ದೇಶ

ಭಾರತ್‌ ಜೋಡೊ ಯಾತ್ರೆ ವೇಳೆ ಲೈಂಗಿಕ ದೌರ್ಜನ್ಯ ಕುರಿತು ವಿವಾದಾತ್ಮಕ ಹೇಳಿಕೆ : ರಾಹುಲ್‌ ಗಾಂಧಿಗೆ ನೋಟಿಸ್‌

ದೆಹಲಿ : ಕಾಶ್ಮೀರದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿ ನಿಮ್ಮನ್ನು ಸಂಪರ್ಕಿಸಿದ ಮಹಿಳೆಯರ ವಿವರಗಳನ್ನು ನೀಡಿ, ನಾವು ಅವರಿಗೆ ಭದ್ರತೆ ನೀಡುತ್ತೇವೆ ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ದಿಲ್ಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಶ್ರೀನಗರದಲ್ಲಿ ಮಹಿಳೆಯರ ಮೇಲೆ ಇನ್ನೂ ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದ ರಾಹುಲ್ ಗಾಂಧಿ, ಒಂದು ನಿರ್ದಿಷ್ಟ ಪ್ರಕರಣದಲ್ಲಿ ಒಬ್ಬ ಹುಡುಗಿ ತಮ್ಮ ಮೇಲೆ ಅತ್ಯಾಚಾರ ನಡೆದಿದೆ ಎಂದು ಅಳಲು ತೋಡಿಕೊಂಡಳು. ಆ ಸಂದರ್ಭದಲ್ಲಿ […]

ಭಾರತ್‌ ಜೋಡೊ ಯಾತ್ರೆ ವೇಳೆ ಲೈಂಗಿಕ ದೌರ್ಜನ್ಯ ಕುರಿತು ವಿವಾದಾತ್ಮಕ ಹೇಳಿಕೆ : ರಾಹುಲ್‌ ಗಾಂಧಿಗೆ ನೋಟಿಸ್‌ Read More »

ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ

ಮಡಿದವರಲ್ಲಿ ಐವರು ಮಹಿಳೆಯರು ಹೈದರಾಬಾದ್‌ : ಹೈದರಾಬಾದ್‌ನ ಬಹುಮಹಡಿ ವಾಣಿಜ್ಯ ಸಂಕೀರ್ಣವೊಂದರಲ್ಲಿ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಐವರು ಮಹಿಳೆಯರ ಸಹಿತ ಆರು ಮಂದಿ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ. ಬೆಳಗ್ಗೆ 7.30ರ ವೇಳೆಗೆ ಸ್ವಪ್ನಲೋಕ್‌ ಕಾಂಪ್ಲೆಕ್ಸ್‌ ಎಂಬ ವಾಣಿಜ್ಯ ಸಂಕೀರ್ಣದ 5ನೆ ಮಹಡಿಯಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ. ಕಟ್ಟಡದ ಒಳಗೆ 13 ಮಂದಿ ಸಿಕ್ಕಿಬಿದ್ದಿದ್ದರು. ಏಳು ಮಂದಿಯನ್ನು ರಕ್ಷಿಸಲಾಗಿದೆ. ಆರು ಮಂದಿ ದಟ್ಟ ಹೊಗೆಯಿಂದ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆ.

ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ Read More »

ನಿಯಮಿತ ನಾಯಕರಿಲ್ಲದೆ ಇಂದು ಕಣಕ್ಕಿಳಿಯುತ್ತಿದೆ ಭಾರತ -ಆಸ್ಟ್ರೇಲಿಯಾ ಏಕದಿನ ಸರಣಿ

ಮುಂಬಯಿ : ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಎರಡೂ ತಂಡಗಳು ತಮ್ಮ ನಿಯಮಿತ ನಾಯಕರಿಲ್ಲದೆ ಕಣಕ್ಕಿಳಿಯುತ್ತಿವೆ. ಆಸ್ಟ್ರೇಲಿಯ ನಾಯಕ ಪ್ಯಾಟ್ ಕಮಿನ್ಸ್ ತಾಯಿಯ ಸಾವಿನ ಕಾರಣ ಏಕದಿನ ಸರಣಿಯಲ್ಲಿ ಆಡುತ್ತಿಲ್ಲ. ಇತ್ತ ವಿಶ್ವಕಪ್ ವಿಜೇತ ಸ್ಟೇಡಿಯಂ ವಾಂಖೇಡೆಯಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಆಡುವುದಿಲ್ಲ. ವೈಯಕ್ತಿಕ ಕಾರಣಗಳಿಂದ ರೋಹಿತ್ ಮೊದಲ ಪಂದ್ಯದಿಂದ ದೂರ ಉಳಿದಿದ್ದು, ಎರಡನೇ ಪಂದ್ಯದಿಂದ ತಂಡವನ್ನು

