ದೇಶ

ಡಾ. ಉಮರ್‌ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ : ಸಿಸಿಟಿವಿ ದೃಶ್ಯಗಳಲ್ಲಿ ಮಹತ್ವದ ಸುಳಿವು ಪತ್ತೆ

ಮಸೀದಿ ಬಳಿ 3 ತಾಸು ನಿಂತಿದ್ದ ಕಾರು, ಚಾಲಕನ ಮುಖ ಗೋಚರ ನವದೆಹಲಿ: ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟದಲ್ಲಿ ಬಳಸಿರುವ ಹುಂಡೈ ಐ20 ಕಾರನ್ನು ಸ್ಫೋಟಕ್ಕೂ ಮೊದಲು ಸುಮಾರು ಮೂರು ಗಂಟೆ ಮಸೀದಿ ಬಳಿ ಪಾರ್ಕಿಂಗ್‌ ಆಗಿದ್ದ ವಿಚಾರ ಈಗ ಸಿಸಿಟಿವಿ ದೃಶ್ಯಗಳಿಂದ ಪತ್ತೆಯಾಗಿದೆ. ಕಾರು ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಮಧ್ಯಾಹ್ನ 3.19ಕ್ಕೆ ಪ್ರವೇಶಿಸಿ ಸಂಜೆ 6.48ಕ್ಕೆ ನಿರ್ಗಮಿಸಿದೆ. ನಿರ್ಗಮಿಸಿದ ಕೆಲವೇ ನಿಮಿಷಗಳ ನಂತರ ಕೆಂಪು ಕೋಟೆಯ ಬಳಿ ಸಂಜೆ 6.52ಕ್ಕೆ ಸ್ಫೋಟಗೊಂಡಿದೆ. ಪಾರ್ಕಿಂಗ್ […]

ಡಾ. ಉಮರ್‌ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ : ಸಿಸಿಟಿವಿ ದೃಶ್ಯಗಳಲ್ಲಿ ಮಹತ್ವದ ಸುಳಿವು ಪತ್ತೆ Read More »

ದಿಲ್ಲಿ ಕಾರು ಸ್ಫೋಟ ಉಗ್ರರ ಆತ್ಮಹತ್ಯಾ ದಾಳಿಯೆಂಬ ಶಂಕೆ

11 ಜನರನ್ನು ಬಲಿತೆಗೆದುಕೊಂಡ ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್‌ ಬಳಕೆ ನವದೆಹಲಿ: ದೆಹಲಿಯ ಕೆಂಪುಕೋಟೆಯ ಬಳಿ ಇರುವ ಮೆಟ್ರೋ ಸ್ಟೇಷನ್​ ಗೇಟ್ ಬಳಿ ಟ್ರಾಫಿಕ್ ಸಿಗ್ನಲ್​​ನಲ್ಲಿ ನಿನ್ನೆ ಸಂಜೆ ಸಂಭವಿಸಿದ ಕಾರು ಸ್ಫೋಟ ಉಗ್ರರ ಆತ್ಮಹತ್ಯಾ ದಾಳಿ ಎಂಬ ತೀರ್ಮಾನಕ್ಕೆ ತನಿಖಾ ಏಜೆನ್ಸಿಗಳು ಬಂದಿವೆ. ಕಾರಿನಲ್ಲಿ ಅಮೋನಿಯಂ ನೈಟ್ರೇಟ್‌ ಸ್ಫೋಟಕದ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇದು ಉಗ್ರಕೃತ್ಯ ಎಂಬ ಬಲವಾದ ಸಂಶಯ ಇದೆ. ಸ್ಫೋಟವಾದ ಕಾರಿನಲ್ಲೂ ಜನರಿದ್ದರು. ಕಾರೊಳಗಿದ್ದ ಜನರು ಸೇರಿದಂತೆ ಒಟ್ಟು 11 ಜನರು ಮೃತಪಟ್ಟಿದ್ದಾರೆ. 4

ದಿಲ್ಲಿ ಕಾರು ಸ್ಫೋಟ ಉಗ್ರರ ಆತ್ಮಹತ್ಯಾ ದಾಳಿಯೆಂಬ ಶಂಕೆ Read More »

