ದೇಶ

ಜಗತ್ತಿನ ಗಮನ ಸೆಳೆದ ಮೋದಿ-ಟ್ರಂಪ್‌ ಮಾತುಕತೆ

ಯುದ್ಧದ ನಡುವೆ ಮೋದಿಗೆ ಕರೆ ಮಾಡಿ 40 ನಿಮಿಷ ಚರ್ಚಿಸಿದ ಟ್ರಂಪ್‌ ನವದೆಹಲಿ: ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಹಾಗೂ ಶಾಂತಿ ಮಾತುಕತೆ ವಿಫಲವಾದ ನಂತರ ಪ್ರಧಾನಿ ನರೇಂದ್ರ ಮೋದಿಗೆ ಮೊದಲ ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ಮಾಡಿದ್ದಾರೆ. ಇಬ್ಬರೂ ನಾಯಕರು 40 ನಿಮಿಷಗಳ ಕಾಲ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ್ದಾರೆ. ಅಮೆರಿಕದ ಹಾರ್ಮುಜ್ ಜಲಸಂಧಿ ದಿಗ್ಬಂಧನ ನಡುವೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಪ್ರಧಾನಿ ಮೋದಿ ಮಂಗಳವಾರ ದೂರವಾಣಿಯಲ್ಲಿ 40 ನಿಮಿಷ ಸಂಭಾಷಣೆ ನಡೆಸಿರುವುದು […]

ಜಗತ್ತಿನ ಗಮನ ಸೆಳೆದ ಮೋದಿ-ಟ್ರಂಪ್‌ ಮಾತುಕತೆ Read More »

ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : ಮೂವರು ಸಜೀವ ದಹನ

ಪ್ಲಾಸ್ಟಿಕ್‌ ತ್ಯಾಜ್ಯ ಸಂಗ್ರಹಿಸಿದ್ದ ಗೋದಾಮಿನಲ್ಲಿ ಸಂಭವಿಸಿದ ದುರಂತ ನವದೆಹಲಿ: ದೆಹಲಿಯ ರೋಹಿಣಿ ಪ್ರದೇಶದಲ್ಲಿ ಗುರುವಾರ ತಡರಾತ್ರಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಮಂಗೇರಾಮ್ ಪಾರ್ಕ್‌ನಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಅಲ್ಲಿಯೇ ನಿರ್ಮಿಸಲಾಗಿದ್ದ ಗುಡಿಸಲುಗಳನ್ನು ಆಹುತಿ ಪಡೆದಿದೆ. ಈ ಘೋರ ಘಟನೆಯಲ್ಲಿ ಮಗುವೂ ಸೇರಿದಂತೆ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದಾರೆ. ಬುದ್ಧ ವಿಹಾರ್ ಬಳಿಯ ಸುಮಾರು 400 ಚದರ ಗಜಗಳಷ್ಟು ವಿಸ್ತೀರ್ಣದ ಜಾಗದಲ್ಲಿ ಈ ಅನಾಹುತ ಸಂಭವಿಸಿದೆ. ಇಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿಡಲಾಗಿತ್ತು

ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ : ಮೂವರು ಸಜೀವ ದಹನ Read More »

7 ವರ್ಷದ ಬಳಿಕ ಇರಾನ್‌ ತೈಲ ಹೊತ್ತ ಹಡಗುಗಳು ಭಾರತಕ್ಕೆ ಆಗಮನ

ಯುದ್ಧದ ನಡುವೆಯೇ ಭಾರತಕ್ಕೆ ತೈಲ ನೀಡಿದ ಇರಾನ್‌ ಮುಂಬೈ: ತೈಲ ಸಂಸ್ಕರಣಾಗಾರರಿಗೆ ಕಳೆದ ತಿಂಗಳು ಅಮೆರಿಕ (America) ನೀಡಿದ್ದ ತಾತ್ಕಾಲಿಕ ವಿನಾಯಿತಿ ಬಳಸಿಕೊಂಡು ಭಾರತ 7 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇರಾನ್‌ನಿಂದ ಕಚ್ಚಾತೈಲ ಖರೀದಿ ಮಾಡಿದೆ. ಇರಾನಿನ ಕಚ್ಚಾತೈಲ ತುಂಬಿದ 2 ಬೃಹತ್‌ ಟ್ಯಾಂಕರ್‌ಗಳು ಭಾರತದ ಬಂದರುಗಳನ್ನು ತಲುಪಿವೆ ಎಂದು ಎಲ್‌ಎಸ್‌ಇಜಿ ಹಡಗು ಟ್ರ್ಯಾಕಿಂಗ್‌ ದತ್ತಾಂಶ ತೋರಿಸಿದೆ ಎಂದು ವರದಿಯಾಗಿದೆ. ಹಡಗು ಟ್ರ್ಯಾಕಿಂಗ್‌ ದತ್ತಾಂಶದ ಪ್ರಕಾರ ಇರಾನ್‌ನ ಧ್ವಜ ಹೊತ್ತ ʻFelicityʼ ಹಡಗು ಪಶ್ಚಿಮ ಭಾರತದ

