ದೇಶ

ವರ್ಷದ ಮೊದಲ ಗೆಲುವಿನೊಂದಿಗೆ ಟೀಮ್‌ ಇಂಡಿಯಾ ಶುಭಾರಂಭ

7 ರನ್‌ಗಳಿಂದ ಶತಕ ಮಿಸ್‌ ಮಾಡಿಕೊಂಡ ಕೊಹ್ಲಿ ವಡೋದರ: ವರ್ಷದ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಭಾರತ ಶುಭಾರಂಭ ಮಾಡಿದೆ. ವಡೋದರದ ಬಿಸಿಎ ಮೈದಾನದಲ್ಲಿ ನಿನ್ನೆ ನಡೆದ ಪ್ರಥಮ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಟೀಂ ಇಂಡಿಯಾ 4 ವಿಕೆಟ್‌ಗಳ ಜಯ ಸಾಧಿಸಿದೆ. ಆ ಮೂಲಕ 3 ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಸುಮಾರು 15 ವರ್ಷಗಳ ನಂತರ ವಡೋದರದಲ್ಲಿ ಏಕದಿನ ಪಂದ್ಯವನ್ನಾಡಿದ ಟೀಮ್ ಇಂಡಿಯಾ ಮತ್ತೊಮ್ಮೆ ವಿರಾಟ್ ಕೊಹ್ಲಿ ಅವರ ಅದ್ಭುತ […]

ವರ್ಷದ ಮೊದಲ ಗೆಲುವಿನೊಂದಿಗೆ ಟೀಮ್‌ ಇಂಡಿಯಾ ಶುಭಾರಂಭ Read More »

ಸೋಮನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮೋದಿ

ಸೋಮನಾಥ ಸ್ವಾಭಿಮಾನ ಪರ್ವದಲ್ಲಿ ಪ್ರಧಾನಿ ಭಾಗಿ ಗಾಂಧಿನಗರ: ಮೂರು ದಿನಗಳ ಕಾಲ ತವರು ರಾಜ್ಯ ಗುಜರಾತ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಸೋಮನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇಶದ ಒಳಿತಿಗಾಗಿ ಪ್ರಾರ್ಥನೆ ಮಾಡಿದ್ದಾರೆ. ಜ್ಯೋತಿರ್ಲಿಂಗಗಳಲ್ಲಿ ಒಂದಾದ ಗುಜರಾತ್‌ನ ಶ್ರೀ ಸೋಮನಾಥ ದೇವಾಲಯದ ಮೇಲೆ 1026ರ ಜನವರಿಯಲ್ಲಿ ಮಹಮ್ಮದ್‌ ಘಜ್ನಿ ಮೊದಲ ಬಾರಿಗೆ ದಾಳಿ ನಡೆಸಿ ಜ.10ಕ್ಕೆ (ನಿನ್ನೆ) 1,000 ವರ್ಷಗಳು ಕಳೆದಿವೆ. 1 ಸಾವಿರ ವರ್ಷಗಳ ನಂತರವೂ ಈ ದೇವಾಲಯ ಇಂದಿಗೂ ವೈಭವದಿಂದ ಕಂಗೊಳಿಸುತ್ತಿದೆ.

ಸೋಮನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮೋದಿ Read More »

ವೃದ್ಧ ವೈದ್ಯ ದಂಪತಿಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 15 ಕೋಟಿ ರೂ. ಲಪಟಾಯಿಸಿದ ಸೈಬರ್‌ ವಂಚಕರು