ಹರಿಯಾಣದಲ್ಲಿ ಸಿಕ್ಕಿದ್ದು ಬಾಂಬ್‌ ತಯಾರಿಸಲು ಬಳಸುವ 360 ಕೆ.ಜಿ. ಅಮೋನಿಯಂ ನೈಟ್ರೇಟ್‌

ಮಹಿಳಾ ಡಾಕ್ಟರ್‌, ಇಮಾಮ್‌ ಸೇರಿ ಹಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿರುವ ಪೊಲೀಸರು ನವದೆಹಲಿ: ಹರಿಯಾಣದ ಫರಿದಾಬಾದ್‌ನಲ್ಲಿ ಜಮ್ಮು-ಕಾಶ್ಮೀರ ಪೊಲೀಸರು ವಶಪಡಿಸಿಕೊಂಡಿರುವುದು ಆರ್‌ಡಿಎಕ್ಸ್‌ ಅಲ್ಲ ಬದಲಾಗಿ ಬಾಂಬ್‌ ತಯಾರಿಸಲು ಬಳಸುವ ಅಮೋನಿಯಂ ನೈಟ್ರೇಟ್‌ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಪ್ರಾಥಮಿಕ ವರದಿಗಳಲ್ಲಿ ಆರ್‌ಡಿಎಕ್ಸ್‌ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಲಾಗಿತ್ತು. ಸ್ಫೋಟಕದ ಜೊತೆಗೆ ರೈಫಲ್ ಹಾಗೂ ಮದ್ದುಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇತ್ತೀಚಿಗೆ ಶ್ರೀನಗರದಲ್ಲಿ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಅನ್ನು ಬೆಂಬಲಿಸುವ ಪೋಸ್ಟರ್‌ಗಳನ್ನು ಹಾಕಿದ್ದ ಹಿನ್ನೆಲೆ ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಕಾಶ್ಮೀರಿ ಮೂಲದ

ಹರಿಯಾಣದಲ್ಲಿ ಸಿಕ್ಕಿದ್ದು ಬಾಂಬ್‌ ತಯಾರಿಸಲು ಬಳಸುವ 360 ಕೆ.ಜಿ. ಅಮೋನಿಯಂ ನೈಟ್ರೇಟ್‌ Read More »

ಹರಿಯಾಣದ ಆಸ್ಪತ್ರೆಯಿಂದ 360 ಆರ್‌ಡಿಎಕ್ಸ್‌ ಸ್ಫೋಟಕ ವಶ

ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಇಬ್ಬರು ಡಾಕ್ಟರ್‌ಗಳು ಸೆರೆ ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ ಪರಿಯಾಣದ ಫರಿದಾಬಾದ್‌ನ ಆಸ್ಪತ್ರೆಯೊಂದಕ್ಕೆ ದಾಳಿ ಮಾಡಿರುವ ಪೊಲೀಸರು 360 ಕಿ.ಗ್ರಾಂ ಆರ್‌ಡಿಎಕ್ಸ್‌ ಸ್ಫೋಟಕ ಮತ್ತು ಒಂದು ಎ.ಕೆ. 47 ರೈಫಲ್‌ ವಶಪಡಿಸಿಕೊಂಡು ಇಬ್ಬರು ಡಾಕ್ಟರ್‌ಗಳನ್ನು ಬಂಧಿಸಿದ್ದಾರೆ. ದೇಶದಲ್ಲಿ ಇನ್ನೊಂದು ಬೃಹತ್‌ ವಿಧ್ವಂಸಕ ಕೃತ್ಯವನ್ನು ಈ ಮೂಲಕ ಪೊಲೀಸರು ವಿಫಲಗೊಳಿಸಿದ್ದಾರೆ. ಫರಿದಾಬಾದ್‌ನ ಅಲ್‌ ಫಲಾಹ ಆಸ್ಪತ್ರೆಯಿಂದ ಈ ಬೃಹತ್‌ ಪ್ರಮಾಣದ ಅಪಾಯಕಾರಿ ಸ್ಫೋಟಕವನ್ನು ಜಮ್ಮು-ಕಾಶ್ಮೀರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾಶ್ಮೀರದಲ್ಲಿ ಸೆರೆಯಾದ ಡಾಕ್ಟರ್‌ ನೀಡಿದ