7 ವರ್ಷದ ಬಳಿಕ ಇರಾನ್‌ ತೈಲ ಹೊತ್ತ ಹಡಗುಗಳು ಭಾರತಕ್ಕೆ ಆಗಮನ Read More »

ನಾಳೆ ಮಂಡ್ಯ ಆದಿಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ

ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕ್ಷೇತ್ರಕ್ಕೆ ನಾಳೆ (ಏಪ್ರಿಲ್ 15) ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಶ್ರೀಕ್ಷೇತ್ರದ ಮಾಜಿ ಪೀಠಾಧಿಪತಿ ಪರಮಪೂಜ್ಯ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣಾರ್ಥ ನಿರ್ಮಾಣಗೊಂಡಿರುವ ಭವ್ಯ ‘ಶ್ರೀ ಗುರು ಭೈರವೈಕ್ಯ ಮಂದಿರ’ವನ್ನು ಪ್ರಧಾನಿ ಲೋಕಾರ್ಪಣೆಗೊಳಿಸಲಿದ್ದಾರೆ. ಬಳಿಕ ಭಕ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಇಡೀ ಆದಿಚುಂಚನಗಿರಿ ಕ್ಷೇತ್ರ ಅಲಂಕಾರಗೊಂಡು ಕಂಗೊಳಿಸುತ್ತಿದೆ. ದ್ರಾವಿಡ ಶೈಲಿಯಲ್ಲಿ ನಿರ್ಮಾಣಗೊಂಡಿರುವ ಈ ಭೈರವೈಕ್ಯ ಮಂದಿರ

ನಾಳೆ ಮಂಡ್ಯ ಆದಿಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ Read More »

ಭಾರತದ ತೈಲ ಟ್ಯಾಂಕರ್‌ಗಳಿಗೆ ಶುಲ್ಕವಿಲ್ಲ : ಇರಾನ್‌ ಭರವಸೆ

ಹಾರ್ಮುಜ್‌ ಜಲಸಂಧಿ ಹಾದು ಹೋಗುವ ಹಡಗುಗಳಿಂದ ಶುಲ್ಕ ವಸೂಲಿ ಟೆಹರಾನ್: ಇರಾನ್ ಬಂದರುಗಳನ್ನು ಅಮೆರಿಕ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದು, ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಾಗಿದೆ. ಈ ನಡುವೆ ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಸುಂಕವನ್ನು ವಿಧಿಸುವುದಿಲ್ಲ ಎಂದು ಇರಾನ್ ಭಾರತಕ್ಕೆ ಮತ್ತೆ ಭರವಸೆ ನೀಡಿದೆ. ಉಭಯ ರಾಷ್ಟ್ರಗಳು ಬಲವಾದ ಸಂಬಂಧ ಹೊಂದಿದ್ದು, ಸಾಮಾನ್ಯ ಹಿತಾಸಕ್ತಿ ಹೊಂದಿವೆ ಎಂದು ಭಾರತದಲ್ಲಿರುವ ಇರಾನ್ ರಾಯಭಾರಿ ಹೇಳಿದ್ದು, ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳ ಸಂಚಾರಕ್ಕೆ ನಿರಂತರ ಸಹಕಾರವನ್ನು

ಭಾರತದ ತೈಲ ಟ್ಯಾಂಕರ್‌ಗಳಿಗೆ ಶುಲ್ಕವಿಲ್ಲ : ಇರಾನ್‌ ಭರವಸೆ Read More »

