ದೇಶ

ಶಿವಲಿಂಗದ ಮೇಲೆ ಕಾಲಿಟ್ಟು ರೀಲ್ಸ್ ಮಾಡಿದ ಯುವಕ | ಯುವಕ ಅರೆಸ್ಟ್

ಮಧ್ಯಪ್ರದೇಶ :  ಯುವಕನೋರ್ವ ಶಿವಲಿಂಗದ ಮೇಲೆ ಕಾಲು ಇರಿಸಿ ರೀಲ್ಸ್ ಮಾಡಿದ ಘಟನೆ ಮಧ್ಯಪ್ರದೇಶದ ರತ್ತಂ ಜಿಲ್ಲೆಯಲ್ಲಿ ನಡೆದಿದೆ. ಶಿವಲಿಂಗದ ಮೇಲೆ ಕಾಲಿಟ್ಟು ರೀಲ್ಸ್ ಮಾಡಿ, ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ್ದ  ವಿಡಿಯೋ ವೈರಲ್ ಆಗಿದೆ. ಈ ಕುರಿತಾಗಿ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಆತನನ್ನು ಬಂಧಿಸಿದ ನಂತರ ಜಿಲ್ಲಾ ಆಸ್ಪತ್ರೆಯಲ್ಲಿದ್ದ  ಜನರು ಆತನ ಮೇಲೆ ಮುಗಿಬಿದ್ದರು. ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಆತನನ್ನು ಕರೆದೊಯ್ಯುತ್ತಿದ್ದಾಗ ಕೋಪಗೊಂಡ ಜನರ ಗುಂಪು ಆತನ ಮೇಲೆ ದಾಳಿ ಮಾಡಿದ್ದಾರೆ. […]

ಶಿವಲಿಂಗದ ಮೇಲೆ ಕಾಲಿಟ್ಟು ರೀಲ್ಸ್ ಮಾಡಿದ ಯುವಕ | ಯುವಕ ಅರೆಸ್ಟ್ Read More »

ಆದಾಯ ಮಿತಿ ವಿನಾಯಿತಿ ಮಿತಿ 12 ಲ.ರೂ.ಗೇರಿಕೆ : ಮಧ್ಯಮ ವರ್ಗಕ್ಕೆ ನಿರೀಕ್ಷೆಗಿಂತಲೂ ದೊಡ್ಡ ಗಿಫ್ಟ್‌

2025-26 ಬಜೆಟ್‌ಲ್ಲಿ ಏನೇನಿದೆ? ಹೊಸದಿಲ್ಲಿ : ಬಜೆಟ್‌ 2025ರಲ್ಲಿ ಮಧ್ಯಮ ವರ್ಗಕ್ಕೆ ಕೇಂದ್ರ ಸರ್ಕಾರ ಬಂಪರ್‌ ಗಿಫ್ಟ್‌ ಕೊಟ್ಟಿದೆ. ವಾರ್ಷಿಕ 12 ಲಕ್ಷದವರೆಗೆ ಆದಾಯ ಹೊಂದಿರುವವರು ತೆರಿಗೆ ಕಟ್ಟುವಂತಿಲ್ಲ ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಘೋಷಿಸಿದ್ದಾರೆ. ಪ್ರತಿ ಬಾರಿ ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿಯನ್ನು ಹೆಚ್ಚಿಸಬೇಕು ಎಂಬ ಆಗ್ರಹ ಕೇಳಿ ಬರುತ್ತಿತ್ತು. ಹೀಗಾಗಿ ಈ ಬಾರಿ ಗರಿಷ್ಠ 10 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ನೀಡಬಹುದು ಎಂಬ ಮಾತು ಕೇಳಿ ಬಂದಿತ್ತು. ಆದರೆ ಈ ಬಾರಿ

