ದೇಶ

ಡೀಸೆಲ್‌ ಸಾಗಿಸುತ್ತಿದ್ದ ರೈಲಿನಲ್ಲಿ ಭಾರಿ ಬೆಂಕಿ ಅವಘಡ

ಧಗಧಗನೆ ಉರಿದ ರೈಲಿನ ವ್ಯಾಗನ್‌ಗಳು ಚೆನ್ನೈ: ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನ 4 ವ್ಯಾಗನ್‌ಗಳು ಬೆಂಕಿ ಹತ್ತಿಕೊಂಡು ಧಗಧಗನೆ ಉರಿದ ಘಟನೆ ತಮಿಳುನಾಡಿನ ತಿರುವಲ್ಲೂರು ರೈಲು ನಿಲ್ದಾಣದ ಬಳಿ ನಡೆದಿದೆ. ಭಾನುವಾರ ಮುಂಜಾನೆ 5.30ರ ಸುಮಾರಿಗೆ ಈ ಘಟನೆ ನಡೆದಿದೆ. ಬೆಂಕಿ ಅವಘಡದಿಂದ ರೈಲು ಹೊತ್ತಿ ಉರಿದಿದ್ದು, ಆಕಾಶದಲ್ಲಿ ಕಪ್ಪು ದಟ್ಟಹೊಗೆ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಹಾಗೂ ರಕ್ಷಣಾ ತಂಡಗಳು ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ. ರೈಲಿನಲ್ಲಿ ಡೀಸೆಲ್ ಇದ್ದ ಕಾರಣ ಅಗ್ನಿಶಾಮಕ ಸಿಬ್ಬಂದಿ ಬೆಂಕಿ […]

ಡೀಸೆಲ್‌ ಸಾಗಿಸುತ್ತಿದ್ದ ರೈಲಿನಲ್ಲಿ ಭಾರಿ ಬೆಂಕಿ ಅವಘಡ Read More »

ಕಾರವಾರ: ದಟ್ಟ ಕಾಡಿನ ಗುಹೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಜೊತೆ ವಾಸವಾಗಿದ್ದ ವಿದೇಶಿ ಮಹಿಳೆಯ ರಕ್ಷಣೆ

ಗುಡ್ಡ ಕುಸಿತದ ತನಿಖೆ ಮಾಡುತ್ತಿದ್ದಾಗ ಪೊಲೀಸರ ಕಣ್ಣಿಗೆ ಬಿದ್ದ ತಾಯಿ-ಮಕ್ಕಳು ಕಾರವಾರ: ವಿದೇಶ ಮಹಿಳೆಯೊಬ್ಬಳು ಇಬ್ಬರು ಪುಟ್ಟ ಮಕ್ಕಳೊಂದಿಗೆ ದಟ್ಟಾರಣ್ಯದೊಳಗೆ ಗುಹೆಯೊಳಗೆ ವಾಸ ಮಾಡುತ್ತಿರುವುದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾಗಿಉದೆ. ಹಿಂದೂ ಧರ್ಮದ ಕಡೆಗೆ ವಾಲಿದ ರಷ್ಯಾ ಮೂಲದ ಮಹಿಳೆ ಇಬ್ಬರು ಪುಟ್ಟ ಮಕ್ಕಳೊಂದಿಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ರಾಮತೀರ್ಥದ ಅರಣ್ಯದ ಗುಹೆಯಲ್ಲಿ ವಾಸವಿದ್ದಳು. ಇವರನ್ನು ಪೊಲೀಸರು ರಕ್ಷಿಸಿ ಕರೆದೊಯ್ದಿದ್ದಾರೆ. ಮೋಹಿ (40) ತನ್ನ ಪುಟ್ಟ ಮಕ್ಕಳಾದ ಪ್ರೆಯಾ (6) ಹಾಗೂ ಅಮಾ

