ದೇಶ

ಅಯೋಧ್ಯೆಯಲ್ಲಿ ನಾಳೆ ಬೆಳಗಲಿವೆ 26.11 ಲಕ್ಷ ಮಣ್ಣಿನ ಹಣತೆಗಳು

ಈ ದೀಪಾವಳಿಗೆ ಮತ್ತೊಂದು ವಿಶ್ವ ದಾಖಲೆ ನಿರ್ಮಿಸಲು ಅಯೋಧ್ಯೆ ಸಜ್ಜು ಲಖನೌ: ದೀಪಾವಳಿಯ ಸ್ವಾಗತಕ್ಕೆ ಶ್ರೀರಾಮನ ಜನ್ಮಸ್ಥಾನ ಅಯೋಧ್ಯೆ ಸಜ್ಜಾಗಿದ್ದು, ಈ ಬಾರಿ ಅಯೋಧ್ಯೆಯಲ್ಲಿ ದೀಪಾವಳಿ ಅಂಗವಾಗಿ ಬರೋಬ್ಬರಿ 26.11 ಲಕ್ಷ ಮಣ್ಣಿನ ದೀಪಗಳನ್ನು ಅಕ್ಟೋಬರ್ 19ರಂದು ಬೆಳಗಿಸಲಾಗುತ್ತಿದೆ. ಇದು ಹೊಸ ಗಿನ್ನೆಸ್ ವಿಶ್ವ ದಾಖಲೆಯನ್ನು ಸ್ಥಾಪಿಸುವ ನಿರೀಕ್ಷೆ ಇದೆ. ಇದು ನಂಬಿಕೆ ಮತ್ತು ಸಮುದಾಯ ಮನೋಭಾವಕ್ಕೆ ಮಹತ್ವದ ಸಾಕ್ಷಿಯಾಗಿದೆ. ಈ ವರ್ಷ ದೀಪಾವಳಿಗೆ ಅಯೋಧ್ಯೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಸೇರುವ ಸಾಧ್ಯತೆಗಳಿವೆ. ಡಾ.ರಾಮ್ ಮನೋಹರ್ ಲೋಹಿಯಾ […]

ಅಯೋಧ್ಯೆಯಲ್ಲಿ ನಾಳೆ ಬೆಳಗಲಿವೆ 26.11 ಲಕ್ಷ ಮಣ್ಣಿನ ಹಣತೆಗಳು Read More »

ಪ್ರಿಯಾಂಕ್‌ ಖರ್ಗೆ ಕ್ಷೇತ್ರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅಳವಡಿಸಿದ್ದ ಕೇಸರಿ ಅಲಂಕಾರ ತೆರವು

ಕಾಂಗ್ರೆಸ್‌ ದ್ವೇಷದ ಕ್ರಮ ಎಂದು ಹರಿಹಾಯ್ದ ಬಿಜೆಪಿ, ಆರ್‌ಎಸ್‌ಎಸ್‌ ನಾಯಕರು ಬೆಂಗಳೂರು : ರಾಜ್ಯದಲ್ಲಿ ಆರ್‌ಎಸ್‌ಎಸ್‌ಗೆ ನಿರ್ಬಂಧ ವಿಚಾರ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆಯವರ ಚಿತ್ತಾಪುರ ಕ್ಷೇತ್ರದಲ್ಲಿ ಅ. 19ರಂದು ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥ ಸಂಚಲನಕ್ಕಾಗಿ ಅಳವಡಿಸಿದ ಅಲಂಕಾರಿಕ ಕೇಸರಿ ಧ್ವಜಗಳು, ಬ್ಯಾನರ್‌ಗಳನ್ನು, ಕೇಸರಿ ಪತಾಕೆಗಳನ್ನು ತೆರವುಗೊಳಿಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ವಿಜಯ ದಶಮಿ ಉತ್ಸವ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಸಂಭ್ರಮಕ್ಕಾಗಿ ಭರ್ಜರಿ ತಯಾರಿಯನ್ನು ನಡೆಸಿಕೊಳ್ಳಲಾಗುತ್ತಿತ್ತು. ಚಿತ್ತಾಪುರ

