ದೇಶ

ಆದಾಯ ಸಾಕಾಗುತ್ತಿಲ್ಲ ಸಚಿವ ಸ್ಥಾನದಿಂದ ಕೈಬಿಡಿ ಎಂದು ಮನವಿ ಮಾಡಿದ ಸುರೇಶ್‌ ಗೋಪಿ!

ರಾಜಕೀಯ ವಲಯದಲ್ಲಿ ಅಚ್ಚರಿ ಹುಟ್ಟಿಸಿದ ಕೇರಳದ ಸಂಸದನ ಬಹಿರಂಗ ಹೇಳಿಕೆ ನವದೆಹಲಿ: ಸಚಿವ ಸ್ಥಾನಕ್ಕೆ ಇನ್ನಿಲ್ಲದಂತೆ ತಿಪ್ಪರಲಾಗ ಹಾಕುವ ರಾಜಕಾರಣಿಗಳ ನಡುವೆ ಕೇರಳದ ತ್ರಿಶ್ಶೂರಿನಿಂದ ಲೋಕಸಭೆಗೆ ಆಯ್ಕೆಯಾಗಿ ಸಚಿವರಾಗಿರುವ ಚಿತ್ರನಟ ಸುರೇಶ್‌ ಗೋಪಿ ನನಗೆ ಸಚಿವ ಸ್ಥಾನ ಬೇಡ ಎಂದು ಬಹಿರಂಗವಾಗಿ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಕೇರಳದಲ್ಲಿ ಬಿಜೆಪಿಯಿಂದ ಲೋಕಸಭೆ ಚುನಾವಣೆ ಗೆದ್ದಿರುವ ಮೊದಲ ಸಂಸದ ಎಂಬ ಹಿರಿಮೆಯನ್ನೂ ಹೊಂದಿರುವ ಸುರೇಶ್‌ ಗೋಪಿ ಸಚಿವ ಸ್ಥಾನ ಬೇಡ ಎಂದಿರುವುದಕ್ಕೆ ನೀಡಿರುವ ಕಾರಣ ಮತ್ತೊಂದು ಅಚ್ಚರಿಗೆ ಕಾರಣವಾಗಿದೆ. ಸದ್ಯ […]

ಆದಾಯ ಸಾಕಾಗುತ್ತಿಲ್ಲ ಸಚಿವ ಸ್ಥಾನದಿಂದ ಕೈಬಿಡಿ ಎಂದು ಮನವಿ ಮಾಡಿದ ಸುರೇಶ್‌ ಗೋಪಿ! Read More »

ಚಿನ್ನ, ಬೆಳ್ಳಿ ಬೆಲೆ ಏರಿಕೆ ನಾಗಾಲೋಟ : ಮದುವೆ ಸೀಸನ್‌ನಲ್ಲೇ ಚಿಂತೆಗೆ ಕಾರಣವಾದ ದರ

ಚಿನ್ನ 10 ಗ್ರಾಂಗೆ 1.24 ಲ.ರೂ; ಬೆಳ್ಳಿ ಕೆಜಿಗೆ 1.60 ಲಕ್ಷ ರೂ. ಬೆಂಗಳೂರು: ಚಿನ್ನ ಮತ್ತು ಬೆಳ್ಳಿಯ ಬೆಲೆ ಮತ್ತೆ ಗಗನಮುಖಿಯಾಗಿದೆ. ಹಬ್ಬಗಳು, ಮದುವೆ ಸೀಸನ್‌ ಶುರುವಾಗಲೇ ಚಿನ್ನ ಮತ್ತು ಬೆಳ್ಳಿಯ ಬೆಲೆ ಏರಿಕೆಯಾಗುತ್ತಿರುವುದು ಜನರ ಚಿಂತೆಗೆ ಕಾರಣವಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಬಂಗಾರ ಮತ್ತು ಬೆಳ್ಳಿ ಎರಡೂ ಮಧ್ಯಮ ಮತ್ತು ಬಡ ವರ್ಗದವರಿಗೆ ಕೈಗೆಟುಕದಂತಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 1,24,000 ರೂ. ಮತ್ತು ಬೆಳ್ಳಿ ಕೆ.ಜಿಗೆ 1,60,000 ರೂ. ಆಗಿದೆ. ಪ್ರಮುಖವಾಗಿ

