ದೇಶ

ಭಾಗಮತಿ ಎಕ್ಸ್‌ಪ್ರೆಸ್‌ ರೈಲು ಅಪಘಾತ ಉದ್ದೇಶಪೂರ್ವಕ ದುಷ್ಕೃತ್ಯ : ತನಿಖಾ ವರದಿಯಲ್ಲಿ ಬಹಿರಂಗ

ಹಳಿಯ ಇಂಟರ್‌ಲಾಕ್‌ ಕಿತ್ತು ಹಾಕಿದ ಪರಿಣಾಮ ಭೀಕರ ಅಪಘಾತ ಚೆನ್ನೈ: ಕಳೆದ ವರ್ಷ ಮೈಸೂರಿನಿಂದ ದರ್ಭಾಂಗಗೆ ಹೋಗುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್‌ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತ ಉದ್ದೇಶಿತ ದುಷ್ಕೃತ್ಯ. ಹಳಿ ಇಂಟರ್‌ಲಾಕ್ ತೆಗೆದು ದುಷ್ಕೃತ್ಯ ಎಸಗಿದ್ದಾರೆ ಎಂದು ರೈಲ್ವೆ ಸುರಕ್ಷತಾ ಆಯುಕ್ತರು ತನಿಖಾ ವರದಿಯಲ್ಲಿ ಬಹಿರಂಗಪಡಿಸಿದ್ದಾರೆ. ಈ ಕುರಿತು ದಕ್ಷಿಣ ರೈಲ್ವೆ ವಲಯದ ರೈಲ್ವೆ ಸುರಕ್ಷತಾ ವಿಭಾಗದ ಆಯುಕ್ತ ಎ.ಎಂ.ಚೌಧರಿ, ಕಳೆದ ವರ್ಷ ಅಕ್ಟೋಬರ್‌ 11ರಂದು ಚೆನ್ನೈ ಸಮೀಪದ ಕವರೈ ಪಟ್ಟಿ ರೈಲ್ವೆ […]

ಭಾಗಮತಿ ಎಕ್ಸ್‌ಪ್ರೆಸ್‌ ರೈಲು ಅಪಘಾತ ಉದ್ದೇಶಪೂರ್ವಕ ದುಷ್ಕೃತ್ಯ : ತನಿಖಾ ವರದಿಯಲ್ಲಿ ಬಹಿರಂಗ Read More »

ಎನ್‌ಕೌಂಟರ್‌ಗೆ ಇನ್ನೋರ್ವ ಉಗ್ರ ಬಲಿ

ರಾತ್ರಿಯಿಡೀ ನಡೆದ ಕಾರ್ಯಾಚರಣೆ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ನಡೆಯುತ್ತಿರುವ ʻಆಪರೇಷನ್‌ ಅಖಾಲ್‌ʼ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಗುಪ್ತಚರ ಮಾಹಿತಿ ಪಡೆದ ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ʻಆಪರೇಷನ್‌ ಅಖಾಲ್‌ʼ ಹೆಸರಿನಲ್ಲಿ ಕಾರ್ಯಾಚರಣೆ ಶುರು ಮಾಡಿತು. ಅರಣ್ಯ ಪ್ರದೇಶ ಸುತ್ತುವರಿದು ಶೋಧ ಆರಂಭಿಸಿದ ಭದ್ರತಾ

ಎನ್‌ಕೌಂಟರ್‌ಗೆ ಇನ್ನೋರ್ವ ಉಗ್ರ ಬಲಿ Read More »

ಮಲಯಾಳಂ ಚಿತ್ರರಂಗದ ಜನಪ್ರಿಯ ಹಾಸ್ಯನಟ ಹೋಟೆಲ್‌ ಕೋಣೆಯಲ್ಲಿ ನಿಗೂಢವಾಗಿ ಸಾವು

ಶೂಟಿಂಗ್‌ ಮುಗಿಸಿ ಬಂದ ನಟ ಶವವಾಗಿ ಪತ್ತೆ ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಜನಪ್ರಿಯ ಹಾಸ್ಯನಟ ಕಲಾಭವನ್ ನವಾಸ್ (51) ಶುಕ್ರವಾರ ರಾತ್ರಿ ಛೋಟಾನಿಕ್ಕರದಲ್ಲಿರುವ ಹೋಟೆಲ್ ಒಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದಾರೆ. ನವಾಸ್ ಮುಂದಿನ ‘ಪ್ರಕಂಬನಂʼ ಚಲನಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸುತ್ತಿದ್ದರು. ಶುಕ್ರವಾರ ರಾತ್ರಿ ಚಿತ್ರೀಕರಣ ಮುಗಿಸಿ ಹೋಟೆಲ್‌ನಿಂದ ಚೆಕ್‌ಔಟ್ ಮಾಡಬೇಕಿತ್ತು. ಆದರೆ, ಸಮಯಕ್ಕೆ ತಮ್ಮ ಕೋಣೆಯಿಂದ ನಿರ್ಗಮಿಸದ ಕಾರಣ ರೂಮ್ ಬಾಯ್ ಅವರು ಹೋಗಿ ನೋಡಿದಾಗ ನವಾಸ್ ಅವರು ಪ್ರಜ್ಞೆತಪ್ಪಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ಯಲಾಯಿತು,