ನಿಯಮಿತ ನಾಯಕರಿಲ್ಲದೆ ಇಂದು ಕಣಕ್ಕಿಳಿಯುತ್ತಿದೆ ಭಾರತ -ಆಸ್ಟ್ರೇಲಿಯಾ ಏಕದಿನ ಸರಣಿ Read More »

ಕೋವಿಡ್‌ ಹೆಚ್ಚಳ : ಆರು ರಾಜ್ಯಗಳಿಗೆ ಮುನ್ನೆಚ್ಚರಿಕೆ

ರಾಜ್ಯಕ್ಕೆ ಕೇಂದ್ರದಿಂದ ನಿಯಂತ್ರಣ ನಿರ್ದೇಶನ ದೆಹಲಿ : ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಾದ ನಿಗಾ ವಹಿಸಲು ಮತ್ತು ಕೋವಿಡ್ ಹರಡುವುದನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಮಿಳುನಾಡು, ಕೇರಳ, ಕರ್ನಾಟಕ ಮತ್ತು ತೆಲಂಗಾಣ ಸೇರಿದಂತೆ ಆರು ರಾಜ್ಯಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದೆ. ಕೇಂದ್ರ ಆರೋಗ್ಯ ಸಚಿವಾಲಯ, ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಗುಜರಾತ್ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಕೋವಿಡ್ ಪರೀಕ್ಷೆ ಹೆಚ್ಚಿಸುವಂತೆ, ಹೊಸ ಕೋವಿಡ್ ಪ್ರಕರಣಗಳನ್ನು ಮತ್ತು ಕ್ಲಸ್ಟರ್‌ಗಳ ಮೇಲ್ವಿಚಾರಣೆ ಮಾಡುವಂತೆ

ಕೋವಿಡ್‌ ಹೆಚ್ಚಳ : ಆರು ರಾಜ್ಯಗಳಿಗೆ ಮುನ್ನೆಚ್ಚರಿಕೆ Read More »

ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌: ‘ವರ್ಷದ ಗವರ್ನರ್’ ಪ್ರಶಸ್ತಿ

ಮುಂಬಯಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಇಂಟರ್‌ನ್ಯಾಷನಲ್ ಎಕನಾಮಿಕ್ ರಿಸರ್ಚ್ ಜರ್ನಲ್ ಸೆಂಟ್ರಲ್ ಬ್ಯಾಂಕಿಂಗ್ 2023 ರ ವರ್ಷದ ಗವರ್ನರ್ ಪ್ರಶಸ್ತಿ ನೀಡಿದೆ. ಕಷ್ಟದ ಸಮಯದಲ್ಲಿ ಅವರ ಸ್ಥಿರ ನಾಯಕತ್ವಕ್ಕಾಗಿ ದಾಸ್ ಈ ಪ್ರಶಸ್ತಿಯನ್ನು ಪಡೆದಿದ್ದಾರೆ. ಕೋವಿಡ್‌ 19 ಮತ್ತು ಉಕ್ರೇನ್‌- ರಷ್ಯಾ ನಡುವಿನ ಯುದ್ಧದಿಂದಾಗಿ ಸೃಷ್ಟಿಯಾದ ಬಿಕ್ಕಟ್ಟನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದಕ್ಕೆ ಅಂತರರಾಷ್ಟ್ರೀಯ ಆರ್ಥಿಕ ಸಂಶೋಧನಾ ಜರ್ನಲ್‌ ಆಗಿರುವ ಸೆಂಟ್ರಲ್‌ ಬ್ಯಾಂಕಿಂಗ್‌ 2023ರ ವರ್ಷದ ಗವರ್ನರ್‌ ಪ್ರಶಸ್ತಿ ನೀಡಿದೆ. ಕೋವಿಡ್‌

ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌: ‘ವರ್ಷದ ಗವರ್ನರ್’ ಪ್ರಶಸ್ತಿ Read More »

