ದೇಶ

ಅಮೋನಿಯಂ ನೈಟ್ರೇಟ್‌, ಜಿಲೆಟಿನ್‌ ಕಡ್ಡಿ ಸಹಿತ 10 ಸಾವಿರ ಕೆಜಿ ಸ್ಫೋಟಕ ವಶ

ಗಣರಾಜ್ಯೋತ್ಸವ ಸಂದರ್ಭದಲ್ಲಿ ಭಾರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಜೈಪುರ: ಕೆಂಪು ಕೋಟೆಯಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಕ್ಷಣಗಣನೆ ಶುರುವಾಗಿರುವಂತೆಯೇ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ ಸುಮಾರು 10,000 ಕೆಜಿ ಸ್ಫೋಟಕ ಮತ್ತು ಡಿಟೋನೇಟರ್‌ಗಳು ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ಗಣಿಗಾರಿಕೆ ಸಂಬಂಧಿತ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದ ರಾಜಸ್ಥಾನದ ನಾಗೌರ್ ಜಿಲ್ಲೆಯ ಪೊಲೀಸರು ತೋಟದ ಮನೆಯೊಂದರಲ್ಲಿ ಸಂಗ್ರಹಿಸಿಟ್ಟಿದ್ದ 10 ಸಾವಿರ ಕೆಜಿ ಸ್ಫೋಟಕಗಳು ಹಾಗೂ ಡಿಟೋನೇಟರ್‌ಗಳನ್ನು ವಶಪಡಿಸಿಕೊಂಡು ಓರ್ವನನ್ನು ಬಂಧಿಸಿದ್ದಾರೆ. ಹರ್ಸೌರ್ ಗ್ರಾಮದ ನಿವಾಸಿ ಸುಲೇಮಾನ್ ಖಾನ್ ಬಂಧಿತ […]

ಅಮೋನಿಯಂ ನೈಟ್ರೇಟ್‌, ಜಿಲೆಟಿನ್‌ ಕಡ್ಡಿ ಸಹಿತ 10 ಸಾವಿರ ಕೆಜಿ ಸ್ಫೋಟಕ ವಶ Read More »

77ನೇ ಗಣರಾಜ್ಯೋತ್ಸವದ ಭವ್ಯ ಆಚರಣೆಗೆ ಕ್ಷಣಗಣನೆ

ಗಣರಾಜ್ಯೋತ್ಸವಕ್ಕೆ ವಂದೇ ಮಾತರಂಗೆ 150 ವರ್ಷ, ಆಪರೇಷನ್‌ ಸಿಂದೂರ ಸ್ಪರ್ಶ ನವದೆಹಲಿ : 77ನೇ ಗಣರಾಜ್ಯೋತ್ಸವ ಆಚರಿಸಲು ನವದೆಹಲಿಯ ಕರ್ತವ್ಯಪಥ ಕೂಡ ಸಿದ್ಧವಾಗಿದೆ. ಈ ಬಾರಿ ಗಣರಾಜ್ಯೋತ್ಸವ ಆಚರಣೆ ‘ವಂದೇ ಮಾತರಂಗೆ 150 ವರ್ಷಗಳು’ ಎಂಬ ವಿಷಯದ ಮೇಲೆ ನಡೆಯಲಿದೆ. 1875ರಲ್ಲಿ ಬಂಕಿಮ ಚಂದ್ರ ಚಟ್ಟೋಪಾಧ್ಯಾಯ ವಿರಚಿತ ವಂದೇ ಮಾತರಂಗೆ ಇದೀಗ 150 ವರ್ಷಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ವಂದೇ ಮಾತರಂನಿಂದ ಪ್ರೇರಿತವಾದ ಸಾಂಸ್ಕೃತಿಕ ಹಾಗೂ ಪ್ರದರ್ಶನಗಳು ಪಾಲ್ಗೊಳ್ಳಲು ಸೂಚಿಸಲಾಗಿದೆ. ಇದೇ ಮೊದಲ

77ನೇ ಗಣರಾಜ್ಯೋತ್ಸವದ ಭವ್ಯ ಆಚರಣೆಗೆ ಕ್ಷಣಗಣನೆ Read More »

