ದೇಶ

ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗಿನಿಂದ ಉದ್ಯಮಿಯ ಹತ್ಯೆ

ಹಫ್ತಾ ಹಣ ಕೊಡದ ಕಾರಣಕ್ಕೆ ಗುಂಡಿಕ್ಕಿ ಕೊಲೆ ಒಟ್ಟಾವ: ಕುಖ್ಯಾತ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಕೆನಡಾದಲ್ಲಿ ಭಾರತೀಯ ಮೂಲದ ಅಬಾಟ್ಸ್‌ಫೋರ್ಡ್ ಕೈಗಾರಿಕೋದ್ಯಮಿಯೊಬ್ಬರನ್ನು ಹತ್ಯೆ ಮಾಡಿದೆ ಮತ್ತು ಪಂಜಾಬಿ ಗಾಯಕನ ಮನೆಯ ಮೇಲೆ ಗುಂಡು ಹಾರಿಸಿದೆ. ರಾಜಸ್ಥಾನದ ಪೊಲೀಸರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸಕ್ರಿಯ ಸದಸ್ಯ ಜಗದೀಪ್ ಸಿಂಗ್ ಅಲಿಯಾಸ್ ಜಗ್ಗಾನನ್ನು ಅಮೆರಿಕದಲ್ಲಿ ಬಂಧಿಸಿದ್ದರು. ಅದರ ಬೆನ್ನಲ್ಲೇ ಈ ಎರಡು ದಾಳಿಗಳು ನಡೆದಿವೆ. ಬಿಷ್ಣೋಯ್ ಗ್ಯಾಂಗ್ ಸದಸ್ಯ ಗೋಲ್ಡಿ ಧಿಲ್ಲೋನ್, ಭಾರತೀಯ ಮೂಲದ ಕೈಗಾರಿಕೋದ್ಯಮಿ ದರ್ಶನ್ ಸಿಂಗ್ ಸಹಸಿ […]

ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗಿನಿಂದ ಉದ್ಯಮಿಯ ಹತ್ಯೆ Read More »

ಅಲ್‌ ಖೈದಾ ಜೊತೆ ನಂಟು ಹೊಂದಿದ್ದ ಟೆಕ್ಕಿ ಸೆರೆ

ಯುವಕರನ್ನು ಉಗ್ರ ಸಂಘಟನೆಗೆ ಸೇರಿಸುತ್ತಿದ್ದ ಟೆಕ್ಕಿ ಪುಣೆ: ಅಲ್ ಖೈದಾ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಟೆಕ್ಕಿಯೊಬ್ಬನನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ ಪುಣೆಯ ಕೊಂಡ್ವಾದಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನು ಜುಬೈರ್ ಹಂಗರ್ಗೇಕರ್ ಎಂದು ಗುರುತಿಸಲಾಗಿದೆ. ಈತನ ಮೇಲೆ ಕಳೆದ ತಿಂಗಳಿನಿಂದ ಎಟಿಎಸ್ ಸಿಬ್ಬಂದಿ ತೀವ್ರ ನಿಗಾ ಇಟ್ಟಿದ್ದರು. ಬಂಧನದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಿಶೇಷ ಯುಎಪಿಎ ನ್ಯಾಯಾಲಯ ಆರೋಪಿಯನ್ನು ನ.4 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಈತ ಯುವಕರನ್ನು ಮೂಲಭೂತವಾದಿಗಳನ್ನಾಗಿ ಮಾಡುವಲ್ಲಿ

ಅಲ್‌ ಖೈದಾ ಜೊತೆ ನಂಟು ಹೊಂದಿದ್ದ ಟೆಕ್ಕಿ ಸೆರೆ Read More »

ಶ್ರೇಯಸ್‌ ಅಯ್ಯರ್‌ ಐಸಿಯುನಿಂದ ವಾರ್ಡ್‌ಗೆ ಶಿಫ್ಟ್‌

ಫೀಲ್ಡಿಂಗ್‌ ಮಾಡುವಾಗ ಬಿದ್ದು ಗಂಭೀರ ಗಾಯ ಮಾಡಿಕೊಂಡಿರುವ ಯುವ ಕ್ರಿಕೆಟಿಗ ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಕ್ಯಾಚ್ ಹಿಡಿಯುವ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅರ್ಧದಲ್ಲೇ ಮೈದಾನ ತೊರೆದಿದ್ದ ಅಯ್ಯರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಯ್ಯರ್‌ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಪಕ್ಕೆಲುಬಿಗೆ ಗಾಯವಾಗಿ ಆಂತರಿಕ ರಕ್ತಸ್ರಾವವಾಗುತ್ತಿದೆ ಎಂದು ನಿನ್ನೆ ವರದಿಯಾದ ಹಿನ್ನೆಲೆಯಲ್ಲಿ ಆತಂಕ ಉಂಟಾಗಿತ್ತು. ಅವರ ಹೆತ್ತವರು ಆಸ್ಟ್ರೇಲಿಯಾಕ್ಕೆ ಹೋಗಲು ವಿಸಾ ಪಡೆಯಲು ಯತ್ನಿಸಿದ್ದರು. ಇದೀಗ

