ದೇಶ

ದ್ವೇಷ ಭಾಷಣಗಳನ್ನು ನಿಯಂತ್ರಿಸಲು ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ದ್ವೇಷ ಭಾಷಣ ನಿಯಂತ್ರಣ ಮಾಡುವಂತೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ನಿಯಂತ್ರಿಸುವ ಹಾಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ಮತ್ತು ನ್ಯಾಯಮೂರ್ತಿ ಕೆ.ವಿ.‌ ವಿಶ್ವನಾಥನ್ ಅವರಿದ್ದ ನ್ಯಾಯ ಪೀಠವು ಸರ್ಕಾರಗಳು ಜನರಿಗೆ ವಾಕ್ ಸ್ವಾತಂತ್ರ್ಯದ ಮೌಲ್ಯಗಳನ್ನು ತಿಳಿಸುವ ಕೆಲಸ ಮಾಡಬೇಕು ಎಂದಿದೆ. ಇನ್ಸ್ಟಾಗ್ರಾಮ್ ಇನ್ಫುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ದೂರುದಾರ ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಿ ಕೋರ್ಟ್ ಈ ಸೂಚನೆ ನೀಡಿರುವುದಾಗಿದೆ. ದ್ವೇಷ ಭಾಷಣಗಳನ್ನು ನಿಯಂತ್ರಣ ಮಾಡಬೇಕು. […]

ದ್ವೇಷ ಭಾಷಣಗಳನ್ನು ನಿಯಂತ್ರಿಸಲು ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ Read More »

ವೈವಾಹಿಕ ಸಂಬಂಧ ಸಮಸ್ಯೆಗೆ ರಹಸ್ಯ ಕಾಲ್ ರೆಕಾರ್ಡ್ ಸಾಕ್ಷ್ಯವಾಗುತ್ತದೆ: ಸುಪ್ರೀಂ ಕೋರ್ಟ್

ನವದೆಹಲಿ: ಸಂಗಾತಿಯ ಸಂಭಾಷಣೆಯನ್ನು ರಹಸ್ಯವಾಗಿ ರೆಕಾರ್ಡ್ ಮಾಡಿ ಅದನ್ನು ವೈವಾಹಿಕ ಸಮಸ್ಯೆಗಳ ಸಂದರ್ಭದಲ್ಲಿ ಬಳಕೆ ಮಾಡಿಕೊಳ್ಳುವುದು ಸ್ವೀಕಾರಾರ್ಹ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಗಂಡ ಹೆಂಡತಿ ಒಬ್ಬರ ಮೇಲೊಬ್ಬರು ಬೇಹುಗಾರಿಕೆ ಮಾಡುತ್ತಿದ್ದಾರೆ, ರಹಸ್ಯವಾಗಿ ಸಂಭಾಷಣೆಗಳ ರೆಕಾರ್ಡ್ ಮಾಡುತ್ತಿದ್ದಾರೆ ಎಂದರೆ ಅವರಿಬ್ಬರ ದಾಂಪತ್ಯದಲ್ಲಿ ಏನೋ ಸಮಸ್ಯೆ ಇದೆ ಎಂದರ್ಥ ಎಂದು ನ್ಯಾಯಮೂರ್ತಿ ಬಿ.ವಿ. ನಾಗರತ್ನ, ನ್ಯಾ. ಸಂತೋಷ್‌ಚಂದ್ರ ಅವರಿದ್ದ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಆ ಮೂಲಕ ದಂಪತಿಗಳ ನಡುವಿನ ರಹಸ್ಯ ಸಂಭಾಷಣೆಯು ಸಾಕ್ಷ್ಯ ಕಾಯ್ದೆಯಡಿ ರಕ್ಷಿಸಲ್ಪಟ್ಟಿದ್ದು, ಅದನ್ನು

ವೈವಾಹಿಕ ಸಂಬಂಧ ಸಮಸ್ಯೆಗೆ ರಹಸ್ಯ ಕಾಲ್ ರೆಕಾರ್ಡ್ ಸಾಕ್ಷ್ಯವಾಗುತ್ತದೆ: ಸುಪ್ರೀಂ ಕೋರ್ಟ್ Read More »

