ದೇಶ

ಪಾಕಿಸ್ತಾನಕ್ಕೆ ಸಿಂಧೂ ನದಿ ನೀರನ್ನು ಬಿಡುವ ಮಾತೇ ಇಲ್ಲ : ಅಮಿತ್ ಶಾ

ನವದೆಹಲಿ: ಪಾಕಿಸ್ತಾನದ ಜೊತೆಗಿನ ಸಿಂಧೂ ಜಲ ಒಪ್ಪಂದ ಭಾರತಕ್ಕೆ ನ್ಯಾಯಸಮ್ಮತವಲ್ಲ. ಪಾಕ್ ಜೊತೆ ಈ ಒಪ್ಪಂದವನ್ನು ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಕಳೆದ ತಿಂಗಳು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ‌ ಉಗ್ರ ಕೃತ್ಯ ನಡೆಸಿದ್ದ ಪಾಕ್‌ ಗೆ ತಕ್ಕ ಶಾಸ್ತಿ ಮಾಡಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಿಂಧೂ ಜಲ ಒಪ್ಪಂದವನ್ನು ಅಮಾನತು ಮಾಡಿತ್ತು. ಈ ಬಗ್ಗೆ ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಶಾ ಸ್ಪಷ್ಟಪಡಿಸಿದ್ದು, ಸಿಂಧೂ […]

ಪಾಕಿಸ್ತಾನಕ್ಕೆ ಸಿಂಧೂ ನದಿ ನೀರನ್ನು ಬಿಡುವ ಮಾತೇ ಇಲ್ಲ : ಅಮಿತ್ ಶಾ Read More »

ಸೈನಿಕರು ಬಲಿಷ್ಠವಾಗಿದ್ದರಷ್ಟೇ ದೇಶ ಬಲಿಷ್ಠ : ರಾಜನಾಥ್ ಸಿಂಗ್

ಉಧಂಪುರ: ಮುಂದಿನ ದಿನಗಳಲ್ಲಿ ಭಾರತ ಎಂದಿಗೂ ಭಯೋತ್ಪಾದನೆಗೆ ಬಲಿಯಾಗುವುದಿಲ್ಲ. ಉಗ್ರ ಶಕ್ತಿಗಳ ವಿರುದ್ಧ ಶಕ್ತಿ ಮತ್ತು ಕಾರ್ಯ ತಂತ್ರಗಳ ಮೂಲಕ ನಾವು ಪ್ರತಿಕ್ರಿಯೆ ನೀಡುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಉಧಂಪುರ ಉತ್ತರ ಕಮಾಂಡ್‌ನಲ್ಲಿ ಸೈನಿಕರ ಜೊತೆಗೆ ಸಂವಾದ ನಡೆಸಿದ ಅವರು ಉಗ್ರವಾದದ ವಿರುದ್ದ ಭಾರತದ ಬಲವಾದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಪಾಕ್ ಮತ್ತು ಪಿಒಕೆ‌ಯಲ್ಲಿ ಉಗ್ರರ ಮೂಲಸೌಕರ್ಯಗಳನ್ನು ನಾಶ ಮಾಡುವ ಕಾರ್ಯದಲ್ಲಿ ಭಾರತೀಯ ಸಶಸ್ತ್ರ ಪಡೆಗಳು ಮತ್ತು ಗುಪ್ತಚರ ಸಂಸ್ಥೆಗಳ ಸಮನ್ವಯತೆ, ನಿಖರತೆ ಮತ್ತು

ಸೈನಿಕರು ಬಲಿಷ್ಠವಾಗಿದ್ದರಷ್ಟೇ ದೇಶ ಬಲಿಷ್ಠ : ರಾಜನಾಥ್ ಸಿಂಗ್ Read More »

