ದೇಶ

ಒಳನುಸುಳುಕೋರರನ್ನು ಹುಡುಕಿ – ಹುಡುಕಿ ಹೊರಗಟ್ಟಲಾಗುವುದು: ಅಮಿತ್ ಶಾ

ಗಾಂಧಿನಗರ: ಭಾರತದೊಳಗೆ ಸೇರಿಕೊಂಡಿರುವ ‌ಪ್ರತಿಯೊಬ್ಬ ಒಳನುಸುಳುಕೋರನನ್ನು ಸಹ ಹುಡುಕಿ – ಹುಡುಕಿ ಹೊರಕ್ಕಟ್ಟುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಡುಗಿದ್ದಾರೆ. ಗುಜರಾತ್‌‌ ಭುಜ್‌ನಲ್ಲಿ ನಡೆದ ಬಿ‌ಎಸ್‌ಎಫ್ ವಜ್ರ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಪ್ರಕ್ರಿಯೆಯೇ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಎಂದು ಹೇಳಿದ್ದಾರೆ. ಎಸ್‌ಐಆ‌ರ್ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಚುನಾವಣಾ ಆಯೋಗಕ್ಕೆ ಪತ್ರ ಬರೆದ ಬೆನ್ನಲ್ಲೇ ಅಮಿತ್ ಶಾ ಈ ಹೇಳಿಕೆ ನೀಡಿದ್ದು, […]

ಒಳನುಸುಳುಕೋರರನ್ನು ಹುಡುಕಿ – ಹುಡುಕಿ ಹೊರಗಟ್ಟಲಾಗುವುದು: ಅಮಿತ್ ಶಾ Read More »

ದುಬೈ ಏರ್‌ಶೋನಲ್ಲಿ ತೇಜಸ್‌ ಪತನ : 37 ವರ್ಷದ ಪೈಲಟ್‌ ದುರ್ಮರಣ

ಭಾರತಕ್ಕೆ ಆಘಾತ ನೀಡಿದ ಯುದ್ಧ ವಿಮಾನ ಪತನ; ತನಿಖೆಗೆ ಆದೇಶ ನವದೆಹಲಿ: ದುಬೈ ವೈಮಾನಿಕ ಪ್ರದರ್ಶನದ ವೇಳೆ ಎಚ್‌ಎಎಲ್‌ ನಿರ್ಮಿತ ತೇಜಸ್‌ ಯುದ್ಧ ವಿಮಾನ (ಎಲ್‌ಸಿಎ ಎಂಕೆ -1) ಪತನಗೊಂಡು, ಭಾರತೀಯ ವಾಯುಪಡೆಯ ಪೈಲಟ್‌ ವಿಂಗ್‌ ಕಮಾಂಡರ್‌ ನಮಾಂಶ್‌ ಸ್ಯಾಲ್ ಮೃತಪಟ್ಟಿದ್ದಾರೆಂದು ದೃಢಪಡಿಸಲಾಗಿದೆ. ಕಾರ್ಯಕ್ರಮದ ಕೊನೆಯ ದಿನದಂದು 37 ವರ್ಷದ ಪೈಲಟ್‌ ಕೆಳಮಟ್ಟದ ಏರೋಬ್ಯಾಟಿಕ್ ಕೌಶಲ ನಿರ್ವಹಿಸುತ್ತಿದ್ದಾಗ ಫೈಟರ್ ಜೆಟ್ ಪತನಗೊಂಡಿದೆ. ದುರದೃಷ್ಟಕರ ಘಟನೆಯಲ್ಲಿ ವಿಂಗ್‌ ಕಮಾಂಡರ್‌ ಸಾವಿಗೀಡಾಗಿದರು. ವಿಂಗ್ ಕಮಾಂಡರ್ ನಮಾಂಶ್ ಸ್ಯಾಲ್ ಹಿಮಾಚಲ ಪ್ರದೇಶದ

