ದೇಶ

ಇಂದು ನಾಲ್ಕನೇ ಟಿ20 ಪಂದ್ಯ : ಭಾರತ ಗೆದ್ದರೆ ಸರಣಿ ವಶ

ದಕ್ಷಿಣ ಆಫ್ರಿಕಾದ ಮೇಲೆ ಗೆಲ್ಲಲೇ ಬೇಕಾದ ಒತ್ತಡ ಲಖನೌ : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ಕ್ರಿಕೆಟ್ ಸರಣಿಯ ನಾಲ್ಕನೇ ಪಂದ್ಯ ಇಂದು ಉತ್ತರ ಪ್ರದೇಶದ ಲಖನೌ ಏಕನಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿಯಲ್ಲಿ 2–1ರಿಂದ ಮುನ್ನಡೆಯಲ್ಲಿರುವ ಭಾರತಕ್ಕೆ ಸರಣಿ ಜಯಿಸಲು ಇಲ್ಲಿ ಉತ್ತಮ ಅವಕಾಶ ಒದಗಿಬಂದಿದೆ. ಅದಕ್ಕೆ ಈ ಪಂದ್ಯ ಗೆಲ್ಲಬೇಕಿದೆ. ಅತ್ತ ಸರಣಿ ಗೆಲುವಿನ ಆಸೆ ಜೀವಂತವಾಗಿ ಉಳಿಸಿಕೊಳ್ಳಲು ದಕ್ಷಿಣ ಆಫ್ರಿಕಾ ಕೂಡ ಈ ಪಂದ್ಯದಲ್ಲಿ ಜಯಿಸುವ ಒತ್ತಡದಲ್ಲಿದೆ. ಭಾರತ ತಂಡದ ನಾಯಕ […]

ಇಂದು ನಾಲ್ಕನೇ ಟಿ20 ಪಂದ್ಯ : ಭಾರತ ಗೆದ್ದರೆ ಸರಣಿ ವಶ Read More »

ಉಗ್ರರ ಜೊತೆ ಎನ್‌ಕೌಂಟರ್‌ನಲ್ಲಿ ಪೊಲೀಸ್‌ ಸಿಬ್ಬಂದಿ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಜಲ್ಟಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಪ್ರದೇಶಗಳನ್ನು ಸುತ್ತುವರಿದು ನಡೆಸಿದ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಗುಂಡಿನ ಚಕಮಕಿ ನಡೆಯಿತು. ಭದ್ರತಾ ಪಡೆಗಳು ಭದ್ರತೆಯನ್ನು ಬಿಗಿಗೊಳಿಸಿ ಶೋಧ ಆರಂಭಿಸುತ್ತಿದ್ದಂತೆ, ಉಗ್ರರು ಗುಂಡು ಹಾರಿಸಿದರು. ಗುಂಡಿನ ಚಕಮಕಿ ನಡೆಯಿತು. ಆರಂಭಿಕ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಗಂಭೀರವಾಗಿ ಗಾಯಗೊಂಡರು.

ಉಗ್ರರ ಜೊತೆ ಎನ್‌ಕೌಂಟರ್‌ನಲ್ಲಿ ಪೊಲೀಸ್‌ ಸಿಬ್ಬಂದಿ ಹುತಾತ್ಮ Read More »

ಈ ವರ್ಷವೂ ಭಾರಿ ಸಂಖ್ಯೆಯಲ್ಲಿ ಭಕ್ತರಿಂದ ಶಬರಿಮಲೆ ಯಾತ್ರೆ

ಅರವಣ ಪಾಯಸಂ, ಅಪ್ಪಂ ಪ್ರಸಾದಕ್ಕೆ ವಿಪರೀತ ಬೇಡಿಕೆ ಶಬರಿಮಲೆ: ಈ ವರ್ಷದ ಶಬರಿಮಲೆ ತೀರ್ಥಯಾತ್ರೆ ಋತು ಪ್ರಾರಂಭವಾದ ಕಳೆದ 28 ದಿನಗಳಲ್ಲಿ 25 ಲಕ್ಷಕ್ಕೂ ಹೆಚ್ಚು ಭಕ್ತರು ಶಬರಿಮಲೆಗೆ ಭೇಟಿ ನೀಡಿದ್ದಾರೆ. ಈ ವರ್ಷವೂ ಭಕ್ತರ ದಟ್ಟಣೆ ಅಧಿಕವಾಗಿದ್ದು, ಆನ್‌ಲೈನ್‌ ಬುಕ್ಕಿಂಗ್‌ ಮೂಲಕ ವರ್ಚುವಲ್‌ ಕ್ಯೂ ಪದ್ಧತಿ ಪಾಲಿಸುತ್ತಿರುವುದರಿಂದ ಅಯ್ಯಪ್ಪನ ದರ್ಶನ ಗೊಂದಲವಿಲ್ಲದೆ ನಡೆಯುತ್ತಿದೆ. ಕಳೆದ ವಾರಕ್ಕೆ ಹೋಲಿಸಿದರೆ ಭಾನುವಾರ ದಟ್ಟಣೆ ಸ್ವಲ್ಪ ಕಡಿಮೆಯಾಗಿತ್ತು. ಪಂಪಾದಿಂದ ಸನ್ನಿಧಾನ ತನಕ ಎಲ್ಲೂ ಕಾಯದೆ ಭಕ್ತರು ನೇರವಾಗಿ ದರ್ಶನ ಪಡೆದಿದ್ದಾರೆ.