ಇಂದು ಸಂಜೆ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಎಂಟು ದಶಕಗಳ ಹಾಡು ನಿಲ್ಲಿಸಿದ ಗಾಯಕಿಗೆ ಭಾವಪೂರ್ಣ ವಿದಾಯ ಕೋರಲು ಸರ್ವ ಸಿದ್ಧತೆ ಮುಂಬೈ: ಭಾನುವಾರ ಹೃದಯಾಘಾತದಿಂದ ತೀರಿಕೊಂಡಿರುವ ಖ್ಯಾತ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ ಇಂದು ಸಂಜೆ ದಾದರ್‌ನ ಶಿವಾಜಿ ಪಾರ್ಕ್‌ನಲ್ಲಿ ನೆರವೇರಲಿದೆ. ಚಿತ್ರರಂಗವೂ ಸೇರಿದಂತೆ ವಿವಿಧ ರಂಗಗಳ ನೂರಾರು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ಬರೋಬ್ಬರಿ 80 ವರ್ಷಗಳ ತಮ್ಮ ಗಾಯನದ ಬದುಕನ್ನು ತೊರೆದು ಹಾಡು ನಿಲ್ಲಿಸಿರುವ ಆಶಾ ಭೋಸ್ಲೆ ಅವರಿಗೆ ದೇಶ ವಿದೇಶಗಳಲ್ಲಿ ಕೋಟಿಗಟ್ಟಲೆ ಅಭಿಮಾನಿಗಳಿದ್ದಾರೆ. ಎಂಟು ದಶಕಗಳಿಗೂ ಹೆಚ್ಚು ಕಾಲ ಭಾರತೀಯ

ಇಂದು ಸಂಜೆ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ Read More »

ದೇಶಾದ್ಯಂತ ಆಕ್ರೋಶದ ಅಲೆಯೆಬ್ಬಿಸಿದ ಕಾರ್ಪೋರೇಟ್‌ ಜಿಹಾದ್‌

ಪ್ರತಿಷ್ಠಿತ ಟಿಸಿಎಸ್‌ ಕಂಪನಿಯಲ್ಲಿ ನಡೆಯುತ್ತಿದ್ದ ಲವ್‌ ಜಿಹಾದ್‌ಗೆ ಬೆಚ್ಚಿಬಿದ್ದ ದೇಶ ಮುಂಬೈ: ಮಹಾರಾಷ್ಟ್ರದ ನಾಶಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ (ಟಿಸಿಎಸ್‌) ಕಚೇರಿಯಲ್ಲಿ ಸಸ್ಯಾಹಾರಿಗಳಾಗಿದ್ದ ಹಿಂದೂ ಮಹಿಳಾ ಉದ್ಯೋಗಿಗಳಿಗೆ ಬಲವಂತವಾಗಿ ಗೋಮಾಂಸ ಸೇವಿಸುವಂತೆ ಮಾಡಿ ನಮಾಜ್ ಮಾಡಲು ಒತ್ತಾಯಿಸುತ್ತಿದ್ದ ಸ್ಫೋಟಕ ವಿಚಾರ ಬೆಳಕಿಗೆ ಬಂದು ದೇಶಾದ್ಯಂತ ಆಕ್ರೋಶದ ಅಲೆ ಎಬ್ಬಿಸಿದೆ. ಇದು ಕಾರ್ಪೋರೇಟ್‌ ಕಂಪೊನಿಗಳಲ್ಲಿ ವ್ಯವಸ್ಥಿತವಾಗಿ ನಡೆಯುತ್ತಿರುವ ಲವ್‌ ಜಿಹಾದ್‌ ಎನ್ನಲಕಾಗಿದೆ. ಈ ಕಾರ್ಪೋರೇಟ್‌ ಜಿಹಾದ್‌ ಕುರಿತು ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ)

ದೇಶಾದ್ಯಂತ ಆಕ್ರೋಶದ ಅಲೆಯೆಬ್ಬಿಸಿದ ಕಾರ್ಪೋರೇಟ್‌ ಜಿಹಾದ್‌ Read More »