ಹರಿಯಾಣದ ಆಸ್ಪತ್ರೆಯಿಂದ 360 ಆರ್‌ಡಿಎಕ್ಸ್‌ ಸ್ಫೋಟಕ ವಶ Read More »

ಅಲ್‌ಖೈದಾ ಜಿಹಾದಿಗಳಿಂದ ಐವರು ಭಾರತೀಯರ ಅಪಹರಣ

ಹಿಂಸಾತ್ರಸ್ತ ಮಾಲಿಯ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಪ್ರಜೆಗಳು ಮಾಲಿ : ಅಶಾಂತಿ ಮತ್ತು ಜಿಹಾದಿ ಹಿಂಸಾಚಾರದಿಂದ ತತ್ತರಿಸಿರುವ ಪಶ್ಚಿಮ ಆಫ್ರಿಕಾದ ದೇಶವಾದ ಮಾಲಿಯಲ್ಲಿ ಅಲ್‌ ಖೈದಾ ಜಿಹಾದಿಗಳು ಐವರು ಭಾರತೀಯ ಪ್ರಜೆಗಳನ್ನು ಅಪಹರಿಸಿದ್ದಾರೆ ಎಂದು ಅವರ ಕಂಪನಿ ಮತ್ತು ಭದ್ರತಾ ಮೂಲಗಳು ತಿಳಿಸಿವೆ. ಪಶ್ಚಿಮ ಮಾಲಿಯ ಕೊಬ್ರಿ ಬಳಿ ಗುರುವಾರ ಬಂದೂಕುಧಾರಿಗಳು ಕಾರ್ಮಿಕರನ್ನು ಅಪಹರಿಸಿದ್ದಾರೆ. ವಿದ್ಯುದೀಕರಣ ಯೋಜನೆಗಳಲ್ಲಿ ಕೆಲಸ ಮಾಡುತ್ತಿರುವ ಕಂಪನಿಯಲ್ಲಿ ಅವರು ಕೆಲಸ ಮಾಡುತ್ತಿದ್ದರು. ಐವರು ಭಾರತೀಯ ಪ್ರಜೆಗಳ ಅಪಹರಣವನ್ನು ನಾವು ದೃಢಪಡಿಸುತ್ತೇವೆ ಎಂದು

ಅಲ್‌ಖೈದಾ ಜಿಹಾದಿಗಳಿಂದ ಐವರು ಭಾರತೀಯರ ಅಪಹರಣ Read More »

ಕರಾವಳಿಯಲ್ಲಿ ಕಾರುಗಳ ಮಾರಾಟ ಶೇ. 30 ಹೆಚ್ಚಳ

ಜಿಎಸ್‌ಟಿ ಇಳಿಕೆ; ಹಬ್ಬದ ಕೊಡುಗೆಗಳ ಪರಿಣಾಮ ಗರಿಗೆದರಿದ ವ್ಯಾಪಾರ ವಹಿವಾಟು ಮಂಗಳೂರು : ಕೇಂದ್ರ ಸರ್ಕಾರ ಜಿಎಸ್‌ಟಿ ಇಳಿಕೆ ಮಾಡಿದ ಪರಿಣಾಮವಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲೂ ವ್ಯಾಪಾ ವಹಿವಾಟುಗಳು ವೃದ್ಧಿ ಕಂಡಿವೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ದಸರಾ ಮತ್ತು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕಾರುಗಳ ಮಾರಾಟ ಶೇ.30ರಷ್ಟು ಏರಿಕೆ ಕಂಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಹಬ್ಬದ ಸೀಸನ್‌ನಲ್ಲಿ ವಾಹನಗಳ ಖರೀದಿ ಗಣನೀಯವಾಗಿ ಹೆಚ್ಚಾಗಿದೆ. ಅನೇಕರು ದೀಪಾವಳಿಯನ್ನು ಹೊಸ ವಾಹನಗಳೊಂದಿಗೆ ಸಂಭ್ರಮಿಸಿದ್ದಾರೆ. ದಸರಾದಿಂದಲೇ

