ದೇಶ

1.05 ಲಕ್ಷ ಕೋಟಿ ರೂ. ಗಳ ರಕ್ಷಣಾ ವ್ಯವಸ್ಥೆಗಳ ಖರೀದಿಗೆ ಅನುಮೋದನೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಂದ ಅಂಕಿತ ನವದೆಹಲಿ: ದೇಶದ ಸೇನಾ ಪಡೆಗಳ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ಸುಮಾರು 1.05 ಲಕ್ಷ ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರ, ಸೇನಾ ವಾಹನ, ರಕ್ಷಣಾ ವ್ಯವಸ್ಥೆಗಳ ಖರೀದಿಗೆ ರಕ್ಷಣಾ ಸಚಿವಾಲಯ ಅನುಮೋದನೆ ನೀಡಿದೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ನೇತೃತ್ವದ ರಕ್ಷಣಾ ಖರೀದಿ ಮಂಡಳಿಯು ಇದಕ್ಕೆ ಸಂಬಂಧಿಸಿದ ಕಡತಗಳಿಗೆ ಅಂಕಿತ ಹಾಕಿದೆ. ಶಸ್ತ್ರಸಜ್ಜಿತ ವಾಹನಗಳು, ಎಲೆಕ್ಟ್ರಾನಿಕ್ ಯುದ್ಧ ವ್ಯವಸ್ಥೆಗಳು, ಸೂಪರ್ ರ್ಯಾಪಿಡ್ ಗನ್‌ಗಳು, ಸ್ವಯಂಚಾಲಿತ ಜಲಾಂತರ್ಗಾಮಿ ಮೊದಲಾದ ರಕ್ಷಣಾ ವಿಷಯಗಳಿಗೆ […]

1.05 ಲಕ್ಷ ಕೋಟಿ ರೂ. ಗಳ ರಕ್ಷಣಾ ವ್ಯವಸ್ಥೆಗಳ ಖರೀದಿಗೆ ಅನುಮೋದನೆ Read More »

ಸರ್ಕಾರದ ಯೋಜನೆಗಳ ಪ್ರಯೋಜನ ಬಡವರು, ದೀನರನ್ನು ತಲುಪುತ್ತದೆ: ಪ್ರಧಾನಿ ಮೋದಿ

ಶೀಘ್ರದಲ್ಲೇ ಭಾರತ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ನಿರೀಕ್ಷೆ! ಭಾರತದ ಪ್ರಗತಿಗೆ ಯುವಜನರು ಶಕ್ತಿ ತುಂಬುತ್ತಿದ್ದಾರೆ ನವದೆಹಲಿ: ಪ್ರಧಾನಿ ಮೋದಿ ಅವರು ಆಫ್ರಿಕನ್ ದೇಶಗಳ ಪ್ರವಾಸದಲ್ಲಿದ್ದು, ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳ ಪಟ್ಟಿಯಲ್ಲಿ ಭಾರತವು ಇದೆ. ಶೀಘ್ರದಲ್ಲೇ ಮೂರನೇ ಅತೀ ದೊಡ್ಡ ಆರ್ಥಿಕತೆಯಾಗುವ ಸಿದ್ಧತೆಯಲ್ಲಿ ನಾವಿದ್ದೇವೆ. ಹಾಗೆಯೇ ಭಾರತದ ಅಭಿವೃದ್ಧಿಯ ಫಲಗಳು ತೀರಾ ಅಗತ್ಯವಿರುವವರನ್ನು ತಲುಪುತ್ತಿವೆ. ಭಾರತ‌ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಅಭಿವೃದ್ಧಿ ಯೋಜನೆಗಳು ದೇಶದ

ಸರ್ಕಾರದ ಯೋಜನೆಗಳ ಪ್ರಯೋಜನ ಬಡವರು, ದೀನರನ್ನು ತಲುಪುತ್ತದೆ: ಪ್ರಧಾನಿ ಮೋದಿ Read More »

ಬಿಜೆಪಿಗೆ ಈ ಸಲ ಮಹಿಳಾ ಸಾರಥ್ಯ?

