ದೇಶ

ನಿಲ್ಲಿಸಿದ ಕಾರಿನೊಳಗೆ ಉಸಿರುಕಟ್ಟಿ ನಾಲ್ವರು ಮಕ್ಕಳು ಸಾವು

ಆಟವಾಡುತ್ತಾ ಕಾರಿನೊಳಗೆ ಹೋದ ಮಕ್ಕಳ ದುರಂತ ಅಂತ್ಯ ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಜಯನಗರಂ ಗ್ರಾಮೀಣ ಮಂಡಲದ ದ್ವಾರಪುಡಿ ಗ್ರಾಮದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಸಿಲುಕಿ ಮೂವರು ಬಾಲಕಿಯರು ಸೇರಿದಂತೆ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ಎಷ್ಟು ಹೊತ್ತಾದರೂ ಮಕ್ಕಳು ಬಾರದ ಕಾರಣ ಪೋಷಕರು ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೂರು ಗಂಟೆಗಳಿಗೂ ಹೆಚ್ಚು ಕಾಲ ಹುಡುಕಿದ ನಂತರ ಕಾರಿನಲ್ಲಿ ಸಿಲುಕಿರುವುದು ಪತ್ತೆಯಾಗಿದೆ. ಬಳಿಕ ಕಾರಿನ ಕಿಟಕಿಗಳನ್ನು ಒಡೆದು ಮಕ್ಕಳನ್ನು ಹೊರಗೆ ತಂದಿದ್ದಾರೆ. ಕೂಡಲೇ […]

ನಿಲ್ಲಿಸಿದ ಕಾರಿನೊಳಗೆ ಉಸಿರುಕಟ್ಟಿ ನಾಲ್ವರು ಮಕ್ಕಳು ಸಾವು Read More »

ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿ ಬಹಿಷ್ಕರಿಸಿದ ಟೀಮ್‌ ಇಂಡಿಯಾ

ಪಾಕಿಸ್ಥಾನ ಇರುವ ಐಸಿಸಿಯ ಯಾವುದೇ ಟೂರ್ನಿಯಲ್ಲಿ ಆಡದಿರಲು ನಿರ್ಧಾರ ಮುಂಬಯಿ: ಭಾರತ-ಪಾಕಿಸ್ಥಾನ ನಡುವಿನ ಸಂಬಂಧ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಏಷ್ಯಾಕಪ್‌ ಟೂರ್ನಿಯಿಂದ ಹಿಂದೆ ಸರಿಯಲು ಬಿಸಿಸಿಐ ನಿರ್ಧರಿಸಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ನಡೆಸುವ ಎಲ್ಲ ಟೂರ್ನಿಗಳಿಂದ ಸದ್ಯಕ್ಕೆ ದೂರವಿರಲು ನಿರ್ಧರಿಸಿದೆ. ಹೀಗಾಗಿ ಈ ವರ್ಷ ನಡೆಯಲಿರುವ ಏಷ್ಯಾಕಪ್ ಟೂರ್ನಿಯಲ್ಲಿ ಹಾಲಿ ಚಾಂಪಿಯನ್‌ ಟೀಮ್ ಇಂಡಿಯಾ ಕಣಕ್ಕಿಳಿಯುವುದಿಲ್ಲ ಎನ್ನಲಾಗಿದೆ. ಶ್ರೀಲಂಕಾದಲ್ಲಿ ಮುಂದಿನ ತಿಂಗಳಿಂದ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾಕಪ್ ಟೂರ್ನಿ ನಡೆಯಲಿದೆ. ಈ ಟೂರ್ನಿಗೆ

ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿ ಬಹಿಷ್ಕರಿಸಿದ ಟೀಮ್‌ ಇಂಡಿಯಾ Read More »

