ದೇಶ

ಅಹಮದಾಬಾದ್‌ವಿಮಾನ ದುರಂತ ಸಾವಿನ ಸಂಖ್ಯೆ 265ಕ್ಕೇರಿಕೆ

ಡ್ರೀಮ್‌ಲೈನರ್‌ನಲ್ಲಿ ಪ್ರಯಾಣಿಸುತ್ತಿದ್ದವರ ಕನಸುಗಳೆಲ್ಲ ಆಕಾಶದಲ್ಲೇ ಸುಟ್ಟು ಕರಕಲಾಯಿತು 1.25 ಲಕ್ಷ ಲೀಟರ್‌ನಷ್ಟು ಪೆಟ್ರೋಲ್‌ ಸ್ಫೋಟಿಸಿ ಭೀಕರ ಅವಘಡ ನವದೆಹಲಿ: ಡ್ರೀಮ್‌ಲೈನರ್‌ ವಿಮಾನದಲ್ಲಿ ಬದುಕಿನ ನಾನಾ ಕನಸುಗಳನ್ನು ಹೊತ್ತು ಪ್ರಯಾಣಿಸುತ್ತಿದ್ದವರ ಕನಸುಗಳೆಲ್ಲ ಆಕಾಶದಲ್ಲೇ ಹೊತ್ತಿ ಉರಿದು ಕರಟಿ ಹೋಗಿವೆ. ದೇಶ ಕಂಡ ಮಹಾ ವಿಮಾನ ದುರಂತವೊಂದು 265 ಮಂದಿಯ ಪ್ರಾಣ ಕಸಿದುಕೊಂಡಿದೆ. ಅಹಮದಾಬಾದ್‌ನಲ್ಲಿ ಗುರುವಾರ ಮಧ್ಯಾಹ್ನ ಏರ್‌ ಇಂಡಿಯಾ ವಿಮಾನ ಪತನಗೊಂಡು ಸಂಭವಿಸಿದ ಮಹಾದುರಂತದಲ್ಲಿ ಒಟ್ಟು 265 ಮಂದಿ ಸಾವನ್ನಪ್ಪಿದ್ದಾರೆ. ವಿಮಾನದಲ್ಲಿ 242 ಮಂದಿಯ ಪೈಕಿ ಓರ್ವ ಮಾತ್ರ […]

ಅಹಮದಾಬಾದ್‌ವಿಮಾನ ದುರಂತ ಸಾವಿನ ಸಂಖ್ಯೆ 265ಕ್ಕೇರಿಕೆ Read More »

ಅಹಮದಾಬಾದ್‍ ನಲ್ಲಿ ಪತನಗೊಂಡ ವಿಮಾನದಲ್ಲಿ ಗುಜರಾತ್‍ ಮಾಜಿ ಸಿಎಂ ವಿಜಯ್ ರೂಪಾನಿ‌ ಮೃತಪಟ್ಟಿರುವ ಶಂಕೆ | ವಿಮಾನದಲ್ಲಿದ್ದ ಫೋಟೊ ವೈರಲ್‍

ಗುಜರಾತಿನ ಅಹಮದಾಬಾದ್ ನ ಮೇಘನಿ ನಗರದಲ್ಲಿ ಪತನಗೊಂಡ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ‌ ಇರುವ ಕುರಿತು ಫೋಟೊಗಳು ವೈರಲ್‍ ಆಗುತ್ತಿದೆ. ಗುಜರಾತಿನ ಮುಖ್ಯಮಂತ್ರಿಯಾಗಿದ್ದ ವಿಜಯ್ ರೂಪಾನಿ ಅವಘಡದಲ್ಲಿ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. 2016-2021ರವರೆಗೆ ಮುಖ್ಯಮಂತ್ರಿಯಾಗಿದ್ದ ರೂಪಾನಿ ಅವರು ಕುಳಿತಿರುವುದನ್ನು ಸೆಲ್ಫಿ ತೆಗೆದ ಸಹಪ್ರಯಾಣಿಕೆಯ ಫೊಟೋ ಇದೀಗ ವೈರಲ್ ಆಗುತ್ತಿದೆ. ಮೇಘಾನಿ ನಗರದ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಕಟ್ಟಡದ ಮೇಲೆ ಪತನಗೊಂಡ ವಿಮಾನ ಬಿದ್ದಿದ್ದು, ಹಲವು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು‌ ತಿಳಿದುಬಂದಿದೆ. ವಿಮಾನದ