ಪ್ರಿಯಾಂಕ್‌ ಖರ್ಗೆ ಕ್ಷೇತ್ರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅಳವಡಿಸಿದ್ದ ಕೇಸರಿ ಅಲಂಕಾರ ತೆರವು Read More »

ಬ್ಯಾಂಕಿಗೆ 13 ಸಾವಿರ ಕೋಟಿ ರೂ. ವಂಚಿಸಿದ ಉದ್ಯಮಿ ಮೆಹುಲ್‌ ಚೋಕ್ಸಿ ಗಡಿಪಾರಿಗೆ ಸಮ್ಮತಿ

ಮುಂಬಯಿಯ ಆರ್ಥರ್‌ ರೋಡ್‌ ಜೈಲಿನಲ್ಲಿ ತಯಾರಾಗಿದೆ ಚೋಕ್ಸಿಗೆ ಸೆಲ್‌ ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 13,000 ಕೋಟಿ ರೂಪಾಯಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ, ದೇಶದಿಂದ ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ವಿರುದ್ಧ ಭಾರತವು ಪ್ರಮುಖ ಯಶಸ್ಸನ್ನು ಸಾಧಿಸಿದೆ. ಬೆಲ್ಜಿಯಂನ ನ್ಯಾಯಾಲಯ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಲು ಅನುಮೋದನೆ ನೀಡಿದೆ. ನ್ಯಾಯಾಲಯವು ಭಾರತದ ಹಸ್ತಾಂತರ ವಿನಂತಿಯನ್ನು ಎತ್ತಿಹಿಡಿದ್ದು ಚೋಕ್ಸಿಯ ಬಂಧನ ಕಾನೂನುಬದ್ಧವಾಗಿದೆ ಎಂದು ಘೋಷಿಸಿದೆ. ಆದಾಗ್ಯೂ, ಚೋಕ್ಸಿಗೆ ಈ ನಿರ್ಧಾರವನ್ನು ಬೆಲ್ಜಿಯಂ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಆಯ್ಕೆ

ಬ್ಯಾಂಕಿಗೆ 13 ಸಾವಿರ ಕೋಟಿ ರೂ. ವಂಚಿಸಿದ ಉದ್ಯಮಿ ಮೆಹುಲ್‌ ಚೋಕ್ಸಿ ಗಡಿಪಾರಿಗೆ ಸಮ್ಮತಿ Read More »

ಡಿಐಜಿ ಮನೆಯಲ್ಲಿತ್ತು 5 ಕೋಟಿ ನಗದು, ಕೆಜಿಗಟ್ಟಲೆ ಚಿನ್ನ

ಭ್ರಷ್ಟ ಅಧಿಕಾರಿಯ ಸಂಪತ್ತು ನೋಡಿ ಸಿಬಿಐ ಅಧಿಕಾರಿಗಳಿಗೆ ಶಾಕ್‌ ಹೊಸದಿಲ್ಲಿ : ಡಿಐಜಿಯೊಬ್ಬರ ಮನೆಯಲ್ಲಿ ಸಂಪತ್ತಿನ ಕೊಪ್ಪರಿಗೆಯೇ ಪತ್ತೆಯಾಗಿದ್ದು, ಇದನ್ನು ನೋಡಿ ಅಧಿಕಾರಿಗಳೇ ದಂಗುಬಡಿದು ಹೋಗಿದ್ದಾರೆ. ಅಪಾರ ಪ್ರಮಾಣದ ನಗದು, ಚಿನ್ನಾಭರಣ, ಕಂತೆ ಕಂತೆ ನೋಟುಗಳು, ವಜ್ರ, ಚಿನ್ನದ ಆಭರಣಗಳು, ಬೆಲೆಬಾಳುವ ವಾಚ್​​ಗಳು ಸೇರಿದಂತೆ ಸಂಪತ್ತಿನ ಖಜಾನೆಯನ್ನೇ ಸಿಬಿಐ ವಶಕ್ಕೆ ಪಡೆದುಕೊಂಡಿದೆ. 8 ಲಕ್ಷ ರೂ. ಲಂಚ ಪ್ರಕರಣವೊಂದರಲ್ಲಿ ಅಖಾಡಕ್ಕಿಳಿದ ಸಿಬಿಐ ಭ್ರಷ್ಟ ಐಪಿಎಸ್ ಅಧಿಕಾರಿ ಪಂಜಾಬ್‌ನ ರೋಪರ್ ವಲಯ ಡಿಐಜಿ ಹರ್‌ಚರಣ್ ಸಿಂಗ್ ಭುಲ್ಲಾರ್ ಅವರ

