಂಡೋನೇಷ್ಯಾದ ರಾಜಧಾನಿಯ ಸ್ಥಳಾಂತರ

ಜಕಾರ್ತ : ಇಂಡೋನೇಷ್ಯಾದ ರಾಜಧಾನಿಯನ್ನೇ ಸ್ಥಳಾಂತರ ಮಾಡಲಾಗುತ್ತಿದೆ. ಹಾಲಿ ರಾಜಧಾನಿ ಜಕಾರ್ತದಲ್ಲಿ ಜನದಟ್ಟಣೆ, ಮಾಲಿನ್ಯ ಹೆಚ್ಚಳವಾಗಿದ್ದು, ಭೂಕಂಪಗಳಿಗೆ ತುತ್ತಾಗಿ, ಕ್ಷಿಪ್ರಗತಿಯಾಗಿ ಜಾವಾ ಸಮುದ್ರಕ್ಕೆ ಮುಳುಗುವ ಭೀತಿ ಇದ್ದ ಹಿನ್ನೆಲೆಯಲ್ಲಿ ಹೊಸ ರಾಜಧಾನಿ ನಿರ್ಮಾಣ ಆರಂಭಿಸಲಾಗಿದೆ.ಈಗ ಸರ್ಕಾರ ಇಂಡೋನೇಷ್ಯಾದ ರಾಜಧಾನಿಯನ್ನು ಬೊರ್ನಿಯೊ ದ್ವೀಪಕ್ಕೆ ವರ್ಗಾವಣೆ ಮಾಡುವ ಪ್ರಕ್ರಿಯೆಯಲ್ಲಿ ತೊಡಗಿದೆ. ಹೊಸ ಮಹಾನಗರವು “ಸುಸ್ಥಿರ ಅರಣ್ಯ ನಗರ” ಎಂದು ಇಂಡೋನೇಷ್ಯಾದ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಈ ಯೋಜನೆ ಪರಿಸರವಾದಿಗಳ ಮತ್ತು ಸ್ಥಳೀಯ ಸಮುದಾಯಗಳ ಕೆಂಗಣ್ಣಿಗೆ ಗುರಿಯಾಗಿದೆ. ಒರಾಂಗುಟನ್‌ಗಳಂತಹ ಅಳಿವಿನಂಚಿನಲ್ಲಿರುವ ಪ್ರಾಣಿಗಳ

ಇಂಡೋನೇಷ್ಯಾದ ರಾಜಧಾನಿಯ ಸ್ಥಳಾಂತರ Read More »

ಆಸ್ಟ್ರೇಲಿಯ ಪ್ರಧಾನಿ ಜತೆ ಟೆಸ್ಟ್‌ ಪಂದ್ಯ ವೀಕ್ಷಿಸಿದ ಮೋದಿ

ಅಹಮದಾಬಾದ್‌ : ಭಾರತ ಹಾಗೂ ಆಸ್ಟ್ರೇಲಿಯ ನಡುವಿನ ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಹಾಗೂ ಕೊನೆಯ ಟೆಸ್ಟ್‌ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯ ಪ್ರಧಾನಿ ಆಂಥೋನಿ ಆಲ್ಬನೀಸ್‌ ಜತೆ ಪ್ರಧಾನಿ ನರೇಂದ್ರರ ಮೋದಿ ಸಾಕ್ಷಿಯಾದರು.ಜಗತ್ತಿನ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ ಎನಿಸಿಕೊಂಡಿರುವ ಮೊಟೇರಾದಲ್ಲಿನ ಪಂದ್ಯವನ್ನು ಮೋದಿ ಹಾಗೂ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಆಲ್ಬನೀಸ್‌ ಜತೆಯಾಗಿ ಇಂದು ವೀಕ್ಷಿಸಿಸದರು. ಸ್ಟೇಡಿಯಂಗೆ ಮರುನಾಮಕರಣ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮೈದಾನಕ್ಕಾಗಮಿಸಿ ಪಂದ್ಯವನ್ನು ವೀಕ್ಷಿಸುತ್ತಿದ್ದಾರೆ.ಮೈದಾನಕ್ಕಾಗಮಿಸಿದ