ಮುಂಚೂಣಿಯಲ್ಲಿದೆ ನಿರ್ಮಲ ಸೀತಾರಾಮನ್‌, ಡಿ.ಪುರಂದೇಶ್ವರಿ, ವನತಿ ಶ್ರೀನಿವಾಸನ್‌ ಹೆಸರು ನವದೆಹಲಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆಗಳು ಶುರುವಾಗಿದ್ದು, ಈ ಸಲ ಕೇಸರಿ ಪಕ್ಷಕ್ಕೆ ಮಹಿಳಾ ಸಾರಥ್ಯ ಸಿಗಲಿದೆ ಎಂಬ ಸುಳಿವು ಸಿಕ್ಕಿದೆ. ಹಾಲಿ ಅಧ್ಯಕ್ಷ ಜೆ.ಪಿ.ನಡ್ಡ ಅಧಿಕಾರವಧಿ 2023ಕ್ಕೆ ಮುಗಿದಿದ್ದರೂ 2024ರ ಸಾರ್ವತ್ರಿಕ ಚುನಾವಣೆವರೆಗೆ ಅವರನ್ನು ಮುಂದುವರಿಸಲಾಗಿತ್ತು. ಈಗ ಚುನಾವಣೆ ಮುಗಿದು ಒಂದು ವರ್ಷ ಕಳೆದಿದ್ದು, ಸದ್ಯದಲ್ಲೇ ಬಿಜೆಪಿಗೆ ನೂತನ ಅಧ್ಯಕ್ಷರು ಬರಲಿದ್ದಾರೆ. ಉನ್ನತ ನಾಯಕರು ಅಧ್ಯಕ್ಷರ ಆಯ್ಕೆ ಕುರಿತು ಮಾತುಕತೆಗಳನ್ನು ನಡೆಸುತ್ತಿದ್ದು, ರಾಷ್ಟ್ರೀಯ

ಬಿಜೆಪಿಗೆ ಈ ಸಲ ಮಹಿಳಾ ಸಾರಥ್ಯ? Read More »

ಮಂಗಳೂರಿನಲ್ಲಿ ಅತೀ ಎತ್ತರದ ರಾಷ್ಟ್ರೀಯ ಧ್ವಜ ನಿರ್ಮಿಸಲು ಟೆಂಡರ್ ಪ್ರಕ್ರಿಯೆ ಪೂರ್ಣ | ಶೀಘ್ರದಲ್ಲಿ ಕೆಲಸ ಆರಂಭ

ಮಂಗಳೂರು: ಕರಾವಳಿ ನಗರಿ ಮಂಗಳೂರು ತನ್ನ ಅತಿ ಎತ್ತರದ ರಾಷ್ಟ್ರೀಯ ಧ್ವಜಸ್ತಂಭವನ್ನು ಬಾವುಟಗುಡ್ಡದಲ್ಲಿ ಸ್ಥಾಪಿಸಲು ಸಜ್ಜಾಗಿದ್ದು, ಇದರ ಎತ್ತರ 295 ಅಡಿ (ಸರಿಸುಮಾರು 90 ಮೀಟರ್). ರಚನೆಗೆ ಸ್ಥಳವನ್ನು ಅಂತಿಮಗೊಳಿಸಲಾಗಿದೆ ಮತ್ತು ಟೆಂಡ‌ರ್ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಯೋಜನೆಯ ಕೆಲಸ ಶೀಘ್ರದಲ್ಲೇ ಪ್ರಾರಂಭವಾಗುವ ನಿರೀಕ್ಷೆಯಿದೆ. ಧ್ವಜಸ್ತಂಭವು ನಾಲ್ಕು ಸಿಂಹಗಳ ಲಾಂಛನ ಮತ್ತು ಅಶೋಕ ಚಕ್ರವನ್ನು ಹೊಂದಿರುವ ಪೂರ್ಣ ಪ್ರಮಾಣದ ಅಶೋಕ ಸ್ತಂಭವನ್ನು ಹೊಂದಿರುತ್ತದೆ. ಪೂರ್ಣಗೊಂಡ ನಂತರ, ಇದು ಬೆಳಗಾವಿಯಲ್ಲಿರುವ 110 ಮೀಟರ್ ಧ್ವಜಸ್ತಂಭದ ನಂತರ ಕರ್ನಾಟಕದ ಎರಡನೇ ಅತಿ

ಮಂಗಳೂರಿನಲ್ಲಿ ಅತೀ ಎತ್ತರದ ರಾಷ್ಟ್ರೀಯ ಧ್ವಜ ನಿರ್ಮಿಸಲು ಟೆಂಡರ್ ಪ್ರಕ್ರಿಯೆ ಪೂರ್ಣ | ಶೀಘ್ರದಲ್ಲಿ ಕೆಲಸ ಆರಂಭ Read More »