ಶ್ರೇಯಸ್‌ ಅಯ್ಯರ್‌ ಐಸಿಯುನಿಂದ ವಾರ್ಡ್‌ಗೆ ಶಿಫ್ಟ್‌ Read More »

ನ್ಯಾ.ಸೂರ್ಯಕಾಂತ್ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಾಧೀಶ

ಭಾರತದ 53ನೇ ಸಿಜೆಐಗೆ ಆಗಿ ನವೆಂಬರ್‌ನಲ್ಲಿ ಅಧಿಕಾರ ಸ್ವೀಕಾರ ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ನವೆಂಬರ್​ನಲ್ಲಿ ನಿವೃತ್ತಿ ಹೊಂದಲಿದ್ದು, ನ್ಯಾ.ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ನಾಮನಿರ್ದೇಶನ ಮಾಡಿದ್ದಾರೆ. ಗವಾಯಿ ನವೆಂಬರ್ 23ರಂದು ನಿವೃತ್ತರಾಗಲಿದ್ದಾರೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ನಿವೃತ್ತಿಯ ನಂತರ ಅವರು ಈ ಹುದ್ದೆಯನ್ನು ವಹಿಸಿಕೊಂಡಿದ್ದರು. ಸಿಜೆಐ ಗವಾಯಿ ಅವರು ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಹಿರಿತನದ ಆಧಾರದ ಮೇಲೆ ನ್ಯಾಯಮೂರ್ತಿ ಸೂರ್ಯಕಾಂತ್ ಭಾರತದ 53ನೇ

ನ್ಯಾ.ಸೂರ್ಯಕಾಂತ್ ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಾಧೀಶ Read More »

ದೇಶಾದ್ಯಂತ ನಡೆಯಲಿದೆ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ

15 ರಾಜ್ಯಗಳ ಪರಿಷ್ಕರಣೆ ವೇಳಾಪಟ್ಟಿ ಇಂದು ಪ್ರಕಟ ನವದೆಹಲಿ: ದೇಶಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಕೈಗೊಳ್ಳಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ವಿಶೇಷ ಪರಿಷ್ಕರಣೆ ಕೈಗೊಳ್ಳುವ ಮೊದಲ 10 ರಿಂದ 15 ರಾಜ್ಯಗಳ ವೇಳಾಪಟ್ಟಿಯನ್ನು ಆಯೋಗ ಇಂದು ಪ್ರಕಟಿಸಲಿದೆ. ಇಂದು ಸಂಜೆ 4.45ಕ್ಕೆ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು, ಹಂತಹಂತವಾಗಿ ಎಸ್‌ಐಆರ್‌ ನಡೆಸುವ ರಾಜ್ಯಗಳ ಬಗ್ಗೆ ಮಾಹಿತಿ ನೀಡಲಿದೆ. ಪರಿಷ್ಕರಣೆಯು 2026ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳು ಸೇರಿದಂತೆ 10 ರಿಂದ

ದೇಶಾದ್ಯಂತ ನಡೆಯಲಿದೆ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ Read More »

ಪ್ರಧಾನಿ ಮೋದಿ ಹತ್ಯೆಗೆ ನಡೆದಿತ್ತಾ ಸಂಚು?

ಚೀನದಲ್ಲಿ ಸಾಯಿಸಲು ಸಂಚು ಮಾಡಲಾಗಿತ್ತು ಎಂಬ ಸ್ಫೋಟಕ ಮಾಹಿತಿ ಬಹಿರಂಗ ರಷ್ಯಾ ಅಧ್ಯಕ್ಷ ಪುಟಿನ್‌ ಅವರಿಂದ ವಿಫಲಗೊಂಡಿತು ಸಂಚು ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಲು ನಡೆದಿತ್ತಾ ಸಂಚು? ಹೀಗೊಂದು ಸುದ್ದಿ ನಿನ್ನೆಯಿಂದೀಚೆಗೆ ಭಾರಿ ಸದ್ದು ಮಾಡುತ್ತಿದೆ. ಕಳೆದ ತಿಂಗಳು ಚೀನಾದಲ್ಲಿ ನಡೆದ ಶಾಂಘೈ ಸಹಕಾರ ಸಂಘದ ಸಭೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ನಡೆಸಲಾಗಿತ್ತು ಎಂಬ ಸ್ಫೋಟಕ ಮಾಹಿತಿಯೊಂದು ಬಹಿರಂಗವಾಗಿದೆ. ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ವಿರುದ್ಧ ಇಂಥಹದ್ದೊಂದು

