ದೇಶ

ಮಧ್ಯಪ್ರಾಚ್ಯದ ಎಂಟು ರಾಷ್ಟ್ರಗಳ ಜೊತೆ ಪ್ರಧಾನಿ ಮೋದಿ ಮಾತು: ಭಾರತೀಯರ ಸುರಕ್ಷತೆಯ ಬಗ್ಗೆ ಚರ್ಚೆ

ನವದೆಹಲಿ: ಮಧ್ಯಪ್ರಾಚ್ಯ ಬಿಕ್ಕಟ್ಟು ಬಿಗಡಾಯಿಸುತ್ತಿರುವ ಹಿನ್ನೆಲೆ ಭಾರತದ ಪ್ರಧಾನಿ ಮೋದಿ ಅವರು ಒಮಾನ್, ಕತಾರ್, ಕುವೈಟ್ ಸೇರಿದಂತೆ ಎಂಟು ರಾಷ್ಟ್ರಗಳ ಜೊತೆಗೆ ಮಾತುಕತೆ ಮಾಡಿದ್ದಾರೆ. ಆ ರಾಷ್ಟ್ರಗಳಲ್ಲಿ ವಾಸಿಸುತ್ತಿರುವ ಭಾರತೀಯರ ಸುರಕ್ಷತೆಯ ಬಗ್ಗೆ ವಿಚಾರಿಸಿರುವ ಅವರು, ಇರಾನ್ ನಡೆಸುತ್ತಿರುವ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇರಾನ್‌ನ ಪ್ರತೀಕಾರದ ದಾಳಿಗೆ ತುತ್ತಾಗಿರುವ ಒಮಾನ್‌ನ ಸುಲ್ತಾನ ಹೈತಮ್ ಬಿನ್ ತಾರಿಕ್, ಕುವೈತ್ ರಾಜಕುಮಾರ ಶೇಖ್ ಸಬಾಹ್ ಅಲ್-ಖಾಲಿದ್ ಅಲ್-ಹಮದ್ ಅಲ್-ಮುಬಾರಕ್ ಅಲ್ -ಸಬಾಹ್ ಮತ್ತು ಕತಾರ್‌ನ ಅಮೀರ ಶೇಖ್ ತಮೀಮ್ ಬಿನ್ […]

ಮಧ್ಯಪ್ರಾಚ್ಯದ ಎಂಟು ರಾಷ್ಟ್ರಗಳ ಜೊತೆ ಪ್ರಧಾನಿ ಮೋದಿ ಮಾತು: ಭಾರತೀಯರ ಸುರಕ್ಷತೆಯ ಬಗ್ಗೆ ಚರ್ಚೆ Read More »

ಗುಂಡಿನ ದಾಳಿಯಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಹತ: ಇರಾನ್ ಸಂಚಿದೆಯೇ ‌ಎಂಬ ನೆಲೆಯಲ್ಲಿ ತನಿಖೆ

ಟೆಕ್ಸಾಸ್: ಕಳೆದ ಭಾನುವಾರ ಆಸ್ಟಿನ್‌ನಲ್ಲಿ ‌ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ವಿದ್ಯಾರ್ಥಿನಿ ‌ಸಹ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ ನಾಲ್ಕಕ್ಕೇರಿದೆ. ಟೆಕ್ಸಾಸ್ ವಿವಿಯ ವಿದ್ಯಾರ್ಥಿನಿ ‌ಸವಿತಾ ಷಣ್ಮುಗ ಸುಂದರಂ ಮೃತ ವಿದ್ಯಾರ್ಥಿನಿ.‌ ದಾಳಿ ಮಾಡಿದ ಬಂದೂಕುದಾರಿಯನ್ನು ಹತ್ಯೆ ಮಾಡಲಾಗಿದ್ದು, ಈ ದಾಳಿ ಸಂಭಾವ್ಯ ಭಯೋತ್ಪಾದಕ ದಾಳಿ ಎಂಬ ನೆಲೆಯಲ್ಲಿ ಎಫ್‌ಬಿಐ ತನಿಖೆ ಮಾಡುತ್ತಿದೆ. ಇರಾನ್ ಸಂಘರ್ಷ ಮತ್ತು ಈ ದಾಳಿಗೆ ಏನಾದರೂ ಸಂಪರ್ಕ ಇದೆಯೇ? ಎನ್ನುವ ನಿಟ್ಟಿನಲ್ಲಿಯೂ ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಮೇ

ಗುಂಡಿನ ದಾಳಿಯಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿ ಹತ: ಇರಾನ್ ಸಂಚಿದೆಯೇ ‌ಎಂಬ ನೆಲೆಯಲ್ಲಿ ತನಿಖೆ Read More »

ಉದ್ಯೋಗ ನಿಮಿತ್ತ ಇರಾನಿಗೆ ತೆರಳಿದ್ದ ಯುವಕನ ಸುಳಿವಿಲ್ಲದೆ ಕಂಗಾಲಾದ ಕುಟುಂಬ

ಚಿಕ್ಕಮಗಳೂರು: ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಹೆಚ್ಚುತ್ತಿದ್ದು, ಉದ್ಯೋಗ ನಿಮಿತ್ತ ಇರಾನ್‌ಗೆ ತೆರಳಿದ್ದ ಮರ್ಚಂಟ್ ನೇವಿ ಉದ್ಯೋಗಿ ಕೊಪ್ಪ ತಾಲೂಕಿನ ನಿಶ್ಚಿತ್ ಕುಟುಂಬಸ್ಥರ ‌ಸಂಪರ್ಕಕ್ಕೆ ಸಿಗದೇ ಇದ್ದು, ಪೋಷಕರು ಕಂಗಾಲಾಗಿದ್ದಾರೆ. ಕಳೆದ ಐದು ತಿಂಗಳ ಹಿಂದೆ ನಿಶ್ಚಿತ್ ಇರಾನಿಗೆ ತೆರಳಿದ್ದರು. ಇದೀಗ ಅಲ್ಲಿ ಯುದ್ಧದ ತೀವ್ರತೆ ಹೆಚ್ಚಾಗುತ್ತಿದ್ದು, ನಿಶ್ಚಿತ್‌ನ ಸುರಕ್ಷತೆಯ ಬಗ್ಗೆ ಕುಟುಂಬ ವರ್ಗ ಆತಂಕ ವ್ಯಕ್ತಪಡಿಸಿರುವುದಾಗಿದೆ. ಕಳೆದ ಕೆಲ ದಿನಗಳಿಂದ ನಿಶ್ಚಿತ್ ಅವರ ಫೋನ್ ಸ್ವಿಚ್‌ಆಫ್ ಆಗಿದೆ. ಅವರ ಸ್ಥಿತಿಗತಿಗಳ ಬಗ್ಗೆ ಯಾವುದೇ ಮಾಹಿತಿ

ಉದ್ಯೋಗ ನಿಮಿತ್ತ ಇರಾನಿಗೆ ತೆರಳಿದ್ದ ಯುವಕನ ಸುಳಿವಿಲ್ಲದೆ ಕಂಗಾಲಾದ ಕುಟುಂಬ Read More »

ಅನಗತ್ಯವಾಗಿ ಓಡಾಡದಂತೆ ಇರಾನಿನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ಸೂಚನೆ

ತೆಹ್ರಾನ್: ಇರಾನ್ ಮತ್ತು ಅಮೆರಿಕಾ, ಇಸ್ರೇಲ್ ನಡುವಿನ ಜಟಾಪಟಿಯಲ್ಲಿ ಇರಾನಿನ ಪರಿಸ್ಥಿತಿ ಹದೆಗೆಟ್ಟಿದೆ. ಭದ್ರತಾ ಪರಿಸ್ಥಿತಿ ಬಿಗುವಾಗಿದೆ. ಯುದ್ಧದ ಭೀತಿಯ ಕಾರಣಕ್ಕಾಗಿ ಅಲ್ಲಿನ ಭಾರತೀಯರಿಗೆ ಸಂಬಂಧಿಸಿದ ಹಾಗೆ ಭಾರತೀಯ ರಾಯಭಾರ ಕಚೇರಿ ಹೊಸ ಮಾರ್ಗಸೂಚಿ ಹೊರಡಿಸಿದೆ. ಇರಾನಿನಲ್ಲಿರುವ ಎಲ್ಲಾ ಭಾರತೀಯರು ಅನಗತ್ಯ ಓಡಾಟ ತಪ್ಪಿಸಿ, ಆದಷ್ಟು ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ. ಪರಿಸ್ಥಿತಿ ತಿಳಿಯಾಗುವವರೆಗೂ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಸ್ಥಳೀಯ ಸುದ್ದಿಗಳು, ರಾಯಭಾರ ಕಚೇರಿಯ ಪ್ರಕಟಣೆಗಳನ್ನು ಗಮನಿಸುವಂತೆ ತಿಳಿಸಲಾಗಿದೆ. ಸಾರ್ವಜನಿಕ ಸ್ಥಳಗಳು, ಪ್ರತಿಭಟನೆ ನಡೆವ ಸ್ಥಳಗಳಿಂದ ದೂರವಿರುವಂತೆಯೂ ಎಚ್ಚರಿಕೆ