ಈ ವರ್ಷವೂ ಭಾರಿ ಸಂಖ್ಯೆಯಲ್ಲಿ ಭಕ್ತರಿಂದ ಶಬರಿಮಲೆ ಯಾತ್ರೆ Read More »

ಬಿಜೆಪಿಯಲ್ಲೊಂದು ಅಚ್ಚರಿಯ ಬೆಳವಣಿಗೆ : ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಯುವ ನಾಯಕ ಆಯ್ಕೆ

ಬಿಹಾರದ ಸಚಿವ ನಿತಿನ್‌ ನಬಿನ್‌ಗೆ ಮಹತ್ವದ ಸ್ಥಾನ ನೀಡಿದ ಬಿಜೆಪಿ ನವದೆಹಲಿ : ಹಲವು ತಿಂಗಳಿನಿಂದ ನನೆಗುದಿಗೆ ಬಿದ್ದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಈ ವರ್ಷಾಂತ್ಯದ ವೇಳೆ ಹೆಸರು ಘೋಷಣೆಯಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಜೆ.ಪಿ ನಡ್ಡಾ ಅವರ ಸ್ಥಾನಕ್ಕೆ ಬೇರೊಬ್ಬರನ್ನು ಆರಿಸಲು ಚಿಂತನೆಗಳು ನಡೆದಿದ್ದು, ರಾಷ್ಟ್ರೀಯ ಅಧ್ಯಕ್ಷರ ರೇಸ್​​​ನಲ್ಲಿ ಹಲವರ ಹೆಸರುಗಳು ಕೇಳಿಬರುತ್ತಿವೆ. ಇದರ ನಡುವೆ ಇದೀಗ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು, ಅತ್ಯಂತ ಕಿರಿಯ ಯುವ ನಾಯಕನಿಗೆ ಮಣೆ ಹಾಕಲಾಗಿದೆ.

ಬಿಜೆಪಿಯಲ್ಲೊಂದು ಅಚ್ಚರಿಯ ಬೆಳವಣಿಗೆ : ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಯುವ ನಾಯಕ ಆಯ್ಕೆ Read More »

ಭಾರತದ ಬೌಲಿಂಗ್‌ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ

ಮೂರನೇ ಟಿ20ಯಲ್ಲಿ ಸುಲಭ ಜಯ; ಸರಣಿಯಲ್ಲಿ 2-1 ಮುನ್ನಡೆ ಧರ್ಮಶಾಲಾ: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 2-1 ಮುನ್ನಡೆ ಕಾಯ್ದುಕೊಂಡಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಪ್ರಿಕಾ ತಂಡ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿ ನಿಗದಿತ 20 ಓವರ್‌ಗಳಲ್ಲಿ 117 ರನ್‌ಗಳಿಗೆ ಆಲೌಟ್‌ ಆಯಿತು. 118 ರನ್‌ಗಳ ಅಲ್ಪ ಗುರಿ ಬೆನ್ನಟ್ಟಿದ

ಭಾರತದ ಬೌಲಿಂಗ್‌ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ Read More »