ಅಹಮದಾಬಾದ್‍ ನಲ್ಲಿ ಪತನಗೊಂಡ ವಿಮಾನದಲ್ಲಿ ಗುಜರಾತ್‍ ಮಾಜಿ ಸಿಎಂ ವಿಜಯ್ ರೂಪಾನಿ‌ ಮೃತಪಟ್ಟಿರುವ ಶಂಕೆ | ವಿಮಾನದಲ್ಲಿದ್ದ ಫೋಟೊ ವೈರಲ್‍ Read More »

ಗುಜರಾತಿನ ಅಹಮದಾಬಾದ್‍ ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆದ ತಕ್ಷಣದಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನವೊಂದು ಗುಜರಾತಿನ ಅಹಮದಾಬಾದ್‌ನಲ್ಲಿ ಪತನವಾದ ದುರಂತ ಇಂದು ಸಂಭವಿಸಿದೆ. ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಹಲವಾರು ಸಾವುನೋವುಗಳ ಭೀತಿ ಎದುರಾಗಿದೆ. ಆದರೆ, ಎಷ್ಟು ಜನ ಸಾವನ್ನಪ್ಪಿದ್ದಾರೆ ಎಂಬುದರ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇಂದು ಮಧ್ಯಾಹ್ನ ಗುಜರಾತ್‌ ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ ಏ‌ರ್ ಇಂಡಿಯಾ ವಿಮಾನ ಪತನವಾಗಿದೆ. ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್

ಗುಜರಾತಿನ ಅಹಮದಾಬಾದ್‍ ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ Read More »

ಪಾರ್ಟಿ ಮಾಡಲು ಅನುಮತಿ ಪಡೆಯಬೇಕೆಂದು ಗೊತ್ತಿರಲಿಲ್ಲ : ಮಂಗ್ಲಿ ಗೋಳಾಟ

ಬರ್ತ್‌ಡೇ ಪಾರ್ಟಿಯಲ್ಲಿ ಮದ್ಯ, ಮಾದಕ ವಸ್ತು ಬಳಸಿದ ಪ್ರಕರಣ ಹೈದರಾಬಾದ್‌: ಬರ್ತ್‌ಡೇ ಪಾರ್ಟಿಯಲ್ಲಿ ಮದ್ಯ ಮತ್ತು ಡ್ರಗ್ಸ್‌ ಪೂರೈಸಿರುವ ಆರೋಪಕ್ಕೆ ಒಳಗಾಗಿರುವ ತೆಲುಗಿನ ಪ್ರಸಿದ್ಧ ಗಾಯಕಿ ಮಂಗ್ಲಿ ಯಾನೆ ಸತ್ಯವತಿ ರಾಠೋಡ್‌, ಪಾರ್ಟಿಯಲ್ಲಿ ಮದ್ಯ ಸೇವಿಸಲು ಪೊಲೀಸರ ಅನುಮತಿ ಪಡೆಯಬೇಕೆಂದು ತನಗೆ ಗೊತ್ತಿರಲಿಲ್ಲ, ಇದು ಅರಿವಿಲ್ಲದೆ ಆಗಿರುವ ತಪ್ಪು ಎಂದು ಹೇಳಿಕೊಂಡಿದ್ದಾರೆ. ಪ್ರಸಿದ್ಧ ಜಾನಪದ ಗಾಯಕಿಯಾಗಿರುವ ಮಂಗ್ಲಿ ತೆಲುಗು ಮತ್ತು ಕನ್ನಡದ ಅನೇಕ ಸಿನಿಮಾಗಳಿಗೂ ಹಾಡಿದ್ದಾರೆ. ವಿಶಿಷ್ಟವಾದ ಧ್ವನಿ ಮತ್ತು ಜಾನಪದ ಶೈಲಿಯ ನೃತ್ಯಗಳಿಂದ ಅವರು ಸೋಷಿಯಲ್‌

