ದೇಶ

ಮೊಬೈಲ್‌ಗಳಲ್ಲಿ ಸಂಚಾರ್‌ ಸಾಥಿ ಆ್ಯಪ್ ಕಡ್ಡಾಯ

ಮೊಬೈಲ್‌ ಕಳ್ಳತನವಾದರೆ, ಕಳೆದುಹೋದರೆ ಪತ್ತೆಹಚ್ಚಲು ನೆರವಾಗುವ ಆ್ಯಪ್ ನವದೆಹಲಿ: ಭಾರತದಲ್ಲಿ ಮಾರಾಟವಾಗುವ ಎಲ್ಲ ಹೊಸ ಮೊಬೈಲ್ ಫೋನ್‌ಗಳಲ್ಲಿ ಸಂಚಾರ್ ಸಾಥಿ ಅಪ್ಲಿಕೇಶನ್‌ಗಳನ್ನು ಕಡ್ಡಾಯವಾಗಿ ಇನ್‌ಸ್ಟಾಲ್‌ ಮಾಡಬೇಕೆಂದು ದೂರಸಂಪರ್ಕ ಇಲಾಖೆ ಮೊಬೈಲ್‌ ಹ್ಯಾಂಡ್‌ಸೆಟ್‌ ತಯಾರಕರಿಗೆ ಸೂಚಿಸಿದೆ. ಆ್ಯಪ್ ಇನ್‌ಸ್ಟಾಲ್ ಮಾಡಲು 90 ದಿನಗಳ ಗಡುವು ನೀಡಲಾಗಿದ್ದು ಅದನ್ನು ಅನ್‌ ಇನ್‌ಸ್ಟಾಲ್ ಮಾಡುವ ಆಯ್ಕೆ ನೀಡಬಾರದು. ಈಗಾಗಲೇ ಬಳಕೆಯಲ್ಲಿರುವ ಮೊಬೈಲ್‌ಗಳಿಗೆ ಸಾಫ್ಟ್‌ವೇರ್ ಅಪ್‌ಡೇಟ್‌ ನೀಡುವಾಗ ಈ ಆ್ಯಪ್ ಲಭ್ಯವಾಗುವಂತೆ ಮಾಡಬೇಕು ಎಂದು ಸೂಚಿಸಿದೆ. ಕೇಂದ್ರ ಸರ್ಕಾರ ಈ ಆದೇಶವನ್ನು ಸ್ಮಾರ್ಟ್‌ಫೋನ್ […]

ಮೊಬೈಲ್‌ಗಳಲ್ಲಿ ಸಂಚಾರ್‌ ಸಾಥಿ ಆ್ಯಪ್ ಕಡ್ಡಾಯ Read More »

ವಿದೇಶಗಳಿಂದ ಅಡಿಕೆ ಆಮದು ನಿಯಂತ್ರಿಸಲು ಕ್ಯಾ. ಬ್ರಿಜೇಶ್‌ ಚೌಟ ಆಗ್ರಹ

ಸಂಸತ್‌ ಅಧಿವೇಶನದಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತು ಗಮನ ಸೆಳೆದ ಸಂಸದ ಮಂಗಳೂರು : ಭೂತಾನ್, ಮಯನ್ಮಾರ್ ಮತ್ತು ಶ್ರೀಲಂಕಾದಂತಹ ದೇಶಗಳಿಂದ ಭಾರತಕ್ಕೆ ದೊಡ್ಡ ಪ್ರಮಾಣದಲ್ಲಿ ಅಡಿಕೆ ಆಮದು ಆಗುತ್ತಿರುವುದರಿಂದ ನಮ್ಮ ಬೆಳೆಗಾರರಿಗೆ ಎದುರಾಗಿರುವ ಗಂಭೀರ ಪರಿಣಾಮಗಳ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಸಂಸತ್‌ ಅಧಿವೇಶನದಲ್ಲಿ ಮಾತನಾಡಿದ್ದಾರೆ. ಲೋಕಸಭೆಯಲ್ಲಿ ಈ ತುರ್ತು ವಿಚಾರವನ್ನು ಪ್ರಸ್ತಾಪಿಸಿದ ಸಂಸದ ಕ್ಯಾ.ಚೌಟ ಅವರು ನೆರೆಯ ಸಣ್ಣ ದೇಶಗಳಿಂದ ಸುಂಕ ಮುಕ್ತ ಅಡಿಕೆ ಆಮದು ನೀತಿಯಿಂದಾಗಿ ಕರ್ನಾಟಕ ಸೇರಿ ನಮ್ಮ

