ದೇಶ

ಮಕ್ಕಾ ಅಪಘಾತ : ಮೃತ ಭಾರತೀಯರ ಸಂಖ್ಯೆ 45ಕ್ಕೇರಿಕೆ

ಹುಬ್ಬಳ್ಳಿಯ ಓರ್ವ ವ್ಯಕ್ತಿಯೂ ಸಾವು ನವದೆಹಲಿ : ಸೌದಿ ಅರೇಬಿಯಾದ ಮಕ್ಕಾ ಮತ್ತು ಮದೀನಾ ನಡುವೆ ಸೋಮವಾರ ನಸುಕಿನ ವೇಳೆ ಸಂಭವಿಸಿದ ಬಸ್ ಅಪಘಾತದಲ್ಲಿ ಒಟ್ಟು 45 ಮಂದಿ ಭಾರತೀಯರು ಸಾವನ್ನಪ್ಪಿದ್ದು, ಈ ಪೈಕಿ ಓರ್ವ ಕನ್ನಡಿಗ ಕೂಡ ಸೇರಿದ್ದಾರೆ ಎಂದು ತಿಳಿದುಬಂದಿದೆ. ಸೌದಿ ಅರೇಬಿಯಾದ ಮೆಕ್ಕಾ-ಮದೀನಾ ರಸ್ತೆಯಲ್ಲಿ ಬಸ್ ಹಾಗೂ ಡೀಸಿಲ್‌ ಟ್ಯಾಂಕರ್ ನಡುವೆ ಡಿಕ್ಕಿಯಾದ ರಭಸಕ್ಕೆ ಬಸ್ ಹೊತ್ತಿ ಉರಿದಿತ್ತು. ದುರ್ಘಟನೆಯಲ್ಲಿ 45 ಮಂದಿ ಭಾರತೀಯರು ಸಜೀವ ದಹನವಾಗಿದ್ದಾರೆ. ಬಸ್ಸಿನಲ್ಲಿದ್ದ 46 ಜನರಲ್ಲಿ 43 […]

ಮಕ್ಕಾ ಅಪಘಾತ : ಮೃತ ಭಾರತೀಯರ ಸಂಖ್ಯೆ 45ಕ್ಕೇರಿಕೆ Read More »

ತಲೆಗೆ 1 ಕೋಟಿ ರೂ. ಬಹುಮಾನವಿದ್ದ ನಕ್ಸಲ್‌ ಕಮಾಂಡರ್‌ ಎನ್‌ಕೌಂಟರ್‌ಗೆ ಬಲಿ

ಮೂರು ರಾಜ್ಯಗಳ ಸಂಗಮ ಸ್ಥಳದಲ್ಲಿ ಅಡಗಿಕೊಂಡಿದ್ದ ನಕ್ಸಲ್‌ ಮುಖಂಡನನ್ನು ಬೇಟೆಯಾಡಿದ ಭದ್ರತಾ ಪಡೆ ಹೈದರಾಬಾದ್‌ : ಆಂಧ್ರ ಪ್ರದೇಶದಲ್ಲಿ ಇಂದು ಬೆಳಗಿನ ಜಾವ ನಡೆದ ಎನ್​ಕೌಂಟರ್‌ನಲ್ಲಿ ಟಾಪ್ ನಕ್ಸಲ್ ಕಮಾಂಡರ್ ಮಾಡ್ವಿ ಹಿಡ್ಮಾ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈತ 26 ಸಶಸ್ತ್ರ ದಾಳಿಗಳ ರೂವಾರಿಯಾಗಿದ್ದ. ಹಿಡ್ಮಾ ಆಂಧ್ರ ಪ್ರದೇಶದ ಅಲ್ಲೂರಿ ಸೀತಾರಾಮರಾಜು ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಹತನಾಗಿದ್ದಾನೆ. ಹಲವಾರು ಮಾವೋವಾದಿ ಅಡಗುತಾಣಗಳನ್ನು ಹೊಂದಿರುವ ಆಂಧ್ರ ಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ತ್ರಿ-ಜಂಕ್ಷನ್ ಬಳಿ ಈ

