ದೇಶ

ಪಂಚಭೂತಗಳಲ್ಲಿ ಲೀನರಾದ ರಾಜಕೀಯ ಧುರೀಣ ಅಜಿತ್ ಪವಾರ್

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ‌ವಿಮಾನ ಅವಘಡದಲ್ಲಿ ಮೃತಪಟ್ಟ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ನೂರಾರು ಗಣ್ಯರ ಸಮ್ಮುಖದಲ್ಲಿ, ಸಕಲ ಸರ್ಕಾರಿ ಗೌರವದ ಜೊತೆಗೆ ನಡೆಯಿತು. ಅಜಿತ್ ಪವಾರ್ ಅವರ ಪಾರ್ಥಿವ ಶರೀರಕ್ಕೆ ರಾಷ್ಟ್ರಧ್ವಜ ಹೊದಿಸಲಾಗಿತ್ತು. ಮೃತದೇಹವನ್ನು ಅವರ ಹುಟ್ಟೂರಾದ ಕಟೇವಾಡಿಯಿಂದ ಬಾರಾಮತಿಗೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸುವ ಸಲುವಾಗಿ ತರಲಾಗಿತ್ತು. ಅವರ ಚಿತೆಗೆ ಪುತ್ರರಾದ ಪಾರ್ಥ್ ಪವಾರ್ ಮತ್ತು ಜೇ ಪವಾರ್ ಅವರು ಅಗ್ನಿಸ್ಪರ್ಶ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ […]

ಪಂಚಭೂತಗಳಲ್ಲಿ ಲೀನರಾದ ರಾಜಕೀಯ ಧುರೀಣ ಅಜಿತ್ ಪವಾರ್ Read More »

ಅಜಿತ್‌ ಪವಾರ್‌ ಅಂತ್ಯಕ್ರಿಯೆ ಇಂದು : ಮೋದಿ, ಅಮಿತ್‌ ಶಾ ಆಗಮಿಸುವ ಸಾಧ್ಯತೆ

ವಿಮಾನ ಅವಘಡದಲ್ಲಿ ದುರ್ಮರಣವನ್ನಪ್ಪಿರುವ ಮಹಾರಾಷ್ಟ್ರದ ಡಿಸಿಎಂ ಮುಂಬೈ: ವಿಮಾನ ಅವಘಡದಲ್ಲಿ ದುರ್ಮರಣವನ್ನಪ್ಪಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಇಂದು ಬಾರಾಮತಿಯಲ್ಲಿ ನೆರವೇರಲಿದೆ. ಗುರುವಾರ ಬೆಳಗ್ಗೆ 11 ಗಂಟೆಗೆ ಪವಾರ್ ಕುಟುಂಬ ಸ್ಥಾಪಿಸಿದ ಶಿಕ್ಷಣ ಸಂಸ್ಥೆಯಾದ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಎನ್‌ಸಿಪಿ ಅಧ್ಯಕ್ಷ ಅಜಿತ್ ಪವಾರ್ ಅಂತ್ಯಕ್ರಿಯೆಯನ್ನು ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜಕೀಯ ರಂಗದ ನಾಯಕರು ಮತ್ತು ಎಲ್ಲ ವರ್ಗದ ಜನರು ಅಂತ್ಯಕ್ರಿಯೆಯಲ್ಲಿ

ಅಜಿತ್‌ ಪವಾರ್‌ ಅಂತ್ಯಕ್ರಿಯೆ ಇಂದು : ಮೋದಿ, ಅಮಿತ್‌ ಶಾ ಆಗಮಿಸುವ ಸಾಧ್ಯತೆ Read More »

4ನೇ ಟಿ20 ಪಂದ್ಯದಲ್ಲಿ ಭಾರತಕ್ಕೆ 50 ರನ್‌ ಸೋಲು

ವ್ಯರ್ಥವಾದ ಶಿವಂ ದುಬೆ ಸ್ಫೋಟಕ ಬ್ಯಾಟಿಂಗ್‌ ವಿಶಾಖಪಟ್ಟಣ : ಇಲ್ಲಿನ ಎಸಿಎ-ವಿಡಿಸಿಎ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 4ನೇ ಟಿ20 ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ನ್ಯೂಜಿಲೆಂಡ್ ತಂಡ ಕೊನೆಗೂ ಈ ಟಿ20 ಸರಣಿಯಲ್ಲಿ ತನ್ನ ಗೆಲುವಿನ ಖಾತೆ ತೆರೆದಿದೆ. ಸರಣಿಯ ಮೊದಲ ಮೂರು ಪಂದ್ಯಗಳನ್ನು ಗೆದ್ದುಕೊಳ್ಳುವ ಮೂಲಕ ಟೀಂ ಇಂಡಿಯಾ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕಿವೀಸ್ 215 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ

4ನೇ ಟಿ20 ಪಂದ್ಯದಲ್ಲಿ ಭಾರತಕ್ಕೆ 50 ರನ್‌ ಸೋಲು Read More »

ಇಂದಿನಿಂದ ಸಂಸತ್ತಿನ ಬಜೆಟ್‌ ಅಧಿವೇಶನ

ಫೆ.1ರಂದು ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡನೆ ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಇಂದು ಜಂಟಿ ಅಧಿವೇಶನವನ್ನುದ್ದೇಶಿಸಿ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ಅಧಿವೇಶನದ ಮೊದಲ ಹಂತ ಜನವರಿ 28ರಿಂದ ಫೆಬ್ರವರಿ 13 ರವರೆಗೆ ಮತ್ತು ಎರಡನೇ ಹಂತ ಮಾರ್ಚ್ 9ರಿಂದ ಏಪ್ರಿಲ್ 2ರವರೆಗೆ ಇರಲಿದೆ. ಜನವರಿ 31ರಂದು ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಾಗುವುದು. ಫೆಬ್ರವರಿ 1ರಂದು ಬೆಳಗ್ಗೆ 11 ಗಂಟೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಮೊದಲ

ಇಂದಿನಿಂದ ಸಂಸತ್ತಿನ ಬಜೆಟ್‌ ಅಧಿವೇಶನ Read More »

ಚಲನಚಿತ್ರ ಹಿನ್ನೆಲೆ ಗಾಯನಕ್ಕೆ ಅರಿಜಿತ್‌ ಸಿಂಗ್‌ ದಿಢೀರ್‌ ವಿದಾಯ

ಇನ್ನು ಮುಂದೆ ಸಿನಿಮಾಗಳಿಗೆ ಹಾಡುವುದಿಲ್ಲ ಎಂದು ಘೋಷಿಸಿದ ಖ್ಯಾತ ಯುವ ಗಾಯಕ ಮುಂಬೈ: ಕನ್ನಡವೂ ಸೇರಿದಂತೆ ವಿವಿಧ ಭಾಷೆಗಳಲ್ಲಿ ನೂರಾರು ಸೂಪರ್ ಹಿಟ್ ಗೀತೆಗಳನ್ನು ಹಾಡಿರುವ ಗಾಯಕ ಅರಿಜಿತ್ ಸಿಂಗ್ ಏಕಾಏಕಿ ನಿವೃತ್ತಿ ಘೋಷಿಸಿದ್ದಾರೆ. ಬೇಡಿಕೆಯ ಉತ್ತುಂಗದಲ್ಲಿ ಇರುವಾಗಲೇ ಇನ್ನೂ 38ರ ಹರೆಯದ ಅರಿಜಿತ್ ಸಿಂಗ್‌ ಹಿನ್ನೆಲೆ ಗಾಯನಕ್ಕೆ ನಿವೃತ್ತಿ ಘೋಷಿಸಿರುವುದು ಅಚ್ಚರಿ ಮೂಡಿಸಿದೆ. ಹಲವಾರು ಲವ್ ಸಾಂಗ್​ಗಳನ್ನು ಹಾಡುವ ಮೂಲಕ ಅರಿಜಿತ್ ಸಿಂಗ್ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಅವರ ಧ್ವನಿಯಲ್ಲಿ ಹೊಸ ಹೊಸ ಹಾಡುಗಳನ್ನು

ಚಲನಚಿತ್ರ ಹಿನ್ನೆಲೆ ಗಾಯನಕ್ಕೆ ಅರಿಜಿತ್‌ ಸಿಂಗ್‌ ದಿಢೀರ್‌ ವಿದಾಯ Read More »