ಪ್ರಧಾನಿ ಮೋದಿ ಹತ್ಯೆಗೆ ನಡೆದಿತ್ತಾ ಸಂಚು? Read More »

ನವದೆಹಲಿ : ಎನ್‌ಕೌಂಟರ್‌ನಲ್ಲಿ ನಾಲ್ವರು ದರೋಡೆಕೋರರ ಹತ್ಯೆ

ಪೊಲೀಸರಿಗೆ ಬಹಿರಂಗ ಸವಾಲು ಹಾಕುತ್ತಿದ್ದ ದರೋಡೆ ಗ್ಯಾಂಗ್‌ನ ರಣಬೇಟೆ ನವದೆಹಲಿ: ದೆಹಲಿಯ ರೋಹಿಣಿ ಪ್ರದೇಶದಲ್ಲಿ ಪೊಲೀಸರ ಎನ್‌ಕೌಂಟರ್‌ಗೆ ನಾಲ್ವರು ದರೋಡೆಕೋರರು ಬಲಿಯಾಗಿದ್ದಾರೆ. ಹತ್ಯೆಯಾದವರು ಬಿಹಾರದ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದ ಸಿಗ್ಮಾ ಗ್ಯಾಂಗ್‌ನ ಸದಸ್ಯರು. ದೆಹಲಿ ಮತ್ತು ಬಿಹಾರ ಪೊಲೀಸರ ತಂಡ ಮತ್ತು ದರೋಡೆಕೋರರ ನಡುವೆ ಗುರುವಾರ ತಡರಾತ್ರಿ 2.20ಕ್ಕೆ ರೋಹಿಣಿಯ ಡಾ. ಅಂಬೇಡ್ಕರ್ ಚೌಕ್‌ನಿಂದ ಪನ್ಸಾಲಿ ಚೌಕ್‌ವರೆಗಿನ ಬಹದ್ದೂರ್ ಷಾ ಮಾರ್ಗದಲ್ಲಿ ಗುಂಡಿನ ಚಕಮಕಿ ನಡೆದಿದೆ. ದೆಹಲಿ ಪೊಲೀಸ್ ಮೂಲಗಳ ಪ್ರಕಾರ ಪೊಲೀಸರು ಸಿಗ್ಮಾ ಗ್ಯಾಂಗ್‌ನ ದರೋಡೆಕೋರರನ್ನು

ನವದೆಹಲಿ : ಎನ್‌ಕೌಂಟರ್‌ನಲ್ಲಿ ನಾಲ್ವರು ದರೋಡೆಕೋರರ ಹತ್ಯೆ Read More »

ಗುರುವಾಯೂರು ದೇವಸ್ಥಾನದಲ್ಲೂ ಚಿನ್ನ ಕಳವು : 25 ಕೋಟಿ ಅವ್ಯವಹಾರವಾಗಿರುವ ವರದಿ

ಶಬರಿಮಲೆ ಬಳಿಕ ಇನ್ನೊಂದು ಪ್ರಸಿದ್ಧ ದೇವಸ್ಥಾನದ ಚಿನ್ನಕ್ಕೆ ಕನ್ನ ತಿರುವನಂತಪುರಂ : ಶಬರಿಮಲೆಯ ಬಳಿಕ ಇದೀಗ ಕೇರಳದ ಇನ್ನೊಂದು ಪ್ರಸಿದ್ಧ ದೇವಸ್ಥಾನ ಗುರುವಾಯೂರು ದೇವಸ್ಥಾನದಲ್ಲೂ ಬೆಲೆಬಾಳುವ ಆಭರಣಗಳು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಕೇರಳದಲ್ಲಿ 12 ಪ್ರಸಿದ್ಧ ದೇವಸ್ಥಾನಗಳ ಆಡಳಿತ ನಿಭಾಯಿಸುವ ಸರ್ಕಾರದ ಗುರುವಾಯೂರು ದೇವಸ್ವಂ ಮಂಡಳಿಯ ಆಡಿಟಿಂಗ್ ವೇಳೆ ಸಾಕಷ್ಟು ವ್ಯತ್ಯಯಗಳು ಪತ್ತೆಯಾಗಿವೆ. 2019ರಲ್ಲಿ ಮಾಡಲಾದ ಆಡಿಟಿಂಗ್​ನಲ್ಲಿ ಕೆಲ ಗಮನಾರ್ಹ ಸಂಗತಿಗಳು ಬೆಳಕಿಗೆ ಬಂದಿವೆ. ಚಿನ್ನ, ಬೆಳ್ಳಿ, ದಂತ ಇತ್ಯಾದಿ ಹಲವು ವಸ್ತುಗಳು ಕಾಣೆಯಾಗಿರುವುದು ಗೊತ್ತಾಗಿದೆ. ಗೋಲ್ಡ್