ಪಾರ್ಟಿ ಮಾಡಲು ಅನುಮತಿ ಪಡೆಯಬೇಕೆಂದು ಗೊತ್ತಿರಲಿಲ್ಲ : ಮಂಗ್ಲಿ ಗೋಳಾಟ Read More »

ರೈಲ್ವೆ ಟಿಕೆಟ್‌ ಬುಕ್ಕಿಂಗ್‌ ನಿಯಮಗಳಲ್ಲಿ ಮಹತ್ವದ ಬದಲಾವಣೆ

ಜುಲೈ 1ರಿಂದಲೇ ಜಾರಿಗೆ ಬರಲಿದೆ ಹೊಸ ನಿಯಮ ನವದೆಹಲಿ: ಭಾರತೀಯ ರೈಲ್ವೆ ಸಚಿವಾಲಯ ತತ್ಕಾಲ್​ ಟಿಕೆಟ್​ ಬುಕಿಂಗ್ ನಿಯಮಯದಲ್ಲಿ ಬದಲಾವಣೆ ಮಾಡಿದೆ. ತತ್ಕಾಲ್​ ಟಿಕೆಟ್​ ಬುಕ್ಕಿಂಗ್​ ಮಾಡಬೇಕೆಂದರೆ IRCTC ಅಧಿಕೃತ ವೆಬ್​ಸೈಟ್​ ಅಥವಾ ಆ್ಯಪ್‌ಗೆ ಆಧಾರ್​ ಲಿಂಕ್​ ಆಗಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಇನ್ಮುಂದೆ ಆಧಾರ್ ಲಿಂಕ್​ ಹೊಂದಿರುವ ಬಳಕೆದಾರರು ಮಾತ್ರ ತತ್ಕಾಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ. ಜೊತೆಗೆ ಏಜೆಂಟ್‌ಗಳ ಮೇಲೆ ಸಮಯದ ನಿರ್ಬಂಧ ಹೇರಿದೆ. ಈ ಬಗ್ಗೆ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದ್ದು, ಈ ಹೊಸ

ರೈಲ್ವೆ ಟಿಕೆಟ್‌ ಬುಕ್ಕಿಂಗ್‌ ನಿಯಮಗಳಲ್ಲಿ ಮಹತ್ವದ ಬದಲಾವಣೆ Read More »

ಜಲರಾಶಿಯ ನಡುವೆ ಧಗಧಗಿಸುತ್ತಿದೆ ಸಿಂಗಾಪುರದ ಹಡಗು : ಬೆಂಕಿ ನಂದಿಸಲು ಹರಸಾಹಸ

ರಾಸಾಯನಿಕ, ತೈಲ ತುಂಬಿರುವ ಕಂಟೈನರ್‌ಗಳು ಸ್ಫೋಟಿಸುವ ಆತಂಕ ಮಂಗಳೂರು: ಕೇರಳದ ಕರಾವಳಿ ಸಮೀಪ ಸಿಂಗಾಪುರ ಮೂಲದ ಕಂಟೈನರ್‌ ಸಾಗಿಸುತ್ತಿದ್ದ ಬೃಹತ್‌ ಹಡಗಿಗೆ ಭೀಕರ ಸ್ಫೋಟದ ಬಳಿಕ ಹತ್ತಿಕೊಂಡ ಬೆಂಕಿಯನ್ನು ನಂದಿಸಲು 48 ತಾಸುಗಳ ಸತತ ಕಾರ್ಯಾಚರಣೆಯ ಬಳಿಕವೂ ಸಾಧ್ಯವಾಗಿಲ್ಲ. ಹಡಗಿನಲ್ಲಿ ರಾಸಾಯನಿಕವೂ ಸೇರಿದಂತೆ ಅಪಾಯಕಾರಿ ತೈಲ ಮತ್ತು ಅನಿಲ ಇರುವ ಕಂಟೈನರ್‌ಗಳು ಕೂಡ ಇವೆ. ಹೀಗಾಗಿ ಈ ಹಡಗು ಕರಾವಳಿ ಭಾಗದಲ್ಲಿ ತೀವ್ರ ಆತಂಕ ಹುಟ್ಟಿಸಿದೆ. ಕೆಲದಿನಗಳ ಹಿಂದೆಯಷ್ಟೇ ಕೇರಳ ಕರಾವಳಿಯಾಚೆ ಕಂಟೈನರ್‌ ಹಡಗೊಂದು ಮುಳುಗಿ ಅನೇಕ