ಅಭಿಷೇಕ್‌ ಶರ್ಮಾ, ಸೂರ್ಯಕುಮಾರ್‌ ಯಾದವ್‌ ಸಿಡಿಲಬ್ಬರ : ಟಿ20 ಸರಣಿ ಭಾರತ ಕೈವಶ

ಕೇವಲ 10 ಓವರ್‌ಗಳಲ್ಲಿ ಗುರಿ ಬೆನ್ನಟ್ಟಿ ಗೆದ್ದು ಬೀಗಿದ ಟೀಂ ಇಂಡಿಯಾ ಗುವಾಹಟಿ: ಇಲ್ಲಿನ ಬರ್ಸಪರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯವನ್ನೂ ಆತಿಥೇಯ ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ಈ ಮೂಲಕ 3-0 ಅಂತರದಲ್ಲಿ ಇನ್ನು ಎರಡು ಪಂದ್ಯಗಳು ಬಾಕಿ ಇರುವಂತೆಯೇ ಐದು ಪಂದ್ಯಗಳ ಟಿ20 ಸರಣಿಯನ್ನು ತನ್ನದಾಗಿಸಿಕೊಂಡಿದೆ. ಸತತ 13ನೇ ಟಿ20 ಸರಣಿಯನ್ನು ಗೆಲ್ಲುವ ಮೂಲಕ ತನ್ನದೇ ಹಳೆದ ದಾಖಲೆಯನ್ನು ಮುರಿದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌

ಅಭಿಷೇಕ್‌ ಶರ್ಮಾ, ಸೂರ್ಯಕುಮಾರ್‌ ಯಾದವ್‌ ಸಿಡಿಲಬ್ಬರ : ಟಿ20 ಸರಣಿ ಭಾರತ ಕೈವಶ Read More »

ಇಂದು ಗುವಾಹಟಿಯಲ್ಲಿ ಮೂರನೇ ಟಿ20 ಪಂದ್ಯ

ಸರಣಿ ವಶಪಡಿಸಿಕೊಳ್ಳಲು ಭಾರತ ತವಕ ; ನ್ಯೂಜಿಲೆಂಡ್‌ಗೆ ಗೆಲ್ಲುವ ಅನಿವಾರ್ಯತೆ ಗುವಾಹಟಿ : ಭಾರತ ಮತ್ತು ನ್ಯೂಜಿಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯ 3ನೇ ಪಂದ್ಯವು ಇಂದು ಗುವಾಹಟಿಯಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಕಂಡು ಬರುವುದು ಖಚಿತ. ಕಳೆದ ಮ್ಯಾಚ್​ ವೇಳೆ ವಿಶ್ರಾಂತಿ ಪಡೆದಿದ್ದ ಜಸ್​ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಮೊದಲ ಎರಡು ಪಂದ್ಯಗಳನ್ನು ಭಾರತ ಗೆದ್ದಿದ್ದು, ಮೂರನೇ ಪಂದ್ಯವನ್ನು ಗೆದ್ದರೆ ಸರಣಿ ಕೈವಶವಾಗಲಿದೆ. ಸರಣಿಯನ್ನು

ಇಂದು ಗುವಾಹಟಿಯಲ್ಲಿ ಮೂರನೇ ಟಿ20 ಪಂದ್ಯ Read More »

400 ಕೋ. ರೂ. ಮೌಲ್ಯದ ಕರೆನ್ಸಿ ನೋಟ್‌ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳು ಹೈಜಾಕ್‌

ದಟ್ಟ ಅರಣ್ಯದ ಘಾಟ್‌ನಲ್ಲಿ ನಡೆದ ಸಿನಿಮೀಯ ಶೈಲಿಯ ದರೋಡೆ ಕೃತ್ಯ ; ಮೂರು ರಾಜ್ಯಗಳ ಪೊಲೀಸರಿಂದ ತನಿಖೆ ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ ಎರಡು ಕಂಟೇನರ್‌ಗಳನ್ನು ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ಹೈಜಾಕ್ ಮಾಡಲಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ದರೋಡೆ ಪ್ರಕರಣ ಅಂತಾರಾಜ್ಯ ಮಟ್ಟದ್ದಾಗಿದ್ದು, ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ 3 ರಾಜ್ಯಗಳ ಪೊಲೀಸರು ವಿಶೇಷ ತನಿಖಾ ತಂಡದ ಮೂಲಕ ತನಿಖೆ

400 ಕೋ. ರೂ. ಮೌಲ್ಯದ ಕರೆನ್ಸಿ ನೋಟ್‌ ಸಾಗಿಸುತ್ತಿದ್ದ ಎರಡು ಕಂಟೇನರ್‌ಗಳು ಹೈಜಾಕ್‌ Read More »