ಆದಾಯ ಮಿತಿ ವಿನಾಯಿತಿ ಮಿತಿ 12 ಲ.ರೂ.ಗೇರಿಕೆ : ಮಧ್ಯಮ ವರ್ಗಕ್ಕೆ ನಿರೀಕ್ಷೆಗಿಂತಲೂ ದೊಡ್ಡ ಗಿಫ್ಟ್‌ Read More »

ನಿರ್ಮಲಾ ಸೀತಾರಾಮನ್‌ ದಾಖಲೆಯ 8ನೇ ಬಜೆಟ್‌ ಮಂಡನೆ ಆರಂಭ

ಹೊಸದಿಲ್ಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿಂದು ತಮ್ಮ ದಾಖಲೆಯ 8ನೇ ಬಜೆಟ್​ ಮಂಡನೆ ಆರಂಭಿಸಿದ್ದಾರೆ. ಸಂಸತ್‌ ಇತಿಹಾಸದಲ್ಲಿ ಹೆಚ್ಚು ಬಜೆಟ್‌ ಮಂಡಿಸಿದ ಮಹಿಳಾ ಹಣಕಾಸು ಮಂತ್ರಿ ಎಂಬ ಹೆಗ್ಗಳಿಕೆಗೆ ಅವರು ಈ ಮೂಲಕ ಪಾತ್ರರಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನಲ್ಲಿ 2025ರ ಕೇಂದ್ರ ಬಜೆಟನ್ನು ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದಾರೆ. ಬಜೆಟ್ ಮಂಡನೆ ಆರಂಭಿಸಿದ ಕೂಡಲೇ ವಿರೋಧ ಪಕ್ಷಗಳ ಗದ್ದಲ ಆರಂಭವಾಯಿತು. ನಮ್ಮ ಆರ್ಥಿಕತೆಯು ಎಲ್ಲಾ ಪ್ರಮುಖ ಆರ್ಥಿಕತೆಗಳಲ್ಲಿ ವೇಗವಾಗಿ ಬೆಳೆಯುತ್ತಿದೆ. ಕಳೆದ

ನಿರ್ಮಲಾ ಸೀತಾರಾಮನ್‌ ದಾಖಲೆಯ 8ನೇ ಬಜೆಟ್‌ ಮಂಡನೆ ಆರಂಭ Read More »

ಗ್ಯಾಸ್‌ ಸಿಲಿಂಡರ್‌ ಬೆಲೆ ತುಸು ಇಳಿಕೆ

ಹೊಸದಿಲ್ಲಿ: ಕೇಂದ್ರ ಬಜೆಟ್ ಮಂಡನೆಗೂ ಮುನ್ನ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ತುಸು ಇಳಿಸಿ ಸರಕಾರ ಜನರಿಗೆ ಸಿಹಿ ಸುದ್ದಿ ನೀಡಿದೆ. ವಾಣಿಜ್ಯ ಸಿಲಿಂಡರ್‌ ಬೆಲೆಯಲ್ಲಿ 7 ರೂ. ಇಳಿಕೆಯಾಗಿದೆ. ಹೊಸ ದರ ಇಂದಿನಿಂದಲೇ ಜಾರಿಗೆ ಬರಲಿದೆ. ಹೊಸ ದರದ ಪ್ರಕಾರ ದಿಲ್ಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 1,797 ರೂಪಾಯಿ ಆಗಿದೆ. ಗೃಹ ಬಳಕೆಯ 14 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಗೃಹಬಳಕೆ ಸಿಲಿಂಡರ್ ಬೆಲೆ ಈ ವರ್ಷದ ಆಗಸ್ಟ್‌ನಿಂದ ಬದಲಾಗಿಲ್ಲ.