ಚಿನ್ನ, ಬೆಳ್ಳಿ ಬೆಲೆ ಏರಿಕೆ ನಾಗಾಲೋಟ : ಮದುವೆ ಸೀಸನ್‌ನಲ್ಲೇ ಚಿಂತೆಗೆ ಕಾರಣವಾದ ದರ Read More »

ಅಫಘಾನಿಸ್ತಾನ ವಿದೇಶಾಂಗ ಸಚಿವ ಭಾರತಕ್ಕೆ ಆಗಮನ

ಭಾರತದೊಂದಿಗೆ ಮಹತ್ವದ ಮಾತುಕತೆ ನಡೆಸಲಿರುವ ಸಚಿವ ಮುತ್ತಕಿ ನವದೆಹಲಿ: ಅಫಘಾನಿಸ್ತಾನದ ತಾಲಿಬಾನ್‌ ಸರ್ಕಾರದ ವಿದೇಶಾಂಗ ಸಚಿವ ಅಮೀರ್‌ ಖಾನ್‌ ಮುತ್ತಕಿ ಇಂದು ದೆಹಲಿಗೆ ಆಗಮಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಅಧಿಕಾರ ವಹಿಸಿಕೊಂಡ ನಂತರ ಅಲ್ಲಿನ ಸಚಿವರೊಬ್ಬರ ಭಾರತಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಇದು ಐತಿಹಾಸಿಕ ಭೇಟಿ ಎನ್ನಲಾಗಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮುತ್ತಕಿ ಅವರಿಗೆ ಅಂತಾರಾಷ್ಟ್ರೀಯ ಪ್ರಯಾಣ ನಿರ್ಬಂಧಗಳಿಂದ ತಾತ್ಕಾಲಿಕ ವಿನಾಯಿತಿ ನೀಡಿದ್ದರಿಂದ ಮುತ್ತಕಿ ಭಾರತಕ್ಕೆ ಬಂದಿದ್ದಾರೆ. ಭದ್ರತಾ ಮಂಡಳಿ ಅ.9 ಮತ್ತು 16ರ ನಡುವೆ ಭಾರತಕ್ಕೆ ಭೇಟಿ

ಅಫಘಾನಿಸ್ತಾನ ವಿದೇಶಾಂಗ ಸಚಿವ ಭಾರತಕ್ಕೆ ಆಗಮನ Read More »

ಮಾರಕ ಕಫ್‌ ಸಿರಪ್‌ಗೆ ಮತ್ತೆ 6 ಮಕ್ಕಳು ಬಲಿ

ಮಧ್ಯಪ್ರದೇಶವೊಂದರಲ್ಲೇ ಒಟ್ಟು 20 ಮಕ್ಕಳನ್ನು ಬಲಿತೆಗೆದುಕೊಂಡ ಕೆಮ್ಮಿನ ಕಷಾಯ ಭೋಪಾಲ್: ಮಧ್ಯಪ್ರದೇಶದಲ್ಲಿ ಮಾರಕ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮತ್ತೆ 6 ಮಕ್ಕಳು ಸಾವನ್ನಪ್ಪಿದ್ದು, ಈ ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ಈ ಮೊದಲು ಮಧ್ಯಪ್ರದೇಶದ ಛಿಂದ್ವಾಡದ 14 ಮಕ್ಕಳು ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ದೃಢಪಡಿಸಿತ್ತು. ಅದಾದ ಬಳಿಕ ಮತ್ತೆ ಮಂಗಳವಾರ ಛಿಂದ್ವಾಡದಲ್ಲಿ 4 ಹಾಗೂ ಬೇತುಲ್‌ನಲ್ಲಿ 2 ಮಕ್ಕಳು ಸಾವನ್ನಪ್ಪಿವೆ. ಇನ್ನೂ 6