ಎರಡನೇ ಟಿ20ಯಲ್ಲಿ ಭಾರತಕ್ಕೆ ವಿಶ್ವದಾಖಲೆಯ ಗರಿಯೊಂದಿಗೆ ಗೆಲುವು

ಪಾಕಿಸ್ತಾನ ಹೆಸರಲ್ಲಿದ್ದ ದಾಖಲೆಯನ್ನು ಧೂಳೀಪಟ ಮಾಡಿದ ಟೀಂ ಇಂಡಿಯಾ ರಾಯ್‌ಪುರ : ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯವನ್ನೂ ಆತಿಥೇಯ ಭಾರತ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್​ಗಳಿಂದ ಗೆದ್ದುಕೊಳ್ಳುವ ಮೂಲಕ ವಿಶ್ವದಾಖಲೆಯನ್ನು ನಿರ್ಮಿಸಿದೆ. ಇಶನ್‌ ಕಿಶನ್‌ ಮತ್ತು ಸೂರ್ಯಕುಮಾರ್‌ ಯಾದವ್‌ ಸ್ಫೋಟಕ ಅರ್ಧಶತಕದ ನೆರವಿನಿಂದ ನ್ಯೂಜಿಲೆಂಡ್‌ ವಿರುದ್ಧ ಎರಡನೇ ಟಿ20 ಪಂದ್ಯವನ್ನು

ಎರಡನೇ ಟಿ20ಯಲ್ಲಿ ಭಾರತಕ್ಕೆ ವಿಶ್ವದಾಖಲೆಯ ಗರಿಯೊಂದಿಗೆ ಗೆಲುವು Read More »

ಕಾಂಗ್ರೆಸ್ ವಿರುದ್ಧ ಮತ್ತೆ ಬಂಡಾಯದ ಬಾವುಟ ಬೀಸಿದ ಶಶಿ ತರೂರ್?

ತಿರುವನಂತಪುರಂ: ಕೇರಳದ ಕಾಂಗ್ರೆಸ್ ನಾಯಕ ಶಶಿ ತರೂರ್ ಸ್ವ ಪಕ್ಷದ ವಿರುದ್ಧ ಮತ್ತೆ ಬಂಡಾಯದ ಬಾವುಟ ಬೀಸಿದಂತಿದೆ. ಕಾಂಗ್ರೆಸ್ ಪಕ್ಷದ ಚುನಾವಣಾ ಸಭೆಯಿಂದ ಅವರು ದೂರ ಉಳಿದಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೊಚ್ಚಿಗೆ ಆಗಮಿಸಿದ್ದ ಸಂದರ್ಭದಲ್ಲಿ ತಮಗೆ ಸೂಕ್ತ ಸ್ಥಾನಮಾನ ದೊರೆತಿಲ್ಲ ಎಂಬ ಕಾರಣಕ್ಕೆ ತರೂರ್ ಅಸಮಾಧಾನಗೊಂಡಿದ್ದಾರೆ. ಕೆಲವು ತಿಂಗಳುಗಳಿಂದ ತರೂರ್ ಅವರು ಕಾಂಗ್ರೆಸ್ ಮತ್ತು ಕಾಂಗ್ರೆಸ್ ನಾಯಕರಿಂದ ಅಂತರ ಕಾಪಾಡಿಕೊಂಡಿದ್ದಾರೆ. ಬಿಜೆಪಿ ಜೊತೆಗೆ ಸಂಪರ್ಕ ಇರಿಸಿಕೊಂಡಿದ್ದಾರೆ ಎನ್ನುವ ಮಾತುಗಳೂ ಕೇಳಿ ಬರುತ್ತಿವೆ. ಈ

ಕಾಂಗ್ರೆಸ್ ವಿರುದ್ಧ ಮತ್ತೆ ಬಂಡಾಯದ ಬಾವುಟ ಬೀಸಿದ ಶಶಿ ತರೂರ್? Read More »

ನಕ್ಸಲ್‌ ಮುಖಂಡನ ಸಹಿತ 15 ಮಾವೋವಾದಿಗಳ ಹತ್ಯೆ

ತಲೆಗೆ 1 ಕೋಟಿ ರೂ. ಬಹುಮಾನ ಹೊತ್ತಿದ್ದ ನಕ್ಸಲ್‌ ನಾಯಕ ನವದೆಹಲಿ: ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್‌ನಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಜಾರ್ಖಂಡ್ ಪೊಲೀಸರು ನಡೆಸುತ್ತಿರುವ ಜಂಟಿ ಕಾರ್ಯಾಚರಣೆಯಲ್ಲಿ ತಲೆಗೆ 1 ಕೋಟಿ ರೂ. ಬಹುಮಾನ ಹೊಂದಿದ್ದ ನಕ್ಸಲ್‌ ಮುಖಂಡನ ಸಹಿತ 15 ನಕ್ಸಲರನ್ನು ಹೊಡೆದುರುಳಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹತ್ಯೆಯಾದ ನಕ್ಸಲ್‌ ಮುಖಂಡನನ್ನು ಮಾವೋವಾದಿ ಕೇಂದ್ರ ಸಮಿತಿಯ ಸದಸ್ಯ ಪತಿರಾಮ್ ಮಾಂಝಿ ಎಂದು ಗುರುತಿಸಲಾಗಿದೆ. 1 ಕೋಟಿ ಬಹುಮಾನ