ಗ್ಯಾಸ್‌ ಸಿಲಿಂಡರ್‌ ಬೆಲೆ ತುಸು ಇಳಿಕೆ Read More »

ಇಂದು ಕೇಂದ್ರ ಬಜೆಟ್‌ ಮಂಡನೆ : ಮಧ್ಯಮ ವರ್ಗದವರಿಗೆ ಭರಪೂರ ಕೊಡುಗೆ ಸಿಗುವ ನಿರೀಕ್ಷೆ

ಹೊಸದಿಲ್ಲಿ: ಕೇಂದ್ರದ ಬಜೆಟ್ ಅಧಿವೇಶನ ಶುಕ್ರವಾರ ಶುರುವಾಗಿದ್ದು, ಮೊದಲ ದಿನ ರಾಷ್ಟ್ರಪತಿ ದ್ರೌಪತಿ ಮುರ್ಮು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದ್ದಾರೆ. ಇದಾದ ನಂತರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉಭಯ ಸದನದಲ್ಲೂ ಆರ್ಥಿಕ ಸಮೀಕ್ಷಾ ವರದಿ ಮಂಡಿಸಿದ್ದು,. 2024-25 ರ ಆರ್ಥಿಕ ಸಮೀಕ್ಷೆಯ ಪ್ರಕಾರ 2025-26 ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಬೆಳವಣಿಗೆ ಶೇ.6.3% ಮತ್ತು ಶೇ.6.8ರ ನಡುವೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. ಮುಂಬರುವ ವರ್ಷದಲ್ಲಿ ಆರ್ಥಿಕ ಬೆಳವಣಿಗೆ ನಿಧಾನವಾಗಬಹುದು ಎಂದು ಆರ್ಥಿಕ ಸಮೀಕ್ಷೆ ಸೂಚಿಸಿದೆ.

ಇಂದು ಕೇಂದ್ರ ಬಜೆಟ್‌ ಮಂಡನೆ : ಮಧ್ಯಮ ವರ್ಗದವರಿಗೆ ಭರಪೂರ ಕೊಡುಗೆ ಸಿಗುವ ನಿರೀಕ್ಷೆ Read More »

ಫೆ.1ರಂದು ಕೇಂದ್ರ ಬಜೆಟ್‌ : ಜನಸಾಮಾನ್ಯರಲ್ಲಿದೆ ಅಪಾರ ನಿರೀಕ್ಷೆ

ಸತತ ಎಂಟನೇ ಬಜೆಟ್‌ ಮಂಡಿಸಲಿರುವ ನಿರ್ಮಲಾ ಸೀತಾರಾಮನ್‌ ಹೊಸದಿಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಬಜೆಟ್ ಮಂಡಿಸಲಿದ್ದಾರೆ. ಇದು ಅವರ ಸತತ ಎಂಟನೇ ಬಜೆಟ್ ಮಂಡನೆ ಆಗಿದೆ. ಆರ್ಥಿಕತೆಗೆ ಚುರುಕು ಮುಟ್ಟಿಸುವ ಬಹುದೊಡ್ಡ ಸವಾಲು ಮತ್ತು ನಿರೀಕ್ಷೆಗಳು ಈ ಬಜೆಟ್​ನಲ್ಲಿವೆ. ಮಧ್ಯಮ ವರ್ಗದವರ ಮೇಲಿರುವ ಅಪಾರ ತೆರಿಗೆ ಹೊರೆಯ ಭಾರ ಇಳಿಸುವ ಅಪೇಕ್ಷೆಯೂ ಇದೆ. ವಿವಿಧ ಉದ್ಯಮಗಳು ಹೆಚ್ಚಿನ ಉತ್ತೇಜನಕ್ಕಾಗಿ ಕಾಯುತ್ತಿವೆ. ಮೂಲಸೌಕರ್ಯಗಳ ಮೇಲೆ ಹೆಚ್ಚಿನ ಗಮನ ಹರಿಸಬೇಕೆಂಬ ಒತ್ತಡವೂ ಇದೆ. ಇಷ್ಟೆಲ್ಲಾ