ಕಾರವಾರ: ದಟ್ಟ ಕಾಡಿನ ಗುಹೆಯಲ್ಲಿ ಇಬ್ಬರು ಪುಟ್ಟ ಮಕ್ಕಳ ಜೊತೆ ವಾಸವಾಗಿದ್ದ ವಿದೇಶಿ ಮಹಿಳೆಯ ರಕ್ಷಣೆ Read More »

ಏಕದಿನ ತಂಡದ ನಾಯಕತ್ವ ಹೊಣೆಯೂ ಶುಭಮನ್‌ ಗಿಲ್‌ ಹೆಗಲಿಗೆ

ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಕ್ರಿಕೆಟ್‌ ಬದುಕು ಅಂತಿಮ ಘಟ್ಟಕ್ಕೆ ನವದೆಹಲಿ: ಮೊದಲ ಬಾರಿ ಟೆಸ್ಟ್‌ ತಂಡದ ನಾಯಕನಾಗಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವ ಶುಭ್‌ಮನ್‌ ಗಿಲ್‌ ಹೆಗಲಿಗೆ ಸದ್ಯದಲ್ಲೇ ಏಕದಿನ ತಂಡದ ನಾಯಕತ್ವದ ಹೊಣೆಯೂ ಬೀಳಲಿದೆ. ಸದ್ಯದಲ್ಲೇ ಭಾರತ ಏಕದಿನ ತಂಡದ ನಾಯಕತ್ವವನ್ನೂ ಶುಭಮನ್‌ ಗಿಲ್‌ ವಹಿಸಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರೊಂದಿಗೆ ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿ ಕ್ರಿಕೆಟ್‌ ಬದುಕು ಬಹುತೇಕ ಕೊನೆಯ ಘಟ್ಟಕ್ಕೆ ತಲುಪಿದಂತಾಗಿದೆ ಎನ್ನಲಾಗುತ್ತಿದೆ. ಶರ್ಮಾ ಮತ್ತು ಕೊಹ್ಲಿ ಇಲ್ಲದ ಟೆಸ್ಟ್‌

ಏಕದಿನ ತಂಡದ ನಾಯಕತ್ವ ಹೊಣೆಯೂ ಶುಭಮನ್‌ ಗಿಲ್‌ ಹೆಗಲಿಗೆ Read More »

ಅಹಮದಾಬಾದ್‌ ವಿಮಾನ ದುರಂತದ ಕಾರಣ ಪತ್ತೆ

ಪ್ರಾಥಮಿಕ ತನಿಖಾ ವರದಿಯಲ್ಲಿದೆ ಬೆಚ್ಚಿಬೀಳಿಸುವ ಮಾಹಿತಿ ನವದೆಹಲಿ : ಅಹಮದಾಬಾದ್‌ನಲ್ಲಿ ಕಳೆದ ಜೂನ್ 12ರಂದು ಏರ್ ಇಂಡಿಯಾ ವಿಮಾನ ಪತನಗೊಂಡ ಕಾರಣ ಬಹಿರಂಗವಾಗಿದೆ. ಈ ಭೀಕರ ಅಪಘಾತದ ಪ್ರಾಥಮಿಕ ತನಿಖಾ ವರದಿಯಲ್ಲಿ ವಿಮಾನ ಪತನವಗಾಲು ಕಾರಣವಾದ ಪರಿಸ್ಥಿತಿಯನ್ನು ವಿವರಿಸಲಾಗಿದೆ. ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ಸಲ್ಲಿಸಿರುವ 15 ಪುಟಗಳ ಪ್ರಾಥಮಿಕ ತನಿಖಾ ವರದಿಯಲ್ಲಿ ಹಲವು ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ವರದಿಯ ಪ್ರಕಾರ, ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನದ ಎರಡೂ ಇಂಜಿನ್‌ಗಳು ಸ್ಥಗಿತಗೊಂಡವು. ಆ

ಅಹಮದಾಬಾದ್‌ ವಿಮಾನ ದುರಂತದ ಕಾರಣ ಪತ್ತೆ Read More »

ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡಲು ಸಾಧ್ಯವಾಗುತ್ತಿಲ್ಲ : ಎಚ್‌.ಎಂ.ರೇವಣ್ಣ

ಗ್ಯಾರಂಟಿ ಕೊಡುವುದಕ್ಕೆ ತೊಡಕುಗಳಿವೆ ಎಂದು ಒಪ್ಪಿಕೊಂಡ ಸಮಿತಿ ಅಧ್ಯಕ್ಷ ಬೆಂಗಳೂರು: ಫಲಾನುಭವಿಗಳಿಗೆ ಗೃಹಲಕ್ಷ್ಮಿಹಣ ಪ್ರತಿ ತಿಂಗಳು ಕೊಡಲು ಸಾಧ್ಯವಾಗುತ್ತಿಲ್ಲ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ ರೇವಣ್ಣ ಹೇಳಿದ್ದಾರೆ. ಪ್ರತಿ ತಿಂಗಳು ಹಣ ಕೊಡುವುದಕ್ಕೆ ಕೆಲವು ತೊಡಕುಗಳಿವೆ. ಸದ್ಯ 3 ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡ್ತಿದ್ದೇವೆ ಎಂದು ಅವರು ಹೇಳಿದ್ದಾರೆ. ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದೇವೆ. ಜಿಎಸ್‌ಟಿ ವಿಚಾರದಲ್ಲಿ 1.20 ಲಕ್ಷ ಜನರಿಗೆ ಹಣ ಹೋಗಿರಲಿಲ್ಲ. ಅದರಲ್ಲಿ ಈಗ 58 ಸಾವಿರ ಜನರ

ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡಲು ಸಾಧ್ಯವಾಗುತ್ತಿಲ್ಲ : ಎಚ್‌.ಎಂ.ರೇವಣ್ಣ Read More »

ನಟ ದರ್ಶನ್ ಸ್ವಿಟ್ಜರ್ಲ್ಯಾಂಡ್ ಪ್ರಯಾಣಕ್ಕೆ ವಿಸಾ ನಿರಾಕರಣೆ

ರೇಣುಕಾಸ್ವಾಮಿ ಕೊಲೆ ಆರೋಪದ ಕಾರಣಕ್ಕೆ ವಿಸಾ ತಿರಸ್ಕರಿಸಿದ ಅಧಿಕಾರಿಗಳು ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಪ್ರಕರಣದಲ್ಲಿ ಸಿಲುಕಿಕೊಂಡಿರುವ ನಟ ದರ್ಶನ್‌ಗೆ ಒಂದರ ಮೇಲೆ ಮತ್ತೊಂದು ಸಮಸ್ಯೆಗಳು ಬಂದೊದಗುತ್ತಿದೆ. ಡೆವಿಲ್ ಚಿತ್ರೀಕರಣದ ಕಾರಣಕ್ಕಾಗಿ ದರ್ಶನ್ ಸ್ವಿಟ್ಜರ್ಲ್ಯಾಂಡ್ ಪ್ರಯಾಣಕ್ಕೆ ವಿಸಾ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸ್ಥಳೀಯ ಅಧಿಕಾರಿಗಳು ತಿರಸ್ಕರಿಸಿದ್ದು, ಇದು ಚಿತ್ರತಂಡಕ್ಕೆ ಹಿನ್ನಡೆಯಾಗುವಂತೆ ಮಾಡಿದೆ. ದರ್ಶನ್ ಮೇಲಿನ ಕೊಲೆ ಆರೋಪದ ಕಾರಣಕ್ಕೆ ಸ್ವಿಟ್ಜರ್ಲ್ಯಾಂಡ್ ಅಧಿಕಾರಿಗಳು ವಿಸಾ ನಿರಾಕರಿಸಿದ್ದು, ಇದರಿಂದಾಗಿ ಚಿತ್ರತಂಡಕ್ಕೆ ಸಮಸ್ಯೆಯಾಗಿದೆ. ದರ್ಶನ್‌ಗೆ ಜುಲೈ 11 ರಿಂದ 30 ರ

