ದೇಶ

ಟಿ20 ವಿಶ್ವಕಪ್‌ : ಇಂದು ಭಾರತ-ದಕ್ಷಿಣ ಆಫ್ರಿಕ ಸೂಪರ್‌ 8 ಮುಖಾಮುಖಿ

ಕುತೂಹಲ ಕೆರಳಿಸಿರುವ ಎರಡು ಅಜೇಯ ತಂಡಗಳ ನಡುವಿನ ಹೋರಾಟ ಅಹಮದಾಬಾದ್‌: ಟಿ20 ವಿಶ್ವಕಪ್‌ ಕೂಟದ ಗುಂಪು ಹಂತದಲ್ಲಿ ಅಜೇಯವಾಗಿ ಉಳೀದು ಸೂಪರ್‌ 8 ಸುತ್ತಿಗೆ ಬಂದಿರುವ ಭಾರತ ಮತ್ತು ದಕ್ಷಿಣ ಆಫ್ರಿಕ ತಂಡಗಳು ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸೂಒರ್‌ 8 ಸುತ್ತಿನಲ್ಲಿ ಮುಖಾಮುಖಿಯಾಗಲಿವೆ. ಭಾರತ ಗುಂಪು ಹಂತದಲ್ಲಿ ಯುಎಸ್ಎ, ನಮೀಬಿಯಾ, ಪಾಕಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ತಂಡಗಳನ್ನು ಸೋಲಿಸುವ ಮೂಲಕ ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಇಂದಿನಿಂದ ಭಾರತಕ್ಕೆ ನಿಜವಾದ ಸವಾಲು ಎದುರಾಗಲಿದೆ. ಭಾರತದ […]

ಟಿ20 ವಿಶ್ವಕಪ್‌ : ಇಂದು ಭಾರತ-ದಕ್ಷಿಣ ಆಫ್ರಿಕ ಸೂಪರ್‌ 8 ಮುಖಾಮುಖಿ Read More »

ಎರಡು ವರ್ಷದ ಕಂದನನ್ನು ಕೊಂದ ಚಿಕ್ಕಮ್ಮ ಪೊಲೀಸರ ವಶಕ್ಕೆ

ನವದೆಹಲಿ: ಎರಡು ವರ್ಷದ ಮಗುವನ್ನು ಸ್ವಂತ ಚಿಕ್ಕಮ್ಮನೇ ಕತ್ತು ಹಿಸುಕಿ ‌ಕೊಂದಿರುವ ಘಟನೆ ನವದೆಹಲಿಯ ಮುಖರ್ಜಿ ನಗರದ SFS ಫ್ಲ್ಯಾ‌ಟ್‌ಗಳ ಹತ್ತಿರದ ಉದ್ಯಾನವನದಲ್ಲಿ ನಡೆದಿದೆ. ಆರೋಪಿ ಅಜ್ರಾ ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಬಾಲಕನನ್ನು ಹಾದಿ ಎಂದು ಗುರುತಿಸಲಾಗಿದ್ದು, ಆತ ತನ್ನ ತಾಯಿಯ ಜೊತೆ ಅಜ್ಜಿ ಮನೆಗೆ ಬಂದಿದ್ದ. ಮಧ್ಯಾಹ್ನದ ವೇಳೆ ಮಗುವಿನ ತಾಯಿಯ ತಂಗಿ ಹಾದಿಯನ್ನು ಉದ್ಯಾನಕ್ಕೆ ‌ಕರೆದೊಯ್ದಿದ್ದಾಳೆ. ಅಲ್ಲಿ ಅವಳು ಮಗುವನ್ನು ಕೊಂದಿರುವ ಆರೋಪ ಕೇಳಿ ಬಂದಿದೆ. ಆ ಬಳಿಕ ಶವವನ್ನು ತನ್ನ

ಎರಡು ವರ್ಷದ ಕಂದನನ್ನು ಕೊಂದ ಚಿಕ್ಕಮ್ಮ ಪೊಲೀಸರ ವಶಕ್ಕೆ Read More »