ಹೈದರಾಬಾದ್‌ನಲ್ಲಿ ಬಾಂಬ್‌ ಸ್ಫೋಟಿಸಲು ಯತ್ನಿಸಿದ ಇಬ್ಬರು ಉಗ್ರರ ಸೆರೆ

ಸ್ಫೋಟಕಗಳನ್ನು ಸಂಗ್ರಹಿಸಿ ಬಾಂಬ್‌ ತಯಾರಿಸುತ್ತಿದ್ದ ಐಸಿಸ್‌ ಉಗ್ರರು ಹೈದರಾಬಾದ್‌: ಹೈದರಾಬಾದ್‌ ನಗರದಲ್ಲಿ ಬಾಂಬ್‌ ಸ್ಫೋಟಿಸುವ ಸಂಚನ್ನು ವಿಫಲಗೊಳಿಸಿರುವ ಪೊಲೀಸರು ಈ ಸಂಬಂಧ ಇಬ್ಬರು ಉಗ್ರರನ್ನು ಬಂಧಿಸಿದ್ದಾರೆ. ವಿಜಯನಗರಂನ ಸಿರಾಜ್‌ ಮತ್ತು ಹೈದರಾಬಾದ್‌ನ ಸಮೀರ್‌ ಸೆರೆಯಾಗಿರುವ ಉಗ್ರರು. ಸೌದಿ ಅರೇಬಿಯದ ಐಸಿಸ್‌ ಉಗ್ರರ ಸಂಘಟನೆಯ ಸೂಚನೆಯ ಮೇರೆಗೆ ಇವರಿಬ್ಬರು ಹೈದರಾಬಾದ್‌ ನಗರದಲ್ಲಿ ಬಾಂಬ್‌ ಸ್ಫೋಟಿಸಲು ಯೋಜನೆ ಹಾಕಿಕೊಂಡಿದ್ದರು. ಹೈದರಾಬಾದ್‌ ಮತ್ತು ತೆಲಂಗಾಣ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಅವರ ಸಂಚು ವಿಫಲಗೊಂಡಿದೆ. ಸಿರಾಜ್‌ ಸ್ಫೋಟಕಗಳನ್ನು ಸಂಗ್ರಹಿಸಿಟ್ಟುಕೊಂಡು ಬಾಂಬ್‌ ತಯಾರಿಸುವ

ಹೈದರಾಬಾದ್‌ನಲ್ಲಿ ಬಾಂಬ್‌ ಸ್ಫೋಟಿಸಲು ಯತ್ನಿಸಿದ ಇಬ್ಬರು ಉಗ್ರರ ಸೆರೆ Read More »

ಕಕ್ಷೆ ಸೇರಲು ವಿಫಲವಾದ ಇಸ್ರೋ ಉಪಗ್ರಹ

1,696 ಕಿಲೋಗ್ರಾಂ ತೂಕದ EOS-09 ರೆಡಾರ್ ಇಮೇಜಿಂಗ್ ಸ್ಯಾಟಲೈಟ್‌ ಅಮರಾವತಿ: ಇಂದು ನಸುಕಿನ ಹೊತ್ತು ಉಡಾವಣೆಯಾಗಿದ್ದ ಇಸ್ರೋದ EOS-09 ಉಪಗ್ರಹ ನಿರ್ದಿಷ್ಟ ಕಕ್ಷೆ ಸೇರುವಲ್ಲಿ ವಿಫಲವಾಗಿದೆ. ಇಸ್ರೋದ 101ನೇ ರಾಕೆಟ್ ಉಡಾವಣೆ ಇದಾಗಿದ್ದು, ಇಂದು ಬೆಳಗ್ಗೆ 5.59ರ ಸುಮಾರಿಗೆ ಶ್ರೀಹರಿಕೋಟಾದ ಸತೀಶ್ ಧವನ್ ಉಡಾವಣಾ ಕೇಂದ್ರದಿಂದ EOS-09 ರೆಡಾರ್ ಇಮೇಜಿಂಗ್ ಉಪಗ್ರಹ ನಭಕ್ಕೆ ಚಿಮ್ಮಿತ್ತು. 1,696 ಕಿಲೋಗ್ರಾಂ ತೂಕದ EOS-09 ರೆಡಾರ್ ಇಮೇಜಿಂಗ್ ಉಪಗ್ರಹವು ಭೂಮಿಯ ಮೇಲ್ಮೈಯಿಂದ 500 ಕಿಲೋಮೀಟರ್‌ಗಳಿಗಿಂತ ಹೆಚ್ಚು ಎತ್ತರದಲ್ಲಿ ನೆಲೆಗೊಳ್ಳಬೇಕಿತ್ತು. ಆದರೆ 3ನೇ

ಕಕ್ಷೆ ಸೇರಲು ವಿಫಲವಾದ ಇಸ್ರೋ ಉಪಗ್ರಹ Read More »