ಜಲರಾಶಿಯ ನಡುವೆ ಧಗಧಗಿಸುತ್ತಿದೆ ಸಿಂಗಾಪುರದ ಹಡಗು : ಬೆಂಕಿ ನಂದಿಸಲು ಹರಸಾಹಸ Read More »

ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ ನಿರ್ಮಾಣಕ್ಕೆ ಶೀಘ್ರ ಡಿಪಿಆರ್‌

ಕರಾವಳಿಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಬೃಹತ್‌ ಯೋಜನೆ ಮಂಗಳೂರು: ಮಂಗಳೂರು-ಬೆಂಗಳೂರು ನಡುವಿನ ಪ್ರಯಾಣ ಸಮಯವನ್ನು ಗಣನೀಯವಾಗಿ ಕಡಿಮೆಗೊಳಿಸಲಿರುವ ಬಹುನಿರೀಕ್ಷಿತ ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ ಯೋಜನೆಯನ್ನು ಕಾರ್ಯಗತಗೊಳಿಸುವ ಪ್ರಕ್ರಿಯೆ ಶುರುವಾಗಿದೆ. ಹೆದ್ದಾರಿ ಸಚಿವಾಲಯದಿಂದ ಟೆಂಡರ್‌ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ತಯಾರಿಸುವ ಕಾರ್ಯ ಪ್ರಾರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ವೇಗದ ಕಾರಿಡಾರ್ ರಸ್ತೆ ನಿರ್ಮಾಣದ ಕುರಿತಂತೆ ಹೆದ್ದಾರಿ ಸಚಿವ ನಿತಿನ್ ಗಡ್ಕರಿ

ಮಂಗಳೂರು-ಬೆಂಗಳೂರು ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌ ನಿರ್ಮಾಣಕ್ಕೆ ಶೀಘ್ರ ಡಿಪಿಆರ್‌ Read More »

ಎಂ.ಎಸ್‌. ಧೋನಿಗೆ ಐಸಿಸಿ ಹಾಲ್‌ ಆಫ್‌ ಫೇಮ್‌ ಗೌರವ

ವಿಶೇಷ ಗೌರವಕ್ಕೆ ಪಾತ್ರರಾದ ಭಾರತದ 11ನೇ ಕ್ರಿಕೆಟಿಗ ಲಂಡನ್‌: ಭಾರತಕ್ಕೆ ಎರಡು ವಿಶ್ವಕಪ್‌ ಗೆಲ್ಲಿಸಿಕೊಟ್ಟ ದಿಗ್ಗಜ ಕ್ರಿಕೆಟಿಗ ಎಂ.ಎಸ್‌.ಧೋನಿ 2025ನೇ ಸಾಲಿನ ಹಾಲ್‌ ಆಫ್ ಫೇಮ್‌ ಗೌರವಕ್ಕೆ ಭಾಜನರಾಗಿದ್ದಾರೆ. ಅವರ ಜತೆಗೆ ಇತರ 6 ಕ್ರಿಕೆಟಿಗರು ಕೂಡ ಈ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಮೂಲಕ ಧೋನಿ ಐಸಿಸಿ ಹಾಲ್‌ ಆಫ್‌ ಫೇಮ್‌ ಸೇರ್ಪಡೆಗೊಂಡ ಭಾರತದ 11ನೇ ಕ್ರಿಕೆಟಿಗ ಎನಿಸಿಕೊಂಡರು. ಧೋನಿಗೂ ಮುನ್ನ ಸುನಿಲ್‌ ಗವಾಸ್ಕರ್‌, ಬಿಶನ್‌ ಸಿಂಗ್‌ ಬೇಡಿ, ಕಪಿಲ್‌ ದೇವ್‌, ಅನಿಲ್‌ ಕುಂಬ್ಳೆ, ರಾಹುಲ್‌