ನಕ್ಸಲ್‌ ಮುಖಂಡನ ಸಹಿತ 15 ಮಾವೋವಾದಿಗಳ ಹತ್ಯೆ Read More »

ರೈಲಿನ ಶೌಚಾಲಯ ಲಾಕ್ ಮಾಡಿ, ಎರಡು ಗಂಟೆ ಒಳ ಸೇರಿದ ಜೋಡಿ: ಸಾರ್ವಜನಿಕರಿಂದ ತರಾಟೆ

ನವದೆಹಲಿ: ರೈಲಿನ ಶೌಚಾಲಯದೊಳಗೆ ಸೇರಿಕೊಂಡ ಲಾಕ್ ಮಾಡಿ ಜೋಡಿಯೊಂದು ಎರಡು ಗಂಟೆಗೂ ಅಧಿಕ ಕಾಲ ಅದರೊಳಗೆ ಕಳೆದು ಬೇರೆ ಪ್ರಯಾಣಿಕರ ಆಕ್ರೋಶಕ್ಕೆ ತುತ್ತಾದ ಘಟನೆ ನಡೆದಿದ್ದು, ಈ ಬಗ್ಗೆ ಪ್ರಶ್ನೆ ಮಾಡಿದಾಗ ಯುವತಿ ನೀಡಿದ ಹಾರಿಕೆಯ ಉತ್ತರದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಕೆಂಗಣ್ಣಿಗೂ ತುತ್ತಾಗಿದೆೆ. ಎರಡು ಗಂಟೆಯ ಬಳಿಕ ಶೌಚಾಲಯದಿಂದ ಹೊರ ಬಂದ ಜೋಡಿಯನ್ನು ಸಹ ಪ್ರಯಾಣಿಕರು ಪ್ರಶ್ನಿಸಿದ್ದು, ಈ ವೇಳೆ ಯುವತಿ ನನ್ನ ಇಷ್ಟ. ಯಾರನ್ನು ಒಳಗೆ ಕರೆದುಕೊಂಡು ಹೋಗಬೇಕು ಎನ್ನುವುದು

ರೈಲಿನ ಶೌಚಾಲಯ ಲಾಕ್ ಮಾಡಿ, ಎರಡು ಗಂಟೆ ಒಳ ಸೇರಿದ ಜೋಡಿ: ಸಾರ್ವಜನಿಕರಿಂದ ತರಾಟೆ Read More »

ಅನ್ಯ ಧರ್ಮದ ಹುಡುಗನನ್ನು ಪ್ರೀತಿಸಿದ ತಂಗಿ: ಜೋಡಿಯನ್ನು ಕೊಂದ ಯುವತಿಯ ಸಹೋದರರು

ಮೊರಾದಾಬಾದ್: ಯುವತಿ ಮತ್ತು ಆಕೆಯ ಮುಸ್ಲಿಂ ಪ್ರಿಯಕರನನ್ನು ಆಕೆಯ ಸಹೋದರರೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಾಜಲ್ (19) ಮತ್ತು ಅವಳ ಪ್ರೇಮಿ ಅರ್ಮಾನ್ (27) ಎಂಬಾತನನ್ನು ಮರ್ಯಾದಾ ಹತ್ಯೆ ನಡೆಸಿರುವುದಾಗಿದೆ. ಕಾಜಲ್ ಕಾಲೇಜು ವಿದ್ಯಾರ್ಥಿನಿಯಾಗಿದ್ದು ಕೊಲೆಗೀಡಾದ ಇಬ್ಬರೂ ಉಮ್ರಿ ಸಬ್ಜೀಪುರ ನಿವಾಸಿಗಳಾಗಿದ್ದಾರೆ. ಪ್ರೇಮಿಗಳಿಬ್ಬರೂ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು, ಎರಡೂ ಕುಟುಂಬಗಳು ಪೊಲೀಸರಿಗೆ ದೂರು ನೀಡಿದ್ದವು. ಅವರಿಬ್ಬರ ಪತ್ತೆಗಾಗಿ ಹುಡುಕಾಟ ನಡೆಸಿದ ಸಂದರ್ಭದಲ್ಲಿ ಅವರಿಬ್ಬರ ಶವಗಳು ಹಳ್ಳಿಯಿಂದ ಕೆಲವು ಮೀಟರ್ ದೂರದ

ಅನ್ಯ ಧರ್ಮದ ಹುಡುಗನನ್ನು ಪ್ರೀತಿಸಿದ ತಂಗಿ: ಜೋಡಿಯನ್ನು ಕೊಂದ ಯುವತಿಯ ಸಹೋದರರು Read More »

error: Content is protected !!
Scroll to Top