ದೇಶ

‘ದಿ ಎಲಿಫೆಂಟ್ ವಿಸ್ಪರರ್ಸ್‌ʼ: ಮಹಿಳೆ ತಯಾರಿಸಿದ ಕಿರು ಸಾಕ್ಷ್ಯಚಿತ್ರಕ್ಕೆ ಆಸ್ಕರ್‌

ಲಾಸ್ ಏಂಜಲೀಸ್: ಭಾರತದ ಕಿರು ಸಾಕ್ಷ್ಯಚಿತ್ರ ‘ದಿ ಎಲಿಫೆಂಟ್ ವಿಸ್ಪರರ್ಸ್’ 95ನೇ ಆಸ್ಕರ್ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರ ವಿಭಾಗದಲ್ಲಿ ಆಸ್ಕರ್ ಪಡೆದಿದೆ.ಪ್ರಶಸ್ತಿಯನ್ನು ಪೆಡ್ರೊ ಪಾಸ್ಕಲ್ ಪ್ರದಾನ ಮಾಡಿದರು. ‘ಹೌಲೌಟ್’, ‘ಹೌ ಡು ಯು ಮೆಷರ್ ಎ ಇಯರ್?’, ‘ದಿ ಮಾರ್ಥಾ ಮಿಚೆಲ್ ಎಫೆಕ್ಟ್’ ಮತ್ತು ‘ಸ್ಟ್ರೇಂಜರ್ ಅಟ್ ದಿ ಗೇಟ್’ ಜತೆಗೆ ‘ದಿ ಎಲಿಫೆಂಟ್ ವಿಸ್ಪರರ್ಸ್’ ಕಿರುಸಾಕ್ಷ್ಯಚಿತ್ರ ಸ್ಪರ್ಧೆಯಲ್ಲಿತ್ತು. ನಿರ್ದೇಶಕ ಕಾರ್ತಿಕಿ ಗೊನ್ಸಾಲ್ವಿಸ್ ಮತ್ತು ಗುನೀತ್ ಮೊಂಗಾ ಪ್ರಶಸ್ತಿ ಸ್ವೀಕರಿಸಿದರು. ಕಾರ್ತಿಕಿ ಚಿತ್ರದ ಬಗ್ಗೆ ಮಾತನಾಡಿ, […]

‘ದಿ ಎಲಿಫೆಂಟ್ ವಿಸ್ಪರರ್ಸ್‌ʼ: ಮಹಿಳೆ ತಯಾರಿಸಿದ ಕಿರು ಸಾಕ್ಷ್ಯಚಿತ್ರಕ್ಕೆ ಆಸ್ಕರ್‌ Read More »

ರಾಷ್ಟ್ರದ ಬೆಳವಣಿಗೆಯನ್ನು ನೋಡುವುದರಲ್ಲಿ ಯುವಕರು ಅಪಾರ ಹೆಮ್ಮೆ ಪಡುತ್ತಿದ್ದಾರೆ: ಪ್ರಧಾನಿ ಮೋದಿ

ಮಂಡ್ಯ: ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಪಾಲ್ಗೊಂಡು ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಳೆದ ಕೆಲವು ದಿನಗಳಿಂದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ನಮ್ಮ ರಾಷ್ಟ್ರದ ಬೆಳವಣಿಗೆಯನ್ನು ನೋಡುವುದರಲ್ಲಿ ಯುವಕರು ಅಪಾರ ಹೆಮ್ಮೆ ಪಡುತ್ತಿದ್ದಾರೆ. ಈ ಎಲ್ಲಾ ಯೋಜನೆಗಳು ಸಮೃದ್ಧಿ ಮತ್ತು ಅಭಿವೃದ್ಧಿಯ ಹಾದಿಗಳನ್ನು ತೆರೆಯುತ್ತದೆ ಎಂದು ಹೇಳಿದರು ಕನ್ನಡದಲ್ಲೇ ಭಾಷಣ ಆರಂಭಿಸಿದ ಅವರು, ‘ತಾಯಿ ಭುವನೇಶ್ವರಿಗೆ ನಮಸ್ಕಾರಗಳು. ನಿಮ್ಮ ಪ್ರೀತಿಯ ಋಣ ಬಡ್ಡಿ ಸಮೇತ

ರಾಷ್ಟ್ರದ ಬೆಳವಣಿಗೆಯನ್ನು ನೋಡುವುದರಲ್ಲಿ ಯುವಕರು ಅಪಾರ ಹೆಮ್ಮೆ ಪಡುತ್ತಿದ್ದಾರೆ: ಪ್ರಧಾನಿ ಮೋದಿ Read More »