ಕರಾವಳಿಯಲ್ಲಿ ಕಾರುಗಳ ಮಾರಾಟ ಶೇ. 30 ಹೆಚ್ಚಳ Read More »

ಉಡುಪಿ: ಲಕ್ಷಕಂಠ ಗೀತಾ ಪಾರಾಯಣದಲ್ಲಿ ಶ್ಲೋಕ ಪಠಿಸಲಿರುವ ಮೋದಿ

ನ.28ರಂದು ಪ್ರಧಾನಿಯಿಂದ ಸುವರ್ಣ ತೀರ್ಥ ಮಂಟಪ, ಚಿನ್ನದ ಕನಕನ ಕಿಂಡಿ, ಕನಕ ಕವಚ ಉದ್ಘಾಟನೆ ಉಡುಪಿ : ನ.28ರಂದು ಉಡುಪಿಗೆ ಆಗಮಿಸಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಿ ಶ್ಲೋಕ ಪಠಿಸಲಿದ್ದಾರೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ನವೆಂಬರ್ 8ರಿಂದ ಡಿಸೆಂಬರ್ 7ರವರೆಗೆ ಭವ್ಯವಾದ ಗೀತೋತ್ಸವವನ್ನು ಆಚರಿಸಲಾಗುವುದು. ಈ ಕಾರ್ಯಕ್ರಮವನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಪ್ರತಿದಿನ ವಿದ್ವಾಂಸರಿಂದ ಗೀತಾ

ಉಡುಪಿ: ಲಕ್ಷಕಂಠ ಗೀತಾ ಪಾರಾಯಣದಲ್ಲಿ ಶ್ಲೋಕ ಪಠಿಸಲಿರುವ ಮೋದಿ Read More »

ಇಂದು ವಂದೇ ಮಾತರಂ 150ನೇ ವರ್ಷಾಚರಣೆ

ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಹಾಡು ನವದೆಹಲಿ : ರಾಷ್ಟ್ರಗೀತೆಯಷ್ಟೇ ಮನ್ನಣೆ ಹೊಂದಿರುವ ಭಾರತದ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಇಂದು 150ನೇ ವರ್ಷಾಚರಣೆಯ ಸಂಭ್ರಮ. ವಂದೇ ಮಾತರಂ 150ನೇ ವರ್ಷಾಚರಣೆ ನಿಮಿತ್ತ ಇಂದು ದೇಶಾದ್ಯಂತ ಹಲವು ಕಾರ್ಯಕ್ರಮಗಳು ನಡೆಯಲಿದ್ದು, ಅದರಲ್ಲಿ 150 ಕಡೆಗಳಲ್ಲಿ ವಂದೇ ಮಾತರಂ ಹಾಡುವುದು ಸೇರಿದೆ. ದಿಲ್ಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ. ಹಲವು ಪೀಳಿಗೆಯ ಭಾರತೀಯರು ಒಂದಾಗಲು, ಎದ್ದುನಿಲ್ಲಲು ಮತ್ತು ರಾಷ್ಟ್ರದ ಚೈತನ್ಯವನ್ನು ಬಲಪಡಿಸಲು ಪ್ರೇರೇಪಿಸಿದ ಹಾಡು

ಇಂದು ವಂದೇ ಮಾತರಂ 150ನೇ ವರ್ಷಾಚರಣೆ Read More »

ರಾಹುಲ್‌ ಗಾಂಧಿ ತೋರಿಸಿದ್ದು ಬ್ರಝಿಲ್‌ ರೂಪದರ್ಶಿಯ ಹಳೆಯ ಫೋಟೊ!