ಅಮೆರಿಕದಲ್ಲಿ ದುಡಿದು ಗಳೆಸಿದ್ದೆಲ್ಲವನ್ನು ಎರಡು ವಾರದಲ್ಲಿ ಕಳೆದುಕೊಂಡ ವೈದ್ಯ ದಂಪತಿ ನವದೆಹಲಿ : ಅನಿವಾಸಿ ಭಾರತೀಯ ವೃದ್ಧ ದಂಪತಿಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ ಸುಮಾರು 15 ಕೋ. ರೂ. ಲಪಟಾಯಿಸಿದ ಪ್ರಕರಣ ದೆಹಲಿಯಲ್ಲಿ ಬೆಳಕಿಗೆ ಬಂದಿದೆ. ನಾಲ್ಕು ದಶಕಕ್ಕೂ ಹೆಚ್ಚು ಕಾಲ ಅಮೆರಿಕದಲ್ಲಿ ವೈದ್ಯರಾಗಿ ದುಡಿದು ಗಳಿಸಿದ್ದನ್ನೆಲ್ಲ ಈ ವೃದ್ಧ ವೈದ್ಯರು ಬರೀ ಎರಡು ವಾರದಲ್ಲಿ ಕಳೆದುಕೊಂಡಿದ್ದಾರೆ. ಡಾ.ಓಂ ತನೇಜಾ ಮತ್ತು ಡಾ.ಇಂದಿರಾ ತನೇಜಾ ಅವರನ್ನು ಸೈಬರ್‌ ವಂಚಕರು ಎರಡು ವಾರಕ್ಕೂ ಅಧಿಕ ಕಾಲ ಬೆದರಿಸಿ ಡಿಜಿಟಲ್‌

ವೃದ್ಧ ವೈದ್ಯ ದಂಪತಿಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 15 ಕೋಟಿ ರೂ. ಲಪಟಾಯಿಸಿದ ಸೈಬರ್‌ ವಂಚಕರು Read More »

ಉತ್ತರ ಭಾರತ ಚಳಿಗೆ ಗಢಗಢ : 1.1 ಡಿಗ್ರಿ ಸೆಲ್ಸಿಯಸ್‌ಗೆ ಕುಸಿತದ ತಾಪಮಾನ

ರಸ್ತೆ ಗೋಚರಿಸದೆ ಹಲವೆಡೆ ಸರಣಿ ಅಪಘಾತ ನವದೆಹಲಿ: ಉತ್ತರ ಭಾರತದಲ್ಲಿ ಶೀತ ವಾತಾವರಣ ತೀವ್ರಗೊಂಡಿದೆ. ದಟ್ಟಮಂಜಿನಿಂದ ರಸ್ತೆಗಳೇ ಕಾಣದಂತೆ ಆಗಿದೆ. ಕಡಿಮೆ ಗೋಚರತೆಯಿಂದಾಗಿ ಅಲ್ಲಲ್ಲಿ ಅಪಘಾತ ನಾಲ್ವರು ಸಾವನ್ನಪ್ಪಿದ್ದು, ಸುಮಾರು 30 ಮಂದಿ ಗಾಯಗೊಂಡಿದ್ದಾರೆ. ಪಂಜಾಬ್ ಮತ್ತು ಹರ್ಯಾಣದಲ್ಲಿ ಅಕ್ಕಪಕ್ಕದಲ್ಲಿರುವವರೂ ಕಾಣದಷ್ಟು ದಟ್ಟ ಮಂಜು ಆವರಿಸುತ್ತಿದೆ. ಭಾನುವಾರ, ಸೋಮವಾರ ಉತ್ತರ ಭಾರತದಲ್ಲಿ ಶೀತಗಾಳಿ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲ ದಿನಗಳಿಂದ ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಶೂನ್ಯಕ್ಕಿಂತಲೂ ಕಡಿಮೆ ತಾಪಮಾನ

ಉತ್ತರ ಭಾರತ ಚಳಿಗೆ ಗಢಗಢ : 1.1 ಡಿಗ್ರಿ ಸೆಲ್ಸಿಯಸ್‌ಗೆ ಕುಸಿತದ ತಾಪಮಾನ Read More »