ಮಲಯಾಳಂ ಚಿತ್ರರಂಗದ ಜನಪ್ರಿಯ ಹಾಸ್ಯನಟ ಹೋಟೆಲ್‌ ಕೋಣೆಯಲ್ಲಿ ನಿಗೂಢವಾಗಿ ಸಾವು Read More »

ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಮೋಹನ್‌ ಭಾಗವತ್‌ರನ್ನು ಸಿಲುಕಿಸಲು ಆದೇಶಿಸಲಾಗಿತ್ತು

ತನಿಖೆ ನಡೆಸಿದ ಎಟಿಎಸ್‌ ಅಧಿಕಾರಿ ಬಹಿರಂಗಪಡಿಸಿದ ಸ್ಫೋಟಕ ಮಾಹಿತಿ ಮುಂಬೈ : ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಆರ್​​ಎಸ್​ಎಸ್​ ಸರಸಂಘಚಾಲಕ ಮೋಹನ್ ಭಾಗವತ್ ಅವರನ್ನು ಸಿಲುಕಿಸುವ ಪಿತೂರಿ ನಡೆದಿತ್ತು ಎಂದು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ಪಡೆಯ (ಎಟಿಎಸ್‌) ಮಾಜಿ ಅಧಿಕಾರಿ ಮೆಹಬೂಬ್ ಮುಜಾವರ್ ಬಹಿರಂಗಪಡಿಸಿದ್ದಾರೆ. 2008ರ ಮಾಲೇಗಾಂವ್ ಸ್ಫೋಟ ಪ್ರಕರಣದ ತನಿಖೆ ನಡೆಸಿದ್ದ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಮಾಜಿ ಅಧಿಕಾರಿಯೊಬ್ಬರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಬಂಧಿಸುವಂತೆ ಒತ್ತಡವಿತ್ತು ಮತ್ತು

ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಮೋಹನ್‌ ಭಾಗವತ್‌ರನ್ನು ಸಿಲುಕಿಸಲು ಆದೇಶಿಸಲಾಗಿತ್ತು Read More »

ಗ್ಯಾಸ್‌ ಸಿಲಿಂಡರ್‌ ಬೆಲೆ 34 ರೂ. ಇಳಿಕೆ

ನಾಲ್ಕು ತಿಂಗಳಲ್ಲಿ ಸತತ ಕಡಿತ ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 33.50ರೂ.ನಷ್ಟು ಕಡಿತ ಮಾಡಿವೆ. ಕೋಲ್ಕತ್ತಾ ಮತ್ತು ಚೆನ್ನೈನಲ್ಲಿ ಅತಿ ಹೆಚ್ಚು ಕಡಿತ ಮಾಡಲಾಗಿದೆ. ಆದರೆ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮಹಾನಗರಗಳಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 33.5 ರೂ.ಗಳಿಂದ 34.5 ರೂ.ಗಳಿಗೆ ಇಳಿಸಲಾಗಿದೆ. ಚೆನ್ನೈಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಈಗ ಪ್ರತಿ ಸಿಲಿಂಡರ್‌ಗೆ 1,800 ರೂ.ಗಳಿಗಿಂತ

ಗ್ಯಾಸ್‌ ಸಿಲಿಂಡರ್‌ ಬೆಲೆ 34 ರೂ. ಇಳಿಕೆ Read More »