ತಲೆಗೆ 1 ಕೋಟಿ ರೂ. ಬಹುಮಾನವಿದ್ದ ನಕ್ಸಲ್‌ ಕಮಾಂಡರ್‌ ಎನ್‌ಕೌಂಟರ್‌ಗೆ ಬಲಿ Read More »

ವೈಟ್‌ ಕಾಲರ್‌ ಟೆರರ್‌ ಕೇಂದ್ರ ಸ್ಥಾನ ಅಲ್​-ಫಲಾಹ್ ವಿವಿಗೆ ಇ.ಡಿ. ದಾಳಿ

25 ಸ್ಥಳಗಳ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ತೀವ್ರ ಶೋಧ ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ 13 ಮಂದಿಯ ಸಾವಿಗೆ ಕಾರಣವಾದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಶಂಕಿತ ಉಗ್ರರ ಜೊತೆಗಿನ ಸಂಬಂಧ ಹೊಂದಿರುವ ಅಲ್​-ಫಲಾಹ್ ವಿಶ್ವವಿದ್ಯಾಲಯದ ಹಣಕಾಸು ವ್ಯವಹಾರದ ಕುರಿತ ತನಿಖೆಯನ್ನು ಜಾರಿ ನಿರ್ದೇಶನಾಲಯ ತೀವ್ರಗೊಳಿಸಿದ್ದು, ವಿವಿಯ ಕಚೇರಿ ಸೇರಿ 25 ಸ್ಥಳಗಳ ಮೇಲೆ ಮಂಗಳವಾರ ಬೆಳಗ್ಗೆ ದಾಳಿ ನಡೆಸಿ ತೀವ್ರ ಶೋಧ ನಡೆಸುತ್ತಿದೆ. ಫರಿದಾಬಾದ್‌ನಲ್ಲಿರುವ 70 ಎಕರೆ ವಿಸ್ತೀರ್ಣದ ವಿಶ್ವವಿದ್ಯಾಲಯದ ಓಖ್ಲಾ ಕಚೇರಿಯ

ವೈಟ್‌ ಕಾಲರ್‌ ಟೆರರ್‌ ಕೇಂದ್ರ ಸ್ಥಾನ ಅಲ್​-ಫಲಾಹ್ ವಿವಿಗೆ ಇ.ಡಿ. ದಾಳಿ Read More »

ಭಾರತವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದ ಶೇಖ್‌ ಹಸೀನಾ ಮರಣದಂಡನೆ ತೀರ್ಪು

ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದ ಮಾಜಿ ಪ್ರಧಾನಿಯನ್ನು ಗಡಿಪಾರು ಮಾಡಲಾಗುತ್ತದೆಯೇ? ನವದೆಹಲಿ : ಬಾಂಗ್ಲಾದೇಶದ ದೇಶಭ್ರಷ್ಟ ಮಾಜಿ ಪ್ರಧಾನಮಂತ್ರಿ ಶೇಖ್ ಹಸೀನಾ ಅವರಿಗೆ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪ ಹೊರಿಸಿ ಬಾಂಗ್ಲಾದ ನ್ಯಾಯಾಲಯ ಮರಣದಂಡನೆ ವಿಧಿಸಿದ ತೀರ್ಪು ಭಾರತವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದೆ. ಕಳೆದ ವರ್ಷ ಜುಲೈ-ಆಗಸ್ಟ್ ತಿಂಗಳಲ್ಲಿ ನಡೆದ ವಿದ್ಯಾರ್ಥಿ ಹೋರಾಟದ ಸಂದರ್ಭದಲ್ಲಿ ನಡೆದ ಹಿಂಸಾಚಾರ ಮತ್ತು ನರಮೇಧಕ್ಕೆ ಸಂಬಂಧಿಸಿದಂತೆ ಢಾಕಾದ ಅಂತಾರಾಷ್ಟ್ರೀಯ ಅಪರಾಧಗಳ ಟ್ರಿಬ್ಯೂನಲ್‌ ಈ ಐತಿಹಾಸಿಕ ತೀರ್ಪನ್ನು ನೀಡಿದೆ. ಪ್ರಸ್ತುತ ಶೇಖ್‌ ಹಸೀನಾ ಭಾರತದಲ್ಲಿ

ಭಾರತವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದ ಶೇಖ್‌ ಹಸೀನಾ ಮರಣದಂಡನೆ ತೀರ್ಪು Read More »

ಮಕ್ಕಾದಲ್ಲಿ ಭೀಕರ ಅಪಘಾತ : 42 ಭಾರತೀಯ ಉಮ್ರಾ ಯಾತ್ರಿಕರು ದುರ್ಮರಣ

ಟ್ಯಾಂಕರ್‌ ಡಿಕ್ಕಿ ಹೊಡೆದ ಪರಿಣಾಮ ಹೊತ್ತಿ ಉರಿದ ಬಸ್‌ ನವದೆಹಲಿ : ಸೌದಿ ಅರೇಬಿಯಾದಲ್ಲಿ ಮಕ್ಕಾ ಸಮೀಪ ಸೋಮವಾರ ಮುಂಜಾನೆ ಬಸ್‌ ಮತ್ತು ಡೀಸೆಲ್‌ ಟ್ಯಾಂಕರ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 42 ಭಾರತೀಯ ಮಕ್ಕಾ ಯಾತ್ರಿಕರು ಮೃತಪಟ್ಟಿದ್ದಾರೆಂದು ವರದಿಯಾಗಿದೆ. ಮಕ್ಕಾದಿಂದ ಮದೀನಾಕ್ಕೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್‌ ಸೋಮವಾರ ಮುಂಜಾನೆ 1.30ರ ವೇಳೆಗೆ ಮುಫ್ರಿಹತ್‌ ಎಂಬ ಸ್ಥಳದಲ್ಲಿ ಅಪಘಾತಕ್ಕೀಡಾಗಿದೆ. ಅಪಘಾತದಿಂದ ತೀವ್ರತೆಯಿಂದಾಗಿ ಬಸ್‌ಗೆ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಬಸ್‌ನಲ್ಲಿದ್ದವರೆಲ್ಲ ಹೈದರಾಬಾದ್‌ನ

ಮಕ್ಕಾದಲ್ಲಿ ಭೀಕರ ಅಪಘಾತ : 42 ಭಾರತೀಯ ಉಮ್ರಾ ಯಾತ್ರಿಕರು ದುರ್ಮರಣ Read More »

ಶಬರಿಮಲೆ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಆರಂಭ

ಮುಂಜಾನೆ 3 ಗಂಟೆಗೆ ತೆರೆದ ದೇಗುಲದ ಬಾಗಿಲು, ಸಾವಿರಾರು ಭಕ್ತರಿಂದ ಅಯ್ಯಪ್ಪ ದರ್ಶನ ಶಬರಿಮಲೆ : ಈ ವರ್ಷದ ಮಂಡಲ ಮತ್ತು ಮಕರ ವಿಳಕ್ಕು ಯಾತ್ರಾ ಋತುವಿಗಾಗಿ ಶಬರಿಮಲೆ ದೇಗುಲದ ಬಾಗಿಲು ಇಂದು ತೆರೆದಿದೆ. ಅಯ್ಯಪ್ಪ ದೇಗುಲದ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಇಂದಿನಿಂದ ಆರಂಭವಾಗಿದ್ದು, ಇಂದು ನಸುಕಿನ 3 ಗಂಟೆಗೆ ದೇಗುಲದ ಬಾಗಿಲು ತೆರೆಯಲಾಗಿದೆ. ಸಾವಿರಾರು ಭಕ್ತರು ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಮೇಲ್‌ಶಾಂತಿ ಅರುಣ್‌ಕುಮಾರ್‌ ನಂಬೂದಿರಿಯವರು ಇಂದು ನಸುಕಿನ 3 ಗಂಟೆಗೆ ತಂತ್ರಿ ಮಹೇಶ್‌ ಮೋಹನಾರು ಮತ್ತು

ಶಬರಿಮಲೆ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಆರಂಭ Read More »