ಮಾರಕ ಕಫ್‌ ಸಿರಪ್‌ಗೆ ಮತ್ತೆ 6 ಮಕ್ಕಳು ಬಲಿ Read More »

ಅಧಿಕಾರ ರಾಜಕಾರಣದ ಬೆಳ್ಳಿಹಬ್ಬ ಸಂಭ್ರಮದಲ್ಲಿ ಪ್ರಧಾನಿ ಮೋದಿ

ಮುಖ್ಯಮಂತ್ರಿ, ಪ್ರಧಾನಿಯಾಗಿ ಸತತ 24 ವರ್ಷ ಪೂರೈಕೆ; ಇಷ್ಟರತನಕ ಸೋಲಿಲ್ಲದ ಸರದಾರ ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ರಾಜಕಾರಣದಲ್ಲಿ ಸತತ 24 ವರ್ಷಗಳನ್ನು ಪೂರೈಸಿ 25ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅಧಿಅಕರದ ಪಡಸಾಲೆಯಲ್ಲಿ ಅವರಿಗೆ ಈಗ ಬೆಳ್ಳಿಹಬ್ಬದ ಸಂಭ್ರಮ. 2001ರಲ್ಲಿ ಅ.7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಅಧಿಕಾರ ಗ್ರಹಣದ ಪ್ರಮಾಣ ವಚನ ಸ್ವೀಕರಿಸಿದ್ದರು. ಅಂದಿನಿಂದ ಇಂದಿನವರೆಗೆ ನಿರಂತರವಾಗಿ ಸರ್ಕಾರಗಳ ಅಧಿನಾಯಕರಾಗಿ ಅಧಿಕಾರದಲ್ಲಿದ್ದಾರೆ. 2001ರಿಂದ 2014ರ ಮಧ್ಯಭಾಗದವರೆಗೆ 13 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು. ನಂತರ

ಅಧಿಕಾರ ರಾಜಕಾರಣದ ಬೆಳ್ಳಿಹಬ್ಬ ಸಂಭ್ರಮದಲ್ಲಿ ಪ್ರಧಾನಿ ಮೋದಿ Read More »

ಸಿಜೆಐ ಮೇಲೆ ಶೂ ಎಸೆದ ಕೃತ್ಯ : ಪ್ರಧಾನಿ ಮೋದಿ ತೀವ್ರ ಖಂಡನೆ

ಬಿ.ಆರ್‌. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ ಹಿರಿಯ ವಕೀಲ ನವದೆಹಲಿ: ದೇಶದಲ್ಲೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮೇಲೆ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿದ ಆಘಾತಕಾರಿ ಘಟನೆ ಸೋಮವಾರ ನಡೆದಿದೆ. ಸುಪ್ರೀಂ ಕೋರ್ಟ್ ಆವರಣದಲ್ಲಿರುವ ಕೋರ್ಟ್ ಹಾಲ್ 1ರಲ್ಲಿ ವಿಚಾರಣೆಯ ವೇಳೆ 71 ವರ್ಷದ ವಕೀಲ ಕಿಶೋರ್ ರಾಕೇಶ್ ಎಂಬವರು ಶೂ ಎಸೆಯಲು ಮುಂದಾಗಿದ್ದಾರೆ. ಘಟನೆಗೆ ದೇಶವ್ಯಾಪಿ ಖಂಡನೆ ವ್ಯಕ್ತವಾಗಿದೆ. ಘಟನೆಯ ಬೆನ್ನಲ್ಲೇ ಸಿಜೆಐ ಗವಾಯಿ ಅವರೊಂದಿಗೆ ಪ್ರಧಾನಿ ನರೇಂದ್ರ

ಸಿಜೆಐ ಮೇಲೆ ಶೂ ಎಸೆದ ಕೃತ್ಯ : ಪ್ರಧಾನಿ ಮೋದಿ ತೀವ್ರ ಖಂಡನೆ Read More »