ದುಬೈ ಏರ್‌ಶೋನಲ್ಲಿ ತೇಜಸ್‌ ಪತನ : 37 ವರ್ಷದ ಪೈಲಟ್‌ ದುರ್ಮರಣ Read More »

ಉಡುಪಿಯಲ್ಲೂ ಪತ್ತೆಯಾದರು ಪಾಕ್‌ ಬೇಹುಗಾರರು

ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರ ಸೆರೆ ಹಡಗುಗಳಿಗೆ ಸಂಬಂಧಿಸಿದ ರಹಸ್ಯ ತಾಂತ್ರಿಕ ಮಾಹಿತಿ ಪಾಕ್‌ಗೆ ರವಾನೆ ಉಡುಪಿ : ಪಾಕಿಸ್ತಾನ ಪರ ಬೇಹುಗಾರಿಕೆ ಮಾಡುತ್ತಿದ್ದ ಇಬ್ಬರನ್ನು ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಬಂಧಿಸಲಾಗಿದೆ. ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್‌ಯಾರ್ಡ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಂತ್ರಿ ಎಂದು ಗುರುತಿಸಲಾಗಿದೆ. ಇವರು ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿಯನ್ನು ರವಾನಿಸುತ್ತಿದ್ದರು ಎನ್ನಲಾಗಿದೆ. ಬಂಧಿತರಿಬ್ಬರೂ ಸುಷ್ಮಾ ಮೆರಿನ್ ಪ್ರೈವೇಟ್ ಲಿಮಿಟೆಡ್

ಉಡುಪಿಯಲ್ಲೂ ಪತ್ತೆಯಾದರು ಪಾಕ್‌ ಬೇಹುಗಾರರು Read More »

ಕಾರು ಸ್ಫೋಟ ಪ್ರಕರಣ : ಅಲ್‌ ಫಲಾಹ್‌ ವಿವಿ ಸ್ಥಾಪಕನನ್ನು ಕಸ್ಟಡಿಗೊಪ್ಪಿಸಿದ ಕೋರ್ಟ್‌

ವೈಟ್‌ ಕಾಲರ್‌ ಟೆರರ್‌ ಜಾಲದ ಕೇಂದ್ರವಾಗಿದ್ದ ವಿವಿಯ ಸ್ಥಾಪಕ ನವದೆಹಲಿ: ದೆಹಲಿಯ ಕೆಂಪುಕೋಟೆ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಅಲ್ ಫಲಾಹ್ ವಿಶ್ವವಿದ್ಯಾಲಯದ ಸಂಸ್ಥಾಪಕ ಜಾವೆದ್ ಅಹ್ಮದ್ ಸಿದ್ದಿಕಿಯನ್ನು ನ್ಯಾಯಾಲಯ ಡಿಸೆಂಬರ್ 1ರವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಿದೆ. ದೆಹಲಿ ಸ್ಫೋಟ ಮತ್ತು ವೈಟ್ ಕಾಲರ್ ಉಗ್ರ ಜಾಲದ ಹಿಂದಿನ ಭಯೋತ್ಪಾದಕ ಘಟಕದ ಕೇಂದ್ರ ಬಿಂದುವಾಗಿರುವ ಅಲ್ ಫಲಾಹ್ ವಿಶ್ವವಿದ್ಯಾಲಯದ ಸ್ಥಾಪಕ ಜವಾದ್ ಅಹ್ಮದ್ ಸಿದ್ದಿಕಿಯನ್ನು ಮಂಗಳವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ

ಕಾರು ಸ್ಫೋಟ ಪ್ರಕರಣ : ಅಲ್‌ ಫಲಾಹ್‌ ವಿವಿ ಸ್ಥಾಪಕನನ್ನು ಕಸ್ಟಡಿಗೊಪ್ಪಿಸಿದ ಕೋರ್ಟ್‌ Read More »

