ದೇಶ

ಮಂಗಳಮುಖಿಯನ್ನೂ ಬಿಡದ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ!

ಕಿರುಕುಳ ಆರೋಪ ಹೊತ್ತು ರಾಜೀನಾಮೆ ನೀಡಿರುವ ಕಾಂಗ್ರೆಸ್‌ ಯುವ ನಾಯಕನ ಇನ್ನಷ್ಟು ಕರ್ಮಕಾಂಡಗಳು ಬಯಲು ತಿರುವನಂತಪುರಂ: ಮಲಯಾಳಂ ನಟಿ ರಿನಿ ಆನ್ ಜಾರ್ಜ್ ಅವರಿಗೆ ಕಿರುಕುಳ ನೀಡಿದ ಆರೋಪ ಹೊತ್ತು ಕೇರಳ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಪದವಿಗೆ ಗುರುವಾರ ರಾಜೀನಾಮೆ ನೀಡಿರುವ ಶಾಸಕ ರಾಹುಲ್‌ ಮಮಕೂಟತ್ತಿಲ್‌ ತೃತೀಯ ಲಿಂಗಿಗೂ ಲೈಂಗಿಕ ಕಿರುಕುಳ ನೀಡಿದ ವಿಚಾರ ಬೆಳಕಿಗೆ ಬಂದಿದೆ. ನಟಿ ರಿನಿ ಲೈಂಗಿಕ ಕಿರುಕುಳ ಆರೋಪ ಮಾಡಿದ ಬಳಿಕ ಇನ್ನೂ ಹಲವು ಮಹಿಳೆಯರು ರಾಹುಲ್‌ ಮಮಕೂಟತ್ತಿಲ್‌ನ ಕಿರುಕುಳದ ಬಗ್ಗೆ […]

ಮಂಗಳಮುಖಿಯನ್ನೂ ಬಿಡದ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ! Read More »

ರಾಷ್ಟ್ರೀಯ ಹೆದ್ದಾರಿ, ಎಕ್ಸ್‌ಪ್ರೆಸ್‌ವೇಗಳಲ್ಲಿ ದ್ವಿಚಕ್ರ ವಾಹನಗಳಿಗೆ ಟೋಲ್ ಇಲ್ಲ

ಬೈಕ್‌, ಸ್ಕೂಟರ್‌ಗಳಿಗೆ ಟೋಲ್‌ ವಿಧಿಸಲಾಗುತ್ತದೆ ಎನ್ನುವುದು ಬರೀ ವದಂತಿ ನವದೆಹಲಿ: ದೇಶಾದ್ಯಂತ ಎಲ್ಲ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ ದ್ವಿಚಕ್ರ ವಾಹನಗಳಿಗೆ ಟೋಲ್ ಶುಲ್ಕ ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ದೃಢಪಡಿಸಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದ್ವಿಚಕ್ರ ವಾಹನಗಳ ಮೇಲೆ ಶುಲ್ಕ ವಿಧಿಸಲು ಯೋಜಿಸಿದೆ ಎಂಬ ಸಾಮಾಜಿಕ ಮಾಧ್ಯಮಗಳ ವದಂತಿಗಳ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಗಳು, 2008ರ ಪ್ರಕಾರ ನಾಲ್ಕು ಚಕ್ರಗಳು ಮತ್ತು

ರಾಷ್ಟ್ರೀಯ ಹೆದ್ದಾರಿ, ಎಕ್ಸ್‌ಪ್ರೆಸ್‌ವೇಗಳಲ್ಲಿ ದ್ವಿಚಕ್ರ ವಾಹನಗಳಿಗೆ ಟೋಲ್ ಇಲ್ಲ Read More »

ಮತಕಳ್ಳತನ ಸಿಐಟಿ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆ

ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಲು ಆಗ್ರಹ ನವದೆಹಲಿ: ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರು ಸೆಂಟ್ರಲ್‌ನ ಮಹದೇವಪುರ ವಿಧಾನಸಭಾ ಕ್ಷೇತ್ರ ಮತ್ತು ಇತರ ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಆರೋಪ ಸಂಬಂಧ ತನಿಖೆ ನಡೆಸಲು ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕೆಂದು ಕೋರಿ ವಕೀಲ ಮತ್ತು ಕಾಂಗ್ರೆಸ್ ಸದಸ್ಯ ರೋಹಿತ್ ಪಾಂಡೆ ಎಂಬವರು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಸಲ್ಲಿಸಿದ್ದಾರೆ. ಅತ್ಯಂತ ಸೂಕ್ಷ್ಮ ಮತ್ತು