ಫೆ.1ರಂದು ಕೇಂದ್ರ ಬಜೆಟ್‌ : ಜನಸಾಮಾನ್ಯರಲ್ಲಿದೆ ಅಪಾರ ನಿರೀಕ್ಷೆ Read More »

ಮಹಾಕುಂಭಮೇಳ ಕಾಲ್ತುಳಿತ : ಮೃತರ ಕುಟುಂಬಗಳಿಗೆ ತಲಾ 25 ಲ.ರೂ. ಪರಿಹಾರ

ತನಿಖೆಗೆ ನ್ಯಾಯಾಂಗ ಆಯೋಗ ರಚನೆ ; ಒಂದೇ ದಿನ 8 ಕೋಟಿ ಜನ ಭೇಟಿ ಪ್ರಯಾಗರಾಜ್: ಮಹಾಕುಂಭಮೇಳದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟು 60 ಮಂದಿ ಗಾಯಗೊಂಡ ಬಳಿಕ ಪ್ರಯಾಗ್‌ರಾಜ್‌ನಲ್ಲಿ ನಿಯಮಗಳನ್ನು ಇನ್ನಷ್ಟು ಬಿಗುಗೊಳಿಸಲಾಗಿದೆ. ಜನಜಂಗುಳಿ ಮತ್ತು ವಾಹನ ದಟ್ಟಣೆ ನಿಭಾಯಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮಾರ್ಗಸೂಚಿ ನೀಡಿದ್ದು, ಸ್ನಾನಕ್ಕೆ ತೆರಳುವವರನ್ನು ತಡೆದಿಡಲು ಅಲ್ಲಲ್ಲಿ ಹೋಲ್ಡಿಂಗ್‌ ಪಾಯಿಂಟ್‌ ರಚಿಸಲು ಮತ್ತು ವಾಹನಗಳ ಓಡಾಟಕ್ಕೆ ನಿರ್ಬಂಧ ಹಾಕಲು ಸೂಚಿಸಿದ್ದಾರೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ

ಮಹಾಕುಂಭಮೇಳ ಕಾಲ್ತುಳಿತ : ಮೃತರ ಕುಟುಂಬಗಳಿಗೆ ತಲಾ 25 ಲ.ರೂ. ಪರಿಹಾರ Read More »

ಪವಿತ್ರ ಸ್ನಾನ ರದ್ದಾಗಿಲ್ಲ : ಯೋಗಿ ಆದಿತ್ಯನಾಥ್‌ ಸ್ಪಷ್ಟನೆ

ಎಲ್ಲ ಘಾಟ್‌ಗಳಲ್ಲಿ ಮಾಮೂಲಿಯಂತೆ ಜನರು ಮಿಂದೇಳುತ್ತಿದ್ದಾರೆ; ವದಂತಿ ನಂಬಬೇಡಿ ಎಂದು ಮನವಿ ಪ್ರಯಾಗ್‌ರಾಜ್‌: ಕಾಲ್ತುಳಿತ ಸಂಭವಿಸಿದ ಹಿನ್ನೆಲೆಯಲ್ಲಿ ಇಂದಿನ ಪವಿತ್ರ ಸ್ನಾನವನ್ನು ರದ್ದು ಮಾಡಿಲ್ಲ, ಘಟನೆ ಸಂಭವಿಸಿದ ಬಳಿಕ ತುಸುಹೊತ್ತು ಸ್ಥಗಿತವಾಗಿತ್ತು, ಈಗ ಎಂದಿನಂತೆ ಮಹಾಕುಂಭಮೇಳೆ ನಡೆಯುತ್ತಿದೆ. ಕುಂಭಮೇಳದಲ್ಲಿ ಅವಘಡಕ ಸಂಭವಿಸಿದ ವದಂತಿಗಳನ್ನು ನಂಬಬೇಡಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.ಸಂಗಮದ ಎಲ್ಲ ಘಾಟ್‌ಗಳಲ್ಲಿ ಜನರು ಶಾಂತಿಯುತವಾಗಿ ಸ್ನಾನ ಮಾಡುತ್ತಿದ್ದಾರೆ. ಯಾವುದೇ ವದಂತಿಗೆ ಕಿವಿಗೊಡಬೇಡಿ. ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗಿಲ್ಲ, ಜನರು ಅವಸರ ಮಾಡಲು ಹೋಗಿ