ಆಪರೇಷನ್ ಸಿಂಧೂರ್ ‌ನಿಲ್ಲಿಸುವಂತೆ ಪಾಕಿಸ್ತಾನ ಮನವಿ ಮಾಡಿತ್ತು: ಭಾರತ

ನ್ಯೂಯಾರ್ಕ್: ಈ ಹಿಂದೆ ಪಾಕಿಸ್ತಾನದ ವಿರುದ್ಧ ನಡೆಸಿದ್ದ ಆಪರೇಷನ್ ಸಿಂಧೂರ್ ‌ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ‌ಪಾಕ್ ಬೇಡಿಕೊಂಡಿತ್ತು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಭಾರತ ತಿಳಿಸಿದೆ‌. ಜೊತೆಗೆ ಇಸ್ಲಾಮಾಬಾದ್‌ನ ಬಾಹ್ಯ ಹಸ್ತಕ್ಷೇಪದ ಹಕ್ಕುಗಳನ್ನು ತಳ್ಳಿ ಹಾಕಿದೆ. ಭಾರತದ ಶಾಶ್ವತ ಪ್ರತಿನಿಧಿ ಪಿ. ಹರೀಶ್ ಭಾರತದ ಪರವಾಗಿ ಮಾತನಾಡಿದ್ದು, ನಮ್ಮ ನಾಗರಿಕರನ್ನು ಕಾಪಾಡಲು, ಅವರ ಹಿತ ರಕ್ಷಣೆಯ ದೃಷ್ಟಿಯಿಂದ ಎಲ್ಲವನ್ನೂ ಮಾಡಲು ನಾವು ಸಿದ್ಧರಿದ್ದೇವೆ. ಭಯೋತ್ಪಾದನೆಯನ್ನು ಪಾಕಿಸ್ತಾನ ಬಯಸಿದ ರೀತಿಯಲ್ಲಿ ಸಾಮಾನ್ಯೀಕರಿಸುವುದು ಅಸಾಧ್ಯ ಎಂದು ಅವರು ಹೇಳಿದ್ದಾರೆ. ಪಹಲ್ಗಾಮ್‌ನಲ್ಲಿ

ಆಪರೇಷನ್ ಸಿಂಧೂರ್ ‌ನಿಲ್ಲಿಸುವಂತೆ ಪಾಕಿಸ್ತಾನ ಮನವಿ ಮಾಡಿತ್ತು: ಭಾರತ Read More »

ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆಯ ಅಗತ್ಯ ಇಲ್ಲ: ಮೋಹನ್ ಭಾಗವತ್

ನವದೆಹಲಿ: ಮೂಲಭೂತವಾಗಿ ಭಾರತ ಹಿಂದೂ ರಾಷ್ಟ್ರ. ಅದನ್ನು ಹೊಸದಾಗಿ ಘೋಷಣೆ ಮಾಡಲು ಯಾವುದೇ ಸಾಂವಿಧಾನಿಕ ಅನುಮೋದನೆಯ ಅಗತ್ಯ ಇಲ್ಲ ಎಂದು RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಬಿಹಾರದಲ್ಲಿ ‌ನಡೆದ ವಿಚಾರಗೋಷ್ಠಿಯೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸೂರ್ಯ ಪೂರ್ವದಲ್ಲಿ ಉದಯಿಸುತ್ತಾನೆ ಎನ್ನುವ ವಿಷಯ ಹೇಗೆ ಸತ್ಯವೋ, ಭಾರತ ದೇಶ ಹಿಂದೂ ರಾಷ್ಟ್ರ ಎನ್ನುವುದು ಕೂಡಾ ಅಷ್ಟೇ ಸತ್ಯ ಎಂಬುದಾಗಿ ತಿಳಿಸಿದ್ದಾರೆ. ಅದನ್ನು ಮತ್ತೆ ಘೋಷಣೆ ಮಾಡುವ ಅಗತ್ಯ ಇಲ್ಲ. ಈಗಾಗಲೇ ಅದು ಅಸ್ತಿತ್ವದಲ್ಲಿದೆ. ಭಾರತೀಯ ಸಂಸ್ಕೃತಿಯನ್ನು ಗೌರವಿಸುವವರೆಲ್ಲರೂ

ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆಯ ಅಗತ್ಯ ಇಲ್ಲ: ಮೋಹನ್ ಭಾಗವತ್ Read More »

ನಿಗೂಢವಾಗಿ ಉಳಿದ 400 ಕೋಟಿ ರೂ. ಹೈಜಾಕ್‌ ಪ್ರಕರಣ

ಹಣದ ಮೂಲಕ್ಕಾಗಿ ಪೊಲೀಸರ ತೀವ್ರ ಹುಡುಕಾಟ ಬೆಂಗಳೂರು: ಗೋವಾದಿಂದ ಬೆಳಗಾವಿ ಚೋರ್ಲಾ ಘಾಟ್‌ ಮಾರ್ಗವಾಗಿ ಎರಡು ಕಂಟೇನರ್‌ಗಳಲ್ಲಿ ಸಾಗಿಸಲಾಗುತ್ತಿದ್ದ 400 ಕೋಟಿ ರೂ. ಮೊತ್ತದ ಕರೆನ್ಸಿ ನೋಟ್‌ಗಳನ್ನು ಹೊಂದಿದ್ದ ಎರಡು ಕಂಟೈನರ್‌ ಟ್ರಕ್ಕನ್ನು ಕಳೆದ ಅಕ್ಟೋಬರ್​​​ನಲ್ಲಿ ಹೈಜಾಕ್ ಮಾಡಿದ ಪ್ರಕರಣ ನಿಗೂಢವಾಗುತ್ತಾ ಸಾಗಿದ್ದು, ಈ ಹಣ ಯಾರಿಗೆ ಸೇರಿದ್ದು ಎಂಬ ವಿಚಾರವಾಗಿ ಈಗ ಕೆಸರೆರಚಾಟ ಶುರುವಾಗಿದೆ. 2 ಸಾವಿರ ರೂಪಾಯಿ ಮೌಲ್ಯದ ಸುಮಾರು 400 ಕೋಟಿ ರೂಪಾಯಿ ಹಳೇ ನೋಟುಗಳನ್ನು ತುಂಬಿದ್ದ ಟ್ರಕ್ ದರೋಡೆ ಮಾಡಲಾಗಿತ್ತು ಎಂಬ