ನಟ ದರ್ಶನ್ ಸ್ವಿಟ್ಜರ್ಲ್ಯಾಂಡ್ ಪ್ರಯಾಣಕ್ಕೆ ವಿಸಾ ನಿರಾಕರಣೆ Read More »

ರಾಷ್ಟ್ರೀಯ ಟೆನಿಸ್‌ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ತಂದೆ

ಮಗಳ ದುಡಿಮೆಯಲ್ಲಿ ಬದುಕುತ್ತಿದ್ದಾನೆ ಎಂಬ ಕುಹಕಕ್ಕೆ ಬೇಸತ್ತು ಕೃತ್ಯ ನವದೆಹಲಿ: ರಾಷ್ಟ್ರೀಯ ಟೆನ್ನಿಸ್‌ ಆಟಗಾರ್ತಿಯನ್ನು ಅವರ ತಂದೆಯ ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಗುರುಗಾಂವ್‌ನಲ್ಲಿ ಸಂಭವಿಸಿದೆ. ರಾಧಿಕಾ ಯಾದವ್‌ (25) ಅವರನ್ನು ತಂದೆ ದೀಪಕ್‌ ಯಾದವ್‌ ಗುಂಡಿಕ್ಕಿ ಸಾಯಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಊರಿನ ಜನ ಮಗಳ ದುಡಿಮೆಯಲ್ಲಿ ಬದುಕುತ್ತಿದ್ದಾನೆ ಎಂದು ಜನರು ಕುಹಕವಾಡುತ್ತಿರುವುದರಿಂದ ಬೇಸತ್ತು ಆತ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ರಾಧಿಕಾ ಯಾದವ್‌ ಟೆನ್ನಿಸ್‌ ಅಕಾಡೆಮಿಯೊಂದನ್ನು ನಡೆಸುತ್ತಿದ್ದು, ಊರವರ ಚುಚ್ಚುನುಡಿಗಳಿಂದ ಬೇಸತ್ತ ದೀಪಕ್‌ ಯಾದವ್‌

ರಾಷ್ಟ್ರೀಯ ಟೆನಿಸ್‌ ಆಟಗಾರ್ತಿಯನ್ನು ಗುಂಡಿಕ್ಕಿ ಕೊಂದ ತಂದೆ Read More »

ವೇದ, ಉಪನಿಷತ್‌ ಅಧ್ಯಯನ, ಸಾವಯವ ಕೃಷಿ… ದಿಢೀರ್‌ ನಿವೃತ್ತಿಯ ಮಾತನಾಡಿದ ಅಮಿತ್‌ ಶಾ

ರಾಜಕೀಯ ಚಾಣಕ್ಯನ ರಿಟೈರ್‌ಮೆಂಟ್‌ ಪ್ಲಾನ್‌ ಕೇಳಿ ದೇಶಾದ್ಯಂತ ಸಂಚಲನ ನವದೆಹಲಿ: ರಾಜಕಾರಣಿಗಳಿಗೆ ನಿವೃತ್ತಿಯಿಲ್ಲ ಎನ್ನುವುದು ಭಾರತದ ಮಟ್ಟಿಗೆ ಸತ್ಯವಾದ ಮಾತು. ಹಣ್ಣು ಹಣ್ಣು ಮುದುಕರಾಗಿ ಎದ್ದು ನಡೆಯಲು ಸಾಧ್ಯವಾಗದಿದ್ದರೂ ಅಧಿಕಾರಕ್ಕೆ ಅಂಟಿಕೂರುವವರು ನಮ್ಮ ದೇಶದ ರಾಜಕೀಯ ನಾಯಕರು. ಈ ಹಿನ್ನೆಲೆಯಲ್ಲಿ ಬಿಜೆಪಿ 75 ವರ್ಷ ದಾಟಿದವರಿಗೆ ನಿವೃತ್ತಿ ನೀಡುವ ಅಲಿಖಿತ ನಿಯಮವೊಂದನ್ನು ಪಾಲಿಸಿಕೊಂಡು ಬಂದಿದೆ. ಇದು ಎಲ್ಲರಿಗೂ ಅನ್ವಯವಾಗುವುದಿಲ್ಲ ಎನ್ನುವುದು ಬೇರೆ ಮಾತು. ಪ್ರಧಾನಿ ನರೇಂದ್ರ ಮೋದಿಯವರೂ ಸದ್ಯದಲ್ಲೇ 75ರ ಹರೆಯಕ್ಕೆ ಪದಾರ್ಪಣೆ ಮಾಡಲಿದ್ದು, ಅವರು ನಿವೃತ್ತಿಯಾಗುತ್ತಾರೋ