ಮಂಡ್ಯದಲ್ಲಿ ಮೋದಿ ಹವಾ : ರೊಡ್‌ ಶೋ ಶುರು

ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮಂಡ್ಯ : ಕರ್ನಾಟಕಕ್ಕೆ ಒಂದು ದಿನದ ಭೇಟಿ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಮೈಸೂರಿನ ಮಂಡಕಳ್ಳಿ ಏರ್‌ಪೋರ್ಟ್‌ಗೆ ಬಂದಿಳಿದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ನಾಯಕರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.ಮೈಸೂರು ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಮೋದಿ ಆಗಮಿಸಿದ್ದಾರೆ. ಅಲ್ಲಿಂದ ಸೇನಾ ಹೆಲಿಕಾಪ್ಟರ್ ಮೂಲಕ ಮಂಡ್ಯದ ಪಿಇಎಸ್ ಕಾಲೇಜು ಆವರಣಕ್ಕೆ ತೆರಳಿದ್ದು, ಸಕ್ಕರೆ ನಾಡು ಮಂಡ್ಯ ಅಕ್ಕರೆಯ ಸ್ವಾಗತಕ್ಕೆ ಸಜ್ಜಾಗಿದೆ. ಶಿಕ್ಷಣ ಕಾಶಿ ಧಾರವಾಡದಲ್ಲೂ ಮೋದಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಎರಡೂ ಜಿಲ್ಲೆಗಳಲ್ಲಿ ಮೋದಿ

ಮಂಡ್ಯದಲ್ಲಿ ಮೋದಿ ಹವಾ : ರೊಡ್‌ ಶೋ ಶುರು Read More »

ಬಿಜೆಪಿ ನಿದ್ದೆಗೆಡಿಸಿದ, ಕಾಂಗ್ರೆಸ್‌ಗೆ ಖುಷಿ ಕೊಟ್ಟ ಸಮೀಕ್ಷೆ

ಜೆಡಿಎಸ್‌ ಸ್ಥಿತಿ ಆರಕ್ಕೇರುವುದಿಲ್ಲ ಮೂರಕ್ಕಿಳಿಯುವುದಿಲ್ಲ ಬೆಂಗಳೂರು : ಮೂರೂ ಪಕ್ಷಗಳು 150ರ ಗುರಿ ಇಟ್ಟುಕೊಂಡು ಮತದಾರರ ಮನಗೆಲ್ಲಲು ಹಗಲಿರುಳು ಎನ್ನದೆ ಬೆವರು ಸುರಿಸುತ್ತಿವೆ. ಆದರೆ ಈ ನಡುವೆ ಮತದಾನೋತ್ತರ ಸಮೀಕ್ಷೆಗಳು ಮಾತ್ರ ಬೇರೆಯದ್ದೇ ಕಥೆ ಹೇಳುತ್ತಿವೆ. ಇದೀಗ ಲೋಕ್‌ಪೋಲ್‌ ಎಂಬ ಹೆಸರಿನಲ್ಲಿ ಸಂಸ್ಥೆಯೊಂದು ಮಾಡಿದ ಸಮೀಕ್ಷೆ ಜೆಡಿಎಸ್‌ ಮತ್ತು ಬಿಜೆಪಿಯ ನಿದ್ದೆಗೆಡಿಸಿದ್ದರೆ ಕಾಂಗ್ರೆಸ್‌ ಮುಖದಲ್ಲಿ ಮಂದಹಾಸ ಮೂಡಿಸಿದೆ.ಲೋಕ್‌ಪೋಲ್‌ ಸಮೀಕ್ಷೆ ಪ್ರಕಾರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸರಳ ಬಹುಮತ ಬರಲಿದೆ. ಕಾಂಗ್ರೆಸ್‌ 116 ರಿಂದ 122 ಸ್ಥಾನಗಳು ಪಡೆಯಬಹುದು

ಬಿಜೆಪಿ ನಿದ್ದೆಗೆಡಿಸಿದ, ಕಾಂಗ್ರೆಸ್‌ಗೆ ಖುಷಿ ಕೊಟ್ಟ ಸಮೀಕ್ಷೆ Read More »