ಎಂ.ಎಸ್‌. ಧೋನಿಗೆ ಐಸಿಸಿ ಹಾಲ್‌ ಆಫ್‌ ಫೇಮ್‌ ಗೌರವ Read More »

ಹಡಗಿನಲ್ಲಿ ಭೀಕರ ಅಗ್ನಿ ಅವಘಡ : ನಾಲ್ಕು ಸಿಬ್ಬಂದಿ ನಾಪತ್ತೆ; 18 ಮಂದಿಯ ರಕ್ಷಣೆ

ಗಾಯಗೊಂಡವರಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಂಗಳೂರು : ಕೇರಳದ ಕೊಚ್ಚಿ ಕರಾವಳಿ ತೀರದಿಂದ ಸುಮಾರು 78 ನಾಟಿಕಲ್‌ ಮೈಲು ದೂರದಲ್ಲಿ ಸರಕು ಸಾಗಿಸುವ ಹಡಗಿಗೆ ಬೆಂಕಿ ಹತ್ತಿಕೊಂಡು ಭಾರಿ ದುರಂತ ಸಂಭವಿಸಿದೆ. ಸಿಂಗಾಪುರ ಮೂಲದ ಹಡಗಿನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು ಹಡಗಿನ 18 ಸಿಬ್ಬಂದಿಯನ್ನು ರಕ್ಷಿಸಲಾಗಿದೆ. ನಾಲ್ವರು ನಾಪತ್ತೆಯಾಗಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ಅಝಿಕ್ಕಲ್ ಮತ್ತು ಕೊಚ್ಚಿಯ ಮಧ್ಯದಲ್ಲಿ ಈ ದುರಂತ ಸಂಭವಿಸಿದೆ. ಸಿಂಗಾಪುರ ಮೂಲದ ಕಂಟೇನರ್ ಹಡಗಿನ ಎಂವಿ ವಾನ್ ಹೈ 503ನಲ್ಲಿದ್ದ 22

ಹಡಗಿನಲ್ಲಿ ಭೀಕರ ಅಗ್ನಿ ಅವಘಡ : ನಾಲ್ಕು ಸಿಬ್ಬಂದಿ ನಾಪತ್ತೆ; 18 ಮಂದಿಯ ರಕ್ಷಣೆ Read More »

ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವ ವೈದ್ಯ

ಚೆನ್ನೈ: ಯುವ ವೈದ್ಯನೋರ್ವ ನಿರ್ಜನ ಪ್ರದೇಶದಲ್ಲಿ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕೊಡೈಕೆನಾಲ್ ನಲ್ಲಿ ಬೆಳಕಿಗೆ ಬಂದಿದೆ. ದಿಂಡಿಗಲ್ ಜಿಲ್ಲೆಯ ವೇದಚಂದೂರಿನ ಡಾ. ಜೋಶುವಾ ಸಾಮ್ರಾಜ್ ಆತ್ಮಹತ್ಯೆ ಮಾಡಿಕೊಂಡವರು. ಜೋಶುವಾ ಅವರು ವೈದ್ಯಕೀಯ ಪದವಿ ಪೂರ್ಣಗೊಳಿಸಿ ತಮಿಳುನಾಡಿನಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಕೆಲಸ ಮಾಡಿದ್ದರು. ಸದ್ಯ ಡಾ. ಜೋಶುವಾ ಸಾಮ್ರಾಜ್ ಸೇಲಂನಲ್ಲಿ (ಡಾಕ್ಟರ್ ಆಫ್ ಮೆಡಿಸಿನ್) ವ್ಯಾಸಂಗ ಮಾಡುತ್ತಿದ್ದು, ಮಧುರೈನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ಜೋಶುವಾ ನಾಪತ್ತೆಯಾಗಿದ್ದರು

ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವ ವೈದ್ಯ Read More »

error: Content is protected !!
Scroll to Top