ದೇಶ

ಐಪಿಎಲ್‌ ಪಂದ್ಯಗಳು ಇಂದಿನಿಂದ ಪುನರಾರಂಭ

ಬೆಂಗಳೂರಿನಲ್ಲಿ ಆರ್‌ಸಿಬಿ-ಕೆಕೆಆರ್‌ ಮುಖಾಮುಖಿ ಬೆಂಗಳೂರು: ಭಾರತ ಮತ್ತು ಪಾಕಿಸ್ಥಾನ ನಡುವಿನ ಯುದ್ಧದಿಂದಾಗಿ ಒಂದು ವಾರ‌ ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಐಪಿಎಲ್‌ ಕ್ರಿಕೆಟ್‌ ಪಂದ್ಯಗಳು ಇಂದಿನಿಂದ ಪುನರಾರಂಭವಾಗುತ್ತಿವೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಕೆಕೆಆರ್‌-ಆರ್‌ಸಿಬಿ ತಂಡಗಳು ಮುಖಾಮುಖಿಯಾಗಲಿವೆ. ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಲಿದ್ದು, ಟೆಸ್ಟ್‌ ಕ್ರಿಕೆಟ್‌ಗೆ ನಿವೃತ್ತಿ ಹೇಳಿರುವ ವಿರಾಟ್‌ ಕೊಹ್ಲಿಯ ಆಟ ನೋಡಲು ಜನ ಉತ್ಸುಕರಾಗಿದ್ದಾರೆ. ಸದ್ಯ ಆಡಿರುವ 11 ಪಂದ್ಯಗಳಿಂದ 8 ಜಯ, 3 ಸೋಲು ಕಂಡಿರುವ ರಜತ್‌ ಪಾಟಿದಾರ್‌ ಸಾರಥ್ಯದ ಆರ್‌ಸಿಬಿ, +0.482 ನೆಟ್‌ ರನ್‌ರೇಟ್‌ನೊಂದಿಗೆ […]

ಐಪಿಎಲ್‌ ಪಂದ್ಯಗಳು ಇಂದಿನಿಂದ ಪುನರಾರಂಭ Read More »

ವಿವಾದಕ್ಕೀಡಾದ ಟರ್ಕಿ-ಕಾಂಗ್ರೆಸ್‌ ಸಂಬಂಧ

ಟರ್ಕಿಯಲ್ಲಿ ಕಚೇರಿ ತೆರೆಯಲು ಹಣ ಕೊಟ್ಟದ್ದು ಯಾರು ಎಂಬ ಪ್ರಶ್ನೆ ನವದೆಹಲಿ : ಯುದ್ಧದಲ್ಲಿ ಪಾಕಿಸ್ಥಾನವನ್ನು ಬಹಿರಂಗವಾಗಿ ಬೆಂಬಲಿಸಿರುವ ಟರ್ಕಿ ದೇಶದ ಜೊತೆಗೆ ಕಾಂಗ್ರೆಸ್‌ ಹೊಂದಿರುವ ಸಂಬಂಧ ಈಗ ವಿವಾದಕ್ಕೆ ಕಾರಣವಾಗಿದೆ. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸ್ಪರ್ಧಿಸಲು ತನ್ನ ಬಳಿ ಹಣವೇ ಇಲ್ಲ ಎಂದು ಹೇಳಿದ್ದ ಕಾಂಗ್ರೆಸ್‌ಗೆ 2019ರಲ್ಲೇ ಟರ್ಕಿಯಲ್ಲಿ ಸಾಗರೋತ್ತರ ಕಚೇರಿ ತೆರೆಯಲು ಹಣ ಎಲ್ಲಿಂದ ಬಂದಿತ್ತು ಎನ್ನುವ ಪ್ರಶ್ನೆ ಉದ್ಭವವಾಗಿದೆ. ಟರ್ಕಿ ಹಾಗೂ ಕಾಂಗ್ರೆಸ್ ನಡುವಿನ ಸಂಬಂಧಗಳ ಬಗ್ಗೆ ಟೀಕೆಗಳು ಶುರುವಾಗಿವೆ. 2019ರಲ್ಲಿ

ವಿವಾದಕ್ಕೀಡಾದ ಟರ್ಕಿ-ಕಾಂಗ್ರೆಸ್‌ ಸಂಬಂಧ Read More »