ಇಂದು ಧರ್ಮಶಾಲಾದಲ್ಲಿ 3ನೇ ಟಿ20 ಪಂದ್ಯ

ಟೀಮ್‌ ಇಂಡಿಯಾಕ್ಕೆ ಕ್ಯಾಪ್ಟನ್‌, ವೈಸ್‌ ಕ್ಯಾಪ್ಟನ್‌ಗಳ ಕಳಪೆ ಫಾರ್ಮ್‌ ಹೊರೆ ಧರ್ಮಶಾಲಾ : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3ನೇ ಟಿ20 ಪಂದ್ಯ ಇಂದು ಧರ್ಮಶಾಲಾದಲ್ಲಿ ನಡೆಯಲಿದೆ. ಸರಣಿ 1-1 ಸಮಬಲ ಸಾಧಿಸಿರುವುದರಿಂದ ಈ ಪಂದ್ಯ ನಿರ್ಣಾಯಕವಾಗಿದೆ. ಮಳೆಯ ಸಾಧ್ಯತೆ ಇದ್ದರೂ ಅತ್ಯಾಧುನಿಕ ಒಳಚರಂಡಿ ವ್ಯವಸ್ಥೆ ಇದೆ. ಧರ್ಮಶಾಲಾದ ಪಿಚ್ ಆರಂಭದಲ್ಲಿ ವೇಗದ ಬೌಲರ್‌ಗಳಿಗೆ ಸಹಕಾರಿ, ನಂತರ ಸ್ಪಿನ್ನರ್‌ಗಳಿಗೆ ತಿರುವು ನೀಡಬಹುದು. ಭಾರತದ ಬ್ಯಾಟಿಂಗ್ ಪ್ರದರ್ಶನ ಮತ್ತು ಪಿಚ್ ಪರಿಸ್ಥಿತಿಗಳು ಪಂದ್ಯದ ಫಲಿತಾಂಶವನ್ನು ನಿರ್ಧರಿಸಲಿವೆ. ಭಾರತಕ್ಕೆ

ಇಂದು ಧರ್ಮಶಾಲಾದಲ್ಲಿ 3ನೇ ಟಿ20 ಪಂದ್ಯ Read More »

ನರೇಗಾ ಇನ್ನು ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ

ಕೆಲಸದ ದಿನ, ಕೂಲಿ ಹೆಚ್ಚಳ ನವದೆಹಲಿ: ಸರ್ಕಾರದ ಬಡವರ ಪರವಾದ ಮಹತ್ವದ ಯೋಜನೆಯಾಗಿರುವ ನರೇಗಾದ ಹೆಸರು ಇನ್ನು ಬದಲಾಗಲಿದೆ. ಈ ಯೋಜನೆಗೆ ಹಲಕವು ಬದಲಾವಣೆಗಳೊಂದಿಗೆ ʻಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆʼ ಎಂದು ಹೆಸರಿಡಲು ಕೇಂದ್ರ ಸರ್ಕಾರ ಅನುಮೋದಿಸಿದೆ. ನರೇಗಾಕ್ಕೆ ʻಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆʼಯಾಗಿ ಮರು ನಾಮಕರಣ ಮಾಡಿಈ ಯೋಜನೆ ಅಡಿಯಲ್ಲಿ ಕನಿಷ್ಠ ಉದ್ಯೋಗ ದಿನಗಳ ಸಂಖ್ಯೆಯನ್ನು ಸರ್ಕಾರ 125 ದಿನಗಳಿಗೆ ಹೆಚ್ಚಿಸಿದೆ. ಅಲ್ಲದೆ ಕನಿಷ್ಠ ವೇತನ ದಿನಕ್ಕೆ 240 ರೂ.ಗೆ ಪರಿಷ್ಕರಿಸಲಾಗಿದೆ. ಇದಲ್ಲದೆ

ನರೇಗಾ ಇನ್ನು ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ Read More »