ವಿಶ್ವದ ಕೋಟ್ಯಂತರ ಜೀವನ ಶೈಲಿ ಬದಲಿಸಿದ ಯೋಗ : ನರೇಂದ್ರ ಮೋದಿ

ವಿಶಾಖಪಟ್ಟಣಂನಲ್ಲಿ 3 ಲಕ್ಷ ಜನರ ಜೊತೆ ಪ್ರಧಾನಿ ಯೋಗ ವಿಶಾಖಪಟ್ಟಣಂ : ಯೋಗ ಇಂದು ವಿಶ್ವವನ್ನು ಒಗ್ಗೂಡಿಸಿದೆ. ವಿಶ್ವದ ಕೋಟ್ಯಂತರ ಜನರ ಜೀವನ ಶೈಲಿಯನ್ನು ಯೋಗ ಬದಲಿಸಿದೆ. ಯೋಗ ಅಂದರೆ ಒಬ್ಬರಿಗಾಗಿ ಅಲ್ಲ ಎಲ್ಲರಿಗಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಶೀರ್ಷಿಕೆಯಡಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಯೋಗ ವಿಶ್ವಾದ್ಯಂತ ಒಂದು ಆಂದೋಲನವಾಗಿ ಮಾರ್ಪಟ್ಟಿದೆ ಎಂದು ಹೇಳಿದರು. ಆಂಧ್ರಪ್ರದೇಶದ

ವಿಶ್ವದ ಕೋಟ್ಯಂತರ ಜೀವನ ಶೈಲಿ ಬದಲಿಸಿದ ಯೋಗ : ನರೇಂದ್ರ ಮೋದಿ Read More »

ಜೂ. 21: ಆಂಧ್ರ ಪ್ರದೇಶದಲ್ಲಿ ಪ್ರಧಾನಿ ಮೋದಿ ಅವರಿಂದ ಯೋಗ ದಿನಾಚರಣೆ

ಅಮರಾವತಿ: ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ  ಆಂಧ್ರಪ್ರದೇಶದಲ್ಲಿ ಜೂನ್ 21 ರಂದು ಆಯೋಜನೆ ಮಾಡಲಾಗಿರುವ ಯೋಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ. ವಿಶಾಖಪಟ್ಟಣಂನ ಆರ್‌ ಕೆ ಬೀಚ್‌ ನಿಂದ ಭೋಗಪುರಂ ವರೆಗಿನ 26 ಕಿ ಮೀ ಕಾರಿಡಾರ್‌ ನಲ್ಲಿ ನಡೆಯಲಿರುವ ಈ ಕಾರ್ಯಕ್ರಮ ನಡೆಯಲಿದ್ದು, ಸುಮಾರು 3 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಬೆಳಗ್ಗೆ 6.30 ರಿಂದ ತೊಡಗಿ 8 ಗಂಟೆಯ ವರೆಗೆ ನಡೆಯಲಿರುವ ಈ ಯೋಗ ದಿನಾಚರಣೆ ಗಿನ್ನಿಸ್ ಸೇರಿದಂತೆ ಹಲವಾರು ದಾಖಲೆಗಳನ್ನು

ಜೂ. 21: ಆಂಧ್ರ ಪ್ರದೇಶದಲ್ಲಿ ಪ್ರಧಾನಿ ಮೋದಿ ಅವರಿಂದ ಯೋಗ ದಿನಾಚರಣೆ Read More »