ಧರ್ಮಸ್ಥಳ ಪ್ರಕರಣ : ದಿಢೀರ್‌ ಎಂದು ಪ್ರಸ್ತಾವಕ್ಕೆ ಬಂದ ನಟನ ಸಹೋದರನ ಹೆಸರು

ಸುಜಾತ ಭಟ್‌ ಪ್ರಹಸನದಲ್ಲಿ ಖ್ಯಾತ ಖಳನಟ, ನಿರ್ದೇಶಕನ ಸಹೋದರನ ಹೆಸರು ಪ್ರಸ್ತಾಪ ಧರ್ಮಸ್ಥಳ : ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಪ್ರಕರಣದಲ್ಲಿ ಸುಜಾತಾ ಭಟ್ ಎಂಬ ವೃದ್ಧ ಮಹಿಳೆ ಸೃಷ್ಟಿಸಿದ ಅನನ್ಯ ಭಟ್ ಕಟ್ಟುಕತೆ ಪ್ರಹಸನದಲ್ಲಿ ದಿಢೀರ್‌ ಎಂದು ಖ್ಯಾತ ನಟನೊಬ್ಬನ ಸಹೋದರನ ಹೆಸರು ಪ್ರಸ್ತಾವಕ್ಕೆ ಬಂದಿರುವುದು ಕುತೂಹಲ ಮೂಡಿಸಿದೆ. ದಕ್ಷಿಣ ಭಾರತದ ಖ್ಯಾತ ನಟ, ಖಳನಾಯಕ ಹಾಗೂ ನಿರ್ದೇಶಕನ ಸಹೋದರ ಹೆಸರು ಈಗ ಧರ್ಮಸ್ಥಳ ಪ್ರಕರಣಕ್ಕೆ ತಳಕು ಹಾಕಿಕೊಂಡಿದೆ ಎನ್ನಲಾಗಿದೆ. ಶೀಘ್ರದಲ್ಲೇ ಎಸ್ಐಟಿ ಅವರಿಗೆ ನೋಟಿಸ್ ನೀಡುವ

ಧರ್ಮಸ್ಥಳ ಪ್ರಕರಣ : ದಿಢೀರ್‌ ಎಂದು ಪ್ರಸ್ತಾವಕ್ಕೆ ಬಂದ ನಟನ ಸಹೋದರನ ಹೆಸರು Read More »

ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ : ಕಟಕ್‌ನಲ್ಲಿ ಭುಗಿಲೆದ್ದ ಹಿಂಸಾಚಾರ

13 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ; ಇಂಟರ್‌ನೆಟ್‌ ಸ್ಥಗಿತ ಭುವನೇಶ್ವರ: ಒಡಿಶಾದ ಕಟಕ್ ​​ನಗರದಲ್ಲಿ ದುರ್ಗಾ ಪೂಜೆಯ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಬಳಿಕ ಭಾನುವಾರದಿಂದ 36 ಗಂಟೆಗಳ ಕಾಲ ಕರ್ಫ್ಯೂ ವಿಧಿಸಲಾಗಿದೆ. ಭಾನುವಾರ ರಾತ್ರಿ 10 ಗಂಟೆಯಿಂದ 13 ಪೊಲೀಸ್ ಠಾಣೆ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಸಂಜೆ 7 ಗಂಟೆಯಿಂದ ಇಂಟರ್ನೆಟ್ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ಸಿಎಂಸಿ, ಸಿಡಿಎ ಮತ್ತು ಬಯಾಲಿಶ್ ಮೌಜಾ ಪ್ರದೇಶಗಳಲ್ಲಿ ನಿರ್ಬಂಧಗಳು ಜಾರಿಯಲ್ಲಿವೆ. ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಮೋಹನ್

ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ : ಕಟಕ್‌ನಲ್ಲಿ ಭುಗಿಲೆದ್ದ ಹಿಂಸಾಚಾರ Read More »