ಟ್ರಂಪ್ ಸತ್ತ ಆರ್ಥಿಕತೆ ಹೇಳಿಕೆಗೆ ಖಡಕ್ ತಿರುಗೇಟು ನೀಡಿದ ಭಾರತ

ನವದೆಹಲಿ: ಯಾವುದೇ ವ್ಯಾಪಾರ ಒಪ್ಪಂದದ ಸಂದರ್ಭದಲ್ಲಿ ದೇಶದ ಹಿತಾಸಕ್ತಿಗೆ ಆದ್ಯತೆ ನೀಡಲಾಗುತ್ತದೆ ಎಂದು ಕೇಂದ್ರ ಸಚಿವ ಪೀಯುಷ್ ಗೋಯಲ್ ಹೇಳಿದ್ದಾರೆ. ಭಾರತದ ಸತ್ತ ಆರ್ಥಿಕತೆ ಎಂದ ಅಮೆರಿಕಾ ಅಧ್ಯಕ್ಷ ಟ್ರಂಪ್ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಕಳೆದ ದಶಕದಲ್ಲಿ ಭಾರತ ದುರ್ಬಲ ಆರ್ಥಿಕತೆಯಿಂದ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಯಾಗಿ ಬೆಳೆಯುತ್ತಿದೆ ಎಂದಿದ್ದಾರೆ. ವಿಶ್ವದ ಆರ್ಥಿಕತೆಗಳಲ್ಲಿ ಭಾರತ ಬೆಳಗುತ್ತಿದೆ ಎಂದು ಜಾಗತಿಕ ಸಂಸ್ಥೆಗಳು, ಆರ್ಥಿಕ ತಜ್ಞರು ಹೇಳುತ್ತಿದ್ದಾರೆ ಎಂದು ಗೋಯಲ್ ನುಡಿದಿದ್ದಾರೆ.

ಟ್ರಂಪ್ ಸತ್ತ ಆರ್ಥಿಕತೆ ಹೇಳಿಕೆಗೆ ಖಡಕ್ ತಿರುಗೇಟು ನೀಡಿದ ಭಾರತ Read More »

ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣ : ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್‌ ದೋಷಮುಕ್ತಿ

17 ವರ್ಷದ ಬಳಿಕ ಎಲ್ಲ ಏಳು ಆರೋಪಿಗಳನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯ ಮುಂಬೈ: ನಾಸಿಕ್‌ ಸಮೀಪ ಮಾಲೇಗಾಂವ್‌ನಲ್ಲಿ 2008ರಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಸೇರಿ 7 ಆರೋಪಿಗಳನ್ನು ನ್ಯಾಯಾಲಯ ದೋಷಮುಕ್ತಿಗೊಳಿಸಿದೆ.ಪ್ರಕರಣ ಸಂಭವಿಸಿದ 17 ವರ್ಷಗಳ ಬಳಿಕ ತೀರ್ಪು ನೀಡುವ ಸಂದರ್ಭದಲ್ಲಿ ಎನ್‍ಐಎ ವಿಶೇಷ ಕೋರ್ಟ್ ಈ ಪ್ರಕರಣದ ತನಿಖೆಯೇ ಸರಿಯಾಗಿ ನಡೆದಿಲ್ಲ ಎಂದು ಅಭಿಪ್ರಾಯಪಟ್ಟು ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಏಪ್ರಿಲ್ 19ರಂದು ಪ್ರಕರಣದ ವಿಚಾರಣೆ ಮುಗಿಸಿದ್ದ ಕೋರ್ಟ್ ಮೇ

ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣ : ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್‌ ದೋಷಮುಕ್ತಿ Read More »

ಕಾಫಿರ್​ಗಳ ಮೇಲೆ ದಾಳಿ, ಸರ್ಕಾರ ಉರುಳಿಸಲು ಸಶಸ್ತ್ರ ದಂಗೆ : ಭಯಾನಕವಾಗಿದೆ ಲೇಡಿ ಟೆರರಿಸ್ಟ್‌ ಚಟುವಟಿಕೆ

ಆನ್‌ಲೈನ್‌ ಮೂಲಕ ಭಯೋತ್ಪಾದಕ ಚಟುವಟಿಕೆ ನಡೆಸುತ್ತಿದ್ದ ಶಮಾ ಪರ್ವೀನ್‌ ಅನ್ಸಾರಿ ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ಸೆರೆಯಾಗಿರುವ ಲೇಡಿ ಟೆರರಿಸ್ಟ್‌ ಶಮಾ ಪರ್ವೀನ್ ಅನ್ಸಾರಿ ಅಲ್‌ಖೈದಾ ಸಂಘಟನೆಯ ಸಿದ್ಧಾಂತ ಪ್ರಚಾರಕಳಾಗಿದ್ದಳು. ಕಾಫಿರರನ್ನು ಕೊಲ್ಲುವುದು, ಸರ್ಕಾರ ಉರುಳಿಸಲು ಸಶಸ್ತ್ರ ದಂಗೆ ಎಬ್ಬಿಸುವುದು, ಕೋಮು ಗಲಭೆ ಸೃಷ್ಟಿಸಿ ಅಶಾಂತಿ ಉಂಟು ಮಾಡುವುದು ಮುಂತಾದ ಕೆಲಸಗಳನ್ನು ಮಾಡಲು ಆಕೆಯನ್ನು ನೇಮಿಸಿಕೊಳ್ಳಲಾಗಿತ್ತು ಎಂಬ ಭಯಾನಕ ವಿಚಾರ ಹೊರಬಿದ್ದಿದೆ. ಅಲ್ ಖೈದಾ ಉಗ್ರ ಸಂಘಟನೆ ಪರ ಬೆಂಗಳೂರಿನಿಂದ ಜಿಹಾದಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಶಮಾ ಪರ್ವೀನ್