ಯುಪಿಐ ಜಗತ್ತಿನ ಅತಿದೊಡ್ಡ ಡಿಜಿಟಲ್‌ ಪಾವತಿ ವ್ಯವಸ್ಥೆ

200 ದೇಶಗಳಲ್ಲಿರುವ ವೀಸಾವನ್ನು ಹಿಂದಿಕ್ಕಿದ 7 ರಾಷ್ಟ್ರಗಳಲ್ಲಿರುವ ಯುಪಿಐ ನವದೆಹಲಿ: ಭಾರತದಲ್ಲಿ ಮೊಬೈಲ್ ಮೂಲಕ ನಡೆಯುವ ವಹಿವಾಟಿನ ಮೂಲವಾದ ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಈಗ ವಿಶ್ವದ ಅತಿದೊಡ್ಡ ಡಿಜಿಟಲ್ ಪಾವತಿ ವ್ಯವಸ್ಥೆಯಾಗಿ ಹೊರಹೊಮ್ಮಿದೆ. ಈ ಮೂಲಕ ಈ ವರೆಗೆ ನಂ.1 ಡಿಜಿಟಲ್ ಪಾವತಿ ವ್ಯವಸ್ಥೆಯಾಗಿದ್ದ ವೀಸಾವನ್ನು ಹಿಂದಿಕ್ಕಿದೆ. ನಿತ್ಯ 65 ಕೋಟಿ ರೂ. ವಹಿವಾಟು ನಡೆಸುವ ಮೂಲಕ ವೀಸಾವನ್ನು ಹಿಂದಿಕ್ಕಿ ಭಾರತದ ಯುಪಿಐ ವಿಶ್ವದಲ್ಲೇ ಅತೀ ದೊಡ್ಡ ಡಿಜಿಟಲ್ ಪಾವತಿ ವ್ಯವಸ್ಥೆಯಾಗಿ ಹೊರಹೊಮ್ಮಿದೆ. ಈ ಕುರಿತು

ಯುಪಿಐ ಜಗತ್ತಿನ ಅತಿದೊಡ್ಡ ಡಿಜಿಟಲ್‌ ಪಾವತಿ ವ್ಯವಸ್ಥೆ Read More »

ಲೈಂಗಿಕ ಕಿರುಕುಳ ಪ್ರತಿಭಟಿಸಿ ಕಾಲೇಜಲ್ಲೇ ಬೆಂಕಿ ಹಚ್ಚಿಕೊಂಡಿದ್ದ ವಿದ್ಯಾರ್ಥಿನಿ ಸಾವು

ಪ್ರಾಧ್ಯಾಪಕರ ಕಿರುಕುಳ ತಾಳಲಾರದೆ ಆತ್ಮಾಹುತಿಗೆ ಯತ್ನಿಸಿದ್ದ ಬಿ.ಎಡ್‌ ವಿದ್ಯಾರ್ಥಿನಿ ಭುವನೇಶ್ವರ : ಲೈಂಗಿಕ ಕಿರುಕುಳ ಪ್ರತಿಭಟಿಸಿ ಕಾಲೇಜಿನಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಾಹುತಿಗೆ ಯತ್ನಿಸಿದ್ದ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾಲೇಜಿನಲ್ಲಿ ಪ್ರಾಧ್ಯಾಪಕರು ದೀರ್ಘಕಾಲದಿಂದ ಆಕೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಇದರಿಂದ ಬೇಸರಗೊಂಡಿದ್ದ ಆಕೆ ಕಾಲೇಜಿನಲ್ಲೇ ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿ ಬೆಂಕಿ ಹಚ್ಚಿಕೊಂಡಿದ್ದರು. ಶೇ.90ರಷ್ಟು ಸುಟ್ಟ ಗಾಯಗಳಾಗಿದ್ದ ಆಕೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಬಾಲಸೋರ್​ನ ಫಕೀರ್ ಮೋಹನ್ ಸ್ವಾಯತ್ತ ಕಾಲೇಜಿನಲ್ಲಿ ಈ ಘಟನೆ ಸಂಭವಿಸಿದೆ. ವಿಭಾಗದ ಮುಖ್ಯಸ್ಥರು

