ದೇಶ

ಉಗ್ರ ಹಾಫಿಜ್‌ ಸಯೀದ್‌ನನ್ನು ಭೇಟಿಯಾದದ್ದಕ್ಕೆ ಧನ್ಯವಾದ ಹೇಳಿದ್ದ ಮನಮೋಹನ್‌ ಸಿಂಗ್‌

ದೇಶಾದ್ಯಂತ ಕೋಲಾಹಲ ಸೃಷ್ಟಿಸಿದ ಭಯೋತ್ಪಾದಕ ಯಾಸಿನ್‌ ಮಲಿಕ್‌ ಹೇಳಿಕೆ ನವದೆಹಲಿ: ಜಾಗತಿಕ ಭಯೋತ್ಪಾದಕ ಲಷ್ಕರ್-ಎ-ತೈಬಾ ಸ್ಥಾಪಕ ಹಾಫಿದ್‌ ಸಯೀದ್‌ನನ್ನು ಪಾಕಿಸ್ತಾನದಲ್ಲಿ ಭೇಟಿ ಮಾಡಿ ಬಂದದ್ದಕ್ಕೆ ಅಂದಿನ ಪ್ರಧಾನಮಂತ್ರಿ ಮನಮೋಹನ್‌ ಸಿಂಗ್‌ ತನಗೆ ಧನ್ಯವಾದ ಹೇಳಿದ್ದರು ಎಂಬುದಾಗಿ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಹಾಗೂ ಉಗ್ರ ಯಾಸಿನ್‌ ಮಲಿಕ್‌ ಹೇಳಿರುವುದು ದೇಶದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. 26/11 ದಾಳಿ ಸೇರಿದಂತೆ ಭಾರತದಲ್ಲಿ ಸಂಭವಿಸಿದ ಹಲವು ಭೀಕರ ಭಯೋತ್ಪಾದಕ ಕೃತ್ಯಗಳ ಮಾಸ್ಟರ್‌ಮೈಂಡ್ ಆಗಿರುವ ಹಾಫೀಜ್ ಸಯೀದ್‌ನನ್ನು ಭೇಟಿಯಾದ ನಂತರ ಅಂದಿನ ಪ್ರಧಾನಿ ಮನಮೋಹನ […]

ಉಗ್ರ ಹಾಫಿಜ್‌ ಸಯೀದ್‌ನನ್ನು ಭೇಟಿಯಾದದ್ದಕ್ಕೆ ಧನ್ಯವಾದ ಹೇಳಿದ್ದ ಮನಮೋಹನ್‌ ಸಿಂಗ್‌ Read More »

ಆರು ಸಾವಿರ ಮತದಾರರನ್ನು ಡಿಲೀಟ್‌ ಮಾಡಿಲ್ಲ, ಅರ್ಜಿ ತಿರಸ್ಕರಿಸಲಾಗಿದೆ : ರಾಹುಲ್‌ ಗಾಂಧಿ ಆರೋಪಕ್ಕೆ ಸ್ಪಷ್ಟನೆ

ಆನ್‌ಲೈನ್‌ ಮೂಲಕ ಮತದಾರರ ಹೆಸರು ಅಳಿಸುವುದು ಅಸಾಧ್ಯ ಎಂದ ಚುನಾವಣಾ ಆಯೋಗ ಬೆಂಗಳೂರು: ಕರ್ನಾಟಕದ ಆಳಂದದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಕುರಿತು ರಾಹುಲ್‌ ಗಾಂಧಿ ಮಾಡಿರುವ ಆರೋಪಗಳಿಗೆ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ. ನಿನ್ನೆ ದೆಹಲಿಯಲ್ಲಿ ರಾಹುಲ್‌ ಗಾಂಧಿ ಸುದ್ದಿಗೋಷ್ಠಿ ನಡೆಸಿ ಕರ್ನಾಟಕದ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಆರು ಸಾವಿರಕ್ಕೂ ಅಧಿಕ ಮತಕಳ್ಳತನವಾಗಿದೆ. ಮತದಾರರ ಹೆಸರುಗಳನ್ನು ಆನ್‌ಲೈನ್‌ ಮೂಲಕ ಅಳಿಸಿ ಹಾಕಲಾಗಿದೆ ಎಂದು ಆರೋಪಿಸಿ ಇದಕ್ಕೆ ಇಬ್ಬರು ಸಾಕ್ಷಿಧಾರರನ್ನೂ ಹಾಜರುಪಡಿಸಿದ್ದರು. 2013ರ ವಿಧಾನಸಭೆ ಚುನಾವಣೆಯಲ್ಲಿ ಆಳಂದ ಕ್ಷೇತ್ರದಲ್ಲಿ