ಗುರುವಾಯೂರು ದೇವಸ್ಥಾನದಲ್ಲೂ ಚಿನ್ನ ಕಳವು : 25 ಕೋಟಿ ಅವ್ಯವಹಾರವಾಗಿರುವ ವರದಿ Read More »

ದೀಪಾವಳಿ ಸಂದರ್ಭದಲ್ಲಿ ದೇಶದ ಜನತೆಗೆ ಮೋದಿ ಭಾವನಾತ್ಮಕ ಪತ್ರ

ಸಹಕಾರ, ಸಕಾರಾತ್ಮಕತೆಯ ದೀಪಗಳನ್ನು ಬೆಳಗಿಸೋಣ ಎಂದು ಹಾರೈಕೆ ನವದೆಹಲಿ : ದೀಪಾವಳಿಯ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಭಾವನಾತ್ಮಕ ಪತ್ರವೊಂದನ್ನು ಬರೆದು ಹಬ್ಬದ ಆಶಯದೊಂದಿಗೆ ದೇಶ ಹೇಗೆ ಮುನ್ನಡೆಯುತ್ತಿದೆ ಎಂಬುದನ್ನು ವಿವರಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ನಡೆಸಲಾದ ಆಪರೇಷನ್ ಸಿಂದೂರ ಸಮಯದಲ್ಲಿ ಭಾರತ ಸದಾಚಾರವನ್ನು ಎತ್ತಿಹಿಡಿಯಿತು ಮಾತ್ರವಲ್ಲದೆ ಅನ್ಯಾಯಕ್ಕೆ ಪ್ರತೀಕಾರ ತೀರಿಸಿಕೊಂಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಪತ್ರದಲ್ಲಿ ತಿಳಿಸಿದ್ದಾರೆ. ಜಾಗತಿಕ ಸಂಘರ್ಷಗಳು ನಡೆಯುತ್ತಿರುವ ಹೊರತಾಗಿಯೂ ದೇಶವು ಸ್ಥಿರತೆ ಮತ್ತು ಸೂಕ್ಷ್ಮತೆಯ

ದೀಪಾವಳಿ ಸಂದರ್ಭದಲ್ಲಿ ದೇಶದ ಜನತೆಗೆ ಮೋದಿ ಭಾವನಾತ್ಮಕ ಪತ್ರ Read More »

ದೀಪಾವಳಿ ಬೋನಸ್‌ ಕೊಡದ ಮಾಲೀಕ : ಟೋಲ್‌ಗೇಟ್‌ ತೆರೆದಿಟ್ಟು ಪ್ರತಿಭಟಿಸಿದ ನೌಕರರು

ಇಡೀ ದಿನ ಟೋಲ್‌ ಸಂಗ್ರಹಿಸದೆ ಕಂಪನಿಗೆ ಲಕ್ಷಾಂತರ ರೂ. ನಷ್ಟ ಮಾಡಿ ಸೇಡು ತೀರಿಸಿಕೊಂಡ ನೌಕರರು ನವದೆಹಲಿ : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾಲೀಕರು ಕೊಡುವ ಬೋನಸ್‌ ಮತ್ತು ಉಡುಗೊರೆಗಾಗಿ ನೌಕರರು ಚಾತಕ ಪಕ್ಷಿಗಳಂತೆ ಕಾದು ಕುಳಿತಿರುತ್ತಾರೆ. ಸಾಮಾನ್ಯವಾಗಿ ಎಲ್ಲ ಸಂಸ್ಥೆಗಳು ದೀಪಾವಳಿ ಹಬ್ಬದ ಸಂದರ್ಭದಲ್ಲಿ ನೌಕರರಿಗೆ ಬೋನಸ್‌ ಮತ್ತು ಉಡುಗೊರೆ ಕೊಡುತ್ತವೆ. ಆದರೆ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಫತೇಬಾದ್‌ನಲ್ಲಿರುವ ಟೋಲ್‌ ಗೇಟ್‌ ಸಿಬ್ಬಂದಿಗೆ ಮಾಲೀಕರು ಈ ವರ್ಷ ಅತ್ಯಲ್ಪ ಮೊತ್ತ ಬೋನಸ್‌ ನೀಡಿದ್ದರು. ಇದರಿಂದ ಕೆರಳಿದ ಸಿಬ್ಬಂದಿ

ದೀಪಾವಳಿ ಬೋನಸ್‌ ಕೊಡದ ಮಾಲೀಕ : ಟೋಲ್‌ಗೇಟ್‌ ತೆರೆದಿಟ್ಟು ಪ್ರತಿಭಟಿಸಿದ ನೌಕರರು Read More »

error: Content is protected !!
Scroll to Top