ವೈಟ್‌ ಕಾಲರ್‌ ಟೆರರ್‌ ಜಾಲದ ಉಗ್ರ ಡಾ.ಅಹ್ಮದ್‌ ಮೇಲೆ ಜೈಲಿನಲ್ಲಿ ಹಲ್ಲೆ

ಅಪಾಯಕಾರಿ ರಿಸಿನ್‌ ವಿಷ ತಯಾರಿಸಿ ಜನರನ್ನು ಸಾಯಿಸಲು ಸಂಚು ಮಾಡಿದ್ದ ಉಗ್ರ ಅಹಮದಾಬಾದ್ : ರಿಸಿನ್ ಎಂಬ ಅತ್ಯಂತ ಅಪಾಯಕಾರಿ ವಿಷ ಪದಾರ್ಥದ ಮೂಲಕ ದೇಶಾದ್ಯಂತ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಡಾ.ಅಹ್ಮದ್ ಮೊಹಿಯುದ್ದೀನ್ ಸಯ್ಯದ್ ಮೇಲೆ ಜೈಲಿನಲ್ಲಿ ಸಹಕೈದಿಗಳು ಹಲ್ಲೆ ಮಾಡಿದ್ದಾರೆ ಎಂದು ವರದಿಯಾಗಿದೆ. ವೈಟ್‌ ಕಾಲರ್‌ ಟೆರರ್‌ ಜಾಲದ ಭಾಗವಾಗಿರುವ ಡಾ.ಅಹ್ಮದ್‌ನನ್ನು ಇತ್ತೀಚೆಗೆ ಹೈದರಾಬಾದ್​ನಿಂದ ಬಂಧಿಸಿ ಗುಜರಾತ್‌ನ ಸಬರಮತಿ ಜೈಲಿನಲ್ಲಿರಿಸಲಾಗಿತ್ತು. ಜೈಲಿನಲ್ಲಿ ಕೈದಿಗಳ ನಡುವೆ ನಡೆದ ಗಲಾಟೆಯಲ್ಲಿ ಡಾ.ಅಹ್ಮದ್ ಮೇಲೆ ಸಹ ಕೈದಿಗಳು ಹಲ್ಲೆ

ವೈಟ್‌ ಕಾಲರ್‌ ಟೆರರ್‌ ಜಾಲದ ಉಗ್ರ ಡಾ.ಅಹ್ಮದ್‌ ಮೇಲೆ ಜೈಲಿನಲ್ಲಿ ಹಲ್ಲೆ Read More »

ನಾಳೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ದಾಖಲೆ 10ನೇ ಬಾರಿ ಪ್ರಮಾಣ ವಚನ ಸ್ವೀಕಾರ

ನರೇಂದ್ರ ಮೋದಿ, ಅಮಿತ್‌ ಶಾ ಮತ್ತಿತರರು ಭಾಗವಹಿಸುವ ನಿರೀಕ್ಷೆ ಪಾಟ್ನಾ : ಬಿಹಾರದ ಮುಖ್ಯಮಂತ್ರಿ ಆಗಿ ದಾಖಲೆ 10ನೇ ಬಾರಿಗೆ ನಿತೀಶ್ ಕುಮಾರ್ ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ನವೆಂಬರ್ 20ರಂದು ನಿತೀಶ್ ಕುಮಾರ್ ಜೆಡಿಯು-ಬಿಜೆಪಿ ಸಮ್ಮಿಶ್ರ ಸರ್ಕಾರದ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ನಡೆಯಲಿರುವ ಬಿಹಾರದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್‌ಡಿಎಯ ಹಲವಾರು ಉನ್ನತ ನಾಯಕರು ಈ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ನಾಳೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ದಾಖಲೆ 10ನೇ ಬಾರಿ ಪ್ರಮಾಣ ವಚನ ಸ್ವೀಕಾರ Read More »