ಮಂಗಳೂರಿನ ಹಡಗು ಲಕ್ಷದ್ವೀಪದ ಸಮೀಪ ಮುಳುಗಡೆ : ಸಿಬ್ಬಂದಿ ಪಾರು

ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ಹಡಗು ಮಂಗಳೂರು: ಲಕ್ಷದ್ವೀಪಕ್ಕೆ ಕಟ್ಟಡ ನಿರ್ಮಾಣ ಸಾಮಗ್ರಿ ಸಾಗಿಸುತ್ತಿದ್ದ ಹಡಗೊಂದು ಅರಬ್ಬಿ ಸಮುದ್ರದಲ್ಲಿ ಮುಳುಗಿದೆ. ಮಂಗಳೂರು ಬಂದರಿನಿಂದ ಹೊರಟಿದ್ದ ಹಡಗು ಸುಮಾರು 60 ನಾಟಿಕಲ್‌ ಮೈಲು ದೂರದಲ್ಲಿ ಮುಳುಗಿದೆ. ಎಂಎಸ್‌ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ ನಿರ್ಮಾಣ ಸಾಮಾಗ್ರಿ ಹೊತ್ತುಕೊಂಡು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ 18ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆಯಿಂದ ಒಳಗಡೆ ನೀರು

ಮಂಗಳೂರಿನ ಹಡಗು ಲಕ್ಷದ್ವೀಪದ ಸಮೀಪ ಮುಳುಗಡೆ : ಸಿಬ್ಬಂದಿ ಪಾರು Read More »

ಶಾಂತಿ ಮಾತುಕತೆಯ ಪ್ರಸ್ತಾಪ ಇಟ್ಟ ಪಾಕ್‌ ಪ್ರಧಾನಿ ಶೆಹಬಾಜ್‌ ಶರೀಫ್‌

ಕಾಶ್ಮೀರ ಸಮಸ್ಯೆಯನ್ನೂ ಒಳಗೊಂಡು ಚರ್ಚೆಯ ಪ್ರಸ್ತಾಪ ಇಸ್ಲಾಮಾಬಾದ್: ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಮೂಲಕ ಕೊಟ್ಟ ಹೊಡೆತಕ್ಕೆ ತತ್ತರಿಸಿ ಹೋಗಿರುವ ಪಾಕಿಸ್ಥಾನ ಈಗ ತಾನಾಗಿಯೇ ಮಾತುಕತೆಗೆ ಮುಂದೆ ಬಂದಿದೆ. ಪಾಕಿಸ್ಥಾನ ಶಾಂತಿಗಾಗಿ ತೊಡಗಿಸಿಕೊಳ್ಳಲು ಸಿದ್ಧವಾಗಿದೆ ಎಂದು ಅಲ್ಲಿನ ಪ್ರಧಾನಿ ಶೆಹಬಾಜ್‌ ಶರೀಫ್‌ ಭಾರತದ ಮುಂದೆ ಮಾತುಕತೆ ಪ್ರಸ್ತಾಪ ಇಟ್ಟಿದ್ದಾರೆ. ಭಾರತದೊಂದಿಗಿನ ಮಿಲಿಟರಿ ಮುಖಾಮುಖಿಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಮತ್ತು ಸೈನಿಕರೊಂದಿಗೆ ಸಂವಾದ ನಡೆಸಲು ಗುರುವಾರ ಪಂಜಾಬ್ ಪ್ರಾಂತ್ಯದ ಕಮ್ರಾ ವಾಯುನೆಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶೆಹಬಾಜ್ ಈ ಹೇಳಿಕೆ ನೀಡಿದ್ದಾರೆ.ಶಾಂತಿಗಾಗಿ

ಶಾಂತಿ ಮಾತುಕತೆಯ ಪ್ರಸ್ತಾಪ ಇಟ್ಟ ಪಾಕ್‌ ಪ್ರಧಾನಿ ಶೆಹಬಾಜ್‌ ಶರೀಫ್‌ Read More »