ಪವಿತ್ರ ಸ್ನಾನ ರದ್ದಾಗಿಲ್ಲ : ಯೋಗಿ ಆದಿತ್ಯನಾಥ್‌ ಸ್ಪಷ್ಟನೆ Read More »

ಮಹಾಕುಂಭಮೇಳದಲ್ಲಿ ಕಾಲ್ತುಳಿತ : ಹಲವರು ಸಾವಿಗೀಡಾಗಿರುವ ಶಂಕೆ

ಇಂದಿನ ಪವಿತ್ರ ಸ್ನಾನ ರದ್ದು; ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ಪ್ರಯಾಗ್‌ರಾಜ್‌: ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 10ರಿಂದ 15 ಮಂದಿ ಮೃತರಾಗಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತು ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ. ಆಸ್ಪತ್ರೆಗೆ 15ಕ್ಕೂ ಹೆಚ್ಚು ಮೃತದೇಹಗಳನ್ನು ತರಲಾಗಿದೆ ಎಂದು ವಿದೇಶ ಮಾಧ್ಯಮವೊಂದು ವರದಿ ಮಾಡಿದೆ.ಇಂದು ಮೌನಿ ಅಮಾವಾಸ್ಯೆಯ ಪವಿತ್ರ ಸ್ನಾನಕ್ಕಾಗಿ ಪ್ರಯಾಗ್‌ರಾಜ್‌ನಲ್ಲಿ ಕೋಟಿಗಟ್ಟಲೆ ಜನರು ಸೇರಿದ್ದರು. ಈ ಸಂದರ್ಭದಲ್ಲಿ ತಡೆಬೇಲಿ ಮುರಿದು ಸ್ನಾನಕ್ಕೆ ಧಾವಿಸಿದವರು ಜನರನ್ನು ತುಳಿದುಕೊಂಡು ಹೋದ ಪರಿಣಾಮವಾಗಿ ಕಾಲ್ತುಳಿತ ಸಂಭವಿಸಿದೆ

ಮಹಾಕುಂಭಮೇಳದಲ್ಲಿ ಕಾಲ್ತುಳಿತ : ಹಲವರು ಸಾವಿಗೀಡಾಗಿರುವ ಶಂಕೆ Read More »

ಮಹಾಕುಂಭಮೇಳದಲ್ಲಿ ನೂಕುನುಗ್ಗಲು : ಹಲವು ಮಂದಿಗೆ ಗಾಯ

ಮೌನಿ ಅಮವಾಸ್ಯೆ ಸ್ನಾನಕ್ಕೆ ಸೇರಿರುವ ಕೋಟಿಗಟ್ಟಲೆ ಜನ ಪ್ರಯಾಗ್‌ರಾಜ್‌ : ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಂದು ನಸುಕಿನ ಹೊತ್ತು ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ ಗಾಯಗೊಂಡಿದ್ದಾರೆ. ಕೆಲವ ಸ್ಥಿತಿ ಚಿಂತಾಜನಕವಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಲಕ್ಷಾಂತರ ಮಂದಿ ಭಕ್ತರು ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಹಲವು ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಹಲವು ಮಂದಿ ಕಾಲಿನಡಿಗೆ ಬಿದ್ದು,

ಮಹಾಕುಂಭಮೇಳದಲ್ಲಿ ನೂಕುನುಗ್ಗಲು : ಹಲವು ಮಂದಿಗೆ ಗಾಯ Read More »

error: Content is protected !!
Scroll to Top