ಲೈಂಗಿಕ ಕಿರುಕುಳ ಪ್ರತಿಭಟಿಸಿ ಕಾಲೇಜಲ್ಲೇ ಬೆಂಕಿ ಹಚ್ಚಿಕೊಂಡಿದ್ದ ವಿದ್ಯಾರ್ಥಿನಿ ಸಾವು Read More »

ಲಾರ್ಡ್ಸ್‌ನ ಐತಿಹಾಸಿಕ ಗೆಲುವಿನ ಅವಕಾಶ ಕೈಚೆಲ್ಲಿದ ಭಾರತ

ಬೈಸ್‌ ಮೂಲಕ ನೀಡಿದ 6 ಬೌಂಡರಿಗಳೇ ಭಾರತದ ಪಾಲಿಗೆ ಮುಳುವಾಯಿತು ಲಂಡನ್‌ : ಪ್ರತಿಷ್ಠಿ ಲಾರ್ಡ್ಸ್‌ ಅಂಗಣದಲ್ಲಿ ಸಿಬಹುದಾಗಿದ್ದ ಐತಿಹಾಸಿಕ ಗೆಲುವೊಂದನ್ನು ಕೈಚೆಲ್ಲಿ ಶುಭಮನ್‌ ಗಿಲ್‌ ಪಡೆ ಕೋಟ್ಯಂತರ ಕ್ರಿಕೆಟ್‌ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದೆ. ರವೀಂದ್ರ ಜಡೇಜಾ ಕೊನೆಯವರೆಗೂ ಜಾರಿಯಲ್ಲಿಟ್ಟ ಕೆಚ್ಚಿನ ಹೋರಾಟ ವ್ಯರ್ಥವಾಗಿ 22 ರನ್‌ಗಳಿಂದ ಭಾರತ ಅಂಗ್ಲರಿಗೆ ಶರಣಾಗಿದೆ. ಮೂರನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ನೀಡಿದ 193 ರನ್​ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 170 ರನ್​ಗಳಿಗೆ ಆಲೌಟ್

ಲಾರ್ಡ್ಸ್‌ನ ಐತಿಹಾಸಿಕ ಗೆಲುವಿನ ಅವಕಾಶ ಕೈಚೆಲ್ಲಿದ ಭಾರತ Read More »

ಕಮ್ಯುನಿಷ್ಟರ ದಾಳಿಯಲ್ಲಿ ಎರಡೂ ಕಾಲು ಕಳೆದುಕೊಂಡ ಸದಾನಂದ ಮಾಸ್ಟರ್ ರಾಜ್ಯಸಭೆಗೆ

ಎರಡೂ ಕಾಲು ಕಳೆದುಕೊಂಡ ಬಳಿಕವೂ ಛಲ ಬಿಡದೆ ಹೋರಾಡಿ ಗೆದ್ದ ಧೀರ ನವದೆಹಲಿ: ರಾಜ್ಯಸಭೆಗೆ ‌ನಾಲ್ವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಿನ್ನೆ ನಾಮನಿರ್ದೇಶನ ಮಾಡಿದ್ದಾರೆ. ಅವರಲ್ಲಿ ಹೆಚ್ಚು ಗಮನ ಸೆಳೆದದ್ದು ಕೇರಳದ ಸಿ. ಸದಾನಂದ ಮಾಸ್ಟರ್. ಇನ್ನುಳಿದವರು ಉಜ್ವಲ್ ನಿಕಮ್, ಹರ್ಷವರ್ಧನ್ ಶ್ರಿಂಗ್ಲಾ, ಮೀನಾಕ್ಷಿ ಜೈನ್ ಅವರನ್ನು ನಾಮ ನಿರ್ದೇಶನಗೊಂಡವರು. ಸಿ. ಸದಾನಂದ ಮಾಸ್ಟರ್ ನಾಮನಿರ್ದೇಶನ ನಿನ್ನೆಯಿಂದೀಚೆಗೆ ಸೋಷಿಯಲ್‌ ಮೀಡಿಯಾದಲ್ಲಿ ಬಹಳ ವೈರಲ್‌ ಆಗಿದೆ. ಸದಾನಂದ ಮಾಸ್ಟರ್ ಅವರು ಕೇರಳದ ಕಣ್ಣೂರಿನವರು. ಮೂರು ದಶಕಗಳ ಹಿಂದೆ