ತಿರುಪತಿಯಲ್ಲಿ ಟಿಟಿ ವಾಹನ ಅಪಘಾತ | ಬಿಳಿನೆಲೆ ಕೈಕಂಬ ಮೂಲದ ಮಹಿಳೆ ಮೃತ್ಯು

ತಿರುಪತಿ: ತಿರುಪತಿ ಯಾತ್ರೆಗೆ ತೆರಳಿದ್ದ ಟಿಟಿ ವಾಹನ ಅಪಘಾತಕ್ಕೀಡಾಗಿ ಬಿಳಿನೆಲೆ ಕೈಕಂಬದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ತಿರುಪತಿ-ಶ್ರೀ ಕಾಳಹಸ್ತಿ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಘಟನೆ ನಡೆದಿದೆ. ಶೇಷಮ್ಮ (70) ಅಪಘಾತದಿಂದ ಮೃತಪಟ್ಟವರು. ಕಡಬ ತಾಲ್ಲೂಕು ಬಿಳಿನೆಲೆ ಗ್ರಾಮದ ಕೈಕಂಬದ ಕುಟುಂಬ ಹಾಗೂ ಅವರ ಸಂಬಂಧಿಕರು ಪ್ಯಾಕೇಜ್ ಟೂರ್ ಯೋಜನೆಯಡಿ ಟಿಟಿಯಲ್ಲಿ ತಿರುಪತಿ ಯಾತ್ರೆ ಕೈಗೊಂಡಿದ್ದರು. ಒಟ್ಟು ಮೂರು ವಾಹನಗಳಲ್ಲಿ ಕರ್ನಾಟಕದ ಇತರ ಭಾಗದವರೂ ವಾಹನದಲ್ಲಿದ್ದರು. ಮಂಗಳವಾರ ಗುಂಡ್ಯದಿಂದ ವಾಹನ ಹೊರಟಿತ್ತು. ಬುಧವಾರ ಸಂಜೆ ತಿರುಪತಿಯಲ್ಲಿ ದರ್ಶನ ನೆರವೇರಿಸುವುದಕ್ಕೂ

ತಿರುಪತಿಯಲ್ಲಿ ಟಿಟಿ ವಾಹನ ಅಪಘಾತ | ಬಿಳಿನೆಲೆ ಕೈಕಂಬ ಮೂಲದ ಮಹಿಳೆ ಮೃತ್ಯು Read More »

ಎನ್‌ಕೌಂಟರ್‌ನಲ್ಲಿ ಜೈಶ್‌ನ ಮೂರು ಉಗ್ರರ ಹತ್ಯೆ

48 ತಾಸುಗಳಲ್ಲಿ ಆರು ಭಯೋತ್ಪಾದಕರು ಬಲಿ ಶ್ರೀನಗರ : ಭದ್ರತಾ ಪಡೆಗಳು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತ್ರಾಲ್‌ ಸಮೀಪ ಇಂದು ನಸುಕಿನ ಹೊತ್ತು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶ್‌-ಎ ಮೊಹಮ್ಮದ್‌ ಉಗ್ರ ಸಂಘಟನೆಯ ಮೂವರು ಭಯೋತ್ಪದಕರು ಹತರಾಗಿದ್ದಾರೆ. ಗುರುವಾರ ನಸುಕಿನ ಹೊತ್ತು ಭದ್ರತಾ ಪಡೆ ಮತ್ತು ಉಗ್ರರ ನಡುವೆ ಭೀಕರ ಗುಂಡಿನ ಕಾಳಗ ನಡೆದಿದೆ. ಆರಂಭದಲ್ಲಿ ಓರ್ವ ಉಗ್ರನನ್ನು ಕೊಲ್ಲಲಾಗಿತ್ತು. ಬಳಿಕ ಇಬ್ಬರು ಬಲಿಯಾದರು. ಇದರೊಂದಿಗೆ ಕಳೆದ ಎರಡು ದಿನಗಳಲ್ಲಿ ಆರು ಉಗ್ರರನ್ನು ಬೇಟೆಯಾಡಿದಂತಾಗಿದೆ. ಪುಲ್ವಾಮ ಜಿಲ್ಲೆಯ ತ್ರಾಲ್‌ನ

ಎನ್‌ಕೌಂಟರ್‌ನಲ್ಲಿ ಜೈಶ್‌ನ ಮೂರು ಉಗ್ರರ ಹತ್ಯೆ Read More »

