ದೇಶ

ರಾಷ್ಟ್ರೀಯ ಪ್ರಜ್ಞೆಯ ಸದ್ಗುಣಶೀಲ ಅವತಾರ : ಆರ್‌ಎಸ್‌ಎಸ್‌ನ್ನು ಬಣ್ಣಿಸಿದ ಪ್ರಧಾನಿ

ಭಾರತ ಮಾತೆಯ ಚಿತ್ರವುಳ್ಳ ನಾಣ್ಯ ಇತಿಹಾಸಲ್ಲೇ ಮೊದಲು ನವದೆಹಲಿ : ರಾಷ್ಟ್ರೀಯ ಸ್ವಯಂಸೇವಕ ಸಂಘ ಶತಮಾನೋತ್ಸವ ಸಂಭ್ರಮದಲ್ಲಿದೆ. ಸಂಘಟನೆಯನ್ನು ಭಾರತದ ಪ್ರತಿಯೊಂದು ಅಂಶದ ಮೇಲೆ ಪ್ರಭಾವ ಬೀರಿದ ಶಾಶ್ವತ ರಾಷ್ಟ್ರೀಯ ಪ್ರಜ್ಞೆಯ ಸದ್ಗುಣಶೀಲ ಅವತಾರ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ಇದೇ ವೇಳೆ ಆರ್‌ಎಸ್‌ಎಸ್‌ ಶತಮಾನೋತ್ಸವ ಸ್ಮರಣಾರ್ಥ ಹೊರತಂದಿರುವ 100 ರೂಪಾಯಿಯ ವಿಶೇಷ ನಾಣ್ಯವನ್ನು ಪ್ರಧಾನಿ ಬಿಡುಗಡೆಗೊಳಿಸಿದರು. ಇದು ಆರ್‌ಎಸ್‌ಎಸ್‌ ಶತಮಾನೋತ್ಸವದ ನಾಣ್ಯ ಎಂದು ಮಾತ್ರವಲ್ಲ ಇನ್ನೂ ಅನೇಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದೇ ಮೊದಲ […]

ರಾಷ್ಟ್ರೀಯ ಪ್ರಜ್ಞೆಯ ಸದ್ಗುಣಶೀಲ ಅವತಾರ : ಆರ್‌ಎಸ್‌ಎಸ್‌ನ್ನು ಬಣ್ಣಿಸಿದ ಪ್ರಧಾನಿ Read More »

ಗಾಂಧೀಜಿ, ಶಾಸ್ತ್ರೀಜಿಗೆ ಮೋದಿ ನಮನ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156ನೇ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್‌ಘಾಟ್‌ಗೆ ತೆರಳಿ ಗಾಂಧಿಗೆ ಗೌರವ ನಮನ ಸಲ್ಲಿಸಿದರು. ನಾಡಹಬ್ಬ ದಸರಾ ಜೊತೆಗೆ ಗಾಂಧಿ ಜಯಂತಿ ಬಂದಿದೆ. ಗಾಂಧಿ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಗಾಂಧಿ ಜಯಂತಿಯು ಪ್ರೀತಿಯ ಬಾಪೂ ಅವರ ಅಸಾಧಾರಣ ಜೀವನಕ್ಕೆ ಗೌರವ ಸಲ್ಲಿಸುವ ಬಗ್ಗೆ, ಅವರ ಆದರ್ಶಗಳು ಮಾನವ ಇತಿಹಾಸದ ಹಾದಿಯನ್ನು ಪರಿವರ್ತಿಸಿದವು. ಧೈರ್ಯ ಮತ್ತು ಸರಳತೆ ಹೇಗೆ ದೊಡ್ಡ ಬದಲಾವಣೆಯ ಸಾಧನಗಳಾಗಬಹುದು ಎಂಬುದನ್ನು

ಗಾಂಧೀಜಿ, ಶಾಸ್ತ್ರೀಜಿಗೆ ಮೋದಿ ನಮನ Read More »

