ದೇಶ

ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ವ್ಯಾನ್‌ : 12 ಮಂದಿ ಸ್ಥಳದಲ್ಲೇ ಸಾವು

ಭೋಪಾಲ : ಮಧ್ಯಪ್ರದೇಶದ ಮಂಡಸೋರ್ ಜಿಲ್ಲೆಯಲ್ಲಿ ಭಾನುವಾರ ವ್ಯಾನ್‌ ಬಾವಿಗೆ ಬಿದ್ದು ಅದರಲ್ಲಿದ್ದ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಅಪಘಾತ ಸಂಭವಿಸಿದೆ. ಜಿಲ್ಲೆಯ ನಾರಾಯಣಗಢ ಪೊಲೀಸ್ ಠಾಣೆ ವ್ಯಾಪ್ತಿಯ ಕಚರಿಯಾ ಗ್ರಾಮದಲ್ಲಿ ವೇಗವಾಗಿ ಬಂದ ವ್ಯಾನ್‌ ನಿಯಂತ್ರಣ ತಪ್ಪಿ ಆಳವಾದ ಬಾವಿಗೆ ಬಿದ್ದಿದೆ. ರಕ್ಷಿಸಲು ಬಾವಿಗೆ ಹಾರಿದ ಯುವಕನೂ ಸಾವಿಗೀಡಾಗಿದ್ದಾನೆ. ಮೃತಪಟ್ಟವರಲ್ಲಿ ನಾಲ್ವರು ಮಹಿಳೆಯರೂ ಸೇರಿದ್ದಾರೆ. ನಾಲ್ಕು ಮಂದಿಯನ್ನು ರಕ್ಷಿಸಲಾಗಿದೆ. ಉನ್ಹೆಲ್ ಮತ್ತು ರತ್ಲಂ ಜಿಲ್ಲೆಗಳ ಜನರು ವ್ಯಾನಿನಲ್ಲಿ ಪ್ರಯಾಣಿಸುತ್ತಿದ್ದರು. ನೀಮುಚ್ ಜಿಲ್ಲೆಯ ದೇವಸ್ಥಾನಕ್ಕೆ ಭೇಟಿ […]

ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ವ್ಯಾನ್‌ : 12 ಮಂದಿ ಸ್ಥಳದಲ್ಲೇ ಸಾವು Read More »

ಪಹಲ್ಗಾಮ್‌ ಸಂತ್ರಸ್ತರ ದುಃಖ ನೋಡುವಾಗ ಭಾರತೀಯರ ರಕ್ತ ಕುದಿಯುತ್ತಿದೆ : ಮೋದಿ

ಮನ್‌ ಕಿ ಬಾತ್‌ನಲ್ಲಿ ಭಯೋತ್ಪಾದಕರ ವಿರುದ್ಧ ಕಠಿಣ ಕ್ರಮದ ಭರವಸೆ ನವದೆಹಲಿ: ಪಹಲ್ಗಾಮ್ ದಾಳಿಯಿಂದ ಸಂತ್ರಸ್ತರಾಗಿರುವವರು ದುಃಖಿಸುತ್ತಿರುವ ದೃಶ್ಯಗಳನ್ನು ನೋಡುವಾಗ ಪ್ರತಿಯೊಬ್ಬ ಭಾರತೀಯನ ರಕ್ತ ಕುದಿಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ತಿಂಗಳ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನ 121ನೇ ಸಂಚಿಕೆಯಲ್ಲಿ ಮಾತನಾಡಿದ ಮೋದಿ, ಪಹಲ್ಗಾಮ್ ದಾಳಿಯಿಂದ ನನಗೆ ತುಂಬಾ ನೋವಾಗಿದೆ. ಇದು ಭಯೋತ್ಪಾದನೆಯ ಬೆಂಬಲಿಗರ ಹತಾಶೆ, ಹೇಡಿತನವನ್ನು ತೋರಿಸುತ್ತದೆ. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಲಿದೆ. ಅಪರಾಧ ಎಸಗಿದವರಿಗೆ, ಬೆಂಬಲಿಗರಿಗೆ, ಸೂತ್ರಧಾರಿಗಳ ವಿರುದ್ಧ ಕಠಿಣ

ಪಹಲ್ಗಾಮ್‌ ಸಂತ್ರಸ್ತರ ದುಃಖ ನೋಡುವಾಗ ಭಾರತೀಯರ ರಕ್ತ ಕುದಿಯುತ್ತಿದೆ : ಮೋದಿ Read More »

