ದೇಶ

ಮೋಹನ್‌ ಭಾಗವತ್‌ ವಿರುದ್ಧ ಬ್ರಾಹ್ಮಣ ಅವಹೇಳನ ದೂರು

ಜಾತಿ ಸೃಷ್ಟಿಯಾಗಿದ್ದು ಪುರೋಹಿತರಿಂದ ಎಂಬ ಹೇಳಿಕೆಗೆ ಆಕ್ಷೇಪ ಮುಜಾಫರ್‌ಪುರ: ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ವಿರುದ್ಧ ಬ್ರಾಹ್ಮಣರ ಅವಹೇಳನ ದೂರು ದಾಖಲಾಗಿದೆ. ಭಾಗವತ್‌ ಇತ್ತೀಚೆಗೆ ಮಾಡಿದ ಭಾಷಣದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.ಮುಂಬಯಿಯಲ್ಲಿ ಭಾನುವಾರ ನಡೆದ ಸಮಾರಂಭವೊಂದಲ್ಲಿ ಭಾಗವತ್ ಅವರ ಭಾಷಣದ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ವಕೀಲ ಸುಧೀರ್ ಕುಮಾರ್ ಓಜಾ ಅವರು ಮುಜಾಫರ್‌ಪುರದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.ದೇವರ ಎದುರಲ್ಲೆ ಎಲ್ಲರೂ ಸಮಾನರು, ಹಿಂದೂ ಸಮಾಜದಲ್ಲಿ ಕಠಿಣ ಜಾತಿ ಶ್ರೇಣಿ […]

ಮೋಹನ್‌ ಭಾಗವತ್‌ ವಿರುದ್ಧ ಬ್ರಾಹ್ಮಣ ಅವಹೇಳನ ದೂರು Read More »

ಫೆ.11 : ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ : ಗೃಹ, ಸಹಕಾರಿ ಸಚಿವ ಅಮಿತ್‍ ಶಾ ಅಗಮನ

ಪುತ್ತೂರು : ಕೇಂದ್ರ ಅಡಿಕೆ ಮತ್ತು ಕೊಕ್ಕೊ ಮರಾಟ ಮತ್ತು ಸಂಸ್ಕರಣಾ ಸಹಕಾರಿ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮಾಚರಣೆ ಫೆ.11 ಶನಿವಾರ ಮಧ್ಯಾಹ್ನ 2.30 ಕ್ಕೆ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ನಡೆಯಲಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್‍ ಶಾ ಸಂಭ್ರಮಾಚರಣೆಯನ್ನು ಉದ್ಘಾಟಿಸಲಿದ್ದು, ಕ್ಯಾಂಪ್ಕೋ ಅಧ್ಯಕ್ಷ ೆ.ಕಿಶೋರ್‍ ಕುಮಾರ್‍ ಕೊಡ್ಗಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‍ ಜೋಶಿ,

ಫೆ.11 : ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ : ಗೃಹ, ಸಹಕಾರಿ ಸಚಿವ ಅಮಿತ್‍ ಶಾ ಅಗಮನ Read More »

ಗೋ ಮಾಂಸ ತಿಂದವರು ಹಿಂದು ಧರ್ಮಕ್ಕೆ ಘರ್‌ ವಾಪಸಿ ಅಗಬಹುದು: ಹೊಸಬಾಳೆ

ಸಂಚಲನ ಸೃಷ್ಟಿಸಿದ ಆರ್‌ಎಸ್‌ಎಸ್‌ ಮುಖಂಡನ ಹೇಳಿಕೆ ಹೊಸದಿಲ್ಲಿ : ಗೋಮಾಂಸ ತಿಂದವರು ಕೂಡ ಹಿಂದು ಧರ್ಮಕ್ಕೆ ಘರ್‌ ವಾಪಸಿ ಆಗಬಹುದು ಎಂದಿರುವ ಆರ್‌ಎಸ್‌ಎಸ್‌ ಮುಖಂಡ ದತ್ತಾತ್ರೇಯ ಹೊಸಬಾಳೆ ಅವರ ಹೇಳಿಕೆ ಸಂಚಲನವುಂಟು ಮಾಡಿದೆ. ಗೋಮಾಂಸ ಸೇವಿಸಿದವರಿಗೆ ನಾವು ಬಾಗಿಲು ಮುಚ್ಚುವುದಿಲ್ಲ. ಅವರು ಘರ್ ವಾಪಸಿ ಆಗಬಹುದು ಎಂದು ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.ಗೋಮಾಂಸ ಸೇವಿಸಿದವರು ಹಿಂದೂ ಧರ್ಮಕ್ಕೆ ಮರಳಬಹುದು. ಅವರ ಪೂರ್ವಜರು ಹಿಂದೂಗಳಾಗಿದ್ದವರು, ಇಂದಿಗೂ ಹಿಂದೂಗಳಾಗಿದ್ದಾರೆ ಎಂದು ಹೇಳಿದರು. ಇಷ್ಟೇ ಅಲ್ಲ, ತನ್ನನ್ನು ತಾನು ಹಿಂದೂ ಎಂದು ಪರಿಗಣಿಸುವವನು