80 ವರ್ಷ ಮೇಲ್ಪಟ್ಟವರಿಗೆ, ವಿಕಲ ಚೇತನರಿಗೆ ಮನೆಯಿಂದಲೇ ಮತದಾನ ಸೌಲಭ್ಯ

ದೇಶದಲ್ಲೇ ಮೊದಲ ಬಾರಿ ಕರ್ನಾಟಕದಲ್ಲಿ ಜಾರಿ ಬೆಂಗಳೂರು : ವಯೋವೃದ್ಧರು ಮತ್ತು ವಿಕಲ ಚೇತನರನ್ನು ಈ ಸಲ ಮತಗಟ್ಟೆಗೆ ಎತ್ತಿಕೊಂಡು ಅಥವಾ ಹೊತ್ತುಕೊಂಡು ತರುವ ಅಗತ್ಯ ಇಲ್ಲ. 80 ವರ್ಷಕ್ಕೂ ಮೇಲ್ಪಟ್ಟವರಿಗೆ ಹಾಗೂ ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.ರಾಜ್ಯ ವಿಧಾನಸಭಾ ಚುನಾವಣೆಯ ಪೂರ್ವ ಸಿದ್ಧತೆ ಪರಿಶೀಲಿಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್, ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟವರು

80 ವರ್ಷ ಮೇಲ್ಪಟ್ಟವರಿಗೆ, ವಿಕಲ ಚೇತನರಿಗೆ ಮನೆಯಿಂದಲೇ ಮತದಾನ ಸೌಲಭ್ಯ Read More »

ಲಾಲೂ ಕುಟುಂಬದ ಮೇಲೆ ದಾಳಿ: 600 ಕೋ. ರೂ. ಅಕ್ರಮ ಆಸ್ತಿ ಪತ್ತೆ

ಇಡಿ ದಾಳಿಯಲ್ಲಿ ಸಿಕ್ಕಿದೆ ಅಪಾರ ಸೊತ್ತುಗಳ ದಾಖಲೆ ಹೊಸದಿಲ್ಲಿ : ಉದ್ಯೋಗಕ್ಕಾಗಿ ಭೂ ಹಗರಣ ಸಂಬಂಧ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಕುಟುಂಬದ ಮೇಲೆ ದಾಳಿ ನಡೆಸಿದ ನಂತರ ಲೆಕ್ಕವಿಲ್ಲದ 600 ಕೋಟಿ ರೂ. ಆದಾಯ ಪತ್ತೆ ಮಾಡಲಾಗಿದೆ. ಲಾಲೂ ಪ್ರಸಾದ್ ಕುಟುಂಬ ಮತ್ತು ಅವರ ಸಹಚರರ ಪರವಾಗಿ ರಿಯಲ್ ಎಸ್ಟೇಟ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಾಡಿರುವ ಹೆಚ್ಚಿನ ಹೂಡಿಕೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಇಡಿ ತಿಳಿಸಿದೆ.1 ಕೋಟಿ ರೂ. ನಗದು ಮತ್ತು 1900

ಲಾಲೂ ಕುಟುಂಬದ ಮೇಲೆ ದಾಳಿ: 600 ಕೋ. ರೂ. ಅಕ್ರಮ ಆಸ್ತಿ ಪತ್ತೆ Read More »

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು : ಮಾರ್ಚ್ 14ಕ್ಕೆ‌ ವಿಚಾರಣೆ ಮುಂದೂಡಿಕೆ

ಬೆಂಗಳೂರು : 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ತಡೆ ನೀಡಲು ಹೈಕೋರ್ಟ್ ನಕಾರವೆತ್ತಿದ್ದು, ಪ್ರಕರಣದ ವಿಚಾರಣೆಯನ್ನು ಮಾರ್ಚ್ 14ಕ್ಕೆ ಮುಂದೂಡಿದೆ. ಪರೀಕ್ಷೆa ರದ್ದು ಹಿನ್ನೆಲೆ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ನಕಾರವೆತ್ತಿದ್ದು, ಮಾರ್ಚ್ 14ಕ್ಕೆ‌ ಹೈಕೋರ್ಟ್ ವಿಚಾರಣೆ ಮುಂದೂಡಿದೆ. ಸರ್ಕಾರದ ನಿರ್ಧಾರದ ವಿರುದ್ಧ ರುಪ್ಸಾ ಅರ್ಜಿಈ ಶೈಕ್ಷಣಿಕ ವರ್ಷದಿಂದ 5 ಮತ್ತು

5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು : ಮಾರ್ಚ್ 14ಕ್ಕೆ‌ ವಿಚಾರಣೆ ಮುಂದೂಡಿಕೆ Read More »

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ : ಪ್ರಾಂಶುಪಾಲೆ ಸೇರಿ ಐವರ ಬಂಧನ