ಆರು ಸಾವಿರ ಮತದಾರರನ್ನು ಡಿಲೀಟ್‌ ಮಾಡಿಲ್ಲ, ಅರ್ಜಿ ತಿರಸ್ಕರಿಸಲಾಗಿದೆ : ರಾಹುಲ್‌ ಗಾಂಧಿ ಆರೋಪಕ್ಕೆ ಸ್ಪಷ್ಟನೆ Read More »

ಪ್ರಧಾನಿ ಮೋದಿ, ಅವರ ತಾಯಿಗೆ ಅವಮಾನ: ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗ ‌ಮಾಡಿದ ಕೋರ್ಟ್ ತೀರ್ಪು

ಪಾಟ್ನಾ: ಪ್ರಧಾನಿ ಮೋದಿ ಮತ್ತು ಅವರ ತಾಯಿಯ AI ವಿಡಿಯೋಗಳನ್ನು ಪೋಸ್ಟ್ ಮಾಡಿರುವ ಎಲ್ಲಾ ಸಾಮಾಜಿಕ ಜಾಲತಾಣ ಖಾತೆಗಳಿಂದಲೂ ತೆಗೆದು ಹಾಕುವಂತೆ ಕಾಂಗ್ರೆಸ್ ಪಕ್ಷಕ್ಕೆ ಪಾಟ್ನಾ ಹೈಕೋರ್ಟ್ ಆದೇಶ ನೀಡಿದ್ದು, ಇದು ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗ ಉಂಟುಮಾಡಿದೆ. ಪಾಟ್ನಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಪಿ. ಬಿ. ಬಜಂತ್ರಿ ಅವರು ಈ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾ ಖಾತೆಗಳಿಂದ ಅಳಿಸಿ ಹಾಕುವಂತೆ ಕಾಂಗ್ರೆಸ್ ಪಕ್ಷಕ್ಕೆ ನಿರ್ದೇಶನ ನೀಡಿರುವುದಾಗಿದೆ. ಸೆ. 10 ರಂದು ಬಿಹಾರದ ಕಾಂಗ್ರೆಸ್ ಘಟಕ 36

ಪ್ರಧಾನಿ ಮೋದಿ, ಅವರ ತಾಯಿಗೆ ಅವಮಾನ: ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗ ‌ಮಾಡಿದ ಕೋರ್ಟ್ ತೀರ್ಪು Read More »