ಅಹಮದಾಬಾದ್‌ ವಿಮಾನ ದುರಂತ : 215 ಮೃತದೇಹಗಳ ಗುರುತು ದೃಢ

ಡಿಎನ್‌ಎ ಪರೀಕ್ಷೆ ವರದಿ ಬಂದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಅಹಮದಾಬಾದ್‌: ಇಲ್ಲಿ ಕಳೆದ ಗುರುವಾರ ಸಂಭವಿಸಿದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ ಈವರೆಗೆ 215 ಮಂದಿಯ ಗುರುತು ಪತ್ತೆಯಾಗಿದ್ದು, 198 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಅಹಮದಾಬಾದ್ ಸಿವಿಲ್ ಹಾಸ್ಪಿಟಲ್ ಅಧೀಕ್ಷಕ ರಾಕೇಶ್ ಜೋಶಿ ತಿಳಿಸಿದ್ದಾರೆ. ಒಟ್ಟು 215 ಡಿಎನ್‌ಎ ವರದಿಗಳು ಮ್ಯಾಚ್‌ ಆಗಿವೆ. 198 ಮೃತದೇಹಗಳನ್ನ ಹಸ್ತಾಂತರಿಸಲಾಗಿದೆ. ಈ ಪೈಕಿ 149 ಭಾರತೀಯರು, 7 ಪೋರ್ಚುಗೀಸ್‌, 32 ಬ್ರಿಟಿಷ್‌ ಮತ್ತು ಕೆನಡಿಯನ್‌ ಪ್ರಜೆಗಳ

ಅಹಮದಾಬಾದ್‌ ವಿಮಾನ ದುರಂತ : 215 ಮೃತದೇಹಗಳ ಗುರುತು ದೃಢ Read More »

ಭಾನುವಾರವೂ ನಡೆಯುವುದಿಲ್ಲ ಶುಭಾಂಶು ಶುಕ್ಲ ಗಗನ ಯಾತ್ರೆ

ಆ್ಯಕ್ಸಿಯಂ–4 ಮಿಷನ್‌ ಉಡಾವಣೆ ಮತ್ತೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ನವದೆಹಲಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲ ಅವರನ್ನು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್‌) ಕಳುಹಿಸುವ ಮಹತ್ವಾಕಾಂಕ್ಷೆಯ ಆ್ಯಕ್ಸಿಯಂ–4 ಮಿಷನ್ ಮತ್ತೆ ಮುಂದೂಡಿಕೆಯಾಗಿದೆ. ಜೂನ್ 22ರಂದು ನಡೆಯಬೇಕಿದ್ದ ಉಡಾವಣೆಯನ್ನು ಮುಂದೂಡಲು ನಾಸಾ ನಿರ್ಧರಿಸಿದ್ದು, ಹೊಸ ಉಡಾವಣಾ ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುವುದು ಎಂದು ನಾಸಾ ಮೂಲಗಳು ತಿಳಿಸವೆ. ಬಾಹ್ಯಾಕಾಶ ನಿಲ್ದಾಣದ ಕಾರ್ಯಾಚರಣೆಗಳನ್ನು ಮೌಲ್ಯಮಾಪನ ಮಾಡುವುದನ್ನು ಮುಂದುವರಿಸಲು ಬಾಹ್ಯಾಕಾಶ ಸಂಸ್ಥೆಗೆ ಹೆಚ್ಚುವರಿ ಸಮಯ ಬೇಕಾಗುತ್ತದೆ. ಬಾಹ್ಯಾಕಾಶ ನಿಲ್ದಾಣದ ಪರಸ್ಪರ ಸಂಪರ್ಕಿತ ಮತ್ತು ಪರಸ್ಪರ

ಭಾನುವಾರವೂ ನಡೆಯುವುದಿಲ್ಲ ಶುಭಾಂಶು ಶುಕ್ಲ ಗಗನ ಯಾತ್ರೆ Read More »