ತರೂರ್‌ ಅಮೆರಿಕಕ್ಕೆ, ಕನಿಮೋಳಿ ಗ್ರೀಸ್‌ಗೆ : ಪಾಕಿಸ್ಥಾನದ ಉಗ್ರ ಮುಖವಾಡ ಜಗತ್ತಿನೆದುರು ಕಳಚಲು ಭಾರತ ತಂತ್ರ

7 ಸಂಸದರ ತಂಡಗಳಿಂದ ಜಗತ್ತಿನ ಪ್ರಮುಖ ದೇಶಗಳಿಗೆ ಭೇಟಿ ನವದೆಹಲಿ: ಪಹಲ್ಗಾಮ್ ನರಮೇಧಕ್ಕೆ ಪ್ರತಿಯಾಗಿ ಪಾಕಿಸ್ಥಾನದ ಉಗ್ರ ನೆಲೆ, ಸೇನಾ ನೆಲೆಗಳ ಮೇಲೆ ಆಪರೇಷನ್ ಸಿಂದೂರ ದಾಳಿ ನಡೆಸಿದ್ದ ಭಾರತ, ಈಗ ವಿವಿಧ ರಾಜಕೀಯ ಪಕ್ಷಗಳಿಗೆ ಸೇರಿದ 7 ನಾಯಕರ ನೇತೃತ್ವದಲ್ಲಿ ಸಂಸದರ ನಿಯೋಗವೊಂದನ್ನು ಹಲವು ದೇಶಗಳಿಗೆ ರವಾನಿಸುವ ಮೂಲಕ ಪಾಕಿಸ್ಥಾನದ ಉಗ್ರವಾದದ ಮುಖವಾಡ ಬಯಲು ಮಾಡುವ ದಾಳ ಉರುಳಿಸಿದೆ. ಅಚ್ಚರಿಯ ವಿಷಯವೆಂದರೆ ಈ ಹಿಂದೆ ಕರ್ನಾಟಕ ವಿಧಾನಸಭೆಯಲ್ಲಿ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ವಿವಾದದಲ್ಲಿ ಸಿಕ್ಕಿಹಾಕಿಕೊಂಡಿದ್ದ ಸಂಸದ

ತರೂರ್‌ ಅಮೆರಿಕಕ್ಕೆ, ಕನಿಮೋಳಿ ಗ್ರೀಸ್‌ಗೆ : ಪಾಕಿಸ್ಥಾನದ ಉಗ್ರ ಮುಖವಾಡ ಜಗತ್ತಿನೆದುರು ಕಳಚಲು ಭಾರತ ತಂತ್ರ Read More »

ಪಹಲ್ಗಾಮ್‌ಗೂ ಭೇಟಿ ನೀಡಿದ್ದ ಪಾಕ್‌ ಏಜೆಂಟ್‌ ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರ

ಪಾಕಿಸ್ಥಾನದ ಪರ ಗೂಢಚಾರಿಕೆ ಮಾಡುತ್ತಿದ್ದ ಯೂಟ್ಯೂಬರ್‌ ಸೆರೆ ನವದೆಹಲಿ: ಪಾಕಿಸ್ಥಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಭಾರತದ ರಹಸ್ಯಗಳನ್ನು ರವಾನಿಸುತ್ತಿದ್ದ ಆರೋಪದಲ್ಲಿ ಸೆರೆಯಾಗಿರುವ ಹರ್ಯಾಣದ ಯೂಟ್ಯೂಬರ್‌ ಯುವತಿ ಜ್ಯೋತಿ ಮಲ್ಹೋತ್ರ ಕಾಶ್ಮೀರದ ಪಹಲ್ಗಾಮ್‌ಗೂ ಭೇಟಿ ನೀಡಿರುವ ವಿಚಾರ ತನಿಖೆಯಿಂದ ಬೆಳಕಿಗೆ ಬಂದಿದೆ. ಜ್ಯೋತಿ ಇನ್‌ಸ್ಟಾಗ್ರಾಂನಲ್ಲಿ ಜನವರಿ ತಿಂಗಳಿನಲ್ಲಿ ಪಹಲ್ಗಾಮ್‌ಗೆ ತೆರಳಿದ್ದ ವಿಡಿಯೋ ಅಪ್ಲೋಡ್‌ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಜ್ಯೋತಿ ವಿಡಿಯೋಗಳು ಈಗ ವೈರಲ್‌ ಆಗಿವೆ. ಪಾಕಿಸ್ಥಾನದ ಪರವಾಗಿ ಗೂಢಚಾರಿಕೆ ನಡೆಸುತ್ತಿದ್ದ ಆರು ಮಂದಿಯನ್ನು ದೇಶದ ವಿವಿಧೆಡೆಯಿಂದ ಬಂಧಿಸಲಾಗಿದ್ದು, ಈ