ಕಮ್ಯುನಿಷ್ಟರ ದಾಳಿಯಲ್ಲಿ ಎರಡೂ ಕಾಲು ಕಳೆದುಕೊಂಡ ಸದಾನಂದ ಮಾಸ್ಟರ್ ರಾಜ್ಯಸಭೆಗೆ Read More »

ದೇಶದ ಎರಡನೇ ಅತಿ ಉದ್ದದ ಕೇಬಲ್‌ ಸೇತುವೆ ಸಿಗಂದೂರಿನಲ್ಲಿ ಇಂದು ಲೋಕಾರ್ಪಣೆ

ಶರಾವತಿ ಹಿನ್ನೀರಿನ ಜನರ ಆರು ದಶಕಗಳ ಕನಸು ನನಸಾಗುವ ಕ್ಷಣ ಶಿವಮೊಗ್ಗ : ದೇಶದ ಎರಡನೇ ಅತಿ ಉದ್ದದ ಮತ್ತು ರಾಜ್ಯದ ಅತಿ ಉದ್ದದ ಕೇಬಲ್‌ ಸೇತುವೆ ಇಂದು ಸಿಗಂದೂರಿನಲ್ಲಿ ಲೋಕಾರ್ಪಣೆಗೊಳ್ಳಲಿದೆ. ಶರಾವತಿ ಹಿನ್ನೀರಿಗೆ ನಿರ್ಮಿಸಿದ ಈ ಕೇಬಲ್‌ ಬ್ರಿಜ್‌ ಅನೇಕ ವಿಶೇಷತೆಗಳನ್ನು ಒಳಗೊಂಡಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇತುವೆ ಉದ್ಘಾಟಿಸಲಿದ್ದಾರೆ. ಈ ಮೂಲಕ ಶರಾವತಿ ನದಿ ದಡದ ಜನರ 6 ದಶಕಗಳ ಕನಸು ನನಸಾಗುತ್ತಿದೆ. ಗುಜರಾತ್‌ನ ಓಖಾದಿಂದ ಬೇಯ್ ದ್ವಾರಕೆ ದ್ವೀಪಕ್ಕೆ

ದೇಶದ ಎರಡನೇ ಅತಿ ಉದ್ದದ ಕೇಬಲ್‌ ಸೇತುವೆ ಸಿಗಂದೂರಿನಲ್ಲಿ ಇಂದು ಲೋಕಾರ್ಪಣೆ Read More »

ಭಾರತೀಯ ವಾಯುಸೇನೆಗೆ ‘ಅಸ್ತ್ರ’ ಬಲ

ಡಿಆರ್‌ಡಿಒ ಅಭಿವೃದ್ಧಿಪಡಿಸಿದ ಸ್ವದೇಶಿ ಕ್ಷಿಪಣಿ ನವದೆಹಲಿ: ಭಾರತೀಯ ವಾಯುಸೇನೆಗೆ ಮತ್ತೊಂದು ಶಕ್ತಿ ಸೇರ್ಪಡೆಯಾಗಿದ್ದು, ಡಿಆರ್‌ಡಿಒ ಅಭಿವೃದ್ಧಿ ಮಾಡಿರುವ ಏರ್-ಟು -ಏರ್ ಕ್ವಿಪಣಿ ಅಸ್ತ್ರ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ. ಇದನ್ನು ಒಡಿಶಾದ ಕರಾವಳಿ ತೀರದಲ್ಲಿ ಭಾರತೀಯ ವಾಯುಪಡೆಯ ಸುಖೋಯ್ 30 MK1 ಯುದ್ಧ ವಿಮಾನದ ಮೂಲಕ ಡಿಆರ್‌ಡಿಒ ಮತ್ತು ಭಾರತೀಯ ವಾಯುಸೇನೆ ಈ ಕ್ಷಿಪಣಿಯ ಪರೀಕ್ಷಾರ್ಥ ಹಾರಾಟವನ್ನು ಯಶಸ್ವಿಯಾಗಿ ನಡೆಸಿದೆ. ಈ ಕ್ಷಿಪಣಿಗಳು ತಮ್ಮ ಗುರಿಗಳನ್ನು ಹೆಚ್ಚಿನ ನಿಖರತೆಯ ಜೊತೆಗೆ ಯಶಸ್ವಿಯಾಗಿ ತಲುಪಿವೆ ಎಂದು ಮೂಲಗಳು ಮಾಹಿತಿ ನೀಡಿವೆ.