ಅನಗತ್ಯವಾಗಿ ಓಡಾಡದಂತೆ ಇರಾನಿನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿಯಿಂದ ಸೂಚನೆ Read More »

ಗಲ್ಫ್‌ನಲ್ಲಿ ಸಿಲುಕಿರುವವರನ್ನು ಕರೆತರಲು ವಿಮಾನ ರವಾನೆ

ಪರ್ಯಾಯ ವಾಯು ಮಾರ್ಗಗಳ ಮೂಲಕ ಭಾರತೀಯರನ್ನು ಕರೆತರಲು ವಿಶೇಷ ಕಾರ್ಯಾಚರಣೆ ನವದೆಹಲಿ: ಇರಾನ್-ಇಸ್ರೇಲ್ ಯುದ್ಧದ ಪರಿಣಾಮ ಮಧ್ಯಪ್ರಾಚ್ಯದ ವಿವಿಧೆಡೆ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಸಂಭಾವ್ಯ ವಾಯುಪ್ರದೇಶಗಳ ಮೂಲಕ ಭಾರತೀಯರನ್ನು ಕರೆತರಲು ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇಂಡಿಗೋ ಏರ್​ಲೈನ್ಸ್​ನ 10 ವಿಶೇಷ ವಿಮಾನಗಳು ಮಂಗಳವಾರ ಜೆದ್ದಾಗೆ ತೆರಳಿ ಭಾರತೀಯರನ್ನು ಕರೆತರಲು ಉದ್ದೇಶಿಸಿವೆ ಎಂದು ಸಚಿವಾಲಯ ತಿಳಿಸಿದೆ. ಜೆದ್ದಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ಇಂಡಿಗೋ ಸಂಪರ್ಕದಲ್ಲಿದೆ. ಯಾವ ವಾಯುಮಾರ್ಗದ

ಗಲ್ಫ್‌ನಲ್ಲಿ ಸಿಲುಕಿರುವವರನ್ನು ಕರೆತರಲು ವಿಮಾನ ರವಾನೆ Read More »

ಶಬರಿಮಲೆ ದೇವಳಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ : ಟಿಡಿಬಿ ನಿರ್ಣಯ

ದೇವಾಲಯದ ಸಂಪ್ರದಾಯ, ಭಕ್ತರ ನಂಬಿಕೆ ಎತ್ತಿ ಹಿಡಿಯಲು ಆದ್ಯತೆ ತಿರುವಂತಪುರ: ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಿಸಲು ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂಬ ಮಹತ್ವದ ತೀರ್ಮಾನವನ್ನು ತಿರುವಾಂಕೂರು ದೇವಸ್ವಂ ಮಂಡಳಿ ತೆಗೆದುಕೊಂಡಿದೆ. ಋತುಮತಿಯರಾಗುವ ವಯಸ್ಸಿನ ಮಹಿಳೆಯರ ದೇವಾಲಯ ಪ್ರವೇಶ, ಪೂಜೆ ಸಲ್ಲಿಕೆಗೆ ಅವಕಾಶ ಕೊಟ್ಟಿರುವ ಸುಪ್ರೀಂ ಕೋರ್ಟ್‌ 2018ರ ತೀರ್ಪನ್ನು ವಿರೋಧಿಸಿ ನಿರ್ಣಯ ತೆಗೆದುಕೊಂಡಿದ್ದೇವೆ ಎಂದು ದೇವಸ್ವಂ ಬೋರ್ಡ್‌ ಅಧ್ಯಕ್ಷ ಕೆ.ಜಯಕುಮಾರ್ ತಿಳಿಸಿದ್ದಾರೆ. ಟಿಡಿಬಿಯು ಶಬರಿಮಲೆ ಪದ್ಧತಿ, ಸಂಪ್ರದಾಯ ಹಾಗೂ ನಂಬಿಕೆಗಳನ್ನು ಕಾಪಾಡಲು ಒತ್ತು ಕೊಡುತ್ತದೆ.