ಮದರಸಾಗಳಲ್ಲಿ 500ಕ್ಕೂ ಅಧಿಕ ಹಿಂದೂ ಮಕ್ಕಳ ಮತಾಂತರ ಆರೋಪ

ಸರ್ಕಾರಕ್ಕೆ ರಾಷ್ಟ್ರೀಯ ಮಾನವಾಧಿಕಾರಗಳ ಆಯೋಗದಿಂದ ನೋಟಿಸ್‌ ಭೋಪಾಲ್:‌ ಮಧ್ಯಪ್ರದೇಶದಲ್ಲಿ ಹಿಂದೂ ಮಕ್ಕಳನ್ನು ದೊಡ್ಡ ಪ್ರಮಾಣದಲ್ಲಿ ಮತಾಂತರ ಮಾಡಿದ ಆರೋಪ ಕೇಳಿಬಂದಿದೆ. 27 ಮದರಸಾಗಳಲ್ಲಿ 556 ಹಿಂದೂ ಮಕ್ಕಳ ಬಲವಂತದ ಧಾರ್ಮಿಕ ಮತಾಂತರ ಮಾಡಲಾಗಿದೆಯೆಂದು ದೂರು ನೀಡಲಾಗಿದೆ. ಪ್ರಕರಣ ಸಂಬಂಧ ಮಧ್ಯಪ್ರದೇಶ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಅಯೋಗ (NHRC) ನೋಟಿಸ್ ನೀಡಿ 15 ದಿನಗಳಲ್ಲಿ ಈ ಕುರಿತು ವಿವರವಾದ ಮಾಹಿತಿ ನೀಡುವಂತೆ ಸೂಚಿಸಿದೆ. ರಾಜ್ಯದ ಹಲವಾರು ಮದರಸಾಗಳು ಮುಸ್ಲಿಮೇತರ ಮಕ್ಕಳನ್ನು ಕುರಾನ್ ಅಧ್ಯಯನ ಮಾಡಲು ಒತ್ತಾಯಿಸುತ್ತಿವೆ. ಇಸ್ಲಾಂ

ಮದರಸಾಗಳಲ್ಲಿ 500ಕ್ಕೂ ಅಧಿಕ ಹಿಂದೂ ಮಕ್ಕಳ ಮತಾಂತರ ಆರೋಪ Read More »

ಎಐಸಿಸಿ ಆಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಉಸಿರಾಟದ ಸಮಸ್ಯೆಗೆ ಚಿಕಿತ್ಸೆ ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ. ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಮೂಲಗಳು ತಿಳಿಸಿವೆ. ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಎಂದಿನಂತೆಯೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರಿ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ

ಎಐಸಿಸಿ ಆಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು Read More »

ವಿದ್ಯುತ್‌ ಸ್ಥಾವರದ ಕಮಾನು ಕುಸಿದು ಬಿದ್ದು 9 ಕಾರ್ಮಿಕರ ಸಾವು

ನಿರ್ಮಾಣ ಹಂತದ ಉಷ್ಣ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ದುರಂತ ಚೆನ್ನೈ : ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯ ಎನ್ನೋರ್‌ನಲ್ಲಿ ನಿರ್ಮಾಣ ಹಂತದ ಉಷ್ಣ ವಿದ್ಯುತ್ ಸ್ಥಾವರದ ಕಮಾನು ಕುಸಿದು ಬಿದ್ದು ಸಂಭವಿಸಿದ ದುರ್ಘಟನೆಯಲ್ಲಿ 9 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಅವಘಡದಲ್ಲಿ ಮೃತಪಟ್ಟ ಎಲ್ಲ ಕಾರ್ಮಿಕರು ಅಸ್ಸಾಂನವರು. ಈ ಸಂದರ್ಭ ನಿವೇಶನದಲ್ಲಿ ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಡೆಟ್ (ಬಿಎಚ್‌ಇಎಲ್)ನ ಅಧಿಕಾರಿಗಳು ಇದ್ದರು ಎಂದು ತಮಿಳುನಾಡು ಜನರೇಷನ್ ಆ್ಯಂಡ್ ಡಿಸ್ಟ್ರಿಬ್ಯುಷನ್ ಕಾರ್ಪೊರೇಷನ್(ಟಿಎಎನ್‌ಜಿಇಡಿಸಿಒ)ನ ಅಧ್ಯಕ್ಷ ಡಾ. ಜೆ. ರಾಧಾಕೃಷ್ಣನ್ ಹೇಳಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು

ವಿದ್ಯುತ್‌ ಸ್ಥಾವರದ ಕಮಾನು ಕುಸಿದು ಬಿದ್ದು 9 ಕಾರ್ಮಿಕರ ಸಾವು Read More »