ಮತಕಳ್ಳತನ ಸಿಐಟಿ ತನಿಖೆ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆ Read More »

65 ಲಕ್ಷ ನಕಲಿ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಿದ ಚುನಾವಣಾ ಆಯೋಗ

ನವದೆಹಲಿ: ಬಿಹಾರದ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣಾ ಆಯೋಗವು 65 ಲಕ್ಷ ನಕಲಿ ಮತದಾರರನ್ನು ಪಟ್ಟಿಯಿಂದ ಅಳಿಸಿ ಹಾಕಿದೆ ಮತ್ತು ಈ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಹಾರದಲ್ಲಿ ಕೇಂದ್ರ ಚುನಾವಣಾ ಆಯೋಗವು ಆರಂಭ ಮಾಡಿದ್ದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯ ಸಮಯದಲ್ಲಿ ಅಳಿಸಿ ಹಾಕಲಾದ 65 ಲಕ್ಷ ಮತದಾರರ ಹೆಸರುಗಳನ್ನು ಬಹಿರಂಗ ಮಾಡಿರುವುದಾಗಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪಟ್ಟಿಯ ಭಾಗವಾಗಿ ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾದ 65 ಲಕ್ಷ

65 ಲಕ್ಷ ನಕಲಿ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಿದ ಚುನಾವಣಾ ಆಯೋಗ Read More »

ರಥಕ್ಕೆ ವಿದ್ಯುತ್‌ ತಂತಿ ಸ್ಪರ್ಶಿಸಿ ಐವರ ದುರ್ಮರಣ

ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ನಡೆದ ರಥಯಾತ್ರೆಯಲ್ಲಿ ಸಂಭವಿಸಿದ ದುರಂತ ಹೈದರಾಬಾದ್: ಕೃಷ್ಣ ಜನ್ಮಾಷ್ಟಮಿ ಆಚರಣೆಯ ಭಾಗವಾಗಿ ನಡೆದ ಮೆರವಣಿಗೆ ವೇಳೆ ರಥಕ್ಕೆ ವಿದ್ಯುತ್‌ ತಂತಿ ತಗುಲಿ ಕನಿಷ್ಠ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮೃತರನ್ನು ಕೃಷ್ಣಯಾದವ್ (21), ಸುರೇಶ್ ಯಾದವ್ (34), ಶ್ರೀಕಾಂತ್ ರೆಡ್ಡಿ (35), ರುದ್ರ ವಿಕಾಸ್ (39), ಮತ್ತು ರಾಜೇಂದ್ರ ರೆಡ್ಡಿ (45) ಎಂದು ಗುರುತಿಸಲಾಗಿದೆ. ರಾಮಂತಪುರದ ಗೋಕುಲನಗರದಲ್ಲಿ ಭಾನುವಾರ ತಡರಾತ್ರಿ 12 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಹಲವರು

ರಥಕ್ಕೆ ವಿದ್ಯುತ್‌ ತಂತಿ ಸ್ಪರ್ಶಿಸಿ ಐವರ ದುರ್ಮರಣ Read More »

ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಯಲ್ಲೂ ಅಚ್ಚರಿ ತೋರಿಸಿದ ಬಿಜೆಪಿ

ತಮಿಳುನಾಡಿನ ಹಿರಿಯ ನಾಯಕ ಸಿ.ಪಿ.ರಾಧಾಕೃಷ್ಣನ್‌ಗೆ ಒಲಿದು ಬಂದ ಭಾಗ್ಯ ನವದೆಹಲಿ: ಜಗದೀಪ್‌ ಧನ್‌ಕರ್‌ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನದ ಚುನಾವಣೆಗೆ ಅಭ್ಯರ್ಥಿಯನ್ನು ಆಯಕೆ ಮಾಡುವಲ್ಲೂ ಬಿಜೆಪಿ ಅಚ್ಚರಿಯೆ ನಡೆ ತೋರಿಸಿದೆ. ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಸಹಿತ ಹಲವು ಪ್ರಮುಖರು ಉಪರಾಷ್ಟ್ರಪತಿ ರೇಸ್‌ನಲ್ಲಿ ಇದ್ದರೂ ಕೊನೆಗೆ ಆಯ್ಕೆಯಾಗಿರುವುದು ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್‌. ಅಷ್ಟರ ತನಕ ರಾಧಾಕೃಷ್ಣನ್‌ ಹೆಸರು ಉಲ್ಲೇಖದಲ್ಲೇ ಇರಲಿಲ್ಲ ಎನ್ನುವುದು ಗಮನಾರ್ಹ ಅಂಶ. ಉಪರಾಷ್ಟ್ರಪತಿ ಚುನಾವಣೆಗೆ ಸಿ.ಪಿ.ರಾಧಾಕೃಷ್ಣನ್‌ ಅವರನ್ನು ಎನ್‌ಡಿಎ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ನಿನ್ನೆ

ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಯಲ್ಲೂ ಅಚ್ಚರಿ ತೋರಿಸಿದ ಬಿಜೆಪಿ Read More »

ಭಾರತಕ್ಕೆ ಆಗಮಿಸಿದ ಗಗನಯಾತ್ರಿ ಶುಭಾಂಶು ಶುಕ್ಲ

ದಿಲ್ಲಿ, ಸಿಎಂ, ಕೇಂದ್ರ ಸಚಿವರು ಸಹಿತ ಗಣ್ಯರಿಂದ ನಸುಕಿನ ಹೊತ್ತು ಅದ್ದೂರಿ ಸ್ವಾಗತ ನವದೆಹಲಿ: ನಾಸಾದ ಗಗನಯಾತ್ರೆಯನ್ನು ಯಶಸ್ವಿಯಾಗಿ ಪೂರೈಸಿದ ಶುಭಾಂಶು ಶುಕ್ಲಾ ಇಂದು ನಸುಕಿನ ಹೊತ್ತು ಭಾರತಕ್ಕೆ ಆಗಮಿಸಿದರು. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ನಂತರ ಮೊದಲ ಬಾರಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ತಾಯ್ನಾಡಿಗೆ ಮರಳಿದ್ದು, ಅವರಿಗೆ ಆತ್ಮೀಯ ಸ್ವಾಗತ ಕೋರಲಾಯಿತು. ಅಮೆರಿಕದಿಂದ ಮಧ್ಯರಾತ್ರಿ 1.30ರ ವೇಳೆಗೆ ದೆಹಲಿಗೆ ಆಗಮಿಸಿದ ಶುಭಾಂಶು ಶುಕ್ಲಾಗೆ ಇಂದಿರಾ ಗಾಂಧಿ ಏರ್‌ಪೋರ್ಟ್‌ನಲ್ಲಿ ಅದ್ದೂರಿ ಸ್ವಾಗತ ಸಿಕ್ಕಿದೆ. ಕೇಂದ್ರ ಸಚಿವ

ಭಾರತಕ್ಕೆ ಆಗಮಿಸಿದ ಗಗನಯಾತ್ರಿ ಶುಭಾಂಶು ಶುಕ್ಲ Read More »

12ರ ಬಾಲಕಿ ಮೇಲೆ 200 ಮಂದಿಯಿಂದ ಅತ್ಯಾಚಾರ : ಮುಂಬಯಿಯಲ್ಲಿ ಬೆಳಕಿಗೆ ಬಂದ ಭಯಾನಕ ಕೃತ್ಯ

ಅಮಲು ಬರುವ ಪಾನೀಯ, ಚುಚ್ಚುಮದ್ದು ನೀಡಿ ಲೈಂಗಿಕ ಶೋಷಣೆ ಮುಂಬಯಿ : ಬಾಂಗ್ಲಾದೇಶ ಮೂಲದ 12 ವರ್ಷದ ಬಾಲಕಿಯ ಮೇಲೆ ಮೂರು ತಿಂಗಳಲ್ಲಿ 200ಕ್ಕೂ ಹೆಚ್ಚು ಮಂದಿ ಅತ್ಯಾಚಾರವೆಸಗಿದ ಭಯಾನಕ ಕೃತ್ಯವೊಂದು ಮುಂಬಯಿಯಲ್ಲಿ ಬೆಳಕಿಗೆ ಬಂದಿದೆ. ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದ ಕಾರಣ ಬೇಸರಗೊಂಡು ಪರಿಚಯಸ್ಥ ಮಹಿಳೆಯೊಬ್ಬಳ ಜತೆಗೆ ದೇಶಬಿಟ್ಟು ಓಡಿಬಂದಿದ್ದ ಬಾಲಕಿ ಮುಂಬಯಿಯಲ್ಲಿ ಮಾನವ ಕಳ್ಳಸಾಗಣೆ ಜಾಲದಲ್ಲಿ ಆಕೆ ಸಿಕ್ಕಿಬಿದ್ದು ನರಕ ಯಾತನೆ ಅನುಭವಿಸಿದ್ದಾಳೆ. ಯಾರೋ ಆಕೆಗೆ ಭಾರತದೊಳಗೆ ನುಸುಳಲು ಅವಕಾಶ ಮಾಡಿಕೊಟ್ಟಿದ್ದರು. ಇಲ್ಲಿ ಮಾನವ ಕಳ್ಳಸಾಗಣೆ ಜಾಲದಲ್ಲಿ