ಶಬರಿಮಲೆ ದೇವಳಕ್ಕೆ ಮಹಿಳೆಯರಿಗೆ ಪ್ರವೇಶವಿಲ್ಲ : ಟಿಡಿಬಿ ನಿರ್ಣಯ Read More »

ನೆತನ್ಯಾಹುಗೆ ಮೋದಿ ಕರೆ : ಯುದ್ಧ ನಿಲ್ಲಿಸಲು ಮನವಿ

ಯುದ್ಧದಿಂದಾಗಿ ಜಾಗತಿಕವಾಗಿ ಆತಂಕ ಸೃಷ್ಟಿ ಎಂದು ಮನವರಿಕೆ ಮಾಡಿದ ಮೋದಿ ನವದೆಹಲಿ : ಇರಾನ್‌-ಇಸ್ರೇಲ್‌, ಅಮೆರಿಕ ಯುದ್ಧದಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರಿಗೆ ದೂರವಾಣಿ ಕರೆ ಮಾಡಿ ಪರಿಸ್ಥಿತಿ ಕುರಿತು ಚರ್ಚಿಸಿದರು ಯುದ್ಧ ತಕ್ಷಣ ನಿಲ್ಲಿಸುವ ಅಗತ್ಯವಿದೆ ಎಂದು ಭಾರತ ಪುನರುಚ್ಚರಿಸಿರುವುದಾಗಿ ಮೋದಿ ತಿಳಿಸಿದ್ದಾರೆ. ಇಸ್ರೇಲ್‌-ಅಮೆರಿಕ ದಾಳಿಗೆ ಪ್ರತಿಯಾಗಿ ಇರಾನ್‌ ಕ್ಷಿಪಣಿ ದಾಳಿ ಮುಂದುವರಿಸಿರುವ ಹಿನ್ನೆಲೆ ಪ್ರಾದೇಶಿಕ ಭದ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳು ಉದ್ಭವಿಸಿರುವುದಾಗಿ ಪ್ರಧಾನಿ

ನೆತನ್ಯಾಹುಗೆ ಮೋದಿ ಕರೆ : ಯುದ್ಧ ನಿಲ್ಲಿಸಲು ಮನವಿ Read More »

ಟಿ20 ವಿಶ್ವಕಪ್‌ : ಸೆಮಿಫೈನಲ್‌ ಪ್ರವೇಶಿಸಿದ ಟೀಂ ಇಂಡಿಯಾ

ಸಂಜು ಸ್ಯಾಮ್ಸನ್‌ ಅಜೇಯ ಆಟದಿಂದ ವೆಸ್ಟ್‌ ಇಂಡೀಸನ್ನು ಮಣಿಸಿದ ಭಾರತ ಕೋಲ್ಕತ್ತಾ: ಕೋಲ್ಕತ್ತಾದ ಈಡನ್‌ ಗಾರ್ಡನ್‌ ಸ್ಟೇಡಿಯಂನಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ ಅವರ ಸ್ಫೋಟಕ ಅರ್ಧ ಶತಕದ ನೆರವಿನಿಂದ ವೆಸ್ಟ್‌ ಇಂಡಿಸ್‌ ವಿರುದ್ಧ ಭಾರತ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿ ಸೆಮಿಫೈನಲ್‌ ಪ್ರವೇಶಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ವೆಸ್ಟ್‌ ಇಂಡೀಸ್‌ 4 ವಿಕೆಟ್‌ ನಷ್ಟಕ್ಕೆ 195 ರನ್‌ ಗಳಿಸಿತು. ಕಠಿಣ ಮೊತ್ತವನ್ನು ಬೆನ್ನಟ್ಟಿದ ಭಾರತ ಇನ್ನೂ 4 ಎಸೆತ ಬಾಕಿ