ಚೀನದ ಏರ್‌ ಡಿಫೆನ್ಸ್‌ ಸಿಸ್ಟಮನ್ನೇ ನಿಷ್ಕ್ರಿಯಗೊಳಿಸಿ ದಾಳಿ ಮಾಡಿದ ಭಾರತ

ಆಪರೇಷನ್‌ ಸಿಂಧೂರ ಕಾರ್ಯಾಚರಣೆಗೆ ಭಾರತ ಅನುಸರಿಸಿದ ಸಮರ ತಂತ್ರ ಬಹಿರಂಗ ನವದೆಹಲಿ: ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಧರ್ಮ ಕೇಳಿ ಗುಂಡಿಕ್ಕಿ ಕೊಂದ ಬಳಿಕ ಪಾಕಿಸ್ಥಾನದ ವಿರುದ್ಧ ಪ್ರತೀಕಾರ ತೀರಿಸಲು ಭಾರತ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಒಂದೊಂದೇ ಮಾಹಿತಿ ಈಗ ಬಹಿರಂಗವಾಗುತ್ತಿದೆ. ಭಾರತದ ವಾಯುಪಡೆಗೆ ಪಾಕಿಸ್ಥಾನದ ಒಂಭತ್ತು ಉಗ್ರನೆಲೆಗಳ ಮೇಲೆ ದಾಳಿ ನಡೆಸಲು ಬರೀ 23 ನಿಮಿಷ ಬೇಕಾಗಿತ್ತು. ಈ 23 ನಿಮಿಷ ಪಾಕಿಸ್ಥಾನಕ್ಕೆ ಚೀನ ಕೊಟ್ಟಿದ್ದ ಏರ್‌ ಡಿಫೆನ್ಸ್‌ ಸಿಸ್ಟಮನ್ನೇ ಭಾರತ ನಿಷ್ಕ್ರಿಯಗೊಳಿಸಿತ್ತು. ತನ್ನ ಆಪ್ತ

ಚೀನದ ಏರ್‌ ಡಿಫೆನ್ಸ್‌ ಸಿಸ್ಟಮನ್ನೇ ನಿಷ್ಕ್ರಿಯಗೊಳಿಸಿ ದಾಳಿ ಮಾಡಿದ ಭಾರತ Read More »

ಪಾಕಿಸ್ಥಾನದಲ್ಲಿ ವಿಕಿರಣ ಸೋರಿಕೆಯಾಗಿಲ್ಲ : ವಿಶ್ವಸಂಸ್ಥೆ ಸ್ಪಷ್ಟನೆ

ಅಣ್ವಸ್ತ್ರಗಳ ಮೇಲೆ ದಾಳಿಯಾಗಿರುವುದನ್ನು ಅಲ್ಲಗಳೆದ ಪರಮಾಣು ಕಾವಲು ಸಂಸ್ಥೆ ಇಸ್ಲಾಮಾಬಾದ್ : ಆಪರೇಷನ್ ಸಿಂಧೂರ ಅಡಿಯಲ್ಲಿ ಪಾಕಿಸ್ಥಾನದಲ್ಲಿ ಭಾರತೀಯ ವಾಯುಪಡೆ ನಡೆಸಿದ ಕಾರ್ಯಾಚರಣೆ ಬಳಿಕ ಕಿರಾನ ಬೆಟ್ಟಗಳಲ್ಲಿ ವಿಕಿರಣ ಸೋರಿಕೆಯಾಗುತ್ತಿದೆ ಎನ್ನುವ ವದಂತಿ ಸುಳ್ಳು ಎಂದು ವಿಶ್ವಸಂಸ್ಥೆಯ ಪರಮಾಣು ಕಾವಲು ಸಂಸ್ಥೆ ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ(ಐಎಇಎ) ಸ್ಪಷ್ಟಪಡಿಸಿದೆ. ಪಾಕಿಸ್ಥಾನದ ಯಾವುದೇ ಪರಮಾಣು ಸ್ಥಾವರದಿಂದ ವಿಕಿರಣ ಸೋರಿಕೆ ಅಥವಾ ಹೊರಸೂಸುವಿಕೆಯ ಯಾವುದೇ ಘಟನೆ ಸಂಭವಿಸಿಲ್ಲ ಎಂದು ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ ಪತ್ರಿಕಾ ವಿಭಾಗದ ಫ್ರೆಡೆರಿಕ್ ಡಹ್ಲ್

ಪಾಕಿಸ್ಥಾನದಲ್ಲಿ ವಿಕಿರಣ ಸೋರಿಕೆಯಾಗಿಲ್ಲ : ವಿಶ್ವಸಂಸ್ಥೆ ಸ್ಪಷ್ಟನೆ Read More »

ಆಪರೇಷನ್ ಸಿಂದೂರ್ | ಕನ್ನಡ ಪತ್ರಕರ್ತನ ಸೋದರ ಸಂಬಂಧಿಯ ಪತ್ನಿ ಫಿನಿಷ್ !