ಪ್ರಧಾನಿ ಮೋದಿ ಜನ್ಮದಿನ: ಶುಭಾಶಯ ಕೋರಿ ಟ್ವೀಟ್ ಮಾಡಿದ ಅಮಿತ್ ಶಾ

ನವದೆಹಲಿ: ಪ್ರಧಾನಿ ಮೋದಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕೋಟ್ಯಂತರ ಭಾರತೀಯರಿಗೆ ಪ್ರಧಾನಿ ಮೋದಿ ಅವರು ಸ್ಫೂರ್ತಿ ಎಂದು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ತ್ಯಾಗ ಮತ್ತು ಸಮರ್ಪಣೆಗಳ ಸಂಕೇತ. ಕೋಟ್ಯಂತರ ದೇಶವಾಸಿಗಳಿಗೆ ‌ಸ್ಪೂರ್ತಿ. 75 ನೇ ಜನ್ಮದಿನವನ್ನು ಆಚರಣೆ ಮಾಡಿಕೊಳ್ಳುತ್ತಿರುವ ಅವರಿಗೆ ಜನ್ಮದಿನದ ಶುಭಾಶಯಗಳು. ಸಾರ್ವಜನಿಕ ಜೀವನದಲ್ಲಿ ಸುಮಾರು ಐದು ದಶಕಗಳಿಗೂ ಹೆಚ್ಚಿನ

ಪ್ರಧಾನಿ ಮೋದಿ ಜನ್ಮದಿನ: ಶುಭಾಶಯ ಕೋರಿ ಟ್ವೀಟ್ ಮಾಡಿದ ಅಮಿತ್ ಶಾ Read More »

ಭಾರತ – ಪಾಕ್ ಕದನ ವಿರಾಮದಲ್ಲಿ ಅಮೆರಿಕಾದ ಪಾತ್ರ ಇಲ್ಲ: ಪಾಕ್ ಹೇಳಿಕೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮ ಘೋಷಣೆಯಲ್ಲಿ ಅಮೆರಿಕಾದ ಪಾತ್ರ ಇಲ್ಲ ಎಂದು ಸ್ವತಃ ಪಾಕಿಸ್ತಾನವೇ ಒಪ್ಪಿಕೊಂಡಿದೆ. ಪಾಕ್ ನಡೆಸಿದ ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತ ಕೊಟ್ಟ ಆಪರೇಷನ್ ಸಿಂಧೂರ್ ಎಂಬ ಶಾಕ್‌ನ ನಂತರ ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಈ ಮಾತುಗಳನ್ನು ಹೇಳಿದ್ದಾರೆ. ನಾವು ಭಾರತದ ಜೊತೆಗೆ ಮಾತುಕತೆ ನಡೆಸಲು ಬಯಸುತ್ತೇವೆ. ಆದರೆ ಈ ಸಂಬಂಧ ಭಾರತದಿಂದ ನಮಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹಾಗೆಯೇ ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತ ಯಾವ

ಭಾರತ – ಪಾಕ್ ಕದನ ವಿರಾಮದಲ್ಲಿ ಅಮೆರಿಕಾದ ಪಾತ್ರ ಇಲ್ಲ: ಪಾಕ್ ಹೇಳಿಕೆ Read More »

ಪ್ರಧಾನಿ ಮೋದಿ ಜನ್ಮದಿನ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಶುಭಾಶಯ

ನವದೆಹಲಿ: ಇಂದು ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾಗಿದ್ದು, ಅವರು ತಮ್ಮ 75 ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಸಂಬಂಧ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ಪ್ರಧಾನಿ ಮೋದಿ ಅವರು ತಮ್ಮ ಅಸಾಧಾರಣ ನಾಯಕತ್ವ ಗುಣಗಳ ಮೂಲಕ ಭಾರತದಲ್ಲಿ ಮಹಾನ್ ಗುರಿಗಳನ್ನು ಸಾಧಿಸುವ ಸಂಸ್ಕೃತಿಯನ್ನು ಹುಟ್ಟು ಹಾಕಿದ್ದಾರೆ. ಕಠಿಣ ಪರಿಶ್ರಮದ ಪರಾಕಾಷ್ಠೆಯ ಮೂಲಕ ಮಾದರಿಯಾಗಿದ್ದಾರೆ ಎಂದು ಅವರು ನುಡಿದಿದ್ದಾರೆ.