ವೇದ, ಉಪನಿಷತ್‌ ಅಧ್ಯಯನ, ಸಾವಯವ ಕೃಷಿ… ದಿಢೀರ್‌ ನಿವೃತ್ತಿಯ ಮಾತನಾಡಿದ ಅಮಿತ್‌ ಶಾ Read More »

ಹೆಣ್ಣು ಮಕ್ಕಳನ್ನು ಶಾಲೆಯಲ್ಲೇ ವಿವಸ್ತ್ರಗೊಳಿಸಿದ ಮುಖ್ಯಶಿಕ್ಷಕ

ಹೆಡ್‌ಮೇಷ್ಟ್ರು ಸೇರಿ ಆರು ಮಂದಿ ವಿರುದ್ಧ ಪೋಕ್ಸೊ ಕೇಸ್‌ ಪುಣೆ : ಶಾಲೆಯ ಮುಖ್ಯಶಿಕ್ಷಕನೇ ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ಸಂಭವಿಸಿದೆ. ಶೌಚಾಲಯದಲ್ಲಿ ರಕ್ತದ ಕಲೆ ಕಂಡ ಹಿನ್ನೆಲೆಯಲ್ಲಿ ಮುಟ್ಟಾದವರು ಯಾರು ಎಂದು ತಿಳಿಯಲು ಮುಖ್ಯಶಿಕ್ಷಕ ಎಲ್ಲ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯಶಿಕ್ಷಕ ಹಾಗೂ ಓರ್ವ ಸಹಾಯಕ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ ಶಾಲೆಯಲ್ಲಿ 5ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಮಂಗಳವಾರ ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದವು.

ಹೆಣ್ಣು ಮಕ್ಕಳನ್ನು ಶಾಲೆಯಲ್ಲೇ ವಿವಸ್ತ್ರಗೊಳಿಸಿದ ಮುಖ್ಯಶಿಕ್ಷಕ Read More »

ಭಾರತೀಯ ವಾಯುಪಡೆ ಯುದ್ಧ ವಿಮಾನ ಪತನ

ರಾಜಸ್ಥಾನ: ಭಾರತೀಯ ವಾಯುಪಡೆಯ ಯುದ್ಧ ವಿಮಾನವೊಂದು ರಾಜಸ್ಥಾನದ ಚುರುವಿನ ಬನೋಡಾ ಗ್ರಾಮದ ಬಳಿ ಪತನಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ವಿಮಾನದ ಅವಶೇಷಗಳಡಿಯಿಂದ ಪೈಲಟ್ ಮೃತದೇಹ ಹೊರತೆಗೆಯಲಾಗಿದೆ. ಜಿಲ್ಲಾಧಿಕಾರಿ ಅಭಿಷೇಕ್ ಸುರಾನ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಅಪಘಾತದ ಪರಿಣಾಮ ಹೊಲದಲ್ಲಿ ಬೆಂಕಿ ಕಾಣಿಸಿಕೊಂಡಿತು. ಅದನ್ನು ತಾವೇ ನಂದಿಸಲು ಪ್ರಯತ್ನಿಸಿದೆವು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಭಾರತೀಯ ವಾಯುಪಡೆ ಯುದ್ಧ ವಿಮಾನ ಪತನ Read More »

error: Content is protected !!
Scroll to Top