ಕಾಶ್ಮೀರ: ಪಾಕಿಸ್ತಾನದ ಉಗ್ರರ ದಾಳಿಗೆ ಪ್ರತೀಕಾರವಾಗಿ ನಡೆದ ಭಾರತೀಯ ಸೇನೆಯ ದಾಳಿಯಲ್ಲಿ ಕರ್ನಾಟಕದ ದಿನಪತ್ರಿಕೆಯೊಂದರ ಸಂಪಾದಕರ ಕುಟುಂಬದ ಮಹಿಳೆಯೊಬ್ಬಳು ಸಾವನ್ನಪ್ಪಿರುವ ಬಗ್ಗೆ ತಿಳಿದುಬಂದಿದೆ. ಈ ಕುರಿತು ಫೇಸ್‍ ಬುಕ್‍ ಮುಂತಾದ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಡಿದ್ದು, ಇದು ಸತ್ಯವೋ ಅಥವಾ ಸತ್ಯಕ್ಕೆ ದೂರವಾದದ್ದೋ ಎಂಬುದು ಇನ್ನೂ ತಿಳಿಯಬೇಕಾಗಿದೆ. ಸ್ಥಳೀಯ ಪತ್ರಿಕೆಯ ಸಂಪಾದಕ ಸಂಬಂಧಿಯ ಪತ್ನಿ ಹತ್ಯೆಯಾದ ಮಹಿಳೆಯಾಗಿದ್ದು, ಆಕೆ ISIS ಸಂಘಟನೆಯಲ್ಲಿ ಸಕ್ರಿಯಳಾಗಿದ್ದು, ಈ ಹಿಂದೆ NIA ಬಲೆಗೂ ಬಿದ್ದಿದ್ದಳು ಎನ್ನಲಾಗುತ್ತಿದೆ. ಸಭ್ಯ ಕುಟುಂಬ ಮೂಲದಿಂದ ಬಂದಿದ್ದ

ಆಪರೇಷನ್ ಸಿಂದೂರ್ | ಕನ್ನಡ ಪತ್ರಕರ್ತನ ಸೋದರ ಸಂಬಂಧಿಯ ಪತ್ನಿ ಫಿನಿಷ್ ! Read More »

ಮಣಿಪುರ : 10 ಉಗ್ರರು ಎನ್‌ಕೌಂಟರ್‌ನಲ್ಲಿ ಸಾವು

ಅಪಾರ ಶಸ್ತ್ರಾಸ್ತ್ರ ವಶ; ಮುಂದುವರಿದ ಕಾರ್ಯಾಚರಣೆ ಇಂಫಾಲ: ಮಣಿಪುರದ ಚಾಂದೆಲ್‌ ಜಿಲ್ಲೆಯಲ್ಲಿ ಬುಧವಾರ ಅಸ್ಸಾಂ ರೈಫಲ್ಸ್ ಘಟಕದ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ 10 ಉಗ್ರರು ಸಾವನ್ನಪ್ಪಿದ್ದಾರೆ. ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತ-ಮ್ಯಾನ್ಮಾರ್ ಗಡಿಗೆ ಸಮೀಪವಿರುವ ಚಾಂದೆಲ್ ಜಿಲ್ಲೆಯ ಖೆಂಗ್‌ಜಾಯ್ ತಹಸಿಲ್‌ನ ನ್ಯೂ ಸಮ್ತಾಲ್ ಗ್ರಾಮದ ಬಳಿ ಸಶಸ್ತ್ರ ಹೊಂದಿದ್ದ ವ್ಯಕ್ತಿಗಳ ಚಲನವಲನಗಳ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಸ್ಪಿಯರ್ ಕಾರ್ಪ್ಸ್ ಅಡಿಯಲ್ಲಿ ಅಸ್ಸಾಂ ರೈಫಲ್ಸ್ ಘಟಕ ಮೇ 14ರಂದು

ಮಣಿಪುರ : 10 ಉಗ್ರರು ಎನ್‌ಕೌಂಟರ್‌ನಲ್ಲಿ ಸಾವು Read More »

error: Content is protected !!
Scroll to Top