ಭಾರತೀಯ ವಾಯುಸೇನೆಗೆ ‘ಅಸ್ತ್ರ’ ಬಲ Read More »

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಮರಾಠ ಮಿಲಿಟರಿ ಭೂದೃಶ್ಯ

ನವದೆಹಲಿ: ಭಾರತದ ಮರಾಠ ಮಿಲಿಟರಿ ಭೂದೃಶ್ಯಗಳನ್ನು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದ್ದು, ಇದಕ್ಕೆ ಪ್ರಧಾನಿ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಂತಸ ಹಂಚಿಕೊಂಜಿರುವ ಪ್ರಧಾನಿ ಮೋದಿ, ಇದು ಭಾರತದ ಸಾಂಸ್ಕೃತಿಕ ಪರಂಪರೆಗೆ ಸಲ್ಲಿಕೆಯಾದ ವಿಶ್ವ ಗೌರವ ಎಂದಿದ್ದಾರೆ. ಇದಕ್ಕಾಗಿ ದೇಶದ ಜನತೆದೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಹನ್ನೆರಡು ಕೋಟೆಗಳನ್ನು ಒಳಗೊಂಡಿರುವ ಈ ಮರಾಠ ಮಿಲಿಟರಿ ಭೂದೃಶ್ಯ ಕ್ರಿ.ಶ. 17 ರಿಂದ 19ನೇ ಶತಮಾನದಲ್ಲಿ ಅಭಿವೃದ್ಧಿ ಮಾಡಲಾಗಿರುವಂತಹವುಗಳಾಗಿವೆ. ಮರಾಠರ ಯುದ್ಧ ತಂತ್ರದ ಸೇನಾ

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಮರಾಠ ಮಿಲಿಟರಿ ಭೂದೃಶ್ಯ Read More »

ಡೀಸೆಲ್‌ ಸಾಗಿಸುತ್ತಿದ್ದ ರೈಲಿನಲ್ಲಿ ಭಾರಿ ಬೆಂಕಿ ಅವಘಡ

ಧಗಧಗನೆ ಉರಿದ ರೈಲಿನ ವ್ಯಾಗನ್‌ಗಳು ಚೆನ್ನೈ: ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನ 4 ವ್ಯಾಗನ್‌ಗಳು ಬೆಂಕಿ ಹತ್ತಿಕೊಂಡು ಧಗಧಗನೆ ಉರಿದ ಘಟನೆ ತಮಿಳುನಾಡಿನ ತಿರುವಲ್ಲೂರು ರೈಲು ನಿಲ್ದಾಣದ ಬಳಿ ನಡೆದಿದೆ. ಭಾನುವಾರ ಮುಂಜಾನೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ. ಬೆಂಕಿ ಅವಘಡದಿಂದ ರೈಲು ಹೊತ್ತಿ ಉರಿದಿದ್ದು, ಆಕಾಶದಲ್ಲಿ ಕಪ್ಪು ದಟ್ಟಹೊಗೆ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಹಾಗೂ ರಕ್ಷಣಾ ತಂಡಗಳು ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ. ರೈಲಿನಲ್ಲಿ ಡೀಸೆಲ್ ಇದ್ದ ಕಾರಣ ಅಗ್ನಿಶಾಮಕ ಸಿಬ್ಬಂದಿ ಬೆಂಕಿ

ಡೀಸೆಲ್‌ ಸಾಗಿಸುತ್ತಿದ್ದ ರೈಲಿನಲ್ಲಿ ಭಾರಿ ಬೆಂಕಿ ಅವಘಡ Read More »

error: Content is protected !!
Scroll to Top