ಡಿಐಜಿ ಮನೆಯಲ್ಲಿತ್ತು 5 ಕೋಟಿ ನಗದು, ಕೆಜಿಗಟ್ಟಲೆ ಚಿನ್ನ Read More »

1.50 ಲಕ್ಷದತ್ತ ಚಿನ್ನದ ಬೆಲೆ : ಬೆಳ್ಳಿ 2 ಲಕ್ಷ ತಲುಪುವ ಸಾಧ್ಯತೆ

ಹಬ್ಬದ ಸಂದರ್ಭದಲ್ಲೇ ಬೆಲೆ ಏರಿಕೆಯ ಬಿಸಿ ಬೆಂಗಳೂರು: ದೀಪಾವಳಿ ಹಬ್ಬ ಸಮೀಪಿಸುತ್ತಿರುವಂತೆಯೇ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯ ನಾಗಾಲೋಟವೂ ಮುಂದುವರಿದಿದೆ. ಚಿನ್ನ 10 ಗ್ರಾಂಗೆ ಈಗಾಗಲೇ 1.20 ಲ.ರೂ. ಆಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಇದು 1.50 ಲ.ರೂ. ಆಗಬಹುದು ಎನ್ನಲಾಗುತ್ತಿದೆ. ದೀಪಾವಳಿ ಸಂದರ್ಭದಲ್ಲಿ ಚಿನ್ನ ಮತ್ತು ಬೆಳ್ಳಿ ಒಡವೆ ಖರೀದಿಸುವುದು ವಾಡಿಕೆ. ಆದರೆ ಕಳೆದ ಕೆಲವು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆ ಸಿಕ್ಕಾಪಟ್ಟೆ ಏರಿಕೆಯಾಗುತ್ತಿರುವುದರಿಂದ ಜನರು ಚಿನ್ನದಂಗಡಿಗಳತ್ತ ಸುಳಿಯಲು ಹಿಂದೇಟು

1.50 ಲಕ್ಷದತ್ತ ಚಿನ್ನದ ಬೆಲೆ : ಬೆಳ್ಳಿ 2 ಲಕ್ಷ ತಲುಪುವ ಸಾಧ್ಯತೆ Read More »

ಅ.22ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ಭೇಟಿ

ತುಲಾ ಮಾಸದ ಕೊನೆಯ ದಿನ ವಿಶೇಷ ಪೂಜೆ ಸಲ್ಲಿಸಲಿರುವ ರಾಷ್ಟ್ರಪತಿ ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ತುಲಾ ಮಾಸ ಪೂಜೆಯ ಕೊನೆಯ ದಿನವಾದ ಅ.22ರಂದು ಕೇರಳದಲ್ಲಿರುವ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಈ ಮೂಲಕ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡಿದ ಭಾರತದ ಮೊದಲ ಹಾಲಿ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಅ.21ರಂದು ಸಂಜೆ 6.20ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ತಿರುವನಂತಪುರಂಕ್ಕೆ ಆಗಮಿಸಲಿದ್ದು, ರಾತ್ರಿ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಅ.22ರಂದು ತಿರುವನಂತಪುರದಿಂದ ಹೆಲಿಕಾಪ್ಟರ್ ಮೂಲಕ ನೀಲಕ್ಕಲ್‌ಗೆ ಆಗಮಿಸಿ

ಅ.22ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆಗೆ ಭೇಟಿ Read More »

ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ : 20 ಪ್ರಯಾಣಿಕರು ಜೀವಂತ ಸುಟ್ಟು ಕರಕಲು