ರಾಜ್ಯದ 865 ಗಡಿ ಗ್ರಾಮಗಳಲ್ಲಿ ಮಹಾರಾಷ್ಟ್ರದ ಆರೋಗ್ಯ ವಿಮೆ ಯೋಜನೆ: ಅಮಿತ್ ಶಾ ಗೆ ದೂರು- ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ 865 ಗಡಿ ಗ್ರಾಮಗಳಲ್ಲಿ ಆರೋಗ್ಯ ವಿಮಾ ಯೋಜನೆ ಜಾರಿಗೊಳಿಸುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು ಕ್ಷಮಿಸಲಾರದ ಅಪರಾಧವಾಗಿದ್ದು, ಈ ವಿಚಾರದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ಸಲ್ಲಿಸಲಾಗುವುದು ಎಂದಿದ್ದಾರೆ.ಕಳೆದ ಡಿಸೆಂಬರ್ ನಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದಾಗ ಅಮಿತ್ ಶಾ ಉಭಯ ರಾಜ್ಯಗಳ ಮುಖ್ಯಮಂತ್ರಿ ಸಭೆ ಕರೆದು, ಸುಪ್ರೀಂಕೋರ್ಟ್ ಆದೇಶ ನೀಡುವವರೆಗೂ ಗಡಿ ವಿಚಾರ ಕುರಿತಂತೆಯೂ ಯಾರೊಬ್ಬರೂ

ರಾಜ್ಯದ 865 ಗಡಿ ಗ್ರಾಮಗಳಲ್ಲಿ ಮಹಾರಾಷ್ಟ್ರದ ಆರೋಗ್ಯ ವಿಮೆ ಯೋಜನೆ: ಅಮಿತ್ ಶಾ ಗೆ ದೂರು- ಸಿಎಂ ಬೊಮ್ಮಾಯಿ Read More »

ಗುಳಿಗ ದೈವವನ್ನು ನಾನು ಟೀಕಿಸಿಲ್ಲ – ಆರಗ ಜ್ಞಾನೇಂದ್ರ ಸ್ಪಷ್ಟನೆ

ಶಿವಮೊಗ್ಗ : ಕರಾವಳಿಯ ಆರಾಧ್ಯ ದೈವ ಗುಳಿಗದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಪಮಾನ ಮಾಡಿದ್ದಾರೆಂಬ ವಿಚಾರದ ಬಗ್ಗೆ ಭಾರೀ ಟೀಕೆ ಎದುರಾಗುತ್ತಿದೆ. ಈ ಬಗ್ಗೆ ಸ್ವತಃ ಸಚಿವರೇ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ವಿರುದ್ಧ ಟೀಕೆ ಮಾಡುವವರು ಯಾರು? ನನಗೆ ಗುಳಿಗ, ಪಂಜುರ್ಲಿ ಕುರಿತು ಗೌರವ ಭಕ್ತಿಯಿದೆ. ನಿನ್ನೆ ಕೂಡ ಒಂದು ಕಾರ್ಯಕ್ರಮಕ್ಕೆ ಹೋಗಿ ಬಂದಿದ್ದೇನೆ. ಯಾರಿಗೆ ಈ ದೈವದ ಬಗ್ಗೆ ನಂಬಿಕೆಯಿಲ್ಲ, ವಿಶ್ವಾಸ ಇಲ್ಲ, ಮೂಢನಂಬಿಕೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದವರು ನಿನ್ನೆ ತೀರ್ಥಹಳ್ಳಿಯಲ್ಲಿ

ಗುಳಿಗ ದೈವವನ್ನು ನಾನು ಟೀಕಿಸಿಲ್ಲ – ಆರಗ ಜ್ಞಾನೇಂದ್ರ ಸ್ಪಷ್ಟನೆ Read More »

ಸಭಾಪತಿ ಅವಕಾಶ ನೀಡಿದರೆ ಸಂಸತ್ತಿನಲ್ಲಿ ಮಾತನಾಡುತ್ತೇನೆ: ರಾಹುಲ್ ಗಾಂಧಿ

ದೆಹಲಿ: ವಿದೇಶದಿಂದ ವಾಪಸ್ಸಾದ ಬಳಿಕ ಗುರುವಾರ ಸಂಸತ್ ಭವನಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಲಂಡನ್ ಪ್ರವಾಸದ ವೇಳೆ ಭಾರತ ಅಥವಾ ಸಂಸತ್ತಿನ ವಿರುದ್ಧವಾಗಿ ನಾನು ಏನನ್ನೂ ಮಾತನಾಡಿಲ್ಲ ಎಂದು ಹೇಳಿದ್ದಾರೆ. ಸಭಾಪತಿ ಅವಕಾಶ ನೀಡಿದರೆ ಸಂಸತ್ತಿನಲ್ಲಿ ಮಾತನಾಡುತ್ತೇನೆ ಎಂದು ಹೇಳಿದರು.ಅವರು ನನಗೆ ಸಂಸತ್ತಿನಲ್ಲಿ ಮಾತನಾಡಲು ಅವಕಾಶ ನೀಡಿದರೆ, ನಂತರ ನನ್ನ ಅನಿಸಿಕೆಗಳನ್ನು ನಾನು ಹೇಳುತ್ತೇನೆ. ಸಂಸತ್ತಿನ ಒಳಗೆ ಮಾತನಾಡುವುದು ಬಿಜೆಪಿಗೆ ಇಷ್ಟವಾಗುವುದಿಲ್ಲ. ಅವಕಾಶ ನೀಡದಿದ್ದರೆ ಸಂಸತ್ತಿನ ಹೊರಗೆ ಮಾತನಾಡುವುದಾಗಿ’ ಅವರು ಸಂಸತ್ತಿನಿಂದ ಹೊರಡುವಾಗ ಸುದ್ದಿಗಾರರಿಗೆ