ಹಾಲಿವುಡ್ ವಾಕ್ ಆಫ್ ಫೇಮ್ ಸ್ಟಾರ್‌ ಹಿರಿಮೆಗೆ ಪಾತ್ರರಾದ ದೀಪಿಕಾ ಪಡುಕೋಣೆ

ನವದೆಹಲಿ: ಬಾಲಿವುಡ್ ಬೆಡಗಿ ದೀಪಿಕಾ ಪಡುಕೋಣೆಗೆ ಹಾಲಿವುಡ್ ಚೇಂಬರ್ಸ್ ಆಫ್ ಕಾಮರ್ಸ್ 2026 ನ ಮೋಷನ್ ಪಿಕ್ಚರ್ಸ್‌ ವಿಭಾಗದಲ್ಲಿ ಹಾಲಿವುಡ್ ವಾಕ್ ಆಫ್ ಫೇಮ್‌ನಲ್ಲಿ ಸ್ಟಾರ್ ನೀಡಿ ಗೌರವಿಸಲಾಗಿದೆ. ದೀಪಿಕಾ ಪಡುಕೋಣೆ ಅವರು ಜಾಗತಿಕ ಮಟ್ಟದಲ್ಲಿ ಮನರಂಜನಾ ವಲಯಕ್ಕೆ ಕೊಡುಗೆಗಳನ್ನು ನೀಡುವ ಮೂಲಕ ಗಮನಾರ್ಹ ಉಪಸ್ಥಿತಿಯನ್ನು ಉಳಿಸಿಕೊಂಡಿದ್ದಾರೆ. ಟಿಮೊಥಿ ಚಲವೆಟ್, ಎಮಿಲಿ ಬ್ಲಂಟ್, ರಾಚೆಲ್ ಮ್ಯಾಕ್ ಆ್ಯಡಮ್ಸ್, ರಾಮ್ ಮಲೆಕ್, ಸ್ಟಾನ್ಲಿ ಟುಸಿ, ಡೆಮಿ ಮೂರ್ ಮೊದಲಾದ ಪ್ರಸಿದ್ಧ ಕಲಾಕಾರರ ಜೊತೆಗೆ ಪಡುಕೋಣೆ ಈ ಹಿರಿಮೆಯನ್ನು ಹಂಚಿಕೊಂಡವರಾಗಿದ್ದಾರೆ.

ಹಾಲಿವುಡ್ ವಾಕ್ ಆಫ್ ಫೇಮ್ ಸ್ಟಾರ್‌ ಹಿರಿಮೆಗೆ ಪಾತ್ರರಾದ ದೀಪಿಕಾ ಪಡುಕೋಣೆ Read More »

ಪ್ರಧಾನಿ ಮೋದಿ ಅವರಿಗೆ ಘಾನಾದ ಅತ್ಯುನ್ನತ ಪುರಸ್ಕಾರ ಪ್ರದಾನ

ನವದೆಹಲಿ: ಪ್ರಧಾನಿ ಮೋದಿ ಅವರು ಆಫ್ರಿಕನ್ ದೇಶಗಳ ಪ್ರವಾಸದಲ್ಲಿದ್ದು, ಅವರಿಗೆ ಘಾನಾದಲ್ಲಿ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಅಲ್ಲಿನ ಅಧ್ಯಕ್ಷ‌ ಮಹಾನ್ ಅವರು ಪ್ರಧಾನಿ ಮೋದಿ ಅವರಿಗೆ ಘಾನಾದ ಅತ್ಯುನ್ನತ ಗೌರವವನ್ನು ನೀಡಿ ಪುರಸ್ಕರಿಸಿರುವುದಾಗಿದೆ. ಪುರಸ್ಕಾರ ಪಡೆದ ಪ್ರಧಾನಿ ಮೋದಿ ಅವರು ಮಾತನಾಡಿದ್ದು, ಘಾನಾದ ಈ ಅತ್ಯುನ್ನತ ಗೌರವ ಪಡೆದಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಅವರು ಜುಲೈ 9 ರ

ಪ್ರಧಾನಿ ಮೋದಿ ಅವರಿಗೆ ಘಾನಾದ ಅತ್ಯುನ್ನತ ಪುರಸ್ಕಾರ ಪ್ರದಾನ Read More »