ವಿದೇಶಗಳಿಂದ ಅಡಿಕೆ ಆಮದು ನಿಯಂತ್ರಿಸಲು ಕ್ಯಾ. ಬ್ರಿಜೇಶ್‌ ಚೌಟ ಆಗ್ರಹ Read More »

ಅಡುಗೆ ಗ್ಯಾಸ್‌ ಬೆಲೆ ತುಸು ಇಳಿಕೆ

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಪ್ರಸ್ತುತ ಕಡಿಮೆಯಾದ ಪರಿಣಾಮವಾಗಿ ಅದರ ಉಪಉತ್ಪನ್ನವಾದ ದ್ರವೀಕೃತ ಪೆಟ್ರೋಲಿಯಂ ಅನಿಲದ (ಎಲ್‌ಪಿಜಿ) ಬೆಲೆ ಸಹ ಕಡಿಮೆಯಾಗುತ್ತಿವೆ. ಹೀಗಾಗಿ ಭಾರತದ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ ಬೆಲೆಯನ್ನು ತುಸು ಕಡಿಮೆ ಮಾಡಿವೆ. 19 ಕೆಜಿ ವಾಣಿಜ್ಯ ಸಿಲಿಂಡರ್‌ ಬೆಲೆ 10 ರೂಪಾಯಿಗಳಷ್ಟು ಕಡಿಮೆ ಆಗಿದೆ. ಹೊಸ ಬೆಲೆ ಡಿಸೆಂಬರ್ 1ರಿಂದಲೇ ಜಾರಿಗೆ ಬಂದಿದೆ. ಒಂದು ತಿಂಗಳ ಹಿಂದೆ, ಬೆಲೆಯನ್ನು 5 ರೂಪಾಯಿಗಳಷ್ಟು ಕಡಿಮೆ ಮಾಡಲಾಗಿತ್ತು. ಸರ್ಕಾರಿ

ಅಡುಗೆ ಗ್ಯಾಸ್‌ ಬೆಲೆ ತುಸು ಇಳಿಕೆ Read More »

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ : ಎಸ್‌ಐಆರ್‌ ಬಿರುಗಾಳಿ ಎಬ್ಬಿಸುವ ನಿರೀಕ್ಷೆ

10 ಮಸೂದೆ ಮಂಡನೆಗೆ ಸರ್ಕಾರ ಸಜ್ಜು; ವಿಪಕ್ಷದ ಬತ್ತಳಿಕೆಯಲ್ಲಿದೆ ಹಲವು ಅಸ್ತ್ರ ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಮತದಾರರ ಪಟ್ಟಿಗೆ ವಿಶೇಷ ತಿದ್ದುಪಡಿಗಳನ್ನು ಸೂಚಿಸುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವಿಚಾರದಲ್ಲಿ ಸರ್ಕಾರವನ್ನು ಸಿಲುಕಿಸಲು ವಿರೋಧ ಪಕ್ಷಗಳು ಸಂಪೂರ್ಣವಾಗಿ ಸಿದ್ಧವಾಗಿವೆ. ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಎಸ್​ಐಆರ್ ಕುರಿತು ಚರ್ಚಿಸದಿದ್ದರೆ ಅಧಿವೇಶನ ನಡೆಸಲು ಅವಕಾಶ ನೀಡುವುದಿಲ್ಲ ಎಂದು ವಿರೋಧ ಪಕ್ಷಗಳು ಹೇಳಿವೆ. ಈ ವಿಷಯದ ಬಗ್ಗೆ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ವರ್ತಿಸುತ್ತಿರುವಂತೆ ಮೇಲ್ನೋಟಕ್ಕೆ

ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ : ಎಸ್‌ಐಆರ್‌ ಬಿರುಗಾಳಿ ಎಬ್ಬಿಸುವ ನಿರೀಕ್ಷೆ Read More »

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ ದಾಖಲು

ನ್ಯಾಷನಲ್‌ ಹೆರಾಲ್ಡ್‌ನ 2 ಸಾವಿರ ಕೋ. ರೂ. ಆಸ್ತಿ ಕಬಳಿಸಿದ ಪ್ರಕರಣ ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ ದಾಖಲಿಸಲಾಗಿದೆ. ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಹೊಸ ಎಫ್‌ಐಆರ್ ದಾಖಲಿಸಿದೆ. ಸೋನಿಯಾ, ರಾಹುಲ್‌ ಜೊತೆಗೆ ಇತರ