ಹಿಂದು ಮುಖಂಡರ ಹತ್ಯೆಗೆ ಮುಜಾಹಿದಿನ್‌ ಆರ್ಮಿ ರಚಿಸಿದ ನಾಲ್ವರ ಬಂಧನ

ಆನ್‌ಲೈನ್‌ ಗ್ರೂಪ್‌ಗಳ ಮೂಲಕ ರಹಸ್ಯ ಸಂದೇಶಗಳ ರವಾನೆ ಲಖನೌ: ಹಿಂದೂ ಧಾರ್ಮಿಕ ನಾಯಕರ ಹತ್ಯೆಗೆ ಸಂಚು ರೂಪಿಸಿದ್ದ ಮತ್ತು ಮುಜಾಹಿದ್ದೀನ್ ಆರ್ಮಿ ಎಂಬ ಮೂಲಭೂತವಾದಿ ಸಂಘಟನೆಯನ್ನು ರಚಿಸಲು ಯತ್ನಿಸಿದ ಆರೋಪದ ಮೇಲೆ ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ನಾಲ್ವರು ವ್ಯಕ್ತಿಗಳನ್ನು ಬಂಧಿಸಿದೆ. ಈ ಗುಂಪು ಹಿಂಸಾತ್ಮಕ ಚಟುವಟಿಕೆಗಳಿಗೆ ತಯಾರಿ ನಡೆಸುತ್ತಿದ್ದು, ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ನೇಮಕ ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳ ಕೆಲವು ವ್ಯಕ್ತಿಗಳು ಉಗ್ರಗಾಮಿ

ಹಿಂದು ಮುಖಂಡರ ಹತ್ಯೆಗೆ ಮುಜಾಹಿದಿನ್‌ ಆರ್ಮಿ ರಚಿಸಿದ ನಾಲ್ವರ ಬಂಧನ Read More »

ಏಷ್ಯಾಕಪ್‌ ಕಪ್‌ ಗೆದ್ದ ಟೀಂ ಇಂಡಿಯಾಕ್ಕೆ ಬಿಸಿಸಿಐನಿಂದ ಸಿಕ್ಕಿತು ಭರ್ಜರಿ ಬಹುಮಾನ

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹೈಡ್ರಾಮಾ ದುಬೈ: ಇಲ್ಲಿನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಏಷ್ಯಾ ಕಪ್ ಗೆದ್ದ ಭಾರತ ತಂಡದ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗೆ ಬಿಸಿಸಿಐ ಬರೋಬ್ಬರಿ 21 ಕೋಟಿ ನಗದು ಬಹುಮಾನ ಘೋಷಿಸಿದೆ. ಇದಲ್ಲದೇ ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ನಿಂದ ಚಾಂಪಿಯನ್‌ ತಂಡಕ್ಕೆ 2.6 ಕೋಟಿ ರೂ. ಟೂರ್ನಿಯ ಬಹುಮಾನ ಸಿಕ್ಕಿದೆ. ರನ್ನರ್‌ ಅಪ್‌ ಪಾಕಿಸ್ತಾನ ತಂಡ ಕೇವಲ 1.3 ಕೋಟಿ ರೂ. ಬಹುಮಾನ ಪಡೆದುಕೊಂಡಿದೆ. ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಗೆದ್ದರೂ ಏಷ್ಯಾ ಕಪ್‌

ಏಷ್ಯಾಕಪ್‌ ಕಪ್‌ ಗೆದ್ದ ಟೀಂ ಇಂಡಿಯಾಕ್ಕೆ ಬಿಸಿಸಿಐನಿಂದ ಸಿಕ್ಕಿತು ಭರ್ಜರಿ ಬಹುಮಾನ Read More »

ಕಾಲ್ತುಳಿತ ದುರಂತ ಬೆನ್ನಲ್ಲೇ ವಿಜಯ್‌ ಮನೆಗೆ ಬಾಂಬ್‌ ಬೆದರಿಕೆ

ಭದ್ರತೆಗೆ ಸಿಆರ್‌ಪಿಎಫ್‌ ಸಿಬ್ಬಂದಿ ನಿಯೋಜನೆ ಚೆನ್ನೈ: ಶನಿವಾರ ರಾತ್ರಿ ಕರೂರಿನ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬೆನ್ನಲ್ಲೇ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ ಬಂದಿದೆ. ಚೆನ್ನೈಯಲ್ಲಿರುವ ವಿಜಯ್‌ ನಿವಾಸಕ್ಕೆ ಬಾಂಬ್‌ ಬೆದರಿಕೆ ಬಂದ ಬೆನ್ನಲ್ಲೇ ಸ್ಥಳೀಯ ಚೆನ್ನೈ ನಗರ ಮತ್ತು ಸಿಆರ್‌ಪಿಎಫ್ ಸಿಬ್ಬಂದಿಯನ್ನು ಮನೆಯ ಸುತ್ತಲೂ ನಿಯೋಜಿಸಲಾಗಿದೆ. ಕಾಲ್ತುಳಿತದಲ್ಲಿ ಸಾವುನೋವು ಸಂಭವಿಸಿದ ಹಿನ್ನೆಲೆ ಶನಿವಾರ ಮಧ್ಯರಾತ್ರಿಯಿಂದಲೇ ವಿಜಯ್‌ ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ. ಬೆದರಿಕೆ ಬಂದ ಹಿನ್ನೆಲೆ