ಮುಂಬಯಿ: ಶಿಷ್ಯನನ್ನೇ ಲೈಂಗಿಕ ಸುಖಕ್ಕೆ ಬಳಸಿಕೊಂಡ ಶಿಕ್ಷಕಿ

ಪಂಚತಾರಾ ಹೋಟೆಲ್‌ಗಳಲ್ಲಿ ಶಿಷ್ಯನ ಮೇಲೆ ದೌರ್ಜನ್ಯ ಎಸಗಿದ ಪ್ರತಿಷ್ಠಿತ ಶಾಲೆಯ ಶಿಕ್ಷಕಿ ಮುಂಬೈ: ಪ್ರತಿಷ್ಠಿತ ಶಾಲೆಯ ಶಿಕ್ಷಕಿಯೊಬ್ಬಳು ತನ್ನ ಹದಿಹರೆಯದ ಶಿಷ್ಯನನ್ನೇ ಲೈಂಗಿಕ ಸುಖಕ್ಕೆ ಬಳಸಿಕೊಂಡ ಆಘಾತಕಾರಿ ಘಟನೆ ಮುಂಬಯಿಯಲ್ಲಿ ಬೆಳಕಿಗೆ ಬಂದಿದೆ. 11ನೇ ತರಗತಿ ವಿದ್ಯಾರ್ಥಿಯ ಜೊತೆ ಲೈಂಗಿಕ ಕ್ರಿಯೆ ನಡೆಸಿದ ಆರೋಪದಲ್ಲಿ 40ರ ಹರೆಯದ ಶಿಕ್ಷಕಿಯನ್ನು ಪೋಕ್ಸೊ ಕಾಯ್ದೆಯ ಅಡಿ ಬಂಧಿಸಲಾಗಿದೆ. ಮುಂಬೈನ ಪ್ರಖ್ಯಾತ ಶಾಲೆಯ 40 ವರ್ಷದ ಇಂಗ್ಲಿಷ್‌ ಶಿಕ್ಷಕಿ ಕಳೆದ ಒಂದು ವರ್ಷದಲ್ಲಿ 16 ವರ್ಷದ ವಿದ್ಯಾರ್ಥಿಯ ಮೇಲೆ ಹಲವು ಬಾರಿ

ಮುಂಬಯಿ: ಶಿಷ್ಯನನ್ನೇ ಲೈಂಗಿಕ ಸುಖಕ್ಕೆ ಬಳಸಿಕೊಂಡ ಶಿಕ್ಷಕಿ Read More »

ಹೃದಯಾಘಾತಕ್ಕೆ ಕೋವಿಡ್‌ ಲಸಿಕೆ ಕಾರಣವಲ್ಲ : ಐಸಿಎಂಆರ್, ಏಮ್ಸ್ ಅಧ್ಯಯನದಿಂದ ದೃಢ

ದೇಶಾದ್ಯಂತ ಕಳವಳ ಸೃಷ್ಟಿಸಿರುವ ಹಾರ್ಟ್‌ ಅಟ್ಯಾಕ್‌ ಸಾವುಗಳ ಹಿನ್ನೆಲೆಯಲ್ಲಿ ಅಧ್ಯಯನ ನವದೆಹಲಿ: ಕರ್ನಾಟಕದ ಹಾಸನವೂ ಸೇರಿದಂತೆ ದೇಶದಲ್ಲಿ ಇತ್ತೀಚೆಗಿನ ಕೆಲ ಸಮಯದಿಂದ ಹೆಚ್ಚುತ್ತಿರುವ ಹೃದಯಾಘಾತಗಳಿಗೆ ಕೋವಿಡ್‌ ಲಸಿಕೆ ಕಾರಣವಲ್ಲ ಎನ್ನುವುದನ್ನು ಐಸಿಎಂಆರ್ ಮತ್ತು ಏಮ್ಸ್ ನಡೆಸಿದ ಅಧ್ಯಯನಗಳು ದೃಢಪಡಿಸಿವೆ. ಕಳೆದ ಒಂದೆರಡು ವರ್ಷಗಳಲ್ಲಿ ದೇಶದಲ್ಲಿ ಹೃದಯಾಘಾದಿಂದ ಸಾಯುತ್ತಿರುವವರ ಸಂಖ್ಯೆ ದಿಢೀರ್‌ ಹೆಚ್ಚಳವಾಗಿದೆ. ಅದರಲ್ಲೂ ಆರೋಗ್ಯವಂತ ಯುವಕ-ಯುವತಿಯರು ದಿಢೀರ್‌ ಎಂದು ಕುಸಿದು ಬಿದ್ದು ಸಾಯುತ್ತಿರುವ ಘಟನೆಗಳು ಕಳವಳ ಮೂಡಿಸಿದ್ದವು. ಈ ಹಿನ್ನೆಲೆಯಲ್ಲಿ ಕೋವಿಡ್‌ ಲಸಿಕೆ ಮೇಲೆ ಅನುಮಾನ ಉಂಟಾಗಿತ್ತು.