ದುಬೈನಲ್ಲಿ ಕ್ರೀಡಾಕೂಟ: ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ‘ಕ್ರಿಕೆಟ್ ಸೀಸನ್-6’, ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ

ದುಬೈ: ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ಆಯೋಜಿಸಲಾಗಿದ್ದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟವು ಫೆಬ್ರವರಿ 15 ರಂದು ದುಬೈನಲ್ಲಿ ಅತ್ಯಂತ ವೈಭವದಿಂದ ಜರುಗಿತು. ಈ ಬಾರಿಯ ಕ್ರೀಡಾಕೂಟದ ಆಕರ್ಷಕ ವಿಜೇತ ಟ್ರೋಫಿಗಳನ್ನು ಸಂಘದ ಉಪಾಧ್ಯಕ್ಷ ಸುರೇಶ್ ಕುಂಪಲ ಅವರು ತಮ್ಮ ತಾಯಿ ದಿ. ಕಮಲ ಅವರ ಸ್ಮರಣಾರ್ಥವಾಗಿ ಪ್ರಾಯೋಜಿಸಿದ್ದರು. ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ಮೋಹನ್ ಕಡಂಬಳ, ಉಪಾಧ್ಯಕ್ಷ ಸುರೇಶ್ ಕುಂಪಲ ಹಾಗೂ ಸಲಹೆಗಾರರಾದ

ದುಬೈನಲ್ಲಿ ಕ್ರೀಡಾಕೂಟ: ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ‘ಕ್ರಿಕೆಟ್ ಸೀಸನ್-6’, ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ Read More »

ಕೆಂಪುಕೋಟೆ ಬಳಿ ಮತ್ತೊಂದು ಭೀಕರ ಸ್ಫೋಟಕ್ಕೆ ಸಂಚು

ಪಾಕಿಸ್ತಾನದ ಉಗ್ರ ಸಂಘಟನೆಯಿಂದ ಭಾರತದಲ್ಲಿ ವಿಧ್ವಂಸ ಕೃತ್ಯಕ್ಕೆ ಹೊಂಚು ನವದೆಹಲಿ: ಹೊಸದಿಲ್ಲಿಯ ಕೆಂಪುಕೋಟೆ ಸಮೀಪ ಸಂಬವಿಸಿದ ಕಾರು ಬಾಂಬ್‌ ಸ್ಫೋಟ ಕೃತ್ಯ ನೆನಪಿನಿಂದ ಮರೆಯಾಗುವ ಮುನ್ನವೇ ಪಾಕಿಸ್ತಾನ ಮೂಲದ ಲಷ್ಕರ್‌-ಎ-ತೋಯ್ಬಾ ಉಗ್ರ ಸಂಘಟನೆ ಕೆಂಪುಕೋಟೆ ಸಮೀಪ ಇನ್ನೊಂದು ಭಾರಿ ಸ್ಫೋಟಕ್ಕೆ ಸಂಚು ರೂಪಿಸಿರುವ ಆಘಾತಕಾರಿ ಅಂಶ ಬಯಲಾಗಿದೆ. ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆ, ದೆಹಲಿಯ ಕೆಂಪುಕೋಟೆ, ಚಾಂದನಿ ಚೌಕ್‌ನಲ್ಲಿರುವ ದೇವಾಲಯ ಮತ್ತು ದೇಶಾದ್ಯಂತದ ಇತರ ಪ್ರಮುಖ ದೇವಾಲಯಗಳ ಬಳಿ ಸ್ಫೋಟಕ್ಕೆ ಯೋಜನೆ ರೂಪಿಸುತ್ತಿದೆ ಎಂದು ಭದ್ರತಾ ಸಂಸ್ಥೆಗಳನ್ನು

ಕೆಂಪುಕೋಟೆ ಬಳಿ ಮತ್ತೊಂದು ಭೀಕರ ಸ್ಫೋಟಕ್ಕೆ ಸಂಚು Read More »