ಪಹಲ್ಗಾಮ್‌ಗೂ ಭೇಟಿ ನೀಡಿದ್ದ ಪಾಕ್‌ ಏಜೆಂಟ್‌ ಯೂಟ್ಯೂಬರ್‌ ಜ್ಯೋತಿ ಮಲ್ಹೋತ್ರ Read More »

ಇಂಡೋನೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಉಗ್ರರ ಸೆರೆ

ಐಸಿಸ್‌ ಪರವಾಗಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಉಗ್ರರು ನವದೆಹಲಿ: ಇಂಡೋನೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ ಪುಣೆಯ ಐಸಿಸ್ ಮಾಡ್ಯೂಲ್ ಪ್ರಕರಣದ ಇಬ್ಬರು ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಅಬ್ದುಲ್ಲಾ ಫಯಾಜ್ ಶೇಖ್ ಮತ್ತು ತಲ್ಹಾ ಲಿಯಾಕತ್ ಖಾನ್ ಎಂಬವರನ್ನು ಇಂಡೋನೇಷ್ಯಾದಲ್ಲಿ ಬಂಧಿಸಿ ಭಾರತಕ್ಕೆ ರವಾನಿಸಲಾಗಿದ್ದು, ಮುಂಬಯಿಯಲ್ಲಿ ಬಂಧಿಸಲಾಗಿದೆ. ಅವರನ್ನು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಮಹಾರಾಷ್ಟ್ರ, ಗುಜರಾತ್ ಮತ್ತು ಭಾರತದ ಇತರ ಭಾಗಗಳಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಲು ಐಸಿಸ್ ಪ್ರಾಯೋಜಿತ ಪಿತೂರಿಯಲ್ಲಿ ಇಬ್ಬರೂ ತೊಡಗಿದ್ದರು. ಐಇಡಿ ಸ್ಫೋಟದ ಕಾರ್ಯಾಗಾರಗಳನ್ನು ಆಯೋಜಿಸುವುದು,

ಇಂಡೋನೇಷ್ಯಾದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಉಗ್ರರ ಸೆರೆ Read More »

ನಮ್ಮ ವಾಯುನೆಲೆಗಳ ಮೇಲೆ ಭಾರತ ದಾಳಿ ಮಾಡಿದೆ : ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ

ನಡುರಾತ್ರಿ ಸೇನಾ ಮುಖ್ಯಸ್ಥ ಫೋನ್‌ ಮಾಡಿ ದಾಳಿಯಾದ ವಿಚಾರ ತಿಳಿಸಿದರು ಎಂದ ಶಹಬಾಝ್ ಷರೀಫ್ ಇಸ್ಲಾಮಾಬಾದ್: ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಭಾರತದ ಕ್ಷಿಪಣಿ ರಾವಲ್ಪಿಂಡಿಯಲ್ಲಿರುವ ನೂರ್ ಖಾನ್ ವಾಯುನೆಲೆ ಸೇರಿದಂತೆ ವಿವಿಧ ವಾಯುನೆಲೆಗಳ ಮೇಲೆ ನಿಖರ ದಾಳಿ ನಡೆಸಿದ್ದನ್ನು ಇದೇ ಮೊದಲ ಬಾರಿಗೆ ಪಾಕಿಸ್ಥಾನದ ಪ್ರಧಾನಿ ಶಹಬಾಝ್ ಷರೀಫ್ ಒಪ್ಪಿಕೊಂಡಿದ್ದಾರೆ. ಮೇ 9 ಮತ್ತು 10ರ ನಡುವಿನ ರಾತ್ರಿ 2.30ಕ್ಕೆ ಪಾಕಿಸ್ಥಾನ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಸ್ವತಃ ಕರೆ ನನ್ನನ್ನು ಎಬ್ಬಿಸಿ ಭಾರತ

ನಮ್ಮ ವಾಯುನೆಲೆಗಳ ಮೇಲೆ ಭಾರತ ದಾಳಿ ಮಾಡಿದೆ : ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ Read More »