ಖರೀದಿಸಿ ಐದು ದಿನವಷ್ಟೇ ಆಗಿದ್ದ ಬಸ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಅವಘಡ ಜೈಪುರ : ರಾಜಸ್ಥಾನದ ಜೈಸಲ್ಮೇರ್ ಬಳಿ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮವಾಗಿ 20 ಜನರು ಜೀವಂತ ಸುಟ್ಟು ಕರಕಲಾದ ದಾರುಣ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಹೊಸದಾಗಿ ಖರೀದಿ ಮಾಡಿದ್ದ ಬಸ್‌ ಕೆಲವೇ ಟ್ರಿಪ್‌ಗಳನ್ನಷ್ಟೇ ಮಾಡಿತ್ತು ಎಂದು ತಿಳಿದುಬಂದಿದೆ. ಸಂಜೆ 4 ಗಂಟೆಗೆ ಪ್ರಯಾಣ ಆರಂಭಿಸಿದ ಬಸ್‌ ಹೆದ್ದಾರಿಯಲ್ಲಿ ಚಲಿಸುತ್ತಿರುವಾಗ ಹಿಂಬದಿಯಿಂದ ಹೊಗೆ ಬರಲಾರಂಭಿಸಿದೆ. ಚಾಲಕ ಬಸ್ಸನ್ನು ರಸ್ತೆ

ಚಲಿಸುತ್ತಿದ್ದ ಬಸ್‌ ಬೆಂಕಿಗಾಹುತಿ : 20 ಪ್ರಯಾಣಿಕರು ಜೀವಂತ ಸುಟ್ಟು ಕರಕಲು Read More »

ಆದಾಯ ಸಾಕಾಗುತ್ತಿಲ್ಲ ಸಚಿವ ಸ್ಥಾನದಿಂದ ಕೈಬಿಡಿ ಎಂದು ಮನವಿ ಮಾಡಿದ ಸುರೇಶ್‌ ಗೋಪಿ!

ರಾಜಕೀಯ ವಲಯದಲ್ಲಿ ಅಚ್ಚರಿ ಹುಟ್ಟಿಸಿದ ಕೇರಳದ ಸಂಸದನ ಬಹಿರಂಗ ಹೇಳಿಕೆ ನವದೆಹಲಿ: ಸಚಿವ ಸ್ಥಾನಕ್ಕೆ ಇನ್ನಿಲ್ಲದಂತೆ ತಿಪ್ಪರಲಾಗ ಹಾಕುವ ರಾಜಕಾರಣಿಗಳ ನಡುವೆ ಕೇರಳದ ತ್ರಿಶ್ಶೂರಿನಿಂದ ಲೋಕಸಭೆಗೆ ಆಯ್ಕೆಯಾಗಿ ಸಚಿವರಾಗಿರುವ ಚಿತ್ರನಟ ಸುರೇಶ್‌ ಗೋಪಿ ನನಗೆ ಸಚಿವ ಸ್ಥಾನ ಬೇಡ ಎಂದು ಬಹಿರಂಗವಾಗಿ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಕೇರಳದಲ್ಲಿ ಬಿಜೆಪಿಯಿಂದ ಲೋಕಸಭೆ ಚುನಾವಣೆ ಗೆದ್ದಿರುವ ಮೊದಲ ಸಂಸದ ಎಂಬ ಹಿರಿಮೆಯನ್ನೂ ಹೊಂದಿರುವ ಸುರೇಶ್‌ ಗೋಪಿ ಸಚಿವ ಸ್ಥಾನ ಬೇಡ ಎಂದಿರುವುದಕ್ಕೆ ನೀಡಿರುವ ಕಾರಣ ಮತ್ತೊಂದು ಅಚ್ಚರಿಗೆ ಕಾರಣವಾಗಿದೆ. ಸದ್ಯ

ಆದಾಯ ಸಾಕಾಗುತ್ತಿಲ್ಲ ಸಚಿವ ಸ್ಥಾನದಿಂದ ಕೈಬಿಡಿ ಎಂದು ಮನವಿ ಮಾಡಿದ ಸುರೇಶ್‌ ಗೋಪಿ! Read More »