30ಕ್ಕೂ ಅಧಿಕ ಮಕ್ಕಳ ಲೈಂಗಿಕ ಶೋಷಣೆ : ದಂಪತಿಗೆ ಮರಣ ದಂಡನೆ

ವಿಡಿಯೋ ಮಾಡಿ ಪೋರ್ನ್‌ ವೆಬ್‌ಸೈಟ್‌ಗಳಿಗೆ ಮಾರಾಟ ಮಾಡುತ್ತಿದ್ದ ದಂಪತಿ ಲಖನೌ: 33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಡಿಯೋ ಮಾಡಿ ಡಾರ್ಕ್‌ವೆಬ್‌ ಪೋರ್ನ್‌ ಸೈಟಿಗೆ ಮಾರಿದ ಪ್ರಕರಣದಲ್ಲಿ ದಂಪತಿಗೆ ಉತ್ತರ ಪ್ರದೇಶದ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಸಂತ್ರಸ್ತ ಮಕ್ಕಳಲ್ಲಿ ಕೆಲವರು ಮೂರು ವರ್ಷ ವಯಸ್ಸಿನವರಾಗಿದ್ದಾರೆ. ಉತ್ತರ ಪ್ರದೇಶದ ಬಂಡಾ ಜಿಲ್ಲೆಯ ಪೋಕ್ಸೊ ಕಾಯ್ದೆಯ ವಿಶೇಷ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡಿದೆ. ಆರೋಪಿಗಳಾದ ಉತ್ತರ ಪ್ರದೇಶ ಚಿತ್ರಕೂಟದ ರಾಮಭವನ್ ಮತ್ತು ಆತನ ಪತ್ನಿ ದುರ್ಗಾವತಿಯನ್ನು ಲೈಂಗಿಕ

30ಕ್ಕೂ ಅಧಿಕ ಮಕ್ಕಳ ಲೈಂಗಿಕ ಶೋಷಣೆ : ದಂಪತಿಗೆ ಮರಣ ದಂಡನೆ Read More »

ಏ.1ರಿಂದ ಟೋಲ್‌ಗೇಟ್‌ಗಳಲ್ಲಿ ಶುಲ್ಕ ನಗದು ಪಾವತಿ ಇಲ್ಲ

ಡಿಜಿಟಲ್‌ ವಿಧಾನದಲ್ಲಿ ಮಾತ್ರ ಶುಲ್ಕ ಸ್ವೀಕರಿಸಲು ನಿರ್ಧಾರ ಹೊಸದಿಲ್ಲಿ: ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಗೇಟ್‌ಗಳಲ್ಲಿ ಮುಂಬರುವ ಏ.1ರಿಂದ ನಗದು ಪಾವತಿಗೆ ಅವಕಾಶವಿಲ್ಲ. ವಾಹನ ಚಾಲಕರು ಕಡ್ಡಾಯವಾಗಿ ಮೊತ್ತವನ್ನು ಡಿಜಿಟಲ್ ವಿಧಾನದಲ್ಲೇ ಅಂದರೆ ಫಾಸ್ಟ್ಯಾಗ್ ಅಥವಾ ಯುಪಿಐ ಮೂಲಕವೇ ಪಾವತಿಸಬೇಕಾಗುತ್ತದೆ. ದೇಶಾದ್ಯಂತ ನೂತನ ವ್ಯವಸ್ಥೆ ಹೊಸ ಹಣಕಾಸು ವರ್ಷದ ಆರಂಭದ ದಿನ ಜಾರಿಗೆ ಬರಲಿದೆ ಎಂದು ಭಾರತದ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಸ್ಪಷ್ಟಪಡಿಸಿದೆ. ಪ್ರಸ್ತುತ ನಿಯಮಾವಳಿಗಳ ಪ್ರಕಾರ, ಟೋಲ್ ಪ್ಲಾಝಾ ದಾಟುವ ವಾಹನಗಳು ಫಾಸ್ಟ್ಯಾಗ್ ಹೊಂದಿಲ್ಲದಿದ್ದಲ್ಲಿ, ನಗದು ರೂಪದಲ್ಲಿ

ಏ.1ರಿಂದ ಟೋಲ್‌ಗೇಟ್‌ಗಳಲ್ಲಿ ಶುಲ್ಕ ನಗದು ಪಾವತಿ ಇಲ್ಲ Read More »