ಹಳೆಬೀಡು ವಸತಿ ಶಾಲೆಯಲ್ಲಿ ನಡೆದ ಕೃತ್ಯ ಹಾಸನ : ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೇಲೂರು ತಾಲೂಕಿನ ವಸತಿ ಶಾಲೆಯ ಪ್ರಾಂಶುಪಾಲೆ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೇಲೆ ಕೆಲ ತಿಂಗಳುಗಳಿಂದ ಲೈಂಗಿಕ ದೌರ್ಜನ್ಯ ಎಸಗಲಾಗುತ್ತಿತ್ತು.ಪುನೀತ್ (28), ಶಿಕ್ಷಕ ಶಿವಯ್ಯ (32), ಪ್ರಾಂಶುಪಾಲೆ ಗೀತಾಬಾಯಿ (38), ಭದ್ರತಾ ಸಿಬ್ಬಂದಿ ಶ್ರುತಿ ಬಿ.ಸಿ. (30), ಶಿಕ್ಷಕ ವಿಜಯಕುಮಾರ (39) ಬಂಧಿತ ಆರೋಪಿಗಳು. ಕೆಲವು ತಿಂಗಳುಗಳಿಂದ ವಸತಿ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ : ಪ್ರಾಂಶುಪಾಲೆ ಸೇರಿ ಐವರ ಬಂಧನ Read More »

ಮಾ.12 ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಮೋದಿಯಿಂದ ಲೋಕಾರ್ಪಣೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್​ ವೇ ಲೋಕಾರ್ಪಣೆ ಸೇರಿಸಿದಂತೆ ಸುಮಾರು 16 ಸಾವಿರ ಕೋಟಿ ರೂ. ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ರಾಜ್ಯಕ್ಕೆ ಆಗಮಿಸಲಿದ್ದಾರೆ.ಭಾನುವಾರ ಮಧ್ಯಾಹ್ನ 12 ಗಂಟೆಗೆ ಮೋದಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಮಧ್ಯಾಹ್ನ 3:15ಕ್ಕೆ ಹುಬ್ಬಳ್ಳಿ-ಧಾರವಾಡದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ವರ್ಷದ ಆರಂಭದಿಂದ ರಾಜ್ಯ ಪ್ರವಾಸದಲ್ಲಿರುವ

ಮಾ.12 ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಮೋದಿಯಿಂದ ಲೋಕಾರ್ಪಣೆ Read More »

ಮರುಭೂಮಿಯನ್ನೂ ಮೀರಿಸಿ ಹೆಚ್ಚುತ್ತಿರುವ ಕರಾವಳಿಯ ತಾಪಮಾನ

ಕೇರಳದಲ್ಲಿ 54 ಡಿಗ್ರಿ ಸೆಲ್ಸಿಯಸ್‌ ದಾಖಲು ತಿರುವನಂತಪುರಂ : ಕರಾವಳಿ ರಾಜ್ಯಗಳಾದ ಕೇರಳ ಮತ್ತು ಕರ್ನಾಟಕದಲ್ಲಿ ತಾಪಮಾನ ಮರುಭೂಮಿಯನ್ನೂ ಮೀರಿಸಿ ಹೆಚ್ಚುತ್ತಿದೆ. ನಿನ್ನೆ ಕೇರಳದಲ್ಲಿ ತಾಪಮಾನ ಹೊಸ ದಾಖಲೆ ಬರೆದಿದ್ದು, ಕೋಝಿಕ್ಕೋಡ್ ಮತ್ತು ತಿರುವನಂತಪುರಂನಲ್ಲಿ ಗರಿಷ್ಠ ಉಷ್ಣಾಂಶ 54 ಡಿಗ್ರಿ ಸೆಲ್ಸಿಯಸ್​ ದಾಖಲಾಗಿದೆ. ಇದು ರಾಜಸ್ಥಾನದ ಮರುಭೂಮಿಯಲ್ಲಿ ಕಡುಬೇಸಿಗೆಯಲ್ಲಿ ದಾಖಲಾಗುವ ತಾಪಮಾನದ ಆಸುಪಾಸಿನಲ್ಲಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಕೆಎಸ್‌ಡಿಎಂಎ) ಗುರುವಾರ ದಿನನಿತ್ಯದ ಶಾಖ ಸೂಚ್ಯಂಕವನ್ನು ಬಿಡುಗಡೆ ಮಾಡಿದ್ದು, ಉಷ್ಣಗಾಳಿ ಬೀಸುವ ಸಾಧ್ಯತೆ ಇದೆ ಎಚ್ಚರಿಕೆ ನೀಡಿದೆ.ಗುರುವಾರ

ಮರುಭೂಮಿಯನ್ನೂ ಮೀರಿಸಿ ಹೆಚ್ಚುತ್ತಿರುವ ಕರಾವಳಿಯ ತಾಪಮಾನ Read More »

error: Content is protected !!
Scroll to Top