ನ್ಯಾಯಾಧೀಶರ ಪದಚ್ಯುತಿಗೆ ಸಹಿ ಹಾಕಿದ ಕರ್ನಾಟಕ ಕಾಂಗ್ರೆಸ್‌ ಸಂಸದರ ವಿರುದ್ಧ ಆಕ್ರೋಶ

ಕಾರ್ತಿಕ ದೀಪ ಬೆಳಗಿಸಲು ಅನುಮತಿ ನೀಡಿದ ನ್ಯಾಯಾಧೀಶರ ಪದಚ್ಯುತಿಗೆ ಕಾಂಗ್ರೆಸ್‌ ಯತ್ನ ಬೆಂಗಳೂರು: ತಮಿಳುನಾಡಿನ ತಿರುಪರಾನುಕುಂದ್ರಂ ಬೆಟ್ಟದ ಮೇಲಿನ ದರ್ಗಾದ ಸಮೀಪದಲ್ಲಿರುವ ಸ್ಥಳದಲ್ಲಿ ಕಾರ್ತಿಕ ದೀಪ ಬೆಳಗಿಸಲು ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ಸ್ವಾಮಿನಾಥನ್ ಅವರನ್ನು ಪದಚ್ಯುತಿಗೊಳಿಸುವಂತೆ ಕೋರಿ ಸಂವಿಧಾನದ 124ನೇ ವಿಧಿಯೊಂದಿಗೆ 217ನೇ ವಿಧಿಯ ಅಡಿಯಲ್ಲಿ ಲೋಕಸಭೆಯಲ್ಲಿ ನಿರ್ಣಯ ಮಂಡಿಸಲಾಗಿದ್ದು, ಜಡ್ಜ್​​​ ಸ್ವಾಮಿನಾಥನ್ ಪದಚ್ಯುತಿಗೆ ಮಹಾಭಿಯೋಗ ನೋಟೀಸ್‌ ನೀಡಲಾಗಿದೆ. ಈ ನೋಟೀಸ್‌ಗೆ ಕರ್ನಾಟಕದ ಕಾಂಗ್ರೆಸ್ ಸಂಸದರಾದ ಶ್ರೇಯಸ್ ಪಟೇಲ್ (ಹಾಸನ), ಪ್ರಭಾ ಮಲ್ಲಿಕಾರ್ಜುನ (ದಾವಣಗೆರೆ)

ನ್ಯಾಯಾಧೀಶರ ಪದಚ್ಯುತಿಗೆ ಸಹಿ ಹಾಕಿದ ಕರ್ನಾಟಕ ಕಾಂಗ್ರೆಸ್‌ ಸಂಸದರ ವಿರುದ್ಧ ಆಕ್ರೋಶ Read More »

ಬಸ್‌ ಕಂದಕಕ್ಕೆ ಉರುಳಿ ಬಿದ್ದು 9 ಪ್ರಯಾಣಿಕರು ಸಾವು

ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಬಸ್‌ ಹೈದರಾಬಾದ್‌ : ಆಂಧ್ರಪ್ರದೇಶ ಅಲ್ಲೂರು ಎಂಬಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಟ್ಟೆಯ ರಾಶಿಯಂತೆ ಬಿದ್ದಿದ್ದವು. ಬೆಳಗಿನ ಜಾವ 5.30ರ ಸಮಯದಲ್ಲಿ ಅಲ್ಲೂರಿನ ತುಳಸಿಪಕಲು ಗ್ರಾಮದ ಬಳಿ ನಡೆದಿದೆ. ಜಿಲ್ಲಾಧಿಕಾರಿಗಳ ಪ್ರಕಾರ, ಬಸ್ಸಿನಲ್ಲಿ 35 ಪ್ರಯಾಣಿಕರು, ಇಬ್ಬರು ಚಾಲಕರು ಮತ್ತು ಒಬ್ಬ ಕ್ಲೀನರ್

ಬಸ್‌ ಕಂದಕಕ್ಕೆ ಉರುಳಿ ಬಿದ್ದು 9 ಪ್ರಯಾಣಿಕರು ಸಾವು Read More »

ನಾಯಕರಿಬ್ಬರ ಸತತ ವೈಫಲ್ಯ, ದುಬಾರಿಯಾದ ಬೌಲಿಂಗ್‌

ಎರಡನೇ ಟಿ20 ಪಂದ್ಯದಲ್ಲಿ 51 ರನ್‌ಗಳಿಂದ ಹೀನಾಯವಾಗಿ ಸೋತ ಟೀಂ ಇಂಡಿಯಾ ಚಂಡೀಗಢ: ಚಂಡೀಗಢದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ 51 ರನ್‌ಗಳಿಂದ ಸೋತಿದೆ. ಟೀಂ ಇಂಡಿಯಾದ ಅಗ್ರ ಕ್ರಮಾಂಕ, ವಿಶೇಷವಾಗಿ ನಾಯಕ ಸೂರ್ಯಕುಮಾರ್ ಮತ್ತು ಉಪನಾಯಕ ಶುಭ್​ಮನ್ ಗಿಲ್ ಅವರ ಕಳಪೆ ಪ್ರದರ್ಶನ ಮತ್ತು ಆರ್ಷದೀಪ್‌ ಸಿಂಗ್‌ ದುಬಾರಿ ಬೌಲಿಂಗ್‌ ಸೋಲಿಗೆ ಪ್ರಮುಖ ಕಾರಣ. ಕಟಕ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 101 ರನ್​ಗಳಿಂದ ಸೋಲಿಸಿದ್ದ ಟೀಂ

ನಾಯಕರಿಬ್ಬರ ಸತತ ವೈಫಲ್ಯ, ದುಬಾರಿಯಾದ ಬೌಲಿಂಗ್‌ Read More »

error: Content is protected !!
Scroll to Top