ಅಯೋಧ್ಯೆ ರಾಮ ಮಂದಿರದ 15 ಕಿ.ಮೀ. ಸುತ್ತಮುತ್ತ ಮಾಂಸಾಹಾರ ನಿಷೇಧ

ಆನ್‌ಲೈನ್‌ನಲ್ಲೂ ಮಾಂಸಾಹಾರ, ಮದ್ಯ ತರಿಸಿಕೊಳ್ಳಲು ಅವಕಾಶವಿಲ್ಲ ಲಖನೌ: ಅಯೋಧ್ಯೆಯ ರಾಮ ಮಂದಿರದ 15 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ಪದಾರ್ಥಗಳ ವಿತರಣೆಯನ್ನ ನಿಷೇಧಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಮಾಂಸಾಹಾರ ಪದಾರ್ಥಗಳನ್ನ ಪೂರೈಕೆ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ʻಪಂಚಕೋಶ ಪರಿಕ್ರಮʼದ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ. ಅಯೋಧ್ಯೆಯ ಕೆಲವು ಹೋಟೆಲ್‌ಗಳು ಮತ್ತು ಹೋಂ ಸ್ಟೇಗಳು ಅತಿಥಿಗಳಿಗೆ ಮಾಂಸಾಹಾರ ಮತ್ತು ಮದ್ಯ ಪೂರೈಕೆ ಮಾಡುತ್ತಿವೆ ಎನ್ನುವ ಆರೋಪ ಕೇಳಿಬಂದಿದೆ. ಅಂತಹ ಚಟುವಟಿಕೆಗಳಿಂದ ದೂರ ಇರುವಂತೆ ಅಧಿಕಾರಿಗಳು

ಅಯೋಧ್ಯೆ ರಾಮ ಮಂದಿರದ 15 ಕಿ.ಮೀ. ಸುತ್ತಮುತ್ತ ಮಾಂಸಾಹಾರ ನಿಷೇಧ Read More »

ಈ ಸಲ ಭಾನುವಾರ ಕೇಂದ್ರ ಬಜೆಟ್‌ ಮಂಡನೆ

ಜನವರಿ 28ರಿಂದ ಸಂಸತ್ತಿನ ಬಜೆಟ್‌ ಅಧಿವೇಶನ ಪ್ರಾರಂಭ ನವದೆಹಲಿ: ಕೇಂದ್ರ ಬಜೆಟನ್ನು ಫೆ.1ರಿಂದ ಮಂಡಿಸುವುದು ಕಳೆದ ಕೆಲವು ವರ್ಷಗಳಿಂದ ಪಾಲಿಸಿಕೊಂಡು ಬಂದ ವಾಡಿಕೆ. ಆದರೆ ಈ ಸಲ ಫೆ.1 ಭಾನುವಾರ ಬರಲಿದೆ. ಹೀಗಾಗಿ ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾನುವಾರ ಬಜೆಟ್‌ ಮಂಡನೆಯಾಗಲಿದೆ. 2025-26ನೇ ಸಾಲಿನ ಬಜೆಟನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಫೆಬ್ರವರಿ 1ರ ಭಾನುವಾರದಂದೇ ಸಂಸತ್ತಿನಲ್ಲಿ ಮಂಡಿಸಲಿದ್ದಾರೆ. ಬಜೆಟ್ ದಾಖಲೆಯ ಪೂರ್ವಗಾಮಿಯಾಗಿರುವ ಆರ್ಥಿಕ ಸಮೀಕ್ಷೆಯನ್ನು ಜನವರಿ 29ರಂದು ಮುಖ್ಯ ಆರ್ಥಿಕ ಸಲಹೆಗಾರ ವಿ

ಈ ಸಲ ಭಾನುವಾರ ಕೇಂದ್ರ ಬಜೆಟ್‌ ಮಂಡನೆ Read More »