ಪ್ರಧಾನಿ ಮೋದಿ ಜನ್ಮದಿನ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಶುಭಾಶಯ Read More »

ಇಂದು ಪ್ರಧಾನಿ ಮೋದಿಗೆ 75ನೇ ಹುಟ್ಟುಹಬ್ಬ ಸಂಭ್ರಮ : ದೇಶಾದ್ಯಂತ ಸೇವಾ ಕಾರ್ಯಗಳು

ಶುಭಾಶಯ ಕೋರಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ 75 ವರ್ಷ ತುಂಬಿದ್ದು, ಇದರ ಭಾಗವಾಗಿ ಬಿಜೆಪಿ ದೇಶಾದ್ಯಂತ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ರಕ್ತದಾನ, ಆರೋಗ್ಯ ತಪಾಸಣೆ ಶಿಬಿರಗಳಿಂದ ಹಿಡಿದು ಸರ್ಕಾರಿ ಯೋಜನೆಗಳನ್ನು ಜಾರಿಗೊಳಿಸುವ ತನಕ ವಿವಿಧ ರಾಜ್ಯಗಳು ನಾನಾ ಯೋಜನೆ ಜಾರಿ ಸೇರಿದಂತೆ ಅನೇಕ ಜನಪರವಾದ ಸೇವೆಗಳನ್ನು ಮಾಡಲಾಗುತ್ತದೆ. ಪ್ರತಿವರ್ಷದಂತೆ ಸೆ.17ರಿಂದ ತೊಡಗಿ ಗಾಂಧಿ ಜಯಂತಿ ದಿನವಾದ ಅ.2ರ ತನಕ ಸೇವಾ ಪಾಕ್ಷಿಕ ನಡೆಯಲಿದೆ. ಸ್ವಚ್ಛತೆ ಸೇರಿದಂತೆ

ಇಂದು ಪ್ರಧಾನಿ ಮೋದಿಗೆ 75ನೇ ಹುಟ್ಟುಹಬ್ಬ ಸಂಭ್ರಮ : ದೇಶಾದ್ಯಂತ ಸೇವಾ ಕಾರ್ಯಗಳು Read More »

ಕಾಂಗ್ರೆಸ್, ಆರ್‌ಜೆಡಿ ಮೇಲೆ ಪ್ರಧಾನಿ ಮೋದಿ ಆಕ್ರೋಶ

ನವದೆಹಲಿ: ಕಾಂಗ್ರೆಸ್ ಮತ್ತು ಆರ್‌ಜೆ‌ಡಿ ಪಕ್ಷಗಳು ಅಸ್ಸಾಂ, ಬಿಹಾರ, ಬಂಗಾಳದಲ್ಲಿ ನುಸುಳುಕೋರರನ್ನು ಪೋಷಣೆ ಮಾಡುವ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ಮೋದಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನುಸುಳುಕೋರರ ರಕ್ಷಣೆಗಾಗಿ ವಿಪಕ್ಷಗಳಾದ ಆರ್‌ಜೆಡಿ ‌ಮತ್ತು ಕಾಂಗ್ರೆಸ್ ಯಾತ್ರೆಗಳನ್ನು ‌ನಡೆಸುತ್ತಿವೆ ಎಂದು ಅವರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನದಂದು ತಾವು ಮಾಡಿದ ಭಾಷಣವನ್ನು ಉಲ್ಲೇಖಿಸಿ ಮಾತನಾಡಿ ರಾಷ್ಟ್ರೀಯ ಜನಸಂಖ್ಯಾ ಮಿಷನ್ ಅನ್ನು ಘೋಷಣೆ ಮಾಡಿದೆ. ಸಿಯಾಚಿನ್ ಮತ್ತು ಪೂರ್ವ ಭಾರತದಲ್ಲಿ ಒಳನುಸುಳುವಿಕೆಯ ಕಾರಣದಿಂದ ಜನಸಂಖ್ಯಾ ಸ್ಫೋಟ

ಕಾಂಗ್ರೆಸ್, ಆರ್‌ಜೆಡಿ ಮೇಲೆ ಪ್ರಧಾನಿ ಮೋದಿ ಆಕ್ರೋಶ Read More »