ಡಾಕ್ಟರ್‌ಗಳ ವೈಟ್‌ ಕಾಲರ್‌ ಉಗ್ರ ಜಾಲಕ್ಕೆ ಹರಿದು ಬಂದಿದೆ ಅಪಾರ ಹಣ

ಕಾರು ಸ್ಫೋಟಿಸಿಕೊಂಡು ಸತ್ತಿರುವ ಡಾ.ಉಮರ್‌ ನಬಿಯ ಖಾತೆಯಲ್ಲಿ ಲಕ್ಷಾಂತರ ರೂ. ವ್ಯವಹಾರ ಪತ್ತೆ ನವದೆಹಲಿ: ಇತ್ತೀಚೆಗೆ ಪೊಲೀಸರು ಬಯಲಿಗೆಳೆದಿರುವ ಡಾಕ್ಟರ್‌ಗಳು ಒಳಗೊಂಡಿರುವ ವೈಟ್‌ ಕಾಲರ್‌ ಉಗ್ರ ಜಾಲಕ್ಕೆ ಅಪಾರ ಪ್ರಮಾಣದಲ್ಲಿ ಹಣ ಹರಿದು ಬಂದಿರುವುದು ತನಿಖೆಯಿಂದ ಬಯಲಾಗಿದೆ. ದೆಹಲಿ ಕೆಂಪುಕೋಟೆ ಬಳಿ ಕಾರು ಸ್ಫೋಟಿಸಿಕೊಂಡು ಸತ್ತಿರುವ ಡಾ.ಉಮರ್‌ ನಬಿಯ ಒಂದು ಖಾತೆಗೆ ಸುಮಾರು 20 ಲ.ರೂ. ವರ್ಗಾಯಿಸಿದ್ದನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ಇತರ ವೈಟ್‌ ಕಾಲರ್‌ ಉಗ್ರರ ಹಣಕಾಸು ವಹಿವಾಟುಗಳ ಕುರಿತು ತೀವ್ರ ತನಿಖೆ ನಡೆಯುತ್ತಿದೆ.

ಡಾಕ್ಟರ್‌ಗಳ ವೈಟ್‌ ಕಾಲರ್‌ ಉಗ್ರ ಜಾಲಕ್ಕೆ ಹರಿದು ಬಂದಿದೆ ಅಪಾರ ಹಣ Read More »

ಲಂಚ ಪಡೆದು ಪ್ರಶ್ನೆ ಕೇಳಿದ ಪ್ರಕರಣ : ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿ

ಉದ್ಯಮಿಯಿಂದ ಲಂಚ ಪಡೆದು ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ ಟಿಎಂಸಿ ಸಂಸದೆ ನವದೆಹಲಿ : ತೃಣಮೂಲ ಕಾಂಗ್ರೆಸ್‌ ಪಕ್ಷದ ಸಂಸದೆ ಮಹುವಾ ಮೊಯಿತ್ರಾ ವಿರುದ್ಧವಿರುವ ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಹಣ ಕೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ನಾಲ್ಕು ವಾರಗಳಲ್ಲಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಲೋಕಪಾಲವು ಸಿಬಿಐಗೆ ಅನುಮತಿ ನೀಡಿದೆ. ಇದರೊಂದಿಗೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕೃಷ್ಣನಗರ ಕ್ಷೇತ್ರದ ಸಂಸದೆ ವಿರುದ್ಧ ಸಿಬಿಐ ಕಾನೂನು ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ನವೆಂಬರ್ 12ರಂದು ಸಭೆ ನಡೆಸಿದ

ಲಂಚ ಪಡೆದು ಪ್ರಶ್ನೆ ಕೇಳಿದ ಪ್ರಕರಣ : ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿ Read More »