ಅಕ್ರಮವಾಗಿ ನಿರ್ಮಿಸಿದ್ದ ಮಸೀದಿ ಮುಸ್ಲಿಮರಿಂದಲೇ ನೆಲಸಮ

ಜೆಸಿಬಿ ತಂದು ಕೆಡವಿ ಹಾಕಿದ ಮುಸ್ಲಿಮರು ಲಖನೌ: ಉತ್ತರ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮಸೀದಿಯನ್ನು ಮುಸ್ಲಿಮರೇ ಜೆಸಿಬಿ ತಂದು ಕೆಡವಿ ಹಾಕಿದ್ದಾರೆ. ಸಂಭಾಲ್‌ ಜಿಲ್ಲೆಯ ಅಸ್ಮೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಯಾ ಬುಜುರ್ಗ್ ಗ್ರಾಮದಲ್ಲಿ ಮುಸ್ಲಿಮರು ಭಾನುವಾರ ಗೌಸುಲ್ಬರಾ ಮಸೀದಿಯನ್ನು ನೆಲಸಮ ಮಾಡಿದ್ದಾರೆ. ಅನಧಿಕೃತವಾಗಿ ನಿರ್ಮಾಣಗೊಂಡಿದ್ದ ಮಸೀದಿಯನ್ನು ತೆಗೆಯುವಂತೆ ಜಿಲ್ಲಾಡಳಿತ 4 ದಿನಗಳ ಡೆಡ್‌ಲೈನ್‌ ನೀಡಿತ್ತು. ಈ ಗಡುವು ಮುಗಿಯುತ್ತಿದ್ದಂತೆ ಮುಸ್ಲಿಮರೇ ಮಸೀದಿಯನ್ನು ಕೆಡವಿದ್ದಾರೆ. ಗೌಸುಲ್ಬರಾ ಮಸೀದಿಯನ್ನು ಕೆಡವಲು ಜಿಲ್ಲಾಡಳಿತ ಮುಂದಾಗಿತ್ತು. ಆದರೆ ಮಸೀದಿ ಸಮಿತಿಯ ಸದಸ್ಯರು

ಅಕ್ರಮವಾಗಿ ನಿರ್ಮಿಸಿದ್ದ ಮಸೀದಿ ಮುಸ್ಲಿಮರಿಂದಲೇ ನೆಲಸಮ Read More »

ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ : 6 ರೋಗಿಗಳು ಜೀವಂತ ದಹನ

ಶಾರ್ಟ್​ ಸರ್ಕ್ಯೂಟ್​ನಿಂದ ಟ್ರಾಮಾ ಸೆಂಟರ್‌ನಲ್ಲಿ ಸಂಭವಿಸಿದ ದುರಂತ ಜೈಪುರ: ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ 6 ರೋಗಿಗಳು ಸಜೀವ ದಹನವಾಗಿರುವ ಘಟನೆ ನಡೆದಿದೆ. ಶಾರ್ಟ್​ ಸರ್ಕ್ಯೂಟ್​ನಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಹಲವಾರು ಗಂಭೀರ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಸ್ಥಳದಲ್ಲಿದ್ದ ವೈದ್ಯರು, ದಾದಿಯರು ಮತ್ತು ಅಗ್ನಿಶಾಮಕ ದಳದ ತಂಡವು ಅಪಾರ ಪ್ರಯತ್ನದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಸರ್ಕಾರಿ ಸ್ವಾಮ್ಯದ ಸವಾಯಿ ಮಾನ್‌ ಸಿಂಗ್ ಆಸ್ಪತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಟೋರೇಜ್ ಪ್ರದೇಶದಲ್ಲಿ

ಆಸ್ಪತ್ರೆಯಲ್ಲಿ ಭೀಕರ ಬೆಂಕಿ ಅವಘಡ : 6 ರೋಗಿಗಳು ಜೀವಂತ ದಹನ Read More »

error: Content is protected !!
Scroll to Top