ವಕ್ಫ್‌ ನಿಬಂಧನೆಗೆ ಸುಪ್ರೀಂ ಕೋರ್ಟ್‌ ತಡೆ

ಐದು ವರ್ಷ ಮುಸ್ಲಿಮ್‌ ಆಗಿದ್ದರೆ ಮಾತ್ರ ವಕ್ಫ್‌ ರಚನೆಗೆ ಅವಕಾಶ ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆ 2025ರಲ್ಲಿನ ನಿಬಂಧನೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಡೆಹಿಡಿದಿದ್ದು, ಒಬ್ಬ ವ್ಯಕ್ತಿ ವಕ್ಫ್ ರಚಿಸಲು ಐದು ವರ್ಷಗಳ ಕಾಲ ಮುಸ್ಲಿಂ ಆಗಿರಬೇಕು ಎಂದು ಆದೇಶಿಸಿದೆ. ರಾಜ್ಯ ಸರ್ಕಾರಗಳು ಒಬ್ಬ ವ್ಯಕ್ತಿಯು ಇಸ್ಲಾಂ ಧರ್ಮದ ಅನುಯಾಯಿಯಾಗಿ ಅರ್ಹತೆ ಪಡೆಯುತ್ತಾನೆಯೇ ಎಂದು ನಿರ್ಧರಿಸಲು ನಿಯಮಗಳನ್ನು ರೂಪಿಸುವವರೆಗೆ ಈ ಷರತ್ತು ಅಮಾನತಿನಲ್ಲಿರಲಿದೆ ಎಂದು ನಿರ್ದೇಶಿಸಿದೆ. ವಿಚಾರಣೆಯ ಸಮಯದಲ್ಲಿ, ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ

ವಕ್ಫ್‌ ನಿಬಂಧನೆಗೆ ಸುಪ್ರೀಂ ಕೋರ್ಟ್‌ ತಡೆ Read More »

ಏಷ್ಯಾಕಪ್‌ : ಭಾರಿ ವಿರೋಧದ ನಡುವೆ ಇಂದು ಭಾರತ-ಪಾಕಿಸ್ತಾನ ಪಂದ್ಯ

ಪಹಲ್ಗಾಮ್‌ ಉಗ್ರ ದಾಳಿಯ ಕರಿನೆರಳಲ್ಲಿ ನಡೆಯುವ ಪಂದ್ಯಕ್ಕೆ ಭಾರತದಲ್ಲಿ ಆಕ್ಷೇಪ ನವದೆಹಲಿ : ಭಾರತೀಯರ ಭಾರಿ ವಿರೋಧದ ನಡುವೆ ಭಾರತ-ಪಾಕಿಸ್ತಾನ ಏಷ್ಯಾಕಪ್‌ನಲ್ಲಿ ಇಂದು ದುಬೈಯಲ್ಲಿ ಮುಖಾಮುಖಿಯಾಗಲಿವೆ.2025ರ ಏಷ್ಯಾಕಪ್‌ನ ತನ್ನ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ, ಪಾಕಿಸ್ತಾನವನ್ನು ಎದುರಿಸಲಿದೆ. ಗ್ರೂಪ್ ಎ ನಲ್ಲಿರುವ ಈ ಎರಡೂ ತಂಡಗಳಿಗೆ ಇದು ಎರಡನೇ ಪಂದ್ಯವಾಗಿದೆ. ನಾಯಕ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಮೊದಲ ಪಂದ್ಯದಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಿ 9 ವಿಕೆಟ್‌ಗಳಿಂದ

ಏಷ್ಯಾಕಪ್‌ : ಭಾರಿ ವಿರೋಧದ ನಡುವೆ ಇಂದು ಭಾರತ-ಪಾಕಿಸ್ತಾನ ಪಂದ್ಯ Read More »

error: Content is protected !!
Scroll to Top