ಶಬರಿಮಲೆ ದೇಗುಲದ ಚಿನ್ನ ಕಳ್ಳತನ ಪ್ರಕರಣ : ಮುಖ್ಯ ಅರ್ಚಕ ಬಂಧನ

ಭಾರಿ ಪ್ರಮಾಣದ ಚಿನ್ನ ಕಳ್ಳತನವಾಗಿರುವ ಶಂಕೆ ತಿರುವನಂತಪುರಂ: ಶಬರಿಮಲೆ ದೇಗುಲದ ಚಿನ್ನ ಕಳ್ಳತನ ಪ್ರಕರಣದ ಮಹತ್ವದ ಬೆಳವಣಿಯಲ್ಲಿ ಎಸ್‌ಐಟಿ ಅಧಿಕಾರಿಗಳು ದೇಗುಲದ ಪ್ರಧಾನ ಅರ್ಚಕನನ್ನು ಅರೆಸ್ಟ್ ಮಾಡಿದ್ದಾರೆ. ಕಂಡರಾರು ರಾಜೀವ್ ಬಂಧಿತ ಆರೋಪಿಯಾಗಿದ್ದು, ದೇಗುಲದ ಪ್ರಧಾನ ಅರ್ಚಕನಾಗಿ ಕೆಲಸ ಮಾಡುತ್ತಿದ್ದರು. ಚಿನ್ನ ಕಳ್ಳತನದ ಹಿಂದೆ ದೊಡ್ಡ ಸಂಚು ಮತ್ತು ಮಧ್ಯವರ್ತಿಗಳ ಲಿಂಕ್ ಇರುವ ಬಗ್ಗೆ ಎಸ್‌ಐಟಿ ಶಂಕೆ ವ್ಯಕ್ತಪಡಿಸಿದೆ. ಕಂಡರಾರು ರಾಜೀವ್, ತಂತ್ರಿ ಉಣ್ಣಿಕೃಷ್ಣನ್ ಪೊಟ್ಟಿಯವರೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ ಎನ್ನಲಾಗಿದೆ. ದೇವಸ್ಥಾನದ ಫಲಕಗಳಿಗೆ ಚಿನ್ನ ಲೇಪಿಸುವ

ಶಬರಿಮಲೆ ದೇಗುಲದ ಚಿನ್ನ ಕಳ್ಳತನ ಪ್ರಕರಣ : ಮುಖ್ಯ ಅರ್ಚಕ ಬಂಧನ Read More »

ಬುರ್ಖಾ, ಹಿಜಾಬ್‌ ಧರಿಸಿದವರಿಗೆ ಚಿನ್ನದಂಗಡಿಗಳಿಗೆ ಪ್ರವೇಶವಿಲ್ಲ!

ಚಿನ್ನ ಖರೀದಿಸಬೇಕಾದರೆ ಮುಖ ತೋರಿಸಲೇಬೇಕೆಂಬ ನಿಯಮ ಜಾರಿ ಪಾಟ್ನಾ: ಬಿಹಾರದಾದ್ಯಂತ ಆಭರಣದ ಅಂಗಡಿಗಳಲ್ಲಿ ಹಿಜಾಬ್, ನಿಖಾಬ್, ಬುರ್ಖಾ, ಮಾಸ್ಕ್, ಹೆಲ್ಮೆಟ್ ಧರಿಸಿದ ಗ್ರಾಹಕರಿಗೆ ಪ್ರವೇಶವಿಲ್ಲ ಎಂದು ನೋಟಿಸ್ ಹಾಕಲಾಗಿದೆ. ಹಾಗೆಂದು ಇದು ಯಾವುದೇ ಧಾರ್ಮಿಕ ದ್ವೇಷದ ಕ್ರಮವಲ್ಲ. ಮುಖ ಸಂಪೂರ್ಣವಾಗಿ ಅಥವಾ ಭಾಗಶಃ ಮುಚ್ಚಿರುವ ಗ್ರಾಹಕರಿಗೆ ಪ್ರವೇಶ ನಿರಾಕರಿಸುವ ತೀರ್ಮಾನವನ್ನು ಅಲ್ಲಿನ ಆಭರಣ ವ್ಯಾಪಾರಿಗಳು ಕೈಗೊಂಡಿದ್ದಾರೆ. ಆಭರಣ ಅಂಗಡಿಗಳಲ್ಲಿ ಕಳ್ಳತನ ಮತ್ತು ದರೋಡೆ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯ ದೃಷ್ಠಿಯಿಂದ ಅಖಿಲ ಭಾರತ ಜುವೆಲ್ಲರ್ಸ್ ಮತ್ತು ಗೋಲ್ಡ್