ಸಭಾಪತಿ ಅವಕಾಶ ನೀಡಿದರೆ ಸಂಸತ್ತಿನಲ್ಲಿ ಮಾತನಾಡುತ್ತೇನೆ: ರಾಹುಲ್ ಗಾಂಧಿ Read More »

ಅರುಣಾಚಲ ಪ್ರದೇಶ: ಸೇನಾ ಹೆಲಿಕಾಪ್ಟರ್ ಪತನ

ಪೈಲಟ್‌ಗಳಿಗಾಗಿ ಶೋಧ ಕಾರ್ಯ ಅರುಣಾಚಲ ಪ್ರದೇಶ : ಭಾರತೀಯ ಸೇನಾ ಚೀತಾ ಹೆಲಿಕಾಪ್ಟರ್ ಮಾ. 16ರ ಬೆಳಿಗ್ಗೆ ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಪತನಗೊಂಡಿದ್ದು ಪೈಲಟ್‌ಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ 09:15ರ ಸುಮಾರಿಗೆ ಕಾರ್ಯಾಚರಣೆ ಹಾರಾಟ ಪ್ರಾರಂಭಿಸಿತ್ತು. ಸ್ವಲ್ಪ ಸಮಯದ ನಂತರ ಹೆಲಿಕಾಪ್ಟರ್ ಎಟಿಸಿಯ ಸಂಪರ್ಕವನ್ನು ಕಳೆದುಕೊಂಡಿತು. ನಂತರ ಬೋಮ್ಡಿಲಾ ಪಶ್ಚಿಮದ ಮಂಡ್ಲಾ ಬಳಿ ಪತನಗೊಂಡಿದೆ ಎಂದು ವರದಿಯಾಗಿದೆ. ಸದ್ಯ ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. 2022ರಲ್ಲಿ ತವಾಂಗ್‌ನಲ್ಲಿ ಹೆಲಿಕಾಪ್ಟರ್ ಒಂದು

ಅರುಣಾಚಲ ಪ್ರದೇಶ: ಸೇನಾ ಹೆಲಿಕಾಪ್ಟರ್ ಪತನ Read More »

ಗುಳಿಗ ದೈವಕ್ಕೆ ಅವಮಾನ ಗೃಹ ಸಚಿವರ ಹೇಳಿಕೆ ವೈರಲ್

ಮಂಗಳೂರು : ವಿಜಯಕುಮಾರ್‌ ಕೊಡಿಯಾಲ್‌ಬೈಲ್‌ ನಿರ್ದೇಶನದ ಯಶಸ್ವಿ ತುಳು ನಾಟಕ ಶಿವದೂತೆ ಗುಳಿಗೆ ಕುರಿತು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ ಎನ್ನಲಾಗಿರುವ ವ್ಯಂಗ್ಯ ಮಾತೊಂದು ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ತುಳುವರ ಗುಳಿಗ ದೈವಕ್ಕೆ ಅಪಚಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಆರಗ ಜ್ಞಾನೇಂದ್ರ ಅವರ ವ್ಯಂಗ್ಯ ಭಾಷಣದ ತುಣುಕನ್ನು ವೈರಲ್‌ಮಾಡಲಾಗಿದೆ. ಮಾ.14ರಂದು ತೀರ್ಥಹಳ್ಳಿಯಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಶಿವದೂತೆ ಗುಳಿಗೆ ನಾಟಕ ಆಯೋಜಿಸಿದ್ದರು. ಈ ನಾಟಕ ಪ್ರದರ್ಶನ ಕುರಿತು ಎಲ್ಲೆಡೆ ಪೋಸ್ಟರ್‌ ಅಂಟಿಸಲಾಗಿತ್ತು. ಈ ಬಗ್ಗೆ

ಗುಳಿಗ ದೈವಕ್ಕೆ ಅವಮಾನ ಗೃಹ ಸಚಿವರ ಹೇಳಿಕೆ ವೈರಲ್ Read More »

error: Content is protected !!
Scroll to Top