ಪಾಕ್‌ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ ಹೇಳಿಕೆ

ನಿಶಾನ್-ಎ-ಪಾಕಿಸ್ಥಾನ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ ಎಂದು ಕಿಡಿಕಾರಿದ ಆರ್‌.ಅಶೋಕ್‌ ಬೆಂಗಳೂರು: ಪಾಕಿಸ್ಥಾನದ ಜೊತೆಗೆ ಭಾರತ ಯುದ್ಧ ಮಾಡಬಾರದು ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ಪಾಕಿಸ್ಥಾನದ ಮಾಧ್ಯಮಗಳು ಪ್ರಮುಖ ಸುದ್ದಿಯಾಗಿ ಪ್ರಕಟಿಸಿವೆ. ಮಾಧ್ಯಮದವರ ಜೊತೆಗೆ ಮಾತನಾಡುತ್ತಿದ್ದಾಗ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ನರಮೇಧ ನಡೆಸಿದ ಉಗ್ರ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಪಾಕಿಸ್ಥಾನದ ಜೊತೆಗೆ ಭಾರತ ಯುದ್ಧ ಮಾಡಬಾರದು, ಕಾಶ್ಮೀರದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಿದರೆ ಸಾಕು. ಉಗ್ರರ ದಾಳಿಗೆ ಕೇಂದ್ರ ಸರಕಾರದ ವೈಫಲ್ಯ ಕಾರಣ ಎಂದು ಹೇಳಿದ್ದರು.

ಪಾಕ್‌ ಮಾಧ್ಯಮಗಳಲ್ಲಿ ಸುದ್ದಿಯಾದ ಸಿದ್ದರಾಮಯ್ಯ ಹೇಳಿಕೆ Read More »

ಧರ್ಮದ ಹೆಸರಲ್ಲಿ ಹಿಂಸಾಚಾರ : ಇಸ್ಲಾಂ ತ್ಯಜಿಸಿದ ಶಿಕ್ಷಕ

ಕೋಲ್ಕತ್ತಾ: ಪಹಲ್ಗಾಮ್‌ನಲ್ಲಿ ಉಗ್ರರು ಧರ್ಮ ಕೇಳಿ ಪ್ರವಾಸಿಗರನ್ನು ಸಾಯಿಸಿದ ಕೃತ್ಯದ ಬಳಿಕ ಪಶ್ಚಿಮ ಬಂಗಾಳದ ಬದುರಿಯಾದ ಶಾಲಾ ಶಿಕ್ಷಕರೊಬ್ಬರು ಇಸ್ಲಾಂ ಧರ್ಮ ತ್ಯಜಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ವೀಡಿಯೋ ಹಂಚಿಕೊಂಡಿರುವ ಶಿಕ್ಷಕ ಸಬೀರ್ ಹುಸೇನ್, ಕಾಶ್ಮೀರ ಸೇರಿದಂತೆ ವಿವಿಧೆಡೆ ಧರ್ಮವನ್ನು ಹಿಂಸೆಗೆ ಆಯುಧವನ್ನಾಗಿ ಬಳಸಲಾಗುತ್ತಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ ನಾನು ಇಸ್ಲಾಂನ್ನು ತ್ಯಜಿಸುತ್ತೇನೆ. ಯಾವ ಧರ್ಮದ ವ್ಯಾಪ್ತಿಗೂ ಒಳಪಡದೆ, ಕೇವಲ ಮಾನವನಾಗಿ ಗುರುತಿಸಿಕೊಳ್ಳಲು ಬಯಸುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ

ಧರ್ಮದ ಹೆಸರಲ್ಲಿ ಹಿಂಸಾಚಾರ : ಇಸ್ಲಾಂ ತ್ಯಜಿಸಿದ ಶಿಕ್ಷಕ Read More »