ಪಾಕಿಸ್ಥಾನದ 600 ಡ್ರೋನ್‌ಗಳನ್ನು ಹೊಡೆದುರುಳಿಸಿದ ಭಾರತ

ಟರ್ಕಿ, ಚೀನ ನಿರ್ಮಿತ ಡ್ರೋನ್‌ಗಳೆಲ್ಲ ಆಕಾಶದಲ್ಲೇ ಉಡೀಸ್‌ ನವದೆಹಲಿ: ಆಪರೇಷನ್‌ ಸಿಂಧೂರ ಬಳಿಕ ಶುರುವಾದ ಯುದ್ಧದಲ್ಲಿ ಭಾರತದ ವಿರುದ್ಧ ಪಾಕಿಸ್ಥಾನ ಬರೋಬ್ಬರಿ 600 ಡ್ರೋನ್‌ಗಳಿಂದ ದಾಳಿ ನಡೆಸಿತ್ತು. ಸುಧಾರಿತ ರಕ್ಷಣಾ ವ್ಯವಸ್ಥೆಗಳನ್ನು ಬಳಸಿಕೊಂಡು ಭಾರತ ಎಲ್ಲ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಯುದ್ಧದ ಕೆಲವೊಂದು ಮಾಹಿತಿಗಳು ಈಗ ಬಹಿರಂಗವಾಗಿದ್ದು, ಪಾಕಿಸ್ಥಾನಕ್ಕೆ ಟರ್ಕಿ ಪೂರ್ಣ ನೆರವು ನೀಡಿದ್ದು ಜಗಜ್ಜಾಹೀರಾಗಿದೆ. ಭಾರತದ ವಿರುದ್ಧ ಬರೋಬ್ಬರಿ 600 ಡ್ರೋನ್‌ಗಳಿಂದ ಪಾಕ್‌ ದಾಳಿ ಮಾಡಿತು. ಟರ್ಕಿ ನಿರ್ಮಿತ ಡ್ರೋನ್‌ಗಳಿಂದ ದಾಳಿಯಾಗಿತ್ತು. ಲೇಹ್‌ನಿಂದ ಸರ್‌ ಕ್ರೀಕ್‌ವರೆಗೆ 36

ಪಾಕಿಸ್ಥಾನದ 600 ಡ್ರೋನ್‌ಗಳನ್ನು ಹೊಡೆದುರುಳಿಸಿದ ಭಾರತ Read More »

ಐಪಿಎಲ್‌ ಪಂದ್ಯಗಳು ಇಂದಿನಿಂದ ಪುನರಾರಂಭ

ಬೆಂಗಳೂರಿನಲ್ಲಿ ಆರ್‌ಸಿಬಿ-ಕೆಕೆಆರ್‌ ಮುಖಾಮುಖಿ ಬೆಂಗಳೂರು: ಭಾರತ ಮತ್ತು ಪಾಕಿಸ್ಥಾನ ನಡುವಿನ ಯುದ್ಧದಿಂದಾಗಿ ಒಂದು ವಾರ‌ ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಐಪಿಎಲ್‌ ಕ್ರಿಕೆಟ್‌ ಪಂದ್ಯಗಳು ಇಂದಿನಿಂದ ಪುನರಾರಂಭವಾಗುತ್ತಿವೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಕೆಕೆಆರ್‌-ಆರ್‌ಸಿಬಿ ತಂಡಗಳು ಮುಖಾಮುಖಿಯಾಗಲಿವೆ. ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಲಿದ್ದು, ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಹೇಳಿರುವ ವಿರಾಟ್‌ ಕೊಹ್ಲಿಯ ಆಟ ನೋಡಲು ಜನ ಉತ್ಸುಕರಾಗಿದ್ದಾರೆ. ಸದ್ಯ ಆಡಿರುವ 11 ಪಂದ್ಯಗಳಿಂದ 8 ಜಯ, 3 ಸೋಲು ಕಂಡಿರುವ ರಜತ್‌ ಪಾಟಿದಾರ್‌ ಸಾರಥ್ಯದ ಆರ್‌ಸಿಬಿ, +0.482 ನೆಟ್‌ ರನ್‌ರೇಟ್‌ನೊಂದಿಗೆ

ಐಪಿಎಲ್‌ ಪಂದ್ಯಗಳು ಇಂದಿನಿಂದ ಪುನರಾರಂಭ Read More »

error: Content is protected !!
Scroll to Top