ಕುಂಭಮೇಳದ ಬೆಡಗಿ ಮೊನಾಲಿಸಾ ದಿಢೀರ್‌ ನಾಪತ್ತೆ

ಅಪ್ರಾಪ್ತ ವಯಸ್ಕಳು ಎಂದು ಬಹಿರಂಗವಾದ ಬಳಿಕ ಕಾಣೆ ನವದೆಹಲಿ: ಕುಂಭಮೇಳದಿಂದ ಪ್ರಸಿದ್ಧಳಾಗಿರುವ ಮೊನಲಿಸಾ ಅಂತರ್‌ ಧರ್ಮೀಯ ಮದುವೆಯಾದಂದಿನಿಂದ ಕೆಟ್ಟ ಕಾರಣಗಳಿಗಾಗಿ ಸುದ್ದಿಯಾಗುತ್ತಿದ್ದಾಳೆ. ಇತ್ತೀಚೆಗಷ್ಟೆ ಮೊನಲಿಸಾ ಕೇರಳದಲ್ಲಿ ಫರ್ಮನ್ ಖಾನ್ ಜೊತೆ ಮದುವೆ ಆಗಿದ್ದಳು. ಕೇರಳದ ಕೆಲ ರಾಜಕೀಯ ಮುಖಂಡರ ನೇತೃತ್ವದಲ್ಲಿ ಈ ಮದುವೆ ನಡೆದಿತ್ತು. ಇದು ಲವ್ ಜಿಹಾದ್ ಎಂದು ಅವರ ತಂದೆ ಹಾಗೂ ಕೆಲ ಸಂಬಂಧಿಗಳು ಆರೋಪಿಸಿದ್ದರು. ಆದರೆ ತಮ್ಮದು ಲವ್ ಜಿಹಾದ್ ಅಲ್ಲವೆಂದು ಮೊನಲಿಸಾ ಮತ್ತು ಅವರ ಪತಿ ಸುದ್ದಿಗೋಷ್ಠಿ ನಡೆಸಿ ಹೇಳಿದ್ದರು. ಬಳಿಕ

ಕುಂಭಮೇಳದ ಬೆಡಗಿ ಮೊನಾಲಿಸಾ ದಿಢೀರ್‌ ನಾಪತ್ತೆ Read More »

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಆಸ್ಪತ್ರೆಗೆ ದಾಖಲು

ಸಾವಿರಾರು ಹಾಡುಗಳನ್ನು ಹಾಡಿರುವ ಗಾಯಕಿಯ ಚೇತರಿಕೆಗೆ ಪ್ರಾರ್ಥನೆ ಮುಂಬೈ: ಭಾರತೀಯ ಸಿನಿಮಾ ರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಗಿದ್ದು, ಅವರನ್ನು ಮುಂಬೈನ ಪ್ರತಿಷ್ಠಿತ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಶಾ ಬೋಸ್ಲೆ ಅವರಿಗೆ 92 ವರ್ಷ ವಯಸ್ಸಾಗಿದ್ದು, ವಯೋಸಜ ಕೆಲವು ಸಮಸ್ಯೆಗಳಿಂದ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಆಶಾ ಭೋಸ್ಲೆ ಭಾರತ ರತ್ನ ಪುರಸ್ಕೃತ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಸಹೋದರಿ ಆಗಿದ್ದು,

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಆಸ್ಪತ್ರೆಗೆ ದಾಖಲು Read More »

ಸಿಸಿ ಕ್ಯಾಮರಾ ಮೂಲಕ ಭಾರತದ ಸೇನೆ ಮೇಲೆ ಪಾಕಿಸ್ತಾನ ಕಣ್ಗಾವಲು

ಬೇಹುಗಾರಿಕೆ ಮಾಡುತ್ತಿದ್ದ 11 ಮಂದಿ ಸೆರೆ ನವದೆಹಲಿ: ಇರಾನ್ ರಾಜಧಾನಿ ಟೆಹ್ರಾನ್‌ನ ಸಿಸಿ ಕ್ಯಾಮರಾ ಹ್ಯಾಕ್ ಮಾಡಿ ಪರಮೋಚ್ಚ ನಾಯಕ ಆಯತೊಲ್ಲಾ ಖಮೇನಿ ಮತ್ತು ಆಪ್ತರ ಮೇಲೆ ದೂರದಲ್ಲೆಲ್ಲೋ ಕುಳಿತು ಇಸ್ರೇಲ್ ಕಣ್ಣಿಟ್ಟಿದ್ದ ರೀತಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಕೂಡ ಭಾರತದ ಮೇಲೆ ಕಣ್ಣಿಟ್ಟಿದ್ದ ಆಘಾತಕಾರಿ ವಿಚಾರ ಬಯಲಾಗಿದೆ. 4 ರಾಜ್ಯಗಳ ಹಲವು ನಗರಗಳ ಆಯಕಟ್ಟಿನ ಜಾಗದಲ್ಲಿ ಭಾರತದ ಸೇನೆಯ ಚಲನವಲನಗಳನ್ನು ವೀಕ್ಷಿಸಲು ಪಾಕ್ ಸಿಸಿಟಿವಿ ಅಳವಡಿಸಿರುವುದು ಗೊತ್ತಾಗಿದೆ. ನಿಷೇಧಿತ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್ ಉಗ್ರ

ಸಿಸಿ ಕ್ಯಾಮರಾ ಮೂಲಕ ಭಾರತದ ಸೇನೆ ಮೇಲೆ ಪಾಕಿಸ್ತಾನ ಕಣ್ಗಾವಲು Read More »

error: Content is protected !!
Scroll to Top