ಕಾಶ್ಮೀರದಲ್ಲಿ ಇನ್ನಿಬ್ಬರು ಉಗ್ರರ ಮನೆ ಧ್ವಂಸ

ಸ್ಫೋಟಕದ ಮೂಲಕ ಮನೆಗಳನ್ನು ನಾಶ ಮಾಡಿದ ಸೇನೆ ಶ್ರೀನಗರ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರನ್ನು ಗುಂಡು ಹಾರಿಸಿ ಕೊಂದ ಭಯೋತ್ಪಾದಕ ಕೃತ್ಯದ ಬಳಿಕ ಉಗ್ರರ ಮನೆಗಳನ್ನು ಭದ್ರತಾ ಪಡೆ ನಾಶ ಮಾಡುತ್ತಿದೆ. ನಿನ್ನೆ ರಾತ್ರಿ ಐಇಡಿ ಸ್ಫೋಟಿಸಿ ಮತ್ತು ಬುಲ್‌ಡೋಜರ್‌ ಮೂಲಕ ಇಬ್ಬರು ಉಗ್ರರ ಮನೆಯನ್ನು ಭಾರತೀಯ ಸೇನೆ ಧ್ವಂಸ ಮಾಡಿದೆ. ಲಷ್ಕರ್ ಎ ತೊಯ್ಬಾದ ಉಗ್ರ ಸಂಘಟನೆಯ ಉಗ್ರ ಫಾರೂಕ್ ಎಂಬಾತನ ಮನೆಯನ್ನು ಸೇನೆ ಧ್ವಂಸಗೊಳಿಸಿದೆ. ಕುಪ್ವಾರದ ಕಲಾರೂಸ್ ಪ್ರದೇಶದಲ್ಲಿರುವ ಫಾರೂಕ್ ಮನೆಯನ್ನು ಐಇಡಿ ಸ್ಫೋಟಿಸಿ

ಕಾಶ್ಮೀರದಲ್ಲಿ ಇನ್ನಿಬ್ಬರು ಉಗ್ರರ ಮನೆ ಧ್ವಂಸ Read More »

ಮೋದಿಯವರೇ ದಯವಿಟ್ಟು ಪಾಕಿಸ್ಥಾನವನ್ನು ವಶಪಡಿಸಿಕೊಂಡು ನಮ್ಮನ್ನು ಸಾಲದ ಬಲೆಯಿಂದ ಪಾರು ಮಾಡಿ…

ಸಿಂಧೂ ನದಿ ಜಲ ಒಪ್ಪಂದ ರದ್ದಾದ ಬಳಿಕ ತಮ್ಮ ಸರಕಾರದ ಕಾಲೆಳೆದ ಪಾಕಿಸ್ಥಾನಿಯರು ಇಸ್ಲಾಮಾಬಾದ್‌: ನಾವು ಇನ್ನು ಸ್ನಾನಕ್ಕೂ ಭಾರತದ ಬಳಿ ನೀರಿಗಾಗಿ ಅಂಗಲಾಚಬೇಕಾಬಹುದು, ಮೋದಿಯವರೇ ಆದಷ್ಟು ಬೇಗ ದಾಳಿ ಮಾಡಿ ಪಾಕಿಸ್ಥಾನವನ್ನು ವಶಪಡಿಸಿಕೊಳ್ಳಿ. ಹೀಗಾದರೆ ಕನಿಷ್ಠ ಪಾಕಿಸ್ಥಾನ ಪ್ರಪಂಚದ ಅರ್ಧಕ್ಕೂ ಹೆಚ್ಚು ದೇಶಗಳಿಗೆ ಸಾಲ ಮರು ಪಾವತಿ ಮಾಡುವುದರಿಂದಲಾದರೂ ಬಚಾವಾಗಬಹದು… ಇದು ಪಾಕಿಸ್ಥಾನದ ಜನರು ಭಾರತದ ಪ್ರತಿಕಾರದ ಕ್ರಮಗಳ ಬಳಿಕ ತಮ್ಮ ದೇಶವನ್ನು ಟ್ರೋಲ್‌ ಮಾಡಿಕೊಂಡ ಪರಿ. ಪಹಲ್ಗಾಂವ್‌ ದಾಳಿಗೆ ಪ್ರತಿಕಾರವಾಗಿ ಐತಿಹಾಸಿಕ ಸಿಂಧೂ ಜಲ

ಮೋದಿಯವರೇ ದಯವಿಟ್ಟು ಪಾಕಿಸ್ಥಾನವನ್ನು ವಶಪಡಿಸಿಕೊಂಡು ನಮ್ಮನ್ನು ಸಾಲದ ಬಲೆಯಿಂದ ಪಾರು ಮಾಡಿ… Read More »