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಪ್ರಯಾಣಿಸುತ್ತಿದ್ದ ವಂದೇ ಭಾರತ್‌ ರೈಲಿಗೆ ಕಲ್ಲು ತೂರಾಟ

ಲಖನೌ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ಮಾಡಿರುವ ಘಟನೆ ಉತ್ತರ ಪ್ರದೇಶದ ಹಾರ್ದೋಯ್‌ ಸಮೀಪ ನಡೆದಿದೆ. ಲಖನೌ-ದೆಹಲಿ ವಂದೇ ಭಾರತ್‌ನಲ್ಲಿ ಭಾಗವತ್‌ ಮೀರತ್‌ಗೆ ಹಿಂತಿರುಗುತ್ತಿದ್ದರು. ಈ ವೇಳೆ ಹಾರ್ದೋಯ್ ಗ್ರಾಮದಲ್ಲಿ ಕಲ್ಲು ತೂರಾಟವಾಗಿದೆ. ಗುರುವಾರ ಮಧ್ಯಾಹ್ನ 3:30ರ ವೇಳೆಗೆ ಘಟನೆಯಾಗಿದೆ. ರಾತ್ರಿ 9 ಗಂಟೆ ಸುಮಾರಿಗೆ ಮೀರತ್ ರೈಲು ನಿಲ್ದಾಣದಲ್ಲಿ ಬಿಗಿ ಭದ್ರತೆಯಲ್ಲಿ ಮೋಹನ್‌ ಭಾಗವತ್‌ ಅವರು ಇಳಿದಿದ್ದಾರೆ. ಇಂದು ಮತ್ತು ನಾಳೆ 2 ದಿನಗಳ ಸಂವಾದ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಪ್ರಯಾಣಿಸುತ್ತಿದ್ದ ವಂದೇ ಭಾರತ್‌ ರೈಲಿಗೆ ಕಲ್ಲು ತೂರಾಟ Read More »

ಮಾನವ ಕಲ್ಯಾಣಕ್ಕೆ ಕೃತಕ ಬುದ್ಧಿಮತ್ತೆ ಬಳಕೆ : ನರೇಂದ್ರ ಮೋದಿ ಪ್ರತಿಪಾದನೆ

AI ಇಂಪ್ಯಾಕ್ಟ್‌ ಶೃಂಗಸಭೆಯಲ್ಲಿ MANAV ಸೂತ್ರ ತಿಳಿಸಿದ ಪ್ರಧಾನಿ ಹೊಸದಿಲ್ಲಿ: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಮಾನವ ಕಲ್ಯಾಣಕ್ಕಾಗಿ ಉಪಯೋಗಿಸುವುದು ಭಾರತದ ಗುರಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಇಂದು ನಡೆದ AI ಇಂಪ್ಯಾಕ್ಟ್‌ ಶೃಂಗಸಭೆ 2026ನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತದ ಭವಿಷ್ಯದ AI ನೀಲನಕ್ಷೆಯನ್ನು ಸಭೆಯ ಮುಂದೆ ಬಿಚ್ಚಿಟ್ಟರು. ವಿಶ್ವದ ಯುವಕರು AI ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುತ್ತಿರುವ ಮತ್ತು ಅದರ ಮಾಲೀಕತ್ವವನ್ನು ಪಡೆದುಕೊಳ್ಳುತ್ತಿರುವ ವೇಗ ನಿಜಕ್ಕೂ ಶ್ಲಾಘನೀಯ. ಭಾರತದಲ್ಲಿ ಆಯೋಜಿಸಿರುವ

ಮಾನವ ಕಲ್ಯಾಣಕ್ಕೆ ಕೃತಕ ಬುದ್ಧಿಮತ್ತೆ ಬಳಕೆ : ನರೇಂದ್ರ ಮೋದಿ ಪ್ರತಿಪಾದನೆ Read More »