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ ದಾಖಲು Read More »

ಇಂದು ರಾಂಚಿಯಲ್ಲಿ ಭಾರತ-ದಕ್ಷಿಣ ಆಫ್ರಿಕಾ ಮೊದಲ ಏಕದಿನ ಪಂದ್ಯ

ಟೆಸ್ಟ್‌ ಸೋಲಿನ ಸೇಡನ್ನು ಏಕದಿನದಲ್ಲಿ ತೀರಿಸುವ ತವಕದಲ್ಲಿ ಇಂಡಿಯಾ ಟೀಮ್‌ ರಾಂಚಿ : ದಕ್ಷಿಣ ಆಫ್ರಿಕ ಜೊತೆಗಿನ ಟೆಸ್ಟ್‌ ಸರಣಿಯಲ್ಲಿ 2-0 ಅಂತರದಿಂದ ಸೋತು ಸುಣ್ಣವಾಗಿರುವ ಭಾರತ ಇಂದಿನಿಂದ ಏಕದಿನ ಸರಣಿಯನ್ನು ಆಡಲಿದೆ. ಭಾನುವಾರದಿಂದ ಶುರುವಾಗಲಿರುವ ಈ ಸರಣಿಯ ಮೊದಲ ಪಂದ್ಯಕ್ಕೆ ರಾಂಚಿಯ ಜೆಎಸ್​ಸಿಎ ಸ್ಟೇಡಿಯಂ ಆತಿಥ್ಯ ವಹಿಸಲಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಏಕದಿನ ಸರಣಿಯು ಮಧ್ಯಾಹ್ನ 2 ಗಂಟೆಯಿಂದ ಶುರುವಾಗಲಿದೆ. ಇದಕ್ಕೂ ಮುನ್ನ 1.30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಟೆಸ್ಟ್‌ ಸೋಲಿನ ಸೇಡನ್ನು

ಇಂದು ರಾಂಚಿಯಲ್ಲಿ ಭಾರತ-ದಕ್ಷಿಣ ಆಫ್ರಿಕಾ ಮೊದಲ ಏಕದಿನ ಪಂದ್ಯ Read More »

ಟೆರರ್‌ ಡಾಕ್ಟರ್‌ ಶಾಹಿನಾ ಕೊಠಡಿಯಲ್ಲಿ ಲಕ್ಷಗಟ್ಟಲೆ ಹಣ ಪತ್ತೆ

ಅಲ್‌-ಫಲಾಹ್‌ ವಿವಿಯ ಕೊಠಡಿಯಲ್ಲೇ ಕಂತೆ ಕಂತೆ ಹಣ ಸಂಗ್ರಹಿಸಿಟ್ಟಿದ್ದ ಶಾಹಿನಾ ನವದೆಹಲಿ: ದೆಹಲಿ ಸ್ಫೋಟದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಅಲ್-ಫಲಾಹ್ ವಿಶ್ವವಿದ್ಯಾಲಯದ ಟೆರರ್‌ ಡಾಕ್ಟರ್‌ ಶಾಹಿನಾ ಸಯೀದ್‌ ಕೊಠಡಿಯಲ್ಲಿ 18 ಲಕ್ಷ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ. ವಿಶ್ವವಿದ್ಯಾಲಯದ ರೂಮ್‌ ನಂಬರ್‌ 22ರಲ್ಲಿ ಶೋಧ ನಡೆಸಿದಾಗ ಪ್ಲಾಸ್ಟಿಕ್‌ ಕವರ್‌ನಲ್ಲಿ ಸುತ್ತಿ ಇಟ್ಟಿದ್ದ ಹಣ ಪತ್ತೆಯಾಗಿದೆ. ಶಾಹಿನಾಗೆ ಈ ಪ್ರಮಾಣದ ಹಣ ಎಲ್ಲಿಂದ ಸಿಕ್ಕಿದೆ ಎಂದು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ನವೆಂಬರ್ 10ರಂದು

ಟೆರರ್‌ ಡಾಕ್ಟರ್‌ ಶಾಹಿನಾ ಕೊಠಡಿಯಲ್ಲಿ ಲಕ್ಷಗಟ್ಟಲೆ ಹಣ ಪತ್ತೆ Read More »