ಕಾಫಿರ್​ಗಳ ಮೇಲೆ ದಾಳಿ, ಸರ್ಕಾರ ಉರುಳಿಸಲು ಸಶಸ್ತ್ರ ದಂಗೆ : ಭಯಾನಕವಾಗಿದೆ ಲೇಡಿ ಟೆರರಿಸ್ಟ್‌ ಚಟುವಟಿಕೆ Read More »

ಜಗತ್ತಿನ ಅತಿ ದುಬಾರಿ ಉಪಗ್ರಹ ನಿಸಾರ್‌ ಇಂದು ಉಡಾವಣೆ

ಭಾರತ-ಅಮೆರಿಕ ಸಹಭಾಗಿತ್ವದಲ್ಲಿ 13 ಸಾವಿರ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ ಸೆಟಲೈಟ್‌ ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಮತ್ತು ಅಮೆರಿಕದ ನಾಸಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ನಾಸಾ – ಇಸ್ರೊ ಸಿಂಥೆಟಿಕ್ ಅಪರ್ಚರ್ ರೇಡಾರ್ ನಿಸಾರ್ ಉಪಗ್ರಹ ಇಂದು ಶ್ರೀಹರಿಕೋಟಾದಿಂದ ಉಡಾವಣೆಯಾಗಲಿದೆ. ʻನಿಸಾರ್ʼ ಭಾರತೀಯ ಕಾಲಮಾನದ ಪ್ರಕಾರ ಇಂದು ಸಂಜೆ 5.40ಕ್ಕೆ ಇಸ್ರೋದ GSLV-F16 ರಾಕೆಟ್‌ ಬೆನ್ನೇರಿ ಬಾಹ್ಯಾಕಾಶಕ್ಕೆ ತೆರಳಲಿದೆ. ಈ ಉಪಗ್ರಹವು ಶ್ರೀಹರಿಕೋಟದಿಂದ ಉಡಾವಣೆ ಆಗುತ್ತಿರುವ 102ನೇ ಉಪಗ್ರಹವಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ವಿಕೋಪ

ಜಗತ್ತಿನ ಅತಿ ದುಬಾರಿ ಉಪಗ್ರಹ ನಿಸಾರ್‌ ಇಂದು ಉಡಾವಣೆ Read More »

ಇನ್ನಿಬ್ಬರು ಉಗ್ರರನ್ನು ಸಾಯಿಸಿದ ಭದ್ರತಾ ಪಡೆ

ಗಡಿ ನುಸುಳಲು ಯತ್ನಿಸಿದ ಪಾಕ್‌ ಉಗ್ರರು ಗುಂಡಿಗೆ ಬಲಿ ಶ್ರೀನಗರ: ಪಹಲ್ಗಾಮ್‌ ದಾಳಿಯ ಪಾತಕಿ ಹಾಶಿಮ್‌ ಮೂಸಾ ಸಹಿತ ಮೂವರು ಉಗ್ರರನ್ನು ಸಾಯಿಸಿದ ಬೆನ್ನಲ್ಲೇ ಮತ್ತಿಬ್ಬರು ಉಗ್ರರನ್ನು ಭದ್ರತಾ ಪಡೆ ಬೇಟೆಯಾಡಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಛ್‌ನಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಹತ್ಯೆಯಾದ ಇಬ್ಬರು ಉಗ್ರರು ಕಾಶ್ಮೀರದ ಪೂಂಛ್‌ ಜಿಲ್ಲೆಯ ದೇಗ್ವಾರ್ ಸೆಕ್ಟರ್‌ನ ನಿಯಂತ್ರಣ ರೇಖೆಯ ಬಳಿ ಒಳನುಸುಳಲು ಯತ್ನಿಸಿದ್ದರು. ಭಾರಿ ಮಳೆ ನಡುವೆಯೂ ಮೂವರು ಪಿಒಕೆ

ಇನ್ನಿಬ್ಬರು ಉಗ್ರರನ್ನು ಸಾಯಿಸಿದ ಭದ್ರತಾ ಪಡೆ Read More »

error: Content is protected !!
Scroll to Top