ಭಾರತೀಯ ಸೇನೆಯ ಬಹುದೊಡ್ಡ ಬೇಟೆ | ಲಷ್ಕರ್​ ಸಂಘಟನೆಯ ಟಾಪ್ ಕಮಾಂಡರ್ ಅಲ್ತಾಫ್​ ಹತ್ಯೆ

ಬಂಡಿಪೋರಾ : ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ(Bandipora)ದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಟಾಪ್ ಕಮಾಂಡರ್ ಅಲ್ತಾಫ್ ಸಾವನ್ನಪ್ಪಿದ್ದಾನೆ.  ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಈ ದಾಳಿ ಹೊಣೆಯನ್ನು ಲಷ್ಕರ್​-ಎ-ತೊಯ್ಬಾ ಹೊತ್ತುಕೊಂಡಿತ್ತು. ಇದೀಗ ಭಾರತೀಯ ಸೇನೆ ಬಹುದೊಡ್ಡ ಬೇಟೆಯನ್ನೇ ಆಡಿದ್ದು, ಟಾಪ್​ ಕಮಾಂಡರ್​ ಅಲ್ತಾಫ್​ನನ್ನು ಹತ್ಯೆ ಮಾಡಿವೆ. ಭಯೋತ್ಪಾದಕರು ಅಲ್ಲಿ ಅಡಗಿರುವ ಬಗ್ಗೆ ಸ್ಪಷ್ಟ ಮಾಹಿತಿ ಪಡೆದ ಸೇನೆ ಅಲ್ಲಿಗೆ ತೆರಳಿತ್ತು. ಭಾರತೀಯ ಸೇನೆ ಮತ್ತು ಜಮ್ಮು

ಭಾರತೀಯ ಸೇನೆಯ ಬಹುದೊಡ್ಡ ಬೇಟೆ | ಲಷ್ಕರ್​ ಸಂಘಟನೆಯ ಟಾಪ್ ಕಮಾಂಡರ್ ಅಲ್ತಾಫ್​ ಹತ್ಯೆ Read More »

ಸೆರೆ ಹಿಡಿದ ಬಿಎಸ್‌ಎಫ್‌ ಯೋಧನನ್ನು ಬಿಡುಗಡೆಗೊಳಿಸದೆ ಪಾಕ್‌ ಮೊಂಡಾಟ

ನಿನ್ನೆಯಿಂದೀಚೆಗೆ ಪಾಕ್‌ ಸೈನಿಕರ ಕಸ್ಟಡಿಯಲ್ಲಿರುವ ಭಾರತೀಯ ಯೋಧ ಶ್ರೀನಗರ: ಆಕಸ್ಮಿಕವಾಗಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿ ಬಂಧನಕ್ಕೆ ಒಳಗಾಗಿರುವ ಗಡಿ ಭದ್ರತಾ ಪಡೆ ಯೋಧನನ್ನು ಹಸ್ತಾಂತರ ಮಾಡಲು ಪಾಕಿಸ್ತಾನ ಮೊಂಡಾಟ ಮಾಡುತ್ತಿದೆ. ಗುರುವಾರ ಸಂಜೆ ಧ್ವಜ ಸಭೆಗೆ ರೇಂಜರ್‌ಗಳು ಬರಲಿಲ್ಲ. ಮಾಧ್ಯಮಗಳಲ್ಲಿ ತಾನು ಒಳ್ಳೆಯವನು ಎಂದು ಪ್ರಚಾರ ಮಾಡುವ ಸಲುವಾಗಿ ಪಾಕಿಸ್ತಾನ ಭಾರತೀಯ ಯೋಧನನ್ನು ಬಳಸಲು ಮುಂದಾಗಿದೆ ಎನ್ನಲಾಗಿದೆ. ಪಂಜಾಬ್‌ನ ಫಿರೋಜ್‌ಪುರ ಬಳಿ ಗುರುವಾರ ಆಕಸ್ಮಿಕವಾಗಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿದ್ದ 182ನೇ ಬೆಟಾಲಿಯನ್‌ ಕಾನ್‌ಸ್ಟೆಬಲ್‌ ಪಿ.ಕೆ ಸಾಹು ಅವರನ್ನು

ಸೆರೆ ಹಿಡಿದ ಬಿಎಸ್‌ಎಫ್‌ ಯೋಧನನ್ನು ಬಿಡುಗಡೆಗೊಳಿಸದೆ ಪಾಕ್‌ ಮೊಂಡಾಟ Read More »