ಆಸ್ಟ್ರೇಲಿಯ ಪ್ರಧಾನಿ ಜತೆ ಟೆಸ್ಟ್‌ ಪಂದ್ಯ ವೀಕ್ಷಿಸಿದ ಮೋದಿ Read More »

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ

ಬೆಂಗಳೂರು: ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪುರುಷರನ್ನೊಳಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರ ಕನ್ನಡ ಭವನದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ ಅವರು ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಪುರುಷರಿಗೆ ಜಾಗೃತಿ ಅಗತ್ಯತಾಯಿಯೊಂದಿಗೆ ಜನ್ಮಪೂರ್ವದ ಸಂಬಂಧವಿದ್ದು, ಇದೊಂದು ಪವಿತ್ರ ಸಂಬಂಧ. ಮನುಕುಲದ ಮುಂದುವರಿಕೆ ನಿರಂತರವಾಗಿ ತಾಯಿಂದಿರು ಮಾಡಿದ್ದಾರೆ. ತಮ್ಮ ತಾಯಿ, ಮಕ್ಕಳು, ಪತ್ನಿಯಿಂದ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ Read More »

ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಡಾ.ಮಾಣಿಕ್‌ ಸಹಾ ಪ್ರಮಾಣ ವಚನ ಸ್ವೀಕಾರ

ಅಗರ್ತಲಾ: ಸತತ ಎರಡನೇ ಅವಧಿಗೆ ತ್ರಿಪುರಾದ ಮುಖ್ಯಮಂತ್ರಿಯಾಗಿ ಡಾ ಮಾಣಿಕ್ ಸಹಾ ಇಂದು ಪ್ರಮಾಣವಚನ ಸ್ವೀಕರಿಸಿದರು.ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಡಾ ಮಾಣಿಕ್ ಸಹಾ ಅವರಿಗೆ ಅಗರ್ತಲಾದ ವಿವೇಕಾನಂದ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ನಡೆಯಿತು. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಮಂಗಳವಾರವೇ ರಾಜ್ಯಕ್ಕೆ ಆಗಮಿಸಿದ್ದಾರೆ. ಮಾಣಿಕ್ ಸಹಾ 2016ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಅವರು ಮಾರ್ಚ್ 2022

ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಡಾ.ಮಾಣಿಕ್‌ ಸಹಾ ಪ್ರಮಾಣ ವಚನ ಸ್ವೀಕಾರ Read More »

ಇಡಿ ಸಮನ್ಸ್‌ಗೆ ಪ್ರತಿಕ್ರಿಯಿಸಿದ ಕೆಸಿಆರ್ ಪುತ್ರಿ ಕೆ. ಕವಿತಾ: ವಿಚಾರಣೆಗೆ ಸಂಪೂರ್ಣ ಸಹಕರಿಸುತ್ತೇನೆ ಆದರೆ ಸಮಯ ಕೇಳುತ್ತೇನೆ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಪ್ರಮುಖ ಆರೋಪಿ ಹೈದರಾಬಾದ್ ಮೂಲದ ಉದ್ಯಮಿ ಅರುಣ್ ರಾಮಚಂದ್ರನ್ ಪಿಳ್ಳೈ ಬಂಧನದ ಬಳಿಕ ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಬಿಆರ್ ಎಸ್ ನಾಯಕಿ ಕೆ. ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಸೂಚಿಸಿದೆ. ಹಗರಣಕ್ಕೆ ಸಂಬಂಧಪಟ್ಟಂತೆ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನದಲ್ಲಿ ಏಜೆನ್ಸಿಯು ವಿಚಾರಣೆಗೆ ಒಳಪಡಿಸಿದ

ಇಡಿ ಸಮನ್ಸ್‌ಗೆ ಪ್ರತಿಕ್ರಿಯಿಸಿದ ಕೆಸಿಆರ್ ಪುತ್ರಿ ಕೆ. ಕವಿತಾ: ವಿಚಾರಣೆಗೆ ಸಂಪೂರ್ಣ ಸಹಕರಿಸುತ್ತೇನೆ ಆದರೆ ಸಮಯ ಕೇಳುತ್ತೇನೆ Read More »