ಹೃದಯಾಘಾತಕ್ಕೆ ಕೋವಿಡ್‌ ಲಸಿಕೆ ಕಾರಣವಲ್ಲ : ಐಸಿಎಂಆರ್, ಏಮ್ಸ್ ಅಧ್ಯಯನದಿಂದ ದೃಢ Read More »

ಸುರ್ಜೇವಾಲಾ ಜೊತೆ ಮುಗಿಯದ ಕಾಂಗ್ರೆಸ್ ಶಾಸಕರ ದೋಷಾರೋಪ

ಬೆಂಗಳೂರು: ಕಾಂಗ್ರೆಸ್ ನಾಯಕರು ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರೊಂದಿಗೆ ಎರಡನೆಯ ದಿನವೂ ದೂರುಗಳ ಸುರಿಮಳೆದೈದಿದ್ದಾರೆ. ಕಾಂಗ್ರೆಸ್ ನಾಯಕರುಗಳ ಜೊತೆಗೆ ಸುರ್ಜೇವಾಲಾ ನಡೆಸಿದ ಮ್ಯಾರಥಾನ್ ಮುಖಾಮುಖಿ ಸಭೆಯಲ್ಲಿ ಸಚಿವರ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೂರುಗಳ ಮಳೆಯನ್ನೇ ಸುರಿಸಿದ್ದಾರೆ. ಸುಮಾರು 20 ಕ್ಕೂ ಅಧಿಕ ಕಾಂಗ್ರೆಸ್ ಶಾಸಕರುಗಳ ಜೊತೆಗೆ ಸಭೆ ನಡೆಸಿದ್ದು, ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ಹಾಗೆ ಸಾಕಷ್ಟು ಅನುದಾನ ನೀಡುವಂತೆ, ಅಭಿವೃದ್ಧಿ ಕೆಲಸಗಳನ್ನು ಮಾಡುವಂತೆ ವಿನಂತಿಸಿದ್ದಾರೆ. ಹಾಗೆಯೇ ತಮ್ಮ ಕ್ಷೇತ್ರಗಳಿಗೆ ಸಂಬಂಧಿಸಿದ ಕಡತಗಳ ವಿಲೇವಾರಿಯಲ್ಲಿ ಆಗುತ್ತಿರುವ

ಸುರ್ಜೇವಾಲಾ ಜೊತೆ ಮುಗಿಯದ ಕಾಂಗ್ರೆಸ್ ಶಾಸಕರ ದೋಷಾರೋಪ Read More »

ಸೆ.5ರಿಂದ ಏಷ್ಯಾ ಕಪ್‌ ಕ್ರಿಕೆಟ್‌ ಟೂರ್ನಿ : ಟಿ20 ಮಾದರಿಯಲ್ಲಿ ಪಂದ್ಯ

ಮೊದಲ ಸುತ್ತಿನಲ್ಲೇ ಭಾರತ-ಪಾಕಿಸ್ತಾನ ಮುಖಾಮುಖಿ ನವದೆಹಲಿ : ಏಷ್ಯಾ ಉಪಖಂಡದ ಕ್ರಿಕೆಟ್‌ ರಾಷ್ಟ್ರಗಳ ನಡುವಿನ ಮಿನಿ ಸಮರ ಏಷ್ಯಾಕಪ್‌ ಕೂಟದ ಕರಡು ವೇಳಾಪಟ್ಟಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಿದ್ಧಪಡಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಸೆಪ್ಟೆಂಬರ್ 5ರಿಂದ 17ನೇ ಆವೃತ್ತಿಯ ಏಷ್ಯಾ ಕಪ್ ಶುರುವಾಗಲಿದೆ. ಫೈನಲ್ ಪಂದ್ಯವನ್ನು ಸೆಪ್ಟೆಂಬರ್ 21ರಂದು ಆಯೋಜಿಸಲು ನಿರ್ಧರಿಸಲಾಗಿದೆ. ಈ ಬಾರಿಯ ಟೂರ್ನಿಯನ್ನು ಯುಎಇನಲ್ಲಿ ಆಯೋಜಿಸುವ ಸಾಧ್ಯತೆಯಿದೆ. ಆ ಸಂದರ್ಭದ ಪರಿಸ್ಥಿತಿಯನ್ನು ಹೊಂದಿಕೊಂಡು ಪಂದ್ಯಗಳ ದಿನಾಂಕ ಮತ್ತು ಸ್ಥಳದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.

ಸೆ.5ರಿಂದ ಏಷ್ಯಾ ಕಪ್‌ ಕ್ರಿಕೆಟ್‌ ಟೂರ್ನಿ : ಟಿ20 ಮಾದರಿಯಲ್ಲಿ ಪಂದ್ಯ Read More »

error: Content is protected !!
Scroll to Top