ಮಕ್ಕಾ ಅಪಘಾತ : ಮೃತ ಭಾರತೀಯರ ಸಂಖ್ಯೆ 45ಕ್ಕೇರಿಕೆ

ಹುಬ್ಬಳ್ಳಿಯ ಓರ್ವ ವ್ಯಕ್ತಿಯೂ ಸಾವು ನವದೆಹಲಿ : ಸೌದಿ ಅರೇಬಿಯಾದ ಮಕ್ಕಾ ಮತ್ತು ಮದೀನಾ ನಡುವೆ ಸೋಮವಾರ ನಸುಕಿನ ವೇಳೆ ಸಂಭವಿಸಿದ ಬಸ್ ಅಪಘಾತದಲ್ಲಿ ಒಟ್ಟು 45 ಮಂದಿ ಭಾರತೀಯರು ಸಾವನ್ನಪ್ಪಿದ್ದು, ಈ ಪೈಕಿ ಓರ್ವ ಕನ್ನಡಿಗ ಕೂಡ ಸೇರಿದ್ದಾರೆ ಎಂದು ತಿಳಿದುಬಂದಿದೆ. ಸೌದಿ ಅರೇಬಿಯಾದ ಮೆಕ್ಕಾ-ಮದೀನಾ ರಸ್ತೆಯಲ್ಲಿ ಬಸ್ ಹಾಗೂ ಡೀಸಿಲ್‌ ಟ್ಯಾಂಕರ್ ನಡುವೆ ಡಿಕ್ಕಿಯಾದ ರಭಸಕ್ಕೆ ಬಸ್ ಹೊತ್ತಿ ಉರಿದಿತ್ತು. ದುರ್ಘಟನೆಯಲ್ಲಿ 45 ಮಂದಿ ಭಾರತೀಯರು ಸಜೀವ ದಹನವಾಗಿದ್ದಾರೆ. ಬಸ್ಸಿನಲ್ಲಿದ್ದ 46 ಜನರಲ್ಲಿ 43

ಮಕ್ಕಾ ಅಪಘಾತ : ಮೃತ ಭಾರತೀಯರ ಸಂಖ್ಯೆ 45ಕ್ಕೇರಿಕೆ Read More »

ತಲೆಗೆ 1 ಕೋಟಿ ರೂ. ಬಹುಮಾನವಿದ್ದ ನಕ್ಸಲ್‌ ಕಮಾಂಡರ್‌ ಎನ್‌ಕೌಂಟರ್‌ಗೆ ಬಲಿ

ಮೂರು ರಾಜ್ಯಗಳ ಸಂಗಮ ಸ್ಥಳದಲ್ಲಿ ಅಡಗಿಕೊಂಡಿದ್ದ ನಕ್ಸಲ್‌ ಮುಖಂಡನನ್ನು ಬೇಟೆಯಾಡಿದ ಭದ್ರತಾ ಪಡೆ ಹೈದರಾಬಾದ್‌ : ಆಂಧ್ರ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ನಡೆದ ಎನ್​ಕೌಂಟರ್‌ನಲ್ಲಿ ಟಾಪ್ ನಕ್ಸಲ್ ಕಮಾಂಡರ್ ಮಾಡ್ವಿ ಹಿಡ್ಮಾ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈತ 26 ಸಶಸ್ತ್ರ ದಾಳಿಗಳ ರೂವಾರಿಯಾಗಿದ್ದ. ಹಿಡ್ಮಾ ಆಂಧ್ರ ಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ. ಹಲವಾರು ಮಾವೋವಾದಿ ಅಡಗುತಾಣಗಳನ್ನು ಹೊಂದಿರುವ ಆಂಧ್ರ ಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ತ್ರಿ-ಜಂಕ್ಷನ್ ಬಳಿ ಈ

ತಲೆಗೆ 1 ಕೋಟಿ ರೂ. ಬಹುಮಾನವಿದ್ದ ನಕ್ಸಲ್‌ ಕಮಾಂಡರ್‌ ಎನ್‌ಕೌಂಟರ್‌ಗೆ ಬಲಿ Read More »