ಬುರ್ಖಾ, ಹಿಜಾಬ್‌ ಧರಿಸಿದವರಿಗೆ ಚಿನ್ನದಂಗಡಿಗಳಿಗೆ ಪ್ರವೇಶವಿಲ್ಲ! Read More »

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ: ಆತಂಕ ವ್ಯಕ್ತಪಡಿಸಿ ಪ್ರಧಾನಿ ಮೋದಿ ಅವರಿಗೆ ಪೇಜಾವರ ಶ್ರೀ ಪತ್ರ

ಉಡುಪಿ: ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಅಮಾನವೀಯ ಕೃತ್ಯದ ಬಗ್ಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಅವರು ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಪತ್ರದಲ್ಲಿ ಹಿಂದೂ ಸಮಾಜವು ಯಾವಾಗಲೂ ಶಾಂತಿ ಮತ್ತು ಸಹಬಾಳ್ವೆಯ ತತ್ವಗಳನ್ನು ಪಾಲಿಸುತ್ತಾ ಬಂದಿದೆ. ಯಾರ ಮೇಲೆಯೂ ಹಿಂಸೆಯನ್ನು ಅಸ್ತ್ರವಾಗಿ ಬಳಸಿ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ: ಆತಂಕ ವ್ಯಕ್ತಪಡಿಸಿ ಪ್ರಧಾನಿ ಮೋದಿ ಅವರಿಗೆ ಪೇಜಾವರ ಶ್ರೀ ಪತ್ರ Read More »

ರೈಲ್ವೆ ಟಿಕೆಟ್‌ ಆನ್‌ಲೈನ್‌ ಬುಕ್ಕಿಂಗ್‌ ಮಾಡಲು ಆಧಾರ್‌ ಲಿಂಕಿಂಗ್‌ ಕಡ್ಡಾಯ

ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಟಿಕೆಟ್ ಬುಕ್ ಅವಧಿ ವಿಸ್ತರಣೆ ನವದೆಹಲಿ : ರೈಲ್ವೆ ಇಲಾಖೆ ಆನ್‌ಲೈನ್ ರೈಲು ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಹೊಸ ನಿಯಮ ಜಾರಿಗೊಳಿಸಿದೆ. ಇನ್ನುಮುಂದೆ IRCTC ವೆಬ್‌ಸೈಟ್ ಅಥವಾ ಇತರ ಆ್ಯಪ್‌ಗಳ ಮೂಲಕ ಟಿಕೆಟ್ ಬುಕ್ ಮಾಡುವ ಪ್ರಯಾಣಿಕರು ತಮ್ಮ ಖಾತೆಯನ್ನು ಆಧಾರ್‌ಗೆ ಲಿಂಕ್ ಮಾಡಿರುವುದು ಕಡ್ಡಾಯವಾಗಿದೆ. ಆಧಾರ್ ಲಿಂಕ್ ಮಾಡದಿದ್ದರೆ ಆನ್‌ಲೈನ್ ಮೂಲಕ ಟಿಕೆಟ್ ಬುಕ್ ಮಾಡಲು ಸಾಧ್ಯವಾಗುವುದಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಆನ್‌ಲೈನ್ ಬುಕ್ಕಿಂಗ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸುವುದು

ರೈಲ್ವೆ ಟಿಕೆಟ್‌ ಆನ್‌ಲೈನ್‌ ಬುಕ್ಕಿಂಗ್‌ ಮಾಡಲು ಆಧಾರ್‌ ಲಿಂಕಿಂಗ್‌ ಕಡ್ಡಾಯ Read More »

error: Content is protected !!
Scroll to Top