ಹರಿಯಾಣದಲ್ಲಿ ಮತ ಕಳ್ಳತನ ಆರೋಪಕ್ಕೆ ಬಳಸಿದ್ದ ಫೊಟೊ ನವದೆಹಲಿ : ನಿನ್ನೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹರಿಯಾಣದಲ್ಲಿ ಭಾರಿ ಪ್ರಮಾಣದ ಮತಕಳ್ಳತನವಾಗಿದೆ ಎಂದು ಆರೋಪಿಸಲು ಬಳಸಿಕೊಂಡಿದ್ದ ಯುವತಿಯ ಫೋಟೊ ಬ್ರಝಿಲ್‌ನ ಮೋಡೆಲ್‌ ಒಬ್ಬರ ಹಳೆಯ ಫೋಟೊ ಎನ್ನುವುದು ಬಹಿರಂಗವಾಗಿದೆ.ಬ್ರಝಿಲ್‌ನ ರೂಪದರ್ಶಿ ಲಾರಿಸ್ಸಾ ಎಂಬವರ ಫೋಟೊ ಇದು ಎನ್ನುವುದು ಖಾಸಗಿ ವಾಹಿನಿಗಳು ನಡೆಸಿದ ತನಿಖೆಯಿಂದ ಗೊತ್ತಾಗಿದೆ. ಸ್ವತಹ ಲಾರಿಸ್ಸಾ ಈ ವಿಚಿತ್ರ ವಿದ್ಯಮಾನಕ್ಕೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಬುಧವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಬಿಜೆಪಿ ಚುನಾವಣಾ

ರಾಹುಲ್‌ ಗಾಂಧಿ ತೋರಿಸಿದ್ದು ಬ್ರಝಿಲ್‌ ರೂಪದರ್ಶಿಯ ಹಳೆಯ ಫೋಟೊ! Read More »

1 ಗಂಟೆಯಲ್ಲಿ 20 ಮತ ಹಾಕುವುದು ಸಾಧ್ಯನಾ? : ರಾಹುಲ್‌ ಗಾಂಧಿ ಆರೋಪಕ್ಕೆ ಬಿಜೆಪಿ ವ್ಯಂಗ್ಯ

ಕಾಂಗ್ರೆಸ್‌ ನಾಯಕ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಟೀಕೆ ನವದೆಹಲಿ: ಹರಿಯಾಣದಲ್ಲಿ ವೋಟ್‌ ಚೋರಿ ನಡೆದಿದೆ ಎಂಬ ರಾಹುಲ್‌ ಗಾಂಧಿ ಆರೋಪವನ್ನು ಬಿಜೆಪಿ ವ್ಯಂಗ್ಯ ಮಾಡಿದೆ. ಯಾರಾದ್ರೂ ಒಂದು ಗಂಟೆಯಲ್ಲಿ 20 ಹಾಕುವುದಕ್ಕೆ ಸಾಧ್ಯವಾ ಎಂದು ಬಿಜೆಪಿ ಪ್ರಶ್ನಿಸಿದೆ. ನಿನ್ನೆ ಸುದ್ದಿಗೋಷ್ಠಿ ನಡೆಸಿದ ರಾಹುಲ್‌ ಗಾಂಧಿ, ಹರಿಯಾಣದಲ್ಲಿ ದೊಡ್ಡ ಪ್ರಮಾಣದ ಮತದಾರರ ವಂಚನೆ ನಡೆದಿದೆ. ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಅಪಖ್ಯಾತಿಗೊಳಿಸುವ ಪ್ರಯತ್ನ ಎಂದು ಆರೋಪಿಸಿದ್ದರು. ಅದಕ್ಕೆ ಬಿಜೆಪಿ ತಿರುಗೇಟು ನೀಡಿದೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಭಾರತ

1 ಗಂಟೆಯಲ್ಲಿ 20 ಮತ ಹಾಕುವುದು ಸಾಧ್ಯನಾ? : ರಾಹುಲ್‌ ಗಾಂಧಿ ಆರೋಪಕ್ಕೆ ಬಿಜೆಪಿ ವ್ಯಂಗ್ಯ Read More »

error: Content is protected !!
Scroll to Top