ಗೋ ಮಾಂಸ ತಿಂದವರು ಹಿಂದು ಧರ್ಮಕ್ಕೆ ಘರ್‌ ವಾಪಸಿ ಅಗಬಹುದು: ಹೊಸಬಾಳೆ Read More »

ಅದಾನಿ ಕಂಪನಿಗಳ ಸಾಲ ವಿವರ ಕೇಳಿದ ಆರ್‌ಬಿಐ

ಅದಾನಿ ಸಮೂಹಕ್ಕೆ ಹೆಚ್ಚಿದ ಸಂಕಷ್ಟ ಮುಂಬೈ: ಷೇರುಮೌಲ್ಯ ಕುಸಿತದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ಅದಾನಿ ಕಂಪನಿಯಿಂದ ಈಗ ಆರ್‌ಬಿಐ ಸಾಲದ ವಿವರಗಳನ್ನು ಕೇಳಿದೆ. ಷೇರುಗಳ ಮೌಲ್ಯದಲ್ಲಿ ತೀವ್ರ ಕುಸಿತದ ನಡುವೆ ಅದಾನಿ ಸಮೂಹ ರೂ.20,000 ಕೋಟಿ ರೂ.ಗಳ ಫಾಲೋ ಆನ್ ಷೇರುಗಳ ಮಾರಾಟವನ್ನು ಹಿಂಪಡೆಯುವುದಾಗಿ ಫೆ.1 ರಂದು ಘೋಷಿಸಿದ 24 ಗಂಟೆಗಳಲ್ಲಿ ಆರ್‌ಬಿಐ ಬ್ಯಾಂಕ್‌ಗಳಿಂದ ಸಾಲದ ಮಾಹಿತಿ ಕೇಳಿದೆ. ಇನ್ನು ಎಫ್‌ಪಿಒಗಳನ್ನು ಹಿಂಪಡೆಯುವ ನಿರ್ಧಾರ ಘೋಷಿಸಿದ ಬೆನ್ನಲ್ಲೇ ಸ್ವಿಸ್ ಬ್ಯಾಂಕ್ ಕ್ರೆಡಿಟ್ ಅದಾನಿ ಸಂಸ್ಥೆಯ ಬಾಂಡ್‌ಗಳನ್ನು ಸಾಲ

ಅದಾನಿ ಕಂಪನಿಗಳ ಸಾಲ ವಿವರ ಕೇಳಿದ ಆರ್‌ಬಿಐ Read More »

ಗ್ರಾಮೀಣ ಅಂಚೆ ಸೇವಕರ ನೇಮಕಕ್ಕೆ ಅರ್ಜಿ ಆಹ್ವಾನ

ಪುತ್ತೂರು : ಮಂಗಳೂರು ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಂದು ಮಂಗಳೂರು ವಲಯ ಅಂಚೆ ಅಧೀಕ್ಷಕ ಶ್ರೀಹರ್ಷ ತಿಳಿಸಿದ್ದಾರೆ. ಫೆ,.16 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನ. Indiapostgdsonline.gov.in  ವೆಬ್ಸೈಟ್ ಮೂಲಕವೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ. ಗಣಿತ ಮತ್ತು

ಗ್ರಾಮೀಣ ಅಂಚೆ ಸೇವಕರ ನೇಮಕಕ್ಕೆ ಅರ್ಜಿ ಆಹ್ವಾನ Read More »