ನಿಗೂಢವಾಗಿ ಉಳಿದ 400 ಕೋಟಿ ರೂ. ಹೈಜಾಕ್‌ ಪ್ರಕರಣ Read More »

ಬದರೀನಾಥ, ಕೇದಾರನಾಥ ದೇಗುಲಗಳಿಗಿಲ್ಲ ಅನ್ಯಮತೀಯರಿಗೆ ಪ್ರವೇಶ?

ಡೆಹ್ರಾಡೂನ್: ಬದರೀನಾಥ ಮತ್ತು ಕೇದಾರನಾಥ ದೇವಾಲಯಗಳಿಗೆ ಇನ್ನು ಮುಂದಿನ ದಿನಗಳಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ಪ್ರವೇಶ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಚಾರ್‌ಧಾಮ್ ಯಾತ್ರಾ ಸ್ಥಳಗಳ ವ್ಯಾಪ್ತಿಯ ದೇಗುಲಗಳಿಗೆ ಅನ್ಯ ಧರ್ಮದವರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುವುದಾಗಿ ದೇವಾಲಯ ಮಂಡಳಿ ಘೋಷಣೆ ಮಾಡಿದೆ. ಈ ಬಗ್ಗೆ ಬಿ.ಕೆ.ಟಿ.ಸಿ. ಅಧ್ಯಕ್ಷ ಹೇಮಂತ್ ದ್ವಿವೇದಿ ಅವರು ಅಧಿಕೃತ ಮಾಹಿತಿ ನೀಡಿದ್ದು, ಮಂಡಳಿಯ ನಿಯಂತ್ರಣದಲ್ಲಿರುವ ಎಲ್ಲಾ ಮಂದಿರಗಳಲ್ಲಿ ಅನ್ಯಧರ್ಮೀಯರ ಪ್ರವೇಶವನ್ನು ನಿಷೇಧಿಸಲಾಗುವುದು. ಮುಂಬರುವ ಮಂಡಳಿಯ ಆಡಳಿತ ಮಂಡಳಿ ಸಭೆಯಲ್ಲಿ ಈ

ಬದರೀನಾಥ, ಕೇದಾರನಾಥ ದೇಗುಲಗಳಿಗಿಲ್ಲ ಅನ್ಯಮತೀಯರಿಗೆ ಪ್ರವೇಶ? Read More »

ಅಮೋನಿಯಂ ನೈಟ್ರೇಟ್‌, ಜಿಲೆಟಿನ್‌ ಕಡ್ಡಿ ಸಹಿತ 10 ಸಾವಿರ ಕೆಜಿ ಸ್ಫೋಟಕ ವಶ

ಗಣರಾಜ್ಯೋತ್ಸವ ಸಂದರ್ಭದಲ್ಲಿ ಭಾರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಜೈಪುರ: ಕೆಂಪು ಕೋಟೆಯಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಕ್ಷಣಗಣನೆ ಶುರುವಾಗಿರುವಂತೆಯೇ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ಸುಮಾರು 10,000 ಕೆಜಿ ಸ್ಫೋಟಕ ಮತ್ತು ಡಿಟೋನೇಟರ್‌ಗಳು ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ಗಣಿಗಾರಿಕೆ ಸಂಬಂಧಿತ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದ ರಾಜಸ್ಥಾನದ ನಾಗೌರ್ ಜಿಲ್ಲೆಯ ಪೊಲೀಸರು ತೋಟದ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ 10 ಸಾವಿರ ಕೆಜಿ ಸ್ಫೋಟಕಗಳು ಹಾಗೂ ಡಿಟೋನೇಟರ್‌ಗಳನ್ನು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ್ದಾರೆ. ಹರ್ಸೌರ್ ಗ್ರಾಮದ ನಿವಾಸಿ ಸುಲೇಮಾನ್ ಖಾನ್ ಬಂಧಿತ

ಅಮೋನಿಯಂ ನೈಟ್ರೇಟ್‌, ಜಿಲೆಟಿನ್‌ ಕಡ್ಡಿ ಸಹಿತ 10 ಸಾವಿರ ಕೆಜಿ ಸ್ಫೋಟಕ ವಶ Read More »

error: Content is protected !!
Scroll to Top