ಟಿ20 ವಿಶ್ವಕಪ್‌ : ಸಂಭ್ರಮಕ್ಕಿಂತ ಕಳವಳ ಹುಟ್ಟಿಸಿದ ನಾಲ್ಕನೇ ಗೆಲುವು

ದುರ್ಬಲ ನೆದರ್ಲ್ಯಾಂಡ್ಸ್ ವಿರುದ್ಧ ಬರೀ 17 ರನ್‌ಗಳಿಂದ ಗೆದ್ದ ಟೀಂ ಇಂಡಿಯಾ ಅಹಮದಾಬಾದ್‌: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಿನ್ನೆ ರಾತ್ರಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಟಿ20 ವಿಶ್ವಕಪ್​ನ ಕೊನೆಯ ಲೀಗ್ ಪಂದ್ಯದಲ್ಲಿ ಟೀಂ ಇಂಡಿಯಾ ಬರೀ 17 ರನ್​ಗಳಿಂದ ಗೆದ್ದಿರುವುದು ಕ್ರಿಕೆಟ್‌ ಪ್ರೇಮಿಗಳಲ್ಲಿ ಆತಂಕವುಂಟು ಮಾಡಿದೆ. ನೆದರ್ಲ್ಯಾಂಡ್ಸ್‌ನಂಥ ದುರ್ಬಲ ತಂಡದ ಎದುರು ಚಾಂಪಿಯನ್‌ ತಂಡವೊಂದು ಆಡುವ ಆಟ ಇದಾಗಿರಲಿಲ್ಲ. ಭಾರತ ಸತತ ಗೆಲುವು ದಾಖಲಿಸಿ ಟೂರ್ನಿಯಲ್ಲಿ ಅಜೇಯ ಓಟವನ್ನೇನೋ ಮುಂದವರೆಸಿದೆ. ಇನ್ನಿರುವುದು ಸೂಪರ್‌ 8ರ ಘಟ್ಟದ

ಟಿ20 ವಿಶ್ವಕಪ್‌ : ಸಂಭ್ರಮಕ್ಕಿಂತ ಕಳವಳ ಹುಟ್ಟಿಸಿದ ನಾಲ್ಕನೇ ಗೆಲುವು Read More »

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : 9 ನ್ಯಾಯಾಧೀಶರ ಪೀಠದಲ್ಲಿ ಅಂತಿಮ ವಿಚಾರಣೆ

ಸಂವಿಧಾನ ಪೀಠದಲ್ಲಿ ಏ.22ರೊಳಗೆ ಮುಕ್ತಾಯವಾಗಲಿರುವ ವಿಚಾರಣೆ ನವದೆಹಲಿ: ಶಬರಿಮಲೆ ದೇಗುಲವೂ ಸೇರಿ ಕೆಲ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶ ನಿರಾಕರಿಸುವ ತಾರತಮ್ಯ ಕುರಿತಾದ ಅರ್ಜಿಗಳ ಅಂತಿಮ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಸೋಮವಾರ ಒಂಬತ್ತು ನ್ಯಾಯಾಧೀಶರ ಸಾಂವಿಧಾನಿಕ ಪೀಠ ರಚಿಸಿ ಆದೇಶಿಸಿದೆ. ಈ ಸಾಂವಿಧಾನಿಕ ಪೀಠ ಏ.7ರಿಂದ ಅರ್ಜಿಗಳ ವಿಚಾರಣೆ ಆರಂಭಿಸಿ ಏ.22ರೊಳಗೆ ಮುಕ್ತಾಯಗೊಳಿಸಲಿದೆ. ಪುನರ್‌ ಪರಿಶೀಲನೆಯನ್ನು ಬೆಂಬಲಿಸುವವರ ಅರ್ಜಿ ಏ.7ರಿಂದ ಏ.9ರ ನಡುವೆ ವಿಚಾರಣೆಗೆ ಬರಲಿದೆ. ಆ ಬಳಿಕ ಏ.14ರಿಂದ ಏ.16ರವರೆಗೆ ತೀರ್ಪಿನ ಪುನರ್‌ ಪರಿಶೀಲನಾ ಅರ್ಜಿಗಳ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ : 9 ನ್ಯಾಯಾಧೀಶರ ಪೀಠದಲ್ಲಿ ಅಂತಿಮ ವಿಚಾರಣೆ Read More »

error: Content is protected !!
Scroll to Top