ಗಡಿಯಾಚೆಗಿನಿಂದ ಗುಂಡಿನ ದಾಳಿ ನಡೆಸಿ ಭಾರತವನ್ನು ಕೆಣಕಿದ ಪಾಕಿಸ್ಥಾನ

ಗುರುವಾರ ರಾತ್ರಿಯಿಡೀ ಎಲ್‌ಒಸಿಯಲ್ಲಿ ಭಾರಿ ಗುಂಡಿನ ಚಕಮಕಿ ನವದೆಹಲಿ : ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ನರಮೇಧ ಮಾಡಿದ ಮೂರು ದಿನಗಳ ಬಳಿಕ ಪಾಕಿಸ್ಥಾನ ಗಡಿಯಾಚೆಗಿನಿಂದ ಗುಂಡಿನ ದಾಳಿ ಪ್ರಾರಂಭಿಸಿದ್ದು, ಇದಕ್ಕೆ ಭಾರತ ತಕ್ಕ ಪ್ರತ್ಯುತ್ತರ ನೀಡಿದೆ. ಗಡಿ ನಿಯಂತ್ರಣ ರೇಖೆಯಾಚೆಯಿಂದ ರಾತ್ರಿಯಿಡೀ ಶೆಲ್‌ ಮತ್ತು ಮೋರ್ಟರ್‌ ದಾಳಿಯಾಗಿದೆ. ಇದು ಅಸ್ವಾಭಾವಿಕ ಬೆಳವಣಿಗೆಯಾಗಿದ್ದು, ಪಾಕಿಸ್ಥಾನ ಕಾಲು ಕೆದರಿ ಯುದ್ಧಕ್ಕೆ ಬರುವ ಲಕ್ಷಣದಂತೆ ಕಾಣಿಸುತ್ತಿದೆ ಎಂದು ಭದ್ರತಾ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಪಾಕಿಸ್ಥಾನಿ ಸೈನಿಕರು ಶೆಲ್‌ ಮತ್ತು ಮೋರ್ಟರ್‌ಗಳಿಂದ ದಾಳಿ ನಡೆಸಿದ್ದು,

ಗಡಿಯಾಚೆಗಿನಿಂದ ಗುಂಡಿನ ದಾಳಿ ನಡೆಸಿ ಭಾರತವನ್ನು ಕೆಣಕಿದ ಪಾಕಿಸ್ಥಾನ Read More »

ಉಗ್ರರನ್ನು ಮಟ್ಟ ಹಾಕಲೇ ಬೇಕು, ಎಲ್ಲ ಬೆಂಬಲ ಕೊಡುತ್ತೇವೆ ಎಂದ ವಿಪಕ್ಷಗಳು

ಕಾಶ್ಮೀರದಲ್ಲಿ ಭದ್ರತಾ ಲೋಪವಾಗಿದೆ ಎಂದು ಒಪ್ಪಿಕೊಂಡ ಸರಕಾರ ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧದ ಹಿನ್ನೆಲೆಯಲ್ಲಿ ಉಗ್ರರನ್ನು ಮಟ್ಟ ಹಾಕಲು ಸರಕಾರ ಕೈಗೊಳ್ಳುವ ಯಾವುದೇ ಕ್ರಮವನ್ನು ಬೆಂಬಲಿಸುವುದಾಗಿ ವಿಪಕ್ಷಗಳು ಹೇಳಿವೆ. ಸಂಸತ್ ಭವನದಲ್ಲಿ ನಿನ್ನೆ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಎಲ್ಲ ಪ್ರಮುಖ ವಿಪಕ್ಷಗಳು ಉಗ್ರರನ್ನು ಮಟ್ಟಹಾಕಲೇ ಬೇಕು ಎಂದು ಪ್ರತಿಪಾದಿಸಿವೆ. ಸಭೆಯಲ್ಲಿ ಕೆಲ ಮಹತ್ವದ ಅಂಶಗಳನ್ನು ಚರ್ಚಿಸಿ ಉಗ್ರರ ಕೃತ್ಯವನ್ನು ಒಕ್ಕೂರಲಿನಿಂದ ಖಂಡಿಸಲಾಗಿದೆ. ಉಗ್ರರನ್ನು ಮಟ್ಟ ಹಾಕಲು ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡರೂ ತಮ್ಮ ಬೆಂಬಲವಿದೆ

ಉಗ್ರರನ್ನು ಮಟ್ಟ ಹಾಕಲೇ ಬೇಕು, ಎಲ್ಲ ಬೆಂಬಲ ಕೊಡುತ್ತೇವೆ ಎಂದ ವಿಪಕ್ಷಗಳು Read More »

error: Content is protected !!
Scroll to Top