ಇಂದಿನಿಂದ ಸಂಸತ್ತಿನ ಬಜೆಟ್‌ ಅಧಿವೇಶನ

ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ ಹೊಸದಿಲ್ಲಿ : ಸಂಸತ್ ಬಜೆಟ್ ಅಧಿವೇಶನ ಇಂದಿನಿಂದ‌ ಆರಂಭವಾಗಲಿದೆ‌. ಬುಧವಾರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದು, ಇಂದು ರಾಷ್ಟ್ರಪತಿ ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಇಂದು ನಿರ್ಮಲಾ‌‌ ಸೀತಾರಾಮನ್ ಆರ್ಥಿಕ ಸಮೀಕ್ಷಾ ವರದಿ ಮಂಡಿಸಲಿದ್ದಾರೆ.ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್ ನ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಷ್ಟ್ರಪತಿ ಭಾಷಣದ ಬಳಿಕ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ‌.ಜಾಗತಿಕ ಆರ್ಥಿಕ ಹಿಂಜರಿತದ ಕಾರಣದಿಂದಾಗಿ ಹಣಕಾಸು ಸಚಿವರು ವಿತ್ತೀಯ

ಇಂದಿನಿಂದ ಸಂಸತ್ತಿನ ಬಜೆಟ್‌ ಅಧಿವೇಶನ Read More »

ನಿಮ್ಮ ಸರಕಾರವನ್ನೇಕೆ ಕ್ರಿಶ್ಚಿಯನ್‌ ರಾಷ್ಟ್ರೀಯವಾದಿ ಎಂದು ಕರೆಯುವುದಿಲ್ಲ?

ವಿದೇಶಿ ಮಾಧ್ಯಮಗಳಿಗೆ ವಿದೇಶಾಂಗ ಸಚಿವ ಜೈಶಂಕರ್‌ ತರಾಟೆ ಹೊಸದಿಲ್ಲಿ : ಭಾರತ ಸರ್ಕಾರವನ್ನು ಪದೇ ಪದೆ ಹಿಂದೂ ರಾಷ್ಟ್ರೀಯತಾವಾದಿ ಎಂದು ಕರೆಯುತ್ತಿರುವ ವಿದೇಶಿ ಮಾಧ್ಯಮಗಳನ್ನು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್.‌ ಜೈಶಂಕರ್‌ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.ಬಹುತೇಕ ವಿದೇಶಿ ಮಾಧ್ಯಮಗಳು ಭಾರತ ಸರ್ಕಾರವನ್ನು ಹಿಂದೂ ರಾಷ್ಟ್ರೀಯತಾವಾದಿ ಎಂದು ಉಲ್ಲೇಖಿಸುತ್ತವೆ. ಆದರೆ ಅಮೆರಿಕ ಹಾಗೂ ಇತರ ಯುರೋಪ್‌ ರಾಷ್ಟ್ರಗಳ ಸರ್ಕಾರಗಳನ್ನು ಅವರು ಕ್ರಿಶ್ಚಿಯನ್‌ ರಾಷ್ಟ್ರವಾದಿ ಎಂದೇಕೆ ಕರೆಯುವುದಿಲ್ಲ ಎಂದು ತಿಳಿಯದಾಗಿದೆ ಎಂದು ಡಾ.ಎಸ್.‌ ಜೈಶಂಕರ್‌ ಪ್ರಶ್ನಿಸಿದ್ದಾರೆ.ವಿದೇಶಿ ಮಾಧ್ಯಮಗಳು ಧರ್ಮ

ನಿಮ್ಮ ಸರಕಾರವನ್ನೇಕೆ ಕ್ರಿಶ್ಚಿಯನ್‌ ರಾಷ್ಟ್ರೀಯವಾದಿ ಎಂದು ಕರೆಯುವುದಿಲ್ಲ? Read More »

ನಿಲ್ಲದ ಅದಾನಿ ಕಂಪನಿಗಳ ಷೇರುಮೌಲ್ಯ ಕುಸಿತ

ಎಲ್‌ಐಸಿಗೆ 18,000 ಕೋ.ರೂ. ನಷ್ಟ ಅದಾನಿ ಕಂಪನಿಗಳ ಹೂಡಿಕೆದಾರರು ಕಳೆದುಕೊಂಡದ್ದು 15 ಲಕ್ಷ ಕೋ. ರೂ. ಮುಂಬಯಿ : ಅದಾನಿ ಸಮೂಹ ಕಂಪನಿಗಳ ಷೇರು ಮೌಲ್ಯದಲ್ಲಿ ಕಾಣುತ್ತಿರುವ ಕುಸಿತದಿಂದ ಹೂಡಿಕೆದಾರರು ತತ್ತರಿಸಿ ಹೋಗಿದ್ದಾರೆ. ಕೇವಲ ಎರಡು ವಹಿವಾಟು ಅವಧಿಗಳಲ್ಲಿ ಅದಾನಿ ಗ್ರೂಪ್‌ನ ಹೂಡಿಕೆದಾರರ ಷೇರು ಮೌಲ್ಯಗಳಲ್ಲಿ ಭಾರಿ ಕುಸಿತವಾಗಿದೆ. ದೇಶದ ಅತಿದೊಡ್ಡ ಸಾಂಸ್ಥಿಕ ಹೂಡಿಕೆದಾರರಾದ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (LIC) ಕೂಡ ಅದಾನಿ ಷೇರು ಕುಸಿತದಿಂದ ಸಾವಿರಾರು ಕೋ. ರೂ. ನಷ್ಟ ಅನುಭವಿಸಿದೆ. ಅದಾನಿ