ಕಾಲ್ತುಳಿತ ದುರಂತ ಬೆನ್ನಲ್ಲೇ ವಿಜಯ್‌ ಮನೆಗೆ ಬಾಂಬ್‌ ಬೆದರಿಕೆ Read More »

39 ಜನರ ಪ್ರಾಣಕ್ಕೆ ಎರವಾದ ಸೌಲಭ್ಯಗಳ ಕೊರತೆ

ವಿಜಯ್‌ ರ‍್ಯಾಲಿಯಲ್ಲಿ ನೀರು, ಊಟದ ಕನಿಷ್ಠ ವ್ಯವಸ್ಥೆಯೂ ಇರಲಿಲ್ಲ ಚೆನ್ನೈ : ತಮಿಳುನಾಡಿನ ಕರೂರ್‌ನಲ್ಲಿ ಶನಿವಾರ ನಟ ವಿಜಯ್ ಅವರ ರಾಜಕೀಯ ರ‍್ಯಾಲಿಯಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 39ಕ್ಕೇರಿದ್ದು, 100 ಹೆಚ್ಚು ಜನರು ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 39 ಜನರ ಸಾವಿಗೆ ಕಾರಣವಾದ ಲೋಪಗಳು ಈಗ ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಈ ನಡುವೆ ನಟ ದುರಂತದಲ್ಲಿ ಮೃತಪಟ್ಟ ಎಲ್ಲ 39 ಮಂದಿಯ ಪರಿವಾರಗಳಿಗೆ ತಲಾ 20 ಲ.ರೂ. ಪರಿಹಾರ ಕೊಡುವುದಾಗಿ ಘೋಷಿಸಿದ್ದಾರೆ. ಶನಿವಾರ

39 ಜನರ ಪ್ರಾಣಕ್ಕೆ ಎರವಾದ ಸೌಲಭ್ಯಗಳ ಕೊರತೆ Read More »

17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಸ್ವಾಮೀಜಿ ಆಗ್ರಾದಲ್ಲಿ ಸೆರೆ

ಲಖನೌ: 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸ್ವಾಮಿ ಚೈತನ್ಯಾನಂದ ಸರಸ್ವತಿ ಅಲಿಯಾಸ್ ಪಾರ್ಥ ಸಾರಥಿಯನ್ನು ಉತ್ತರ ಪ್ರದೇಶದ ಆಗ್ರಾದಲ್ಲಿ ಪೊಲೀಸರು ಬಂಧಿಸಿದ್ದಾರೆ. ಚೈತನ್ಯಾನಂದ ಸರಸ್ವತಿ ವಿರುದ್ಧ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ, ಬಲವಂತದ ದೈಹಿಕ ಸಂಪರ್ಕ ನಡೆಸಿದ ಆರೋಪಗಳಿವೆ. ದೆಹಲಿಯ ಶಾರದಾ ಇನ್‌ಸ್ಟಿಟ್ಯೂಟ್‌ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್‌ನ ನಿರ್ವಹಣಾ ಸಮಿತಿಯ ಸದಸ್ಯನಾಗಿರುವ ಆರೋಪಿ ಸ್ವಾಮೀಜಿ ಈ ಪ್ರಕರಣ ಬೆಳಕಿಗೆ ಬಂದ ಬಳಿಕ ತಲೆಮರೆಸಿಕೊಂಡಿದ್ದರು. ಇವರ ವಿರುದ್ಧ 2009 ಮತ್ತು 2016ರಲ್ಲಿ ಸಹ ಎರಡು ಲೈಂಗಿಕ

17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಸ್ವಾಮೀಜಿ ಆಗ್ರಾದಲ್ಲಿ ಸೆರೆ Read More »

error: Content is protected !!
Scroll to Top