ಚಿನ್ನ, ಬೆಳ್ಳಿ ಬೆಲೆ ಏರಿಕೆ ನಾಗಾಲೋಟ : ಮದುವೆ ಸೀಸನ್‌ನಲ್ಲೇ ಚಿಂತೆಗೆ ಕಾರಣವಾದ ದರ

ಚಿನ್ನ 10 ಗ್ರಾಂಗೆ 1.24 ಲ.ರೂ; ಬೆಳ್ಳಿ ಕೆಜಿಗೆ 1.60 ಲಕ್ಷ ರೂ. ಬೆಂಗಳೂರು: ಚಿನ್ನ ಮತ್ತು ಬೆಳ್ಳಿಯ ಬೆಲೆ ಮತ್ತೆ ಗಗನಮುಖಿಯಾಗಿದೆ. ಹಬ್ಬಗಳು, ಮದುವೆ ಸೀಸನ್‌ ಶುರುವಾಗಲೇ ಚಿನ್ನ ಮತ್ತು ಬೆಳ್ಳಿಯ ಬೆಲೆ ಏರಿಕೆಯಾಗುತ್ತಿರುವುದು ಜನರ ಚಿಂತೆಗೆ ಕಾರಣವಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಬಂಗಾರ ಮತ್ತು ಬೆಳ್ಳಿ ಎರಡೂ ಮಧ್ಯಮ ಮತ್ತು ಬಡ ವರ್ಗದವರಿಗೆ ಕೈಗೆಟುಕದಂತಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 1,24,000 ರೂ. ಮತ್ತು ಬೆಳ್ಳಿ ಕೆ.ಜಿಗೆ 1,60,000 ರೂ. ಆಗಿದೆ. ಪ್ರಮುಖವಾಗಿ

ಚಿನ್ನ, ಬೆಳ್ಳಿ ಬೆಲೆ ಏರಿಕೆ ನಾಗಾಲೋಟ : ಮದುವೆ ಸೀಸನ್‌ನಲ್ಲೇ ಚಿಂತೆಗೆ ಕಾರಣವಾದ ದರ Read More »

ಅಫಘಾನಿಸ್ತಾನ ವಿದೇಶಾಂಗ ಸಚಿವ ಭಾರತಕ್ಕೆ ಆಗಮನ

ಭಾರತದೊಂದಿಗೆ ಮಹತ್ವದ ಮಾತುಕತೆ ನಡೆಸಲಿರುವ ಸಚಿವ ಮುತ್ತಕಿ ನವದೆಹಲಿ: ಅಫಘಾನಿಸ್ತಾನದ ತಾಲಿಬಾನ್‌ ಸರ್ಕಾರದ ವಿದೇಶಾಂಗ ಸಚಿವ ಅಮೀರ್‌ ಖಾನ್‌ ಮುತ್ತಕಿ ಇಂದು ದೆಹಲಿಗೆ ಆಗಮಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಅಧಿಕಾರ ವಹಿಸಿಕೊಂಡ ನಂತರ ಅಲ್ಲಿನ ಸಚಿವರೊಬ್ಬರ ಭಾರತಕ್ಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಇದು ಐತಿಹಾಸಿಕ ಭೇಟಿ ಎನ್ನಲಾಗಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮುತ್ತಕಿ ಅವರಿಗೆ ಅಂತಾರಾಷ್ಟ್ರೀಯ ಪ್ರಯಾಣ ನಿರ್ಬಂಧಗಳಿಂದ ತಾತ್ಕಾಲಿಕ ವಿನಾಯಿತಿ ನೀಡಿದ್ದರಿಂದ ಮುತ್ತಕಿ ಭಾರತಕ್ಕೆ ಬಂದಿದ್ದಾರೆ. ಭದ್ರತಾ ಮಂಡಳಿ ಅ.9 ಮತ್ತು 16ರ ನಡುವೆ ಭಾರತಕ್ಕೆ ಭೇಟಿ

ಅಫಘಾನಿಸ್ತಾನ ವಿದೇಶಾಂಗ ಸಚಿವ ಭಾರತಕ್ಕೆ ಆಗಮನ Read More »

error: Content is protected !!
Scroll to Top