ನಿಲ್ಲದ ಅದಾನಿ ಕಂಪನಿಗಳ ಷೇರುಮೌಲ್ಯ ಕುಸಿತ Read More »

ಫೆ.13-17 : ಏರೋ ಇಂಡಿಯಾ ವೈಮಾನಿಕ ಪ್ರದರ್ಶನ

10 ದಿನ ಯಲಹಂಕ ವ್ಯಾಪ್ತಿಯಲ್ಲಿ ಮಾಂಸಾಹಾರ ನಿಷಿದ್ಧ ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ಫೆ.13ರಿಂದ 17ರವರೆಗೆ ಐದು ದಿನ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ನಡೆಯಲಿದೆ.ಈ ಪ್ರದರ್ಶನದ ಹಿನ್ನೆಲೆಯಲ್ಲಿ ಯಲಹಂಕ ವಾಯುನೆಲೆಯ 10 ಕಿ. ಮೀ. ವ್ಯಾಪ್ತಿಯಲ್ಲಿ ಜ.30 ರಿಂದ ಫೆ.20ರ ವರೆಗೆ ಎಲ್ಲ ಮಾಂಸದ ಅಂಗಡಿಗಳು, ಚಿಕನ್, ಮೀನು ಮಾರಾಟ ಕೇಂದ್ರಗಳನ್ನು ಬಂದ್ ಮಾಡುವಂತೆ ಬಿಬಿಎಂಪಿ ಆದೇಶ ಹೊರಡಿಸಿದೆ.ಈ ಅವಧಿಯಲ್ಲಿ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಮಾಂಸ ಆಹಾರ ಮಾರಾಟ ಮತ್ತು ಸೇವೆಯನ್ನು ನಿರ್ಬಂಧಿಸಲಾಗಿದೆ.ಈ ಆದೇಶವನ್ನು

ಫೆ.13-17 : ಏರೋ ಇಂಡಿಯಾ ವೈಮಾನಿಕ ಪ್ರದರ್ಶನ Read More »

ಇಂದು ಮಕ್ಕಳೊಂದಿಗೆ ಮೋದಿ ಪರೀಕ್ಷಾ ಪೆ ಚರ್ಚಾ

155 ದೇಶಗಳಿಂದ 38.8 ಲಕ್ಷ ಮಕ್ಕಳು ನೋಂದಣಿ ಹೊಸದಿಲ್ಲಿ :ಪ್ರಧಾನಿ ನರೇಂದ್ರ ಮೋದಿಯವರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಇಂದು ನಡೆಯಲಿದೆ. 2023ರ ಬೋರ್ಡ್ ಪರೀಕ್ಷೆ ಬಗ್ಗೆ ಮೋದಿ ವಿದ್ಯಾರ್ಥಿಗಳೊಂದಿಗೆ ಮಾತನಾಡಲಿದ್ದಾರೆ ಮತ್ತು ಅವರಿಗೆ ಒತ್ತಡ-ಮುಕ್ತ ಮಂತ್ರಗಳನ್ನು ನೀಡಲಿದ್ದಾರೆ. ದಿಲ್ಲಿಯ ತಲ್‌ಕಟೋರ ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪರಿಕ್ಷಾ ಪೇ ಚರ್ಚಾ 2023 ದೂರದರ್ಶನದಲ್ಲಿ ನೇರ ಪ್ರಸಾರವಾಗಲಿದೆ.ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮಕ್ಕೆ ಈ ಬಾರಿ ಸುಮಾರು 38.8 ಲಕ್ಷ ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ.

ಇಂದು ಮಕ್ಕಳೊಂದಿಗೆ ಮೋದಿ ಪರೀಕ್ಷಾ ಪೆ ಚರ್ಚಾ Read More »

error: Content is protected !!
Scroll to Top