ಇರಾನ್‌ನಿಂದ ಸುರಕ್ಷಿತವಾಗಿ ದಿಲ್ಲಿ ತಲುಪಿದ 110 ವಿದ್ಯಾರ್ಥಿಗಳು

ಭಾರತೀಯರನ್ನು ಕರೆತರಲು ಆಪರೇಷನ್‌ ಸಿಂಧು ಕಾರ್ಯಾಚರಣೆ ನವದೆಹಲಿ: ಯುದ್ಧಪೀಡಿತ ಇರಾನ್‌ನಲ್ಲಿ ಸಿಲುಕಿಕೊಂಡಿದ್ದ 110 ಭಾರತೀಯ ವಿದ್ಯಾರ್ಥಿಗಳನ್ನು ಇಂದು ಭಾರತಕ್ಕೆ ಕರೆತರಲಾಗಿದೆ. ಇರಾನ್‌ನಿಂದ ಸ್ಥಳಾಂತರಿಸಲಾದ ಮೊದಲ ಗುಂಪಿನ ವಿದ್ಯಾರ್ಥಿಗಳು ತಡರಾತ್ರಿ ದೆಹಲಿಗೆ ವಿಮಾನ ಹತ್ತಿದ್ದು, ಇಂದು ಮುಂಜಾನೆ ಬಂದಿಳಿದಿದ್ದಾರೆ. ವಿಮಾನ ಮೂರು ಗಂಟೆಗಳ ಕಾಲ ವಿಳಂಬವಾಗಿ ಹೊರಟಿತ್ತು. ಈ ವಿದ್ಯಾರ್ಥಿಗಳನ್ನು ಮೊದಲ ಹಂತದಲ್ಲಿ ಇರಾನ್‌ನಿಂದ ಅರ್ಮೇನಿಯಾ ಮತ್ತು ದೋಹಾಗೆ ಸ್ಥಳಾಂತರಿಸಲಾಗಿತ್ತು. ಇಂದು ಅವರ ವಿಮಾನ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದೆ. ಅವರಲ್ಲಿ ಹೆಚ್ಚಿನವರು (90)

ಇರಾನ್‌ನಿಂದ ಸುರಕ್ಷಿತವಾಗಿ ದಿಲ್ಲಿ ತಲುಪಿದ 110 ವಿದ್ಯಾರ್ಥಿಗಳು Read More »

ಇರಾನ್‌ನಲ್ಲಿ ಆಪತ್ತಿನಲ್ಲಿದ್ದಾರೆ ಹತ್ತು ಸಾವಿರಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು

ಯುದ್ಧ ಉಲ್ಬಣಿಸುವ ಮೊದಲು ಪಾರು ಮಾಡಲು ಮೊರೆ ಟೆಹ್ರಾನ್‌ : ಇಸ್ರೇಲ್‌ ಮತ್ತು ಇರಾನ್‌ ನಡುವಿನ ಯುದ್ಧ ತೀವ್ರಗೊಳ್ಳುತ್ತಿರುವಂತೆಯೇ ಇರಾನ್‌ನಲ್ಲಿರುವ ಹತ್ತು ಸಾವಿರಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳ ಮೇಲೆ ಆತಂಕದ ಕಾರ್ಮೋಡ ಕವಿದಿದೆ. ಯುದ್ಧದ ಪರಿಣಾಮವಾಗಿ ಇರಾನ್‌ ತನ್ನ ವಾಯುಮಾರ್ಗವನ್ನು ಪೂರ್ತಿಯಾಗಿ ಮುಚ್ಚಿದೆ. ಅಲ್ಲಿಂದ ಯಾವುದೇ ವಿಮಾನ ಟೇಕಾಫ್‌ ಆಗುವಂತಿಲ್ಲ ಹಾಗೂ ಇಳಿಯುವಂತಿಲ್ಲ. ಆದರೆ ಭಾರತದ ವಿನಂತಿಯ ಮೇರೆಗೆ ಭೂಮಾರ್ಗವಾಗಿ ಅಂತಾರಾಷ್ಟ್ರೀಯ ಗಡಿ ದಾಟಿ ಹೋಗಲು ಭಾರತೀಯರಿಗೆ ಇರಾನ್‌ ಅನುಮತಿ ನೀಡಿದೆ. ಅಜರ್‌ಬೈಜಾನ್‌, ಅಫಘಾನಿಸ್ಥಾನ್‌ ಅಥವಾ ತುರ್ಕಮೆನಿಸ್ಥಾನ್‌

ಇರಾನ್‌ನಲ್ಲಿ ಆಪತ್ತಿನಲ್ಲಿದ್ದಾರೆ ಹತ್ತು ಸಾವಿರಕ್ಕೂ ಅಧಿಕ ಭಾರತೀಯ ವಿದ್ಯಾರ್ಥಿಗಳು Read More »

ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಹೊಟ್ಟೆನೋವಿಗೆ ಗ್ಯಾಸ್ಟ್ರೋ ವಿಭಾಗದಲ್ಲಿ ಚಿಕಿತ್ಸೆ ನವದೆಹಲಿ : ಕಾಂಗ್ರೆಸ್​​ನ ಅಧಿನಾಯಕಿ ಸೋನಿಯಾ ಗಾಂಧಿಯವರ ಆರೋಗ್ಯ ತೀವರ ಹಡಗೆಟ್ಟಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಅವರನ್ನು ಗ್ಯಾಸ್ಟ್ರೋ ವಿಭಾಗಕ್ಕೆ ದಾಖಲಿಸಲಾಗಿದ್ದು, ಅವರ ಮೇಲೆ ನಿಗಾ ಇರಿಸಲಾಗಿದೆ. ಜೂನ್ 7ರಂದು ಸೋನಿಯಾ ಗಾಂಧಿ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಶಿಮ್ಲಾಕ್ಕೆ ಕರೆದೊಯ್ಯಲಾಗಿತ್ತು. ಕೆಲವು ಸಮಯದಿಂದ ಸೋನಿಯಾ ಗಾಂಧಿಯವರ ಅನಾರೋಗ್ಯದ ವರದಿಗಳು ಹೊರಬರುತ್ತಿವೆ. ಆದಾಗ್ಯೂ ಈ ನಿಟ್ಟಿನಲ್ಲಿ ಯಾವುದೇ ನಿರ್ದಿಷ್ಟ ಮಾಹಿತಿ ಹೊರಬಂದಿಲ್ಲ. ಹಿಮಾಚಲ

ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸ್ವಸ್ಥ : ಆಸ್ಪತ್ರೆಗೆ ದಾಖಲು Read More »

ಪತನಗೊಂಡ ವಿಮಾನದ ಎರಡನೇ ಬ್ಲ್ಯಾಕ್ ಬಾಕ್ಸ್ ಪತ್ತೆ

ಅಪಘಾತದ ನಿಖರ ಕಾರಣ ತಿಳಿಯುವ ಸಾಧ್ಯತೆ ಅಹಮದಾಬಾದ್‌: ಕಳೆದ ಗುರುವಾರ ಮಧ್ಯಾಹ್ನ ಟೇಕಾಫ್‌ ಆದ ಬೆನ್ನಲ್ಲೇ ವಿಮಾನ ನಿಲ್ದಾಣದ ಬಳಿಯಿರುವ ಮೇಘನಿನಗರದ ಬಿ.ಜೆ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಪತನಗೊಂಡಿದ್ದ ಏ‌ರ್ ಇಂಡಿಯಾ ಬೋಯಿಂಗ್ 787-8 ವಿಮಾನದ 2ನೇ ಬ್ಲ್ಯಾಕ್ ಬಾಕ್ಸ್ ಭಾನುವಾರ ಪತ್ತೆಯಾಗಿದೆ. ವಿಮಾನದಲ್ಲಿ 2 ಬ್ಲ್ಯಾಕ್ ಬಾಕ್ಸ್‌ಗಳಿದ್ದವು. ವಿಮಾನದ ಫ್ಲೈಟ್‌ ಡೇಟಾ ರೆಕಾರ್ಡರ್ ಶುಕ್ರವಾರ ಪತ್ತೆಯಾಗಿತ್ತು. ʻಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ʼ ಭಾನುವಾರ ಪತ್ತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹಿರಿಯ ಸಹಾಯಕ ಪಿ.ಕೆ. ಮಿಶ್ರಾ

ಪತನಗೊಂಡ ವಿಮಾನದ ಎರಡನೇ ಬ್ಲ್ಯಾಕ್ ಬಾಕ್ಸ್ ಪತ್ತೆ Read More »

error: Content is protected !!
Scroll to Top