12ರ ಬಾಲಕಿ ಮೇಲೆ 200 ಮಂದಿಯಿಂದ ಅತ್ಯಾಚಾರ : ಮುಂಬಯಿಯಲ್ಲಿ ಬೆಳಕಿಗೆ ಬಂದ ಭಯಾನಕ ಕೃತ್ಯ Read More »

ಸಂಚಾರ ವ್ಯವಸ್ಥೆ ಸರಿಪಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಬೆಂಗಳೂರಿನ ಪುಟಾಣಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರಿನ ಪುಟ್ಟ ಹುಡುಗಿಯೊಬ್ಬಳು ಬರೆದ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಗರದ ಅಭಿರೂಪ್ ಎಂಬವರ ಐದು ವರ್ಷದ ಪುತ್ರಿ ಆರ್ಯ ಪ್ರಧಾನಿ ಅವರಿಗೆ ಪತ್ರ ಬರೆದಿದ್ದು, ಅದರಲ್ಲಿ ಬೆಂಗಳೂರಿನ ಸಂಚಾರ ಸಮಸ್ಯೆಯನ್ನು ಪರಿಹರಿಸುವಂತೆ ಮನವಿ ಮಾಡಿದ್ದಾಳೆ. ಬೆಂಗಳೂರಿನಲ್ಲಿ ವಿಪರೀತ ಟ್ರಾಫಿಕ್ ಇದ್ದು, ಇದರಿಂದ ಶಾಲೆ ಮತ್ತು ಕಾಲೇಜುಗಳಿಗೆ ತಲುಪುವುದು ತಡವಾಗುತ್ತಿದೆ. ರಸ್ತೆ ತುಂಬಾ ಕೆಟ್ಟದಾಗಿದ್ದು, ಈ ಸಮಸ್ಯೆಯನ್ನು ಪರಿಹರಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾಳೆ.

ಸಂಚಾರ ವ್ಯವಸ್ಥೆ ಸರಿಪಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಬೆಂಗಳೂರಿನ ಪುಟಾಣಿ Read More »

ಭಾರತದ ಅಭಿವೃದ್ಧಿಯನ್ನು ಅಮೆರಿಕಾಗೆ ‌ಸಹಿಸಲು ಆಗುತ್ತಿಲ್ಲ: ರಾಜನಾಥ್ ಸಿಂಗ್ ಟಾಂಗ್

ನವದೆಹಲಿ: ಭಾರತದ ಆರ್ಥಿಕ ಅಭಿವೃದ್ಧಿ ಕ್ರಿಯಾತ್ಮಕ ಮತ್ತು ವೇಗವಾದ ಬೆಳವಣಿಗೆ ಕಾಣುತ್ತಿದೆ. ಈ ಅಂಶ ಜಗತ್ತಿನ ಬಾಸ್ ಎಂದು ಕರೆಸಿಕೊಳ್ಳುವ ದೊಡ್ಡಣ್ಣನಿಗೆ ಸಹಿಸುವುದಕ್ಕೆ ‌ಸಾಧ್ಯವಾಗುತ್ತಿಲ್ಲ ಎಂದು ಅಮೆರಿಕಾ ವಿರುದ್ಧ ರಕ್ಷಣಾ ಸಚಿವ ರಾಜ ನಾಥ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಭಾರತದ ಮೇಲೆ ಸುಂಕ ಯುದ್ಧ ಹೇರಿದ ಅಮೆರಿಕಾ ಅಧ್ಯಕ್ಷ ಟ್ರಂಪ್ ವಿರುದ್ಧ ವಾಗ್ದಾಳಿ ‌ನಡೆಸಿದ ಅವರು, ಭಾರತದ ಆರ್ಥಿಕ‌ ಬೆಳವಣಿಗೆಯ ವೇಗ ಗಮನಿಸಿದರೆ ಜಗತ್ತಿನ ಮಹಾಶಕ್ತಿಯಾಗಿ ಹೊಮ್ಮುವುದನ್ನು ತಡೆಯಲು ಯಾವ ಜಾಗತಿಕ ಶಕ್ತಿಗೂ ‌ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಭಾರತದ ಅಭಿವೃದ್ಧಿಯನ್ನು ಅಮೆರಿಕಾಗೆ ‌ಸಹಿಸಲು ಆಗುತ್ತಿಲ್ಲ: ರಾಜನಾಥ್ ಸಿಂಗ್ ಟಾಂಗ್ Read More »

error: Content is protected !!
Scroll to Top