ಹೀನಾಯ ಸೋಲಿಗೆ ಚುನಾವಣಾ ಆಯೋಗವನ್ನು ದೂಷಿಸುತ್ತಿರುವ ಕಾಂಗ್ರೆಸ್‌ ನಾಯಕರು

ನ್ಯಾಯಸಮ್ಮತ ಚುನಾವಣೆ ನಡೆದಿಲ್ಲ ಎಂದು ಆರೋಪ ನವದೆಹಲಿ: ಬಿಹಾರ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಳಿಕ ಕಾಂಗ್ರೆಸ್‌ ನಾಯಕರು ಚುನಾವಣಾ ಅಯೋಗವನ್ನು ಸ್ಪರ್ಧೆಗೆ ಬಿದ್ದವರಂತೆ ದೂಷಿಸತೊಡಗಿದ್ದಾರೆ. ಸೋಲಿನ ಎಲ್ಲ ಹೊಣೆಯನ್ನು ಚುನಾವಣಾ ಆಯೋಗಕ್ಕೆ ಕಟ್ಟುತ್ತಿದ್ದಾರೆ. ಕಾಂಗ್ರೆಸ್‌ನ ಅಧಿನಾಯಕ ರಾಹುಲ್‌ ಗಾಂಧಿ, ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌, ವಕ್ತಾರ ಹರೀಶ್‌ ಖೇರಾ ಅವರಿಂದ ಹಿಡಿದು ಪ್ರತಿಯೊಬ್ಬರು ಚುನಾವಣಾ ಆಯೋಗದ ಸಹಕಾರದಿಂದಲೇ ಬಿಜೆಪಿ ಗೆಲ್ಲುತ್ತಿದೆ ಎಂದು ಹೇಳುತ್ತಿದ್ದಾರೆ. ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಲೋಕಸಭೆಯ ವಿರೋಧ

ಹೀನಾಯ ಸೋಲಿಗೆ ಚುನಾವಣಾ ಆಯೋಗವನ್ನು ದೂಷಿಸುತ್ತಿರುವ ಕಾಂಗ್ರೆಸ್‌ ನಾಯಕರು Read More »

ಬಿಹಾರ ಫಲಿತಾಂಶ : ಪಕ್ಷಗಳ ಅಂತಿಮ ಬಲಾಬಲ

200 ದಾಟಿ ಇತಿಹಾಸ ನಿರ್ಮಿಸಿದ ಎನ್‌ಡಿಎ ಮೈತ್ರಿಕೂಟ ಪಾಟ್ನಾ: ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟ ಐತಿಹಾಸಿಕ ಜಯ ಸಾಧಿಸಿದೆ. ಎಲ್ಲ ಎಕ್ಸಿಟ್‌ ಪೋಲ್‌ಗಳನ್ನು ತಲೆಕೆಳಗು ಮಾಡಿ ಮತ್ತೆ ಅಧಿಕಾರಕ್ಕೇರಿದೆ. ಎನ್‌ಡಿಎ 202, ಮಹಾಘಟಬಂಧನ್‌ 35 ಹಾಗೂ ಇತರ 6 ಸ್ಥಾನಗಳಲ್ಲಿ ಗೆಲುವು ದಾಖಲಿಸಿವೆ. ಕಾಂಗ್ರೆಸ್ ಎಂದಿನಂತೆ ಹೇಳೋಕೆ ಹೆಸರಿಲ್ಲದಂತೆ ನೆಲಕಚ್ಚಿದೆ. ಕಾಂಗ್ರೆಸ್ ಪಕ್ಷವನ್ನು ನೆಚ್ಚಿಕೊಂಡ ಆರ್‌ಜೆಡಿ ಮಣ್ಣು ಮುಕ್ಕಿದೆ. ಮತಪಟ್ಟಿ ಪರಿಷ್ಕರಣೆಗೆ ವಿರೋಧ, ಮತಕಳವು ಆರೋಪ, ಅತ್ಯಧಿಕ ಮತದಾನ, ಶೇ.47ರಷ್ಟು ಮಹಿಳಾ ಮತದಾರರಿಂದ ವೋಟಿಂಗ್ ದಾಖಲೆಗಳ ವಿಶೇಷತೆ ನಡುವೆ

ಬಿಹಾರ ಫಲಿತಾಂಶ : ಪಕ್ಷಗಳ ಅಂತಿಮ ಬಲಾಬಲ Read More »

error: Content is protected !!
Scroll to Top