ವಿಮಾನದಲ್ಲಿ ಸಿಗರೇಟ್‌ ಸೇವಿಸಿದ ಯುವತಿಯ ಬಂಧನ

ಬೆಂಗಳೂರು : ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಸಿಗರೇಟ್‌ ಸೇದಿದ ಯುವತಿಯೊಬ್ಬಳನ್ನು ವಾಯುಯಾನ ಸುರಕ್ಷಾ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಬಂಧಿಸಲಾಗಿದೆ.ಕೋಲ್ಕತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದ ಶೌಚಾಲಯದಲ್ಲಿ ಸೇದಿದ್ದಳು. ಆಕೆಯನ್ನು ಭಾನುವಾರ ತಡರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.ಪಶ್ಚಿಮ ಬಂಗಾಳದ ಸೀಲ್ದಾ ಜಿಲ್ಲೆಯ ಪ್ರಿಯಾಂಕಾ ಚಕ್ರವರ್ತಿ ಭಾನುವಾರ ತಡರಾತ್ರಿ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಸಿಗರೇಟ್‌ ಸೇದಿದ್ದಾಳೆ. ವಿಮಾನವು ಕೋಲ್ಕತ್ತಾದಿಂದ ರಾತ್ರಿ 9.50 ಕ್ಕೆ ಹೊರಟು ತಡರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರು ತಲುಪಿದೆ.ವಿಮಾನ ಲ್ಯಾಂಡ್‌ ಆಗುವ 30 ನಿಮಿಷ

ವಿಮಾನದಲ್ಲಿ ಸಿಗರೇಟ್‌ ಸೇವಿಸಿದ ಯುವತಿಯ ಬಂಧನ Read More »

ದತ್ತಾತ್ರೇಯ ಬಾಬಾ ಬುಡನ್‌ ದರ್ಗಾದಲ್ಲಿ ಇಂದಿನಿಂದ ಉರುಸ್

ಆಚರಣೆಯಿಂದ ದೂರ ಉಳಿದ ಮುಸ್ಲಿಂ ಮುಖಂಡರು ಚಿಕ್ಕಮಗಳೂರು : ವಿವಾದಿತ ಇನಾಂ‌‌ ದತ್ತಾತ್ರೇಯ ಬಾಬಾ ಬುಡನ್‌ ದರ್ಗಾದಲ್ಲಿ ಇಂದಿನಿಂದ ಉರುಸ್ ಆರಂಭ. ಮೂರು ದಿನಗಳ ಕಾಲ ನಡೆಯಲಿರುವ ಉರುಸ್ ಆಚರಣೆಗೆ ಇದೀಗ ರಾಜ್ಯ ಸರ್ಕಾರ ರಚನೆ ಮಾಡಿದ್ದ ದತ್ತಪೀಠ ವ್ಯವಸ್ಥಾಪನ ಮಂಡಳಿ ನೇತೃತ್ವದಲ್ಲಿ ತೀವ್ರ ವಿರೋಧ ಕೇಳಿಬಂದಿದೆ. ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುವ ಉರುಸ್ ಆಚರಣೆಯಿಂದ ಮುಸ್ಲಿಂ ಸಮುದಾಯ ದೂರ ಉಳಿಯಲು ನಿರ್ಧರಿಸಿದ್ದಾರೆ. ಇನ್ನು ಜಿಲ್ಲಾಡಳಿತ ಕರೆದಿದ್ದ ಸಭೆಗೆ ಮುಸ್ಲಿಂ ಸಮುದಾಯದ ಮುಖಂಡರು ಗೈರಾಗಿದ್ದು, ರಾಜ್ಯ ಸರ್ಕಾರಕ್ಕೆ ವಿವಿಧ

ದತ್ತಾತ್ರೇಯ ಬಾಬಾ ಬುಡನ್‌ ದರ್ಗಾದಲ್ಲಿ ಇಂದಿನಿಂದ ಉರುಸ್ Read More »

error: Content is protected !!
Scroll to Top