ಟಿ20 ವಿಶ್ವಕಪ್‌ : ಸೆಮಿಫೈನಲ್‌ ಪ್ರವೇಶಿಸಿದ ಟೀಂ ಇಂಡಿಯಾ Read More »

ಮಂಗಳವಾರ ಚಂದ್ರ ಗ್ರಹಣ : ದೇವಸ್ಥಾನಗಳಲ್ಲಿ ಪೂಜೆ, ದರ್ಶನ ಸಮಯ ಬದಲಾವಣೆ

ಭಾರತದಲ್ಲಿ ಕೇವಲ 25 ನಿಮಿಷ ಗ್ರಹಣ ಗೋಚರ ಬೆಂಗಳೂರು: ಯುಗಾದಿಗೂ ಮುನ್ನ ಕೇತುಗ್ರಸ್ತ ಚಂದ್ರಗ್ರಹಣ ಮಂಗಳವಾರ (ಮಾ.3) ಗೋಚರಿಸಲಿದೆ. ಗ್ರಹಣದ 6 ಗಂಟೆ ಮುಂಚೆಯೇ ಸೂತಕದ ಛಾಯೆ ಆವರಿಸಲಿದೆ. ಹೀಗಾಗಿ ಅಂದು ರಾಜ್ಯದ ವಿವಿಧ ದೇವಾಲಯಗಳಲ್ಲಿ ಪೂಜೆ, ದರ್ಶನದ ಸಮಯ ಬದಲಾಗಿದೆ. ಹೋಳಿ ಹಬ್ಬದಂದೇ ಚಂದ್ರಗ್ರಹಣವೂ ಇರುವುದು ಈ ಸಲದ ವಿಶೇಷ. ಭಾರತೀಯ ಸಂಸ್ಕೃತಿಯಲ್ಲಿ ಬಣ್ಣಗಳ ಹಬ್ಬ ಹೋಳಿಗೆ ವಿಶೇಷ ಮಹತ್ವವಿದೆ. 2026ರ ಹೋಳಿ ಹಬ್ಬವು ಕೇವಲ ಸಂಭ್ರಮಕ್ಕೆ ಮಾತ್ರವಲ್ಲದೆ, ಖಗೋಳ ಮತ್ತು ಧಾರ್ಮಿಕ ದೃಷ್ಟಿಯಿಂದಲೂ ಅತ್ಯಂತ

ಮಂಗಳವಾರ ಚಂದ್ರ ಗ್ರಹಣ : ದೇವಸ್ಥಾನಗಳಲ್ಲಿ ಪೂಜೆ, ದರ್ಶನ ಸಮಯ ಬದಲಾವಣೆ Read More »

ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಪ್ರತಿಭಟನೆ

ಬೆಳಗ್ಗೆಯೇ ಬೀದಿಗಿಳಿದ ಸಾವಿರಾರು ಜನ ಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ಖಂಡಿಸಿ ಕಾಶ್ಮೀರದಲ್ಲಿ ಬೃಹತ್‌ ಪ್ರತಿಭಟನೆ ನಡೆಯುತ್ತಿದೆ. ಕಾಶ್ಮೀರದ ಸೈದಾ ಕಡಲ್‌ ಪ್ರದೇಶದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಇಸ್ರೇಲ್‌ ಮತ್ತು ಅಮೆರಿಕ ಜಂಟಿಯಾಗಿ ನಡೆಸಿರುವ ಕ್ಷಿಪಣಿ ದಾಳಿಯಲ್ಲಿ ಅಯಾತೊಲ್ಲಾ ಅಲಿ ಖಮೇನಿ ಜೊತೆಗೆ ಅವರ ಪುತ್ರಿ, ಅಳಿಯ ಮತ್ತು ಮೊಮ್ಮಗಳು ಕೂಡ ಸಾವಿಗೀಡಾಗಿದ್ದಾರೆ. ಕಾಶ್ಮೀರದಲ್ಲಿ ಸಾವಿರಾರು ಜನರು ಖಮೇನಿಯ ಫೋಟೊ, ಫಲಕ ಹಿಡಿದುಕೊಂಡು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಡೊನಾಲ್ಡ್‌

ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಪ್ರತಿಭಟನೆ Read More »

error: Content is protected !!
Scroll to Top