ಮೋದಿಗೆ ಭಾರತ ಭಾಗ್ಯವಿದಾತ ಬಿರುದು ಪ್ರದಾನ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಡೆದ ಲಕ್ಷಕಂಠ ಗೀತಾ ಗಾಯನ-ಪಾರಾಯಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪುತ್ತಿಗೆ ಮಠದ ಪರ್ಯಾಯ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ಸಂಸ್ಕೃತದಲ್ಲಿ ಹಾಡಿ ಹೊಗಳಿ ಬಿರುದೊಂದನ್ನು ನೀಡಿದರು. ಸ್ವಾಮೀಜಿಗಳು ವಿಶೇಷವಾಗಿ ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯ ಹಾಗೂ ಧರ್ಮ ರಕ್ಷಣೆಗೆ ಪ್ರಧಾನಿ ಮೋದಿ ನೀಡಿದ ಕೊಡುಗೆಗಳನ್ನು ಮೆಚ್ಚಿ ಪ್ರಶಂಸೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿಗೆ ‘ಭಾರತ ಭಾಗ್ಯವಿದಾತ’ ಎಂಬ ಬಿರುದು ಸಮರ್ಪಣೆ ಮಾಡಲಾಯಿತು. ಜೊತೆಗೆ ರಾಷ್ಟ್ರ ರಕ್ಷಣೆಯ ಕವಚ ಮತ್ತು ಶ್ರೀಕೃಷ್ಣನ

ಮೋದಿಗೆ ಭಾರತ ಭಾಗ್ಯವಿದಾತ ಬಿರುದು ಪ್ರದಾನ Read More »

ಉಡುಪಿ : ನರೇಂದ್ರ ಮೋದಿಯ ರೋಡ್‌ ಶೋ ಆರಂಭ

ವಿಮಾನ ನಿಲ್ದಾಣದಲ್ಲಿ ದಿನೇಶ್‌ ಗುಂಡೂರಾವ್‌ ಸ್ವಾಗತ ಮಂಗಳೂರು : ಉಡುಪಿಯ ಕೃಷ್ಣ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಉಡುಪಿಗೆ ತೆರಳಿದ ಮೋದಿಯ ರೋಡ್‌ ಶೋ ಆರಂಭವಾಗಿದೆ. ಬೆಳಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿದರು. ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್,

ಉಡುಪಿ : ನರೇಂದ್ರ ಮೋದಿಯ ರೋಡ್‌ ಶೋ ಆರಂಭ Read More »

ಮಲ್ಪೆ ಕಡಲ ತೀರದಲ್ಲಿ ಮೋದಿಯ ಸ್ವಾಗತಕ್ಕೆ ಆಕರ್ಷಕ ಮರಳು ಶಿಲ್ಪ ರಚನೆ

ಇಂದು ಕರಾವಳಿ ಪೂರ್ತಿ ಮೋದಿಮಯ ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿ ಹಿನ್ನೆಲೆಯಲ್ಲಿ ಮಲ್ಪೆ ಕಡಲ ತೀರದಲ್ಲಿ ಕಲಾವಿದರು ಮೋದಿ ಸ್ವಾಗತಕ್ಕೆ ವಿಶೇಷ ಆಕರ್ಷಕ ಮರಳಿನ ಕಲಾಕೃತಿ ರಚಿಸಿದ್ದಾರೆ. ಸ್ಯಾಂಡ್ ಥೀಮ್ ಕಲಾವಿದರು ಮರಳು ಶಿಲ್ಪ ರಚಿಸಿದ್ದು, ಕಡೆಗೋಲು ಕೃಷ್ಣನ ಜೊತೆ ಪ್ರಧಾನಿ ನರೇಂದ್ರ ಮೋದಿಯ ಚಿತ್ರ ರಚಿಸಲಾಗಿದೆ. ಮರಳಿನ ಚಿತ್ರಕ್ಕೆ ಬಣ್ಣ ಕೊಡಲಾಗಿದೆ. ಕಲಾವಿದ ಹರೀಶ್ ಸಾಗ ಮತ್ತು ತಂಡದವರು ನಿನ್ನೆ ದಿನವಿಡೀ ಪರಿಶ್ರಮ ಪಟ್ಟು ಇದನ್ನು ಮಾಡಿದ್ದಾರೆ. ಉಡುಪಿ ಶ್ರೀ ಕೃಷ್ಣ ಮಠಕ್ಕೆ

ಮಲ್ಪೆ ಕಡಲ ತೀರದಲ್ಲಿ ಮೋದಿಯ ಸ್ವಾಗತಕ್ಕೆ ಆಕರ್ಷಕ ಮರಳು ಶಿಲ್ಪ ರಚನೆ Read More »

error: Content is protected !!
Scroll to Top