ವೈಟ್‌ ಕಾಲರ್‌ ಟೆರರ್‌ ಕೇಂದ್ರ ಸ್ಥಾನ ಅಲ್​-ಫಲಾಹ್ ವಿವಿಗೆ ಇ.ಡಿ. ದಾಳಿ

25 ಸ್ಥಳಗಳ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ತೀವ್ರ ಶೋಧ ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ 13 ಮಂದಿಯ ಸಾವಿಗೆ ಕಾರಣವಾದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶಂಕಿತ ಉಗ್ರರ ಜೊತೆಗಿನ ಸಂಬಂಧ ಹೊಂದಿರುವ ಅಲ್​-ಫಲಾಹ್ ವಿಶ್ವವಿದ್ಯಾಲಯದ ಹಣಕಾಸು ವ್ಯವಹಾರದ ಕುರಿತ ತನಿಖೆಯನ್ನು ಜಾರಿ ನಿರ್ದೇಶನಾಲಯ ತೀವ್ರಗೊಳಿಸಿದ್ದು, ವಿವಿಯ ಕಚೇರಿ ಸೇರಿ 25 ಸ್ಥಳಗಳ ಮೇಲೆ ಮಂಗಳವಾರ ಬೆಳಗ್ಗೆ ದಾಳಿ ನಡೆಸಿ ತೀವ್ರ ಶೋಧ ನಡೆಸುತ್ತಿದೆ. ಫರಿದಾಬಾದ್‌ನಲ್ಲಿರುವ 70 ಎಕರೆ ವಿಸ್ತೀರ್ಣದ ವಿಶ್ವವಿದ್ಯಾಲಯದ ಓಖ್ಲಾ ಕಚೇರಿಯ

ವೈಟ್‌ ಕಾಲರ್‌ ಟೆರರ್‌ ಕೇಂದ್ರ ಸ್ಥಾನ ಅಲ್​-ಫಲಾಹ್ ವಿವಿಗೆ ಇ.ಡಿ. ದಾಳಿ Read More »

ಭಾರತವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದ ಶೇಖ್‌ ಹಸೀನಾ ಮರಣದಂಡನೆ ತೀರ್ಪು

ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದ ಮಾಜಿ ಪ್ರಧಾನಿಯನ್ನು ಗಡಿಪಾರು ಮಾಡಲಾಗುತ್ತದೆಯೇ? ನವದೆಹಲಿ : ಬಾಂಗ್ಲಾದೇಶದ ದೇಶಭ್ರಷ್ಟ ಮಾಜಿ ಪ್ರಧಾನಮಂತ್ರಿ ಶೇಖ್ ಹಸೀನಾ ಅವರಿಗೆ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪ ಹೊರಿಸಿ ಬಾಂಗ್ಲಾದ ನ್ಯಾಯಾಲಯ ಮರಣದಂಡನೆ ವಿಧಿಸಿದ ತೀರ್ಪು ಭಾರತವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದೆ. ಕಳೆದ ವರ್ಷ ಜುಲೈ-ಆಗಸ್ಟ್ ತಿಂಗಳಲ್ಲಿ ನಡೆದ ವಿದ್ಯಾರ್ಥಿ ಹೋರಾಟದ ಸಂದರ್ಭದಲ್ಲಿ ನಡೆದ ಹಿಂಸಾಚಾರ ಮತ್ತು ನರಮೇಧಕ್ಕೆ ಸಂಬಂಧಿಸಿದಂತೆ ಢಾಕಾದ ಅಂತಾರಾಷ್ಟ್ರೀಯ ಅಪರಾಧಗಳ ಟ್ರಿಬ್ಯೂನಲ್‌ ಈ ಐತಿಹಾಸಿಕ ತೀರ್ಪನ್ನು ನೀಡಿದೆ. ಪ್ರಸ್ತುತ ಶೇಖ್‌ ಹಸೀನಾ ಭಾರತದಲ್ಲಿ

ಭಾರತವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದ ಶೇಖ್‌ ಹಸೀನಾ ಮರಣದಂಡನೆ ತೀರ್ಪು Read More »

error: Content is protected !!
Scroll to Top